Tag: ಡಿಸಿಎಂ ಪರಮೇಶ್ವರ್

  • ಸಿಎಂನದ್ದು ಕಣ್ಣೀರಿನ, ಡಿಸಿಎಂ ಅವರದ್ದು ಬಿಲ್ಡಪ್ ರಾಜಕಾರಣ- ತೇಜಸ್ವಿನಿ ಕಿಡಿ

    ಸಿಎಂನದ್ದು ಕಣ್ಣೀರಿನ, ಡಿಸಿಎಂ ಅವರದ್ದು ಬಿಲ್ಡಪ್ ರಾಜಕಾರಣ- ತೇಜಸ್ವಿನಿ ಕಿಡಿ

    ತುಮಕೂರು: ಸಿಎಂ ಅವರದ್ದು ಕಣ್ಣೀರಿನ ರಾಜಕಾರಣವಾದರೆ ಡಿಸಿಎಂ ಅವರದ್ದು ಬಿಲ್ಡಪ್ ರಾಜಕಾರಣ ಎಂದು ಕುಮಾರಸ್ವಾಮಿ ಹಾಗೂ ಪರಮೇಶ್ವರ್ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಹರಿಹಾಯ್ದಿದ್ದಾರೆ.

    ತುಮಕೂರಿನಲ್ಲಿ ಬರ ಅಧ್ಯಯನ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೇಜಸ್ವಿನಿ ಅವರು, ಈ ಭಾಗದ ಎತ್ತಿನ ಹೊಳೆ ಯೋಜನೆಗೆ ನಿಗದಿಯಾದ ಹಣವೆಷ್ಟು? ವಿಳಂಬದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆದ ನಷ್ಟ ಎಷ್ಟು? ಸಮರೋಪಾದಿಯಲ್ಲಿ ಈ ನೀರಾವರಿ ಯೋಜನೆಗಳನ್ನ ಬರಪೀಡಿತ ಪ್ರದೇಶಗಳಲ್ಲಿ, ಮಳೆಯಿಲ್ಲದ ಪ್ರದೇಶದಲ್ಲಿ ಸರ್ಕಾರ ಯಾಕೆ ಮಾಡೋದಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಅಷ್ಟೇ ಅಲ್ಲದೆ ಸಿಎಂ ಮೊದಲು ಕಣ್ಣೀರಿನ ರಾಜಕಾರಣ, ಜಾತಿ ರಾಜಕಾರಣ, ಎತ್ತಿಕಟ್ಟುವ ರಾಜಕಾರಣ ಮಾಡ್ತಾರೆ. ಡಿಸಿಎಂ ಪರಮೇಶ್ವರ್ ಸಾಲು ಸಾಲು ವಾಹನಗಳನ್ನ ತಂದು ಬಿಲ್ಡಪ್ ರಾಜಕಾರಣ ಮಾಡ್ತಾರೆ. ಇದನ್ನೆಲ್ಲ ಬಿಟ್ಟು ಮೊದಲು ಜನರ ಬಗ್ಗೆ ಯೋಚಿಸಿ ಎಂದು ಹೇಳಿದ್ದಾರೆ. ಇನ್ನು ಎಷ್ಟು ಸಚಿವರು ಬರ ಪ್ರವಾಸ ಮಾಡಿದ್ದಾರೆ? ಕೃಷಿ ಸಚಿವರು ಎಲ್ಲಿದ್ದಾರೆ? ಬರಪೀಡಿತ 100 ತಾಲೂಕುಗಳಲ್ಲಿ ಹಸುಗಳೆಷ್ಟಿವೆ? ಮೇವು ಬ್ಯಾಂಕ್ ಎಲ್ಲಿ ಸ್ಥಾಪನೆ ಮಾಡಿದ್ದೀರಾ? ಜನರಿಗೆ ಹಾಗೂ ದನಕರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಎಲ್ಲಿ ಮಾಡುತ್ತೀರಿ ಎಂದು ಪ್ರಶ್ನಿಸಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಕಿಡಿಕಾರಿದ್ದಾರೆ.

    ಜನರ ಸಮಸ್ಯೆಯನ್ನು ಕಾರ್ಯಕ್ರಮಕ್ಕೆ ಆಗಮಿಸಿರುವ ಕೇಂದ್ರ ಸಚಿವ ರಮೇಶ್ ಜಿಗಜಿಗಣಿ ಅವರ ಬಳಿ ಹೇಳಿಕೊಳ್ಳಿ. ಕೇಂದ್ರದಿಂದ ಸಹಾಯ ಮಾಡಲು ನಾವು ಬದ್ಧರಿದ್ದೇವೆ ಎಂದು ಈ ವೇಳೆ ಜನರಿಗೆ ಭರವಸೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವೈಯಕ್ತಿಕ ಅಭಿಪ್ರಾಯಕ್ಕೆಲ್ಲಾ ಉತ್ತರ ಕೊಡ್ಬೇಕಿಲ್ಲ – ಜಾರಕಿಹೊಳಿ ಹೇಳಿಕೆಗೆ ಪರಮೇಶ್ವರ್ ತಿರುಗೇಟು

    ವೈಯಕ್ತಿಕ ಅಭಿಪ್ರಾಯಕ್ಕೆಲ್ಲಾ ಉತ್ತರ ಕೊಡ್ಬೇಕಿಲ್ಲ – ಜಾರಕಿಹೊಳಿ ಹೇಳಿಕೆಗೆ ಪರಮೇಶ್ವರ್ ತಿರುಗೇಟು

