Tag: ಡಾ. ನಾರಾಯಣ ಗೌಡ

  • 47ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಿದ್ದ ಕರ್ನಾಟಕ ತಂಡಕ್ಕೆ ಸನ್ಮಾನ

    47ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಿದ್ದ ಕರ್ನಾಟಕ ತಂಡಕ್ಕೆ ಸನ್ಮಾನ

    ಬೆಂಗಳೂರು: 47ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಿದ್ದ ಕರ್ನಾಟಕದ ಆಟಗಾರರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಹಾಗೂ ಕರ್ನಾಟಕ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ, ಮಾಜಿ ಉಪಮಹಾಪೌರರು ಎಸ್.ಹರೀಶ್ ಸನ್ಮಾನಿಸಿದರು.

    ಪಶ್ಚಿಮ ಬಂಗಾಳದ ಬುದ್ರ್ವಾನ್‍ನಲ್ಲಿ ನಡೆದ ಜ್ಯೂನಿಯರ್ ವಾಲಿಬಾಲ್ ಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಕರ್ನಾಟಕದ ಪುರುಷರ ತಂಡ ದ್ವಿತೀಯ ಸ್ಥಾನ ಪಡೆದಿದೆ. ತಮಿಳುನಾಡಿನ ವಿರುದ್ಧ ನಡೆದ ಪೈನಲ್ ಪಂದ್ಯದಲ್ಲಿ 3-1 ರಲ್ಲಿ ಪರಾಭವಗೊಳ್ಳುವ ಮೂಲಕ ಕರ್ನಾಟಕ ತಂಡ ಬೆಳ್ಳಿ ಪದಕ ಪಡೆದಿದೆ. ಇದನ್ನೂ ಓದಿ: ಟೈಟಾನ್ಸ್ ವಿರುದ್ಧದ ಪಂದ್ಯವನ್ನು ಕಡೆಯ ನಿಮಿಷದ ಹೋರಾಟದಲ್ಲಿ ಟೈ ಮಾಡಿಕೊಂಡ ಬುಲ್ಸ್

    ಆಟಗಾರರನ್ಡಾನು ಪ್ರಶಂಸಿದ ನಾರಾಯಣಗೌಡ, ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದ ಮಹಿಳೆಯರ ತಂಡ 8ನೇ ಸ್ಥಾನ ಪಡೆದಿದೆ. ಬುದ್ರ್ವಾನ್ ನಲ್ಲಿ ನಡೆದ ವಾಲಿಬಾಲ್ ನ್ಯಾಷನಲ್ ಚಾಂಪಿಯನ್‍ಶಿಪ್ ನಲ್ಲಿ ಪಾಲ್ಗೊಂಡು ಕರ್ನಾಟಕದ ಆಟಗಾರರು ಉತ್ತಮ ಸಾಧನೆ ಮಾಡಿದ್ದಾರೆ. ಪುರುಷರ ತಂಡ ಫೈನಲ್ ಪಂದ್ಯದಲ್ಲಿ ಸ್ವಲ್ಪ ಹಿನ್ನಡೆಯಿಂದ ಚಿನ್ನದ ಪದಕ ತಪ್ಪಿದೆ. ಆದರೆ, ಮುಂದಿನ ಟೂರ್ನಿಯಲ್ಲಿ ನಮ್ಮ ಕರ್ನಾಟಕ ತಂಡ ಚಿನ್ನದ ಪದಕ ಗೆಲ್ಲುವ ವಿಶ್ವಾಸವಿದೆ. ನಮ್ಮ ವಾಲಿಬಾಲ್ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು. ಇದನ್ನೂ ಓದಿ: ಟೀಂ ಇಂಡಿಯಾ ಸಾರಥ್ಯ ಹಿಡಿದ ಕನ್ನಡಿಗರಿವರು

  • ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿದ್ದು ಅತೀವ ಆನಂದ ನೀಡಿದೆ: ಮೀರಾಬಾಯಿ ಚಾನು

    ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿದ್ದು ಅತೀವ ಆನಂದ ನೀಡಿದೆ: ಮೀರಾಬಾಯಿ ಚಾನು

    ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿಕೊಟ್ಟ ಹೆಮ್ಮೆಯ ವೇಟ್‍ಲಿಫ್ಟರ್ ಮೀರಾಬಾಯಿ ಚಾನು ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿರುವುದು ಅತೀವ ಆನಂದ ನೀಡಿದೆ ಎಂದು ಹೇಳಿದ್ದಾರೆ.

