ರಾಯಚೂರು: ಪಾಸಾಗಿದ್ದು ಏಳನೇ ತರಗತಿಯಾದರೂ ತಲೆ ಮಾತ್ರ ಇಂಜಿನಿಯರಿಂಗ್ ವಿದ್ಯಾರ್ಥಿಯದ್ದು. ಹೌದು ರಾಯಚೂರಿನ ಯುವಕ ಚೇತನ್ ಪ್ರಸಾದ್ ವೆಲ್ಡಿಂಗ್ ಕೆಲಸ ಮಾಡುತ್ತಲೇ ಫುಟ್ ಪೆಡಲ್ ಡಿಸ್ಪ್ಯಾನ್ಸರ್ ಸ್ಯಾನಿಟೈಸರ್ ಸ್ಟ್ಯಾಂಡ್ ತಯಾರಿಸಿದ್ದಾನೆ.
ಇದರಿಂದ ಕೈಯಿಂದ ಮುಟ್ಟದೇ, ಯಾರ ಸಹಾಯವೂ ಇಲ್ಲದೆ ಕಾಲಿನಿಂದ ಪೆಡಲ್ ಒತ್ತುವ ಮೂಲಕ ಸ್ಯಾನಿಟೈಸರ್ ನಿಂದ ಕೈ ಸ್ವಚ್ಛಗೊಳಿಸಿಕೊಳ್ಳಬಹುದು. ಸ್ಯಾನಿಟೈಸರ್ ಹಾಕಲು ವ್ಯಕ್ತಿ ಅವಶ್ಯಕತೆಯಿಲ್ಲ, ಸಮಯ ಉಳಿತಾಯ, ಕೈಯಲ್ಲಿ ಸ್ಯಾನಿಟೈಸರ್ ಬಾಟಲ್ ಮುಟ್ಟುವ ಹಾಗಿಲ್ಲ. ಈ ಉದ್ದೇಶ ಇಟ್ಟುಕೊಂಡು ಸ್ನೇಹಿತ ಅಮಿತ್ ದಂಡಿನ್ ಕೊಟ್ಟ ಐಡಿಯಾದಿಂದ ಚೇತನ್ ಈ ಯಂತ್ರ ತಯಾರಿಸಿದ್ದಾರೆ.
ಇದಕ್ಕೆ ಬ್ಯಾಟರಿ ಅಗತ್ಯವಿಲ್ಲ. ಕಬ್ಬಿಣ ಹಾಗೂ ಸ್ಟೇನ್ ಲೆಸ್ ಸ್ಟೀಲ್ ನಿಂದ ಯಂತ್ರ ಮಾಡುತ್ತಾರೆ. ಬೇರೆ ಬೇರೆ ಕಡೆಗಳಲ್ಲಿ ಸ್ಯಾನಿಟೈಸರ್ ಯಂತ್ರಗಳನ್ನು ಗಮನಿಸಿ ಹೊಸ ರೀತಿಯ ಯಂತ್ರವನ್ನು ತಯಾರಿಸಿದ್ದಾರೆ. ಒಂದು ಯಂತ್ರತಯಾರಿಕೆಗೆ ಒಂದು ಸಾವಿರ ರೂಪಾಯಿವರೆಗೆ ಖರ್ಚು ತಗುಲುತ್ತಿದ್ದು ಆಸಕ್ತರಿಗೆ 1,400 ರೂಪಾಯಿವರೆಗೆ ಮಾರಾಟ ಮಾಡುತ್ತಿದ್ದಾರೆ. ಕೃಷಿ ವಿವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಆರ್.ಟಿ.ಒ ಕಚೇರಿ ಸೇರಿದಂತೆ ಹಲವೆಡೆ ಇದೇ ಯಂತ್ರವನ್ನು ಬಳಸುತ್ತಿದ್ದಾರೆ. ಇನ್ನೂ 20 ಆರ್ಡರ್ ಗಳು ಸಹ ಬಂದಿವೆಯಂತೆ.
ನವದೆಹಲಿ: ಲಾಕ್ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದ್ದು ಸಭೆ ಬಳಿಕ ಲಾಕ್ಡೌನ್ ಮುಂದುವರಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ಹೇಳಿವೆ.
