Tag: ಡಿಎಂಕೆ

  • ಡಿಎಂಕೆ ಗೆದ್ದಿದ್ದಕ್ಕೆ ನಾಲಿಗೆ ಕತ್ತರಿಸಿ ಹರಕೆ ತೀರಿಸಿದ ಮಹಿಳೆ

    ಡಿಎಂಕೆ ಗೆದ್ದಿದ್ದಕ್ಕೆ ನಾಲಿಗೆ ಕತ್ತರಿಸಿ ಹರಕೆ ತೀರಿಸಿದ ಮಹಿಳೆ

    ಚೆನ್ನೈ: ಎಂ.ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷ ಈ ಬಾರಿ ಅಧಿಕಾರಕ್ಕೆ ಬಂದರೆ ನಾಲಿಗೆಯನ್ನು ಕತ್ತರಿಸಿಕೊಳ್ಳುತ್ತೇನೆ ಎಂದು ಹರಕೆ ಹೊತ್ತಿದ್ದ ಮಹಿಳೆ ಹರಕೆಯನ್ನು ತೀರಿಸಿದ್ದಾರೆ.

    32 ವರ್ಷದ ವನಿತಾ ಹರಕೆಯನ್ನು ಹೊತ್ತಿದ್ದರು. 2021ರ ವಿಧಾನಸಭಾ ಚುನಾವಣೆಯ ಫಲಿತಾಂಶ ನಿನ್ನೆಯಷ್ಟೇ ಹೊರಬಿದ್ದಿದ್ದು, ಅದರಲ್ಲಿ ಡಿಎಂಕೆಗೆ ಬಹುಮತ ಬಂದಿದೆ. ಹೀಗಾಗಿ ಫಲಿತಾಂಶ ಹೊರಬರುತ್ತಿದ್ದಂತೆ ವನಿತಾ ತಮ್ಮ ಹರಕೆಯನ್ನು ಸಲ್ಲಿಸಿದ್ದಾರೆ.

    ಜನಾದೇಶ ಡಿಎಂಕೆ ಪರವಾಗಿ ಹೊರಬೀಳುತ್ತಿದ್ದಂತೆ ವನಿತಾ ಮುಥಾಲಮ್ಮನ ದೇವಾಲಯಕ್ಕೆ ಹೋಗಿ ತಮ್ಮ ನಾಲಿಗೆ ಕತ್ತರಿಸಿಕೊಂಡಿದ್ದಾರೆ. ಕೋವಿಡ್ 19 ಇರುವ ಕಾರಣಕ್ಕೆ ಅಲ್ಲಿ ಯಾವುದೇ ಪೂಜೆ, ಹರಕೆ ಸಲ್ಲಿಸುವ ಅವಕಾಶ ಇರಲಿಲ್ಲ. ಹಾಗಾಗಿ ನಾಲಿಗೆಯನ್ನು ದೇಗುಲದ ಬಾಗಿಲನಲ್ಲಿರುವ ಗೇಟ್ ಬಳಿ ಇಟ್ಟಿದ್ದರು. ಅಷ್ಟರಲ್ಲಿ ವನಿತಾ ಎಚ್ಚರವಿಲ್ಲದೆ ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೇ ವನಿತಾಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

  • ತಮಿಳುನಾಡಿನಲ್ಲಿ ಸೂರ್ಯೋದಯ – ಶಾಖಕ್ಕೆ ಬಾಡಿತು ಎರಡೆಲೆ, ಮುದುಡಿತು ಕಮಲ

    ತಮಿಳುನಾಡಿನಲ್ಲಿ ಸೂರ್ಯೋದಯ – ಶಾಖಕ್ಕೆ ಬಾಡಿತು ಎರಡೆಲೆ, ಮುದುಡಿತು ಕಮಲ

    ಚೆನ್ನೈ: ತಮಿಳುನಾಡಿನಲ್ಲಿ ನಿರೀಕ್ಷೆಯಂತೆ ಸೂರ್ಯೋದಯವಾಗಿದೆ. ಸೂರ್ಯ ಶಾಖಕ್ಕೆ ಎರಡೆಲೆ ಬಾಡಿದೆ. ಕಮಲ ಮುದುಡಿದೆ. ಜಯಲಲಿತಾ, ಕರುಣಾನಿಧಿ ಇಲ್ಲದೇ ನಡೆದ ಮೊದಲ ಚುನಾವಣೆಯಲ್ಲಿ ಆಡಲಿತ ವಿರೋಧಿ ಅಲೆಗೆ ಅಣ್ಣಾ ಡಿಎಂಕೆ ಕೊಚ್ಚಿ ಹೋಗಿದ್ದು, ಡಿಎಂಕೆ ಭರ್ಜರಿ ಗೆಲುವು ಸಾಧಿಸಿದೆ.

    ಆರಂಭದಿಂದಲೂ ಮುನ್ನಡೆ ಕಾಯ್ದುಕೊಳ್ಳುತ್ತಲೇ ಬಂದ ಡಿಎಂಕೆಗೆ ಒಂದು ದಶಕದ ಬಳಿಕ ಅಧಿಕಾರ ಸಿಕ್ಕಿದೆ. ಆರಂಭಿಕ ಟ್ರೆಂಡ್‍ನಲ್ಲಿಯೇ ಫಲಿತಾಂಶ ಏನಾಗಬಹುದು ಎಂಬುದು ಎಲ್ಲರಿಗೂ ಸ್ಪಷ್ಟವಾಗಿ ಗೊತ್ತಾಗಿತ್ತು. ಅಧಿಕೃತವಾಗಿ ಒಂದು ಸೀಟ್ ಗೆಲ್ಲದಿರುವ ಹೊತ್ತಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಗೆ ಡಿಎಂಕೆ ಪಾಳಯದಲ್ಲಿ ಸಂಭ್ರಮ ಮನೆ ಮಾಡಿತ್ತು.

