Tag: ಡಿಮಾಂಡ್

  • ಅಮೆಜಾನ್ ತೆಕ್ಕೆಗೆ ಕಬ್ಜ: ಭಾರೀ ಮೊತ್ತಕ್ಕೆ ಸೇಲ್ ಆಯಿತು ಆರ್.ಚಂದ್ರು ನಿರ್ದೇಶನದ ಚಿತ್ರ

    ಅಮೆಜಾನ್ ತೆಕ್ಕೆಗೆ ಕಬ್ಜ: ಭಾರೀ ಮೊತ್ತಕ್ಕೆ ಸೇಲ್ ಆಯಿತು ಆರ್.ಚಂದ್ರು ನಿರ್ದೇಶನದ ಚಿತ್ರ

    ಕೆಜಿಎಫ್ ಸಿನಿಮಾದ ನಂತರ ಮತ್ತೊಂದು ಕನ್ನಡದ ಭಾರೀ ಬಜೆಟ್ ಸಿನಿಮಾ ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಆರ್.ಚಂದ್ರು ನಿರ್ದೇಶನದ ಕಬ್ಜ (Kabzaa) ಸಿನಿಮಾವನ್ನು ನೂರಾರು ಕೋಟಿ ಕೊಟ್ಟು ಅಮೆಜಾನ್ ಪ್ರೈಮ್ ಖರೀದಿಸಿದ್ದು, ಬಲ್ಲ ಮೂಲಗಳ ಪ್ರಕಾರ ಕೆಜಿಎಫ್ 2 ಸಿನಿಮಾವನ್ನು ಖರೀದಿಸಿದಷ್ಟೇ ಈ ಸಿನಿಮಾವನ್ನೂ ಕೊಂಡುಕೊಳ್ಳಲಾಗಿದೆ. ಹಾಗಾಗಿ ಕನ್ನಡದ ಮತ್ತೊಂದು ಸಿನಿಮಾಗೆ ಡಿಮಾಂಡ್ ಕ್ರಿಯೇಟ್ ಆಗಿದೆ.

    ಅಮೆಜಾನ್ ಪ್ರೈಮ್ ನಲ್ಲಿ ಭಾರತೀಯ ಸಿನಿಮಾ ರಂಗದಲ್ಲೇ ಅತೀ ಹೆಚ್ಚು ಹಣಕೊಟ್ಟು ಖರೀದಿಸಿದ ಸಿನಿಮಾ ಕೆಜಿಎಫ್ 2 ಎಂದು ಬಣ್ಣಿಸಲಾಗಿತ್ತು. ಇದೀಗ ಕಬ್ಜ ಕೂಡ ಅದೇ ಸಾಲಿಗೆ ಸೇರಿದೆ. ಈ ಪ್ರಮಾಣದ ಮೊತ್ತಕ್ಕೆ ಕಬ್ಜ ಸಿನಿಮಾ ಸೇಲ್ ಆಗಿದ್ದಕ್ಕೆ ಮೇಕಿಂಗ್ ಮತ್ತು ಸ್ಟಾರ್ ಗಳ ಕಾಂಬಿನೇಷನ್ ಕಾರಣ ಎಂದು ಹೇಳಲಾಗುತ್ತಿದೆ. ಟೀಸರ್ ಬಿಡುಗಡೆಗೂ ಮುನ್ನವೇ ಹಲವು ಓಟಿಟಿ ವೇದಿಕೆಗಳು ನಿರ್ದೇಶಕರನ್ನು ಸಂಪರ್ಕಿಸಿದ್ದವು. ಆಗ ಹೇಳಿದ ಮೊತ್ತಕ್ಕೂ ಟೀಸರ್ ಬಿಡುಗಡೆಯಾದ ನಂತರ ಆಗಿರುವ ವ್ಯಾಪಾರಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದೂ ಹೇಳಲಾಗುತ್ತಿದೆ. ಇದನ್ನೂ ಓದಿ:ರೂಪೇಶ್‌ಗೆ ಕೊನೆಯುಸಿರು ಇರುವವರೆಗೂ ಪ್ರೀತಿ ಮಾಡುತ್ತೀನಿ ಎಂದ ಸಾನ್ಯ

    ಉಪೇಂದ್ರ (Upendra) ಮತ್ತು ಸುದೀಪ್ (Sudeep) ಕಾಂಬಿನೇಷನ್ ಕಬ್ಜ ಸಿನಿಮಾದ ಟೀಸರ್ ರಿಲೀಸ್ ಆದ ನಂತರ, ಈ ಸಿನಿಮಾವನ್ನೂ ಕೆಜಿಎಫ್ ಚಿತ್ರಕ್ಕೆ ಹೋಲಿಸಲಾಗುತ್ತಿದೆ. ಅದ್ಧೂರಿ ಮೇಕಿಂಗ್, ಸ್ಟಾರ್ ನಟರ ಸಮಾಗಮಾ, ಆರ್.ಚಂದ್ರು (R. Chandru) ಅವರ ಈವರೆಗೂ ಸಕ್ಸಸ್ ಮತ್ತು ಸಿನಿಮಾದ ಗುಣಮಟ್ಟದ ಕಾರಣದಿಂದಾಗಿ ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಕಬ್ಜಗೆ ಬೇಡಿಕೆ ಹೆಚ್ಚಾಗಿದೆ. ಈ ಕಾರಣದಿಂದಾಗಿಯೇ ಒಂಬತ್ತು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದೆ.

    ಸಿನಿ ಪಂಡಿತರ ಲೆಕ್ಕಾಚಾರದಂತೆ ಕಬ್ಜ ಸಿನಿಮಾ ಕೂಡ ಭಾರತೀಯ ಸಿನಿಮಾ ರಂಗದಲ್ಲಿ ದಾಖಲೆ ಬರೆಯಲಿದೆ ಎಂದು ಅಂದಾಜಿಸಲಾಗಿದೆ. ದೇಶ ಮತ್ತು ವಿದೇಶಗಳಲ್ಲಿ ಸೇರಿ ಸಾವಿರಾರು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಕೂಡ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಹಲವು ಅಚ್ಚರಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು. ಸಿನಿಮಾಗೆ ಭಾರೀ ಬೇಡಿಕೆ (Demand) ಬಂದ ಕಾರಣದಿಂದಾಗಿ ಸದ್ಯ ನಿರ್ದೇಶಕರು ಮುಂಬೈನಲ್ಲಿ ಬೀಡು ಬಿಟ್ಟಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ನಟಿ ಚೈತ್ರಾ ಹಳ್ಳಿಕೇರಿ 25 ಕೋಟಿ  ಬೇಡಿಕೆ ಇಟ್ಟರಾ? ನಟಿಯ ಆರೋಪಕ್ಕೆ ತಿರುಗೇಟು ನೀಡಿದ ಪತಿ ಬಾಲಾಜಿ

    ನಟಿ ಚೈತ್ರಾ ಹಳ್ಳಿಕೇರಿ 25 ಕೋಟಿ ಬೇಡಿಕೆ ಇಟ್ಟರಾ? ನಟಿಯ ಆರೋಪಕ್ಕೆ ತಿರುಗೇಟು ನೀಡಿದ ಪತಿ ಬಾಲಾಜಿ

    ನಿನ್ನೆಯಷ್ಟೇ ಸ್ಯಾಂಡಲ್ ವುಡ್ ನಟಿ ಚೈತ್ರಾ ಹಳ್ಳಿಕೇರಿ  ಸುದ್ದಿಗೋಷ್ಠಿ ನಡೆಸಿ, ಪತಿ ಬಾಲಾಜಿ ವಿರುದ್ಧ ಆರೋಪಗಳ ಮಳೆಯನ್ನೇ ಸುರಿಸಿದ್ದರು. ದೈಹಿಕ ಕಿರುಕುಳ ಮತ್ತು ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದರು. ಪತಿ ಮಾತ್ರವಲ್ಲ, ಮಾವ ಪೋತರಾಜ್ ಕೂಡ ತಮಗೆ ಹಿಂಸೆ ಕೊಡುತ್ತಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ : 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