    ಪದಕ ಗೆದ್ದ ಖುಷಿಯನ್ನು ಟ್ವೀಟ್ ಮೂಲಕ ಹಂಚಿಕೊಂಡ ಮೀರಾಬಾಯಿ ಚಾನು, ಇದು ನನಗೆ ಕನಸು ನನಸಾದ ಗಳಿಗೆ. ಈ ಗೆಲುವನ್ನು ನನ್ನ ದೇಶ ಹಾಗೂ ನನ್ನ ಗೆಲುವಿಗಾಗಿ ನನ್ನ ಜರ್ನಿಯುದ್ದಕ್ಕೂ ಪಾರ್ಥಿಸಿದ ಕೋಟ್ಯಂತರ ಜನರಿಗೆ ಅರ್ಪಿಸುತ್ತೇನೆ. ತಮ್ಮ ಕುಟುಂಬದ ಪ್ರೋತ್ಸಾಹ ನನ್ನೊಂದಿಗೆ ಸದಾ ಇತ್ತು. ತಮ್ಮ ತಾಯಿ ತಮಗಾಗಿ ಮಾಡಿದ ತ್ಯಾಗ ಮತ್ತು ತನ್ನ ಮೇಲೆ ನಂಬಿಕೆಯಿಂದ ಈ ಗೆಲುವು ಸಾಧ್ಯವಾಯಿತು. ಸರ್ಕಾರದ ಪ್ರೋತ್ಸಾಹ ಹಾಗೂ ಕೋಚ್ ವಿಜಯ್ ಶರ್ಮಾ ಅವರಿಗೆ ಈ ಮೂಲಕ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ಟ್ವಿಟ್ಟರ್‍ ನಲ್ಲಿ ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.

    ಮೀರಾಬಾಯಿ ಚಾನುಗೆ ಡಾ.ನಾರಾಯಣಗೌಡ ಅಭಿನಂದನೆ
    ಟೋಕಿಯೋ ಒಲಿಂಪಿಕ್ಸ್‍ನ ಮಹಿಳೆಯರ 49 ಕೆಜಿ ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ ಬೆಳ್ಳಿ ಪದಕ ಗೆದ್ದ ಮಣಿಪುರದ ಮೀರಾಬಾಯಿ ಚಾನು ಅವರಿಗೆ ಕರ್ನಾಟಕದ ಯುವ ಸಬಲೀಕರಣ ಮತ್ತು ಕ್ರೀಡೆ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.


    ಮೀರಾಬಾಯಿ ಚಾನು ಅವರ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಭಾರತೀಯರ ನಿರೀಕ್ಷೆ ಹುಸಿಗೊಳಿಸದ ಮೀರಾ ಅವರು ಮೊದಲ ದಿನವೇ ಬೆಳ್ಳಿ ಪದಕ ಗೆದ್ದು ಶುಭಾರಂಭ ಮಾಡಿದ್ದಾರೆ. ಮೀರಾ ಅವರ ಗೆಲುವು ಭಾರತದ ಎಲ್ಲ ಕ್ರೀಡಾಪಟುಗಳಲ್ಲಿ ಇನ್ನಷ್ಟು ಹುಮ್ಮಸ್ಸು ತುಂಬುವಂತೆ ಮಾಡಿದೆ. ಪದ್ಮಶ್ರೀ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಮೀರಾಬಾಯಿ ಚಾನು ಅವರು ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಪದಕ ಬೇಟೆಗೆ ನಾಂದಿ ಹಾಡಿದ ಮೀರಾ ಅವರಿಗೆ ಸಚಿವರು ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಸಂಭ್ರಮ – ಮೀರಾಬಾಯಿ ಚಾನುವಿಗೆ ಬೆಳ್ಳಿ!