    ಬೆಂಗಳೂರು: ಸಮ್ಮಿಶ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಿಲ್ಲ ಎಂಬ ಕಾಂಗ್ರೆಸ್ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಪರಮೇಶ್ವರ್ ತಿರುಗೇಟು ನೀಡಿದ್ದು, ಈ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಅದಕ್ಕೆಲ್ಲ ಉತ್ತರ ನೀಡಬೇಕಿಲ್ಲ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಆರು ತಿಂಗಳಿಂದ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಒಂದು ವೇಳೆ ಟೇಕಾಫ್ ಆಗಿಲ್ಲ ಎಂದು ಅನಿಸಿದರೆ ಅವರು ನಮ್ಮ ಬಳಿ ಬಂದು ಹೇಳಬಹುದು. ಸತೀಶ್ ಜಾರಕಿಹೊಳಿ ಅವರಿಗೆ ಏಕೆ ಹಾಗೇ ಅನ್ನಿಸಿದೆ ಎಂದು ಗೊತ್ತಿಲ್ಲ. ವೈಯಕ್ತಿಕ ಕೆಲಸ ತೊಂದರೆ ಆಗಿದ್ದರೆ ಅಥವಾ ಕ್ಷೇತ್ರದ ಕೆಲಸ ಆಗಿಲ್ಲ ಅಂದರೆ ನಮ್ಮ ಬಳಿ ಬಂದು ಮಾತನಾಡಲಿ ಎಂದು ತಿಳಿಸಿದರು.

    ಬೆಳಗಾವಿ ಅಧಿವೇಶಕ್ಕೆ ಕಾಂಗ್ರೆಸ್ ಶಾಸಕರ ಗೈರು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಯಾವುದೇ ಮಾಹಿತಿ ನನಗೆ ಲಭಿಸಿಲ್ಲ. ಪಕ್ಷದ ಶಾಸಕರು ಕೂಡ ಬಗ್ಗೆ ತಿಳಿಸಿಲ್ಲ. ಒಂದೊಮ್ಮೆ ಪಕ್ಷದ ಅಧ್ಯಕ್ಷರಿಗೆ ಹೇಳಿದ್ದರೋ ಗೊತ್ತಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಚಾರ ಹೈಕಮಾಂಡ್‍ಗೆ ಬಿಟ್ಟಿದ್ದು, ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡಬೇಕು ಎಂಬ ಬಗ್ಗೆಯೂ ತಿಳಿಸಿದ್ದಾಗಿ ಹೇಳಿದರು.

    ಮಾಜಿ ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸಮ್ಮಿಶ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಿಲ್ಲ, ಕೆಲ ಇಲಾಖೆಗಳು ಮಾತ್ರ ಕೆಲಸ ಮಾಡುತ್ತಿದ್ದು. ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಲು ಮತ್ತಷ್ಟು ಸಮಯ ಬೇಕಿದೆ. ಪಕ್ಷದ ಕೆಲ ಶಾಸಕರಲ್ಲಿ ಅಸಮಾಧಾನವಿದ್ದು, ಎಲ್ಲಾ ಸರ್ಕಾರದ ವೇಳೆಯಲ್ಲೂ ಶಾಸಕರು ಅಸಮಾಧಾನ ವ್ಯಕ್ತಪಡಿಸುವುದು ಸಾಮಾನ್ಯ. ಸಿದ್ದರಾಮಯ್ಯ ಅವರು ಕೂಡ ಸಿಎಂ ಆಗಿದ್ದಾಗ ಈ ಸಮಸ್ಯೆ ಇತ್ತು. ಆದರೆ ಏನೇ ಸಮಸ್ಯೆಗಳಿದ್ದರೂ ಪಕ್ಷದ ಆಂತರಿಕ ಸಭೆಯಲ್ಲಿ ಬಗೆಹರಿಸಿಕೊಳ್ಳುವುದಾಗಿ ತಿಳಿಸಿದ್ದರು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

     

  • ಶಾಸಕ ಬಿಸಿ ಪಾಟೀಲ್‍ಗೆ ಸಿಹಿ ಸುದ್ದಿಕೊಟ್ಟ ಜಮೀರ್ ಅಹ್ಮದ್!

    ಶಾಸಕ ಬಿಸಿ ಪಾಟೀಲ್‍ಗೆ ಸಿಹಿ ಸುದ್ದಿಕೊಟ್ಟ ಜಮೀರ್ ಅಹ್ಮದ್!

    ಹಾವೇರಿ: ಸಮ್ಮಿಶ್ರ ಸರ್ಕಾರದ ರಚನೆಯಾದ ಬಳಿಕ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳಲ್ಲಿ ಒಬ್ಬರಾಗಿರುವ ಶಾಸಕ ಬಿಸಿ ಪಾಟೀಲ್ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಗೆ ವೇಳೆ ಮಂತ್ರಿಸ್ಥಾನ ನೀಡಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಶಾಸಕ ಬಿಸಿ ಪಾಟೀಲ್ ನನಗಿಂತ ಹಿರಿಯರು. ನಾನು ಅವರನ್ನು ಮಂತ್ರಿ ಮಾಡಬೇಕೆಂದು ಮುಖಂಡರಿಗೆ ತಿಳಿಸಿದ್ದೇನೆ. ಖಂಡಿತ ಅವರು ಈ ಬಾರಿ ಸಚಿವರಾಗುತ್ತಾರೆ. ಮುಂದಿನ ಡಿಸೆಂಬರ್ 3ರ ಒಳಗೆ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದರು.

