Tag: ಡಿವೈನ್ ಟೈಡ್ಸ್

  • ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಬೆಂಗಳೂರು: ಏಪ್ರಿಲ್ 4 ರಂದು ಗ್ರ್ಯಾಮಿ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ರಿಕ್ಕಿ ಕೇಜ್‍ರನ್ನು ಲಹರಿ ಸಂಸ್ಥೆ ವತಿಯಿಂದ ಸನ್ಮಾನಿಸಲಾಯ್ತು. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಲಹರಿ ಸಂಸ್ಥೆ ಮುಖ್ಯಸ್ಥ ಮನೋಹರ್ ನಾಯ್ಡು, ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್, ಸಿಇಓ ಅರುಣ್ ಸಿಂಗ್, ನಟರಾದ ಶಿವಣ್ಣ, ರವಿಚಂದ್ರನ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮನೋಹರ್ ಅವರು ನಾವು ಒಟ್ಟಿಗೆ ಬೆಳೆದವರು. ಅಕ್ಕ ಪಕ್ಕದ ಮನೆಯವರು. ಮನೋಹರ್ ಹಾರ್ಡ್ ವರ್ಕ್ ಮಾಡ್ತಾರೆ. ಓನ್ಲಿ ಹಾರ್ಡ್ ವರ್ಕ್ ಮಾಡ್ತಾರೆ. ಬಟ್ ವೇಲು ಹಾರ್ಡ್ ವರ್ಕಿಂಗ್ & ಫನ್ ಲೀವಿಂಗ್ ಮನುಷ್ಯ ಎಂದರು. ಹೀಗೆ ಇಂಗ್ಲೀಷ್‍ನಲ್ಲಿ ಮಾತು ಶುರು ಮಾಡಿದ ಸಿಎಂಗೆ ಮುಂದೆ ಕುಳಿತಿರುವ ಒಬ್ಬರು ಕನ್ನಡ ಸರ್ ಅಂದ್ರು. ಕೂಡಲೇ ಉತ್ತರಿಸಿದ ಸಿಎಂ, ತಡಿಯಪ್ಪ ನಮ್ಮದು ಉತ್ತರ ಕರ್ನಾಟಕದ ಕನ್ನಡ. ನಿಮ್ಮದೆಲ್ಲಾ ಅರ್ಧಂಬಂರ್ಧ ಕನ್ನಡ ನಮ್ಮದು ಅಪ್ಪಟ ಕನ್ನಡ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಲಹರಿ ಸಂಸ್ಥೆ ಹೊರ ತಂದ ರಿಕ್ಕಿ ಕೇಜ್‌ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮ ನಿರ್ದೇಶನ

    ನನಗೆ ಗ್ರ್ಯಾಮಿ ಅವಾರ್ಡ್ ಅಂದ್ರೆ ಗೊತ್ತಿರಲಿಲ್ಲ. ನಾನು ಗ್ರ್ಯಾಮಿ ಅವಾರ್ಡ್ ಅಂದ್ರೆ ಜಿಂಗ್ ಚಾಂಗ್ ಇರುತ್ತೆ ಅನ್ಕೊಂಡು ಬಂದಿದ್ದೆ. ಇಲ್ಲಿ ಬಂದು ಆ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಖುಷಿ ಆಯ್ತು. ಸಾರ್ಥಕ ಅನ್ನಿಸ್ತು ಎಂದರು. ಇದನ್ನೂ ಓದಿ: ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ ನಿಲ್ಲದ ರಾಕಿಭಾಯ್ ಆರ್ಭಟ: 400 ಕೋಟಿಯತ್ತ `ಕೆಜಿಎಫ್ 2′

    ಇದೇ ವೇಳೆ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್ ಮಾತನಾಡಿ, ರಿಕ್ಕಿ ಕೇಜ್‍ರನ್ನು 12-13 ವರ್ಷದ ಹಿಂದೆ ನಮ್ಮದೊಂದು ಸಣ್ಣ ಕೆಲಸಕ್ಕೆ ಸಂಪರ್ಕಿಸಿದ್ದೆ. ಅವರ ಪ್ಯಾಶನ್ ನೋಡಿ ಅನ್ನಿಸ್ತು. ಇವರು ನಮಗೆ ವರ್ಕೌಟ್ ಆಗಲ್ಲ ಎಂದು. ಹಾಗಿತ್ತು ಅವರ ಕೆಲಸ. ಕನ್ನಡಿಗರು ಎದ್ದು ನಿಂತ್ರೆ ಹೀಗೆ ಗ್ರ್ಯಾಮಿ ಅವಾರ್ಡ್ ಬರುತ್ತೆ. ಕೆಜಿಎಫ್ ನಂತಹ ಸಿನಿಮಾವೂ ಬರುತ್ತೆ ಎಂದು ಹಾಡಿ ಹೊಗಳಿದರು.

