Tag: ಡಿವೈ ಚಂದ್ರಚೂಡ್

  • ಅಧಿಕೃತ ನಿವಾಸದಿಂದ ತಕ್ಷಣವೇ ಚಂದ್ರಚೂಡ್ ತೆರವಿಗೆ ಕೇಂದ್ರಕ್ಕೆ ಸುಪ್ರೀಂ ಪತ್ರ

    ಅಧಿಕೃತ ನಿವಾಸದಿಂದ ತಕ್ಷಣವೇ ಚಂದ್ರಚೂಡ್ ತೆರವಿಗೆ ಕೇಂದ್ರಕ್ಕೆ ಸುಪ್ರೀಂ ಪತ್ರ

    ನವದೆಹಲಿ: ನಿವೃತ್ತ ಮುಖ್ಯ ನಾಯಮೂರ್ತಿ ಡಿವೈ ಚಂದ್ರಚೂಡ್‌ (DY Chandrachud) ಅವರು ವಾಸಿಸುತ್ತಿರುವ ಬಂಗಲೆಯನ್ನು ತಕ್ಷಣವೇ ತೆರವು ಮಾಡುವಂತೆ ಸುಪ್ರೀಂ ಕೋರ್ಟ್‌ (Supreme Court) ಆಡಳಿತ ಮಂಡಳಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

    ಚಂದ್ರಚೂಡ್‌ ಅವರು ಪ್ರಸ್ತುತ ಕೃಷ್ಣ ಮೆನನ್ ಮಾರ್ಗದ 5ನೇ ಬಂಗಲೆಯಲ್ಲಿ ವಾಸವಾಗಿದ್ದಾರೆ. ಅನುಮತಿಸಲಾದ ಅವಧಿಯನ್ನು ಮೀರಿ ಅಧಿಕೃತ ನಿವಾಸವನ್ನು (Official Home) ವಾಸವಾಗಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆಡಳಿತ ಬಂಗಲೆಯನ್ನು ತುರ್ತಾಗಿ ಖಾಲಿ ಮಾಡಿಸುವಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದೆ. ಇದನ್ನೂ ಓದಿ: ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಬೆಂಬಲಿಸಿದ ನಿವೃತ್ತ ಸಿಜೆಐ ಚಂದ್ರಚೂಡ್‌

     

    2022 ರ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನಿಯಮಗಳ ನಿಯಮ 3 ಬಿ ಅಡಿಯಲ್ಲಿ, ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ನಿವೃತ್ತಿಯಾದ ನಂತರ ಆರು ತಿಂಗಳವರೆಗೆ ಅಧಿಕೃತ ಬಂಗಲೆಯಲ್ಲಿ ವಾಸವಾಗಿರಲು ಅನುಮತಿ ನೀಡಲಾಗುತ್ತದೆ. ಇದನ್ನೂ ಓದಿ: ದಲೈಲಾಮಾ ಉತ್ತರಾಧಿಕಾರಿ ಸಂಘರ್ಷ- ದಲೈಲಾಮಾ ಜೊತೆ ಭಾರತದ ಸಂಬಂಧ ಹೇಗಿತ್ತು; ಚೀನಾ ಎಚ್ಚರಿಕೆ ಏನು?

    ಆರು ತಿಂಗಳ ಅವಧಿ ಮೇ 10ಕ್ಕೆ ಮುಕ್ತಾಯಗೊಂಡಿದೆ. ಹೆಚ್ಚುವರಿಯಾಗಿ ನೀಡಲಾಗಿದ್ದ ವಿಶೇಷ ಅನುಮತಿಯು ಮೇ 31ಕ್ಕೆ ಕೊನೆಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬಂಗಲೆ ಅಧಿಕೃತ ಸುಪ್ರೀಂ ಕೋರ್ಟ್ ಹೌಸ್ ಪೂಲ್‌ನ ಭಾಗವಾಗಿದ್ದು ಮರುಹಂಚಿಕೆಗಾಗಿ ಹಿಂತಿರುಗಿಸಬೇಕು ಎಂದು ಆಡಳಿತವು ತಿಳಿಸಿದೆ.

  • ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಬೆಂಬಲಿಸಿದ ನಿವೃತ್ತ ಸಿಜೆಐ ಚಂದ್ರಚೂಡ್‌

    ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಬೆಂಬಲಿಸಿದ ನಿವೃತ್ತ ಸಿಜೆಐ ಚಂದ್ರಚೂಡ್‌

    ನವದೆಹಲಿ: ಸುಪ್ರೀಂ ಕೋರ್ಟ್‌ (Supreme Court) ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ (Ex-CJI Chandrachud) ಅವರು ಒಂದು ರಾಷ್ಟ್ರ, ಒಂದು ಚುನಾವಣೆಯ (One Nation, One Election) ಪರವಾಗಿ ಅಭಿಪ್ರಾಯ ಮಂಡಿಸಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.

    ಈ ವರ್ಷದ ಏಪ್ರಿಲ್‌ನಲ್ಲಿ ವಿವರವಾದ ಟಿಪ್ಪಣಿಯನ್ನು ಸಂಸದೀಯ ಸಮಿತಿಗೆ ಡಿ.ವೈ. ಚಂದ್ರಚೂಡ್ ಸಲ್ಲಿಸಿದ್ದಾರೆ. ಇದರಲ್ಲಿ ಅವರು ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಿದರೆ ಸಂವಿಧಾನ ಮೂಲ ರಚನೆಯ ಸಿದ್ಧಾಂತವನ್ನು ಉಲ್ಲಂಘಿಸುತ್ತದೆ ಎಂಬ ವಾದಗಳನ್ನು ತಳ್ಳಿಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಒಂದು ರಾಷ್ಟ್ರ, ಒಂದು ಚುನಾವಣೆಯ ಪರವಾಗಿ ಮಾತನಾಡಿದರೂ ಲೋಕಸಭೆಯಲ್ಲಿ ಮಂಡಿಸಲಾದ ಮಸೂದೆಗಳಲ್ಲಿ ಚುನಾವಣಾ ಆಯೋಗಕ್ಕೆ ನೀಡಲಾದ ಅನಿರ್ದಿಷ್ಟ ಮತ್ತು ವ್ಯಾಪಕ ಅಧಿಕಾರಗಳನ್ನು ಅವರು ವಿರೋಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಜೀವನ ತುಂಬಾ ಆಕರ್ಷಕ: ವರ್ಗಾವಣೆ ವಿರೋಧಿಸಿ ವೈದ್ಯರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

    ನಿವೃತ್ತ ನ್ಯಾ. ಚಂದ್ರಚೂಡ್, ಮಾಜಿ ಮುಖ್ಯ ನ್ಯಾ.ಜೆ ಕೆಹರ್ ಮತ್ತು ಮಾಜಿ ಸಚಿವರಾದ ಎಂ ವೀರಪ್ಪ ಮೊಯ್ಲಿ ಮತ್ತು ಇ ಎಂ ಸುದರ್ಶನ ನಾಚಿಯಪ್ಪನ್ ಅವರನ್ನು ಒಂದು ದೇಶ ಒಂದು ಚುನಾವಣೆ ಸಂಬಂಧ ರಚನೆಯಾಗಿರುವ ಜಂಟಿ ಸಂಸದೀಯ ಸಮಿತಿ ಜುಲೈ 11 ರಂದು ಸಂವಾದಕ್ಕೆ ಆಹ್ವಾನಿಸಿದೆ.

    ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ಸಂವಿಧಾನದ ಮೂಲ ಲಕ್ಷಣವಾಗಿದೆ. ಹಾಗೆಂದ ಮಾತ್ರಕ್ಕೆ ಏಕಕಾಲದಲ್ಲಿ ಚುನಾವಣೆ ನಡೆಸದಿದ್ದರೆ ಮಾತ್ರ ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಯುತ್ತದೆ ಎಂದು ಹೇಳಲು ಬರುವುದಿಲ್ಲ ಎಂಬ ಅಭಿಪ್ರಾಯವನ್ನು ನಿವೃತ್ತ ನ್ಯಾಯಮೂರ್ತಿಗಳು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿದ್ದ ಮಾತ್ರಕ್ಕೆ ವಿನಾಯ್ತಿ ಇಲ್ಲ: ಪತ್ನಿ ಕೊಂದಿದ್ದ ಕಮಾಂಡೋಗೆ ಸುಪ್ರೀಂ ತರಾಟೆ

    ಭಾರತೀಯ ಮತದಾರರು ಮುಗ್ಧರು. ಅವರನ್ನು ಸುಲಭವಾಗಿ ಹೇಗೆ ಬೇಕಾದರೂ ಪ್ರಭಾವಿಸಬಹುದು ಎಂಬ ವಾದವನ್ನು ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ವಿರೋಧಿಸುವವರು ಮುಂದಿಡುತ್ತಾರೆ. ಆದರೆ ಸಾರ್ವತ್ರಿಕ ವಯಸ್ಕ ಮತದಾನವು ಸಾಂವಿಧಾನಿಕ ಬದ್ಧತೆಯಾಗಿದೆ. ಪರಿಶೀಲಿಸದ ಊಹೆಯ ಆಧಾರದಲ್ಲಿ ಸಾಂವಿಧಾನಿಕ ಚೌಕಟ್ಟನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ.

    ರಾಷ್ಟ್ರೀಯ ಮತ್ತು ರಾಜ್ಯ ಚುನಾವಣೆಗಳಲ್ಲಿ ಜನರು ವಿಭಿನ್ನವಾಗಿ ಮತ ಚಲಾಯಿಸುತ್ತಾರೆ ಎಂಬ ಸಲಹೆಗಳನ್ನು ತಳ್ಳಿಹಾಕಿದ ಅವರು, ಜನರು ತಮ್ಮ ಸ್ಥಳೀಯ ಮತ್ತು ರಾಜ್ಯ ಹಿತಾಸಕ್ತಿಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಬೇಕೆಂದಿದ್ದರೆ ಸ್ಥಳೀಯ ವಿಷಯಗಳ ಮೇಲೆ ರಾಷ್ಟ್ರೀಯ ಚುನಾವಣೆಗೆ ಮತ ಚಲಾಯಿಸಬಹುದಲ್ಲವೇ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

     

  • LMV ಲೈಸೈನ್ಸ್ ಹೊಂದಿರುವ ಚಾಲಕರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹ: ಸುಪ್ರೀಂ

    LMV ಲೈಸೈನ್ಸ್ ಹೊಂದಿರುವ ಚಾಲಕರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹ: ಸುಪ್ರೀಂ

    ನವದೆಹಲಿ: ಲಘು ಮೋಟಾರು ವಾಹನ (LMV) ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಗಳು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನವನ್ನು ಚಲಾಯಿಸಲು ಅರ್ಹನಾಗಿರುತ್ತಾನೆ ಎಂದು ಸುಪ್ರೀಂ ಕೋರ್ಟ್‌ನ (Supreme Court) ಸಾಂವಿಧಾನಕ ಪೀಠ ಆದೇಶ ನೀಡಿದೆ. ಸಿಜೆಐ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ಸಾಂವಿಧಾನಿಕ ಪೀಠ ಈ ಆದೇಶ ನೀಡಿದೆ.

    ಲಘು ಮೋಟಾರು ವಾಹನದ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯು 7,500 ಕೆಜಿಗಿಂತ ಹೆಚ್ಚಿಲ್ಲದ ಭಾರವಿಲ್ಲದ ಸಾರಿಗೆ ವಾಹನವನ್ನು ಓಡಿಸಲು ಅರ್ಹರೇ ಎಂಬ ಕಾನೂನು ಪ್ರಶ್ನೆಗೆ ಪೀಠವು ಉತ್ತರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ರಾಯ್ ಅವರೊಂದಿಗೆ ಪೀಠದಲ್ಲಿ ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ, ಪಂಕಜ್ ಮಿಥಾಲ್ ಮತ್ತು ಮನೋಜ್ ಮಿಶ್ರಾ ಕೂಡ ಇದ್ದರು. ಇದನ್ನೂ ಓದಿ: ರುಂಡ, ಮುಂಡ ಬೇರ್ಪಡಿಸಿ ಹತ್ಯೆ- 3 ದಿನಗಳ ಬಳಿಕ ರುಂಡ ಪತ್ತೆ

    ದೇಶದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಎಲ್‌ಎಂವಿ ಪರವಾನಗಿ ಹೊಂದಿರುವವರು ಕಾರಣ ಎಂದು ಸಾಬೀತುಪಡಿಸಲು ಯಾವುದೇ ಡೇಟಾ ಲಭ್ಯವಿಲ್ಲ. ಈ ಸಮಸ್ಯೆಯು ಲಘು ಮೋಟಾರು ವಾಹನ ಪರವಾನಗಿ ಹೊಂದಿರುವ ಚಾಲಕರ ಜೀವನೋಪಾಯಕ್ಕೆ ಸಂಬಂಧಿಸಿದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ನೋಡ್ರಿ ನಾನು ಸಿಎಂ ಅಂತಾ ಅಂಜಿಕೆ ಇಡ್ಕೋಬೇಡಿ: ಸಾಮಾನ್ಯ ವ್ಯಕ್ತಿಯಂತೆ ವಿಚಾರಣೆ ಎದುರಿಸಿದ ಸಿದ್ದರಾಮಯ್ಯ