    ಇದೇ ವೇಳೆ ಮಾತನಾಡಿದ ಶಾಸಕ ಬಿಸಿ ಪಾಟೀಲ್, ನಾನು ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದು, ಯಾವುದಕ್ಕೂ ಈಗಲೇ ನಿರ್ಧಾರ ಕೈಗೊಳ್ಳುವುದಿಲ್ಲ. ಕಳೆದ 4, 5 ತಿಂಗಳಿನಿಂದ ಸಚಿವ ಸ್ಥಾನ ಬಗ್ಗೆ ಕಾಯುತ್ತಿದ್ದೇನೆ. ಇನ್ನು ಹತ್ತು ದಿನ ಕಾಯುವುದರಲ್ಲಿ ಏನು ಆಗುವುದಿಲ್ಲ. ಇಲ್ಲವಾದರೆ ಶಾಸಕನಾಗಿಯೇ ಇರುತ್ತೇನೆ. ಸಚಿವನಾದರೆ ತಾಲೂಕಿನ, ಜಿಲ್ಲೆಯ ಸೇವೆ ಮಾಡಲು ಸಹಕಾರ ಆಗಲಿದೆ. ಶೀಘ್ರವೇ ಸಂಪುಟ ರಚನೆ ಮಾಡುವುದಾಗಿ ಹೇಳಿದ್ದಾರೆ. ಈ ಬಾರಿ ಆಗದಿದ್ದರೆ ಇನ್ನೊಂದು ದಿನಾಂಕ ಕೊಡಬಹುದು. ನಾನು ಆಶಾವಾದಿಯಾಗಿದ್ದು, ತಾಳಿದವನು ಬಾಳಿಯಾನು ಎಂಬಂತೆ ನಾನು ಶಾಸನಾಗಿಯೇ ಇರುತ್ತೇನೆ ಎಂದರು.

    ಇದಕ್ಕೂ ಮುನ್ನ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಪರಮೇಶ್ವರ್ ಅವರು, ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸುವ ಅಗತ್ಯವಿದೆ. ಆದರೆ ಪಂಚರಾಜ್ಯಗಳ ಚುನಾವಣೆಯ ಪ್ರವಾಸದಲ್ಲಿ ರಾಹುಲ್ ಗಾಂಧಿ ಅವರು ನಿರತರಾಗಿವುದರಿಂದ ಕಾರಣ ಸಚಿವ ಸಂಪುಟ ಸಭೆ ತಡವಾಗಲಿದೆ. ಅಧಿವೇಶನದ ಒಳಗೆ ಸಂಪುಟ ವಿಸ್ತರಣೆ ಮಾಡಿದರೆ ಉತ್ತಮವಾಗಿರಲಿದೆ ಎಂದು ಹೈಕಮಾಂಡ್‍ಗೆ ಮನವಿ ಮಾಡಿದ್ದೇವೆ. ಅವರು ಯಾವ ರೀತಿ ನಮಗೇ ಸೂಚನೆ ನೀಡುತ್ತಾರೆ ಎಂಬುವುದನ್ನು ಕಾದು ನೋಡಬೇಕು ಎಂದರು. ಡಿಸಿಎಂ ಪರಮೇಶ್ವರ್ ಹೇಳಿಕೆ ಬೆನ್ನಲ್ಲೇ ಶಾಸಕ ಬಿಸಿ ಪಾಟೇಲ್ ಈ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮುಖ್ಯಮಂತ್ರಿ ಸೀಟು ಖಾಲಿ ಇಲ್ಲ – ಪರಮೇಶ್ವರ್ ಆಸೆಗೆ ಸಿದ್ದು ಉತ್ತರ

    ಮುಖ್ಯಮಂತ್ರಿ ಸೀಟು ಖಾಲಿ ಇಲ್ಲ – ಪರಮೇಶ್ವರ್ ಆಸೆಗೆ ಸಿದ್ದು ಉತ್ತರ

    ಹುಬ್ಬಳ್ಳಿ: ಸಮ್ಮಿಶ್ರ ಸರ್ಕಾರದಲ್ಲಿ ಸದ್ಯ ಮುಖ್ಯಮಂತ್ರಿಯ ಬದಲಾವಣೆ ವಿಚಾರ ಬರಲ್ಲ, ಏಕೆಂದರೆ ಆ ಸೀಟು ಖಾಲಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಜಾರಿಯಲ್ಲಿದ್ದು, ಸದ್ಯ ಜೆಡಿಎಸ್ ಪಕ್ಷದಿಂದ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾರೆ. ಅದ್ದರಿಂದ ಸದ್ಯ ಸಿಎಂ ಸ್ಥಾನ ಖಾಲಿಯಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಹಿರಿಯ ಮುಖಂಡರು ಸಿಎಂ ಆಗುವ ಆರ್ಹತೆ ಹೊಂದಿದ್ದಾರೆ. ಆಗೆಯೇ ಪರಮೇಶ್ವರ್ ಅವರು ಕೂಡ ತಮ್ಮ ಆಸೆ ತಿಳಿಸಿದ್ದಾರೆ. ಅದರಲ್ಲಿ ತಪ್ಪೇನು ಇಲ್ಲ. ಯಾರು ಸಿಎಂ ಆಗಬೇಕು ಎಂದರೂ ಶಾಸಕರು, ಹೈಕಮಾಂಡ್ ಮಾತ್ರ ತೀರ್ಮಾನ ಮಾಡಲು ಸಾಧ್ಯ ಎಂದು ತಿಳಿಸಿದರು.


