Tag: ಡಿಸಿಎಂ ಅಶ್ವಥ್ ನಾರಾಯಣ

  • ಸಿಎಂ ಸ್ಥಾನ ಖಾಲಿ ಇಲ್ಲ, ಈಗ ಬದಲಾವಣೆಯ ಚರ್ಚೆಯೂ ಇಲ್ಲ: ಡಿಸಿಎಂ

    ಸಿಎಂ ಸ್ಥಾನ ಖಾಲಿ ಇಲ್ಲ, ಈಗ ಬದಲಾವಣೆಯ ಚರ್ಚೆಯೂ ಇಲ್ಲ: ಡಿಸಿಎಂ

    ಧಾರವಾಡ: ರಾಜ್ಯದಲ್ಲಿ ಸಿಎಂ ಬದಲಾವಣೆ ಆದಲ್ಲಿ ಮುಂದಿನ ಸಿಎಂ ಉತ್ತರ ಕರ್ನಾಟಕದವರೇ ಆಗುತ್ತಾರೆ ಎನ್ನುವ ಸಚಿವ ಉಮೇಶ ಕತ್ತಿ ಹೇಳಿಕೆಗೆ, ಡಿಸಿಎಂ ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದು, ಸದ್ಯ ಸಿಎಂ ಸ್ಥಾನ ಖಾಲಿ ಇಲ್ಲ, ಈಗ ಬದಲಾವಣೆಯ ಚರ್ಚೆಯೂ ಇಲ್ಲ ಎಂದು ಟಾಂಗ್ ನೀಡಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಸುಮಲತಾ-ಎಚ್‍ಡಿಕೆ ವಾಕ್ ಸಮರ ಈಗಾಗಲೇ ಮುಗಿದು ಹೋಗಿರುವ ಅಧ್ಯಾಯ, ಅವರ ಮಧ್ಯೆ ಮಾತಿನ ಯುದ್ಧ ಮುಗಿದು ಹೋಗಿದೆ ಎಂದು ಹೇಳಿದರು. ಕೆಆರ್‍ಎಸ್‍ನಲ್ಲಿ ಯಾವುದೇ ಬಿರುಕು ಇಲ್ಲ ಎಂದು ವರದಿ ಹೇಳಿದೆ. ಅಂತಹ ಯಾವುದೇ ಸಂದರ್ಭ ಬಂದರೂ ಸರ್ಕಾರ ಬಗೆಹರಿಸುತ್ತದೆ ಹೇಳಿದ್ದಾರೆ.

    ಯಡಿಯೂರಪ್ಪನವರೇ ಈಗ ಸಿಎಂ ಆಗಿದ್ದಾರೆ. ಸಿಎಂ ಸ್ಥಾನ ಈಗ ಭರ್ತಿಯಾಗಿಯೇ ಇದೆ, ಅವರೇ ಮುಂದುವರೆಯುತ್ತಾರೆ ಎಂದ ಅವರು, ಅವರು ಸಿಎಂ, ಇವರು ಸಿಎಂ ಎನ್ನುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ನಮ್ಮಲ್ಲಿ ಸಂಪೂರ್ಣ ಒಗ್ಗಟ್ಟಿದೆ ಎಂದಿದ್ದಾರೆ.

    ಅನೇಕ ನಾಯಕರ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿದ ಅವರು, ದೆಹಲಿ ನಮ್ಮ ದೇಶದ ರಾಜಧಾನಿ, ನಮ್ಮ ಪಕ್ಷದ ಕೇಂದ್ರ ಕಚೇರಿ ಇದೆ. ಹೀಗಾಗಿ ಎಲ್ಲಿ ಬೇಕಾದರೂ ಹೋಗಿ ಯಾರನ್ನಾದರೂ ಮಾತನಾಡಿಸಿ ಬರಬಹುದು ಅದಕ್ಕೂ ಸಿಎಂ ಬದಲಾವಣೆಗೂ ಸಂಬಂಧ ಇಲ್ಲ ಎಂದು ಖಾರವಾಗಿ ನುಡಿದರು. ಇದನ್ನೂ ಓದಿ:ಎಂಟು ಬಾರಿ ಶಾಸಕನಾದವನು, ಸಿಎಂ ಆಗುವ ಯೋಗ್ಯತೆ ನನಗಿದೆ: ಸಚಿವ ಕತ್ತಿ