    ಲಘು ಮೋಟಾರು ವಾಹನ ಲೈಸೈನ್ಸ್ ಹೊಂದಿರುವ ಚಾಲಕರು 7,500 ಕೆಜಿ ಸಾಮರ್ಥ್ಯದ ವಾಹನ ಚಲಾಯಿಸಿ ಅಪಘಾತಗಳಾದಾಗ ವಿಮಾ ಕಂಪನಿಗಳು ಪರಿಹಾರ ಒದಗಿಸಿರಲಿಲ್ಲ. ಈ ವಾಹನಗಳು ಎಲ್‌ವಿಎಂ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದವು. ಮೋಟಾರು ಅಪಘಾತ ಕ್ಲೈಮ್ಸ್ ಟ್ರಿಬ್ಯೂನಲ್ (MACT) ಮತ್ತು ನ್ಯಾಯಾಲಯಗಳು ಆಕ್ಷೇಪಣೆಗಳನ್ನು ನಿರ್ಲಕ್ಷಿಸಿ ವಿಮಾ ಕ್ಲೈಮ್‌ಗಳನ್ನು ಪಾವತಿಸಲು ಆದೇಶಿಸುತ್ತಿವೆ. ಇದರ ವಿರುದ್ಧ ಬಜಾಜ್ ಅಲೆಯನ್ಸ್ ಸೇರಿದಂತೆ ಹಲವು ವಿಮಾ ಕಂಪೆನಿಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ಇದನ್ನೂ ಓದಿ: ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರು: ಬೊಮ್ಮಾಯಿ ಟೀಕೆ

  • ಮಕ್ಕಳ ಮೇಲಿನ ಲೈಂಗಿಕ ದೃಶ್ಯಗಳ ಡೌನ್‍ಲೋಡ್, ವೀಕ್ಷಣೆ ಅಪರಾಧ: ಸುಪ್ರೀಂ ಮಹತ್ವದ ತೀರ್ಪು

    ಮಕ್ಕಳ ಮೇಲಿನ ಲೈಂಗಿಕ ದೃಶ್ಯಗಳ ಡೌನ್‍ಲೋಡ್, ವೀಕ್ಷಣೆ ಅಪರಾಧ: ಸುಪ್ರೀಂ ಮಹತ್ವದ ತೀರ್ಪು

    ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‍ಲೋಡ್ ಮಾಡುವುದು ಮತ್ತು ನೋಡುವುದು ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO Act) ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಕಠಿಣ ಕಾನೂನಿನ ಕುರಿತು ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ.

    ಕೇವಲ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‍ಲೋಡ್ ಮಾಡುವುದು ಮತ್ತು ನೋಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರಿದ್ದ ದ್ವಿಸದಸ್ಯ ಪೀಠವು ತಳ್ಳಿಹಾಕಿತು. ತೀರ್ಪು ನೀಡುವಲ್ಲಿ ಹೈಕೋರ್ಟ್ ಮಹಾ ತಪ್ಪು ಎಸಗಿದೆ ಎಸಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಇದನ್ನೂ ಓದಿ: ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

    ನ್ಯಾಯಾಲಯವು ‘Child pornography’ ಪದದ ಬಳಕೆಯನ್ನು ಅಸಮ್ಮತಿಗೊಳಿಸಿದೆ ಮತ್ತು ಸಂಸತ್ತು ಪೋಕ್ಸೊ ಕಾಯಿದೆಗೆ ತಿದ್ದುಪಡಿಯನ್ನು ತರಬೇಕು ಎಂದು ಸಲಹೆ ನೀಡಿತು. ನಾವು ಸುಗ್ರೀವಾಜ್ಞೆಯನ್ನು ತರಬಹುದು ಎಂದು ಸೂಚಿಸಿದ್ದೇವೆ. ಯಾವುದೇ ಆದೇಶಗಳಲ್ಲಿ ಇದನ್ನು `’Child pornography’  ಎಂದು ಉಲ್ಲೇಖಿಸದಂತೆ ನಾವು ಎಲ್ಲಾ ಕೆಳಹಂತದ ನ್ಯಾಯಾಲಯಗಳಿಗೆ ಸೂಚಿಸಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ಯಾವುದೇ ಡಿಜಿಟಲ್ ಸಾಧನದಲ್ಲಿ ಯಾವುದೇ ರೂಪದಲ್ಲಿ, ಅಂತರ್ಜಾಲದಲ್ಲಿ ವ್ಯಕ್ತಿಯು ಯಾವುದೇ ಮಕ್ಕಳ ಅಶ್ಲೀಲ ದೃಶ್ಯವನ್ನು ವೀಕ್ಷಿಸುವುದು, ಹಂಚುವುದು ಅಥವಾ ಪ್ರದರ್ಶಿಸುವುದು ಸಹ ಅಪರಾಧವಾಗಿದೆ. ಪೋಕ್ಸೊ ಕಾಯ್ದೆಯ ಸೆಕ್ಷನ್ 15ರ ಪ್ರಕಾರ, ಯಾವುದೇ ವ್ಯಕ್ತಿಯು ಮಗುವನ್ನು ಒಳಗೊಂಡ ಯಾವುದೇ ಅಶ್ಲೀಲ ವೀಡಿಯೋ ಅಥವಾ ಫೋಟೋ ಸಂಗ್ರಹಿಸಿ ಅದನ್ನು ನಾಶಪಡಿಸಲು ವಿಫಲವಾದರೆ 5,000 ರೂ. ಮತ್ತು ಪುನರಾವರ್ತಿತ ಅಪರಾಧಕ್ಕೆ 10,000 ರೂ. ದಂಡ ವಿಧಿಸಲಾಗುತ್ತದೆ. ಪ್ರಸಾರ ಮಾಡಲು ಸಂಗ್ರಹಿಸಿದರೆ, ದಂಡದ ಜೊತೆಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ವಾಣಿಜ್ಯ ಉದ್ದೇಶಕ್ಕಾಗಿ ಮಕ್ಕಳ ಅಶ್ಲೀಲ ವಸ್ತುಗಳನ್ನು ಸಂಗ್ರಹಿಸಿದರೆ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ನಂತರದ ಅಪರಾಧದಲ್ಲಿ ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.

    ಏನಿದು ಪ್ರಕರಣ?
    28 ವರ್ಷದ ಯುವಕನೊಬ್ಬ ತನ್ನ ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‍ಲೋಡ್ ಮಾಡಿದ ಆರೋಪದ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿತ್ತು.

    ಮಕ್ಕಳ ಅಶ್ಲೀಲ ಚಿತ್ರಗಳನ್ನು ಖಾಸಗಿಯಾಗಿ ವೀಕ್ಷಿಸುವುದು ಅಪರಾಧವಲ್ಲ ಎಂಬ ಹೈಕೋರ್ಟ್ ತೀರ್ಪಿನ ವಿರುದ್ಧ ಎನ್‍ಜಿಒ ಜಸ್ಟ್ ರೈಟ್ ಫಾರ್ ಚಿಲ್ಡ್ರನ್ ಅಲೈಯನ್ಸ್ ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಿ ಈ ಆದೇಶವನ್ನು ನೀಡಲಾಗಿದೆ.

