Tag: ಡಾ.ವೀರೇಂದ್ರ ಹೆಗ್ಗಡೆ

  • ಆಪರೇಷನ್ ಸಿಂಧೂರ ಯಶಸ್ವಿಯಾಗಲೆಂದು ವೀರೇಂದ್ರ ಹೆಗ್ಗಡೆ ವಿಶೇಷ ಪೂಜೆ

    ಆಪರೇಷನ್ ಸಿಂಧೂರ ಯಶಸ್ವಿಯಾಗಲೆಂದು ವೀರೇಂದ್ರ ಹೆಗ್ಗಡೆ ವಿಶೇಷ ಪೂಜೆ

    – ಸುರಕ್ಷಿತ ಕಾರ್ಯಾಚರಣೆಗೆ ಧರ್ಮಸ್ಥಳ ಮಂಜುನಾಥನಲ್ಲಿ ಪ್ರಾರ್ಥನೆ

    ಮಂಗಳೂರು: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ (Indian Army) ಸರ್ವರೀತಿಯಲ್ಲೂ ಯಶಸ್ಸು ಕಾಣಲಿ ಎಂದು ಡಾ.ವೀರೇಂದ್ರ ಹೆಗ್ಗಡೆ (D Veerendra Heggade) ಧರ್ಮಸ್ಥಳ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ನಮ್ಮ ಹೆಮ್ಮೆಯ ಸೈನಿಕರಿಗೆ ಯಾವುದೇ ಹಾನಿಯಿಲ್ಲದೇ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸುವಂತೆ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ವೀರೇಂದ್ರ ಹೆಗ್ಗಡೆ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧ: ಜಮೀರ್ ಅಹ್ಮದ್

    ಗುರುವಾರ ರಾತ್ರಿ ಪಾಕ್ ವಿರುದ್ಧ ಭಾರತ ಮಿಸೈಲ್‌ಗಳ ಮಳೆ ಸುರಿಸಿದೆ. ಈ ವೇಳೆ ಪಾಕ್ ಸಹ ದಾಳಿ ನಡೆಸಿದೆ. ಆದರೆ ಭಾರತೀಯ ಸೇನೆ ಆ ದಾಳಿಯನ್ನು ವಿಫಲಗೊಳಿಸಿದೆ. ಇದರ ಬೆನ್ನಲ್ಲೇ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಪಾಕ್ ತತ್ತರಿಸಿ ಹೋಗಿದೆ. ಇಷ್ಟಾಗಿಯೂ ಕಿತಾಪತಿ ಬಿಡದ ಪಾಕಿಸ್ತಾನ ಮತ್ತೆ ಭಾರತದ ಜಮ್ಮುವಿನ ಮೇಲೆ ದಾಳಿಗೆ ವಿಫಲಯತ್ನ ನಡೆಸಿದೆ. ಜಮ್ಮುವಿನಲ್ಲಿ ಇದುವರೆಗೆ ಪಾಕಿಸ್ತಾನದ 50ಕ್ಕೂ ಹೆಚ್ಚು ಡ್ರೋನ್ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಕೇಸ್ | NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ, ಕರಾವಳಿಗೆ ಪಾಕ್ ಸಂಪರ್ಕವಿದೆ: ಅಶೋಕ್

  • ಧರ್ಮಸ್ಥಳದಲ್ಲಿ ಹೆಗ್ಗಡೆ ಶಾಂತವಾಗಿದ್ದಾರೆ ಅಂದ್ರೆ ಅದಕ್ಕೆ ಮಂಜುನಾಥ ಸ್ವಾಮಿ ಕಾರಣ: ಡಾ.ವೀರೇಂದ್ರ ಹೆಗ್ಗಡೆ

    ಧರ್ಮಸ್ಥಳದಲ್ಲಿ ಹೆಗ್ಗಡೆ ಶಾಂತವಾಗಿದ್ದಾರೆ ಅಂದ್ರೆ ಅದಕ್ಕೆ ಮಂಜುನಾಥ ಸ್ವಾಮಿ ಕಾರಣ: ಡಾ.ವೀರೇಂದ್ರ ಹೆಗ್ಗಡೆ

    ಮಂಗಳೂರು: ಧರ್ಮಸ್ಥಳದಲ್ಲಿ ಹೆಗ್ಗಡೆ ಶಾಂತವಾಗಿದ್ದಾರೆ ಅಂದ್ರೆ ಅದಕ್ಕೆ ಮಂಜುನಾಥ ಸ್ವಾಮಿ, ಚಂದ್ರನಾಥ ಸ್ವಾಮಿ ಕಾರಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ (Dr.Veerendra Heggade) ಅವರು ಹೇಳಿದರು.

    ಧರ್ಮಸ್ಥಳದಲ್ಲಿ (Dharmasthala) ನಡೆದ ಧರ್ಮ ಸಂರಕ್ಷಣಾ ಯಾತ್ರೆ ವೇಳೆ ಮಾತನಾಡಿದ ಅವರು, ಭಕ್ತರು ಧರ್ಮ ಸೈನಿಕರು. ಧರ್ಮಸ್ಥಳದಲ್ಲಿ ಹೆಗ್ಗಡೆ ಶಾಂತವಾಗಿದ್ದಾರೆ ಎಂದರೆ ಅದಕ್ಕೆ ಮಂಜುನಾಥ ಸ್ವಾಮಿ, ಚಂದ್ರನಾಥ ಸ್ವಾಮಿ ಕಾರಣ. ದುಷ್ಟ ಶಕ್ತಿಗಳು ವಿಜೃಂಭಿಸುತ್ತಿವೆ. ನೀವೇ ಶಿಷ್ಟ ರಕ್ಷಣೆಯನ್ನ ಮಾಡಬೇಕು ಭಕ್ತರಿಗೆ ತಿಳಿಸಿದರು. ಇದನ್ನೂ ಓದಿ: ಪವರ್ ಶೇರಿಂಗ್ ಬಗ್ಗೆ ಪಕ್ಷ ತೀರ್ಮಾನಿಸುತ್ತೆ: ಕೃಷ್ಣ ಭೈರೇಗೌಡ

    ಕ್ಷೇತ್ರದ ಕಾರ್ಯವನ್ನು ಎಲ್ಲಾ ಜನರು ಮೆಚ್ಚಿದ್ದಾರೆ. ಇಲ್ಲಿಗೆ ಇಂದು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದೀರಿ. ನಮ್ಮ ವಾಹನವನ್ನ ಅಪೇಕ್ಷಿಸದೆ ನಿಮ್ಮ ಪರವಾಗಿ ಇದ್ದೇವೆ ಎಂದು ಬೆಂಬಲ ನೀಡಿದ್ದೀರಿ. ದೇಶವನ್ನ ಹಾಳು ಮಾಡಬೇಕಾದರೆ, ಮೊದಲು ಸಂಸ್ಕೃತಿಯನ್ನ ನಾಶ ಮಾಡುತ್ತಾರೆ. ನಮ್ಮ ಕ್ಷೇತ್ರಕ್ಕೆ ಬಂದ ಅಪಾಯ ಬೇರೆ ಕ್ಷೇತ್ರಗಳಿಗೂ ಬರಬಹುದು ಎಂದು ಕಳವಳ ವ್ಯಕ್ತಪಡಿಸಿದರು.