    ಪಕ್ಷದ ಮುಖ್ಯಸ್ಥ ಎಂಕೆ ಸ್ಟಾಲಿನ್ ಮೇ 6ರಂದು ತಮಿಳುನಾಡಿನ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎಂದು ಡಿಎಂಕೆ ಘೋಷಿಸಿತ್ತು. ದ್ರಾವಿಡ ರಾಜಕಾರಣದ ಮುಂದೆ, ಹಿಂದುತ್ವ, ರಾಷ್ಟ್ರೀಯ ರಾಜಕಾರಣ ಫಲ ಕೊಟ್ಟಿಲ್ಲ. ಇಲ್ಲಿ ಬಿಜೆಪಿಯ ಪರವಾಗಿ ಚುನಾವಣಾ ಉಸ್ತುವಾರಿಯಾಗಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರಚಾರ ಮಾಡಿ ಪಕ್ಷ ಸಂಘಟನೆ ಮಾಡಿದ್ದರು.

    ತಮಿಳುನಾಡಲ್ಲಿ ಸೂರ್ಯೋದಯ ( ಒಟ್ಟು 234)
    * ಡಿಎಂಕೆ  – 143 (+45)
    * ಎಐಎಡಿಎಂಕೆ  – 90 (- 46)
    * ಮಕ್ಕಳ್ ನಿಧಿ ಮಯ್ಯಂ – 01 (ಇರಲಿಲ್ಲ)

    ಗೆದ್ದ ಪ್ರಮುಖರು
    * ಎಂಕೆ ಸ್ಟಾಲಿನ್, (ಡಿಎಂಕೆ)
    * ಉದಯನಿಧಿ ಸ್ಟಾಲಿನ್, ಚೆಪಾಕ್ (ಡಿಎಂಕೆ)
    * ಪಳನಿಸ್ವಾಮಿ, (ಎಐಎಡಿಎಂಕೆ)
    * ಪನ್ನೀರ್ ಸೆಲ್ವಂ, (ಎಐಎಡಿಎಂಕೆ)
    * ಕಮಲ್ ಹಾಸನ್, ಕೊಯಮತ್ತೂರು (ಎಂಎನ್‍ಎಂ)

    ಸೋತ ಪ್ರಮುಖರು
    * ಅಣ್ಣಾಮಲೈ, ಅವರಕುರುಚ್ಚಿ, ಬಿಜೆಪಿ
    * ಖುಷ್ಬು, ಥೌಸಂಡ್ ಲೈಟ್ಸ್, ಬಿಜೆಪಿ
    * ಟಿಟಿವಿ ದಿನಕರನ್,ಕೋವಿಲ್‍ಪಟ್ಟಿ (ಎಎಂಎಂಕೆ)

    ಡಿಎಂಕೆಗೆ ಗೆಲುವಿಗೆ ಕಾರಣ ಏನು?
    * ಅಣ್ಣಾ ಡಿಎಂಕೆಗೆ ಆಡಳಿತ ವಿರೋಧಿ ಅಲೆ
    * ಅಣ್ಣಾ ಡಿಎಂಕೆಗೆ ಸಮರ್ಥ ನಾಯಕತ್ವ ಕೊರತೆ
    * ಡಿಎಂಕೆಗೆ ಎಂಕೆ ಸ್ಟಾಲಿನ್ ನಾಯಕತ್ವ
    * ಅಣ್ಣಾ ಡಿಎಂಕೆಗೆ ಬಿಜೆಪಿ ಮೈತ್ರಿ ಮುಳುವು?
    * ಬಿಜೆಪಿಯಿಂದ ಶೂನ್ಯ ಸಂಪಾದನೆ
    * ಹಿಂದುತ್ವಕ್ಕೆ ಹೆಚ್ಚಿನ ಆದ್ಯತೆ ಸಿಗದೇ ಇರುವುದು
    * ರಾಷ್ಟ್ರೀಯ ರಾಜಕಾರಣಕ್ಕೂ ಅವಕಾಶ ಇಲ್ಲದಿರುವುದು

  • ಪುದುಚೇರಿ ಕಳೆದುಕೊಂಡ ಕಾಂಗ್ರೆಸ್ – ಅರಳಿದ ಕಮಲ

    ಪುದುಚೇರಿ ಕಳೆದುಕೊಂಡ ಕಾಂಗ್ರೆಸ್ – ಅರಳಿದ ಕಮಲ

    ನವದೆಹಲಿ: ನಾಲ್ಕು ರಾಜ್ಯಗಳ ಜೊತೆಯಲ್ಲಿ ಒಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಬಹುಮತ ಸಾಬೀತು ಮಾಡುವಲ್ಲಿ ವಿಫಲವಾದ ಪುದುಚೇರಿಯ ಕಾಂಗ್ರೆಸ್ ಸರ್ಕಾರ ಪತನವಾಗಿತ್ತು. ಈಗ ನಡೆದ ಚುನಾವಣೆಯಲ್ಲಿ ಪುದುಚೇರಿಯನ್ನ ಬಿಜೆಪಿ ತನ್ನ ತೆಕ್ಕಗೆ ತೆಗೆದುಕೊಳ್ಳಲಿದೆ ಎಂದು ಸಮೀಕ್ಷೆಗಳು ಹೇಳಿವೆ.

    ವಿಶ್ವಾಸಮತ ಸಾಬೀತುಪಡಿಸುವಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಡಿಎಂಕೆ ಜೊತೆ ಎದುರಿಸಿತ್ತು. ಆದ್ರೆ ತಮಿಳುನಾಡಿನಲ್ಲಿ ವರ್ಕೌಟ್ ಆದ ತಂತ್ರ ಇಲ್ಲಿ ಯಶಸ್ಸು ಕಂಡಿಲ್ಲ. ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪ್ರಮುಖ ನಾಯಕರು ಕಮಲ ಹಿಡಿದಿದ್ದರು. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ದೀದಿ ಅಧಿಕಾರಕ್ಕೆ

    ಯಾರಿಗೆ ಎಷ್ಟು ಕ್ಷೇತ್ರ: ಒಟ್ಟು ವಿಧಾನಸಭಾ ಕ್ಷೇತ್ರಗಳು-30

    ಇಂಡಿಯಾ ಟುಡೇ-ಆಕ್ಸಿನ್ ಮೈ ಇಂಡಿಯಾ
    ಕಾಂಗ್ರೆಸ್+: 6-10
    ಬಿಜೆಪಿ+: 20-24
    ಇತರೆ: 0-1