ಮತ್ತಷ್ಟು ವಿನಾಯ್ತಿಗಳೊಂದಿಗೆ ಮೇ 15ರವರೆಗೂ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರ ಬರಬೇಕಿದೆ. ಈ ವಾರದ ಅಂತ್ಯದಲ್ಲಿ ಪ್ರಧಾನಿ ಮೋದಿ ದೇಶದ ಜನರನ್ನುದ್ದೇಶಿಸಿ ಐದನೇ ಬಾರಿ ಮಾತನಾಡಿಲಿದ್ದು, ಈ ವೇಳೆ ಲಾಕ್ಡೌನ್ ವಿಸ್ತರಣೆ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದಿನ ಸಭೆಯಲ್ಲಿ ಒಂಭತ್ತು ರಾಜ್ಯಗಳಿಗೆ ಮಾತ್ರ ಪ್ರಧಾನಮಂತ್ರಿ ಜೊತೆಗೆ ಮಾತನಾಡಲು ಅವಕಾಶ ನೀಡಲಾಗಿತ್ತು. ಮೇಘಾಲಯ, ಮಿಜೋರಾಂ, ಪುದುಚೇರಿ, ಉತ್ತರಾಖಂಡ, ಹಿಮಾಚಲ ಪ್ರದೇಶ, ಒಡಿಶಾ, ಬಿಹಾರ, ಗುಜರಾತ್, ಹರಿಯಾಣ ಮುಖ್ಯಮಂತ್ರಿಗಳು ಸಭೆಯಲ್ಲಿ ಮಾತನಾಡಿದರು ಬಾಕಿ ಎಲ್ಲ ರಾಜ್ಯಗಳ ಸಿಎಂ ಗಳು ಪತ್ರ ಮೂಲಕ ತಮ್ಮ ವರದಿ ಮತ್ತು ಬೇಡಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ತುರ್ತು ಅವಶ್ಯಕತೆಗಳ ವಿನಾಯಿತಿಯೊಂದಿಗೆ ಲಾಕ್ಡೌನ್ ಮುಂದುವರಿಸಿ. ವೈದ್ಯಕೀಯ ಅವಶ್ಯಕತೆಗಳು ಹೊರತುಪಡಿಸಿ ಅಂತರ್ ಜಿಲ್ಲೆ, ರಾಜ್ಯಗಳ ಗಡಿ ಬಂದ್ ಮಾಡಿ ಎಂದು ಸಲಹೆ ನೀಡಿದರು. ಮೀಜೊರಾಂ ಸಿಎಂ ಕೇಂದ್ರ ಸರ್ಕಾರದ ನಿಯಮಗಳನ್ನು ಪಾಲಿಸುತ್ತೇವೆ ಎಂದರು.
ಒಡಿಶಾದ ನವೀನ್ ಪಟ್ನಾಯಕ್ ಮಾತನಾಡಿ ಪ್ರಮುಖ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಿ ಲಾಕ್ಡೌನ್ ಮುಂದುವರಿಸಬೇಕು. ಸಾರ್ವಜನಿಕ ಸಭೆಗಳು, ಧಾರ್ಮಿಕ ಮತ್ತು ಶಿಕ್ಷಣ ಸಂಸ್ಥೆಗಳ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ರಾಜ್ಯದ ಒಳಗಿನ ಆರ್ಥಿಕ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಬೇಕು. ಆರ್ಥಿಕತೆಯನ್ನು ಕಿಕ್ಸ್ಟಾರ್ಟ್ ಮಾಡಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ರೋಗದ ಲಕ್ಷಣಗಳನ್ನು ಹೊಂದಿರುವ ಜನರನ್ನು ಅಕ್ರಮಣಕಾರಿಯಾಗಿ ಪರೀಕ್ಷಿಸುತ್ತಿದ್ದೇವೆ. ಗಡಿ ರಾಜ್ಯಗಳು ಹೆಚ್ಚು ಪ್ರಕರಣಗಳನ್ನು ವರದಿ ಮಾಡಿವೆ. ಹಿಮಾಚಲದ 12 ಜಿಲ್ಲೆಗಳಿಗೆ ಯಾವುದೇ ಸಕಾರಾತ್ಮಕ ಪ್ರಕರಣಗಳಿಲ್ಲ. ಬಡ ಮತ್ತು ನಿರ್ಗತಿಕರಿಗೆ ಆರ್ಥಿಕವಾಗಿ ನೆರವು ನೀಡಲು ರಾಜ್ಯವು ಸಿದ್ಧವಾಗಿದೆ. ಆರ್ಥಿಕ ಚಟುವಟಿಕೆಗಳನ್ನು ಆರಂಭಿಸುವ ಸ್ಥಿತಿಯಲ್ಲಿದ್ದೇವೆ. ಇತರೆ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಿ ಎಂದು ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಹೇಳಿದರು.
