Tag: ಡಿಎಂಕೆ

  • ತಪ್ಪಾಗಿ ಹೆಸರು ಸೇರ್ಪಡೆ; ಡಿಎಂಕೆ ಸಂಸದನ ಅಮಾನತು ಹಿಂಪಡೆದ ಕೇಂದ್ರ

    ತಪ್ಪಾಗಿ ಹೆಸರು ಸೇರ್ಪಡೆ; ಡಿಎಂಕೆ ಸಂಸದನ ಅಮಾನತು ಹಿಂಪಡೆದ ಕೇಂದ್ರ

    ನವದೆಹಲಿ: ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅಮಾನತುಗೊಂಡಿದ್ದ ಡಿಎಂಕೆ ಸಂಸದ ಎಸ್‌.ಆರ್‌.ಪಾರ್ಥಿಬನ್‌ (SR Parthiban) ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

    ಸಂಸತ್‌ನಲ್ಲಿ ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಡಿಎಂಕೆ (DMK) ಸಂಸದ ಎಸ್‌.ಆರ್‌.ಪಾರ್ಥಿಬನ್‌ ಅವರನ್ನು ಗುರುವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿತ್ತು. ಒಟ್ಟು 14 ಮಂದಿ ಸಂಸದರು ಅಮಾನತುಗೊಂಡಿದ್ದರು. ಆದರೆ ಪಾರ್ಥಿಬನ್‌ ಅವರು ಇಂದು ಸದನಕ್ಕೆ ಗೈರಾಗಿದ್ದರು. ಗದ್ದಲ ಉಂಟಾದಾಗ ಅವರು ದೆಹಲಿಯಲ್ಲೂ ಇರಲಿಲ್ಲ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಅಶಿಸ್ತಿನ ವರ್ತನೆ – ಲೋಕಸಭೆಯ 14 ಸಂಸದರು ಸಸ್ಪೆಂಡ್‌

    ಕೆಲವು ಗಂಟೆಗಳ ನಂತರ ಅವರ ಹೆಸರನ್ನು ತಪ್ಪಾಗಿ ಸೇರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಗೊಂದಲವನ್ನು ನಿವಾರಿಸಲಾಗಿದೆ. ಅಲ್ಲದೇ ಅವರ ಅಮಾನತು ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ.

    ಈ ಕುರಿತು ಸ್ಪಷ್ಟಪಡಿಸಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಡಿಎಂಕೆ ಸಂಸದರ ಹೆಸರು ತಪ್ಪಾಗಿ ಸೇರ್ಪಡೆಗೊಂಡಿದೆ. ಅಮಾನತುಗೊಂಡ ಸಂಸದರ ಪಟ್ಟಿಯಿಂದ ಅವರ ಹೆಸರನ್ನು ಹಿಂಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್ ಬಾಂಬ್- ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು

    ತಪ್ಪಾದ ಗುರುತಿಸಿರುವ ಪ್ರಕರಣವಾಗಿರುವುದರಿಂದ ಸದಸ್ಯರ ಹೆಸರನ್ನು ಕೈಬಿಡುವಂತೆ ನಾನು ಸ್ಪೀಕರ್‌ಗೆ ಮನವಿ ಮಾಡಿದ್ದೇನೆ. ಸಲಹೆಗೆ ಸ್ಪೀಕರ್ ಒಪ್ಪಿಗೆ ನೀಡಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.

  • ಅಕ್ರಮ ಹಣ ವರ್ಗಾವಣೆ ಕೇಸ್‌ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ

    ಅಕ್ರಮ ಹಣ ವರ್ಗಾವಣೆ ಕೇಸ್‌ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ

    ನವದೆಹಲಿ: ಉದ್ಯೋಗಕ್ಕಾಗಿ ನಗದು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ED) ಬಂಧನೊಳಕ್ಕಾಗಿದ್ದ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ಸೆಂಥಿಲ್ ಬಾಲಾಜಿ (Senthil Balaji) ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ‌.

    ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಹಾಗೂ ಸತೀಶ್‌ ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಜಾಮೀನು ನಿರಾಕರಿಸಿದೆ. ಬಾಲಾಜಿ ಅವರು ವೈದ್ಯಕೀಯ ಜಾಮೀನಿನ (Medical Bail) ಮೇಲೆ ಬಿಡುಗಡೆಯಾಗಲು ಅರ್ಹವಾದಷ್ಟು ಗಂಭೀರವಾದ ಆರೋಗ್ಯ ಸ್ಥಿತಿ ಕಾಣುತ್ತಿಲ್ಲ ಎಂದು ಹೇಳಿ, ಕೆಳ ಹಂತದ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸಲು ನಿರ್ದೇಶಿಸಿದೆ‌.

    ಅನಾರೋಗ್ಯ, ವೈದ್ಯಕೀಯ ಕಾರಣಗಳನ್ನು ನೀಡಿದ್ದ ಸೆಂಥಿಲ್ ಬಾಲಾಜಿ ಜಾಮೀನು ನೀಡುವಂತೆ ಈ‌ ಮೊದಲು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಕೆಗೆ ನೀಡಿದ್ದ ಗಡುವು ಅಂತ್ಯ – ಕೋರ್ಟ್‌ಗೆ ವರದಿ?

    ವಿಚಾರಣೆ ವೇಳೆ ಸೆಂಥಿಲ್ ಬಾಲಾಜಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹ್ಟಗಿ, ಆರೋಪಿ ದೀರ್ಘಕಾಲದ ಲ್ಯಾಕುನಾರ್ ಇನ್ಫೆಕ್ಷನ್‌ನಿಂದ ಬಳಲುತ್ತಿದ್ದಾರೆ ವೈದ್ಯಕೀಯ ನೆರವು ಆಧಾರದ ಮೇಲೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು. ಆದ್ರೆ ವಿಚಾರಣೆ ನಡೆಸಿದ ನ್ಯಾಯಪೀಠವು ಈ ಬಗ್ಗೆ ಗೂಗಲ್‌ನಲ್ಲಿ ಪರಿಶೀಲಿಸಲಾಗಿದೆ. ಇದು ಔಷಧಿಗಳ ಮೂಲಕ ಗುಣಪಡಿಸಬಹುದಾದ ಖಾಯಿಲೆ, ಜಾಮೀನು ನೀಡುವಂತ ಸಮಸ್ಯೆಯಲ್ಲ, ಅಂತಹ ಗಂಭೀರವಾದ ಸಮಸ್ಯೆಯಾಗಿದ್ದರೇ ನಾವು ಪರಿಗಣಿಸುತ್ತೇವೆ ಎಂದು ಹೇಳಿದೆ.

