Tag: ಡಾ.ರವೀಂದ್ರ

  • ಕುಮಾರಸ್ವಾಮಿ ಪುತ್ರನ ವಿರುದ್ಧ ಆಕ್ರೋಶ, ಉಪವಾಸ

    ಕುಮಾರಸ್ವಾಮಿ ಪುತ್ರನ ವಿರುದ್ಧ ಆಕ್ರೋಶ, ಉಪವಾಸ

    -ನಿಖಿಲ್ ಸ್ಪರ್ಧೆ ಮಂಡ್ಯದ ಸ್ವಾಭಿಮಾನಕ್ಕೆ ಸವಾಲು

    ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಮುಖಂಡನಿಂದ ಎರಡನೇ ದಿನದ ಉಪವಾಸ ಸತ್ಯಾಗ್ರಹ ಮುಂದುವರಿದಿದೆ.

    ಡಾಕ್ಟರ್ ರವೀಂದ್ರ ಅವರು ಭಾನುವಾರದಿಂದ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಹೊರಗಿನವರಾದ ನಿಖಿಲ್ ಸ್ಪರ್ಧೆ ವಿರೋಧಿಸಿ ಸಾಂಕೇತಿಕ ಹೋರಾಟ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಪುತ್ರ ಎಂಬ ಕಾರಣಕ್ಕೆ ನಿಖಿಲ್ ಸ್ಪರ್ಧೆ ಸೂಕ್ತವಲ್ಲ ಎಂದು ಮೂರು ದಿನಗಳ ಕಾಲ ಮೌನ ಮತ್ತು ಉಪವಾಸ ಸತ್ಯಾಗ್ರಹವನ್ನು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಮಾಡುತ್ತಿದ್ದಾರೆ.

    ಡಾ.ರವೀಂದ್ರ, ದಕ್ಷಿಣ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮತ್ತು ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷರಾಗಿದ್ದಾರೆ. ಮಂಡ್ಯ ಜಿಲ್ಲೆಯ ಅಸ್ತಿತ್ವ, ಸ್ವಾಭಿಮಾನದ ಪ್ರಶ್ನೆ ಇದಾಗಿದ್ದು, ರಾಜಕೀಯವಾಗಿ ಸುಮಲತಾ ವಿರುದ್ಧ ಅಸಭ್ಯ ಪದ ಬಳಸುವ ರಾಜಕಾರಣಿಗಳ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಸ್ಥಳೀಯರನ್ನೇ ಅಭ್ಯರ್ಥಿ ಮಾಡುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನಾನಿರತ ಡಾ.ರವೀಂದ್ರಗೆ ಕೈ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶ್ರೀಗಳು ನನ್ನನ್ನು ಮಾತನಾಡಿಸಿದ್ರು : ಸಚಿವ ಡಿಕೆಶಿ

    ಶ್ರೀಗಳು ನನ್ನನ್ನು ಮಾತನಾಡಿಸಿದ್ರು : ಸಚಿವ ಡಿಕೆಶಿ

    ಚೆನ್ನೈ: ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದು, ನನ್ನನ್ನು ಮಾತನಾಡಿಸಿದರು ಎಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಚೆನ್ನೈನ ರೇಲಾ ಆಸ್ಪತ್ರೆಗೆ ಸಿದ್ದಗಂಗಾ ಶ್ರೀಗಳ ಭೇಟಿ ಬಳಿಕ ಮಾತನಾಡಿದ ಸಚಿವ ಡಿಕೆ ಶಿವಕುಮಾರ್, ಆಸ್ಪತ್ರೆಯ ಆಡಳಿತ ಮಂಡಳಿ ತುಂಬಾ ಶಿಸ್ತಿನಿಂದ ನಡೆದುಕೊಳ್ಳುತ್ತಿದ್ದು, ಯಾರನ್ನು ಒಳಗೆ ಬಿಡುವುದಿಲ್ಲ. ಆದರೆ ನಾನು ಮಂತ್ರಿ ಎಂಬ ಕಾರಣಕ್ಕೆ ಮಾತ್ರ ಭೇಟಿ ಮಾಡಲು ಅವಕಾಶ ನೀಡಿದರು. ಶೀಘ್ರವೇ ಶ್ರೀಗಳು ಆಸ್ಪತ್ರೆಯಿಂದ ನಡೆದುಕೊಂಡು ಹೊರಬರುತ್ತಾರೆ. ಇಲ್ಲಿನ ಆಸ್ಪತ್ರೆ ನೋಡಿದರೆ ಖುಷಿ ಆಗುತ್ತೆ. ಅಲ್ಲದೇ ಆಡಳಿತ ವ್ಯವಸ್ಥೆ, ಚಿಕಿತ್ಸಾ ವಿಧಾನ ಎಲ್ಲವೂ ಚೆನ್ನಾಗಿದೆ. ಭಕ್ತಾದಿಗಳು ಆಸ್ಪತ್ರೆ ಬಳಿ ಬಂದು ವೈದ್ಯರಿಗೆ ತೊಂದರೆ ನೀಡುವುದು ಬೇಡ ಎಂದು ಮನವಿ ಮಾಡಿದರು.

