Tag: ಡಾ. ಭುಜಂಗಶೆಟ್ಟಿ

  • ನೇತ್ರದಾನ ಮಾಡೋದು ರಾಜ್ ಫ್ಯಾಮಿಲಿ ಟ್ರೆಡಿಷನ್ ಆಗಿದೆ: ಡಾ.ಭುಜಂಗ ಶೆಟ್ಟಿ

    ನೇತ್ರದಾನ ಮಾಡೋದು ರಾಜ್ ಫ್ಯಾಮಿಲಿ ಟ್ರೆಡಿಷನ್ ಆಗಿದೆ: ಡಾ.ಭುಜಂಗ ಶೆಟ್ಟಿ

    ಬೆಂಗಳೂರು: ನೇತ್ರದಾನ ಮಾಡೋದು ರಾಜ್ ಫ್ಯಾಮಿಲಿ ಟ್ರೆಡಿಷನ್ ಆಗಿದೆ ಎಂದು ಹೇಳುವ ಮೂಲಕ ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಭುಜಂಗ ಶೆಟ್ಟಿಯವರು ಅಣ್ಣಾವ್ರ ಕುಟುಂಬವನ್ನು ಶ್ಲಾಘಿಸಿದರು.

    ನಾರಾಯಣ ನೇತ್ರಾಲಯ ಕಣ್ಣುದಾನ ಮಾಡಲು ಬಯಸುವವರಿಗಾಗಿ ಸುಲಭ ವಿಧಾನವನ್ನು ಕಂಡುಹಿಡಿದಿದ್ದು, ಆ ಯೋಜನೆಯನ್ನು ಅಪ್ಪು ಸಮಾಧಿ ಬಳಿ ನೆರವೇರಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ಅಪ್ಪುದು ಟ್ರ್ಯಾಜಿಕ್ ಡೆತ್ ಆಯ್ತು. ತಕ್ಷಣ ರಾಘಣ್ಣ ನನಗೆ ಕರೆ ಮಾಡಿ ತಿಳಿಸಿದರು. ಆಗ ನಾವು ಅಪ್ಪು ಕಣ್ಣನ್ನು ತೆಗೆದುಕೊಂಡೆವು. ಮರುದಿನವೇ ಅವರ ಕಣ್ಣನ್ನು ಇಬ್ಬರಲ್ಲ ನಾಲ್ವರಿಗೆ ಜೋಡಿಸಿದ್ದೇವೆ ಎಂದರು. ಇದನ್ನೂ ಓದಿ: ಅಪ್ಪು ಸಿನಿಮಾಗಳು ಈಗ ಲೆಕ್ಕಕ್ಕೆ ಬರೋದಿಲ್ಲ, ಅವನ ಸಮಾಜಸೇವೆ ಎಲ್ಲವನ್ನೂ ಪಕ್ಕಕ್ಕಿಟ್ಟಿದೆ: ರಾಘಣ್ಣ

    ಈ ಜಾಗದಲ್ಲಿಯೇ ನಾವು ಏಕೆ ಹೈ ಪ್ಲೇಡ್ಜಿಂಗ್ ಜಸ್ಟ್ ಕಾಲ್ ನಂಬರ್ ನ ಉದ್ಘಾಟನೆ ಮಾಡುತ್ತಿದ್ದೇವೆ, ನೇತ್ರದಾನ ಮಾಡುವುದು ಈ ಫ್ಯಾಮಿಲಿ ಟ್ರೆಡಿಷನ್. ಈ ಹಿಂದೆಯೂ ಅಣ್ಣಾವ್ರು, ಪಾರ್ವತಮ್ಮನವರು ಮತ್ತು ಅಪ್ಪು ನೇತ್ರದಾನ ಮಾಡಿದ್ದರು. ಅವರು ಇರುವ ಸ್ಥಳ ಇದು. ಅದಕ್ಕೆ ನಾವು ಇಲ್ಲೇ ಈ ಯೋಜನೆಗೆ ಚಾಲನೆಯನ್ನು ನೀಡುತ್ತಿದ್ದೇವೆ. ಇದಕ್ಕೆ ನಾವು ರಾಘಣ್ಣ, ಶಿವಣ್ಣ ಮತ್ತು ಅವರ ಕುಟುಂಬಕ್ಕೆ ವಂದನೆಗಳನ್ನು ತಿಳಿಸಬೇಕು ಎಂದರು.