    ವಿಷವನ್ನು ಸೇವಿಸುವ ಶಕ್ತಿ ಎಲ್ಲರಿಗೂ ಬರುವುದಿಲ್ಲ. ಇದು ದೇವರ ಪರೀಕ್ಷೆ. ಮಳೆ ಬರುತ್ತಿದೆ, ಆದರೆ ಯಾರು ಸಹ ಓಡುತ್ತಿಲ್ಲ, ನಿಂತಿದ್ದೀರಿ. ವೈಯಕ್ತಿಕವಾದ ನಿಂದನೆಯಿಂದ ಸಂಸ್ಕೃತಿ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನೀವೆಲ್ಲರೂ ಸ್ವಾಸ್ಥ್ಯ ಸಂಕಲ್ಪವನ್ನ ಮಾಡಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಬಿಜೆಪಿಯವರಿಗೆ ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ: ವೀರಪ್ಪ ಮೊಯ್ಲಿ

    ಸೌಜನ್ಯ ಪ್ರಕರಣದ ಆರೋಪಗಳ ಬಗ್ಗೆ ಮೌನ ಮುರಿದ ವೀರೇಂದ್ರ ಹೆಗ್ಗಡೆ ಅವರು, ಯಾವುದೇ ರೀತಿಯ ತನಿಖೆಯಾಗಲಿ. ನಾವೂ ಸಿದ್ಧ. ದಾಖಲೆಯಿಲ್ಲದೆ ಆರೋಪ ಮಾಡುತ್ತಿದ್ದಾರೆ. ನಿಮ್ಮ ದೀಕ್ಷೆಯಿಂದ ಈ ಎಲ್ಲಾ ಕಷ್ಟಗಳೂ ದೂರವಾಗಲಿ. ಧರ್ಮಸ್ಥಳಕ್ಕೆ ಆಪತ್ತು ಬಂದಾಗ ನೀವು ಕೈಗೊಂಡ ಈ ಪ್ರಾರ್ಥನೆಯನ್ನ ಸ್ವಾಮಿಯ ಪಾದಕ್ಕೆ ಅರ್ಪಿಸುತ್ತೇನೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತ್ರಿವೇಣಿ ಸಂಗಮದಲ್ಲಿ ಮೇಳೈಸಿದ ಮಹಾ ಕುಂಭಮೇಳ – ದೇಗುಲ ಲೋಕಾರ್ಪಣೆಗೊಳಿಸಿದ ಡಾ.ವೀರೇಂದ್ರ ಹೆಗ್ಗಡೆ

    ತ್ರಿವೇಣಿ ಸಂಗಮದಲ್ಲಿ ಮೇಳೈಸಿದ ಮಹಾ ಕುಂಭಮೇಳ – ದೇಗುಲ ಲೋಕಾರ್ಪಣೆಗೊಳಿಸಿದ ಡಾ.ವೀರೇಂದ್ರ ಹೆಗ್ಗಡೆ

    ಮಂಡ್ಯ: ಸಕ್ಕರೆ ನಾಡಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ (Kumbh Mela) ಭಕ್ತ ಸಾಗರವೇ ಹರಿದು ಬರುತ್ತಿದೆ. ಎರಡನೇ ದಿನವಾದ ಇಂದು ಧರ್ಮಸ್ಥಳದ (Dharmasthala) ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ (Dr.Veerendra Heggade) ಪಾಲ್ಗೊಂಡು, ಮಹದೇಶ್ವರ ಸ್ವಾಮಿಯ ನೂತನ ದೇಗುಲ ಲೋಕಾರ್ಪಣೆ ಮಾಡಿ, ನದಿಗೆ ಬಾಗಿನ ಸಮರ್ಪಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು. ಮತ್ತೊಂದೆಡೆ ವೇದಿಕೆಯಲ್ಲಿ ಭಾಗಿಯಾಗಿದ್ದ ಸಾಧು ಸಂತರು ಕುಂಭ ಮೇಳದ ಮಹತ್ವ ಸಾರಿದರು.

    ಮಲೆ ಮಹದೇಶ್ವರ ಸ್ವಾಮಿ ಪಾದ ಸ್ಪರ್ಶ ಮಾಡುವ ಜೊತೆಗೆ ವಪಾಡ ಮೆರೆದ ಪುಣ್ಯ ಕ್ಷೇತ್ರ ಮಂಡ್ಯ (Mandya) ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭ ಮೇಳ ಸಂಭ್ರಮ ಹಾಗೂ ಭಕ್ತಿ ಭಾವದಿಂದ ನಡೆಯುತ್ತಿದೆ. ಕುಂಭ ಮೇಳದ ಎರಡನೇ ದಿನವಾದ ಇಂದು ರಾಜ್ಯದ ಹಲವೆಡೆಯಿಂದ ಲಕ್ಷಾಂತರ ಭಕ್ತರು ಪಾಲ್ಗೊಂಡು ಕಾವೇರಿ, ಹೇಮಾವತಿ, ನದಿಗಳ ಸಂಗಮದಲ್ಲಿ ಮಿಂದೆದ್ದು ಪಾಪ ನಿವಾರಣೆಗಾಗಿ ಪ್ರಾರ್ಥಿಸಿದರು. ಬೆಳಗ್ಗೆಯಿಂದಲೇ ತಂಡೋಪ ತಂಡವಾಗಿ ಭಕ್ತರು ಆಗಮಿಸುತ್ತಿದ್ದಾರೆ. ನದಿಯಲ್ಲಿ ಸ್ನಾನ ಮಾಡಿ ಮಹದೇಶ್ವರ ಸ್ವಾಮಿ ದರ್ಶನ ಪಡೆದ್ರೆ ಸ್ನಾನ ಮಾಡದವರು ನದಿ ನೀರನ್ನು ತೀರ್ಥದ ರೂಪದಲ್ಲಿ ಪ್ರೋಕ್ಷಣೆ ಮಾಡಿಕೊಂಡು ಭಕ್ತಿ ಸಮರ್ಪಿಸಿದರು. ಬರುವ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ನ.12ಕ್ಕೆ ಚುನಾವಣೆ, ಡಿ. 8ಕ್ಕೆ ಮತ ಎಣಿಕೆ