ಪುದುಚೇರಿ ಸಿಎಂ ವಿ ನಾರಾಯಣಸ್ವಾಮಿ ಮಾತನಾಡಿ ಪಿಪಿಇ ಕಿಟ್ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಕೇಂದ್ರ ಸರ್ಕಾರ ಒದಗಿಸಬೇಕು. ಕೊರೊನಾ ವಿರುದ್ಧ ಹೋರಾಟಕ್ಕೆ ಹಣಕಾಸಿನ ನೆರವು ನೀಡಿ. ಮೇ 3ರ ಬಳಿಕ ಲಾಕ್ಡೌನ್ ಬಳಿಕ ಕೈಗಾರಿಕೆ ತೆರೆಯಲು ಅವಕಾಶ ನೀಡಿ ಎಂದು ಮನವಿ ಮಾಡಿದರೆ, ಉತ್ತರಾಖಂಡ ಸಿಎಂ ತಿವೇಂದ್ರ ಸಿಂಗ್ ರಾವತ್ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ವ್ಯಾಪಾರ ವಹಿವಾಟು ಆರ್ಥಿಕತೆ ಪುನಾರಂಭಕ್ಕೆ ಅವಕಾಶ ನೀಡಬೇಕು. ಸರ್ಕಾರ ಹಂತ ಹಂತವಾಗಿ ಸಾಮಾನ್ಯ ಸ್ಥಿತಿಗೆ ತರುವ ಪ್ರಯತ್ನ ಮಾಡಿ ಎಂದು ಕೇಳಿಕೊಂಡರು.
ರಾಜ್ಯಗಳಿಗೆ ಲಾಕ್ಡೌನ್ ನಿರ್ಧಾರ?
ಮೇಲಿನ ಎಲ್ಲ ರಾಜ್ಯಗಳ ಜೊತೆಗೆ ಬಹುತೇಕ ರಾಜ್ಯಗಳು ವಿನಾಯತಿ ಜೊತೆಗೆ ಲಾಕ್ಡೌನ್ ಮುಂದುವರೆಸಲು ಸೂಚಿಸಿದ ಹಿನ್ನೆಲೆ ಕೇಂದ್ರ ಸರ್ಕಾರ ಲಾಕ್ಡೌನ್ ಮುಂದುವರೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಈ ಬಾರಿ ಯಾವ ಪ್ರದೇಶದಲ್ಲಿ ಲಾಕ್ಡೌನ್ ಮುಂದುವರಿಸಬೇಕು ಮತ್ತು ವಿನಾಯತಿಗೆ ಒಳಪಡಬೇಕು ಎನ್ನುವುದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ ಇದೆ. ಹಸಿರು ಕಿತ್ತಳೆ ಮತ್ತು ಕೆಂಪು ವಲಯಗಳ ಆಧಾರ ಮೇಲೆ ರಾಜ್ಯ ಸರ್ಕಾರವೇ ಕ್ರಮ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಸೂಚಿಸುವ ಸಾಧ್ಯತೆಯಿದ್ದು ವಲಯವಾರು ಕೇವಲ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಮುಂದೆ ಪ್ರಕಟಿಸಲಿದೆ. ಇದಾದ ಬಳಿಕ ಎಲ್ಲಿ ಯಾವುದಕ್ಕೆ ವಿನಾಯಿತಿ ಸಿಗಲಿದೆ ಎನ್ನುವುದು ಸ್ಪಷ್ಟವಾಗಲಿದೆ.
ಚಿಕ್ಕಬಳ್ಳಾಪುರ: ಇಲ್ಲಿಯ ಗಲ್ಲಿ ಗಲ್ಲಿಗಳಲ್ಲಿ ನೇರಳೆ ಹಣ್ಣಿನದ್ದೆ ಕಮಾಲ್. ಮಧುಮೇಹಿಗಳಿಗೆ ರಾಮಬಾಣವಾಗಿರುವ ಜಂಬುನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್ ಇದೆ. ಇದರಿಂದ ಬೆಳೆದ ರೈತರಿಗೂ ಲಾಭ ಸೇವಿಸಿದ ಗ್ರಾಹಕರಿಗೂ ಭಾರೀ ಲಾಭವಾಗಿದೆ.