    ಟೈಮ್ಸ್ ನೌ-ಸಿ ವೋಟರ್
    ಕಾಂಗ್ರೆಸ್+: 6-10
    ಬಿಜೆಪಿ+: 19-23
    ಇತರೆ: 1-2

    ಸಿಎನ್‍ಎಕ್ಸ್
    ಕಾಂಗ್ರೆಸ್+: 11-13
    ಬಿಜೆಪಿ+: 16-20
    ಇತರೆ: 0

    ಜನ್ ಕಿ ಬಾತ್
    ಕಾಂಗ್ರೆಸ್+: 6-11
    ಬಿಜೆಪಿ+: 19-24
    ಇತರೆ: 0

    ಇದನ್ನೂ ಓದಿ: ಮಸ್ಕಿ, ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ – ಬೆಳಗಾವಿಯಲ್ಲಿ ಮತ್ತೆ ಬಿಜೆಪಿ

    2016ರ ಫಲಿತಾಂಶ: 2016ರಲ್ಲಿ 30 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 15ರಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಅಣ್ಣಾಡಿಎಂಕೆ- 04, ಡಿಎಂಕೆ- 02 ಮತ್ತು ಇತರರು ಒಂದು ಕ್ಷೇತ್ರದಲ್ಲಿ ಗೆದ್ದಿದ್ದರು. 33 ಸದಸ್ಯರ ಪುದುಚೇರಿಯ ವಿಧಾನಸಭೆಯಲ್ಲಿ ಮೂವರು ಕೇಂದ್ರ ಸರ್ಕಾರದಿಂದ ನೇಮಕ ಆಗಿರುತ್ತಾರೆ. ಇನ್ನುಳಿದ 30 ಸದಸ್ಯರು ಜನರಿಂದ ನೇರವಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿರುತ್ತಾರೆ.ಇದನ್ನೂ ಓದಿ: ಅಸ್ಸಾಂ ಚಹಾ ತೋಟದಲ್ಲಿ ಎರಡನೇ ಬಾರಿ ಅರಳಿದ ಕಮಲ

    ಇದನ್ನೂ ಓದಿ: ಕೇರಳದಲ್ಲಿ ಪಿಣರಾಯಿ ‘ವಿಜಯ’ನ್ ಪತಾಕೆ – ಒಂದಂಕಿಗೆ ಸೀಮಿತವಾದ ಬಿಜೆಪಿ

    ಇದನ್ನೂ ಓದಿ: ತಮಿಳುನಾಡಿನಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸಕ್ಸಸ್ – ಖಾತೆ ತೆರೆಯಲು ಕಮಲ್ ಹಾಸನ್ ಹರಸಾಹಸ

  • ತಮಿಳುನಾಡಿನಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸಕ್ಸಸ್ – ಖಾತೆ ತೆರೆಯಲು ಕಮಲ್ ಹಾಸನ್ ಹರಸಾಹಸ

    ತಮಿಳುನಾಡಿನಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸಕ್ಸಸ್ – ಖಾತೆ ತೆರೆಯಲು ಕಮಲ್ ಹಾಸನ್ ಹರಸಾಹಸ

    – ಬಿಜೆಪಿ ಜೊತೆಗೆ ಕಣಕ್ಕಿಳಿದಿದ್ದ ಎಐಡಿಎಂಕೆಗೆ ಸೋಲು

    ಚೆನ್ನೈ: ಪ್ರತಿ ಚುನಾವಣೆಯಂತೆ ತಮಿಳುನಾಡಿನಲ್ಲಿ ಒಂದೇ ಪಕ್ಷವನ್ನ ಬೆಂಬಲಿಸ್ತಾರೆ ಅನ್ನೋ ಮಾತು ಈ ಬಾರಿ ಸತ್ಯ ಆಗಿದೆ. ಜಯಲಲಿತಾ ಮತ್ತು ಕರುಣಾನಿಧಿ ಇಲ್ಲದ ಮೊದಲ ಚುನಾವಣೆ ಇದಾಗಿದ್ದು, ಜನರು ಕಾಂಗ್ರೆಸ್ ಮೈತ್ರಿಯನ್ನ ಒಪ್ಪಿಕೊಂಡಿದ್ದಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ ಹಿನ್ನೆಲೆ ಎರಡೂ ರಾಷ್ಟ್ರೀಯ ಪಕ್ಷಗಳ ನೇರವಾಗಿ ಕಣಕ್ಕಿಳಿದಿರಲಿಲ್ಲ.

    ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಮತ್ತು ಕಾಂಗ್ರೆಸ್ಸಿನ ರಾಹುಲ್ ಗಾಂಧಿ ಜೋಡಿಯನ್ನ ಜನ ಒಪ್ಪಿ ಮತ ನೀಡಿದ್ದಾರೆ. ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳದಲ್ಲಿ ನಿರಾಸೆ ಕಂಡಿದ್ದ ಕಾಂಗ್ರೆಸ್ ಗೆ ತಮಿಳುನಾಡಿನ ಗೆಲುವು ಮುಂದಿನ ರಾಜಕಾರಣಕ್ಕೆ ಆಸರೆ ಸಿಕ್ಕಂತಾಗಿದೆ. ಇದನ್ನೂ ಓದಿ: ಅಸ್ಸಾಂ ಚಹಾ ತೋಟದಲ್ಲಿ ಎರಡನೇ ಬಾರಿ ಅರಳಿದ ಕಮಲ

    ಯಾರಿಗೆ ಎಷ್ಟು ಕ್ಷೇತ್ರ?: ತಮಿಳುನಾಡು ಒಟ್ಟು ವಿಧಾನಸಭಾ ಕ್ಷೇತ್ರಗಳು – 232

    ಇಂಡಿಯಾ ಟುಡೇ-ಆಕ್ಸಿನ್ ಮೈ ಇಂಡಿಯಾ
    ಎಐಎಡಿಎಂಕೆ+ಬಿಜೆಪಿ: 38-54
    ಡಿಎಂಕೆ+ಕಾಂಗ್ರೆಸ್: 175-195
    ಎಎಂಎಂಕೆ+: 1-2
    ಎಂಎನ್‍ಎಂ+: 0-2