    ನದಿ ದಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿರುವ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೇರಿದವು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ, ಡಾ.ವೀರೇಂದ್ರ ಹೆಗ್ಗಡೆ ಅವರು ಕುಂಭಾಭಿಷೇಕ ಮಾಡುವ ಮೂಲಕ ದೇಗುಲ ಲೋಕಾರ್ಪಣೆ ಮಾಡಿದರು. ಇದೇ ವೇಳೆ ನದಿಗೆ ಶಾಸ್ತ್ರೋಕ್ತವಾಗಿ ಬಾಗಿನ ಸಮರ್ಪಣೆ ಮಾಡಲಾಯಿತು. ಇದನ್ನೂ ಓದಿ: ನವೆಂಬರ್‌ನಲ್ಲಿ ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು

    ಬಳಿಕ ನಡೆದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ಮಂಡ್ಯ ಜಿಲ್ಲೆಯಲ್ಲಿ ಸಾವಿರಾರು ದೇವಸ್ಥಾನಗಳಿವೆ. ನಾವು ಕೆಲವು ಸಲ ಕೃತಜ್ಞತೆ ಸಲ್ಲಿಸುವುದಕ್ಕಾಗಿ ಪೂಜೆ ಸಲ್ಲಿಸುತ್ತೇವೆ. ಪಂಚ ಭೂತಗಳಲ್ಲಿ ಜಲ ಬಹಳ ಮುಖ್ಯವಾದದ್ದು, ಜಲಕ್ಕೆ ನಾವು ಕೃತಜ್ಞತೆ ಹೇಳುವುದು ಹೇಗೆ. ಇಷ್ಟು ವರ್ಷ ನಮಗೆ ನೀರಿನ ಅಭಾವ ಉಂಟಾಗಿತ್ತು. ಈಗ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಅದನ್ನು ಹೇಗೆ ಬಳಕೆ ಮಾಡಬೇಕೆಂಬದನ್ನು ಕಲಿಯ ಬೇಕು. ಜಲವನ್ನು ಎಚ್ಚರಿಕಯಿಂದ ಅಮೂಲ್ಯ ಎಂದು ಬಳಸಬೇಕು ಎಂದರು.

    ಇಂದು ಕುಂಭ ಮೇಳದಲ್ಲಿ ಸುತ್ತೂರು ಶ್ರೀ, ಆದಿಚುಂಚನಗಿರಿ ಶ್ರೀ, ಕಾಗಿನೆಲೆ ಶ್ರೀ ಸೇರಿದಂತೆ ಹಲವು ಮಠಾಧಿಪತಿ ಪಾಲ್ಗೊಂಡು ಕುಂಭ ಮೇಳದ ಮಹತ್ವ ಸಾರಿದರು. ಸಚಿವರಾದ ಅಶ್ವಥ್‌ನಾರಾಯಣ, ನಾರಾಯಣಗೌಡ, ಗೋಪಾಲಯ್ಯ, ಶಶಿಕಲಾ ಜೊಲ್ಲೆ ಪಾಲ್ಗೊಂಡಿದ್ದರು. ವಾರಣಾಸಿಯ ಕಾಶಿ ಮಾದರಿಯಲ್ಲಿ ನಡೆಯುವ ಗಂಗಾರತಿ ಪೂಜೆ ಕಣ್ತುಂಬಿಕೊಳ್ಳಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

    ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

    ನವದೆಹಲಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಗುರುವಾರ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.

    ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿಟಿ ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು. ಇದನ್ನೂ ಓದಿ: ಯುಪಿ ಸರ್ಕಾರಕ್ಕೆ 600 ಕೋಟಿ ಆಸ್ತಿ ದಾನ ಮಾಡಿದ ವೈದ್ಯ

    ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆಯಾಗಿರುವ ಡಾ. ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.  ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ

    ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ, ವೀರೇಂದ್ರ ಹೆಗ್ಗಡೆ ಎಂಬ ಹೆಸರಿನ ನಾನು, ರಾಜ್ಯಸಭೆಯ ಸದಸ್ಯನಾಗಿ ನಾಮನಿರ್ದೇಶನ ಹೊಂದಿದವನಾಗಿ, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಕೈಗೊಳ್ಳಲಿರುವ ಕಾರ್ಯಗಳನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಪ್ರಮಾಣ ಮಾಡಿದರು.

    ಪ್ರಹ್ಲಾದ್ ಜೋಶಿ ಸ್ವಾಗತ:
    ವೀರೇಂದ್ರ ಹೆಗ್ಗಡೆಯವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅತ್ಯಂತ ಗೌರವಯುತವಾಗಿ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ಬರಮಾಡಿಕೊಂಡು, ಸನ್ಮಾನಿಸಿ ಅಭಿನಂದಿಸಿದರು.

    ವೀರೇಂದ್ರ ಹೆಗ್ಗಡೆ ಕುರಿತು ಮಾತನಾಡಿದ ಜೋಶಿ, ನಮ್ಮ ಕರ್ನಾಟಕ ಹಾಗೂ ನಮ್ಮ ದೇಶದ ಹೆಮ್ಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದು ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದರು. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಆಯುರ್ವೇದ ಎರಡನೇ ದರ್ಜೆ ಚಿಕಿತ್ಸಾ ಪದ್ಧತಿ ಅಲ್ಲ: ಡಾ.ವೀರೇಂದ್ರ ಹೆಗ್ಗಡೆ

    ಆಯುರ್ವೇದ ಎರಡನೇ ದರ್ಜೆ ಚಿಕಿತ್ಸಾ ಪದ್ಧತಿ ಅಲ್ಲ: ಡಾ.ವೀರೇಂದ್ರ ಹೆಗ್ಗಡೆ

    – ಆಯುರ್ವೇದ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಮಾನ್ಯತೆ ಸಿಗಬೇಕು

    ಉಡುಪಿ: ಆಯುರ್ವೇದ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಮಾನ್ಯತೆ ಸಿಗಬೇಕು. ಆಯುರ್ವೇದ ಎರಡನೇ ದರ್ಜೆಯ ಚಿಕಿತ್ಸಾ ಪದ್ಧತಿ ಅಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

    ಉಡುಪಿಯಲ್ಲಿ ಆಯುರ್ವೇದಿಕ್ ಆಸ್ಪತ್ರೆ ಉದ್ಘಾಟನೆ ವೇಳೆ ಮಾತನಾಡಿದ ಅವರು, ಎಲ್ಲ ದೇಶದಲ್ಲಿ ಅವರದ್ದೇ ಆದ ವೈದ್ಯಕೀಯ ಪದ್ಧತಿಗಳು ಇರುತ್ತದೆ. ಅಂತಾರಾಷ್ಟ್ರೀಯವಾಗಿ ಆಯುರ್ವೇದ ಪದ್ಧತಿಯನ್ನು ಸಾಬೀತು ಮಾಡಬೇಕಾದರೆ ಕೆಲವು ಪುರಾವೆಗಳು ಸಂಶೋಧನೆಗಳು ಬೇಕಾಗುತ್ತವೆ ಎಂದರು. ಇದನ್ನೂ ಓದಿ: ಸಾಧಕ ಬಾಧಕ ಚರ್ಚಿಸದೆ ಕೃಷಿ ಬಿಲ್ ವಿರೋಧಿಸಬೇಡಿ: ಶೋಭಾ ಕರಂದ್ಲಾಜೆ