    ಎಸ್.ಹರೀಶ್ ಎಂಬಾತ ಮೊಬೈಲ್‌ನಲ್ಲಿ ಎರಡು ಮಕ್ಕಳ ಅಶ್ಲೀಲ ವೀಡಿಯೊಗಳನ್ನು ಡೌನ್‍ಲೋಡ್ ಮಾಡಿ ಮತ್ತು ವೀಕ್ಷಿಸಿದ್ದಕ್ಕಾಗಿ ಪೋಕ್ಸೊ ಕಾಯ್ದೆ ಮತ್ತು ಐಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಈ ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ.

    ಇತ್ತೀಚೆಗೆ ಮಕ್ಕಳ ಅಶ್ಲೀಲ ದೃಶ್ಯಗಳು ಆಕಸ್ಮಿಕವಾಗಿ ಅಥವಾ ಸ್ವಯಂಚಾಲಿತವಾಗಿ ಡೌನ್‍ಲೋಡ್ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿತ್ತು. ಇದನ್ನೂ ಓದಿ: ಓಣಂ ರಂಗೋಲಿ ಹಾಕಿದ್ದಕ್ಕೆ ಕಾಲಿನಿಂದ ಅಳಿಸಿ ನೃತ್ಯ ಮಾಡಿ ಕಿರಿಕ್‌

  • ಬ್ರಿಟಿಷರಂತೆ ಕಾಂಗ್ರೆಸ್‌ – ಸಿಜೆಐ ನಿವಾಸದಲ್ಲಿ ಗಣೇಶ ಪೂಜೆಗೆ ಹೋಗಿದ್ದನ್ನು ಟೀಕಿಸಿದವರಿಗೆ ಮೋದಿ ತಿರುಗೇಟು

    ಬ್ರಿಟಿಷರಂತೆ ಕಾಂಗ್ರೆಸ್‌ – ಸಿಜೆಐ ನಿವಾಸದಲ್ಲಿ ಗಣೇಶ ಪೂಜೆಗೆ ಹೋಗಿದ್ದನ್ನು ಟೀಕಿಸಿದವರಿಗೆ ಮೋದಿ ತಿರುಗೇಟು

    ಭುವನೇಶ್ವರ: ಸುಪ್ರೀಂ ಕೋರ್ಟ್‌ (Supreme Court) ಮುಖ್ಯ ನ್ಯಾಯಾಧೀಶ ಡಿವೈ ಚಂದ್ರಚೂಡ್ (DY Chandrachud) ಅವರ ನಿವಾಸಕ್ಕೆ ಗಣೇಶ ಪೂಜೆಗೆ (Ganesh Pooja) ಭೇಟಿ ನೀಡಿದ್ದನ್ನು ಟೀಕಿಸಿದ ಪ್ರತಿಪಕ್ಷಗಳಿಗೆ ಸಚಿವ ನರೇಂದ್ರ ಮೋದಿ (Narendra Modi) ಮಂಗಳವಾರ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

    ಒಡೆದು ಆಳುವ ನೀತಿ ಮಾಡಿದ್ದ ಬ್ರಿಟಿಷರು (British) ಗಣೇಶೋತ್ಸವದ ವಿರುದ್ಧ ಕೆರಳಿದ್ದರು. ಇಂದು ಕೂಡ ಭಾರತೀಯ ಸಮಾಜವನ್ನು ಒಡೆಯಲು ಮತ್ತು ಒಡೆಯಲು ಪ್ರಯತ್ನಿಸುತ್ತಿರುವ ಜನರು ಗಣೇಶ ಗಣಪತಿ ಪೂಜೆಯನ್ನು ಅಂಗೀಕರಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಸಂಸ್ಥೆ ವಿರುದ್ಧ ಇಲ್ಲಸಲ್ಲದ ಆರೋಪಕ್ಕೆ ಕಾನೂನು ಕ್ರಮ

    ನಾನು ಗಣಪತಿ ಪೂಜೆಗೆ ಹಾಜರಾಗಿದ್ದಕ್ಕೆ ಕಾಂಗ್ರೆಸ್ (Congress) ಮತ್ತು ಅದರ ʼಪರಿಸರ ವ್ಯವಸ್ಥೆʼಗೆ ಸಮಸ್ಯೆಯಾಗಿದೆ. ಅವರು ಅಧಿಕಾರದಲ್ಲಿರುವ ಕರ್ನಾಟಕದಲ್ಲಿಅದಕ್ಕಿಂತ ದೊಡ್ಡ ಪಾಪ ಮಾಡಿದ್ದಾರೆ. ಅವರು ಗಣೇಶನ ಮೂರ್ತಿಯನ್ನು ಕಂಬಿ ಹಿಂದೆ ಹಾಕಿದ್ದಾರೆ. ಈ ಚಿತ್ರವನ್ನು ನೋಡಿ ಇಡೀ ದೇಶವೇ ತಲ್ಲಣಗೊಂಡಿದೆ. ಇಂತಹ ದ್ವೇಷ ದೇಶಕ್ಕೆ ಅಪಾಯಕಾರಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿಜೆಐ ಚಂದ್ರಚೂಡ್‌ ಮನೆಯಲ್ಲಿ ಗಣೇಶನಿಗೆ ಮೋದಿ ಆರತಿ – ಸಂಜಯ್‌ ರಾವತ್‌ ಆಕ್ಷೇಪ

     

  • Kolkata Horror | ʻಹತ್ಯಾʼಚಾರಿಗೆ ಸುಳ್ಳುಪತ್ತೆ ಪರೀಕ್ಷೆ – ಆಸ್ಪತ್ರೆಗಳಲ್ಲಿ ಶೇ.25 ಭದ್ರತೆ ಹೆಚ್ಚಳಕ್ಕೆ ಸೂಚನೆ!

    – ದೀದಿ ನಿಂದಕರ ಬೆರಳು ಕತ್ತರಿಸಿ ಎಂದು ನಾಲಿಗೆ ಹರಿಬಿಟ್ಟ ಟಿಎಂಸಿ ಸಚಿವ

    ಕೋಲ್ಕತ್ತಾ: ದೇಶದಲ್ಲಿ ಭಾರೀ ಸಂಚಲನಕ್ಕೆ ಕಾರಣವಾದ ಬಂಗಾಳದ ಯುವವೈದ್ಯೆ ಹತ್ಯಾಚಾರ ಪ್ರಕರಣ ದಿನೇ ದಿನೇ ಹೊಸ ಆಯಾಮ ಪಡೆದುಕೊಳ್ತಿದೆ. ತಮ್ಮ ಪುತ್ರಿಯ ಡೈರಿಯಲ್ಲಿ ಒಂದು ಪುಟ ಕಾಣೆಯಾಗಿದೆ ಎಂದು ಮೃತರ ತಂದೆ ಆರೋಪ ಮಾಡಿದ್ದಾರೆ.