  • ಮಲ್ಲೇಶ್ವರದಲ್ಲಿ ವರ್ತಕರಿಗೆ ವ್ಯಾಕಿನೇಷನ್‍ಗೆ ಚಾಲನೆ ನೀಡಿದ ಡಿಸಿಎಂ

    ಮಲ್ಲೇಶ್ವರದಲ್ಲಿ ವರ್ತಕರಿಗೆ ವ್ಯಾಕಿನೇಷನ್‍ಗೆ ಚಾಲನೆ ನೀಡಿದ ಡಿಸಿಎಂ

    ಬೆಂಗಳೂರು: ಮೂರನೇ ಅಲೆ ತಡೆಗಟ್ಟುವ ಹಾಗೂ ಹೆಚ್ಚಾಗಿ ಜನರ ಸಂಪರ್ಕಕ್ಕೆ ಬರುವ ವರ್ತಕರಿಗಾಗಿ ಮಲ್ಲೇಶ್ವರದಲ್ಲಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ, ವಿಶೇಷ ಲಸಿಕಾ ಅಭಿಯಾನಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಇಂದು ಚಾಲನೆ ನೀಡಿದರು.

    ಮಲ್ಲೇಶ್ವರದ 8ನೇ ಕ್ರಾಸ್‍ನಲ್ಲಿರುವ ವಾಸವಿ ಮಹಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರತಿ ವರ್ತಕರಿಗೂ ಲಸಿಕೆ ನೀಡಲಾಗುತ್ತಿದೆ. 1500 ಮಂದಿ ಇಲ್ಲಿ ಲಸಿಕೆ ಪಡೆದರು.

    I seek your wholehearted support to make Malleshwara the first constituency to vaccinate 100% of its citizens above 18 yrs.

    I urge all Apartment Associations, Linguistic Forums, Religious Associations & NGOs in Malleshwara to provide list of those yet to take a single dose. pic.twitter.com/eVaZM6SgsD

    — Dr. Ashwathnarayan C. N. (@drashwathcn) July 1, 2021

    ಈಗಾಗಲೇ ಕ್ಷೇತ್ರದಲ್ಲಿ ಫ್ರಂಟ್‍ಲೈನ್ ವಾರಿಯರುಗಳೆಲ್ಲರಿಗೂ ಲಸಿಕೆ ಹಾಕಲಾಗಿದ್ದು, ಅದರ ಬೆನ್ನಲ್ಲೇ ಆಟೋ ಚಾಲಕರು, ಹಿರಿಯ ನಾಗರೀಕರು, ವೈದ್ಯರು, ವಕೀಲರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದವರಿಗೂ ವ್ಯಾಕ್ಸಿನೇಷನ್ ಮಾಡಲಾಗಿದೆ. ಈಗ ವರ್ತಕರಿಗಾಗಿ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಮೂರನೇ ಅಲೆಯಲ್ಲಿ ಸೋಂಕು ಬೇಗ ಬೇಗ ಹರಡುವುದಿದೆ. ಇದನ್ನು ತಡೆಯಲು ಲಸಿಕೆ ರಾಮಬಾಣ. ಆದ್ದರಿಂದ ಕ್ಷೇತ್ರದ ಪ್ರತಿಯೊಬ್ಬರನ್ನೂ ಹುಡುಕಿ ಹುಡುಕಿ ಲಸಿಕೆ ಕೊಡಲಾಗುತ್ತಿದೆ ಎಂದರು.

    ಒಂದು ಕಡೆ ಬಿಬಿಎಂಪಿ ವತಿಯಿಂದ ಲಸಿಕೀಕರಣ ನಡೆಯುತ್ತಿದೆ. ಮತ್ತೊಂದೆಡೆ ಖಾಸಗಿ ಸಂಸ್ಥೆಗಳ ನೆರವಿನಿಂದ ಅಶ್ವತ್ಥನಾರಾಯಣ ಫೌಂಡೇಶನ್ ಇನ್ನೊಂದೆಡೆ ಕ್ಷೇತ್ರದ ಉದ್ದಗಲಕ್ಕೂ ಯಶಸ್ವಿಯಾಗಿ ವ್ಯಾಕ್ಸಿನೇಷನ್ ಮಾಡಲಾಗುತ್ತಿದ್ದು, ಈವರೆಗೆ 60,000ಕ್ಕೂ ಹೆಚ್ಚು ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಇಂದಿನಿಂದ ವಿವಿಧ ಕ್ಷೇತ್ರಗಳಲ್ಲಿನ 1.25 ಲಕ್ಷ ಜನರಿಗೆ ಲಸಿಕೆ ಕೊಡುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದೆ. ಕೆಲ ದಿನಗಳಲ್ಲೇ ಮಲ್ಲೇಶ್ವರಂ ಕ್ಷೇತ್ರದ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

