Tag: ಡಿಂಪಲ್ ಯಾದವ್

  • 5 ರಾಜ್ಯಗಳ ಉಪ ಚುನಾವಣೆ – ಕಾಂಗ್ರೆಸ್‌, ಬಿಜೆಪಿಗೆ ತಲಾ 2 ಸೀಟ್‌

    5 ರಾಜ್ಯಗಳ ಉಪ ಚುನಾವಣೆ – ಕಾಂಗ್ರೆಸ್‌, ಬಿಜೆಪಿಗೆ ತಲಾ 2 ಸೀಟ್‌

    ನವದೆಹಲಿ: ಗುಜರಾತ್‌ (Gujarat Election) ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ (Himachal Pradesh Election) ಫಲಿತಾಂಶದ ಜೊತೆಗೆ 5 ರಾಜ್ಯಗಳ 6 ವಿಧಾನಸಭಾ ಕ್ಷೇತ್ರಗಳು ಮತ್ತು 1 ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಇದರಲ್ಲಿ ಬಿಜೆಪಿ (BJP) ಮತ್ತು ಕಾಂಗ್ರೆಸ್‌ (Congress) ತಲಾ 2 ಸ್ಥಾನಗಳಲ್ಲಿ ಮುಂದಿವೆ ಎಂದು ಚುನಾವಣಾ ಆಯೋಗ ಮಾಹಿತಿಯಲ್ಲಿ ತಿಳಿಸಿದೆ.

    ಉತ್ತರ ಪ್ರದೇಶ (Uttar Pradesh)
    ಉತ್ತರ ಪ್ರದೇಶದ ಖತೌಲಿಯಲ್ಲಿ ರಾಷ್ಟ್ರೀಯ ಲೋಕದಳದ ಅಭ್ಯರ್ಥಿ ಮದನ್‌ ಬೈಯ್ಯಾ ಅವರು ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ರಾಜಕುಮಾರಿ ಸೋಲನುಭವಿಸಿದ್ದಾರೆ. ಜೊತೆಗೆ ರಾಮಪುರದಲ್ಲಿ ಬಿಜೆಪಿಯ ಆಕಾಶ್‌ ಸಕ್ಸೇನಾ ಅವರು ಸಮಾಜವಾದಿ ಪಕ್ಷದ ಮೊಹಮದ್‌ ಅಸಿಮ್‌ ರಾಜಾ ವಿರುದ್ಧ ಜಯಗಳಿಸಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದ ಗೆಲುವಿಗೆ ಭಾರತ್ ಜೋಡೋ ಯಾತ್ರೆ ಸಹಾಯ ಮಾಡಿದೆ: ಖರ್ಗೆ

    ರಾಜಸ್ಥಾನ (Rajasthan)
    ಸರ್ದರ್ಶಹಾರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನಿಲ್‌ ಕುಮಾರ್‌ ಶರ್ಮಾ ಅವರು ಬಿಜೆಪಿಯ ಅಶೋಕ್‌ ಕುಮಾರ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ.

    ಬಿಹಾರ (Bihar)
    ಕುರ್ಹಾನಿಯಲ್ಲಿ ಬಿಜೆಪಿಯ ಕೇದಾರ್‌ ಪ್ರಸಾದ್‌ಗುಪ್ತ ಅವರು ಜೆಡಿಯುನ ಮನೋಜ್‌ ಸಿಂಗ್‌ ವಿರುದ್ಧ ಜಯಗಳಿಸಿದ್ದಾರೆ. ಇದನ್ನೂ ಓದಿ: Gujarat Election Result: ಜಿಗ್ನೇಶ್‌ ಮೇವಾನಿಗೆ ಜಯ

    ಒಡಿಶಾ (Odisha)
    ಪದಮ್‌ಪುರದಲ್ಲಿ ಬಿಜೆಡಿಯ ಬರ್ಷ ಸಿಂಗ್‌ ಬರಿಹಾ ಅವರು ಬಿಜೆಪಿಯ ಪ್ರದೀಪ್‌ ಪುರೋಹಿತ್‌ ವಿರುದ್ಧ ಗೆಲುವು ದಾಖಲಿಸಿದ್ದಾರೆ.