ನೇರಳೆ ಹಣ್ಣಿನಲ್ಲಿ ವಿವಿಧ ಔಷಧೀಯ ಗುಣಗಳಿವೆ. ಕೆಲವು ಕಾಯಿಲೆಗಳಿಗೆ ನೇರಳೆ ಹಣ್ಣು ರಾಮಬಾಣ ಅನ್ನೋ ಪ್ರಚಾರ ಆಗಿದ್ದೇ ತಡ, ಮಾರುಕಟ್ಟೆಯಲ್ಲಿ ಮುಗಿಬಿದ್ದು ನೇರಳೆ ಹಣ್ಣುಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಇದರಿಂದ ನೇರಳೆ ಬೆಳೆದ ರೈತರಿಗೆ ಜಣ ಜಣ ಕಾಂಚಣವಾದರೆ, ಗ್ರಾಹಕರು ಔಷಧಿಯುಕ್ತ ಹಣ್ಣು ತಿಂದ ಖುಷಿಪಡುತ್ತಿದ್ದಾರೆ.
ಕಾಡು ಮೇಡು ಬೆಟ್ಟಗುಡ್ಡ, ರೈತರ ಬದುಗಳಲ್ಲಿ ಕಾಣಸಿಗುತ್ತಿದ್ದ ನೇರಳೆ ಹಣ್ಣನ್ನು ಕಂಡರೆ ಮೂಗು ಮುರಿಯುತ್ತಿದ್ದ ಕಾಲವೊಂದಿತ್ತು. ಆದರೆ ನೇರಳೆ ಹಣ್ಣಿನಲ್ಲಿ ಅಪರೂಪದ ಕಾಯಿಲೆಗಳನ್ನು ವಾಸಿಮಾಡಬಲ್ಲ, ಔಷಧೀಯ ಗುಣಗಳಿವೆ ಅನ್ನೋದು ಗೊತ್ತಾಗುತ್ತಿದ್ದಂತೆ, ನೇರಳೆ ಹಣ್ಣಿಗೆ ಬಾರೀ ಭಾರೀ ಡಿಮ್ಯಾಂಡ್ ಬಂದಿದೆ. ಮೇ ಹಾಗೂ ಜೂನ್ ತಿಂಗಳಲ್ಲಿ ಮಾತ್ರ ಲಭ್ಯವಿರುವ ನೇರಳೆ ಹಣ್ಣಿಗೆ ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್ ಬಂದ ಕಾರಣ ಚಿಕ್ಕಬಳ್ಳಾಪುರದ ಗಲ್ಲಿ ಗಲ್ಲಿಗಳಲ್ಲಿ ಸಣ್ಣ ಹಣ್ಣಿನ ಅಂಗಡಿಯಿಂದ ದೊಡ್ಡ ದೊಡ್ಡ ಹಣ್ಣಿನ ಅಂಗಡಿಗಳಲ್ಲೂ ನೇರಳೆ ಹಣ್ಣಿನದ್ದೇ ಕಾರುಬಾರು. ಕೆ.ಜಿ ನೇರಳೆ ಹಣ್ಣಿಗೆ ಇನ್ನೂರು ರೂಪಾಯಿಂದ ಮುನ್ನೂರು ರೂಪಾಯಿ ಕೊಟ್ಟು ಸಾರ್ವಜನಿಕರು ಖರೀದಿ ಮಾಡುತ್ತಿದ್ದಾರೆ.