    ಈ ಮೊದಲು ವೇದಿಕೆಯಲ್ಲಿ ಮಾತು ಪ್ರಾರಂಭಿಸೋದಕ್ಕೂ ಮುನ್ನ ಸಿಎಂ ಜೊತೆ ರಂಗನಾಥ್ ಮಾತಿನ ಕೌಂಟರ್ ನೀಡಿದರು. ರಂಗನಾಥ್ ವೇದಿಕೆ ಏರುತ್ತಿದ್ದಂತೆ ತಾವು ಕುಳಿತಲ್ಲಿಯೇ ಪ್ರೈಮ್ ಟೈಂ ಆಯ್ತು ಎಂದು ಸಿಎಂ ಕಾಲೆಳೆದರು. ಈ ವೇಳೆ ರಂಗನಾಥ್, ನಾನು ಇಲ್ಲಿರೋದು ಬಿಟ್ಟು ಅಲ್ಲಿದ್ರೆ ನಿಮಗೇ ಡೇಂಜರ್ ಎಂದು ನಗುತ್ತಾ ಉತ್ತರಿಸಿದ್ರು.

    ಈ ಮೊದಲು ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಸಂಗೀತ ನಿರ್ದೇಶಕ ರಿಕ್ಕಿ ಕೇಜ್‍ರನ್ನು ಸನ್ಮಾನಿಸಿದ್ರು. ಗ್ರ್ಯಾಮಿ ಪ್ರಶಸ್ತಿ ಪಡೆದ ಡಿವೈನ್ ಟೈಡ್ಸ್ ಆಲ್ಬಂ ಅನ್ನು ಲಹರಿ ಸಂಸ್ಥೆಯೇ ನಿರ್ಮಿಸಿತ್ತು.

  • ಸದ್ಯವೇ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರ: ಲಹರಿ ವೇಲು

    ಸದ್ಯವೇ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರ: ಲಹರಿ ವೇಲು

    ಹರಿ ಮ್ಯೂಸಿಕ್ ಮೂಲಕ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಡಿವೈನ್ ಟೈಡ್ಸ್ ಆಲ್ಬಂಗೆ ಸಂಗೀತ ಕ್ಷೇತ್ರದ ಮೇರು ಪ್ರಶಸ್ತಿಯಾದ ಗ್ರ್ಯಾಮಿ ಸಹ ಬಂದಿದೆ. ರಿಕ್ಕಿ ಕೇಜ್ ಅವರಿಗೆ ಈ ಪ್ರಶಸ್ತಿ ಸಂದಿದೆ. ಈ ಎರಡು ಸಂತಸವನ್ನು ಹಂಚಿಕೊಳ್ಳಲು ಲಹರಿ ವೇಲು ಪತ್ರಿಕಾಗೋಷ್ಠಿ ಆಯೋಜಿಸಿದ್ದರು.

    ಕೇವಲ ಐನ್ನೂರು ರೂಪಾಯಿ ಬಂಡವಾಳದಿಂದ ನಮ್ಮ ಅಣ್ಣ ಮನೋಹರ ನಾಯ್ಡು ಅವರು ಈ ಸಂಸ್ಥೆಯನ್ನು ಆರಂಭಿಸಿದರು. ಈಗ ನಮ್ಮ ಸಂಸ್ಥೆ ಈ ಮಟ್ಟಕ್ಕೆ ಬರಲು ನಿಮ್ಮೆಲ್ಲರ ಹಾರೈಕೆ ಕಾರಣ. ಇದೇ ಮೊದಲ ಬಾರಿಗೆ ನಮ್ಮ ಸಂಸ್ಥೆ ಮೂಲಕ ಬಿಡುಗಡೆಯಾದ ‘ಡಿವೈನ್ ಟೈಡ್ಸ್’ ಆಲ್ಬಂಗೆ ಸಂಗೀತ ನೀಡಿದ್ದಕ್ಕಾಗಿ ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಿದೆ. ಈ ಗೌರವಕ್ಕೆ ಪಾತ್ರರಾದ ರಿಕ್ಕಿಕೇಜ್ ಅವರನ್ನು ಅಭಿನಂದಿಸುತ್ತೇನೆ. ಈ ಪ್ರಶಸ್ತಿ ಸಮಾರಂಭಕ್ಕೆ ನಾನು ವೀಸಾ ಸಿಗದ ಕಾರಣದಿಂದ ಹೋಗಿರಲಿಲ್ಲ. ನನ್ನ ಅಣ್ಣನ ಮಗ ಚಂದ್ರು, ರಿಕ್ಕಿಕೇಜ್ ಅವರ ಜೊತೆಗೆ ಹೋಗಿದ್ದರು. ನಾವೆಲ್ಲರೂ ಮನೆಯಿಂದಲೇ ನೋಡಿ ಸಂತಸಪಟ್ಟೆವು. ಸದ್ಯದಲ್ಲೇ ರಿಕ್ಕಿಕೇಜ್ ಅವರ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರವೊಂದನ್ನು ನಮ್ಮ ಸಂಸ್ಥೆ ಮೂಲಕ ನಿರ್ಮಿಸುವ ತಯಾರಿ ನಡೆಯುತ್ತಿದೆ ಎಂದು ಲಹರಿ ವೇಲು ತಿಳಿಸಿದರು.