    ರೇಲಾ ಆಸ್ಪತ್ರೆ ಅತ್ಯುತ್ತಮವಾಗಿದ್ದು, ಭಾರತದಲ್ಲೇ ಉತ್ತಮವಾದ ಆಸ್ಪತ್ರೆ ಎಂಬ ಹೆಗ್ಗಳಿಕೆ ಇದೆ. ಇಲ್ಲಿ 150 ಐಸಿಯೂ ಕೊಠಡಿಗಳಿದ್ದು, ಉತ್ತಮ ನುರಿತ ವೈದ್ಯರಿದ್ದಾರೆ. ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವನಾಗಿ ಹೇಳುತ್ತಿದ್ದು, ನಮ್ಮಲ್ಲಿ ಇಂತಹ ಆಸ್ಪತ್ರೆ ಇಲ್ಲ. ಈ ರೀತಿ ಆಸ್ಪತ್ರೆ ನಮ್ಮಲ್ಲಿ ಆಗುವ ನಂಬಿಕೆಯೂ ಇಲ್ಲ. ಐದು ದಿನದ ನವಜಾತ ಶಿಶುವಿನಿಂದ 111 ವರ್ಷದ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

    ಶ್ರೀಗಳ ಆರೋಗ್ಯದ ಕುರಿತು ಬಿಜಿಎಸ್ ಆಸ್ಪತ್ರೆ ವೈದ್ಯರಾದ ಡಾ. ರವೀಂದ್ರ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದು, ಶ್ರೀಗಳಿಗೆ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯಕ್ಕೆ ಶ್ರೀಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಭಕ್ತರು ಯಾವುದೇ ಆತಂಕ ಪಡಬೇಕಿಲ್ಲ. ಶಸ್ತ್ರಚಿಕಿತ್ಸೆ ನಂತರ ಸ್ವಾಮೀಜಿಗಳನ್ನ ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಮೂರು ದಿನಗಳವರೆಗೂ ಐಸಿಯುನಲ್ಲೇ ಇರಬೇಕಾಗಿದೆ. ಸ್ವಾಮೀಜಿಗಳನ್ನ ಸದ್ಯ ಯಾರು ಭೇಟಿ ಮಾಡುವ ಆಗಿಲ್ಲ, ಅವರು ವಿಶ್ರಾಂತಿ ಪಡೆಯಬೇಕಿದೆ ಎಂದು ಮಾಹಿತಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನ.3 ರಂದು ಕರ್ನಾಟಕದ ಖಾಸಗಿ ಆಸ್ಪತ್ರೆ ವೈದ್ಯರಿಂದ ಮುಷ್ಕರ

    ನ.3 ರಂದು ಕರ್ನಾಟಕದ ಖಾಸಗಿ ಆಸ್ಪತ್ರೆ ವೈದ್ಯರಿಂದ ಮುಷ್ಕರ

    ಬೆಂಗಳೂರು: ದುಬಾರಿ ಶುಲ್ಕ ವಿಧಿಸುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು `ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ-2017′ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ನವೆಂಬರ್ 3 ರಂದು ಮುಷ್ಕರ ನಡೆಸಲಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ವೈದ್ಯ ಸಂಘದ ಅಧ್ಯಕ್ಷ ಡಾ. ರವೀಂದ್ರ, ಇದೇ ವಿಚಾರವಾಗಿ ಜೂನ್ 16 ರಂದೇ ಪ್ರತಿಭಟನೆ ನಡೆಸಿದ್ದೇವೆ. ಅಂದು ಸಿಎಂ ಸೇರಿದಂತೆ ಆರೋಗ್ಯ ಸಚಿವರನ್ನೂ ಸಹ ಭೇಟಿ ಮಾಡಿದ್ದು, ಆದರೆ ಅವರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ನವೆಂಬರ್ 3 ರಂದು ನಾವು ಮುಷ್ಕರ ನಡೆಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.