    ಮೃತರ ಶರೀರದ ಮೇಲೆ 14 ಗಾಯಗಳು ಕಂಡುಬಂದಿವೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖವಾಗಿದೆ ಅಂತಾ ಹೇಳಲಾಗಿದೆ. ಆರೋಪಿಯನ್ನು ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸಲು ಹೈಕೋರ್ಟ್ ಅನುಮತಿ ನೀಡಿದೆ. ಮೆಡಿಕಲ್ ಕಾಲೇಜ್ ಮಾಜಿ ಪ್ರಾಂಶುಪಾಲನನ್ನು ಸಿಬಿಐ ತೀವ್ರ ವಿಚಾರಣೆಗೆ ಒಳಪಡಿಸಿದೆ. ಇನ್ನೂ ಬಂಗಾಳ ಹೆಣ್ಮಕ್ಕಳಿಗೆ ಸುರಕ್ಷಿತವಲ್ಲ.. ಈ ವಿಚಾರದಲ್ಲಿ ಮಮತಾ ಸರ್ಕಾರ ವಿಫಲವಾಗಿದೆ ಎಂದು ರಾಜ್ಯಪಾಲ ಆನಂದ್ ಬೋಸ್ ಆಕ್ರೋಶ ಹೊರಹಾಕಿದ್ದಾರೆ.

    ಮಮತಾ ಬ್ಯಾನರ್ಜಿ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ಆದ್ರೆ, ಅಭಿಷೇಕ್ ಬ್ಯಾನರ್ಜಿ ಸದ್ದು ಇಲ್ಲದೇ ಇರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹೊತ್ತಲ್ಲೇ ದೀದಿ ನಿಂದಕರ ಬೆರಳು ಕತ್ತರಿಸಿ ಎಂದು ಟಿಎಂಸಿ ಸಚಿವ ಉದ್ಯಾನ್ ಗುಹಾ ಪ್ರಚೋದನೆ ನೀಡಿದ್ದಾರೆ. ಇನ್ನೂ ಸೋಷಿಯಲ್ ಮೀಡಿಯಾ ಮೂಲಕ ಸಿಎಂಗೆ ಬೆದರಿಕೆ ಹಾಕಿದ್ದ ಬಿಕಾಂ ವಿದ್ಯಾರ್ಥಿಯೊಬ್ಬನನ್ನು ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾ ಪೊಲೀಸ್ ಆಯುಕ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದ ಸುವೆಂದು ಶೇಖರ್‌ಗೆ ಸಮನ್ಸ್ ಜಾರಿಯಾಗಿದೆ.

    ಹೀಗಾಗಿ ಬಂಧನದಿಂದ ರಕ್ಷಣೆ ಕೋರಿ ಸುವೆಂದು ಶೇಖರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಂದ ಹಾಗೆ, ಕೋಲ್ಕತ್ತಾ ಪ್ರಕರಣವನ್ನು ಸುಮೋಟೋ ಆಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಮಂಗಳವಾರ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

    ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.25 ಭದ್ರತೆ ಹೆಚ್ಚಳ:
    ಟ್ರೈನಿ ವೈದ್ಯೆ ಖಂಡಿಸಿ ದೇಶವ್ಯಾಪಿ ಪ್ರತಿಭಟನೆ ಭುಗಿಲೆದ್ದಿರುವ ಹೊತ್ತಿನಲ್ಲೇ ಕೇಂದ್ರ ಸಚಿವಾಲಯವು ಎಲ್ಲಾ ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಭದ್ರತೆಯನ್ನು ಶೇ.25 ರಷ್ಟು ಹೆಚ್ಷಿಸಲು ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಟ್ಯಾಂಡರ್ಡ್ ಸೆಕ್ಯುರಿಟಿ ಪ್ರೋಟೋಕಾಲ್‌ ಹೊರತಾಗಿ, ಸರ್ಕಾರಿ ಆಸ್ಪತ್ರೆಗಳು ತಮ್ಮ ಭದ್ರತಾ ಮೌಲ್ಯಮಾಪನವನ್ನು ನಡೆಸಿದ ನಂತರ ವೈಯಕ್ತಿಕ ಬೇಡಿಕೆಗಳ ಆಧಾರದ ಮೇಲೆ ಮಾರ್ಷಲ್‌ಗಳ ನಿಯೋಜನೆಗೆ ಅನುಮೋದಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇನ್ನೂ ರಾಷ್ಟ್ರವ್ಯಾಪಿ ಪ್ರತಿಭಟನೆ ಬೆನ್ನಲ್ಲೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್‌ ಮಂಗಳವಾರ (ಆ.20) ಪ್ರಕರಣದ ವಿಚಾರಣೆ ನಡೆಸಲಿದೆ.

  • ಟ್ರೈನಿ ವೈದ್ಯೆ ಅತ್ಯಾಚಾರ & ಹತ್ಯೆ ಕೇಸ್‌; ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ

    ಟ್ರೈನಿ ವೈದ್ಯೆ ಅತ್ಯಾಚಾರ & ಹತ್ಯೆ ಕೇಸ್‌; ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ

    ನವದೆಹಲಿ: ಕೋಲ್ಕತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ (RG Kar Medical College) ನಡೆದಿರುವ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಸುಪ್ರೀಂ ಕೋರ್ಟ್‌ (Supreme Court) ಮಧ್ಯ ಪ್ರವೇಶ ಮಾಡಿದ್ದು, ಸ್ವಪ್ರೇರಿತವಾಗಿ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದೆ.

    ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ತ್ರಿಸದಸ್ಯ ಪೀಠವು ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈಗಾಗಲೇ ಈ ಪ್ರಕರಣವನ್ನು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ (Kolkata High Court) ವಿಚಾರಣೆ ನಡೆಸಲಾಗುತ್ತಿದೆ. ಈ ಮಧ್ಯೆ ಸಿಬಿಐ ಸಹ ಪ್ರಕರಣದ ಬೆನ್ನುಹತ್ತಿದೆ.

    ಕೋಲ್ಕತ್ತಾ ಪ್ರಕರಣ ಏನು?
    ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ.