    ಮುಕುಲ್ ರೊಹ್ಟಗಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಕೀಲರು ಪ್ರಸ್ತಾಪಿಸಿದ ವೈದ್ಯಕೀಯ ಜಾಮೀನು ನಿಬಂಧನೆಯ ವ್ಯಾಖ್ಯಾನವನ್ನು ನಾವು ಅನುಸರಿಸಿದರೆ 70% ರಷ್ಟು ಕೈದಿಗಳು ಅನಾರೋಗ್ಯಕ್ಕೀಡಾಗುತ್ತಾರೆ. ಇಂತಹ ಕಾರಣಗಳನ್ನು ಕೋರ್ಟ್ ಪರಿಗಣಿಸಬಾರದು ಎಂದು ಮನವಿ ಮಾಡಿದರು.

    ನಂತರ ನ್ಯಾಯಪೀಠವು, ನೀವು ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಬೇಕು. ವೈದ್ಯಕೀಯ ಜಾಮೀನಿಗೆ ಆಧಾರವಾಗಿ ನಿಮ್ಮ ಅನಾರೋಗ್ಯದಿಂದ ನಮಗೆ ತೃಪ್ತಿ ಇಲ್ಲ ಎಂದು ಹೇಳಿತು. ಅಂತಿಮವಾಗಿ, ಜಾಮೀನು ಅರ್ಜಿಯನ್ನು ಹಿಂಪಡೆಯಲು ಮುಕುಲ್ ರೊಹ್ಟಗಿ ಒಪ್ಪಿಕೊಂಡರು. ಇದನ್ನೂ ಓದಿ: ಒಟ್ಟಿಗೆ ಸುತ್ತಾಡುತ್ತಿದ್ದ ಅನ್ಯಕೋಮಿನ ಯುವಕ-ಯುವತಿ ಮೇಲೆ ನೈತಿಕ ಪೊಲೀಸ್‌ಗಿರಿ; ಮಂಗಳೂರಲ್ಲಿ ಇಬ್ಬರ ಬಂಧನ

    ಕಳೆದ ಜೂನ್‌ ತಿಂಗಳಲ್ಲಿ, ಡಿಎಂಕೆ ನಾಯಕ ವಿ ಸೆಂಥಿಲ್ ಬಾಲಾಜಿ ಮತ್ತು ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರದ ಕ್ಯಾಬಿನೆಟ್ ಸಚಿವರನ್ನು ಜಾರಿ ನಿರ್ದೇಶನಾಲಯವು ರಾಜ್ಯದಲ್ಲಿ ಉದ್ಯೋಗಕ್ಕಾಗಿ ನಗದು ಹಗರಣದಲ್ಲಿ ಅವರ ಪಾತ್ರಕ್ಕಾಗಿ ಬಂಧಿಸಿತ್ತು. ಇದನ್ನೂ ಓದಿ: ಮಹಾತ್ಮ ಗಾಂಧಿ ‘ಮಹಾಪುರುಷ’, ಪ್ರಧಾನಿ ಮೋದಿ ‘ಯುಗಪುರುಷ’: ಉಪ ರಾಷ್ಟ್ರಪತಿ ಬಣ್ಣನೆ

  • ಸನಾತನ ಧರ್ಮವನ್ನು ಕೊನೆವರೆಗೂ ವಿರೋಧಿಸುತ್ತೇನೆ: ಉದಯನಿಧಿ ಸ್ಟಾಲಿನ್‌

    ಸನಾತನ ಧರ್ಮವನ್ನು ಕೊನೆವರೆಗೂ ವಿರೋಧಿಸುತ್ತೇನೆ: ಉದಯನಿಧಿ ಸ್ಟಾಲಿನ್‌

    ಚೆನ್ನೈ: ತಮಿಳುನಾಡು ಸಚಿವ ಮತ್ತು ಡಿಎಂಕೆ (DMK) ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಸೋಮವಾರ ‘ಸನಾತನ ಧರ್ಮ’ ಕುರಿತು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಕೊನೆವರೆಗೂ ಸನಾತನ ಧರ್ಮ ವಿರೋಧಿಸುತ್ತೇನೆ ಎಂದು ಉದಯನಿಧಿ ಹೇಳಿಕೆ ನೀಡಿದ್ದಾರೆ.

    ಸನಾತನ ಧರ್ಮವನ್ನು (Sanatana Dharma) ‘ಡೆಂಗ್ಯೂ’ ಮತ್ತು ‘ಮಲೇರಿಯಾ’ಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್, ತಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಎಂದಿದ್ದರು. ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಕಾನೂನು ಪರಿಣಾಮ ಎದುರಿಸಲು ಸಿದ್ಧ ಎಂದು ಹೇಳಿದ್ದರು. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌

    ಸನಾತನ ಧರ್ಮದ ಕುರಿತು ಮತ್ತೆ ಮಾತನಾಡಿರುವ ಸಿಎಂ ಸ್ಟಾಲಿನ್‌ ಪುತ್ರ, ನಾನೇನೂ ತಪ್ಪಾಗಿ ಹೇಳಿಲ್ಲ. ನಾನು ಹೇಳಿದ್ದು ಸರಿ, ಅದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. ನನ್ನ ಹೇಳಿಕೆಯನ್ನು ಬದಲಾಯಿಸುವುದಿಲ್ಲ. ನನ್ನ ಸಿದ್ಧಾಂತವನ್ನು ಮಾತನಾಡಿದ್ದೇನೆ. ಅಂಬೇಡ್ಕರ್, ಪೆರಿಯಾರ್ ಹೇಳಿದ್ದಕ್ಕಿಂತ ಹೆಚ್ಚಾಗಿ ಮಾತನಾಡಿಲ್ಲ. ನಾನು ಎಂಎಲ್ಎ ಆಗಬಹುದು, ಮಂತ್ರಿಯಾಗಬಹುದು ಅಥವಾ ಯುವ ಘಟಕದ ಕಾರ್ಯದರ್ಶಿಯಾಗಿ ನಾಳೆ ನಾನು ಇರಬಹುದು. ಆದರೆ ಮನುಷ್ಯನಾಗಿರುವುದು ಹೆಚ್ಚು ಮುಖ್ಯ ಎಂದು ತಿಳಿಸಿದ್ದಾರೆ.