     ಭಾರತಕ್ಕೆ ಮೊದಲ ಪದಕ ಸಂಭ್ರಮ:
    49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ 26 ವರ್ಷದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿ ಕೊಟ್ಟಿದ್ದಾರೆ. ಚೀನಾದ ಹೊ ಜಿಹೂಹು ಒಟ್ಟು 210 ಕೆಜಿ (94+116 ಕೆಜಿ) ಭಾರ ಎತ್ತಿ ಚಿನ್ನದ ಪದಕ ಬೇಟೆಯಾಡಿದರೆ, ಮೀರಾಬಾಯಿ ಚಾನು 202 ಕೆಜಿ (87+115 ಕೆಜಿ) ಭಾರ ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇಂಡೋನೇಷ್ಯಾದ ಐಸಾಹ್ ವಿಂಡಿ ಕಾಂಟಿಕಾ ವಿಂಡಿ 194 ಕೆಜಿ (84+110ಕೆಜಿ) ಕಂಚಿನ ಪದಕ ಪಡೆದರು.

    84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತಿದ ಮಿರಾಬಾಯ್ ಚಾನು 89 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಆದರೆ ಚೀನಾದ ಸ್ಪರ್ಧಿ ಜಿಹೂಹು 94 ಕೆಜಿ ಭಾರ ಎತ್ತಿ ಒಲಿಂಪಿಕ್ ದಾಖಲೆ ಬರೆದರು. ಇದು ಒಲಿಂಪಿಕ್ಸ್ ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದರು. 69 ಕೆಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಅವರು ಕಂಚಿನ ಪದಕ ಗಳಿಸಿದ್ದರು.

  • ನಾಳೆಯಿಂದ ರಾಜ್ಯಾದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಲಸಿಕೆ ಅಭಿಯಾನ: ನಾರಾಯಣಗೌಡ

    ನಾಳೆಯಿಂದ ರಾಜ್ಯಾದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಲಸಿಕೆ ಅಭಿಯಾನ: ನಾರಾಯಣಗೌಡ

    ಬೆಂಗಳೂರು: ಕ್ರೀಡಾಪಟುಗಳಿಗೆ ಉಚಿತವಾಗಿ ಕೋವಿಡ್- 19ನ ಮೊದಲ ಹಂತದ ಲಸಿಕೆಯನ್ನು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಸಹಯೋಗದೊಂದಿಗೆ ನೀಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಈ ಲಸಿಕಾ ಅಭಿಯಾನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಇಲಾಖೆ ಸಚಿವ ಡಾ. ನಾರಾಯಣಗೌಡ ಚಾಲನೆ ನೀಡಲಿದ್ದಾರೆ.

    ರಾಜ್ಯ ಸರ್ಕಾರವು 18 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳನ್ನು ಆದ್ಯತಾ ಗುಂಪಿಗೆ ಸೇರಿಸಿದ್ದು, ನೋಂದಣಿ ಮಾಡಿಕೊಂಡ ಕ್ರೀಡಾಪಟುಗಳಿಗೆ ಲಸಿಕೆ ನೀಡಲಿದೆ. ಈಗಾಗಲೇ 2200 ಕ್ರೀಡಾಪಟುಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, 10 ಮತ್ತು 11 ರಂದು ಇವರಿಗೆ ಲಸಿಕೆ ನೀಡಲಾಗುವುದು. ಇದುವರೆಗು ಹೆಸರನ್ನು ನೋಂದಾಯಿಸಿಕೊಳ್ಳದ ಕ್ರೀಡಾಪಟುಗಳು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಆಯಾ ರಾಜ್ಯ ಕ್ರೀಡಾ ಸಂಸ್ಥೆಗಳ ಮೂಲಕ ನೋಂದಾಯಿಸಿಕೊಳ್ಳಬೇಕು. ಇದನ್ನೂ ಓದಿ:ಕೋವಿಡ್ ಚಿಕಿತ್ಸೆಗೆ ದುಬಾರಿ ಬಿಲ್ – 5 ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ನೊಟೀಸ್ ಜಾರಿ