    ಪೊಲೀಸರ ವಿರುದ್ಧ ಬಿಜೆಪಿ ಆರೋಪ:
    ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರನ್ನು ರಕ್ಷಿಸುವ ದಂಧೆಯಲ್ಲಿ ತೊಡಗಿದ್ದಾರೆ, ಇತರ ಸಾಕ್ಷ್ಯಗಳನ್ನು ತಿರುಚಲಾಗಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ. ಅಲ್ಲದೇ ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಲವು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಮಾಹಿತಿಯನ್ನು ಕೇಂದ್ರೀಯ ತನಿಖಾ ದಳ ಪ್ರಧಾನ ಕಚೇರಿ ಖಾತೆಗೆ ಟ್ಯಾಗ್‌ ಮಾಡಿದ್ದಾರೆ.

    ನಿರ್ಭಯಾ ತಾಯಿ ಆಕ್ರೋಶ:
    ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನ ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮಮತಾ ಬ್ಯಾನರ್ಜಿ ತಮ್ಮ ಬೆಂಬಲಿಗರೊಂದಿಗೆ ಟ್ರೈನಿ ವೈದ್ಯೆಯ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ತಮ್ಮ ಅಧಿಕಾರ ಬಳಸಿ ಅಪರಾಧಿಯ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಮಮತಾ ಬ್ಯಾನರ್ಜಿ ಪ್ರತಿಭಟನೆಯ ಹೆಸರಿನಲ್ಲಿ ಜನರ ಗಮನ ಬೇರೆಡೆ ತಿರುಗಿಸಲು ಯತ್ನಿಸುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಟೀಕಿಸಿದ್ದಾರೆ.

  • ಕೆಲ ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿವೆ – ಸಿಜೆಐಗೆ ವಕೀಲರ ಪತ್ರ

    ನವದೆಹಲಿ: ಕೆಲವು ಪಟ್ಟಭದ್ರ ಹಿತಾಸಕ್ತಿ (Vested Interest) ಗುಂಪುಗಳು ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿವೆ. ವಿಶೇಷವಾಗಿ ರಾಜಕೀಯ ನಾಯಕರ ಮತ್ತು ಭ್ರಷ್ಟಾಚಾರ ಆರೋಪಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಹೆಚ್ಚು ಕಂಡುಬರುತ್ತಿದೆ ಎಂದು ಆರೋಪಿಸಿ ಭಾರತದ 600ಕ್ಕೂ ಹೆಚ್ಚು ವಕೀಲರು ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ಅವರಿಗೆ ಪತ್ರ ಬರೆದಿದ್ದಾರೆ.

    ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ಪಿಂಕಿ ಆನಂದ್ ಸೇರಿದಂತೆ ಹಲವು ಪ್ರಮುಖ ವಕೀಲರು ಈ ಪತ್ರಕ್ಕೆ ಸಹಿ ಮಾಡಿ ನ್ಯಾಯಾಂಗದ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಕೆಲವು ವಕೀಲರ ಗುಂಪು ಒತ್ತಡದ ತಂತ್ರಗಳನ್ನು ಬಳಸುತ್ತಿದೆ ಎಂದು ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಇಂತಹ ಬೆಳವಣಿಗೆ ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗ ಪ್ರಕ್ರಿಯೆಗಳಲ್ಲಿ ಇರಿಸಲಾಗಿರುವ ನಂಬಿಕೆಗೆ ಅಪಾಯವನ್ನು ಉಂಟುಮಾಡುತ್ತವೆ. ಇದೊಂದು ‘ನ್ಯಾಯಾಂಗಕ್ಕೆ ಬೆದರಿಕೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್‌ಗೆ ರಿಲೀಫ್ – ಸಿಎಂ ಸ್ಥಾನದಿಂದ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಸದ್ಯ ನ್ಯಾಯಾಲಯಗಳನ್ನು ಅಪಖ್ಯಾತಿಗೊಳಿಸುವ ಮತ್ತು ಸಾರ್ವಜನಿಕ ವಿಶ್ವಾಸವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ಕೆಲ ವಕೀಲರು ತಮ್ಮ ರಾಜಕೀಯ ಕಾರ್ಯಸೂಚಿಯ ಆಧಾರದ ಮೇಲೆ ನ್ಯಾಯಾಲಯದ ನಿರ್ಧಾರಗಳ ಆಯ್ದ ಟೀಕೆ ಅಥವಾ ಹೊಗಳಿಕೆಯನ್ನು ಒಳಗೊಂಡಿರುವ ಕೆಲವು ತಂತ್ರಗಳನ್ನು ಮಾಡುತ್ತಿದ್ದಾರೆ. ಕೆಲವು ವಕೀಲರು ಹಗಲಿರುಳು ರಾಜಕಾರಣಿಗಳನ್ನು ರಕ್ಷಿಸುತ್ತಿದ್ದಾರೆ. ಮಾಧ್ಯಮಗಳ ಮೂಲಕ ನ್ಯಾಯಾಧೀಶರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ ಎಂದು ಸಿಜೆಐಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಜೆಡಿಎಸ್‌ನಲ್ಲಿ ಉಳಿದಿರೋ ನಿಷ್ಠಾವಂತರು ‘ಇಂಡಿಯಾ’ ಕೂಟಕ್ಕೆ ಬೆಂಬಲ ಕೊಡ್ತೀವಿ: ಸಿಎಂ ಇಬ್ರಾಹಿಂ

    ಬೆಂಚ್ ಫಿಕ್ಸಿಂಗ್‌ನ ಸಂಪೂರ್ಣ ಸಿದ್ಧಾಂತವನ್ನು ಕೆಲ ಗುಂಪು ನಡೆಸುತ್ತಿದೆ ಎಂದು ಪತ್ರದಲ್ಲಿ ಹೈಲೈಟ್ ಮಾಡಿದೆ ಮತ್ತು ‘ರಾಜಕೀಯ ಫ್ಲಿಪ್-ಫ್ಲಾಪಿಂಗ್’ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ರಾಜಕಾರಣಿಗಳು ಯಾರೋ ಒಬ್ಬರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳುವುದು ವಿಚಿತ್ರವಾಗಿದೆ. ನ್ಯಾಯಾಲಯದ ತೀರ್ಪಿಗೆ ಮಣಿಯದಿದ್ದರೆ ನ್ಯಾಯಾಲಯದ ಒಳಗೆ ಹಾಗೂ ಮಾಧ್ಯಮಗಳ ಮೂಲಕ ತ್ವರಿತವಾಗಿ ನ್ಯಾಯಾಲಯಗಳನ್ನು ಟೀಕಿಸುತ್ತಾರೆ ಎಂದು ವಕೀಲರು ಹೇಳಿದ್ದಾರೆ. ಇದನ್ನೂ ಓದಿ: ಹಾಸನ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