    ಟೈಮ್ಸ್ ನೌ-ಸಿ ವೋಟರ್
    ಎಐಎಡಿಎಂಕೆ+ಬಿಜೆಪಿ: 64
    ಡಿಎಂಕೆ+ಕಾಂಗ್ರೆಸ್: 166
    ಎಎಂಎಂಕೆ+: 1
    ಎಂಎನ್‍ಎಂ+: 1

    ಟುಡೇಸ್ ಚಾಣಕ್ಯ
    ಎಐಎಡಿಎಂಕೆ+ಬಿಜೆಪಿ: 46-68
    ಡಿಎಂಕೆ+ಕಾಂಗ್ರೆಸ್: 164-186
    ಎಎಂಎಂಕೆ+: 0
    ಇತರೆ: 0-8

    ಸಿಎನ್‍ಎಕ್ಸ್
    ಎಐಎಡಿಎಂಕೆ+ಬಿಜೆಪಿ: 58-68
    ಡಿಎಂಕೆ+ಕಾಂಗ್ರೆಸ್: 160-170
    ಎಎಂಎಂಕೆ+: 4-6
    ಎಂಎನ್‍ಎಂ+: 0-2

    ಜನ್ ಕೀ ಬಾತ್:
    ಎಐಎಡಿಎಂಕೆ+ಬಿಜೆಪಿ: 102-123
    ಡಿಎಂಕೆ+ಕಾಂಗ್ರೆಸ್: 110-130
    ಎಎಂಎಂಕೆ+: 0
    ಇತರೆ: 1-2

    ರಾಹುಲ್ ಗಾಂಧಿ ಸಾಲು ಸಾಲು ಸಮಾವೇಶ, ವಿದ್ಯಾರ್ಥಿಗಳ ಸಂವಾದ, ಗ್ರಾಮೀಣ ಭಾಗದಲ್ಲಿ ಮಿಂಚಿನ ಸಂಚಾರ ತಮಿಳುನಾಡಿನಲ್ಲಿ ಕಾಂಗ್ರೆಸ್ ಕೈ ಹಿಡಿದೆ. ಆಡಳಿತ ವಿರೋಧಿ ಅಲೆ ಜೊತೆ ಬಿಜೆಪಿಯೊಂದಿಗಿನ ಮೈತ್ರಿ ಅಣ್ಣಾಡಿಎಂಕೆಗೆ ಶಾಕ್ ನೀಡಿದೆ. ಇತ್ತ ಮೊದಲ ಬಾರಿಗೆ ಎಂಎನ್‍ಎಂ ಪಕ್ಷ ಸ್ಥಾಪಿಸಿ ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದ ನಟ ಕಮಲ್ ಹಾಸನ್ ಮತ್ತು ಟಿಟಿವಿ ದಿನಕರನ್ ಎಎಂಎಂಕೆ ಖಾತೆ ತರೆಯಲು ಹರಸಾಹಸ ಪಟ್ಟಿವೆ.  ಇದನ್ನೂ ಓದಿ: ಮಸ್ಕಿ, ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ – ಬೆಳಗಾವಿಯಲ್ಲಿ ಮತ್ತೆ ಬಿಜೆಪಿ

    2016ರ ಫಲಿತಾಂಶ: ಒಟ್ಟು 232 ಕ್ಷೇತ್ರಗಳಲ್ಲಿ ಅಣ್ಣಾಡಿಎಂಕೆ 134ರಲ್ಲಿ ಗೆದ್ದು ಅಧಿಕಾರ ರಚಿಸಿತ್ತು. ಡಿಎಂಕೆ 89, ಕಾಂಗ್ರೆಸ್ 08 ಮತ್ತು ಇತರರು ಒಂದರಲ್ಲಿ ಗೆಲುವು ದಾಖಲಿಸಿದ್ದರು. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ದೀದಿ ಅಧಿಕಾರಕ್ಕೆ

    ಇದನ್ನೂ ಓದಿ: ಕೇರಳದಲ್ಲಿ ಪಿಣರಾಯಿ ‘ವಿಜಯ’ನ್ ಪತಾಕೆ – ಒಂದಂಕಿಗೆ ಸೀಮಿತವಾದ ಬಿಜೆಪಿ

  • ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ – ಡಿಎಂಕೆಯ ಸ್ಟಾಲಿನ್ ಅಳಿಯನಿಗೆ ಐಟಿ ಶಾಕ್

    ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ – ಡಿಎಂಕೆಯ ಸ್ಟಾಲಿನ್ ಅಳಿಯನಿಗೆ ಐಟಿ ಶಾಕ್

    ದಿಸ್ಪುರ್: ಪಂಚರಾಜ್ಯ ಚುನಾವಣಾ ರಾಜಕೀಯ ಜೋರಾಗಿದೆ. ಅಕ್ರಮಗಳೂ ಜೋರಾಗಿದೆ. ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಮತಯಂತ್ರಗಳು ಪತ್ತೆ ಆಗಿವೆ.

    ನಿನ್ನೆ ಅಸ್ಸಾಂನಲ್ಲಿ ಮುಗಿದ 2ನೇ ಹಂತದ ಮತದಾನದ ಬಳಿಕ ಕರೀಮ್ ಗಂಜ್ ಜಿಲ್ಲೆಯ ಪಥರ್ ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣೇಂದು ಪೌಲ್ ಕಾರಿನಲ್ಲಿ ಇವಿಎಂಗಳು ಕಂಡುಬಂದಿದ್ದವು. ಪ್ರತಿಭಟಿಸಿದ ಜನರ ಮೇಲೆ ಪೊಲೀಸರು ಬಲ ಪ್ರಯೋಗ ಮಾಡಿದ್ರು. ಗಾಳಿಯಲ್ಲಿ ಗುಂಡು ಹಾರಿಸಿ ಲಾಠಿ ಕೂಡ ಬೀಸಿದ್ರು.