    ನನಗೆ ಎರಡನೇ ಬಾರಿ ಈ ಪ್ರಶಸ್ತಿ ಬಂದಿರುವುದು ಸಂತೋಷ ತಂದಿದೆ. ಪ್ಯಾಂಡಮಿಕ್ ಸಮಯದಲ್ಲಿ ಈ ಆಲ್ಬಂ ನಿರ್ಮಾಣವಾಯಿತು. ಅನೇಕ ಕಲಾವಿದರನ್ನು ಜೂಮ್ ಕಾಲ್ ಹಾಗೂ ಮೆಸೇಜ್‍ಗಳ ಮೂಲಕ ಸಂಪರ್ಕ ಮಾಡಿದ್ದೆ. ನೂರೈವತ್ತಕ್ಕೂ ಅಧಿಕ ಕಲಾವಿದರು ಹಾಗೂ ತಂತ್ರಜ್ಞರು ಈ ಹಾಡಿಗೆ ಕೆಲಸ ಮಾಡಿದ್ದಾರೆ. ಅದರಲ್ಲಿ ಅರವತ್ತಕ್ಕೂ ಅಧಿಕರು ಭಾರತದವರು. ಮಿಕ್ಕವರು ಹೊರ ದೇಶದವರು. ಇಲ್ಲಿನ ವಾರಿಜಾಶ್ರೀ, ಅರುಣ್ ಕುಮಾರ್, ಸುಮಾ ರಾಣಿ, ಚೈತ್ರ ಮುಂತಾದ ಕಲಾವಿದರು ಈ ಆಲ್ಬಂ ನಲ್ಲಿದ್ದಾರೆ. ನಾನು ಕನ್ನಡದಲ್ಲಿ ಆಕ್ಸಿಡೆಂಟ್, ವೆಂಕಟ ಇನ್ ಸಂಕಟ ಹಾಗೂ ಕ್ರೇಜಿ ಕುಟುಂಬ ಚಿತ್ರಗಳಿಗೆ ಸಂಗೀತ ನೀಡಿದ್ದೇನೆ. ಆ ಮೂರು ಸಿನಿಮಾಗಳ ನಾಯಕ ರಮೇಶ್ ಅರವಿಂದ್ ಅವರೆ. ರಮೇಶ್ ನನ್ನ ಆತ್ಮೀಯ ಸ್ನೇಹಿತರು. ನನಗೆ ಸಿನಿಮಾಗಿಂತ ವಿಭಿನ್ನ ಆಲ್ಬಂಗಳನ್ನು ಮಾಡುವುದರಲ್ಲೇ ಆಸಕ್ತಿ ಹೆಚ್ಚು ಎಂದು ರಿಕ್ಕಿಕೇಜ್ ತಿಳಿಸಿದ್ದಾರೆ.

    ಪ್ರಶಸ್ತಿ ಪಡೆಯಲು ಲಹರಿ ಸಂಸ್ಥೆಯ ಚಂದ್ರು ಅವರೊಂದಿಗೆ ಹೋದ ಸಂದರ್ಭವನ್ನು ನೆನಪಿಸಿಕೊಂಡರು. ಹಾಗೂ ಮುಂದೆ ಸಹ ಲಹರಿ ಸಂಸ್ಥೆಯವರೊಂದಿಗೆ ಇರುವುದಾಗಿ ಹೇಳಿದರು.

    ಇಷ್ಟು ಎತ್ತರಕ್ಕೆ ಬೆಳೆದಿದ್ದರೂ ರಿಕ್ಕಿಕೇಜ್, ನಮ್ಮ ಸಂಸ್ಥೆಯ ಕಾರ್ಯಗಳಿಗೆ ಕೈ ಜೋಡಿಸಿರುವುದು ನಿಜಕ್ಕೂ ಹೆಮ್ಮೆ. ಅವರು ನಮ್ಮೊಂದಿಗೆ ಯಾವುದೇ ಅಗ್ರಿಮೆಂಟ್ ಸಹ ಮಾಡಿಕೊಂಡಿಲ್ಲ. ಲಹರಿ ಸಂಸ್ಥೆಯ ಚಂದ್ರು ಅವರು ಮಾತನಾಡಿ, ಇದೇ ಅವರ ಪ್ರೀತಿಗೆ ಸಾಕ್ಷಿ ಎಂದರು. ರಿಕ್ಕಿಕೇಜ್ ಅವರೊಂದಿಗೆ ಹದಿನೈದು ವರ್ಷಗಳಿಂದ ಜೊತೆಗಿರುವ ವಾಡಿಯಲ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.