    2024ರ ಲೋಕಸಭೆ ಚುನಾವಣೆಗೆ ಮುನ್ನವೇ ಈ ಬೆಳವಣಿಗೆಗಳು ನಡೆಯುತ್ತಿವೆ ಎಂದು ಒತ್ತಿ ಹೇಳಿರುವ ವಕೀಲರ ಗುಂಪು, ಕೆಲವು ಅಂಶಗಳು ನ್ಯಾಯಾಧೀಶರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿವೆ ಮತ್ತು ಅವರ ಪ್ರಕರಣಗಳಲ್ಲಿ ನಿರ್ದಿಷ್ಟ ರೀತಿಯಲ್ಲಿ ತೀರ್ಪು ನೀಡುವಂತೆ ನ್ಯಾಯಾಧೀಶರ ಮೇಲೆ ಒತ್ತಡ ಹೇರಲು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಗಳನ್ನು ಹರಡುತ್ತಿವೆ ಎಂದು ಪತ್ರದಲ್ಲಿ ಆರೋಪಿಸಿದೆ. ಇಂತಹ ದಾಳಿಗಳಿಂದ ನಮ್ಮ ನ್ಯಾಯಾಲಯಗಳನ್ನು ರಕ್ಷಿಸಲು ನಾವು ಬಲವಾಗಿ ನಿಲ್ಲುವಂತೆ ಮತ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಸುಪ್ರೀಂ ಕೋರ್ಟ್‌ಗೆ ವಿನಂತಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಭಾರತ ಸಮನ್ಸ್‌ ನೀಡಿದರೂ ಕೇಜ್ರಿವಾಲ್‌ ಬಂಧನ ಬಗ್ಗೆ ಅಮೆರಿಕ ಮತ್ತೆ ಪ್ರತಿಕ್ರಿಯೆ

  • ರಾಜಕೀಯ ಪಕ್ಷಕ್ಕಾಗಿ ನೀವೂ ನ್ಯಾಯಾಲಯದಲ್ಲಿಲ್ಲ, ಮಾ.21ರ ಒಳಗಡೆ ಎಲ್ಲ ದಾಖಲೆ ಬಿಡುಗಡೆಗೆ ಸೂಚನೆ – ಎಸ್‌ಬಿಐ ವಿರುದ್ಧ ಸುಪ್ರೀಂ ಕೆಂಡ

    ನವದೆಹಲಿ : ಚುನಾವಣಾ ಬಾಂಡ್‌ಗಳ (Electoral Bond) ಬಗ್ಗೆ ಪೂರ್ಣ ಪ್ರಮಾಣ ಮಾಹಿತಿ ನೀಡದ ಎಸ್‌ಬಿಐ(SBI) ಅನ್ನು ಮತ್ತೆ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್ (Supreme Court) ಯುನಿಕ್ ಆಲ್ಫಾನ್ಯೂಮರಿಕ್ ಸಂಖ್ಯೆ ಮತ್ತು ರಿಡೀಮ್ ಮಾಡಿದ ಬಾಂಡ್‌ಗಳ ಸೀರಿಯಲ್ ನಂಬರ್ ಸೇರಿದಂತೆ ಚುನಾವಣಾ ಬಾಂಡ್‌ಗಳ ಅಗತ್ಯ ಎಲ್ಲಾ ವಿವರಗಳನ್ನು ಗುರುವಾರ ಸಂಜೆ 5 ಗಂಟೆಯೊಳಗೆ ಬಹಿರಂಗಪಡಿಸುವಂತೆ ನಿರ್ದೇಶನ ನೀಡಿದೆ.

    ಇಂದು ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ಸಾಂವಿಧಾನಿಕ ಪೀಠ, ಎಸ್‌ಬಿಐನಿಂದ ಮಾಹಿತಿ ಪಡೆದ ತಕ್ಷಣ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪರಿಷ್ಕೃತ ವಿವರಗಳನ್ನು ಅಪ್‌ಲೋಡ್ ಮಾಡಬೇಕು, ಎಲ್ಲ ಪ್ರಕ್ರಿಯೆ ಬಳಿಕ ಎಸ್‌ಬಿಐ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಬೇಕು ಎಂದು ಸೂಚಿಸಿದೆ.

    ಮಾಹಿತಿ ನಿಷ್ಪಕ್ಷಪಾತವಾಗಿರಬೇಕು, ಯಾವ ಮಾಹಿತಿಯೂ ಮುಚ್ಚಿಟ್ಟಲ್ಲ ಎಂದು ಖಚಿತಪಡಿಸಿಕೊಳ್ಳಬೇಕು, ನೀವು ರಾಜಕೀಯ ಪಕ್ಷಕ್ಕಾಗಿ ನ್ಯಾಯಲಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂದು ನಾವು ಭಾವಿಸುತ್ತೇವೆ. ಪ್ರತಿಯೊಂದು ಸಂಭಾವ್ಯ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಸಿಜೆಐ ಡಿ.ವೈ ಚಂದ್ರಚೂಡ್ ಸ್ಪಷ್ಟಪಡಿಸಿದರು.

    ಚುನಾವಣಾ ಬಾಂಡ್ ಸಂಖ್ಯೆಯನ್ನು ಬಹಿರಂಗಪಡಿಸದೆ ಆ ಮೂಲಕ ತನ್ನ ಹಿಂದಿನ ತೀರ್ಪನ್ನು ಸಂಪೂರ್ಣವಾಗಿ ಅನುಸರಿಸದಿದ್ದಕ್ಕಾಗಿ ಎಸ್‌ಬಿಐ ಅನ್ನು ಸುಪ್ರೀಂಕೋರ್ಟ್ ಈ ಹಿಂದೆಯೂ ತರಾಟೆಗೆ ತೆಗೆದುಕೊಂಡಿತ್ತು‌. ದಾನಿಗಳನ್ನು ಸ್ವೀಕರಿಸುವವರಿಗೆ ಲಿಂಕ್ ಮಾಡುವ ಚುನಾವಣಾ ಬಾಂಡ್ ಸಂಖ್ಯೆಗಳನ್ನು ಬಹಿರಂಗಪಡಿಸಬೇಕು ಎಂದು ಉನ್ನತ ನ್ಯಾಯಾಲಯವು ಹೇಳಿತ್ತು.