    ಇವತ್ತು ಅಂಗಡಿ ಮುಂಗಟ್ಟುಗಳ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳಿಗೆ ಲಸಿಕೆ ನೀಡಲಾಗುತ್ತಿದೆ ಎಂದ ಅವರು, ಬೆಂಗಳೂರು ರಾಜ್ಯದಲ್ಲಿಯೇ ಅತಿ ಹೆಚ್ಚು ಜನದಟ್ಟಣಿಯುಳ್ಳ ನಗರವಾಗಿದೆ. ಇಲ್ಲಿಂದ ಬೇರೆ ಕಡೆ ಸೋಂಕು ಹರಡಬಾರದು ಎನ್ನುವ ಕಾರಣಕ್ಕೆ ಇಡೀ ನಗರದಲ್ಲಿ ಭರದಿಂದ ಲಸಿಕೀಕರಣ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ವಾಸವಿ ಸಂಘದ ಅಧ್ಯಕ್ಷ ಡಾ.ಗೋವಿಂದರಾಜು, ಬಿಜೆಪಿಯ ಕೆಲ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

    ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ:

    ಎಂ.ಎಸ್.ರಾಮಯ್ಯ ಆಸ್ಪತ್ರೆ ವತಿಯಿಂದ ವಿದ್ಯಾರ್ಥಿಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮಕ್ಕೂ ಡಿಸಿಎಂ ಅಶ್ವತ್ಥನಾರಾಯಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಎಲ್ಲ ಶಿಕ್ಷಣ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸುತ್ತುರುವುದು ಉತ್ತಮವಾದ ಕಾರ್ಯ. ಇದಕ್ಕೆ ಸರಕಾರ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಶೈಕ್ಷಣಿಕ ವರ್ಷ ನಿರಾಯಾಸವಾಗಿ ನಡೆಯಬೇಕಾದರೆ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲೇಬೇಕು ಎಂದರು.

    ಎಂ.ಎಸ್.ರಾಮಯ್ಯ ಆಸ್ಪತ್ರೆ ಅಧ್ಯಕ್ಷ ಎಂ.ಆರ್.ಜಯರಾಂ ಹಾಗೂ ಸಿಇಒ ಎಂ.ಆರ್.ಶ್ರೀನಿವಾಸ ಮೂರ್ತಿ ಸೇರಿದಂತೆ ವೈದ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ಉಪಸ್ಥಿತರಿದ್ದರು. ಅದಕ್ಕೂ ಡಿಸಿಎಂ ಅವರು ಎಂಎಸ್‍ಆರ್ ನಗರದಲ್ಲಿ ನಡೆದ ಲಸಿಕೆ ಅಭಿಯಾನಕ್ಕೂ ಚಾಲನೆ ನೀಡಿದರು.

  • ಅಂಬುಲೆನ್ಸ್ ಓವರ್ ಟೇಕ್ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ

    ಅಂಬುಲೆನ್ಸ್ ಓವರ್ ಟೇಕ್ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ

    ಬೆಂಗಳೂರು: ಅಂಬುಲೆನ್ಸ್ ಬರುತ್ತಿದೆ ಅಂದರೆ ಸಾಮಾನ್ಯವಾಗಿ ಅದಕ್ಕೆ ದಾರಿ ಮಾಡಿಕೊಡುತ್ತೇವೆ. ಆದರೆ ಅದನ್ನು ಪಾಲಿಸಿ ಮಾದರಿಯಾಗಬೇಕಿದ್ದ ನಮ್ಮ ಡಿಸಿಎಂ ಅಶ್ವಥ್ ನಾರಾಯಣ ಮುಂದೆ ಬರುತ್ತಿದ್ದ ಅಂಬುಲೆನ್ಸ್ ಹಿಂದಿಕ್ಕಿ ಅಡ್ಡ ಬಂದಿದ್ದಾರೆ.

