Tag: ಡಾ.ಸೂರಿ

  • ಹೊಂಬಾಳೆ ಫಿಲ್ಮಸ್ ಬಘೀರನಿಗೆ ಮೇ 20ಕ್ಕೆ ಮುಹೂರ್ತ – ಶ್ರೀಮುರುಳಿ ನಾಯಕ

    ಹೊಂಬಾಳೆ ಫಿಲ್ಮಸ್ ಬಘೀರನಿಗೆ ಮೇ 20ಕ್ಕೆ ಮುಹೂರ್ತ – ಶ್ರೀಮುರುಳಿ ನಾಯಕ

    ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್ ಅಡಿಯಲ್ಲಿ ಈಗಾಗಲೇ ಘೋಷಣೆ ಆಗಿರುವ ಶ್ರೀಮುರುಳಿ ನಟನೆಯ ʼಬಘೀರʼ ಚಿತ್ರಕ್ಕೆ ಮೇ 20ರಂದು ಸಿಂಪಲ್ ಆಗಿ ಮುಹೂರ್ತ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಯಶ್ ನಟನೆಯ ‘ಲಕ್ಕಿ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಡಾ.ಸೂರಿ, ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಪ್ರಶಾಂತ್ ನೀಲ್ ಅವರು ಕಥೆ ಬರೆದಿದ್ದಾರೆ. ಇದನ್ನೂ ಓದಿ : ಮನೆಗೆ ಕರೆಯಿಸಿಕೊಳ್ಳುವಂಥ ಅರ್ಹತೆ ಬಾಲಿವುಡ್ ನಲ್ಲಿ ಯಾರಿಗೂ ಇಲ್ಲ : ಕಂಗನಾ ರಣಾವತ್

    ಈಗಾಗಲೇ ಹೊಂಬಾಳೆ ಫಿಲ್ಮ್ಸ್ ಹಲವು ಚಿತ್ರಗಳನ್ನು ಘೋಷಣೆ ಮಾಡಿದೆ. ಸಂತೋಷ್ ಆನಂದ್ ರಾಮ್ ಜಗ್ಗೇಶ್‌ಗಾಗಿ ಒಂದು ಸಿನಿಮಾವನ್ನು ನಿರ್ದೇಶನ ಮಾಡಿದ್ದರೆ, ರಿಷಭ್ ಶೆಟ್ಟಿ ಕೂಡ ಮತ್ತೊಂದು ಚಿತ್ರಕ್ಕೆ ನಿರ್ದೇಶಕರಾಗಿದ್ದಾರೆ. ರಕ್ಷಿತ್ ಶೆಟ್ಟಿ ಕೂಡ ಒಂದು ಚಿತ್ರವನ್ನು ನಿರ್ದೇಶನ ಮಾಡಬೇಕಿದೆ. ಈ ಸಿನಿಮಾಗೂ ಮುನ್ನ ಬಘೀರ ಸಿನಿಮಾ ಸೆಟ್ಟೇರುತ್ತಿದೆ. ಇದನ್ನೂ ಓದಿ : ಕಾನ್ ಫೆಸ್ಟಿವಲ್‌ನಲ್ಲಿ ತಾರೆಯರ ದಂಡು

    ಇದು ಹೊಂಬಾಳೆ ಬ್ಯಾನರ್‌ನಲ್ಲಿ ಮೂಡಿ ಬರುತ್ತಿರುವ ಎಂಟನೇ ಸಿನಿಮಾ. ಇದು ಪಕ್ಕಾ ಮಾಸ್ ಸಿನಿಮಾವಾಗಿದ್ದು, ವಿಭಿನ್ನ ಶೀರ್ಷಿಕೆಯಿಂದಾಗಿಯೇ ಕುತೂಹಲ ಮೂಡಿಸಿದೆ. ಈ ಚಿತ್ರಕ್ಕೆ ಶ್ರೀಮುರುಳಿ ಕೂಡ ಸಖತ್ ತಯಾರಿ ಆಗಿದ್ದಾರಂತೆ. ಎಂದಿನಂತೆ ಪ್ರಶಾಂತ್ ನೀಲ್ ಆಶಯದಂತೆಯೇ ಈ ಸಿನಿಮಾ ಮೂಡಿ ಬರುತ್ತಿರುವುದು ಮತ್ತೊಂದು ವಿಶೇಷ. ಇದನ್ನೂ ಓದಿ : ಇಂಡಸ್ಟ್ರಿಯಲ್ಲಿ ನಟಿಯರು ಎದುರಿಸುವ ಸವಾಲು ಬಿಚ್ಚಿಟ್ಟ ರಮ್ಯಾ

    ಈಗಾಗಲೇ ಲಕ್ಕಿ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಡಾ.ಸೂರಿ, ನಾಲ್ಕು ವರ್ಷಗಳಿಂದ ಯಾವುದೇ ಚಿತ್ರ ಮಾಡಿರಲಿಲ್ಲ. ಬಘೀರ ಮೂಲಕ ಮತ್ತೆ ಕಮ್ ಬ್ಯಾಕ್ ಆಗುತ್ತಿದ್ದಾರೆ. ಈಗಾಗಲೇ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು, ಶ್ರೀಮುರುಳಿ ಹುಟ್ಟು ಹಬ್ಬದಂದು ವಿಶೇಷ ಪೋಸ್ಟರ್ ಮತ್ತು ಟೈಟಲ್ ರಿಲೀಸ್ ಮಾಡಲಾಗಿದೆ.