     

    ವಿಚಾರಣೆ ವೇಳೆ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿದ ತೀರ್ಪನ್ನು ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ವ್ಯಕ್ತಿಗಳು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಕೇಂದ್ರ ಸರ್ಕಾರದ ಕಳವಳ ವ್ಯಕ್ತಪಡಿಸಿತು‌. ರಾಜಕೀಯ ಪಕ್ಷಗಳು ಖರೀದಿಸಿರುವ ಚುನಾವಣಾ ಬಾಂಡ್‌ಗಳ ಬಹಿರಂಗಪಡಿಸುವಿಕೆಗೆ ಸಂಬಂಧಿಸಿದ ಅಂಕಿಅಂಶಗಳನ್ನು ತಿರುಚಲಾಗುತ್ತಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಸಿಜೆ ಡಿವೈ ಚಂದ್ರಚೂಡ್, ನಮ್ಮ ತೀರ್ಪುಗಳನ್ನು ಮೂರನೇ ವ್ಯಕ್ತಿಗಳು ಹೇಗೆ ಅರ್ಥೈಸುತ್ತಾರೆ ಎಂಬುದರ ಬಗ್ಗೆ ಕಾಳಜಿಯಿಲ್ಲ, ನ್ಯಾಯಾಧೀಶರಾಗಿ ನಾವು ಕೇವಲ ಕಾನೂನಿನ ನಿಯಮದಲ್ಲಿದ್ದೇವೆ ಮತ್ತು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತೇವೆ. ನ್ಯಾಯಾಲಯವು ಈ ರಾಜಕೀಯದಲ್ಲಿ ಕಾನೂನಿನ ಆಡಳಿತಕ್ಕಾಗಿ ಮಾತ್ರ ಕೆಲಸ ಮಾಡುವುದು. ನಾವು ತೀರ್ಪಿನ ಪ್ಯಾರಾ ಬಿ ಮತ್ತು ಸಿ ಯಲ್ಲಿ ಮಾತ್ರ ನಮ್ಮ ನಿರ್ದೇಶನಗಳನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಹೇಳಿದರು.

     

  • ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ, ಆತ್ಮಶೋಧನೆ ಅಗತ್ಯವಿದೆ – ಸುಪ್ರೀಂ ಕೋರ್ಟ್

    ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ, ಆತ್ಮಶೋಧನೆ ಅಗತ್ಯವಿದೆ – ಸುಪ್ರೀಂ ಕೋರ್ಟ್

    ನವದೆಹಲಿ: ವಿಷಯ ಸುಪ್ರೀಂಕೋರ್ಟ್‌ಗೆ (Supreme Court) ಬರುವ ಮೊದಲೇ ಆಯಾ ರಾಜ್ಯಗಳ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಮೇಲೆ ರಾಜ್ಯಪಾಲರು ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

    ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (Banwarilal Purohit) ಅವರು ವಿಧೇಯಕಗಳನ್ನು ಅನುಮೋದಿಸುವಲ್ಲಿ ವಿಳಂಬ ಮಾಡಿದ್ದರ ವಿರುದ್ಧ ಪಂಜಾಬ್ ಸರ್ಕಾರ (Punjab Govt) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ನೇತೃತ್ವದ ಪೀಠ, ವಿಷಯಗಳು ಸುಪ್ರೀಂಕೋರ್ಟ್‌ಗೆ ಬಂದಾಗ ಮಾತ್ರ ರಾಜ್ಯಪಾಲರು ಕಾರ್ಯನಿರ್ವಹಿಸಿದಾಗ ಇದು ಕೊನೆಗೊಳ್ಳಬೇಕು. ರಾಜ್ಯಪಾಲರಿಂದ ಸ್ವಲ್ಪ ಆತ್ಮಶೋಧನೆ ಅಗತ್ಯವಿದೆ. ಅವರು ಜನರ ಚುನಾಯಿತ ಪ್ರತಿನಿಧಿಗಳಲ್ಲ ಎಂದು ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.

    ಇದೇ ವೇಳೆ ಪಂಜಾಬ್ ರಾಜ್ಯಪಾಲರು ಕೈಗೊಂಡ ಕ್ರಮಗಳ ಕುರಿತು ನವೀಕರಿಸಿದ ವರದಿಯನ್ನು ಸಲ್ಲಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿ ಪೀಠ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿತು. ಇದನ್ನೂ ಓದಿ: ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

    ಇಂದಿನ ವಿಚಾರಣೆಯ ಸಂದರ್ಭದಲ್ಲಿ, ಪಂಜಾಬ್ ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ಮೆಹ್ತಾ, ಪುರೋಹಿತ್ ಅವರು ತಮ್ಮ ಮುಂದೆ ಇಟ್ಟಿರುವ ಮಸೂದೆಗಳ ಮೇಲೆ ಕ್ರಮ ಕೈಗೊಂಡಿದ್ದಾರೆ ಮತ್ತು ರಾಜ್ಯ ಸರ್ಕಾರದ ಮನವಿಯು ಅನಗತ್ಯ ದಾವೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿದರು. ಈ ವೇಳೆ ಈ ವಾದಕ್ಕೆ ಹೆಚ್ಚಿನ ಮಾಹಿತಿ ನೀಡಿ ಎಂದು ಪೀಠ ಸೂಚಿಸಿತು.

    ವಿಚಾರಣೆಯ ಸಂದರ್ಭದಲ್ಲಿ, ಹಿರಿಯ ವಕೀಲ ಮತ್ತು ಭಾರತದ ಮಾಜಿ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರು ಕೇರಳ ಮತ್ತು ತಮಿಳುನಾಡು ಸಲ್ಲಿಸಿದ ಇದೇ ರೀತಿಯ ಅರ್ಜಿಗಳನ್ನು ಪ್ರಸ್ತಾಪಿಸಿ, ಜನರ ಕಲ್ಯಾಣಕ್ಕಾಗಿ ಅಂಗೀಕರಿಸಿದ ಮಸೂದೆಗಳ ಬಗ್ಗೆ ರಾಜ್ಯಪಾಲರು ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

     

    ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ರಾಜ್ಯಪಾಲ ಆರ್‌ಎನ್ ರವಿ ವಿರುದ್ಧ ಅರ್ಜಿ ಸಲ್ಲಿಸಿದರೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು 8ಕ್ಕೂ ಹೆಚ್ಚು ಮಸೂದೆಗಳ ಪರಿಗಣನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಶುಕ್ರವಾರ ಎಲ್ಲ ಅರ್ಜಿಗಳು ಒಟ್ಟಿಗೆ ವಿಚಾರಣೆಗೆ ಬರಲಿವೆ.

    ಪ್ರಸ್ತುತ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪಂಜಾಬ್ ವಿಧಾನಸಭೆ ಅಂಗೀಕರಿಸಿದ 27 ಮಸೂದೆಗಳಲ್ಲಿ 22ಕ್ಕೆ ಪುರೋಹಿತ್ ತಮ್ಮ ಒಪ್ಪಿಗೆ ನೀಡಿದ್ದಾರೆ. ಸದನದಲ್ಲಿ ಹಣದ ಮಸೂದೆ ಮಂಡಿಸಲು ರಾಜ್ಯಪಾಲರ ಒಪ್ಪಿಗೆ ಬೇಕು. ಈ ಒಪ್ಪಿಗೆ ನೀಡಲು ವಿಳಂಬ ಮಾಡುತ್ತಿದ್ದಾರೆ ಆಪ್‌ ಸರ್ಕಾರ ಆರೋಪಿಸಿದೆ.