    ಅಪ್ಪು ಕಣ್ಣು ಕೊಟ್ಟ ಮೇಲೆ 440ಕ್ಕೂ ಹೆಚ್ಚು ಮಂದಿ ಕಣ್ಣುದಾನ ಮಾಡಿದ್ದಾರೆ. ಯಾವತ್ತು ಇಷ್ಟು ಆಗಿರಲಿಲ್ಲ. 12 ಸಾವಿರ ಜನ ಕಣ್ಣುದಾನ ಮಾಡುವುದಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಅಲ್ಲದೆ ಸಾಕಷ್ಟು ಜನ ಕಣ್ಣುದಾನ ಮಾಡಬೇಕು ಎಂದು ಕಾಲ್ ಮಾಡುತ್ತಿರುತ್ತಾರೆ. ಹೀಗಾಗಿ ನಾವು ಹೈ ಪ್ಲೇಡ್ಜಿಂಗ್ ಜಸ್ಟ್ ಕಾಲ್ ನಂಬರ್ ನ ಉದ್ಘಾಟನೆ ಮಾಡ್ತಾ ಇದ್ದೀವಿ. ನೇತ್ರದಾನ ಮಾಡಲು ಬಯಸುವವರು ‘ರಾಜ್‍ಕುಮಾರ್ ನೇತ್ರ ಬ್ಯಾಂಕ್’ ಗೆ ಮಿಸ್ ಕಾಲ್ ಕೊಟ್ಟು ನೋಂದಣಿ ಮಾಡಿಕೊಳ್ಳಬಹುದು ಎಂದು ವಿವರಿಸಿದರು. ಇದನ್ನೂ ಓದಿ:  ಅಪ್ಪು ಅಗಲಿ ಇಂದಿಗೆ 2 ತಿಂಗಳು – ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಅಭಿಮಾನಿಗಳ ದಂಡು

    ನಟ, ನಿರ್ಮಾಪಕ ರಾಘವೇಂದ್ರ ರಾಜ್‍ಕುಮಾರ್ ಈ ವಿನೂತನ ಯೋಜನೆಗೆ ಚಾಲನೆ ನೀಡಿದ್ದು, ಕಂಠೀರವ ಸ್ಟುಡಿಯೋದ ಪುನೀತ್ ಸಮಾಧಿ ಬಳಿ ಈ ಕಾರ್ಯಕ್ರಮ ನಡೆಯಿತು. ಈ ವೇಳೆ ರಾಘವೇಂದ್ರ ಅವರು ನೇತ್ರದಾನದ ಯೋಜನೆಯ ನಂಬರ್ ಬಿಡುಗಡೆಗೊಳಿಸಿದರು.

  • ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ಬೆಂಗಳೂರು: ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಅವರ ಕಣ್ಣನ್ನು ನಾಲ್ವರಿಗೆ ಅಳವಡಿಸಿದ್ದೇವೆ ಎಂದು ನಾರಾಯಣ ನೇತ್ರಾಲಯ ಡಾ. ಭುಜಂಗಶೆಟ್ಟಿ ಅವರು ಹೇಳಿದ್ದಾರೆ.

     

    ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಹೃದಯ ಸ್ತಂಭದಿಂದ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಆದರೆ ಸತ್ತ ಮೇಲೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮಾನವೀಯತೆ ಮೆರೆದಿದ್ದಾರೆ. ಇದೀಗ ಪುನೀತ್ ಅವರ ಕಣ್ಣು ನಾಲ್ವರ ಅಂಧಕಾರವನ್ನು ದೂರ ಮಾಡಿದೆ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

    ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾರಾಯಣ ನೇತ್ರಾಲಯ ಡಾ.ಭುಜಂಗಶೆಟ್ಟಿ ಅವರು, ರಾಜ್ ಕುಮಾರ್ ಕುಟುಂಬದವರಿಗೆ ವಂದನೆ ಹೇಳೋಕೆ ಬಯಸುತ್ತೇನೆ. ಮೊದಲಿಗೆ ರಾಜ್‍ಕುಮಾರ್ ಅವರು ಬಂದು ನೇತ್ರಾದಾನ ಶುರು ಮಾಡಿದರು. ಬಳಿಕ ಪಾರ್ವತಮ್ಮನವರು, ಇದೀಗ ಪುನೀತ್ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಹೀಗಾಗಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಜೇಮ್ಸ್ ಸಿನಿಮಾ ರಿಲೀಸ್?