    ನಮ್ಮ ಎಲ್ಲ ಆಯುರ್ವೇದ ಆಸ್ಪತ್ರೆಗಳ ಪಕ್ಕದಲ್ಲಿ ಸಂಶೋಧನಾ ಕೇಂದ್ರಗಳನ್ನು ಮಾಡಿದ್ದೇವೆ. ಕೆಲವೇ ವರ್ಷಗಳಲ್ಲಿ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರದಿಂದ ಖಾಸಗಿ ಸಂಸ್ಥೆಗಳು ಆಯುರ್ವೇದ ಕಾಲೇಜುಗಳ ಸಹಭಾಗಿತ್ವದಲ್ಲಿ ಭಾರತದ ಆಯುರ್ವೇದ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಮಾನ್ಯತೆ ಸಿಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಕೆಲಸ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

    ಇಎಸ್‍ಐ ವ್ಯಾಪ್ತಿಗೆ ತರಬೇಕು
    ಆಯುರ್ವೇದ ಚಿಕಿತ್ಸೆ ಇಎಸ್‍ಐ ವ್ಯಾಪ್ತಿಯೊಳಗೆ ಬರಬೇಕು ಎಂಬುದು ನನ್ನ ಒತ್ತಾಯ. ಅಲೋಪತಿ ಚಿಕಿತ್ಸೆಗಿಂತ ಆಯುರ್ವೇದ ಕಡಿಮೆ ಖರ್ಚಿನದ್ದಾಗಿರುವುದರಿಂದ ಜನಸಾಮಾನ್ಯರಿಗೆ ಕೈಗೆಟುಕುವ ಬೆಲೆಯಲ್ಲಿ ಚಿಕಿತ್ಸೆಗಳು ಸಿಗುತ್ತಿವೆ. ಆಯುರ್ವೇದ ಪರಿಣಾಮಕಾರಿ ಮತ್ತು ಅಡ್ಡ ಪರಿಣಾಮಗಳು ಇಲ್ಲದ ಚಿಕಿತ್ಸಾ ಪದ್ಧತಿ ಎಂದು ತಿಳಿಸಿದರು.

    ಸರ್ಕಾರದ ಬೆಂಬಲ ಬೇಕು, ಸವಲತ್ತುಗಳನ್ನು ಖಾಸಗಿ ಸಂಸ್ಥೆಗಳೇ ಮಾಡುತ್ತವೆ. ರೋಗಿಗಳೇ ಆಯುರ್ವೇದ ಪದ್ಧತಿಯನ್ನು ಆಯ್ಕೆ ಮಾಡಬೇಕು. ಆಯುರ್ವೇದ ಎಂಬುದು ಎರಡನೇ ದರ್ಜೆಯ ಚಿಕಿತ್ಸಾ ಪದ್ಧತಿಯಲ್ಲ. ಸಮಾಜದ ಸರ್ವರಿಗೂ ಆಯುರ್ವೇದ ಚಿಕಿತ್ಸೆ ಲಭ್ಯವಿದೆ. ಎಸ್‍ಡಿಎಂ ನಲ್ಲಿ ಆಯುರ್ವೇದದ ವ್ಯವಸ್ಥಿತ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.

    ಸರ್ಕಾರ ಆಯುರ್ವೇದ ಪದ್ಧತಿಯನ್ನು ಮಾನ್ಯ ಮಾಡಬೇಕು. ಹಲವಾರು ರೋಗಗಳನ್ನು ಆಯುರ್ವೇದ ಪದ್ಧತಿಯಲ್ಲಿ ವಾಸಿ ಮಾಡಲಾಗಿದೆ. ಆಯುರ್ವೇದ ಪದ್ಧತಿ ಬಗೆಗಿರುವ ಹಿಂಜರಿಕೆ ಜನರಿಂದ ದೂರ ಹೋಗಬೇಕು. ಆಯುರ್ವೇದಿಕ್ ಬಗೆಗಿನ ನಕಾರಾತ್ಮಕ ಅಭಿಪ್ರಾಯ ಹೋಗಿ ಸಕಾರಾತ್ಮಕ ಅಭಿಪ್ರಾಯಗಳನ್ನು ಬೆಳೆಸಿಕೊಳ್ಳಬೇಕು. ನಮ್ಮ ಸರ್ಕಾರಗಳೂ ಆಯುರ್ವೇದ ಪದ್ಧತಿಯನ್ನು ಬೆಳೆಸಬೇಕು ಎಂದರು.

  • 2020ರ ಪಾಠಗಳಿಂದ 2021ನೇ ವರ್ಷ ಶುಭವನ್ನು ಕರುಣಿಸಲಿ- ಡಾ.ವೀರೇಂದ್ರ ಹೆಗ್ಗಡೆ

    2020ರ ಪಾಠಗಳಿಂದ 2021ನೇ ವರ್ಷ ಶುಭವನ್ನು ಕರುಣಿಸಲಿ- ಡಾ.ವೀರೇಂದ್ರ ಹೆಗ್ಗಡೆ

    ಮಂಗಳೂರು: 2020ರಲ್ಲಿ ಕಲಿತ ಪಾಠಗಳಿಂದ 2021ನೇ ವರ್ಷ ಶುಭವನ್ನು ಕರುಣಿಸಲಿ ಎಂದು ಡಾ ವೀರೇಂದ್ರ ಹೆಗ್ಗಡೆಯವರು ಕರ್ನಾಟಕ ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯವನ್ನು ಕೋರಿದ್ದಾರೆ.

    ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಮಾಧ್ಯಮದವರೊಂದಿಗೆ ಮಾತಾನಾಡಿ, 2020ನೇ ವರ್ಷದಲ್ಲಿ ದೇಶ ಪರಿವರ್ತನೆಯಾಗುತ್ತದೆ ಎಂದು ಎಪಿಜೆ ಅಬ್ದುಲ್ ಕಲಾಂ ಹೇಳಿದ್ದರು. ಆದರೆ ಕೊರೊನಾದಿಂದ ಪ್ರಂಪಚವೇ ಶಾಪಗ್ರಸ್ತದ ರೀತಿ ಆಗಿದೆ. ಆದರೂ ಕೊರೊನಾದಿಂದ ತುಂಬಾ ಪರಿವರ್ತನೆಯನ್ನು ಕಂಡಿದ್ದೇವೆ ಪ್ರಯಾಣ, ದುಂದುವೆಚ್ಚದಂತಹ ಕಾರ್ಯಗಳನ್ನು ಕಡಿಮೆ ಮಾಡಲು ಇದು ಸಹಕಾರಿಯಾಗಿದೆ ಎಂದರು.