    ಕೇಂದ್ರ ಸರ್ಕಾರದಿಂದ ಸಿಬಿಐ ದುರುಪಯೋಗ ಆಗುತ್ತಿದೆ. ಯಾವುದೇ ರಾಜ್ಯದಲ್ಲಿ ಸಿಬಿಐ ತನಿಖೆ ನಡೆಸಬೇಕಾದರೆ ಆಯಾ ರಾಜ್ಯದ ಅನುಮತಿ ಪಡೆಯಬೇಕು ಎನ್ನುವ ನಿಯಮವೇ ಇದೆ. ಇದನ್ನು ಕೇಂದ್ರ ದುರುಪಯೋಗ ಮಾಡಿಕೊಳ್ಳುತ್ತಿದೆ. ಇಂದಿರಾ ಕ್ಯಾಂಟೀನ್‍ನಿಂದ ಬಡವರ ಹಸಿವು ನೀಗಿದೆ. ಇದರ ಶ್ರೇಯ ನಮ್ಮ ಪಕ್ಷಕ್ಕೆ ಸೇರಬಾರದು ಎನ್ನುವ ದುರುದ್ದೇಶದಿಂದ ಬಿಜೆಪಿ ಸಂಚು ಮಾಡಿ ಬಿಜೆಪಿಯವರು ಅಡ್ಡಗಾಲು ಹಾಕುತ್ತಿದ್ದಾರೆ. ನೆಹರೂ ಅವರನ್ನು ಹಿಟ್ಲರ್ ಎಂದು ಕರೆಯುವ ಆರ್‍ಎಸ್‍ಎಸ್ ನವರು ಫ್ಯಾಸಿಸ್ಟ್ ಮನೋಭಾವ ಹೊಂದಿದ್ದಾರೆ. ಬಿಜೆಪಿಯವರು ಹಿಟ್ಲರ್ ನಂತೆ ಆಡಳಿತ ನಡೆಸುತ್ತಿದ್ದಾರೆ. ಅವರು ಹಿಟ್ಲರ್ ವಂಶದವರು ಎಂದು ಟೀಕಿಸಿದರು.

    ಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಶೀಘ್ರವೇ ಸಂಪುಟ ವಿಸ್ತರಣೆ ನಡೆಯಲಿದ್ದು, ದೇಶದ ಪ್ರಮುಖ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಸಮಯದ ನಿಗದಿಯಾಗಬೇಕಿದೆ. ಈ ಕುರಿತು ಚರ್ಚೆ ನಡೆಸಲು ಶೀಘ್ರವೇ ರಾಹುಲ್ ಗಾಂಧಿ ಅವರ ಬಳಿ ಸಮಯ ನಿಗದಿ ಮಾಡಲಾಗುವುದು. ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪರಮೇಶ್ವರ್ ಸಿಎಂ ಆದ್ರೆ ಖುಷಿ ಪಡೋ ಮೊದಲಿಗ ನಾನು: ಉಗ್ರಪ್ಪ

    ಪರಮೇಶ್ವರ್ ಸಿಎಂ ಆದ್ರೆ ಖುಷಿ ಪಡೋ ಮೊದಲಿಗ ನಾನು: ಉಗ್ರಪ್ಪ

    ತುಮಕೂರು: ಡಿಸಿಎಂ ಪರಮೇಶ್ವರ್ ಅವರು ರಾಜ್ಯದ ಮುಖ್ಯಮಂತ್ರಿ ಆಗುವ ಸಾಮಥ್ರ್ಯ, ಆರ್ಹತೆ ಎರಡನ್ನು ಹೊಂದಿದ್ದಾರೆ ಎಂದು ಬಳ್ಳಾರಿ ನೂತನ ಸಂಸದ ವಿ. ಉಗ್ರಪ್ಪ ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಗ್ರಪ್ಪ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಥ್ರ್ಯ ಇದ್ದವರಿಗೆ ಪಕ್ಷ ಹಾಗೂ ಶಾಸಕರು ತೀರ್ಮಾನ ಮಾಡಿದರೆ ಮುಖ್ಯಮಂತ್ರಿ ಆಗುವ ಅವಕಾಶ ಇದೆ. ಕಾಂಗ್ರೆಸ್ ಪಕ್ಷದಿಂದ ಪರಮೇಶ್ವರ್ ಅವರು ಸಿಎಂ ಆದರೆ ಖುಷಿ ಪಡುವ ಮೊದಲಿಗ ನಾನು. ತುಮಕೂರು ಜಿಲ್ಲೆಗೆ ಇದುವರೆಗೂ ಮುಖ್ಯಮಂತ್ರಿ ಸ್ಥಾನ ಲಭ್ಯ ಆಗಿಲ್ಲ. ಅದು ಪರಮೇಶ್ವರ ಅವರ ಮೂಲಕ ಈಡೇರಿದರೆ ನಮಗೆ ಖುಷಿ ಆಗುತ್ತದೆ. ಸಮಯ ಬಂದಾಗ ಇದನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

    ಇದೇ ವೇಳೆ ಪಕ್ಷದಲ್ಲಿ ಹಿರಿಯ ಮುಖಂಡರದ ಮಲ್ಲಿಕಾರ್ಜುನ ಖರ್ಗೆ, ಸಚಿವ ಡಿಕೆ ಶಿವಕುಮಾರ್, ಮಾಜಿ ಸಚಿವ ದೇಶಪಾಂಡೆ ಸೇರಿದಂತೆ ಹಲವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾಗಿದ್ದಾರೆ. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುವ ಅವಕಾಶವೂ ಇದೆ ಎಂದು ಹೇಳಿದರು.