  • ಜಿಮ್ ಮಾಡುವ ವೇಳೆ ನಟ ಶ್ರೀಮುರಳಿಗೆ ಬೆನ್ನುನೋವು : ಫ್ಯಾನ್ಸ್ ಗಾಬರಿ ಪಡಬೇಡಿ ಎಂದ ರೋರಿಂಗ್ ಸ್ಟಾರ್

    ಜಿಮ್ ಮಾಡುವ ವೇಳೆ ನಟ ಶ್ರೀಮುರಳಿಗೆ ಬೆನ್ನುನೋವು : ಫ್ಯಾನ್ಸ್ ಗಾಬರಿ ಪಡಬೇಡಿ ಎಂದ ರೋರಿಂಗ್ ಸ್ಟಾರ್

    ಸ್ಯಾಂಡಲ್ ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಗೆ ಜಿಮ್ ಮಾಡುವ ವೇಳೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲೇಬೇಕು ಎಂದು ವೈದ್ಯರು ಸೂಚಿಸಿದ್ದಾರೆ. ಫ್ಯಾಮಿಲಿ ಡಾಕ್ಟರ್ ಸಲಹೆ ಮೇರೆಗೆ ಶ್ರೀಮುರಳಿ ಈಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

    ಪ್ರತಿನಿತ್ಯ ಜೀಮ್ ಮಾಡುವ ಸ್ಯಾಂಡಲ್ ವುಡ್ ಕಲಾವಿದರಲ್ಲಿ ಶ್ರೀಮುರಳಿ  ಕೂಡ ಒಬ್ಬರು. ನಿತ್ಯವೂ ಅವರು ಜಿಮ್ ನಲ್ಲಿ ಕಸರತ್ತು ಮಾಡುತ್ತಾರೆ. ಅದರಲ್ಲೂ ಹೊಂಬಾಳೆ ಪ್ರೊಡಕ್ಷನ್ ನಲ್ಲಿ ಮೂಡಿ ಬರುತ್ತಿರುವ ‘ಬಘೀರ’ ಚಿತ್ರಕ್ಕಾಗಿ ದೇಹ ದಂಡಿಸಲೇಬೇಕಿದೆ. ಈ ಸಿನಿಮಾದ ತಯಾರಿಗಾಗಿ ಜಿಮ್ ನಲ್ಲಿ ಮತ್ತಷ್ಟು ಹೊತ್ತು ಕಳೆಯುತ್ತಿದ್ದಾರೆ. ಈ ಸಂದರ್ಭದಲ್ಲೇ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ : RRR- ಸ್ಟಾರ್ ವಾರ್ ಬೆಂಕಿಗೆ ತಣ್ಣನೆಯ ನೀರು ಸುರಿದ ನಿರ್ದೇಶಕ ರಾಜಮೌಳಿ

    ನೆನ್ನೆಯಷ್ಟೇ ‘ನಟ ಭಯಂಕರ’ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶ್ರೀಮುರಳಿ ಬಂದಿದ್ದರೂ, ನಡೆದಾಡೋಕೆ ಕಷ್ಟ ಪಡುತ್ತಿದ್ದರು. ಆಗಲೇ ಅವರಿಗೆ ಬ್ಯಾಕ್ ಪೇನ್ ಆಗಿರುವ ವಿಚಾರ ಬೆಳಕಿಗೆ ಬಂತು. “ಜಿಮ್ ಮಾಡುವ ವೇಳೆ ಬೆನ್ನು ನೋವು ಕಾಣಿಸಿಕೊಂಡಿತು. ಅದಾದ ಎರಡು ದಿನಗಳ ಬಳಿಕವೂ ಬ್ಯಾಕ್ ಪೇನ್ ಕಡಿಮೆಯಾಗಿಲ್ಲ. ನೋವು ತೀವ್ರಗೊಂಡ ಹಿನ್ನೆಲೆಯಲ್ಲಿ ಕುಟುಂಬದ ವೈದ್ಯರನ್ನು ಸಂಪರ್ಕಿಸಿದೆ. ಓಡಾಡಲು ಸ್ವಲ್ಪ ತೊಂದರೆ ಆಗುತ್ತಿದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದೇನೆ. ಫ್ಯಾನ್ಸ್ ಗಾಬರಿ ಪಡುವ ಅಗತ್ಯವಿಲ್ಲ” ಎಂದರು ಶ್ರೀಮುರಳಿ. ಇದನ್ನೂ ಓದಿ : RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು

    ಶ್ರೀಮುರಳಿ ಅವರು, ಸದ್ಯ ಬಘೀರ ಸಿನಿಮಾ ತಯಾರಿಯಲ್ಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟೊತ್ತಿಗೆ ಬಘೀರ ಸಿನಿಮಾಗೆ ಚಾಲನೆ ಸಿಗಬೇಕಿತ್ತು. ಈಗ ನೋಡಿದರೆ ಶ್ರೀಮುರಳಿ ಅವರು ನೋವು ಮಾಡಿಕೊಂಡಿದ್ದಾರೆ. ಅವರು ವಿಶ್ರಾಂತಿ ಪಡೆದು,ಎಲ್ಲವೂ ಓಕೆ ಅಂದ ಬಳಿಕ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಬಘೀರ ತುಂಬಾ ನಿರೀಕ್ಷೆ ಹುಟ್ಟಿಸಿದೆ. ಕಾರಣ,ಹೊಂಬಾಳೆ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾ. ಡಾ.ಸೂರಿ ನಿರ್ದೇಶಿಸುತ್ತಿದ್ದಾರೆ.