    ಶನಿವಾರವೇ ಅಪರೇಷನ್ ಮಾಡಿ ಪುನೀತ್ ಅವರ ಕಣ್ಣನ್ನು ಬೇರೆಯವರಿಗೆ ನೀಡಿದ್ದೇವೆ. ಸಾಮಾನ್ಯವಾಗಿ ಕಣ್ಣುದಾನ ಮಾಡಿದರೆ ಇಬ್ಬರಿಗೆ ಕೊಡುತ್ತೇವೆ. ಆದರೆ ಅಪ್ಪು ಕಣ್ಣುಗಳನ್ನು ನಾಲ್ಕು ಜನರಿಗೆ ಅಳವಡಿಸಿದ್ದೇವೆ. ಕರ್ನಿಯಾದ ಮುಂಭಾಗ ಮತ್ತು ಹಿಂಭಾಗದ ಪದರವನ್ನು ಎರಡು ಭಾಗವಾಗಿ ಮಾಡಿ ನಾಲ್ಕು ಜನರಿಗೆ ಕೊಟ್ಟಿದ್ದೇವೆ. ಅಂದರೆ ಕಣ್ಣಿನ ಮುಂದಿನ ಭಾಗ ಮತ್ತು ಬ್ಯಾಕ್ ಪೋಷನ್ ಬೇರ್ಪಡಿಸಿ ಅವಶ್ಯಕತೆ ಇರುವ ನಾಲ್ವರಿಗೆ ಕೊಟ್ಟಿದ್ದೇವೆ. ಒಬ್ಬರ ಕಣ್ಣನ್ನು ಒಂದೇ ದಿನ, ನಾಲ್ವರಿಗೆ ಕೊಟ್ಟಿರುವುದು ಇದೇ ಮೊದಲಾಗಿದೆ. ನಾಲ್ವರು ಇದೀಗ ತುಂಬಾ ಚೆನ್ನಾಗಿದ್ದಾರೆ. ಇದಕ್ಕೆ ಕಣ್ಣು ತುಂಬಾ ಚೆನ್ನಾಗಿ ಇರಬೇಕಾಗುತ್ತದೆ. ಪುನೀತ್ ಕಣ್ಣು ತುಂಬಾ ಚೆನ್ನಾಗಿದ್ದ ಕಾರಣ ಇದನ್ನು ನಾಲ್ವರಿಗೆ ನೀಡಲು ಸಾಧ್ಯವಾಯಿತು ಎಂದು ತಿಳಿಸಿದರು.

    ಐದು ಜನರ ತಂಡದ ಡಾಕ್ಟರ್‌ಗಳು ಆಪರೇಷನ್ ಅನ್ನು ಮಾಡಿದ್ದಾರೆ. ಈ ಮೊದಲು ಈ ರೀತಿಯ ಆಪರೇಷನ್ ಅನ್ನು ಬೇರೆ, ಬೇರೆ ದಿನ ಮಾಡಲಾಗುತ್ತಿತ್ತು. ಆದರೆ ಅಪ್ಪು ಕಣ್ಣಿಗೆ ಪೂರಕವಾದ ನಾಲ್ವರ ಕಣ್ಣುಗಳಿಗೆ ಮ್ಯಾಚ್ ಆಗಬೇಕು. ಇದೀಗ ಒಬ್ಬ ಯುವತಿ, ಮೂವರು ಯುವಕರಿಗೆ ಅಪ್ಪು ಕಣ್ಣು ನೀಡಲಾಗಿದೆ. ಬೆಳಗ್ಗೆ ಹನ್ನೊಂದು ಗಂಟೆಯಿಂದ ಸಂಜೆ ಆರು ಗಂಟೆ ತನಕ ಆಪರೇಷನ್ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ:  ಉಪ್ಪಿನಲ್ಲಿ ಚಿತ್ರ ಬಿಡಿಸಿ ಅಪ್ಪುಗೆ ವಿಶೇಷ ವಿದಾಯ ಹೇಳಿದ ತೆಲುಗು ಅಭಿಮಾನಿ