    ನಾವು ಹಲವಾರು ವರ್ಷಗಳಿಂದ ಸನಾತನದ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ ನೀಟ್ ಆರು ವರ್ಷಗಳ ಹಿಂದಿನ ಸಮಸ್ಯೆಯಾಗಿದೆ. ಇದು (ಸನಾತನ) ನೂರಾರು ವರ್ಷಗಳ ಸಮಸ್ಯೆಯಾಗಿದೆ. ನಾವು ಇದನ್ನು ಕೊನೆವರೆಗೂ ವಿರೋಧಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು: ಯೋಗಿ

    ಸೆಪ್ಟೆಂಬರ್‌ನಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌, ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. “ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಇದನ್ನು ನಿರ್ಮೂಲನೆ ಮಾಡಬೇಕು. ನಾವು ಸನಾತನವನ್ನು ಹೀಗೆಯೇ ನಿರ್ಮೂಲನೆ ಮಾಡಬೇಕು” ಎಂದು ಹೇಳಿದ್ದರು.

    ಅವರ ಹೇಳಿಕೆಯು ಆಡಳಿತಾರೂಢ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಸ್ಟಾಲಿನ್ ಅವರ ಹೇಳಿಕೆಯು ಯಹೂದಿಗಳ ಬಗ್ಗೆ ಹಿಟ್ಲರ್ ಹೊಂದಿದ್ದ ನಿಲುವಿಗೆ ಹೋಲುತ್ತದೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಸನಾತನ ಧರ್ಮದ ವಿರುದ್ಧ ಹೇಳಿಕೆ ನಿಲ್ಲಿಸಿ, ಬಿಜೆಪಿ ಭ್ರಷ್ಟಚಾರದ ಬಗ್ಗೆ ಮಾತನಾಡಿ: ಕಾರ್ಯಕರ್ತರಿಗೆ ಸ್ಟಾಲಿನ್ ಸಲಹೆ

  • ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌

    ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌

    ಚೆನ್ನೈ: ಇಂದು ಸನಾತನ ಧರ್ಮದ (Sanatana Dharma) ಬಗ್ಗೆ ಮಾತನಾಡಿದ್ದಕ್ಕಾಗಿ ಚಿಕ್ಕ ಮಗುವನ್ನು ಬೇಟೆಯಾಡುತ್ತಿದ್ದಾರೆ, ಬಿಜೆಪಿ ಮತ್ತು ಇನ್ನಿತರ ಸಂಘಟನೆಗಳು ಮಗುವನ್ನು ಟಾರ್ಗೆಟ್‌ ಮಾಡುತ್ತಿವೆ ಎಂದು ಮಕ್ಕಳ್‌ ನೀಧಿಮೈಯಂ ಮುಖ್ಯಸ್ಥ ಹಾಗೂ ನಟ ಕಮಲ್‌ ಹಾಸನ್‌ (Kamal Haasan) ಶುಕ್ರವಾರ ತಿಳಿಸಿದ್ದಾರೆ.

    ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕಾಗಿ ಚಿಕ್ಕ ಮಗುವನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಹೆಸರು ಹೇಳದೆಯೇ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಅವರನ್ನ ಹೇಳಿಕೆಯನ್ನ ಬೆಂಬಲಿಸಿದ್ದಾರೆ.  ಇದನ್ನೂ ಓದಿ: ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ ನೋಟಿಸ್

    ಸನಾತನ ಧರ್ಮದ ಬಗ್ಗೆ ಸಚಿವರು ನೀಡಿದ ಹೇಳಿಕೆಯಲ್ಲಿ ಹೊಸದೇನೂ ಇಲ್ಲ. ದ್ರಾವಿಡ ಚಳಚಳಿಯ ನಾಯಕರು, ಉದಯನಿಧಿ ಅವರ ತಾತ ಕರುಣಾನಿಧಿ ಅವರೂ ಈ ಬಗ್ಗೆ ಮಾತನಾಡಿದ್ದಾರೆ. ದಿವಂಗತ ಪೆರಿಯಾರ್ ವಿ ರಾಮಸಾಮಿ (Periyar V Ramasamy) ಅವರೂ ಸಾಮಾಜಿಕ ಅನಿಷ್ಠಗಳನ್ನು ಎಷ್ಟು ಕಟುವಾಗಿ ವಿರೋಧಿಸಿದ್ದರು ಎಂಬುದನ್ನ ನಾವು ಅವರ ಜೀವನ ಸ್ವಭಾವದಿಂದಲೇ ಅರ್ಥಮಾಡಿಕೊಳ್ಳಬಹುದು. ನಮಗೆಲ್ಲಾ ಸನಾತನ ಎಂಬ ಪದದ ಅರ್ಥ ತಿಳಿಸಿದ್ದೇ ಅವರಿಂದ ಎಂದು ಹೇಳಿದ್ದಾರೆ.

    ಮೊದಲು ಪೆರಿಯಾರ್‌ ಅವರು ಕಾಶಿಯಲ್ಲಿ ಪೂಜೆ ಮಾಡುತ್ತಿದ್ದರು, ಆದ್ರೆ ಅದೆಲ್ಲವನ್ನೂ ತ್ಯಜಿಸಿ ಮಕ್ಕಳ ಸೇವೆಯೇ ಮಹಾ ಸೇವೆ ಅಂತಾ ಭಾವಿಸಿ ಬರಬೇಕಾದ್ರೆ ಅವರಿಗೆ ಎಷ್ಟು ಕೋಪ ಇದ್ದಿರಬೇಕು. ಅವರನ್ನ ಯಾವುದೇ ರಾಜಕೀಯ ಪಕ್ಷಗಳು ಸ್ವಂತ ಎಂದು ಹೇಳುವಂತಿಲ್ಲ. ಇಡೀ ತಮಿಳುನಾಡಿಗೆ ಅವರು ನಾಯಕರು ಎಂದು ಶ್ಲಾಘಿಸಿದರು. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ ತಲೆ ತಂದವರಿಗೆ 10 ಕೋಟಿ ಬಹುಮಾನ; ಅಯೋಧ್ಯೆಯ ಹಿಂದೂ ಧರ್ಮದರ್ಶಿ ಘೋಷಣೆ

    ಉದಯನಿಧಿ ಹೇಳಿದ್ದೇನು?
    ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸನಾತನ ಧರ್ಮದ ತತ್ವಗಳ ವಿರುದ್ಧ ಹೋರಾಡಲು INDIA ಒಕ್ಕೂಟ ರಚಿಸಿದೆ: ಡಿಎಂಕೆ ನಾಯಕ ಪೊನ್ಮುಡಿ ವಿವಾದಾತ್ಮಕ ಹೇಳಿಕೆ

