Tag: ಡಾ. ಭುಜಂಗ ಶೆಟ್ಟಿ

  • ಅಗಲಿದ ಡಾ.ಭುಜಂಗ ಶೆಟ್ಟಿ ಅವರಿಗೆ ಸ್ಯಾಂಡಲ್ ವುಡ್ ಕಂಬನಿ

    ಅಗಲಿದ ಡಾ.ಭುಜಂಗ ಶೆಟ್ಟಿ ಅವರಿಗೆ ಸ್ಯಾಂಡಲ್ ವುಡ್ ಕಂಬನಿ

    ಖ್ಯಾತ ನೇತ್ರತಜ್ಞ ಡಾ.ಭುಜಂಗ ಶೆಟ್ಟಿ ಅವರಿಗೂ ಸ್ಯಾಂಡಲ್ ವುಡ್ ಗೂ ಭಾವನಾತ್ಮಕ ಸಂಬಂಧವಿದೆ. ಡಾ.ರಾಜ್ ಕುಮಾರ್ ಅವರನ್ನು ಕಣ್ಣುದಾನಕ್ಕೆ ಪ್ರೇರೇಪಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಡಾ.ರಾಜ್ ಐ ಬ್ಯಾಂಕ್ ಮೂಲಕ ಲಕ್ಷಾಂತರ ಜನರಿಗೆ ಬೆಳಕಾದವರು ಭುಜಂಗ ಶೆಟ್ಟರು. ಹಾಗಾಗಿ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಗೆ ಶೆಟ್ಟಿರು ಅಂದರೆ ಎಲ್ಲಿಲ್ಲದ ಅಭಿಮಾನ ಹಾಗೂ ವಿಶೇಷ ಪ್ರೀತಿ.

    ಡಾ.ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಸೇರಿದಂತೆ ಅನೇಕ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಭುಜಂಗ ಶೆಟ್ಟರ ಪ್ರೇರಣೆಯಿಂದ ಕಣ್ಣುದಾನ ಮಾಡಿದ್ದಲ್ಲದೇ, ಅನೇಕರು ಇವರದ್ದೇ ಆಸ್ಪತ್ರೆಗಳಲ್ಲಿ ನೇತ್ರ ಚಿಕಿತ್ಸೆಗೂ ಒಳಗಾಗಿದ್ದಾರೆ. ಹಾಗಾಗಿ ಅವರ ನಿಧನದ ಸಂದರ್ಭದಲ್ಲಿ ಅನೇಕರು ಕಂಬನಿ ಮಿಡಿದಿದ್ದಾರೆ. ಅಗಲಿದ ನೇತ್ರ ತಜ್ಞನಿಗೆ ಸಂತಾಪಗಳನ್ನು ಸೂಚಿಸಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ಭುಜಂಗ ಶೆಟ್ಟರ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡಿರುವ ಜಗ್ಗೇಶ್, ‘ಇಂದಿನ ದೇವಯ್ಯ ಪಾರ್ಕ್ ಮೆಟ್ರೋ ಅಡಿಯಲ್ಲಿ 1980ರಲ್ಲಿ ಇವರ ಕಣ್ಣಿನ ಕ್ಲಿನಿಕ್ ಇತ್ತು. ಅಮ್ಮನ ಕಣ್ಣಿನ ಪರೀಕ್ಷೆಗಾಗಿ ಇವರ ಬಳಿ ಹೋಗಿದ್ದ ನೆನಪು. ನಂತರ ಅವರ ಬೆಳವಣಿಗೆ. ಅವರ ಆಸ್ಪತ್ರೆಯಲ್ಲಿ ನಡೆದ ನನ್ನ ಅನೇಕ ಚಿತ್ರದ ಚಿತ್ರೀಕರಣ. ರಾಜಣ್ಣ ಕಣ್ಣಿನ ದಾನಕ್ಕೆ ಇವರೇ ಪ್ರೇರಣೆ’ ಎಂದು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ:ಕಂಗನಾ ಸಿನಿಮಾ ನೋಡಿ ಕಣ್ಣೀರಿಟ್ಟ ರಾಜಮೌಳಿ ತಂದೆ

    ಡಾ.ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲ ಶುರು ಮಾಡಿದ್ದು 1993ರಲ್ಲಿ. ಬೆಂಗಳೂರಿನ ರಾಜಾಜಿನಗರದಲ್ಲಿ ಶುರುವಾದ ನೇತ್ರಾಲಯದಲ್ಲಿ ಡಾ.ರಾಜ್ ಕುಮಾರ್ ಅವರು 1994ರಲ್ಲಿ ತಮ್ಮ ತಂಗಿಯ ಕಣ್ಣಿನ ಆಪರೇಷನ್ ಮಾಡಿಸಲು ಅಲ್ಲಿಗೆ ಹೋಗಿದ್ದರು. ಭುಜಂಗ ಶೆಟ್ಟರು ಆಡಿದ ಕಣ್ಣಿನ ದಾನದ ಮಾತು ರಾಜ್ ಕುಮಾರ್ ಅವರನ್ನು ಪ್ರೇರೇಪಿಸಿತು. ನಂತರ ರಾಜ್ ಕುಮಾರ್ ಕೂಡ ಕಣ್ಣುದಾನಕ್ಕೆ ಮುಂದಾದರು. ಮತ್ತು ಡಾ.ರಾಜ್ ಕುಮಾರ್ ನೇತ್ರದಾನ ಕೇಂದ್ರ ಆರಂಭವಾಯಿತು.