    ಕೋವಿಡ್-19 ಹಿನ್ನೆಲೆಯಲ್ಲಿ ಕೋವಿಡ್ ತಡೆ ಮಾರ್ಗಸೂಚಿಗಳ ಪಾಲನೆಯೊಂದಿಗೆ ಅತ್ಯಂತ ಸರಳವಾಗಿ ಯಾವುದೇ ಸಭಾ ಕಾರ್ಯಕ್ರಮವಿಲ್ಲದೇ, ಈ ಲಸಿಕೆ ಅಭಿಯಾನಕ್ಕ 2021ರ ಜೂನ್ 10 ರಂದು ಬೆಳಗ್ಗೆ 10.30 ಗಂಟೆಗೆ ಕಂಠೀರವ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣಗೌಡ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

    ಕ್ರೀಡಾಪಟುಗಳಿಗೆ ಲಸಿಕೆ ನೀಡಲು ದಿನಾಂಕ ನಿಗದಿ:

    ಜೂನ್ 10 ಗುರುವಾರದಂದು ಬಾಸ್ಕೆಟ್‍ಬಾಲ್, ಫೆನ್ಸಿಂಗ್, ಈಜು, ಹಾಕಿ, ಟೆನ್ನಿಕಾಯ್ಸ್, ಬ್ಯಾಡ್ಮಿಂಟನ್, ರೋಯಿಂಗ್ ಮತ್ತು ನೆಟ್‍ಬಾಲ್ ಕ್ರೀಡೆಗಳ ಕ್ರೀಡಾಪಟುಗಳಿಗೆ ಹಾಗೂ ಜೂನ್ 11 ಶುಕ್ರವಾರದಂದು ವುಶು, ಶೂಟಿಂಗ್, ಹ್ಯಾಂಡ್‍ಬಾಲ್, ಫುಟ್ಬಾಲ್ ಅಥ್ಲೆಟಿಕ್ಸ್, ಟೇಬಲ್ ಟೆನ್ನಿಸ್, ವಾಲಿಬಾಲ್ ಮತ್ತು ರೋಲರ್ ಸ್ಕೇಟಿಂಗ್ ಕ್ರೀಡಾಪಟುಗಳಿಗೆ ಲಸಿಕೆ ನೀಡಲಾಗುವುದು. ರಾಜ್ಯಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳಿಗೆ ಲಸಿಕೆ ನೀಡಲಾಗುವುದು. ಈಗಾಗಲೇ ನೋಂದಣಿ ಮಾಡಿಸಿಕೊಂಡವರನ್ನು ಹೊರತುಪಡಿಸಿ ಉಳಿದ ಕ್ರೀಡಾಪಟುಗಳಿಗೆ ಲಸಿಕಾ ಅಭಿಯಾನವನ್ನು ಮುಂದುವರಿಸಿ ಮುಂದಿನ ದಿನಗಳಲ್ಲಿ ನೀಡಲಾಗುವುದು.