    ಸನಾತನ ಧರ್ಮದ ತತ್ವಗಳ ವಿರುದ್ಧ ಹೋರಾಡಲು INDIA ಒಕ್ಕೂಟ ರಚಿಸಿದೆ: ಡಿಎಂಕೆ ನಾಯಕ ಪೊನ್ಮುಡಿ ವಿವಾದಾತ್ಮಕ ಹೇಳಿಕೆ

    ನವದೆಹಲಿ: ಸನಾತನ ಧರ್ಮದ (Sanatana Dharma Row) ತತ್ವಗಳ ವಿರುದ್ಧ ಹೋರಾಡಲು ಇಂಡಿಯಾ (I.N.D.I.A) ಒಕ್ಕೂಟ ರಚಿಸಿದೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಸನಾತನ ಧರ್ಮದ ವಿರುದ್ಧದ ಹೋರಾಟದಲ್ಲಿ 26 ಪಕ್ಷಗಳು ಒಂದಾಗಿವೆ. ಸನಾತನ ಧರ್ಮದ ವಿರುದ್ಧ ಹೋರಾಡಲು ರಾಜಕೀಯ ಶಕ್ತಿ ಬೇಕು. ಅದಕ್ಕಾಗಿ ಐಎನ್‌ಡಿಐಎ ಒಕ್ಕೂಟ ರಚಿಸಿದೆ ಎಂದು ಡಿಎಂಕೆ ಸರ್ಕಾರದ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ (K.Ponmudy) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಸನಾತನ ಧರ್ಮದ ವಿರುದ್ಧ ಡಿಎಂಕೆ ನಾಯಕರಾದ ಉದಯನಿಧಿ ಸ್ಟಾಲಿನ್, ಎ. ರಾಜಾ ನೀಡಿರುವ ಹೇಳಿಕೆಯಿಂದ ಐಎನ್‌ಡಿಐಎ ಒಕ್ಕೂಟದ ನಾಯಕರು ಅಂತರ ಕಾಯ್ದುಕೊಳ್ಳುತ್ತಿರುವ ಹೊತ್ತಲ್ಲಿ ಕೆ. ಪೊನ್ಮುಡಿ ಐಎನ್‌ಡಿಐಎ ಒಕ್ಕೂಟವನ್ನು ವಿವಾದದ ಒಳಗೆ ಸಿಲುಕಿಸುವ ಪ್ರಯತ್ನ ಮಾಡಿದ್ದಾರೆ.

    ಸನಾತನ ಧರ್ಮ ನಿರ್ಮೂಲನೆ ಕಾರ್ಯಕ್ರದಲ್ಲಿ ಕೆ. ಪೊನ್ಮುಡಿ ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು, ವೀಡಿಯೋದಲ್ಲಿ ಈ ಸಮ್ಮೇಳನದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ ಸಂಘಟಕರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಸನಾತನ ಧರ್ಮವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಿ ಎಂದು ಕರೆದಿದ್ದಕ್ಕಾಗಿ ನಾನು ಸಂಘಟಕರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮತ್ತೊಂದು ವಿವಾದ – ಸನಾತನ ಧರ್ಮವನ್ನ HIV, ಕುಷ್ಠರೋಗಕ್ಕೆ ಹೋಲಿಸಿದ ಸಂಸದ ಎ. ರಾಜಾ

    ಸನಾತನ ಧರ್ಮ ನಿರ್ಮೂಲನೆ ಮಾಡುವುದು ನಮ್ಮ ಮೊದಲ ಕೆಲಸವಾಗಬೇಕು. ಸನಾತನಂ ಎಂಬ ಹೆಸರು ಸಂಸ್ಕೃತದಿಂದ ಬಂದಿದೆ. ಸನಾತನಂ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಉದಯನಿಧಿ ಸ್ಟಾಲಿನ್ ಮಾತು ಉಲ್ಲೇಖಿಸಿ, ಸನಾತನ ಧರ್ಮವನ್ನು ಅನುಸರಿಸುತ್ತಿರುವ ಜನರ “ಜನಾಂಗೀಯ ಹತ್ಯೆಗೆ ಎಂದಿಗೂ ಕರೆ ನೀಡಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

    ಡಿಎಂಕೆ ನಾಯಕನ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (J.P. Nadda) ತಿರುಗೇಟು ನೀಡಿದ್ದಾರೆ. ಐಎನ್‌ಡಿಐಎ ಒಕ್ಕೂಟ ಪಾಲುದಾರಾದ ಉದಯನಿಧಿ ಸ್ಟಾಲಿನ್ (Udayanidhi Stalin), ಪ್ರಿಯಾಂಕಾ ಖರ್ಗೆ (Priyank Kharge) ಹೇಳಿಕೆ ‌ನೀಡಿದರು. ಸತಾತನ ಧರ್ಮದ ವಿರುದ್ಧ ಹೋರಾಡಲು ಒಕ್ಕೂಟ ರಚಿಸಿದೆ ಎಂದು ಕೆ. ಪೊನ್ಮುಡಿ ಹೇಳಿದ್ದಾರೆ. ಇದು ಕಾಂಗ್ರೆಸ್ (Congress), ಸೋನಿಯಾ ಗಾಂಧಿ (Sonia Gandhi), ರಾಹುಲ್ ಗಾಂಧಿ (Rahul Gandhi) ಅವರ ತಂತ್ರದ ಭಾಗವಾಗಿದೆ. ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ಮತ್ತು ಐಎನ್‌ಡಿಐಎ ಒಕ್ಕೂಟ ತಮ್ಮ ಅಭಿಪ್ರಾಯ ಹೇಳಬೇಕು ಎಂದು ನಡ್ಡಾ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ ತಲೆ ತಂದವರಿಗೆ 10 ಕೋಟಿ ಬಹುಮಾನ; ಅಯೋಧ್ಯೆಯ ಹಿಂದೂ ಧರ್ಮದರ್ಶಿ ಘೋಷಣೆ