    ಸರ್ಕಾರ ಈಗ ಹೊಸದಾಗಿ ಕುಂದು ಕೊರತೆ ಪರಿಹಾರ ಸಮಿತಿ ಜಾರಿ ತರಲು ನಿರ್ಧಾರ ಮಾಡಿದ್ದಾರೆ. ಆದರೆ ಇದರಲ್ಲಿ ಯಾವ ವೈದ್ಯರ ವಿರುದ್ಧ ದೂರು ಹೂಡಿದ್ದಾರೋ, ಆ ವೈದ್ಯರು ಲಾಯರ್ ನೇಮಕ ಮಾಡುವ ಹಾಗಿಲ್ಲ. ಅಂದರೆ ಕಸಬ್ ನಂತಹ ದೇಶ ದ್ರೋಹಿಗೆ ಲಾಯರ್ ಇಟ್ಟುಕೊಳ್ಳಲು ಅವಕಾಶ ಇರುವ ನಮ್ಮ ದೇಶದಲ್ಲಿ, ವೈದ್ಯರಿಗೆ ಯಾಕೆ ಅವಕಾಶವಿಲ್ಲ ಎಂದು ಪ್ರಶ್ನಿಸಿ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

    ವೈದ್ಯರಿಗೆ ದಂಡ ಹಾಗೂ ಜೈಲಿಗಟ್ಟುವ ನೀವು ವೈದ್ಯರಿಗೆ ಯಾವ ರೀತಿ ಗೌರವ ನೀಡುತ್ತೀರಾ? ನವೆಂಬರ್ 3 ರಂದು ಸಾಂಕೇತಿಕವಾಗಿ ಹೊರ ರೋಗಿಗಳ ಸೇವೆಯನ್ನು ಸ್ಥಗಿತಗೊಳಿಸುತ್ತೇವೆ. ಸರ್ಕಾರ ಆಗಲೂ ಮಾತುಕತೆಗೆ ಮುಂದಾಗದಿದ್ದರೆ. ನವೆಂಬರ್ 9 ಮತ್ತು 10 ರಂದು ವೈದ್ಯ ವೃತ್ತಿಯನ್ನು ತ್ಯಜಿಸುತ್ತೇವೆ. ಕರ್ನಾಟಕದಲ್ಲಿ 40 ರಿಂದ 50 ಸಾವಿರ ಖಾಸಗಿ ಆಸ್ಪತ್ರೆಗಳಿವೆ. ಆದರೆ ಸರ್ಕಾರಿ ಆಸ್ಪತ್ರೆಯನ್ನೇ ಸರಿಯಾಗಿ ವ್ಯವಸ್ಥಿತವಾಗಿ ಕಾಪಾಡಿಕೊಳ್ಳದ ಸರ್ಕಾರ, ಖಾಸಗಿ ಆಸ್ಪತ್ರೆಯತ್ತ ಬೊಟ್ಟುಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ಸಿಎಂ ಸಿದ್ದರಾಮಯ್ಯನವರ ಮಗ ಡಾ. ಯತೀಂದ್ರ ಅವರೂ ವೈದ್ಯರೇ, ನಾನು ಅವರ ಜೊತೆಯಲ್ಲಯೂ ಮಾತನಾಡಿದ್ದೇನೆ. ಆಯಾಯ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುತ್ತೇವೆ. ಯಾವುದೇ ಶಸ್ತ್ರ ಚಿಕಿತ್ಸೆ ನಡೆಸುವುದಿಲ್ಲ. ಸರ್ಕಾರಿ ಆಸ್ಪತ್ರೆ ಸರಿ ಇದ್ದಿದ್ದರೆಜನರು ಏಕೆ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ನಮ್ಮ ಪ್ರತಿಭಟನೆ ವಿಚಾರವನ್ನು ಯತೀಂದ್ರ ಅವರು ತಂದೆಯ ಜೊತೆಗೆ ಮಾತಾನಾಡೋದಾಗಿ ಹೇಳಿದ್ದಾರೆಂದು ರವೀಂದ್ರ ಅವರು ತಿಳಿಸಿದ್ದಾರೆ.

    ಮಗ ಯತೀಂದ್ರ ಮಾತಿಗೆ ಮಣಿದ ಸಿಎಂ ಸಿದ್ದರಾಮಯ್ಯ ಈಗ ಮಾತುಕತೆಗೆ ಮುಂದಾಗಿದ್ದು, ನವೆಂಬರ್ 2 ರಂದು 10 ಗಂಟೆಯ ವೇಳೆಗೆ ವೈದ್ಯರ ಜೊತೆ ಮಾತುಕತೆಗೆ ಅವಕಾಶ ನೀಡಿದ್ದಾರೆ.