    ಪ್ರಸ್ತುತ ನಡೆಯುತ್ತಿರುವ ಕಾರ್ಯಕ್ರಮಗಳು ಎಲ್ಲವೂ ಸರಳತೆಯಿಂದ ನಡೆಯುತ್ತಿದೆ. ಈ ವರ್ಷ ಕೊರೊನಾ ಕಲಿಸಿದ ಎಲ್ಲಾ ಪಾಠಗಳಿಂದ ಆತ್ಮವಲೋಕನ ಮಾಡಿಕೊಂಡು ಮುನ್ನಡೆಯೋಣ. 2021ನೇ ವರ್ಷ ಎಲ್ಲರಿಗೂ ಶುಭವನ್ನು ತರಲಿ ಎಂದು ಹೊಸ ವರ್ಷದ ಶುಭ ಹಾರೈಸಿದರು.

  • ಯೋಗ, ಪ್ರಕೃತಿ ಚಿಕಿತ್ಸೆ ಅನಿವಾರ್ಯ: ಡಾ. ವೀರೇಂದ್ರ ಹೆಗ್ಗಡೆ

    ಯೋಗ, ಪ್ರಕೃತಿ ಚಿಕಿತ್ಸೆ ಅನಿವಾರ್ಯ: ಡಾ. ವೀರೇಂದ್ರ ಹೆಗ್ಗಡೆ

    ಉಡುಪಿ: ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಇಂದು ಅಗತ್ಯವಾಗಿದೆ. ನಿಸರ್ಗದ ಮಡಿಲಲ್ಲಿ ಆಸ್ಪತ್ರೆ ಇರುವುದರಿಂದ ಇಲ್ಲಿ ದೊರೆಯುವ ಚಿಕಿತ್ಸೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

    ಉಡುಪಿ ಜಿಲ್ಲೆಯ ಮೂಡುಗಿಳಿಯಾರಿನ ಯೋಗಬನದ ಪ್ರಕೃತಿ ಮಡಿಲಲ್ಲಿ ತಲೆ ಎತ್ತಿರುವ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಉದ್ಘಾಟಿಸಿದರು. ಬಳಿಕ ಡಿವೈನ್ ಪಾರ್ಕ್ ಟ್ರಸ್ಟ್‍ನ ಅಂಗ ಸಂಸ್ಥೆಯಾದ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನವನ್ನು ಉದ್ಘಾಟಿಸಿ ಡಾ. ವೀರೇಂದ್ರ ಹೆಗ್ಗಡೆಯವರು ಮಾತನಾಡಿದರು. ವಾಸ್ತುಶಿಲ್ಪ ಹಾಗೂ ಪ್ರಾಚೀನ ಶೈಲಿಯಿಂದಾಗಿ ಆಸ್ಪತ್ರೆ ಪ್ರಕೃತಿಗೆ ಹತ್ತಿರವಾಗಿದೆ. ಪರಿಸರಸ್ನೇಹಿ ವಸ್ತುಗಳನ್ನು ಬಳಕೆ ಮಾಡಿಕೊಂಡಿರುವುದು ಇದರ ಹೆಮ್ಮೆ ಎಂದರು.

    ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಇಲ್ಲಿಯ ಪರಿಸರದಲ್ಲಿ ಚಿಕಿತ್ಸೆ ಸಿಗುವುದು ನಮ್ಮ ಪುಣ್ಯ. ಆಧುನಿಕತೆಯಿಂದಾಗಿ ಯಾವಾಗಲೂ ಒತ್ತಡದಲ್ಲಿ ಕೆಲಸ ಮಾಡುವವರು ಇಲ್ಲಿ ಬಂದು ನೆಮ್ಮದಿ ಹುಡುಕಬಹುದು ಎಂದರು.

    ಯೋಗ ವಿಶ್ವವಿದ್ಯಾಲಯದ ಕುಲಪತಿಗಳಾದ ಎಚ್.ಆರ್.ನಾಗೇಂದ್ರ ಮಾತನಾಡಿ, ಯೋಗ, ಧ್ಯಾನ ಹಾಗೂ ಪ್ರಕೃತಿ ಚಿಕಿತ್ಸೆ ಸಿಗುವಂತಹ ಜಾಗದಲ್ಲಿ ವಿವೇಕಾನಂದರ ಪ್ರತಿಮೆ ಕಾಣಲು ಸಿಗಲಿದೆ. ಅವರು ನಡೆದ ಹಾದಿ ಇಲ್ಲಿ ನಮಗೆ ನೆನಪಾದರೆ ಅದಕ್ಕಿಂತ ಅರ್ಥಪೂರ್ಣವಾದ ಕೆಲಸ ಬೇರೆ ಇಲ್ಲ ಎಂದು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವೈನ್‍ಪಾರ್ಕ್ ಟ್ರಸ್ಟ್ ನ ಆಡಳಿತ ನಿರ್ದೇಶಕ ಉಡುಪ ಮಾತನಾಡಿ, ಶಾಂತಿ, ನೆಮ್ಮದಿ ಅರಸುವವರಿಗೆ ಇದು ಪ್ರಶಸ್ತ ಜಾಗ. ಪ್ರಕೃತಿ ಚಿಕಿತ್ಸೆ ಇಂದು ವಿಶ್ವದಾದ್ಯಂತ ಪಸರಿಸಿದೆ. ಇದಕ್ಕೆ ಕಾರಣ ನಮ್ಮ ಪ್ರಕೃತಿಯಲ್ಲಿಯೇ ಇರುವ ಔಷಧಿ ಗುಣ. ನಾವು ಇದನ್ನು ಬೆಳೆಸಿ ಉಳಿಸಬೇಕಿದೆ ಎಂದರು.

    “ರುದ್ರಿ” ಸಿನಿಮಾದ ನಾಯಕಿ ಹಾಗೂ ನಟಿ ಪಾವನಾ ಗೌಡ ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ಘಟನೆಗಳು ನಿತ್ಯ ನಡೆಯುತ್ತವೆ. ನಮ್ಮ ಸಿನಿಮಾ “ರುದ್ರಿ” ಕೂಡ ಇಂತದ್ದೇ ಒಂದು ಕಥೆಯನ್ನು ಒಳಗೊಂಡಿದೆ. ಪ್ರಕೃತಿ ನಮ್ಮ ಎಲ್ಲಾ ಪ್ರಶ್ನೆಗಳು ಉತ್ತರ ನೀಡಬಲ್ಲದು. ಹಾಗೇ ಇಲ್ಲಿ ಸಿಗುವ ಚಿಕಿತ್ಸೆ ಕೂಡ ಇಂದು ತೀರಾ ಅನಿವಾರ್ಯವಾಗಿದೆ’ ಎಂದರು. ಕಾರ್ಯಕ್ರಮದಲ್ಲಿ ಡಾ. ಚಂದ್ರಶೇಖರ್ ಉಡುಪ ಹಾಗೂ ವಿವೇಕ್ ಉಡುಪ ಇದ್ದರು.