    ಯಾವುದೇ ಧರ್ಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಲು ಸಂವಿಧಾನದಲ್ಲಿ ಹಕ್ಕು ಇದೆಯೇ ಎಂದು ಅವರಿಗೆ ತಿಳಿಸಬೇಕು. ಐಎನ್‌ಡಿಐಎ ಮೈತ್ರಿಕೂಟ, ಕಾಂಗ್ರೆಸ್, ಸೋನಿಯಾ ಮತ್ತು ರಾಹುಲ್ ಸನಾತನ ಧರ್ಮದ ವಿರುದ್ಧ ದ್ವೇಷದ ಸರಕುಗಳನ್ನು ಪ್ರೀತಿಯ ಅಂಗಡಿಯ ಹೆಸರಿನಲ್ಲಿ ಏಕೆ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಬೇಕು. ಈ ದ್ವೇಷದ ಮೆಗಾ ಮಾಲ್ ಕೇವಲ ಅಧಿಕಾರಕ್ಕಾಗಿ, ಒಡೆದು ಆಳುವುದಾಗಿದೆ ಎಂದು ಟಾಂಗ್‌ ಕೊಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಎಂಕೆ ಮುಖಂಡನ ಮೇಲೆ ಹಲ್ಲೆ ಪ್ರಕರಣ- ಐವರು ಪೊಲೀಸರ ವಶಕ್ಕೆ

    ಡಿಎಂಕೆ ಮುಖಂಡನ ಮೇಲೆ ಹಲ್ಲೆ ಪ್ರಕರಣ- ಐವರು ಪೊಲೀಸರ ವಶಕ್ಕೆ

    ಬೆಂಗಳೂರು: ಡಿಎಂಕೆ ಮುಖಂಡ ಗುರುಸ್ವಾಮಿ (DMK Leader Guruswamy Murthy) ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಮಧಿಸಿದಂತೆ ಇದೀಗ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.

    ಪ್ರಕರಣ ಸಂಬಂಧ ಬಾಣಸವಾಡಿ ಪೊಲೀಸರು ಕಳೆದ ಎರಡು ದಿನಗಳಿಂದ ತಮಿಳುನಾಡಿನಲ್ಲಿ ಬೀಡು ಬಿಟ್ಟಿದ್ದರು. ಸದ್ಯ ತಮಿಳುನಾಡಿನ (Tamilnadu) ಮಧುರೈ ಹಾಗೂ ಧರ್ಮಪುರಿಯಲ್ಲಿ ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ರಾಜಕೀಯ ದ್ವೇಷಕ್ಕೆ ಕೊಲೆ ಯತ್ನ ನಡೆಸಿರೋ ಬಗ್ಗೆ ಮಾಹಿತಿ ದೊರೆತಿದೆ. ಇದೀಗ ವಶಕ್ಕೆ ಪಡೆದಿರುವ ಐವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

    ಏನಿದು ಪ್ರಕರಣ..?: ಗುರುಸ್ವಾಮಿ ಮೂರ್ತಿ ಕಾನೂನು ಸಮಸ್ಯೆ ಇರುವ ಸೈಟ್ ವಿಚಾರವಾಗಿ ಮಾತುಕತೆಗೆ ಬೆಂಗಳೂರಿಗೆ ಬಂದಿದ್ದ. ಭಾನುವಾರ ವಿಮಾನದ ಮೂಲಕ ಬಂದು ಹೋಟೆಲ್ ನಲ್ಲಿ ರೂಂ ಮಾಡಿಕೊಂಡಿದ್ದ. ಸೆ.4 ರಂದು ಸೋಮವಾರ ಮನೆಯೊಂದನ್ನು ಹುಡುಕಿ ಸಂಜೆ ಸೈಟ್ ಬಗ್ಗೆ ಮಾತುಕತೆ ಮಾಡಲು ಹೋಟೆಲ್‍ಗೆ ಹೋಗಿದ್ದ. ಬ್ರೋಕರ್ ಜೊತೆ ಬಾಣಸವಾಡಿಯ ಸುಖ್‍ಸಾಗರ್ ಹೋಟೆಲ್‍ನಲ್ಲಿ ಮಾತುಕತೆ ನಡೆಸುತ್ತಿದ್ದಾಗ ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ಬಂದ 5 ಮಂದಿ ಏಕಾಏಕಿ ಗುರುಸ್ವಾಮಿ ಮೂರ್ತಿ ಮೇಲೆ ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ಡಿಎಂಕೆ ನಾಯಕ ಅಳಗಿರಿ ಆಪ್ತನ ಮೇಲೆ ಬೆಂಗಳೂರಲ್ಲಿ ಡೆಡ್ಲಿ ಅಟ್ಯಾಕ್

    ಹಲ್ಲೆಯಿಂದ ಗಂಭೀರ ಗಾಯಗೊಂಡಿರುವ ಗುರುಸ್ವಾಮಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ದಾಳಿ ನಡೆದ ಹೋಟೇಲ್‍ನಲ್ಲಿ ಮಾಲೀಕರು ಹೋಮ-ಹವನ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೊಂದು ವಿವಾದ – ಸನಾತನ ಧರ್ಮವನ್ನ HIV, ಕುಷ್ಠರೋಗಕ್ಕೆ ಹೋಲಿಸಿದ ಸಂಸದ ಎ. ರಾಜಾ

    ಮತ್ತೊಂದು ವಿವಾದ – ಸನಾತನ ಧರ್ಮವನ್ನ HIV, ಕುಷ್ಠರೋಗಕ್ಕೆ ಹೋಲಿಸಿದ ಸಂಸದ ಎ. ರಾಜಾ

    ಚೆನ್ನೈ: ಸನಾತನ ಧರ್ಮವು (Sanatana dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್‌ ಹೇಳಿಕೆ ಬೆನ್ನಲ್ಲೇ ಡಿಎಂಕೆ ಪಕ್ಷದ ಸಂಸದ ಎ.ರಾಜಾ (R Raja) ಹೆಚ್‌ಐವಿ (HIV), ಕುಷ್ಠರೋಗಕ್ಕೆ ಸನಾತನ ಧರ್ಮವನ್ನ ಹೋಲಿಸಿ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದಾರೆ.

    ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಸನಾತನ ಧರ್ಮವನ್ನ ಹೆಚ್‌ಐವಿ ಮತ್ತು ಕುಷ್ಠರೋಗದಂತಹ (leprosy) ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು. ಸನಾತನ ಧರ್ಮ ಹಾಗೂ ವಿಶ್ವಕರ್ಮ ಯೋಜನೆಗಳು ಬೇರೆ-ಬೇರೆ ಇಲ್ಲ, ಅವೆರಡೂ ಒಂದೇ. ಉದಯನಿಧಿ ಸ್ಟಾಲಿನ್‌ (Udhayanidhi Stalin) ಅವರು ಸ್ವಲ್ಪ ಮೃದು ಧೋರಣೆಯಿಂದ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

    ಡೆಂಗ್ಯೂ ಹಾಗೂ ಮಲೇರಿಯಾ ರೋಗಗಳು ಸಮಾಜಿಕ ಕಳಂಕ ಹೊಂದಿಲ್ಲ. ಆದ್ರೆ ಕುಷ್ಠ ಮತ್ತು ಹೆಚ್‌ಐವಿ ರೋಗಗಳು ಸಮಾಜದಿಂದ ಕಳಂಕಿತವಾಗಿವೆ. ಹಾಗಾಗಿ ಸನಾತನ ಧರ್ಮವನ್ನ ಹೆಚ್‌ಐವಿ ಮತ್ತು ಕುಷ್ಠರೋಗದಂತ ಕಾಯಿಲೆಯಾಗಿ ನೋಡಬೇಕಾಗಿದೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ ತಲೆ ತಂದವರಿಗೆ 10 ಕೋಟಿ ಬಹುಮಾನ; ಅಯೋಧ್ಯೆಯ ಹಿಂದೂ ಧರ್ಮದರ್ಶಿ ಘೋಷಣೆ

    ಯಾರು ಯಾರನ್ನಾದರೂ ಕರೆದುಕೊಂಡು ಬರಲಿ, ಸನಾತನ ಧರ್ಮದ ಬಗ್ಗೆ ಚರ್ಚೆ ಮಾಡೋಕೆ ನಾನು ಸಿದ್ಧ. ಅವರು ಯಾವುದೇ ಆಯುಧಗಳನ್ನ ಬೇಕಾದ್ರೆ ತೆಗೆದುಕೊಂಡು ಬರಲಿ. ಪ್ರಧಾನಿ ಮೋದಿ ಕ್ಯಾಬಿನೆಟ್‌ನಲ್ಲಿ ಸಭೆ ಕರೆದು ನನಗೆ ಅನುಮತಿ ಕೊಟ್ಟರೆ, ಅಲ್ಲಿಯೂ ಸನಾತನ ಧರ್ಮದ ಬಗ್ಗೆ ಉತ್ತರ ಕೊಡಲು ನಾನು ಸಿದ್ಧ ಎಂದು ಸವಾಲ್‌ ಹಾಕಿದ್ದಾರೆ.

    ಏನಿದು ವಿವಾದ?
    ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ನಂತರ ವಿವಾದ ಭುಗಿಲೆದ್ದಿದೆ.

    ಈ ನಡುವೆ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತಾಗಿ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಕಾನೂನು ಹಕ್ಕುಗಳ ವೀಕ್ಷಣಾಲಯ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಸೋಮವಾರ ಚೆನ್ನೈನ ಪೊಲೀಸ್ ಕಮಿಷನರ್‌ಗೆ ಲೀಗಲ್ ನೋಟಿಸ್ ಕಳುಹಿಸಿದೆ. ಸೆಪ್ಟೆಂಬರ್‌ 7 ರಂದು ಹುಬ್ಬಳ್ಳಿಯಲ್ಲೂ ಉದಯನಿಧಿ ಸ್ಟಾಲಿನ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ಬದಲಾಗುತ್ತಾ ದೇಶದ ಹೆಸರು – ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಅಂತ ಮರುನಾಮಕರಣ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಸ್ ಚಾಲಕಿಗೆ ಕಮಲ್ ಹಾಸನ್ ಕಾರು ಗಿಫ್ಟ್ : ಇದರ ಹಿಂದಿದೆ ಗೊಂದಲದ ಸ್ಟೋರಿ

    ಬಸ್ ಚಾಲಕಿಗೆ ಕಮಲ್ ಹಾಸನ್ ಕಾರು ಗಿಫ್ಟ್ : ಇದರ ಹಿಂದಿದೆ ಗೊಂದಲದ ಸ್ಟೋರಿ

    ರಡ್ಮೂರು ದಿನಗಳಿಂದ ತಮಿಳಿನ ಸ್ಟಾರ್ ನಟ ಕಮಲ್ ಹಾಸನ್ (Kamal Haasan) ಅವರು, ಕೊಯಮತ್ತೂರಿನ ಮೊದಲ ಮಹಿಳಾ ಬಸ್ ಚಾಲಕಿಯನ್ನು (Bus Driver) ಕರೆಯಿಸಿಕೊಂಡು ಕಾರು (Car)  ಗಿಫ್ಟ್ ನೀಡಿರುವ ಸುದ್ದಿ ಸಿನಿಮಾ ರಂಗದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಬರೀ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಇದೀಗ ತಮಿಳು ನಾಡಿನ ರಾಜಕೀಯ ವಲಯದಲ್ಲೂ ಅದು ಚರ್ಚೆಗೆ ಕಾರಣವಾಗಿದೆ. ಮೇಲ್ನೋಟಕ್ಕೆ ಇದು ರಾಜಕೀಯ ಪ್ರೇರಿತ ನಡೆ ಎಂದು ಹೇಳಲಾಗುತ್ತಿದ್ದು, ಕಾರು ಕೊಟ್ಟಿರುವ ಕಮಲ್ ಬಗ್ಗೆ ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ.

    ಏನಿದು ಪ್ರಕರಣ?

    ಶರ್ಮಿಳಾ (Sharmila) ಕೊಯಮತ್ತೂರಿನ ಮೊದಲ ಮಹಿಳಾ ಬಸ್ ಚಾಲಕಿ. ಅವತ್ತು ಮಹಿಳಾ ಚಾಲಕಿಯರನ್ನು ಗೌರವಿಸುವುದಕ್ಕಾಗಿ ಡಿಎಂಕೆ ಸಂಸದೆ ಕನಿಮೊಳಿ (Kanimozhi) ಕೊಯಮತ್ತೂರಿಗೆ ಬಂದಿದ್ದರು. ಚಾಲಕಿಯರನ್ನು ಗೌರವಿಸಿದ ಕೆಲವೇ ಗಂಟೆಗಳಲ್ಲೇ ಕನಿಮೊಳಿ ಅವರು ಶರ್ಮಿಳಾ ಚಲಾಯಿಸುತ್ತಿದ್ದ ಬಸ್ ಏರಿದ್ದಾರೆ. ಇಲ್ಲಿಯೇ ಎಡವಟ್ಟು ಆಗಿದೆ.