    ಛತ್ತೀಸಗಢ (Chattisgarh)
    ಭಾನುಪ್ರತಾಪಪುರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಸಾವಿತ್ರಿ ಮನೋಜ್‌ ಮಾಂಡವೀಯ ಅವರು ಪ್ರತಿಸ್ಪರ್ಧಿ ಬಿಜೆಪಿಯ ಭ್ರಹ್ಮಾನಂದ ನೇತಾಮ್‌ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೇರಿದ್ದ ಪಟೀದಾರ್ ಚಳುವಳಿಯ ನಾಯಕ ಹಾರ್ದಿಕ್ ಪಟೇಲ್‍ಗೆ ಗೆಲುವು

    ಉತ್ತರ ಪ್ರದೇಶ (ಲೋಕಸಭಾ ಕ್ಷೇತ್ರ)
    ಮುಲಾಯಂ ಸಿಂಗ್‌ ಅವರ ನಿಧನದಿಂದ ತೆರವಾಗಿದ್ದ ಮೈನ್‌ಪುರಿ ಲೋಕಸಭಾ ಕ್ಷೇತ್ರದಲ್ಲಿ ಅಖಿಲೇಶ್‌ ಯಾದವ್‌ (Akhilesh Yadav) ಅವರ ಪತ್ನಿ ಡಿಂಪಲ್‌ (Dimple Yadav) 2,88,461 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ ಡಿಂಪಲ್‌ 6,18,120 ಮತ ಗಳಿಸಿದ್ದರೆ, ಸಮೀಪ ಸ್ಪರ್ಧಿ ಬಿಜೆಪಿಯ ರಘುರಾಜ್ ಸಿಂಗ್ ಶಾಕ್ಯಾ 3,29,659 ಮತ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚುನಾವಣೆ ಗೆಲ್ಲಲು BJP ಹಣ, ಹೆಂಡದ ಹೊಳೆ ಹರಿಸುತ್ತಿದೆ- ಡಿಂಪಲ್ ಯಾದವ್ ಕಿಡಿ

    ಚುನಾವಣೆ ಗೆಲ್ಲಲು BJP ಹಣ, ಹೆಂಡದ ಹೊಳೆ ಹರಿಸುತ್ತಿದೆ- ಡಿಂಪಲ್ ಯಾದವ್ ಕಿಡಿ

    ಲಕ್ನೋ/ಗಾಂಧಿನಗರ: ಬಿಜೆಪಿ (BJP) ಚುನಾವಣೆ ಗೆಲ್ಲಲು ಗಣ, ಹೆಂಡದ ಹೊಳೆ ಹರಿಸುತ್ತಿದೆ ಎಂದು ಲೋಕಸಭಾ ಚುನಾವಣಾ ಆಕಾಂಕ್ಷಿ ಹಾಗೂ ಸಮಾಜವಾದಿ ಪಕ್ಷದ (Samajwadi Party) ನಾಯಕಿ ಡಿಂಪಲ್ ಯಾದವ್ (Dimple Yadav) ಎಂದು ಆರೋಪಿಸಿದ್ದಾರೆ.

    ನೂರಾರು ಬಿಜೆಪಿ (BJP) ಮುಖಂಡರು ಕಾರ್ಯಕರ್ತರು ಹೋಟೆಲ್‌ನಲ್ಲಿ ಜಮಾಯಿಸಿದ್ದಾರೆ. ಮತದಾರರಿಗೆ ನಿರಂತರವಾಗಿ ಹಣ, ಹೆಂಡದ ಹೊಳೆ ಹರಿಸುತ್ತಿದ್ದಾರೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪ್ರಾಂಶುಪಾಲರಿಗೆ ಜೈಶ್ರೀರಾಮ್ ಎಂದು ಘೋಷಣೆ ಕೂಗಲು ಒತ್ತಾಯಿಸಿದ ABVP ಕಾರ್ಯಕರ್ತರು

