Tag: ಡಿಎಂಆರ್ ಸಿ

  • ಮೆಟ್ರೋದಲ್ಲಿ ತೊಂದರೆ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು

    ಮೆಟ್ರೋದಲ್ಲಿ ತೊಂದರೆ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು

    ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

    ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

    ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್‍ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

  • ಮೆಟ್ರೋ ರೈಲು ಬರ್ತಿದ್ದಂತೆ ಟ್ರ್ಯಾಕ್ ಮೇಲೆ ಜಿಗಿದ!

    ಮೆಟ್ರೋ ರೈಲು ಬರ್ತಿದ್ದಂತೆ ಟ್ರ್ಯಾಕ್ ಮೇಲೆ ಜಿಗಿದ!

    ನವದೆಹಲಿ: ವ್ಯಕ್ತಿಯೋರ್ವ ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಟ್ರ್ಯಾಕ್ ಮೇಲೆ ಜಿಗಿದಿದ್ದಾನೆ. ಇಂದು ಬೆಳಗ್ಗೆ ಗಾಜಿಯಾಬಾದ್ ಜಿಲ್ಲೆಯ ಕೌಶಂಬಿ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ವ್ಯಕ್ತಿ ಟ್ರ್ಯಾಕ್ ಮೇಲೆ ಜಿಗಿಯುತ್ತಿದ್ದಂತೆ ರೈಲನ್ನು ತಕ್ಷಣವೇ ನಿಲ್ಲಿಸಲಾಗಿತ್ತು. ಈ ವೇಳೆ ವ್ಯಕ್ತಿ ಮಹಿಳಾ ಬೋಗಿ ಮತ್ತು ಹಿಂದಿನ ಬೋಗಿಯ ಮಧ್ಯೆ ಸಿಲುಕಿಕೊಂಡಿದ್ದನು. ಕೂಡಲೇ ಮೆಟ್ರೋ ನಿಲ್ದಾಣದ ಸಿಬ್ಬಂದಿ ಆತನನ್ನು ಮೇಲೆಕ್ಕೆತ್ತಿದ್ದಾರೆ. ಬೆಳಗ್ಗೆ ಆಫೀಸ್ ಸಮಯವಾಗಿದ್ದರಿಂದ ಮೆಟ್ರೋ ನಿಲ್ದಾಣ ಪ್ರಯಾಣಿಕರಿಂದ ತುಂಬಿತ್ತು. ಈ ವೇಳೆ ವ್ಯಕ್ತಿ ಪ್ಲಾಟ್ ಫಾರಂನಿಂದ ಟ್ರ್ಯಾಕ್ ಮೇಲೆ ಜಿಗಿದಿದ್ದಾನೆ. ಸದ್ಯ ವ್ಯಕ್ತಿಯನ್ನು ಡಿಎಂಆರ್ ಸಿ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದು, ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

    ಈ ಅವಘಡದಿಂದ ಮೆಟ್ರೋ ರೈಲು 7 ನಿಮಿಷ ನಿಲ್ದಾಣದಲ್ಲಿ ನಿಂತಿದ್ದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಸಂಬಂಧ ಟ್ವೀಟ್ ಮಾಡಿದ ಡಿಎಂಆರ್ ಸಿ, ನೀಲಿ ಮಾರ್ಗದ ಕೌಶಂಬಿ ಟ್ರ್ಯಾಕ್ ಮೇಲೆ ವ್ಯಕ್ತಿ ಜಿಗಿದಿದ್ದರಿಂದ ಯುಮನಾ ಬ್ಯಾಂಕ್ ಮತ್ತು ವೈಶಾಲಿ ನಿಲ್ದಾಣದಲ್ಲಿ ಸೇವೆಯ ವಿಳಂಬವಾಗಲಿದೆ ಎಂದು ಪ್ರಯಾಣಿಕರಿಗೆ ತಿಳಿಸಿದೆ.

    ಕೆಲ ಪ್ರಯಾಣಿಕರ ಪ್ರಕಾರ ವ್ಯಕ್ತಿ ರೈಲು ಹತ್ತಲು ನಿಂತಿದ್ದ. ಕಾಲು ಜಾರಿದ್ದರಿಂದ ಆತ ಟ್ರ್ಯಾಕ್ ಮೇಲೆ ಬಿದ್ದ ಎಂದು ಹೇಳಿದ್ದಾರೆ. ಈ ಸಂಬಂಧ ಅಧಿಕಾರಿಗಳು ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.