  • ಧರ್ಮಸ್ಥಳ ಯೋಜನೆಯಡಿ ಅಭಿವೃದ್ಧಿಗೊಂಡ ಕೆರೆಗೆ ಬಾಗಿನ ಅರ್ಪಿಸಿದ ವೀರೇಂದ್ರ ಹೆಗ್ಗಡೆ

    ಧರ್ಮಸ್ಥಳ ಯೋಜನೆಯಡಿ ಅಭಿವೃದ್ಧಿಗೊಂಡ ಕೆರೆಗೆ ಬಾಗಿನ ಅರ್ಪಿಸಿದ ವೀರೇಂದ್ರ ಹೆಗ್ಗಡೆ

    ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಲಿಂಗನಮಠ ಗ್ರಾಮದ ಚನ್ನಬಸವೇಶ್ವರ ಸಮುದಾಯ ಭವನದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಗ್ರಾಮದ ಕೆರೆ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗ್ರಾಮದ ಕೆರೆ ಲೋಕಾರ್ಪಣೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ ಮತ್ತು ಸುಜ್ಞಾನ ನಿಧಿ ಶಿಷ್ಯವೇತನ ಕಾರ್ಯಕ್ರಮಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆ ಅವರು ಚಾಲನೆ ನೀಡಿದರು.

    ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರನ್ನು ಮತ್ತು ನಾಗರಿಕರನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಕೆಲ ವರ್ಷಗಳಲ್ಲಿ ಬರಗಾಲ ಬಂದ ಪ್ರದೇಶಗಳ ನಾಗರಿಕರು ಮಳೆಗಾಗಿ ಕಪ್ಪೆಗಳ ಮದುವೆ ಮಾಡಿದ್ದರು. ಕೆಲವೆಡೆ ಕತ್ತೆಗಳ ಮೆರವಣಿಗೆ ಮಾಡಿ ವರುಣನಕೃಪೆ ಬೇಡಿದ್ದರು. ಆದರೆ ಬೆಳೆಯುತ್ತಿರುವ ಜನಸಂಖ್ಯೆ ಅನುಗುಣವಾಗಿ ನೀರಿನ ಲಭ್ಯತೆಯ ಬಗ್ಗೆ ಯಾರೊಬ್ಬರೂ ತಲೆ ಕೆಡಿಸಿಕೊಳ್ಳಲಿಲ್ಲ. ಜಲಮೂಲಗಳನ್ನು ಸಂರಕ್ಷಿಸದೇ ಕುಡಿಯುವ ನೀರಿಗಾಗಿ ಸರ್ಕಾರವನ್ನು ಜನರು ದೂರುತ್ತಾರೆ. ಈ ಸಮಸ್ಯೆ ಅರಿತ ಧರ್ಮಸ್ಥಳ ಯೋಜನೆ ರಾಜ್ಯಾದ್ಯಂತ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಸರ್ಕಾರ, ಸ್ಥಳೀಯರು ಮತ್ತು ಯೋಜನೆಯ ಸಹಭಾಗಿತ್ವದಲ್ಲಿ ಕೆರೆಗಳನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಕೈಹಾಕಿ ಯಶಸ್ವಿಯಾಗಿದೆ. ಈ ಕಾರ್ಯಕ್ರಮದ ಮೂಲಕ ಜಲಮೂಲಗಳ ಸಂರಕ್ಷಣೆಯಿಂದ ಮಾತ್ರ ಜೀವಜಲ ಪಡೆಯಲು ಸಾಧ್ಯ ಎಂಬ ಸಂದೇಶವನ್ನು ಮನುಕುಲಕ್ಕೆ ನೀಡುವ ಉದ್ದೇಶವನ್ನು ಯೋಜನೆ ಹೊಂದಿದೆ ಎಂದು ಮಾಹಿತಿ ನೀಡಿದರು.

    ಹಿಂದಿನ ದಿನಗಳಲ್ಲಿ ಮನೆ ಕೆಲಸಗಳಿಗೆ ಮಾತ್ರ ಸೀಮಿತರಾಗಿದ್ದ ಗೃಹಿಣಿಯರಿಗೆ ಪ್ರಪಂಚ ಜ್ಞಾನ, ವ್ಯವಹಾರ ಜ್ಞಾನ, ಸ್ವಾವಲಂಬನೆ, ಉಳಿತಾಯ ಮನೋಭಾವ ಮತ್ತಿತರ ಜೀವನ ಪರಿವರ್ತನೆ ತರುವ ಸಂಗತಿಗಳನ್ನು ಒದಗಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಶೇಷ ಪ್ರಯತ್ನ ಕೈಗೊಂಡಿದೆ. ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರ ಸಬಲೀಕರಣದತ್ತ ಹೆಜ್ಜೆ ಹಾಕುವ ಪ್ರಯತ್ನ ನಡೆದಿದೆ ಎಂದರು.

    ಸಮಾವೇಶದಲ್ಲಿ ಸುಜ್ಞಾನ ನಿಧಿ ಶಿಷ್ಯವೇತನ ವಿತರಿಸಿ ಮಾತನಾಡಿದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್, ಧರ್ಮಸ್ಥಳ ಮಹಿಳಾ ಸ್ವ-ಸಹಾಯ ಸಂಘಗಳ ಮಾದರಿಯಲ್ಲಿ ತಾವೂ ಸಹ ಈ ಹಿಂದೆ ಅರಿಷಿನ-ಕುಂಕುಮ ಕಾರ್ಯಕ್ರಮ ಆಯೋಜಿಸುವ ಮೂಲಕ ತಾಲೂಕಿನ ಸಾವಿರಾರು ಮಹಿಳೆಯನ್ನು ಸಂಘಟಿಸಿ ಮಹಿಳಾ ಸಬಲೀಕರಣದತ್ತ ಪ್ರಯತ್ನ ನಡೆಸಿರುವುದಾಗಿ ಹೇಳಿದರು. ಬಳಿಕ ಅವರು ತಾಲೂಕಿನ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಯೋಜನೆಯ ವತಿಯಿಂದ ಮಂಜೂರಾದ ಅನುದಾನದ ಚೆಕ್ ವಿತರಿಸಿದರು.

    ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಚಿಕ್ಕಮುನವಳ್ಳಿ ಆರೂಢಮಠದ ಶಿವಪುತ್ರ ಶ್ರೀಗಳು ಆಶೀರ್ವಚನ ನೀಡಿದರು. ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ಬಿ ಹಿರೇಮಠ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಯೋಜನಾಧಿಕಾರಿಗಳಾದ ಪ್ರಭಾಕರ ನಾಯ್ಕ, ಮಂಜುನಾಥ ಹೆಗಡೆ, ಸುರೇಂದ್ರ ಆಚಾರ್ಯ, ಪ್ರಶಾಂತ ನಾಯ್ಕ, ಪುರುಷೋತ್ತಮ, ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಲ್ಲಿಕಾರ್ಜುನ ವಾಲಿ, ಒಕ್ಕೂಟದ ಅಧ್ಯಕ್ಷೆ ಅನ್ನಪೂರ್ಣ ಬಾಗೇವಾಡಿ, ಬಿಜೆಪಿ ಬ್ಲಾಕ್ ಅಧ್ಯಕ್ಷ ಸಂಜಯ ಕುಬಲ, ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೊಚೇರಿ, ರಾಜು ರಪಾಟಿ, ಅಪ್ಪಯ್ಯ ಕೋಡೊಳಿ, ವ್ಯವಸ್ಥಾಪಕ ಬಸವರಾಜ ಕುರಹಟ್ಟಿ, ಜೀವನದಾಸ್ ಕುಮಾರ, ಪ್ರವೀಣ ದೊಡಮನಿ ಸೇರಿದಂತೆ ಯೋಜನೆಯ ಅಧಿಕಾರಿಗಳು, ಸಿಬ್ಬಂದಿ, ಸೇವಾ ಪ್ರತಿನಿಧಿಗಳು, ಸ್ವ-ಸಹಾಯ ಸಂಘಗಳ ಒಕ್ಕೂಟ ಪದಾಧಿಕಾರಿಗಳು, ಸದಸ್ಯರು, ಲಿಂಗನಮಠ ಹಾಗೂ ಸುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

    ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಈಶಸ್ತವನ ಪಠಿಸಿದರು. ಜಿಲ್ಲಾ ನಿರ್ದೇಶಕ ಶೀನಪ್ಪ ಮೂಲ್ಯ ಸ್ವಾಗತಿಸಿದರು. ಸಂತೋಷ ನಾಯ್ಕ ನಿರೂಪಿಸಿದರು. ರಿಯಾಜ್ ಅತ್ತಾರ ವಂದಿಸಿದರು. ಯೋಜನೆಯ ಸ್ವ-ಸಹಾಯ ಸಂಘಗಳ ಸಾಧನಾ ಸಮಾವೇಶಕ್ಕೆ ಚಾಲನೆ ನೀಡಬೇಕಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ. ಬದಲಿಗೆ ತಮ್ಮ ಸಂದೇಶವನ್ನು ಆಪ್ತರ ಮೂಲಕ ಕಳಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಜೊತೆಗೆ ಆಹ್ವಾನ ಪತ್ರಿಕೆಯಲ್ಲಿ ನಮೂದಿಸಿದಂತೆ ಜಿ.ಪಂ. ಸದಸ್ಯೆ ಅಂಜನಾ ದೇಸಾಯಿ, ತಾ.ಪಂ. ಸದಸ್ಯೆ ಪೂಜಾ ಹರಿಜನ ಅವರೂ ಸಹ ಕಾರ್ಯಕ್ರಮದಿಂದ ದೂರ ಉಳಿದಿದ್ದರು.

  • ಉಡುಪಿಯಲ್ಲಿ ಪೇಜಾವರ ಶ್ರೀಗಳ ಸ್ಮಾರಕಕ್ಕೆ ಸಾರ್ವಜನಿಕರ ಒತ್ತಾಯ

    ಉಡುಪಿಯಲ್ಲಿ ಪೇಜಾವರ ಶ್ರೀಗಳ ಸ್ಮಾರಕಕ್ಕೆ ಸಾರ್ವಜನಿಕರ ಒತ್ತಾಯ

    ಉಡುಪಿ: ರಾಷ್ಟ್ರಸಂತ ಪೇಜಾವರ ಶ್ರೀಗಳು ಕೃಷ್ಣೈಕ್ಯರಾಗಿ ಎಂಟು ದಿನಗಳು ಕಳೆದಿದೆ. ಉಡುಪಿಯಲ್ಲಿ ಶ್ರೀಗಳ ನುಡಿನಮನ, ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯುತ್ತಿದೆ.

    ವಿಶ್ವೇಶತೀರ್ಥರೇ ಕಟ್ಟಿಸಿದ ಮಠದ ರಾಜಾಂಗಣದಲ್ಲಿ ಶ್ರೀಗಳಿಗೆ ಉಡುಪಿಯ ಜನತೆ, ಜನಪ್ರತಿನಿಧಿಗಳು, ಗಣ್ಯರ ಕಡೆಯಿಂದ ನುಡಿನಮನ ನಡೆದಿದೆ. ನುಡಿನಮನ ಕಾರ್ಯಕ್ರಮದಲ್ಲಿ ಉಡುಪಿಯಲ್ಲಿ ಪೇಜಾವರ ಶ್ರೀಗಳ ಸ್ಮಾರಕಕ್ಕೆ ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿದೆ.

    ಸಾರ್ವಜನಿಕರ ಒತ್ತಾಯಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಶ್ರೀಗಳನ್ನು ಮಹಾತ್ಮನಿಗೆ ಹೋಲಿಸಿದರು. ಪೇಜಾವರ ಶ್ರೀಗಳ ಜೀವನವೇ ಒಂದು ಪಾಠ. ಅವರ ಪ್ರವಚನ ಅನುಸರಿಸುವ ಅಗತ್ಯವಿಲ್ಲ. ಅವರ ಜೀವನ ಪದ್ಧತಿ ಮತ್ತು ಬದ್ಧತೆ ಅನುಕರಣೆ ಮಾಡಿದರೆ ಸಾಕು ಎಂದರು.

    ಪೇಜಾವರ ಶ್ರೀಗಳು ಜನಮಾನಸದಲ್ಲಿ ಉಳಿಯಬೇಕು. ಅಷ್ಟ ಮಠದ ಶ್ರೀಗಳು ಈ ಬಗ್ಗೆ ಚರ್ಚೆ ಮಾಡುತ್ತೇವೆ. ಸ್ಮಾರಕ ನಿರ್ಮಾಣ, ಅದರ ರೂಪುರೇಷೆ ಬಗ್ಗೆ ಚರ್ಚೆ ಮಾಡುತ್ತೇವೆ. ಪೇಜಾವರ ಶ್ರೀಗಳನ್ನು ಪಡೆದ ಉಡುಪಿ ಧನ್ಯ. ಅವರನ್ನು ಕಳೆದುಕೊಂಡು ಎಲ್ಲಾ ಕ್ಷೇತ್ರಗಳಿಗೆ ಅನಾಥ ಪ್ರಜ್ಞೆ ಕಾಡುತ್ತಿದೆ ಎಂದು ಪರ್ಯಾಯ ಪಲಿಮಾರು ವಿದ್ಯಾಧೀಶ ಸ್ವಾಮೀಜಿ ನುಡಿನಮನ ಅರ್ಪಿಸಿದರು.