    ಪತ್ನಿ ಚೈತ್ರಾ ಪ್ರೆಸ್ ಮೀಟ್ ಮಾಡಿದ ಬೆನ್ನಲ್ಲೆ ಪತಿ ಬಾಲಾಜಿ ಕೂಡ ಇಂದು ಮಾಧ್ಯಮ ಗೋಷ್ಠಿ ಕರೆದಿದ್ದರು. ಪತಿ ಚೈತ್ರಾ ಮಾಡಿದ ಆರೋಪಗಳೆಲ್ಲವೂ ಸುಳ್ಳು ಎಂದು, ತಾವಷ್ಟು ಆರೋಪಗಳನ್ನು ಪತ್ನಿಯ ಮೇಲೆ ಮಾಡಿದರು. ಚೈತ್ರಾ ಮಾಡಿರುವ ಅಷ್ಟೂ ಆರೋಪಗಳಲ್ಲೂ ಯಾವುದೇ ಹುರುಳಿಲ್ಲ ಎಂದರು. ಅಲ್ಲದೇ, ನಾಲ್ಕು ವರ್ಷಗಳಿಂದ ತಾವಿಬ್ಬರೂ ದೂರ ಇರುವುದಾಗಿಯೂ ಅವರು ಹೇಳಿದರು. ಇದನ್ನೂ ಓದಿ : ಧನುಶ್ ನಟನೆಯ ಹಾಲಿವುಡ್ ಸಿನಿಮಾದ ಟ್ರೇಲರ್ ರಿಲೀಸ್ : ಎಲ್ಲಿದ್ದಾರೆ ಧನುಶ್?

    ಈಗಾಗಲೇ ನಾನು ಚೈತ್ರಾಗೆ ಕೋಟ್ಯಾಂತರ ರೂಪಾಯಿ ಕೊಟ್ಟಿರುವೆ. 5 ಕೋಟಿ ಮನೆ, 50 ಲಕ್ಷ ರೂಪಾಯಿ ಬೆಲೆಬಾಳುವ ಕಾರು ಕೊಟ್ಟಿರುವೆ. ಎರಡು ವರ್ಷಗಳ ಹಿಂದೆಯೇ ಅವರು ಡಿವೋರ್ಸ್ ಕೇಳಿದರು. ಹೆಚ್ಚು ಹಣಕ್ಕಾಗಿ ಡಿಮಾಂಡ್ ಕೂಡ ಮಾಡಿದರು. ಅವರು 25 ಕೋಟಿ ರೂಪಾಯಿ ಡಿಮಾಂಡ್ ಮಾಡುತ್ತಿದ್ದಾರೆ. ಅದನ್ನು ಕೊಡದೇ ಇದ್ದಾಗ ಮೀಡಿಯಾಗೆ ಹೋಗುವುದಾಗಿ ಬೆದರಿಸುತ್ತಾರೆ ಎಂದಿದ್ದಾರೆ ಬಾಲಾಜಿ. ಇದನ್ನೂ ಓದಿ : ಕನ್ನಡದ ಖ್ಯಾತ ನಟಿಯೊಬ್ಬಳು ನಿರ್ದೇಶಕನನ್ನೇ ಮಂಚಕ್ಕೆ ಕರೆದ ಕಥೆಗೆ ಮೆಗಾ ಟ್ವಿಸ್ಟ್

    ಎರಡು ಮಕ್ಕಳು ಆದ ನಂತರ ಚೈತ್ರಾ ಅವರೇ ಮಿಸಸ್ ಇಂಡಿಯಾ ಸ್ಪರ್ಧೆಗೆ ಹೋಗಬೇಕೆಂದು ಬಾಲಾಜಿ ಅವರಲ್ಲಿ ಕೇಳಿದರಂತೆ. ತಮಗೆ ಫ್ರಿಡಂ ಬೇಕು ಅಂತ ಬೇರೆ ಮನೆಗೆ ಬದಲಾದರಂತೆ. ನಂತರ ಅವರ ಡಿಮಾಂಡ್ ಗಳು ಜಾಸ್ತಿ ಆಗುತ್ತಲೇ ಹೋದವು ಎಂದು ಬಾಲಾಜಿ ಆರೋಪ ಮಾಡಿದರು. ಇಬ್ಬರ ಮಧ್ಯೆ ಸಣ್ಣ ಪುಟ್ಟ ಜಗಳ ಆಗಿದ್ದನ್ನು ಒಪ್ಪಿಕೊಂಡ ಬಾಲಾಜಿ, ಅದರಿಂದಾಗಿ ಚೈತ್ರಾ ಅವರಿಗೆ ತಾವೇನೂ ತೊಂದರೆ ಮಾಡಿಲ್ಲ ಎಂದರು. ಚೈತ್ರಾ ಅವರನ್ನು ಯಾರೋ ದಾರಿ ತಪ್ಪಿಸುತ್ತಿದ್ದಾರೆ ಎಂದೂ ಅವರು ಆರೋಪಿಸಿದರು.