    ಈ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಸೂಕ್ತ ಕ್ರಮ ಆಗದಿದ್ರೆ ಎಲೆಕ್ಷನ್ ಬಹಿಷ್ಕರಿಸುವ ಬೆದರಿಕೆ ಆಗಿತ್ತು. ಇಂದು ಮಧ್ಯಾಹ್ನ ಸ್ಪಂದಿಸಿದ ಚುನಾವಣಾ ಆಯೋಗ, ನಾಲ್ವರು ಮತಗಟ್ಟೆ ಅಧಿಕಾರಿಗಳನ್ನು ಅಮಾನತು ಮಾಡಿದೆ. ಆ ಇವಿಎಂ ಇದ್ದ ಮತಗಟ್ಟೆಯಲ್ಲಿ ಮರುಮತದಾನ ನಡೆಸಲು ಮುಂದಾಗಿದೆ. ಅಯ್ಯೋ ನಾವೇನು ಇವಿಎಂ ಕದ್ದಿರಲಿಲ್ಲ. ಸಿಬ್ಬಂದಿಗೆ ಹೆಲ್ಪ್ ಮಾಡಿದ್ವಿ ಅಷ್ಟೇ ಎಂದು ಬಿಜೆಪಿಯ ಕೃಷ್ಣೆಂದು ಹೇಳಿದ್ದಾರೆ.

    ಈ ಮಧ್ಯೆ ಡಿಎಂಕೆ ಪಕ್ಷದ ಮುಖ್ಯಸ್ಥ ಸ್ಟಾಲಿನ್ ಅಳಿಯ ಸೇರಿದಂತೆ ನಾಲ್ವರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ ನಡೆದಿದೆ. ಇದನ್ನು ಖಂಡಿಸಿರುವ ಎಂಕೆ ಸ್ಟಾಲಿನ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬೆನ್ನಲ್ಲೇ ಮೋದಿಜೀ ನಮ್ಮ ಕ್ಷೇತ್ರಕ್ಕೆ ಬಂದು ನಮ್ಮ ಎದುರಾಳಿಗಳ ಪರ ಪ್ರಚಾರ ಮಾಡಿ.. ನಾವು ಸುಲಭವಾಗಿ ಗೆಲ್ತೀವಿ ಎಂದು ಡಿಎಂಕೆ ಅಭ್ಯರ್ಥಿಗಳು ವಿಚಿತ್ರ ಬೇಡಿಕೆ ಇಟ್ಟಿದ್ದಾರೆ. ಅಮಿತ್ ಷಾ ಕಣ್ಸನ್ನೆಯಲ್ಲಿ ಬಂಗಾಳ ಚುನಾವಣೆ ನಡೆಯುತ್ತಿದೆ.. ಭಾರೀ ಅಕ್ರಮಗಳು ನಡೆಯುತ್ತಿವೆ ಎಂದು ಸಿಎಂ ಮಮತಾ ಬ್ಯಾನರ್ಜಿ ಆಕ್ರೋಶ ಹೊರಹಾಕಿದ್ದಾರೆ.

    ರಾಬರ್ಟ್ ವಾದ್ರಾಗೆ ಕೊರೋನಾ ಬಂದ ಕಾರಣ ಪ್ರಿಯಾಂಕಾ ಗಾಂಧಿ ಸೆಲ್ಫ್ ಕ್ವಾರಂಟೇನ್ ಆಗಿದ್ದು, ಪ್ರಚಾರದಿಂದ ದೂರ ಉಳಿದಿದ್ದಾರೆ.

  • ಕಾಂಗ್ರೆಸ್ಸನ್ನ ಎಷ್ಟು ದಿನ ಪಲ್ಲಕ್ಕಿಯಲ್ಲಿ ಮೆರೆಸೋದು: ಡಿಎಂಕೆ ಶಾಸಕ ಕಿಡಿ

    ಕಾಂಗ್ರೆಸ್ಸನ್ನ ಎಷ್ಟು ದಿನ ಪಲ್ಲಕ್ಕಿಯಲ್ಲಿ ಮೆರೆಸೋದು: ಡಿಎಂಕೆ ಶಾಸಕ ಕಿಡಿ

    ಚೆನ್ನೈ: ಯುಪಿಎ ಒಕ್ಕೂಟದ ದ್ರಾವಿಡ ಮುನ್ನೇಟು ಕಳಗಂ (ಡಿಎಂಕೆ) ಪಕ್ಷದ ಶಾಸಕರೊಬ್ಬರು ಕಾಂಗ್ರೆಸ್ ವಿರುದ್ಧವೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

    ಕಾಂಗ್ರೆಸ್ಸನ್ನು ಎಷ್ಟು ದಿನ ಪಲ್ಲಕ್ಕಿಯಲ್ಲಿ ಕುರಿಸಿ ಮೆರೆಸುವುದು? ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಾದರೂ ನಾವು ಏಕಾಂಗಿಯಾಗಿ ಕಣಕ್ಕೆ ಇಳಿಯೋಣ ಎಂದು ಡಿಎಂಕೆ ಶಾಸಕ ಕೆ.ಎನ್.ನೆಹರು ಹೇಳಿದ್ದಾರೆ.

    ನೀರಿನ ಹಾಹಾಕಾರ ಸಂಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಡಿಎಂಕೆ ತಿರುಚ್ಚಿಯಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲದೆ ಈ ಬಾರಿ ಸ್ಥಳೀಯ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸಬೇಕು. ಇದು ನನ್ನ ಅನಿಸಿಕೆ ಮಾತ್ರ. ಆದರೆ ಪಕ್ಷದ ನಾಯಕ ಎಂ.ಕೆ.ಸ್ಟಾಲಿನ್ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಅವರು ಒಂದು ವೇಳೆ ಕಾಂಗ್ರೆಸ್ ಅನ್ನು ಹೆಗಲ ಮೇಲೆ ಹೊರಬೇಕೆಂದು ತಿಳಿಸಿದರೆ ಹೊತ್ತು ಸಾಗಲು ನಾನು ಸಿದ್ಧನಿರುವೆ ಎಂದರು.

    ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಜೊತೆಗೆ ಡಿಎಂಕೆ ಮೈತ್ರಿ ಸಾಧಿಸಿತ್ತು. ಈ ಮೂಲಕ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 8ರಲ್ಲಿ ಜಯಗಳಿಸಿತ್ತು. ಡಿಎಂಕೆ ಕಣಕ್ಕಿಳಿದಿದ್ದ 23 ಕ್ಷೇತ್ರಗಳಲ್ಲಿ ಭರ್ಜರಿ ಗೆಲವು ಸಾಧಿಸಿತ್ತು. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಐಎಡಿಎಂಕೆ ಕೇವಲ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಭಾರೀ ಹಿನ್ನಡೆ ಅನುಭವಿಸಿತ್ತು.

    ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಕಾಂಗ್ರೆಸ್ ನೇತೃತ್ವದ ಯುಪಿಎ ಒಕ್ಕೂಟದಿಂದ ಹೊರ ಬರುತ್ತಾರೆ ಎಂಬ ಚರ್ಚೆ ಶುರುವಾಗಿತ್ತು. ಆದರೆ ಅವರು ಕಾಂಗ್ರೆಸ್ ಜೊತೆಗೆ ಇರುವುದಾಗಿ ಸ್ಪಷ್ಟನೆ ನೀಡಿ, ಊಹಾಪೋಹಗಳಿಗೆ ತೆರೆ ಎಳೆದಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ತೃತೀಯ ರಂಗ ಸಾಧ್ಯವಿಲ್ಲ, ಯುಪಿಎ ಬೆಂಬಲಿಸಿ: ಕೆಸಿಆರ್‌ಗೆ ಸ್ಟಾಲಿನ್ ಸಲಹೆ

    ತೃತೀಯ ರಂಗ ಸಾಧ್ಯವಿಲ್ಲ, ಯುಪಿಎ ಬೆಂಬಲಿಸಿ: ಕೆಸಿಆರ್‌ಗೆ ಸ್ಟಾಲಿನ್ ಸಲಹೆ

    ಚೆನ್ನೈ: ತೃತೀಯ ರಂಗ ರಚನೆ ಸಾಧ್ಯವಿಲ್ಲ, ಕಾಂಗ್ರೆಸ್ ನೇತೃತ್ವದ ಯುಪಿಎಗೆ ಬೆಂಬಲ ನೀಡಿ ಎಂದು ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಸಲಹೆ ನೀಡಿದ್ದಾರೆ.

    ಕಾಂಗ್ರೆಸ್ ಹಾಗೂ ಬಿಜೆಪಿ ಹೊರತಾಗಿ ತೃತೀಯ ರಂಗ ರಚನೆ ಕುರಿತಾಗಿ ಕೆ.ಚಂದ್ರಶೇಖರ್ ರಾವ್ ಅವರು ಸೋಮವಾರವಷ್ಟೇ ಸ್ಟಾಲಿನ್ ಅವರನ್ನು ಭೇಟಿಯಾಗಿದ್ದರು. ಆದರೆ ಸ್ಟಾಲಿನ್ ಈ ವಿಚಾರದಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.

    ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಎಂ.ಕೆ.ಸ್ಟಾಲಿನ್ ಅವರು, ತೃತೀಯ ರಂಗ ರಚನೆಯ ವಿಚಾರವಾಗಿ ಕೆ.ಚಂದ್ರಶೇಖರ್ ಯಾವುದೇ ಚರ್ಚೆ ಮಾಡಿಲ್ಲ. ತಮಿಳುನಾಡಿನ ದೇವಸ್ಥಾನ, ಪವಿತ್ರ ಕ್ಷೇತ್ರಗಳಿಗೆ ಆಗಮಿಸಿದ್ದ ಹಿನ್ನೆಯಲ್ಲಿ ನನ್ನನ್ನು ಭೇಟಿ ಮಾಡಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

    ಕೆ.ಚಂದ್ರಶೇಖರ್ ರಾವ್ ಹಾಗೂ ಸ್ಟಾಲಿನ್ ಅವರು ಸೋಮವಾರ ಸುಮಾರು ಒಂದು ಗಂಟೆಗಳ ಕಾಲ ಸಭೆ ನಡೆಸಿದ್ದರು. ಈ ವೇಳೆ ತೃತೀಯ ರಂಗ ಕಾರ್ಯಸೂಚಿಯ ಬಗ್ಗೆ ಕೆಸಿ ರಾವ್ ಅವರು ತಿಳಿಸಿದ್ದಾರೆ. ಆದರೆ ಇದಕ್ಕೆ ಎಂ.ಕೆ.ಸ್ಟಾಲಿನ್ ಅವರು ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡಿಲ್ಲ ಹಾಗೂ ಕಾಂಗ್ರೆಸ್ ಜೊತೆಗಿನ ಮೈತ್ರಿ ಬಿಡಲು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ನಾವು ಕಾಂಗ್ರೆಸ್ ಮೈತ್ರಿಕೂಟದಿಂದ ಹೊರಬರುವುದಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಪ್ರಸ್ತಾಪಿಸಿದ್ದೇನೆ. ಈ ವಿಚಾರಕ್ಕೆ ಡಿಎಂಕೆ ಬದ್ಧವಾಗಿದೆ. ನಮ್ಮ ನಿಲುವು ಬಿಜೆಪಿ ವಿರುದ್ಧವಾಗಿದೆ. ಹೀಗಾಗಿ ನೀವು ಕೂಡ ಯುಪಿಎ ಬೆಂಬಲಿಸಿ ಎಂದು ಸ್ಟಾಲಿನ್, ಕೆಸಿ ರಾವ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕೆ.ಚಂದ್ರಶೇಖರ್ ರಾವ್ ಅವರು, ಕಾಂಗ್ರೆಸ್ ಜೊತೆಗೆ ಮಹಾಮೈತ್ರಿಯ ಜೊತೆಗೆ ಚುನಾವಣೆ ಎದುರಿಸಿದ್ದರೂ ಪ್ರಾದೇಶಿಕ ಪಕ್ಷಗಳು ಸರ್ಕಾರ ರಚಿಸಲು ಒಂದಾಗಬಹುದು. ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಬಹುಮತ ಸಾಧಿಸುವುದಿಲ್ಲ ಎಂದು ಹೇಳಿದ್ದಾರೆ.