    ಶರ್ಮಿಳಾ ಚಲಾಯಿಸುತ್ತಿದ್ದ ಬಸ್ ಏರಿದ್ದ ಕನಿಮೊಳಿಗೆ ಆ ಬಸ್ ನಲ್ಲಿದ್ದ ಕಂಡಕ್ಟರ್ ಟಿಕೆಟ್ ತಗೆದುಕೊಳ್ಳುವಂತೆ ಹೇಳಿದ್ದಾರೆ. ಇದಕ್ಕೆ ಶರ್ಮಿಳಾ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಂಸದರು ನಮ್ಮನ್ನು ಗೌರವಿಸುವುದಕ್ಕಾಗಿ ಬಸ್ ಏರಿದ್ದಾರೆ. ಬಸ್‍ ನಲ್ಲಿ ಅವರು ಪ್ರಯಾಣಿಸುತ್ತಿರುವುದು ನಮಗೆ ಗೌರವ. ಟಿಕೆಟ್ ತಗೆದುಕೊಳ್ಳುವುದು ಬೇಡ ಎಂದಿದ್ದಾರೆ ಶರ್ಮಿಳಾ. ಈ ವಿಚಾರವಾಗಿ ಕಂಡಕ್ಟರ್ ಗೂ ಮತ್ತು ಶರ್ಮಿಳಾಗೂ ಗಲಾಟೆ ಆಗಿದೆ. ಈ ಗಲಾಟೆಗೆ ಈಗ ನಾನಾ ಬಣ್ಣಗಳು ಮೆತ್ತಿಕೊಂಡಿವೆ. ಇದನ್ನೂ ಓದಿ:‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು

    ಈ ಘಟನೆಯಾದ ಕೆಲವೇ ಗಂಟೆಗಳಲ್ಲೇ ಶರ್ಮಿಳಾ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಸುದ್ದಿ ಒಂದು ಕಡೆಯಾದರೆ, ಮತ್ತೊಂದು ಕಡೆ ಬಸ್ ಮಾಲೀಕರೆ ಶರ್ಮಿಳಾರನ್ನು ಕೆಲಸದಿಂದ ತಗೆದುಹಾಕಿದ್ದಾರೆ ಎನ್ನುವ ಸುದ್ದಿಯೂ ಇದೆ. ಸ್ವಯಂ ಪ್ರಚಾರಕ್ಕಾಗಿ ಸಿಲೆಬ್ರಿಟಿಗಳನ್ನು ಬಸ್ ನಲ್ಲಿ ಹತ್ತಿಸಿಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಬಸ್ ಮಾಲೀಕರು ಶರ್ಮಿಳಾರನ್ನು ಕೆಲಸದಿಂದ ತಗೆದು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಸುದ್ದಿಯನ್ನು ಮಾಲೀಕರು ನಿರಾಕರಿಸಿದ್ದಾರೆ.

    ಮತ್ತೊಂದು ಕಡೆ ಶರ್ಮಿಳಾ ಡಿಎಂಕೆ (DMK) ಬೆಂಬಲಿಗರು. ಹಾಗಾಗಿ ಕನಿಮೊಳಿ ಅವರ ಬೆಂಬಲಕ್ಕೆ ನಿಂತು ಟಿಕೆಟ್ ರಹಿತ ಪ್ರಯಾಣ ಮಾಡಿಸಲು ಮುಂದಾಗಿದ್ದರು ಎನ್ನುವ ಮಾತು ಕೇಳಿ ಬರುತ್ತಿದೆ. ಇದೇ ಏನೇ ಆದರೂ ಕೆಲಸ ಕಳೆದುಕೊಂಡು ಶರ್ಮಿಳಾಗೆ ಕಮಲ್ ಹಾಸನ್ ಕಾರು ಗಿಫ್ಟ್ ನೀಡುವ ಮೂಲಕ ಅವರ ಬದುಕಿಗೆ ನೆರವಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಕನಿಮೊಳಿಗೆ ಟಿಕೆಟ್ – ಕೆಲಸ ತೊರೆದ ತಮಿಳುನಾಡಿನ ಮೊದಲ ಬಸ್ ಚಾಲಕಿ

    ಕನಿಮೊಳಿಗೆ ಟಿಕೆಟ್ – ಕೆಲಸ ತೊರೆದ ತಮಿಳುನಾಡಿನ ಮೊದಲ ಬಸ್ ಚಾಲಕಿ

    ಚೆನ್ನೈ: ಡಿಎಂಕೆ (DMK) ಸಂಸದೆ ಕನಿಮೊಳಿ (Kanimozhi) ಅವರಿಗೆ ಬಸ್ ಟಿಕೆಟ್ ನೀಡಿದ್ದಕ್ಕೆ ಬೇಸತ್ತು ತಮಿಳುನಾಡಿನ (Tamil Nadu) ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.

    ಸಂಸದೆ ಗಾಂಧಿಪುರಂನಿಂದ ಪೀಲಮೇಡುವಿಗೆ ತೆರಳಲು ಬಸ್ ಏರಿದ್ದರು. ಈ ವೇಳೆ ಕಂಡಕ್ಟರ್ ಟಿಕೆಟ್ ನೀಡಿದ್ದರು. ಇದಕ್ಕೆ ಚಾಲಕಿ ಹಾಗೂ ಕಂಡಕ್ಟರ್ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಅಲ್ಲದೇ ಚಾಲಕಿ ಶರ್ಮಿಳಾ ಪ್ರಚಾರಕ್ಕಾಗಿ ಈ ರೀತಿ ನಡೆದುಕೊಳ್ಳುತ್ತಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ತಮ್ಮ ಕೆಲಸವನ್ನು ತೊರೆದಿದ್ದಾರೆ. ಇದನ್ನೂ ಓದಿ: ಇನ್ಫೋಸಿಸ್ ಸುಧಾಮೂರ್ತಿಗೆ ಬಾಲ ಸಾಹಿತ್ಯ ಪುರಸ್ಕಾರ

    ಕನಿಮೋಳಿಯವರು ನಾನು ಓಡಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸಲು ಬಂದಿದ್ದರು. ಆದರೆ ಕಂಡಕ್ಟರ್ ಟಿಕೆಟ್ ಖರೀದಿಸುವಂತೆ ಸಂಸದರಿಗೆ ಹೇಳಿದರು. ಇದು ನನ್ನ ಮತ್ತು ಕಂಡಕ್ಟರ್ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಸಂಸದರನ್ನು ಭೇಟಿಯಾದ ಬಗ್ಗೆ ಆಡಳಿತ ಮಂಡಳಿಗೆ ತಿಳಿಸಿದ್ದೇನೆ. ಆದರೆ ಸಂಸದರಿಗೆ ಮಾಡಿದ ಅಗೌರವವನ್ನು ನನಗೆ ಸಹಿಸಿಕೊಳ್ಳಲು ಆಗಲಿಲ್ಲ. ಸಂಸದರಿಗೆ ಕಂಡಕ್ಟರ್ ಟಿಕೆಟ್ ನೀಡಿರುವುದು ಸರಿಯಾದ ನಡೆಯಲ್ಲ ಎಂದು ಶರ್ಮಿಳಾ ಆರೋಪಿಸಿದ್ದಾರೆ.