    ಡಿಸಿಎಂ ಪರಮೇಶ್ವರ್ ಅವರು ಇಂದು ಬೆಳಗಾವಿ ನೀಡಿದ ಹೇಳಿಕೆ ರಾಜ್ಯ ರಾಜಕೀಯಲ್ಲಿ ಸಂಚಲನವನ್ನು ಉಂಟುಮಾಡಿದೆ. ಬೆಳಗಾವಿಯಲ್ಲಿ ಮಾತನಾಡಿದ ಪರಮೇಶ್ವರ್, ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ಶಕ್ತಿ ಮೀರಿ ನಿರ್ವಹಣೆ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷರಾಗಿ 8 ವರ್ಷ ಕಾರ್ಯನಿರ್ವಹಿಸಿದ್ದು, ಎರಡು ಚುನಾವಣೆಗಳಲ್ಲಿ ನಾನು ಪಕ್ಷ ಕಟ್ಟುವ ಕಾರ್ಯ ಮಾಡಿದ್ದೇನೆ. ಈ ಬಾರಿ ನಮ್ಮ ಮೈತ್ರಿ ಸರ್ಕಾರ ರಚನೆ ಆಗಿದ್ದು, ನನಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಆದ್ದರಿಂದ ನಾನು ಈ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ಜವಾಬ್ದಾರಿ ನೀಡಿಲ್ಲವೆಂದರೂ ನಾನು ಸುಮ್ಮನೆ ಇರುತ್ತೇನೆ. ಕೆಲಸ ನೀಡುವುದು ಬಿಡುವುದು ಅವರ ತೀರ್ಮಾನಕ್ಕೆ ಬಿಟ್ಟ ವಿಚಾರ. ಅಂತೆಯೇ ಸಿಎಂ ಸ್ಥಾನವನ್ನು ನೀಡಿದರು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಡಿಸಿಎಂ ಪರಮೇಶ್ವರ್ ಸುಳ್ಳಿನ ಸರದಾರ – ಬಿಬಿಎಂಪಿ ಸಾಲದ ಬಗ್ಗೆ ಶ್ವೇತಪತ್ರ ಹೊರಡಿಸಿ ಪದ್ಮನಾಭರೆಡ್ಡಿ ಸವಾಲು

    ಡಿಸಿಎಂ ಪರಮೇಶ್ವರ್ ಸುಳ್ಳಿನ ಸರದಾರ – ಬಿಬಿಎಂಪಿ ಸಾಲದ ಬಗ್ಗೆ ಶ್ವೇತಪತ್ರ ಹೊರಡಿಸಿ ಪದ್ಮನಾಭರೆಡ್ಡಿ ಸವಾಲು

    ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಸುಳ್ಳಿನ ಸರದಾರರಾಗಿದ್ದು, ಅವರಿಗೆ ತಾಕತ್ತು ಇದ್ದರೆ ಶ್ವೇತಪತ್ರ ಬಿಬಿಎಂಪಿ ಸಾಲದ ಬಗ್ಗೆ ಬಿಡುಗಡೆ ಮಾಡಲಿ ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಸವಾಲು ಹಾಕಿದ್ದಾರೆ.

    ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪದ್ಮಾನಾಭ ರೆಡ್ಡಿ, ಬೆಂಗಳೂರಿನ ಅಭಿವೃದ್ಧಿ ಸಚಿವರು ಮತ್ತು ಉಪಮುಖ್ಯಮಂತ್ರಿಗಳು ನಿನ್ನೆ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಅಡವಿಟ್ಟಿದ್ದ ಪುರಾತನ ಕಟ್ಟಡಗಳನ್ನ ಬಿಡಿಸಿಕೊಂಡಿದ್ದೇವೆ ಎಂದು ಹೇಳಿ ನಮ್ಮ ಪಕ್ಷದ ವಿರುದ್ಧ ಟೀಕೆ ಮಾಡಿದ್ದಾರೆ. ಆದರೆ ಬಿಬಿಎಂಪಿ ಆಡಳಿತ ನಡೆಸಿದ ಅವಧಿಯಲ್ಲಿ ಪಾಲಿಕೆಯ ಆಸ್ತಿಗಳನ್ನ ಅಡವಿಟ್ಟ ಕುರಿತು ಹಾಗೂ ಸಾಲ ಪಡೆದಿರುವ ಕುರಿತು ನಿಮಗೆ ತಾಕತ್ತಿದ್ದರೆ ಶ್ವೇತಪತ್ರ ಹೊರಡಿಸಿ ಎಂದು ಸವಾಲು ಎಸೆದರು.

    ಸಿದ್ದರಾಮಯ್ಯ ಅವರು ಬಿಬಿಎಂಪಿ ಗೆ 7 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದರು ಎಂದು ಹೇಳಿ ಸುಮ್ಮನೆ ಪ್ರಚಾರ ಪಡೆದುಕೊಳ್ಳುತ್ತಿದ್ದೀರಾ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿ ಬಿಬಿಎಂಪಿಯಲ್ಲಿ ಹೆಚ್ಚಿನ ಸಾಲ ಮಾಡಿದ್ದು, ಆ ಸಾಲ ತೀರಿಸಲು ಕಟ್ಟಡಗಳ ಅಡ ಇಡಬೇಕಾಯಿತು. ಹೀಗೆ ಇಲ್ಲ ಸಲ್ಲದ ಆರೋಪ ಮಾಡಿ ಟೀಕೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.