    ಸಂಜೆ 4:30ಕ್ಕೆ ಬೆಂಗಳೂರಿನ ಕಾವೇರಿ ಜಂಕ್ಷನ್ ಬಳಿ ಯಾವ ಮಟ್ಟಿಗೆ ಜಾಮ್ ಅನ್ನೋದು ಆ ರಸ್ತೆಯಲ್ಲಿ ಓಡಾಡೋರಿಗೆ ಗೊತ್ತೆ ಇರುತ್ತೆ. ಆ ರೀತಿಯ ಜಾಮ್ ರಸ್ತೆಯಲ್ಲೂ ಸಾಮಾನ್ಯ ಜನ ಅಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟಿದ್ದರೂ ಡಿಸಿಎಂ ಸಾಹೇಬ್ರು ದಾರಿಬಿಡದೇ ಫೋನ್ ನಲ್ಲಿ ಬ್ಯುಸಿಯಾಗಿದ್ದಾರೆ.

    ಅಂಬುಲೆನ್ಸ್ ಓವರ್ ಟೆಕ್ ಮಾಡಿದ್ದರೆ ದಂಡ ಇದೆ. ಆ ದಂಡವನ್ನ ಡಿಸಿಎಂ ಸಾಹೇಬ್ರಿಗೆ ಹಾಕಬೇಕಬೇಕು. ಸಾಮಾನ್ಯ ಜನ ಈ ತಪ್ಪನ್ನು ಮಾಡಿದರೆ ಹೇಗೆ ಬೆಲೆ ತೆರುತ್ತಾರೋ ಅದೇ ರೀತಿ ಡಿಸಿಎಂ ಬೆಲೆ ತೆತ್ತು ದಂಡ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.

  • ಸರ್ಕಾರಿ ಕಚೇರಿಗಳಲ್ಲಿ 100ರ ನೋಟಿಗೆ ಬೆಲೆಯಿಲ್ಲ, ಪಿಂಕ್ ನೋಟ್‍ಗೆ ಮಾತ್ರ ಬೆಲೆ: ಎಂಎಲ್‍ಸಿ ಸಿ.ಎಂ ಲಿಂಗಪ್ಪ

    ಸರ್ಕಾರಿ ಕಚೇರಿಗಳಲ್ಲಿ 100ರ ನೋಟಿಗೆ ಬೆಲೆಯಿಲ್ಲ, ಪಿಂಕ್ ನೋಟ್‍ಗೆ ಮಾತ್ರ ಬೆಲೆ: ಎಂಎಲ್‍ಸಿ ಸಿ.ಎಂ ಲಿಂಗಪ್ಪ

    ರಾಮನಗರ: ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ 100 ರೂ. ನೋಟಿಗೆ ಬೆಲೆಯೇ ಇಲ್ಲ, ಏನಿದ್ರೂ ಪಿಂಕ್ ನೋಟಿಗೆ ಬೆಲೆ. ಇಂತಹ ವಿಚಾರವಾಗಿ ಕ್ಲೀನಿಂಗ್ ಕೆಲಸವನ್ನು ಡಿಸಿಎಂ ಅಶ್ವಥ್ ನಾರಾಯಣ ಅವರು ಮಾಡಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ ಲಿಂಗಪ್ಪ ಟಾಂಗ್ ನೀಡಿದ್ದಾರೆ.

    ಡಿ.9ರ ನಂತರ ರಾಮನಗರದಲ್ಲಿ `ಕ್ಲೀನಿಂಗ್’ ಆರಂಭಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಹೇಳಿದ್ದಾರೆ. ಮೋದಿ ಸರ್ಕಾರ ಸ್ವಚ್ಛ ಭಾರತ ಕಾರ್ಯಕ್ರಮ ಆರಂಭಿಸಿ ನಾಲ್ಕು ವರ್ಷವಾಯಿತು. ಅದನ್ನು ಜಿಲ್ಲೆಯಲ್ಲಿ ಅವರು ಮುಂದುವರಿಸುವುದಾದರೆ ನಾವೇ ಅವರಿಗೆ ಪೊರಕೆ, ಫಿನಾಯಿಲ್ ಕೊಡುತ್ತೇವೆ. ಸ್ವಚ್ಛತಾ ಕಾರ್ಯಕ್ಕೆ ಪಂಚಾಂಗದಲ್ಲಿ ಒಳ್ಳೆಯ ದಿನವನ್ನು ಹುಡುಕಿ ಕೊಡುತ್ತೇವೆ. ಅದನ್ನು ಬಿಟ್ಟು ಸಚಿವರು ಡಿ.ಕೆ ಸಹೋದರರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದರೆ ಅದನ್ನು ಸಹಿಸುವುದಿಲ್ಲ ಎಂದು ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದರು.