    ಈ ಬಗ್ಗೆ ಚುನಾವಣಾ ಆಯೋಗಕ್ಕೂ ಈ ಬಗ್ಗೆ ದೂರು ನೀಡಲಾಗುವುದು. ಅಲ್ಲದೇ ಮತದಾನ ಪ್ರಾರಂಭವಾಗುವ 24 ಗಂಟೆಗಳ ಮೊದಲು ಸಮಾಜವಾದಿ ಪಕ್ಷದ ಶಾಸಕರು ಬಿಜೆಪಿಯ ಅಕ್ರಮ ಚಟುವಟಿಕೆಯ ವಿರುದ್ಧ ಧರಣಿ ಕೂರಲಿದ್ದರೆ ಎಂದು ಎಚ್ಚರಿಸಿದ್ದಾರೆ.

    ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ಮೈನ್‌ಪುರಿ ಉಪಚುನಾವಣೆ ಅಗತ್ಯವಾಗಿದ್ದು, ಉತ್ತರಪ್ರದೇಶದ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದನ್ನೂ ಓದಿ: ಗ್ಯಾಂಗ್ ರೇಪ್ – ಮಹಿಳೆಯ ಖಾಸಗಿ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು ವಿಕೃತಿ

    ಉತ್ತರ ಪ್ರದೇಶದಲ್ಲಿ, ರಾಮ್‌ಪುರ್ ಸದರ್ ಮತ್ತು ಖತೌಲಿ ವಿಧಾನಸಭಾ ಕ್ಷೇತ್ರಗಳು ಮತ್ತು ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.

    ಗುಜರಾತ್‌ನಲ್ಲಿಂದು ಮತದಾನ ಅಂತ್ಯ:
    ಗುಜರಾತ್ ವಿಧಾನಸಭೆ ಚುನಾವಣೆಯ (Gujarat Election) 2ನೇ ಮತ್ತು ಕೊನೆಯ ಹಂತದ ಮತದಾನ ನಡೆಯುತ್ತಿದೆ. 93 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಡಳಿತ ವಿರೋಧಿ ಅಲೆ ಮೀರಿ ಐತಿಹಾಸಿಕ ಗೆಲವು ಸಾಧಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೇ, ಕಾಂಗ್ರೆಸ್ ಕೂಡಾ ಹೋರಾಟ ತೀವ್ರಗೊಳಿಸಿದೆ. ಇತ್ತ ಆಪ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದು ಖಾತೆ ತೆರೆಯುವ ಲೆಕ್ಕಚಾರದಲ್ಲಿದೆ.

    2ನೇ ಹಂತದಲ್ಲಿ ಮತದಾನ ನಡೆಯುವ ಕ್ಷೇತ್ರಗಳಲ್ಲಿ 61 ರಾಜಕೀಯ ಪಕ್ಷಗಳ 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು ಎರಡು ಕೋಟಿ 51 ಲಕ್ಷದ 58 ಸಾವಿರದ 730 ಮತದಾರರು ಮತದಾನಕ್ಕೆ ಅರ್ಹವಾಗಿದ್ದಾರೆ. ಇದರಲ್ಲಿ ಒಂದು ಕೋಟಿ 29 ಲಕ್ಷದ 26 ಸಾವಿರದ 501 ಪುರುಷ ಹಾಗೂ ಒಂದು ಕೋಟಿ 22 ಲಕ್ಷದ 31 ಸಾವಿರದ 335 ಮಹಿಳಾ ಮತದಾರರಿದ್ದಾರೆ. ಮತದಾನಕ್ಕಾಗಿ 26,409 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಂದು ಲಕ್ಷದ 13 ಸಾವಿರದ 325 ಮತಗಟ್ಟೆ ಸಿಬ್ಬಂದಿ ಬೂತ್ ಗಳಲ್ಲಿ ಸಿದ್ಧತೆ ನಡೆಸಿದ್ದಾರೆ.