  • ಇಬ್ಬರ ಬಾಳಿಗೆ ಬೆಳಕು ನೀಡಿದ ಡಾ. ಭುಜಂಗಶೆಟ್ಟಿ ಕಣ್ಣುಗಳು

    ಇಬ್ಬರ ಬಾಳಿಗೆ ಬೆಳಕು ನೀಡಿದ ಡಾ. ಭುಜಂಗಶೆಟ್ಟಿ ಕಣ್ಣುಗಳು

    ಬೆಂಗಳೂರು: ಹೃದಯಾಘಾತಕ್ಕೀಡಾಗಿ ನಿಧನರಾದ ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ (Dr. Bhujanga Shetty) ಯವರ ಕಣ್ಣುಗಳು ಇಬ್ಬರ ಬಾಳಿಗೆ ಬೆಳಕಾಗಿದೆ.

    ಲಕ್ಷಾಂತರ ಕಣ್ಣುಗಳನ್ನ ದಾನ ಮಾಡುವ ಮೂಲಕ ನೇತ್ರದಾನ (Eye Donate) ದ ಕ್ರಾಂತಿ ಮಾಡಿದ್ದ ನೇತ್ರ ತಜ್ಞರಿಂದಲೇ ಇದೀಗ ನೇತ್ರದಾನವಾಗಿದೆ. ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ನೀಗಿಸಿದ್ದರು.

    ಶುಕ್ರವಾರ ತಡರಾತ್ರಿ ಡಾ. ರಾಜ್ ಕುಮಾರ್ ಕಣ್ಣಿನ ಬ್ಯಾಂಕ್ ಗೆ ನೇತ್ರದಾನ ಮಾಡಲಾಗಿದೆ. ನೇತ್ರದಾನ ಮಾಡುವ ಮೂಲಕ ಭುಜಂಗ ಶೆಟ್ಟಿಯವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇದನ್ನೂ ಓದಿ: ನಾರಾಯಣ ನೇತ್ರಾಲಯ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಭುಜಂಗಶೆಟ್ಟಿ ಇನ್ನಿಲ್ಲ

    ನಿನ್ನೆ ಸಂಜೆ 7:30 ರ ವೇಳೆಗೆ ಮನೆಯಲ್ಲಿದ್ದಾಗ ಡಾ. ಭುಜಂಗ ಶೆಟ್ಟಿಯವರಿಗೆ ಹೃದಯಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

     

  • ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ

    ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ

    ಬೆಂಗಳೂರು: ದೊಡ್ಮನೆ ಹುಡುಗ ನಟ ಪುನೀತ್ ರಾಜ್‍ಕುಮಾರ್ ನಿಧನದ ನಂತರ ನೇತ್ರದಾನ ಮಾಡಲು ನೂರಾರು ಸಂಖ್ಯೆಯಲ್ಲಿ ಜನ ಮುಂದಾಗಿದ್ದಾರೆ.

     puneeth rajkumar

    ಪುನೀತ್ ರಾಜ್‍ಕುಮಾರ್ ಅವರು, ವಿಧಿವಶರಾದ ಬಳಿಕ ನೇತ್ರದಾನ ಮಾಡಿ ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ. ಇದೀಗ ಪ್ರತಿದಿನ ನಾರಾಯಣ ನೇತ್ರಾಲಯದಲ್ಲಿ ನೇತ್ರದಾನ ಮಾಡಲು ಜನರ ದಂಡು ಹರಿದು ಬರುತ್ತಿದ್ದು, ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ನೇತ್ರದಾನ ಮಾಡಲು ಜನ ನೊಂದಾಯಿಸಿದ್ದಾರೆ ಎಂದು ಡಾ. ಭುಜಂಗ ಶೆಟ್ಟಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

     puneeth rajkumar

    ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಪುನೀತ್ ಸಮಾಧಿಗೆ ಭೇಟಿ ಕೊಟ್ಟು ಬಂದವರೆಲ್ಲ ಬಹುತೇಕರು ನೇರವಾಗಿ ನಾರಾಯಣ ನೇತ್ರಾಲಯಕ್ಕೆ ಬಂದು ಕಣ್ಣಿನ ದಾನ ಮಾಡುತ್ತಿದ್ದಾರೆ. ದಿನಕ್ಕೆ 3 ರಿಂದ 4 ಜನ ನೇತ್ರದಾನ ಮಾಡಿದರೆ ಅದೇ ದೊಡ್ಡದು. ಆದರೀಗ ನಿತ್ಯ 200 ಜನದಂತೆ ನೇತ್ರದಾನ ಮಾಡಲು ಬರುತ್ತಿದ್ದಾರೆ. ಇದು ಅಪ್ಪು ಬಿಟ್ಟು ಹೋದ ಸ್ಫೂರ್ತಿ. ಪುನೀತ್ ಸಾವಿನ ಬಳಿಕ 30 ಜನರ ಕಣ್ಣನ್ನು ನಾವು ಬೇರೆಯವರಿಗೆ ಜೋಡಿಸಿದ್ದೇವೆ. ಸಾವಿನ ಮನೆಯಿಂದಲೂ ಕರೆ ಬರುತ್ತಿದೆ. ಇಷ್ಟರಮಟ್ಟಿಗೆ ಜನ ಜಾಗೃತಿಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್