    ರಾಮನಗರದಲ್ಲಿ ಈಗ ಇರುವ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ, ಎಸ್‍ಪಿ ಎಲ್ಲರೂ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ವರ್ಗಾವಣೆ ಆಗಿ ಬಂದವರೇ. ಇದರಲ್ಲಿ ಡಿ.ಕೆ ಸಹೋದರರ ಕೈವಾಡ ಏನೂ ಇಲ್ಲ. ಇವರನ್ನು ಜಿಲ್ಲೆಗೆ ಹಾಕುವಂತೆ ಅವರೇನು ಶಿಫಾರಸು ಮಾಡಿಲ್ಲ. ಹೀಗಾಗಿ ಯಾವ ವ್ಯವಸ್ಥೆಯನ್ನು ಸಚಿವರು ಈಗ ಕ್ಲೀನ್ ಮಾಡುತ್ತಾರೆ? ಎಂದು ಪ್ರಶ್ನಿಸಿದರು.

    ಎಸ್‍ಪಿ ಅನೂಪ್ ಶೆಟ್ಟಿ ಬಗ್ಗೆ ಡಿಕೆ ಬ್ರದರ್ಸ್ ಹೇಳಿಕೆಯನ್ನು ನಾನು ಬೆಂಬಲಿಸುವುದಿಲ್ಲ. ಅಲ್ಲದೇ ಅದನ್ನು ಸಮರ್ಥನೆ ಕೂಡ ಮಾಡಿಕೊಳ್ಳುವುದಿಲ್ಲ. ಅದಕ್ಕೆ ಅವರೇ ಸಮರ್ಥನೆ ಮಾಡಿಕೊಳ್ಳುವಷ್ಟು ಸಮರ್ಥರಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ ಕೆಲವು ಅಧಿಕಾರಿಗಳಿಂದ ರೈತರಿಗೆ ಅನ್ಯಾಯ ಆಗುತ್ತಿದೆ. ಬಿಡದಿಯ ಎಂ. ಕರೇನಹಳ್ಳಿಯಲ್ಲಿನ ತೋಟಿಗಳ ಏಳು ಕುಟುಂಬಕ್ಕೆ 10 ಎಕರೆ ಭೂಮಿ ಹಂಚಿಕೆ ಮಾಡಲು ರಾಮನಗರದ ಅಧಿಕಾರಿಯೊಬ್ಬರು 10 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ. ಇಂತಹವರನ್ನು ಬೇಕಿದ್ದರೆ ಸ್ವಚ್ಛ ಮಾಡಿ ಎಂದರು.

    ಇದೇ ವೇಳೆ ಕನಕಪುರ ಮೆಡಿಕಲ್ ಕಾಲೇಜು ವಿಚಾರದ ಬಗ್ಗೆ ಮಾತನಾಡಿ, ಡಿಕೆಶಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ರಾಮನಗರಕ್ಕೆ ಈಗಾಗಲೇ ರಾಜೀವ್‍ಗಾಂಧಿ ವಿ.ವಿ. ಘೋಷಿಸಿರುವ ಕಾರಣ ಜಿಲ್ಲೆಯ ಕೋಟಾ ಅಡಿ ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡುವುದು ಎಂದು ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲೇ ತೀರ್ಮಾನ ಆಗಿತ್ತು. ಬಿಜೆಪಿ ಸರ್ಕಾರ ಇಲ್ಲಿಂದ ಕಿತ್ತು ಚಿಕ್ಕಬಳ್ಳಾಪುರಕ್ಕೆ ಕೊಟ್ಟಿದ್ದು ಸರಿಯಲ್ಲ. ಇದರ ವಿರುದ್ಧ ಹೋರಾಟ ಮಾಡುವುದಾಗಿ ಡಿ.ಕೆ. ಶಿವಕುಮಾರ್ ಈಗಾಗಲೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಅವರ ಜೊತೆಗೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರೂ ಹೋರಾಟಕ್ಕೆ ನಿಲ್ಲಲಿದ್ದೇವೆ’ ಎಂದು ಲಿಂಗಪ್ಪ ಎಚ್ಚರಿಸಿದರು.