    ಮೋದಿಯಿಂದ (Narendra Modi) ಮತ ಚಲಾವಣೆ:
    2ನೇ ಹಂತದಲ್ಲಿ ಬನಸ್ಕಾಂತ, ಪಟಾನ್, ಮೆಹ್ಸಾನಾ, ಸಬರ್ಕಾಂತ, ಅರಾವಳಿ, ಗಾಂಧಿನಗರ, ಅಹಮದಾಬಾದ್, ಆನಂದ್, ಖೇಡಾ, ಮಹಿಸಾಗರ್, ಪಂಚ ಮಹಲ್, ದಾಹೋದ್, ವಡೋದರಾ ಮತ್ತು ಛೋಟಾ ಉದಯಪುರ ಸೇರಿ 14 ಜಿಲ್ಲೆಗಳಲ್ಲಿ 2ನೇ ಹಂತದ ಮತದಾನ ನಡೆಯಲಿದೆ. ಮಧ್ಯ ಮತ್ತು ಉತ್ತರ ಗುಜರಾತ್‌ನ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಪ್ರಮುಖರು ಇಂದು ಮತದಾನ ಮಾಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾವ ಮುಲಾಯಂ ಸಿಂಗ್ ನಿಧನ ನಂತ್ರ ಮೈನ್‍ಪುರಿಯಿಂದ ಡಿಂಪಲ್ ಯಾದವ್ ಕಣಕ್ಕೆ

    ಮಾವ ಮುಲಾಯಂ ಸಿಂಗ್ ನಿಧನ ನಂತ್ರ ಮೈನ್‍ಪುರಿಯಿಂದ ಡಿಂಪಲ್ ಯಾದವ್ ಕಣಕ್ಕೆ

    ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರ ಪತ್ನಿ ಡಿಂಪಲ್ ಯಾದವ್ (Dimple Yadav) ತಮ್ಮ ಮಾವ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರ ನಿಧನದ ನಂತರ ತೆರವಾದ ಮೈನ್‍ಪುರಿ (Mainpuri) ಲೋಕಸಭಾ (Lok Sabha) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

    ಡಿಸೆಂಬರ್ 5 ರಂದು ಹಲವು ರಾಜ್ಯಗಳಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಜೊತೆಗ ಸಂಸದೀಯ ಸ್ಥಾನಕ್ಕೆ ಸ್ಪರ್ಧೆ ನಡೆಯಲಿದೆ. ಡಿಸೆಂಬರ್ 8 ರಂದು ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಫಲಿತಾಂಶದ ಜೊತೆಗೆ ಈ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಮಾಲ್ಡೀವ್ಸ್‌ನಲ್ಲಿ ಭೀಕರ ಅಗ್ನಿ ದುರಂತ – 9 ಮಂದಿ ಭಾರತೀಯರು ಸಾವು

    ಎರಡು ಬಾರಿ ಲೋಕಸಭಾ ಸದಸ್ಯರಾಗಿ ಕನೌಜ್‍ನಿಂದ ಡಿಂಪಲ್ ಯಾದವ್ ಸ್ಪರ್ಧಿಸಿದ್ದರು. ಆದರೆ 2019ರಲ್ಲಿ ಸೋತಿದ್ದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಯಾದವ್ ಅವರು ಕಳೆದ ತಿಂಗಳು ನಿಧನರಾದರು. ಆದರೆ 2019ರಲ್ಲಿ ಮಣಿಪುರಿ ಕ್ಷೇತ್ರವನ್ನು ಕೇವಲ 94,000 ಮತಗಳ ಅಂತರದಿಂದ ಮುಲಾಯಂ ಸಿಂಗ್ ಯಾದವ್ ಅವರು ಗೆದ್ದಿದ್ದರು.