    ಬಿಬಿಎಂಪಿಯಲ್ಲಿ 1,800 ಕೋಟಿ ರೂ.ಗೂ ಹೆಚ್ಚಿನ ಪೆಂಡಿಂಗ್ ಬಿಲ್ ಇವೆ. ಸಿದ್ದರಾಮಯ್ಯ ಅವರ ಆಡಳಿತ ಬಂದಾಗಿನಿಂದ ಕಸ ವಿಲೇವಾರಿಗೆ ಟೆಂಡರ್ ಕರೆಯದೆ 1 ಸಾವಿರ ಕೋಟಿ ರೂ.ಗೂ ಹೆಚ್ಚಿನ ಕಾಮಗಾರಿ ನಡೆದಿದೆ. ಕಸ ವಿಲೇವಾರಿ ಸಂಸ್ಕರಣಾ ಘಟಕಗಳಿಗೆ ಸುಮಾರು 500 ಕೋಟಿ ರೂ. ಸಾರ್ವಜನಿಕ ಹಣವನ್ನು ಖರ್ಚು ಮಾಡಿದ್ರೂ ಕೂಡ ಸರಿಯಾಗಿ ನಿರ್ವಹಣೆಯಾಗಿಲ್ಲ. ಬಿಬಿಎಂಪಿಯಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗಿಲ್ಲ. ಬಿಜೆಪಿ ಪಕ್ಷದ ಆಡಳಿತದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನ ನಿಮ್ಮ ಸರ್ಕಾರದ ಹುಳುಕನ್ನು ಮುಚ್ಚಿಕೊಳ್ಳಲು ಟೀಕೆ ಮಾಡುತ್ತಿದ್ದೀರಾ. ನಿಮಗೆ ತಾಕತ್ತಿದ್ದರೆ 1989 ರಿಂದ ಇಲ್ಲಿಯವರೆಗೂ ಬಿಜೆಪಿ ಅವಧಿಯಲ್ಲಿ ಎಷ್ಟು ಸಾಲ ಮಾಡಿದ್ದೇವೆ ಎಂದು ಶ್ವೇತಾ ಪತ್ರ ಹೊರಡಿಸಿ ಎಂದರು. ಅಲ್ಲದೇ ಈ ಕುರಿತು ಡಿಸಿಎಂ ಅವರಿಗೆ ನೇರ ಪತ್ರ ಬರೆದು ನನ್ನ ಪ್ರಶ್ನೆಗಳಿಗೆ ಉತ್ತರಿಸುವಂತೆ ಹೇಳುವುದಾಗಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸಿಎಂ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ಧ – ಸಂಚಲನ ಮೂಡಿಸಿದೆ ಡಿಸಿಎಂ ಹೇಳಿಕೆ

    ಸಿಎಂ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ಧ – ಸಂಚಲನ ಮೂಡಿಸಿದೆ ಡಿಸಿಎಂ ಹೇಳಿಕೆ

    ಬೆಳಗಾವಿ: ಪಕ್ಷದ ಹೈಕಮಾಂಡ್ ಇದುವರೆಗೂ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸಿದ್ದು, ಮುಂದೇ ಸಿಎಂ ಸ್ಥಾನ ಕೊಟ್ಟರೆ ಅದನ್ನು ನಿಭಾಯಿಸಲು ಸಿದ್ಧ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ಶಕ್ತಿ ಮೀರಿ ನಿರ್ವಹಣೆ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷರಾಗಿ 8 ವರ್ಷ ಕಾರ್ಯನಿರ್ವಹಿಸಿದ್ದು, ಎರಡು ಚುನಾವಣೆಗಳಲ್ಲಿ ನಾನು ಪಕ್ಷ ಕಟ್ಟುವ ಕಾರ್ಯ ಮಾಡಿದ್ದೇನೆ. ಈ ಬಾರಿ ನಮ್ಮ ಮೈತ್ರಿ ಸರ್ಕಾರ ರಚನೆ ಆಗಿದ್ದು, ನನಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಆದ್ದರಿಂದ ನಾನು ಈ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ಜವಾಬ್ದಾರಿ ನೀಡಿಲ್ಲವೆಂದರೂ ನಾನು ಸುಮ್ಮನೆ ಇರುತ್ತೇನೆ. ಕೆಲಸ ನೀಡುವುದು ಬಿಡುವುದು ಅವರ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದರು.

    ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸುಗಮ ಆಗಿರುವ ವೇಳೆ ಡಿಸಿಎಂ ಪರಮೇಶ್ವರ್ ಅವರ ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮುಂದಿನ ದಿನಗಳಲ್ಲಿ ಮೈತ್ರಿ ಸರ್ಕಾರದಲ್ಲಿ ಬದಲಾವಣೆ ಉಂಟಾದರೆ ಸಿಎಂ ಸ್ಥಾನ ನಮಗೇ ನೀಡಲಿ ಎಂ ಹಿನ್ನೆಲೆಯಲ್ಲಿ ಈ ರೀತಿ ಮಾತನಾಡಿದ್ದಾರೆ ಎಂಬ ಮಾತು ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅನಂತಕುಮಾರ್ ಅಂತಿಮ ದರ್ಶನ – ನ್ಯಾಷನಲ್ ಕಾಲೇಜು ಮೈದಾನ ಸಿದ್ಧತೆ ವೀಕ್ಷಿಸಿದ ಡಿಸಿಎಂ

    ಅನಂತಕುಮಾರ್ ಅಂತಿಮ ದರ್ಶನ – ನ್ಯಾಷನಲ್ ಕಾಲೇಜು ಮೈದಾನ ಸಿದ್ಧತೆ ವೀಕ್ಷಿಸಿದ ಡಿಸಿಎಂ

    ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಆಗಮಿಸುವ ಸಾರ್ವಜನಿಕರಿಗೆ ನಾಳೆ ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಕಾರ್ಯಕ್ರಮದ ಸಿದ್ಧತೆಗಳನ್ನು ವೀಕ್ಷಿಸಿದರು.

    ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಾಳೆ ಅನಂತಕುಮಾರ್ ಅವರ ಪಾರ್ಥೀವ ಶರೀರ ಸಾರ್ವಜನಿಕ ದರ್ಶನ ಲಭ್ಯವಾಗಲಿದೆ. ರಾಜ್ಯ ಸರ್ಕಾರ ಈಗಾಗಲೇ ಈ ಕುರಿತು ಸಿದ್ಧತೆಗಳನ್ನು ಆರಂಭಿಸಿದೆ. ಕಾರ್ಯಕ್ರಮದ ಕುರಿತು ಡಿಸಿಎಂ ಪರಮೇಶ್ವರ್ ಅವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್, ಡಿಸಿಪಿಗಳಾದ ಅಣ್ಣಾಮಲೈ ಹಾಗೂ ಸಂದೀಪ್ ಪಾಟೀಲ್ ಮಾಹಿತಿ ನೀಡಿದರು. ಈ ವೇಳೆ ಮೇಯರ್ ಗಂಗಾಂಬಿಕೆ ಕೂಡ ಪರಮೇಶ್ವರ್ ಅವರೊಂದಿಗೆ ಆಗಮಿಸಿದ್ದರು.