  • ವೆಲ್ಲೂರು ಲೋಕಸಭಾ ಚುನಾವಣೆ ರದ್ದು

    ವೆಲ್ಲೂರು ಲೋಕಸಭಾ ಚುನಾವಣೆ ರದ್ದು

    ಚೆನ್ನೈ: ತಮಿಳುನಾಡಿನ ವೆಲ್ಲೂರು ಲೋಕಸಭಾ ಚುನಾವಣೆ ರದ್ದುಗೊಳಿಸಲು ಚುನಾವಣಾ ಆಯೋಗ ಸಲ್ಲಿಸಿದ್ದ ಪತ್ರಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಒಪ್ಪಿಗೆ ಸೂಚಿಸಿದ್ದಾರೆ.

    ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಡಿಎಂಕೆ ಮುಖಂಡರ ಮನೆಯಲ್ಲಿ ಕಳೆದ ಎರಡು ವಾರಗಳಿಂದ ಅಪಾರ ಪ್ರಮಾಣದಲ್ಲಿ ಅಕ್ರಮ ಹಣ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದುಗೊಳಿಸಲು ಅನುಮತಿ ಕೋರಿ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಪತ್ರ ಬರೆದಿತ್ತು.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಚುನಾವಣಾ ಆಯೋಗವು, ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದುಗೊಳಿಸಲು ಏಪ್ರಿಲ್ 14ರಂದು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿತ್ತು. ಅವರು ಶಿಫಾರಸನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದೆ.

    ಈ ಮೂಲಕ ಇದೇ ಮೊದಲ ಬಾರಿಗೆ ಹಣ ದುರ್ಬಳಕೆ ಆರೋಪದ ಮೇಲೆ ರಾಷ್ಟ್ರಪತಿಗಳಿಂದ ಅನುಮತಿ ಪಡೆದು ಲೋಕಸಭಾ ಕ್ಷೇತ್ರವೊಂದರ ಚುನಾವಣೆ ರದ್ದು ಮಾಡಲಾಗಿದೆ.

    ಆಗಿದ್ದೇನು?:
    ತಮಿಳುನಾಡಿನಲ್ಲಿ ವೆಲ್ಲೂರು ಸೇರಿದಂತೆ 38 ಲೋಕಸಭಾ ಕ್ಷೇತ್ರ ಚುನಾವಣೆ ಏಪ್ರಿಲ್ 18ರಂದು ನಿಗದಿಯಾಗಿತ್ತು. ವೆಲ್ಲೂರು ಕ್ಷೇತ್ರದಿಂದ ಒಟ್ಟು 23 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಆದರೆ ಡಿಎಂಕೆ ನಾಯಕ ದೊರೈ ಮುರುಗನ್ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆಯು ಏಪ್ರಿಲ್ 10ರಂದು ದಾಳಿ ಮಾಡಿತ್ತು. ಈ ವೇಳೆ ಅವರ ಗೋದಾಮಿನಲ್ಲಿ ಬರೋಬ್ಬರಿ 11.53 ಕೋಟಿ ರೂ. ಹಣ ಪತ್ತೆಯಾಗಿತ್ತು. ಹೀಗಾಗಿ ಈ ಹಣವು ದೊರೈ ಮುರುಗನ್ ಅವರಿಗೆ ಸೇರಿದ್ದು ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿದ್ದವು.

    ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದ್ದರಿಂದ ಹಣದಿಂದ ಮತದಾರರನ್ನು ಓಲೈಸುವ ಪ್ರಯತ್ನ ನಡೆಸಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಚುನಾವಣಾ ಆಯೋಗವು ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದು ಮಾಡಲು ಅನುಮತಿ ಕೋರಿ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿತ್ತು.

  • ಕಂತೆ ಕಂತೆ ನೋಟು ಪತ್ತೆ – ವೆಲ್ಲೂರು ಲೋಕಸಭಾ ಚುನಾವಣೆ ರದ್ದು?

    ಕಂತೆ ಕಂತೆ ನೋಟು ಪತ್ತೆ – ವೆಲ್ಲೂರು ಲೋಕಸಭಾ ಚುನಾವಣೆ ರದ್ದು?

    ಚೆನ್ನೈ: ಡಿಎಂಕೆ ಮುಖಂಡರ ಮನೆಯಲ್ಲಿ ಕಳೆದ ಎರಡು ವಾರಗಳಿಂದ ಅಪಾರ ಪ್ರಮಾಣದಲ್ಲಿ ಅಕ್ರಮ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದು ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

    ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದೆ. ಈ ಮೂಲಕ ಹಣದಿಂದ ಮತದಾರರನ್ನು ಓಲೈಸುವ ಪ್ರಯತ್ನ ನಡೆಸಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಚುನಾವಣಾ ಆಯೋಗವು ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದು ಮಾಡಲು ಅನುಮತಿ ಕೋರಿ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದೆ. ರಾಷ್ಟ್ರಪತಿಗಳು ಪತ್ರಕ್ಕೆ ಸಹಿ ಹಾಕಿದರೆ ಚುನಾವಣೆ ರದ್ದಾಗಲಿದೆ.

    ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 18ರಂದು ನಡೆಯಲಿದೆ. ಅಷ್ಟೇ ಅಲ್ಲದೆ ವೆಲ್ಲೂರು ವ್ಯಾಪ್ತಿಯ ಅಂಬೂರ್ ಹಾಗೂ ಗುಡಿಯಾಟ್ಯಾಮ್ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಕೂಡ ನಡೆಯಲಿದೆ. ಆದರೆ ಈ ಎರಡೂ ಕ್ಷೇತ್ರಗಳ ಚುನಾವಣೆ ರದ್ದು ಮಾಡಲಾಗುತ್ತದೆಯೋ ಇಲ್ಲವೋ ಎನ್ನುವುದು ಸ್ಪಷ್ಟವಾಗಿಲ್ಲ.