    ಕ್ರೀಡಾಪಟುಗಳು ರಾಜ್ಯದ, ರಾಷ್ಟ್ರದ ಹೆಮ್ಮೆ. ಅವರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ. ಹೀಗಾಗಿ ಕ್ರೀಡಾಪಟುಗಳಿಗಾಗಿಯೇ ಪ್ರತ್ಯೇಕವಾಗಿ ಲಸಿಕಾ ಅಭಿಯಾನ ಆರಂಭಿಸಲಾಗುತ್ತಿದೆ. ಪ್ರತಿಯೊಬ್ಬ ಅರ್ಹ ಕ್ರೀಡಾಪಟುಗಳು ಹೆಸರು ನೋಂದಾಯಿಸಿಕೊಂಡು ನಿಗದಿತ ದಿನಾಂಕದಂದು ಲಸಿಕೆ ಪಡೆದುಕೊಳ್ಳಬೇಕು. ಕೇವಲ ಎರಡು ದಿನ ಮಾತ್ರವಲ್ಲ, ಎಲ್ಲ ಕ್ರೀಡಾಪಟುಗಳಿಗೆ ಲಸಿಕೆ ನೀಡುವವರೆಗೆ ಈ ಅಭಿಯಾನ ನಡೆಯಲಿದೆ ಎಂದು ನಾರಾಯಣಗೌಡ ತಿಳಿಸಿದ್ದಾರೆ.

  • ಮನೆ ಮನೆಗೆ ಹಣ್ಣು, ತರಕಾರಿ ಮಾರಾಟ ಮಾಡಿ – ಸರ್ಕಾರದಿಂದ ಸೂಚನೆ

    ಮನೆ ಮನೆಗೆ ಹಣ್ಣು, ತರಕಾರಿ ಮಾರಾಟ ಮಾಡಿ – ಸರ್ಕಾರದಿಂದ ಸೂಚನೆ

    ಬೆಂಗಳೂರು: ಹಣ್ಣು, ತರಕಾರಿ ಸರಬರಾಜಿನಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣ ಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ತೋಟಗಾರಿಕಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ರೈತರಿಂದ ನೇರವಾಗಿ ರೈತರ ಉತ್ಪನ್ನಗಳನ್ನು ಆಯ್ದ ಭಾಗಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕು. ಜಿಲ್ಲಾ ಮಟ್ಟದಲ್ಲಿ ಹಾಪ್ ಕಾಮ್ಸ್ ಸಹಯೋಗದೊಂದಿಗೆ ತೋಟಗಾರಿಕಾ ಇಲಾಖೆಯಿಂದ ಮೊಬೈಲ್ ವ್ಯಾನ್‍ಗಳ ಮೂಲಕ ಮನೆಮನೆಗೆ ಹಣ್ಣು, ತರಕಾರಿ ಮಾರಾಟ ಮಾಡಬೇಕು. ಇಲಾಖೆಯ ರೈತ ಉತ್ಪಾದಕಾ ಸಂಸ್ಥೆಗಳ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ಸೂಚನೆ ನೀಡಿದ್ದಾರೆ.

    ಈಗಾಗಲೇ ಹಾಪ್‌ ಕಾಮ್ಸ್‌ಗಳ ಮೂಲಕ ಬೆಂಗಳೂರಿನಲ್ಲಿ 225 ಮಳಿಗೆಗಳು, ಜಿಲ್ಲೆಗಳಲ್ಲಿನ 257 ಮಳಿಗೆಗಳ ಮೂಲಕ ಹಣ್ಣು, ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಾಪ್‌ ಕಾಮ್ಸ್‌ಗಳ ಮೂಲಕ ಪ್ರತಿ ದಿನ 100 ಟನ್‍ಗಳಷ್ಟು ಹಣ್ಣು ತರಕಾರಿಗಳು ಮಾರಾಟವಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

    ಹಿರಿಯ ಅಧಿಕಾರಿಗಳ ತಂಡದಿಂದ ಜಿಲ್ಲೆಗಳ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕ ಹೊಂದುವಂತೆ ತಿಳಿಸಲಾಗಿದೆ. ಹಣ್ಣು ತರಕಾರಿ ಸರಬರಾಜಿನಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಹಾಗೆಯೇ ದ್ರಾಕ್ಷಿ ಬೇಡಿಕೆ ಇರುವ ಸ್ಥಳಗಳನ್ನು ಗುರುತಿಸಿ ಮಾರಾಟ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲು ಸಭೆಯಲ್ಲಿ ಚರ್ಚಿಸಲಾಗಿದೆ.