    ಈ ವೇಳೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ಅನಂತಕುಮಾರ್ ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನ ಹಿನ್ನೆಲೆ ಹಲವು ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದೆ. ನಾಳೆ ಎರಡೂವರೆ ಗಂಟೆ ಕಾಲ ಅಂತಿಮ ದರ್ಶಕ್ಕೆ ಅವಕಾಶ ಇರಲಿದೆ. ಇಂದು ಸಂಜೆ 8.30 ಕ್ಕೆ ಪ್ರಧಾನಿ ಮೋದಿ ಅವರು ಕೂಡ ಆಗಮಿಸಲಿದ್ದು, ಉಪರಾಷ್ಟ್ರಪತಿಗಳು, ಗೃಹ ಸಚಿವರು ಮತ್ತು ಕೇಂದ್ರದ ಹಲವು ಸಚಿವರ ಆಗಮಿಸಲಿದ್ದಾರೆ. ಎಲ್ಲರಿಗೂ ವ್ಯವಸ್ಥಿತವಾಗಿ ದರ್ಶನ ಮಾಡುವ ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬಿಜೆಪಿ ಗಲಾಟೆ ಮಾಡೋದು ಸಹಜ, ಟಿಪ್ಪು ಜಯಂತಿ ಮಾಡೇ ಮಾಡ್ತೀವಿ : ಡಿಸಿಎಂ ಪರಮೇಶ್ವರ್

    ಬಿಜೆಪಿ ಗಲಾಟೆ ಮಾಡೋದು ಸಹಜ, ಟಿಪ್ಪು ಜಯಂತಿ ಮಾಡೇ ಮಾಡ್ತೀವಿ : ಡಿಸಿಎಂ ಪರಮೇಶ್ವರ್

    ಬೆಂಗಳೂರು: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಸಜ್ಜಾಗುತ್ತಿದೆ. ಜನರಾಗಲೀ, ಜನಪ್ರತಿನಿಧಿಗಳಾಗಲೀ ಯಾರಾದರು ಅಡ್ಡ ಪಡಿಸಿದರೆ ಕಾನೂನು ಕ್ರಮ ಕೈಗೊಳ್ಳಲು ಸಿದ್ಧರಾಗಿದ್ದೇವೆ ಎಂದು ಗೃಹ ಸಚಿವ, ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.

    ಈ ಕುರಿತು ನಗರದಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್ ಅವರು, ಟಿಪ್ಪು ಜಯಂತಿ ಭದ್ರತೆ ಕುರಿತು ಚರ್ಚೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆಯಲಾಗಿದೆ. ಬಿಜೆಪಿ ಅವರು ವಿರೋಧ ಮಾಡುವುದು ಅವರಿಗೆ ಮಾಮೂಲಿಯಾಗಿದೆ. ಬಿಜೆಪಿ 2019 ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಆಕ್ಷೇಪ ವ್ಯಕ್ತಪಡಿಸಿದೆ. ಜಯಂತಿ ಮಾಡಲು ಎಂದಿನಂತೆ ಗುಪ್ತಚರ ಮಾಹಿತಿ ಆಧರಿಸಿ ಹೆಚ್ಚಿನ ಭದ್ರತೆ ಬೇಕಾದ ಕಡೆ ಪೊಲೀಸ್ ನಿಯೋಜಿಸಿ ಶಾಂತಿಯುತವಾಗಿ ಟಿಪ್ಪು ಜಯಂತಿ ಆಚರಿಸಲಾಗುವುದು ಎಂದರು.

    ಪ್ರೋಟೋಕಾಲ್ ಇದಂತೆ ಮಾಡುತ್ತೇವೆ: ಇದೇ ವೇಳೆ ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಅನಂತಕುಮಾರ್ ಹೆಗಡೆ ಅವರು ಹೆಸರು ಬೇಡ ಎಂದು ಮನವಿ ಮಾಡಿದ್ದರೆ ಎಂಬ ಪ್ರಶ್ನೆಗೆ ಉತ್ತರಿಸಿ ಪ್ರೋಟೋಕಾಲ್ ಇದಂತೆ ಮಾಡುತ್ತೇವೆ ಎಂದರು.

    ಶೀಘ್ರ ಸಂಪುಟ ವಿಸ್ತರಣೆ: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡುವುದು ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಸಂಪುಟದ 6 ಸಚಿವ ಸ್ಥಾನ ತುಂಬುವ ಕೆಲಸ ಮಾಡುತ್ತೇವೆ. ಈ ಕುರಿತು ಸಮನ್ವಯ ಸಮಿತಿ ಸಭೆ ಕರೆದು ತೀರ್ಮಾನ ಮಾಡಿ, ಇದರೊಂದಿಗೆ ನಿಗಮ ಮಂಡಳಿ ನೇಮಕವೂ ನಡೆಯಲಿದೆ ಎಂದು ಖಚಿತ ಪಡಿಸಿದರು.

    ಸಮ್ಮಿಶ್ರ ಸರ್ಕಾರದ ರಚನೆ ಆದಾಗಿನಿಂದಲೂ ಸಚಿವ ಸಂಪುಟ ವಿಸ್ತರಣೆಗೆ ಅಡೆತಡೆ ಎದುರಾಗುತ್ತಿದ್ದು, ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಯ್ತು ಎನ್ನುವಾಗಲೇ ಉಪ ಚುನಾವಣೆ ಘೋಷಣೆ ಆಯಿತು. ಆದರೆ ಇದೀಗ ಉಪ ಚುನಾವಣೆ ಮತದಾನ ಮುಗಿದಿದ್ದು, ಉಪ ಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂಬುವುದು ಖಚಿತವಾಗಿದೆ.