ನೇರಳೆ ಮರದ ಎಲೆ, ಕಾಯಿ, ತೊಗಟೆ, ಹಣ್ಣು, ಬೀಜ ಎಲ್ಲವೂ ಔಷಧೀಯ ಗುಣಗಳನ್ನು ಒಳಗೊಂಡಿದೆ. ಇದರಿಂದ ನೇರಳೆ ಮರಗಳನ್ನು ಬೆಳೆದ ರೈತರಿಗೆ ಪುಲ್ ಡಿಮ್ಯಾಂಡೋ ಡಿಮ್ಯಾಂಡ್. ಮೇ ಜೂನ್ ತಿಂಗಳಲ್ಲಿ ಹಣ್ಣಿಗೆ ಬಾರೀ ಬೇಡಿಕೆ ಬಂದು ಹಣ್ಣುಗಳ ವರ್ತಕರು ರೈತರ ತೋಟಗಳಿಗೆ ಬಂದು ಖರೀದಿಸುತ್ತಿದ್ದಾರೆ. ಇನ್ನು ಹೂ ಮೊಗ್ಗು ಇರುವಾಗಲೇ ನೇರಳೆ ಮರಗಳ ಗುತ್ತಿಗೆ ಪಡೆಯುತ್ತಾರೆ. ನೇರಳೆ ಮರಕ್ಕೆ ಬಂಗಾರದ ಬೆಲೆ ಬಂದ ಕಾರಣ, ಕಾಡು ಮೇಡುಗಳಲ್ಲಿ ಇರುತ್ತಿದ್ದ ನೇರಳೆ ಮರಗಳು ರೈತರ ಜಮೀನುಗಳಲ್ಲಿ ತೋಟಗಳಾಗಿ ಮಾರ್ಪಡುತ್ತಿವೆ. ಇನ್ನು ಚಿಕ್ಕಬಳ್ಳಾಪುರ ತೋಟಗಾರಿಕಾ ಇಲಾಖೆ, ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ, ಸಸಿಯಿಂದ ನಾಟಿ ಮಾಡೋವರೆಗೂ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದೆ.
ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿರುವ ‘ನಿಖಿಲ್ ಎಲ್ಲಿದ್ದೀಯಪ್ಪ’ ಡೈಲಾಗ್ಗೆ ಈಗ ಫುಲ್ ಡಿಮ್ಯಾಂಡ್ ಆಗಿದೆ. ನಿಖಿಲ್ ಎಲ್ಲಿದ್ದೀಯಪ್ಪ ಸಿನಿಮಾ ಟೈಟಲ್ಗೆ ಈಗ ಭರ್ಜರಿ ಬೇಡಿಕೆಯಾಗಿದೆ.
ನಿಖಿಲ್ ಎಲ್ಲಿದ್ದೀಯಪ್ಪ ಶೀರ್ಷಿಕೆಗೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸಾಕಷ್ಟು ಮಂದಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇದರ ಜೊತೆಗೆ ಮಂಡ್ಯದ ಚುನಾವಣಾ ಕಣವೇ ಸಿನಿಮಾ ಕಥೆಯಾಗಿದ್ದು, “ಮಂಡ್ಯದ ಹೆಣ್ಣು”, “ಜೋಡೆತ್ತು”, “ಕಳ್ಳೆತ್ತು” ಟೈಟಲ್ ನೋಂದಣಿಗೂ ಫುಲ್ ಡಿಮ್ಯಾಂಡ್ ಶುರುವಾಗಿದೆ.
ನಿಖಿಲ್ ಎಲ್ಲಿದ್ದೀಯಪ್ಪ ಟೈಟಲ್ ನಲ್ಲಿ ಸಿನಿಮಾ ಮಾಡಲು ಹಲವರು ಪ್ಲಾನ್ ಮಾಡಿದ್ದಾರೆ. ಒಟ್ಟು 7 ರಿಂದ 8 ಚಿತ್ರತಂಡಗಳು ಟೈಟಲ್ ಕೊಡುವಂತೆ ಫಿಲಂ ಚೇಂಬರ್ ಗೆ ಮನವಿ ಮಾಡಿದೆ. ಆದರೆ ಇದೆಲ್ಲ ರಾಜಕೀಯಕ್ಕೆ ಸಂಬಂಧಿಸುವುದರಿಂದ ಚಲನಚಿತ್ರ ವಾಣಿಜ್ಯ ಮಂಡಳಿ ಈ ಟೈಟಲ್ ನೀಡಲು ನಿರಾಕರಿಸಿದೆ.
ಜಾಗ್ವಾರ್ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ನಿಖಿಲ್ ಅವರನ್ನು ಉಲ್ಲೇಖಿಸಿ `ನಿಖಿಲ್ ಎಲ್ಲಿದ್ದೀಯಪ್ಪ’ ಎಂದು ಹೇಳಿದ್ದರು. ಆ ಬಳಿಕ ಈ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೂಪಗಳಲ್ಲಿ ಹರಿದಾಡುತ್ತಿದೆ.