    ಸಾವಿರಾರು ಜನ ವಿಶ್ವೇಶತೀರ್ಥ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಪೇಜಾವರ ಶ್ರೀಗಳ ಸ್ಮಾರಕ ಕೃಷ್ಣ ಮಠದಲ್ಲಿ ಸ್ಥಾಪನೆಯಾಗಬೇಕೋ, ಉಡುಪಿಯ ನಗರ ಪ್ರದೇಶದಲ್ಲಿ ಸ್ಥಾಪನೆ ಮಾಡಬೇಕೋ ಎಂಬ ಚರ್ಚೆ ಶುರುವಾಗಿದೆ. ಸ್ಮಾರಕ ನಿರ್ಮಾಣ ಮಾಡಬೇಕಾ ಅಥವಾ ಬೃಂದಾವನ ನಿರ್ಮಾಣ ಆಗಬೇಕಾ ಎಂಬ ಬಗ್ಗೆ ಕೂಡಾ ಚರ್ಚೆಗಳು ನಡೆಯುತ್ತಿವೆ.

  • ಪೇಜಾವರರನ್ನು ಭಗವಾನ್ ಕೃಷ್ಣನೇ ಕಾಪಾಡುತ್ತಾನೆ: ಡಾ. ವೀರೇಂದ್ರ ಹೆಗ್ಗಡೆ

    ಪೇಜಾವರರನ್ನು ಭಗವಾನ್ ಕೃಷ್ಣನೇ ಕಾಪಾಡುತ್ತಾನೆ: ಡಾ. ವೀರೇಂದ್ರ ಹೆಗ್ಗಡೆ

    ಉಡುಪಿ: ಪೂಜ್ಯ ಪೇಜಾವರ ಶ್ರೀಗಳು ಅನಾರೋಗ್ಯದಿಂದಿದ್ದಾರೆ. ಐಸಿಯುನಲ್ಲಿರೋದನ್ನು ನೋಡಿ ಬಂದಿದ್ದೇನೆ. ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

    ಉಡುಪಿಯಲ್ಲಿ ಮಾತನಾಡಿದ ಅವರು, ವಯೋಧರ್ಮ ಪ್ರಕಾರ ನಿಧಾನ ಸ್ಪಂದನೆ ಆಗ್ತಾಯಿದೆ. ಸ್ವಾಮೀಜಿಗಳಿಗೆ ಬೇರೆ ಯಾವುದೇ ಕಾಯಿಲೆ, ಅಡ್ಡ ರೋಗ ಇಲ್ಲ. ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಸ್ವಾಮೀಜಿಗಳಿಗೆ ಶೀಘ್ರ ಆರೋಗ್ಯ ವೃದ್ಧಿಯಾಗಲಿ. ಇಡೀ ದೇಶ ಅವರಿಗಾಗಿ ಪ್ರಾರ್ಥನೆ ಮಾಡುತ್ತಿದೆ. ಅವರು ಸದಾ ದೇವರ ಸಾನಿಧ್ಯದಲ್ಲೇ ಇದ್ದವರು. ದೇವರು ಅವರನ್ನು ಶೀಘ್ರ ಗುಣಮುಖ ಮಾಡುತ್ತಾರೆ. ಅಗತ್ಯ ಇಲ್ಲದ ಅಪಪ್ರಚಾರ ಬೇಡ. ಯಾರೂ ಮನಸ್ಸನ್ನು ವ್ಯಸ್ಥ ಮಾಡಿಕೊಳ್ಳಬೇಡಿ. ಕೆಟ್ಟ ಸಂದೇಶ ಬರಲ್ಲ, ಒಳ್ಳೆ ಸಂದೇಶ ಬರುತ್ತದೆಯೆಂದು ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

    ಆಸ್ಪತ್ರೆಗೆ ಆಗಮಿಸಿದ ಸಚಿವ ಈಶ್ವರಪ್ಪ:
    ಸಚಿವ ಕೆ.ಎಸ್.ಈಶ್ವರಪ್ಪ ಎರಡನೇ ಬಾರಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಪೇಜಾವರ ಶ್ರೀಗಳ ಆರೋಗ್ಯ ಸಾಕಷ್ಟು ಸುಧಾರಣೆ ಆಗಿದೆ. ನಿನ್ನೆಗಿಂತ ಇಂದು ಹೆಚ್ಚಿನ ಸುಧಾರಣೆಯಾಗಿದೆ. ವೈದ್ಯರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಖುದ್ದು ನಾನೇ ನೋಡಿದಾಗಲೂ ನನಗೂ ಹಾಗೇ ಅನಿಸಿದೆ. ಅಯೋಧ್ಯೆ ರಾಮಮಂದಿರ ಆಗುವವರೆಗೆ ನಾನಿರಬೇಕು ಎಂಬ ಆಸೆ ಅವರಿಗಿತ್ತು. ಅವರ ಆಸೆಯನ್ನು ಉಡುಪಿಯ ಶ್ರೀ ಕೃಷ್ಣ ನೆರವೇರಿಸುತ್ತಾನೆ ಎಂಬ ವಿಶ್ವಾಸವಿದೆ ಎಂದು ಈಶ್ವರಪ್ಪ ಹೇಳಿದರು. ಸೋಷಿಯಲ್ ಮೀಡಿಯಾದಲ್ಲಿ ವದಂತಿಗಳನ್ನು ಸೃಷ್ಠಿ ಮಾಡಲಾಗುತ್ತಿದೆ. ವದಂತಿಗಳಿಗೆ ಯಾರು ಕಿವಿಗೊಡಬೇಡಿ. ಶ್ರೀಗಳ ಆರೋಗ್ಯ ಸಾಕಷ್ಟು ಸುಧಾರಣೆ ಆಗ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈ ನಡುವೆ ಎರಡು ದಿನಗಳಿಂದ ಪೇಜಾವರ ಶ್ರೀಗಳ ಶಿಷ್ಯೆ ನೀರಾ ರಾಡಿಯಾ ಕೆಎಂಸಿಯಲ್ಲೇ ಇದ್ದಾರೆ. ಕಾರ್ಪೋರೇಟ್ ಜಗತ್ತಿನ ಪ್ರಭಾವಿ ಮಹಿಳೆ ಆಗಿರುವ ನೀರಾ ರಾಡಿಯಾ, ಶುಕ್ರವಾರ ರಾತ್ರಿ ಮತ್ತು ಶನಿವಾರ ಮುಂಜಾನೆಯಿಂದ ಆಸ್ಪತ್ರೆಯಲ್ಲಿದ್ದು, ತಜ್ಞ ವೈದ್ಯರ ಜೊತೆಗೆ ಕೆಎಂಸಿ ಗೆ ಬಂದು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನೀರಾ ರಾಡಿಯಾ ಮಾತನಾಡಿ, ಶ್ರೀಗಳ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಇದೆ. ನಿನ್ನೆಗಿಂತ ಇವತ್ತು ಮತ್ತಷ್ಟು ಚೇತರಿಸಿಕೊಂಡಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಅವರಿಗೆ ಉತ್ತಮ ಚಿಕಿತ್ಸೆ ದೊರಕುತ್ತಿದೆ ಎಂದು ಹೇಳಿದರು.