    ಮೈನ್‍ಪುರಿ ಯಾವಾಗಲೂ ಸಮಾಜವಾದಿ ಪಕ್ಷದ ಭದ್ರಕೋಟೆಯಾಗಿದ್ದು, ಇಲ್ಲಿಂದ 1996ರಲ್ಲಿ ಮುಲಾಯಂ ಸಿಂಗ್ ಅವರು ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರು. ಅವರು 2004, 2009 ಮತ್ತು 2019 ಮೂರು ಬಾರಿ ಸ್ಪರ್ಧಿಸಿ ಯಶಸ್ವಿಯಾಗಿ ಜಯ ಸಾಧಿಸಿದ್ದರು. 2014ರ ಉಪಚುನಾವಣೆಯಲ್ಲಿ ತೇಜ್ ಪ್ರತಾಪ್ ಯಾದವ್ ಈ ಕ್ಷೇತ್ರದಿಂದ ಗೆದಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ- ವಿವಾದಿತ ವಸ್ತುವಿನ ರಕ್ಷಣೆ ವಿಸ್ತರಣೆಗೆ ಮನವಿ

    Live Tv
    [brid partner=56869869 player=32851 video=960834 autoplay=true]

  • ಅಖಿಲೇಶ್ ಯಾದವ್‍ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್

    ಅಖಿಲೇಶ್ ಯಾದವ್‍ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್

    ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಹಾಗೂ ಪುತ್ರಿಗೆ ಕೊರೊನಾ ವೈರಸ್ ದೃಢಪಟ್ಟಿದೆ.

    ಬುಧವಾರ ನಡೆಸಿದ ಕೋವಿಡ್-19 ಪರೀಕ್ಷೆಯಲ್ಲಿ ಅಖಿಲೇಶ್ ಯಾದವ್ ಅವರಿಗೆ ನೆಗೆಟಿವ್ ವರದಿ ಬಂದಿದೆ. ಅವರ ಪತ್ನಿ, ಮಾಜಿ ಸಂಸದೆ ಡಿಂಪಲ್ ಯಾದವ್ ಮತ್ತು ಮಗಳಿಗೆ ಕೊರೊನಾ ದೃಢಪಟ್ಟಿದೆ. ಇದನ್ನೂ ಓದಿ: ಇನ್ಮುಂದೆ 21 ವಯಸ್ಸಿನವರೂ ʻಎಣ್ಣೆʼ ಹೊಡಿಯಬಹುದು – ಹರಿಯಾಣ

    ಈ ಕುರಿತಂತೆ ಡಿಂಪಲ್ ಯಾದವ್ ತಮ್ಮ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ. ನನಗೆ ಕೋವಿಡ್-19 ದೃಢಪಟ್ಟಿದೆ. ನಾನು ಕೋವಿಡ್‌ ಲಸಿಕೆಯ ಎರಡೂ ಡೋಸ್‌ ಪಡೆದುಕೊಂಡಿದ್ದೇನೆ. ನನಗೆ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಇದೀಗ ನಾನು ಕ್ವಾರಂಟೈನ್‍ನಲ್ಲಿದ್ದು, ಇತ್ತೀಚೆಗಷ್ಟೇ ನನ್ನನ್ನು ಭೇಟಿಯಾದ ಎಲ್ಲರೂ ಶೀಘ್ರದಲ್ಲಿಯೇ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸಿದ್ದಾರೆ.

    ಡಿಂಪಲ್ ಯಾದವ್ ಮತ್ತು ಅವರ ಮಗಳಿಗೆ ಕೊರೊನಾ ದೃಢಪಟ್ಟಿರುವುದರಿಂದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕುರಿತಂತೆ ಪ್ರಚಾರ ನಡೆಸಲು ಅಖಿಲೇಶ್ ಯಾದವ್ ಅವರಿಗೆ ಅಡ್ಡಿಯುಂಟಾಗಬಹುದು. ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ರಿಲಯನ್ಸ್‌, ಪತಂಜಲಿ, ಟಾಟಾ, ಇನ್ಫೋಸಿಸ್‌ ಸೇರಿ 11 ಖಾಸಗಿ ಸಂಸ್ಥೆಗಳಿಗೆ ಸಿಐಎಸ್‌ಎಫ್‌ ಭದ್ರತೆ