    ಡಿಎಂಕೆ ನಾಯಕ ದೊರೈ ಮುರುಗನ್ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ದಾಳಿಯ ಮಾಡಿತ್ತು. ಈ ವೇಳೆ ಅವರ ಗೋದಾಮಿನಲ್ಲಿ ಬರೋಬ್ಬರಿ 11.53 ಕೋಟಿ ರೂ. ಹಣ ಪತ್ತೆಯಾಗಿತ್ತು. ಹೀಗಾಗಿ ಈ ಹಣವು ದೊರೈ ಮುರುಗನ್ ಅವರಿಗೆ ಸೇರಿದ್ದು ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿದ್ದವು.

    ಐಟಿ ದಾಳಿಯನ್ನು ಖಂಡಿಸಿದ್ದ ಡಿಎಂಕೆ ನಾಯಕರು, ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಆರೋಪಿಸಿದ್ದರು. ಇತ್ತ ದೊರೈ ಮುರುಗನ್ ಅವರು ಐಟಿ ರೇಡ್‍ನಿಂದ ಚುನಾವಣೆ ಪ್ರಚಾರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಗೆ ದೂರು ನೀಡಿದ್ದಾರೆ.

  • ಕರ್ನಾಟಕದ ಬಳಿಕ ತಮಿಳುನಾಡಿನಲ್ಲಿ ಐಟಿ ದಾಳಿ

    ಕರ್ನಾಟಕದ ಬಳಿಕ ತಮಿಳುನಾಡಿನಲ್ಲಿ ಐಟಿ ದಾಳಿ

    -ಡಿಎಂಕೆ ಖಜಾಂಜಿ ಮೇಲೆ ಐಟಿ ಕಣ್ಣು

    ಚೆನ್ನೈ: ಲೋಕಸಭಾ ಹೊತ್ತಿನಲ್ಲಿಯೇ ಕರ್ನಾಟಕದ ಬಳಿಕ ತಮಿಳುನಾಡಿನಲ್ಲೂ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತಮಿಳುನಾಡಿನ ವೆಲ್ಲೋರ್ ಜಿಲ್ಲೆಯ ಕಟ್ಟಾಡಿಯಲ್ಲಿರುವ ಡಿಎಂಕೆ ಖಜಾಂಚಿ ದೊರೈ ಮುರುಗನ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಜೊತೆಗೆ ಸೇರಿ ಚುನಾವಣಾ ಅಧಿಕಾರಿಗಳು ಬೆಳಗ್ಗೆ ದಾಳಿ ನಡೆಸಿದ್ದಾರೆ.

    ದೊರೈ ಮುರುಗನ್ ನಿವಾಸದಲ್ಲಿ ಅಕ್ರಮ ಹಣದ ವಹಿವಾಟು ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಚುನಾವಣಾ ಆಯೋಗಕ್ಕೆ ಸಿಕ್ಕಿತ್ತು. ಹೀಗಾಗಿ ಐಟಿ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳು ಶುಕ್ರವಾರ ರಾತ್ರಿ ದೊರೈ ಮುರುಗನ್ ಅವರ ಮನೆಗೆ ಆಗಮಿಸಿದ್ದರು. ಈ ವೇಳೆ ದೊರೈ ಮುರುಗನ್, ಪುತ್ರ (ವೆಲ್ಲೋರ್) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನೆಯಲ್ಲಿದ್ದರು ಎಂದು ವರದಿಯಾಗಿದೆ.

    ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ ಎರಡು ಗಂಟೆಗೆ ಬಳಿಕ ಬಂದ ಡಿಎಂಕೆ ಪಕ್ಷದ ಕಾನೂನು ತಂಡವು, ಸರ್ಚ್ ವಾರಂಟ್ ನೀಡುವಂತೆ ಕೇಳಿದ್ದರು. ಜೊತೆಗೆ ತನಿಖೆಯನ್ನು ನಿಲ್ಲಿಸುವಂತೆ ಒತ್ತಡ ಹೇರಿದ್ದರು. ಇದರಿಂದಾಗಿ ನಿನ್ನೆ ರಾತ್ರಿ ಕಾರ್ಯಾಚರಣೆ ಕೈಬಿಟ್ಟಿದ್ದ ತಂಡವು ಇಂದು ಬೆಳಂಬೆಳಗ್ಗೆ ಮತ್ತೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ.

    ಐಟಿ ಅಧಿಕಾರಿಗಳ ಐದು ತಂಡಗಳು ದೊರೈ ನಿವಾಸ ಸೇರಿದಂತೆ ಕಿಂಗ್ಸ್ ಟನ್ ಎಂಜಿನಿಯರಿಂಗ್ ಕಾಲೇಜ್, ಬಿಎಡ್ ಕಾಲೇಜ್ ಮತ್ತು ಫಾರ್ಮಹೌಸ್ ಮೇಲೂ ದಾಳಿ ನಡೆಸಿವೆ. ಇದಕ್ಕೆ ಡಿಎಂಕೆ ಭಾರೀ ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ ಭದ್ರತೆಯ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.

    ಐಟಿ ದಾಳಿಯು ರಾಜಕೀಯ ಪ್ರೇರಿತವಾಗಿದೆ. ಅಧಿಕಾರಿಗಳು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಆರಕ್ಕೊನಮ್ ಲೋಕಸಭಾ ವ್ಯಾಪ್ತಿಯಲ್ಲಿ ಶೋಧ ಕಾರ್ಯಕ್ಕೆ ವಾರಂಟ್ ತಂದು ವೆಲ್ಲೋರ್ ನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಡಿಎಂಕೆ ಕಾನೂನು ವಿಭಾಗದ ಜಂಟಿ ಕಾರ್ಯದರ್ಶಿ ಪರಂದಾಮನ್ ದೂರಿದ್ದಾರೆ.