    ಬಿಜೆಪಿ (BJP) ಶಾಸಕಿ ವನತಿ ಶ್ರೀನಿವಾಸನ್ ಕೂಡ ಈ ಹಿಂದೆ ಶರ್ಮಿಳಾ ಚಲಾಯಿಸುತ್ತಿದ್ದ ಬಸ್‍ನಲ್ಲಿ ಪ್ರಯಾಣಿಸಿದ್ದಾರೆ. ಚಾಲಕಿಯ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿವೆ.

    ಸಾರಿಗೆ ಸಂಸ್ಥೆಯ ಮುಖ್ಯಸ್ಥ ದುರೈ ಕಣ್ಣನ್ ಅವರು ಕನಿಮೊಳಿಯವರ ಭೇಟಿಯ ಮಾಹಿತಿಯನ್ನು ನಿರಾಕರಿಸಿದ್ದಾರೆ. ನಮಗೆ ತಿಳಿಸಿದ್ದರೆ ನಾವು ಸಂಸದರಿಗೆ ಸೂಕ್ತ ವ್ಯವಸ್ಥೆ ಮಾಡುತ್ತಿದ್ದೆವು. ಅಲ್ಲದೇ ಆಡಳಿತ ಮಂಡಳಿ ಶರ್ಮಿಳಾ ಅವರಿಗೆ ಕೆಲಸ ಬಿಡುವಂತೆ ಬಲವಂತಪಡಿಸಿದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದ್ದಾರೆ.

    ಈ ಘಟನೆಗೂ ಮೊದಲು ಸಭೆಯೊಂದಕ್ಕೆ ತೆರಳುವ ಮುನ್ನ, ಕನಿಮೊಳಿ ಅವರು ಬಸ್ ಚಾಲಕಿಯಾಗಲು ಶರ್ಮಿಳಾ ಪಟ್ಟಿರುವ ಶ್ರಮವನ್ನು ಶ್ಲಾಘಿಸಿದ್ದರು. ಇದನ್ನೂ ಓದಿ: ಅನ್ನಭಾಗ್ಯ ಅಕ್ಕಿಗೆ ಕೇಂದ್ರದ ಬಾಗಿಲು ಬಂದ್ – ಸರ್ಕಾರದ ಮುಂದಿರುವ ಆಯ್ಕೆಗಳೇನು?

  • ನಟಿ ಖುಷ್ಬೂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ- ಡಿಎಂಕೆ ನಾಯಕ ಅರೆಸ್ಟ್, ಪಕ್ಷದಿಂದ ಉಚ್ಛಾಟನೆ

    ನಟಿ ಖುಷ್ಬೂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ- ಡಿಎಂಕೆ ನಾಯಕ ಅರೆಸ್ಟ್, ಪಕ್ಷದಿಂದ ಉಚ್ಛಾಟನೆ

    ಚೆನ್ನೈ: ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ (Khushbu Sundar) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಡಿಎಂಕೆ (DMK) ನಾಯಕ ಶಿವಾಜಿ ಕೃಷ್ಣಮೂರ್ತಿ (Sivaji Krishnamurthy) ಯನ್ನು ಭಾನುವಾರ ಚೆನ್ನೈ ಪೊಲೀಸರು (Chennai Police) ಬಂಧಿಸಿದ್ದಾರೆ. ಅಲ್ಲದೆ ಪಕ್ಷದಿಂದಲೂ ಉಚ್ಛಾಟನೆ ಮಾಡಲಾಗಿದೆ.

    ತಮ್ಮ ವಿರುದ್ಧ ಕೃಷ್ಣಮೂರ್ತಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವೀಡಿಯೋವನ್ನು ಖುಷ್ಬೂ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಡಿಎಂಕೆ ವಿರುದ್ಧ ಅವರು ಕಿಡಿಕಾರಿರುವ ಅವರು ಮಹಿಳೆಯರನ್ನು ಕೀಳಾಗಿ ಕಾಣುವ ವ್ಯಕ್ತಿಗಳಿಗೆ ಡಿಎಂಕೆ ಆಶ್ರಯ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದಾಗಲೂ ಗದ್ಗದಿತರಾಗಿ ಮಾತನಾಡಿರುವ ಖುಷ್ಬೂ, ಪ್ರಕರಣದ ಗಂಭೀರತೆಯನ್ನು ಎತ್ತಿ ತೋರಿಸಿದ್ದಾರೆ. ಇದು ಕೇವಲ ಬಿಜೆಪಿ ಮಹಿಳಾ ನಾಯಕಿಯ ಮೇಲಿನ ದಾಳಿಯಲ್ಲ, ಒಟ್ಟಾರೆ ಮಹಿಳೆಯರ ಮೇಲಿನ ದಾಳಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರೀ ಅನಾಹುತದಿಂದ ಮಹಾರಾಷ್ಟ್ರ ಸಚಿವರು ಜಸ್ಟ್ ಮಿಸ್

    ಸದ್ಯ ಬಿಜೆಪಿ (BJP) ಯಿಂದ ಭಾರೀ ಟೀಕೆಗಳು ವ್ಯಕ್ತವಾದ ನಂತರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ. ಡಿಎಂಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ದುರೈಮುರುಗನ್ ಅವರು ಪಕ್ಷದ ಶಿಸ್ತಿನ ಉಲ್ಲಂಘನೆ ಮತ್ತು ಪಕ್ಷಕ್ಕೆ ಅಪಖ್ಯಾತಿ ತಂದಿರುವ ಕಾರಣ ಕೃಷ್ಣಮೂರ್ತಿ ಅವರ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸುವುದು ಸೇರಿದಂತೆ ಪಕ್ಷದ ಎಲ್ಲ ಹುದ್ದೆಗಳಿಂದಲೂ ಉಚ್ಛಾಟನೆ ಮಾಡುವುದಾಗಿ ಘೋಷಿಸಿದರು.