    ನಮ್ಮದೇ ಗೆಲುವು: ಲೋಕಸಭಾ ಉಪಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ವಿಜಯಗಳಿಸಲಿದ್ದಾರೆ. ರಾಮನಗರ ಬಿಜೆಪಿ ಅಭ್ಯರ್ಥಿಗೆ ಹಣದ ಆಮಿಷ ತೋರಿಲ್ಲ ಎಂಬ ವಿಚಾರವಾಗಿ ಉತ್ತರಿಸಿದ ಅವರು, ಚಾಮುಂಡೇಶ್ವರಿ ಮೇಲೆ ಅಣೆ ಮಾಡಿ ಎಂಬುವುದು ಅವರ ಸಂಸ್ಕೃತಿ. ಚಂದ್ರಶೇಖರ್ ಮೂಲತಃ ಕಾಂಗ್ರೆಸ್ ನವರು ಹಾಗಾಗಿ ವಾಪಸ್ ಆಗಿದ್ದಾರೆ. ಇದಕ್ಕೆ ಹಣದ ಆಮಿಷದ ಬಣ್ಣ ಬೇಡ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜಕಾಲುವೆ ಒತ್ತುವರಿ ಕಾರ್ಯಾಚರಣೆ ಕೈ ಬಿಟ್ಟ ಬಿಬಿಎಂಪಿ?

    ರಾಜಕಾಲುವೆ ಒತ್ತುವರಿ ಕಾರ್ಯಾಚರಣೆ ಕೈ ಬಿಟ್ಟ ಬಿಬಿಎಂಪಿ?

    ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಮಾಡುವುದಾಗಿ ತಿಳಿಸಿದ್ದ ಬಿಬಿಎಂಪಿ ಈಗ ಜಾಣಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಸಮ್ಮಿಶ್ರ ಸರ್ಕಾರದ ಡಿಸಿಎಂ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ರಾಜಕಾಲುವೆ ಅಕ್ರಮ ಒತ್ತುವರಿ ಮಾಡಿಕೊಂಡ ಸ್ಥಳಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವುದಾಗಿ ಹೇಳಿದ್ದರು. ಅಲ್ಲದೇ ಸರ್ವೇ, ಮಾರ್ಕಿಂಗ್ ಕಾರ್ಯ ಮುಗಿಯುವ ಮೊದಲೇ, ತೆರವು ಮಾಡುತ್ತೀವಿ ಎಂದು ಹೇಳಿದ್ದರು. ಸದ್ಯದ ಪರಿಸ್ಥಿತಿಯನ್ನು ನೋಡುತ್ತಿದ್ದರೇ ಬಿಬಿಎಂಪಿ ಒತ್ತುವರಿ ಕಾರ್ಯಾಚರಣೆಗೆ ಎಳ್ಳು-ನೀರು ಬಿಟ್ಟಂತೆ ಕಾಣುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

    ಒತ್ತುವರಿ ತೆರವು ಮಾಡುತ್ತೀವಿ ಎಂದು ಪದೇ ಪದೇ ಹೇಳಿಕೊಳ್ಳುತ್ತಿದ್ದ ಪಾಲಿಕೆಯು, ಅಕ್ಟೋಬರ್ 27ಕ್ಕೆ ತೆರವು ಕಾರ್ಯಚರಣೆಗೆ ಚಾಲನೆ ನೀಡಬೇಕಿತ್ತು. ಆದರೆ ಇದೀಗ ಬಿಬಿಎಂಪಿ ಸದ್ಯ ಸರ್ವೇ ಕಾರ್ಯ ಮಾತ್ರ ಸಂಪೂರ್ಣವಾಗಿದೆ ಎನ್ನುವ ಮೂಲಕ ಕಳೆದ ನಾಲ್ಕು ತಿಂಗಳಿಂದ ರಾಜಕಾಲುವೆ ಒತ್ತುವರಿಯ ಸರ್ವೇ ಮಾಡುವ ಡ್ರಾಮಾ ಮಾಡುತ್ತಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ಅಲ್ಲದೇ ಲೋಕಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ತೆರವು ಕಾರ್ಯ ಕೈಬಿಟ್ಟಿದೆ ಎನ್ನುವ ಆರೋಪಗಳು ಸಹ ಕೇಳಿಬರುತ್ತಿವೆ.

    ಇದಲ್ಲದೇ ಸಮ್ಮಿಶ್ರ ಸರ್ಕಾರ ಒತ್ತುವರಿ ಮತ್ತು ಭೂಕಬಳಿಕೆ ತಡೆಗೆ ರಚಿಸಿದ್ದ ಬೆಂಗಳೂರು ಮೆಟ್ರೊಪಾಲಿಟನ್ ಕಾರ್ಯಪಡೆಗೆ(ಬಿಎಂಟಿಎಫ್) ಇತಿಶ್ರೀ ಹಾಡಲು ಮುಂದಾಗುವುದರ ಜೊತೆಗೆ ಸ್ಲಮ್ ಬೋರ್ಡ್ ಹಾಗೂ ಬಿಡಿಎ ಪೊಲೀಸ್ ವಿಂಗ್ ಮುಚ್ಚಿಸಿ, ಹೊಸ ಸೆಕ್ಯೂರಿಟಿ ಫೋರ್ಸ್ ತರಲು ಚಿಂತನೆ ನಡೆಸಿದೆ ಎನ್ನುವ ಮಾಹಿತಿಗಳು ಸಹ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv