Tag: ಡಿಸಿಜಿಐ

  • ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು

    ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು

    – 20 ರಾಜ್ಯಗಳ 76 ಕಂಪನಿಗಳಲ್ಲಿ ಡಿಸಿಜಿಐ ತಪಾಸಣೆ

    ನವದೆಹಲಿ: ನಕಲಿ ಹಾಗೂ ಕಳಪೆ ಗುಣಮಟ್ಟದ ಔಷಧ ತಯಾರಿಸುತ್ತಿದ್ದ ಕಂಪನಿಗಳ (Pharmaceutical Companies) ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ (Government Of India) ಹಾಗೂ ರಾಜ್ಯ ಸರ್ಕಾರಗಳು, 18 ಕಂಪನಿಗಳ ಪರವಾನಗಿಯನ್ನ ರದ್ದುಗೊಳಿಸಿವೆ.

    ಬರೋಬ್ಬರಿ 20 ರಾಜ್ಯಗಳ 76 ಕಂಪನಿಗಳಿಗೆ ಸೇರಿದ ಸ್ಥಳಗಳಲ್ಲಿ ಭಾರತೀಯ ಔಷಧಿ ನಿಯಂತ್ರಣ ಮಹಾ ನಿರ್ದೇಶನಾಲಯ (DCGI) ಹಾಗೂ ವಿವಿಧ ರಾಜ್ಯ ಸರ್ಕಾರಗಳು ಜಂಟಿ ಕಾರ್ಯಾಚರಣೆ ನಡೆಸಿದ ಬಳಿಕ 18 ಕಂಪನಿಗಳ ಪರವಾನಗಿಯನ್ನು ಸರ್ಕಾರ ರದ್ದುಗೊಳಿಸಿದೆ. ಆದರೆ ಪರವಾನಗಿ ರದ್ದುಗೊಳಿಸಿರುವ ಕಂಪನಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಇದನ್ನೂ ಓದಿ: ಪ್ಯಾನ್‌ – ಆಧಾರ್‌ ಕಾರ್ಡ್‌ ಲಿಂಕ್‌; ಜೂನ್‌ 30 ರವರೆಗೆ ಅವಧಿ ವಿಸ್ತರಣೆ

    ಕಳಪೆ ಗುಣಮಟ್ಟದ ಔಷಧಗಳನ್ನು ತಯಾರಿಸುತ್ತಿದ್ದ 76 ಕಂಪನಿಗಳ ಮೇಲೆ ಮೊದಲ ಹಂತದಲ್ಲಿ ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್ ಆಕ್ಟ್ 1940ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದೆ. 18 ಕಂಪನಿಗಳ ಪರವಾನಗಿ ರದ್ದು ಮಾಡಿರುವುದಲ್ಲದೇ, 26 ಕಂಪನಿಗಳಿಗೆ ಶೋಕಾಸ್ ನೋಟಿಸ್ ಜಾರಿಮಾಡಲಾಗಿದೆ. 3 ಕಂಪನಿಗಳ ಕೆಲವು ಉತ್ಪನ್ನಗಳಿಗೆ ನೀಡಿದ್ದ ಅನುಮತಿ ರದ್ದು ಮಾಡಲಾಗಿದೆ. ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 15 ದಿನಗಳಿಂದ ಈ ಕಾರ್ಯಾಚರಣೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಕಳಪೆ ಗುಣಮಟ್ಟದ ಔಷಧಗಳ ವಿರುದ್ಧದ ವಿಶೇಷ ಅಭಿಯಾನದ ಭಾಗವಾಗಿ ಕಾನೂನು ಜಾರಿ ಸಂಸ್ಥೆಗಳು ಒಟ್ಟು 203 ಕಂಪನಿಗಳನ್ನು ಗುರುತಿಸಲಾಗಿದೆ. ಈ ಪೈಕಿ ಹಿಮಾಚಲ ಪ್ರದೇಶದ 70, ಉತ್ತರಾಖಂಡದ 45 ಹಾಗೂ ಮಧ್ಯಪ್ರದೇಶದ 23 ಕಂಪನಿಗಳು ಸೇರಿವೆ. ಹೆಚ್ಚಿನ ಸಂಖ್ಯೆಯಲ್ಲಿ ಕಂಪನಿಗಳನ್ನ ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತಪಾಸಣೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಉಮೇಶ್‌ ಪಾಲ್‌ ಕಿಡ್ನ್ಯಾಪ್‌, ಕೊಲೆ ಪ್ರಕರಣ – ಮಾಜಿ ಸಂಸದ, ಪಾತಕಿ ಅತೀಕ್‌ ಅಹ್ಮದ್‌ಗೆ ಜೀವಾವಧಿ ಶಿಕ್ಷೆ

    ಈ ಹಿಂದೆ ಮರಿಯನ್ ಬಯೋಟೆಕ್‌ನ ಮೂವರು ಹಿರಿಯ ಉದ್ಯೋಗಿಗಳ ವಿರುದ್ಧ ಕಲಬೆರಕೆ ಔಷಧಗಳ ತಯಾರಿಕೆ ಮತ್ತು ಮಾರಾಟದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ ನಂತರ ನೋಯ್ಡಾ ಪೊಲೀಸರು ಬಂಧಿಸಿದ್ದರು.

    ಏಕೆಂದರೆ ಮೇರಿಯನ್ ಬಯೋಟೆಕ್ ಕಂಪನಿಯ ಔಷಧಿ ಡಿಸೆಂಬರ್ 2022ರಲ್ಲಿ ಉಜ್ಬೇಕಿಸ್ತಾನ್‌ನಲ್ಲಿ ಅನೇಕ ಮಕ್ಕಳ ಸಾವಿಗೆ ಕಾರಣವಾಗಿತ್ತು. ಆಗ ಭಾರತದ ಕೇಂದ್ರ ಡ್ರಗ್ಸ್ ನಿಯಂತ್ರಣ ಮಂಡಳಿ (CDSCO) ಈ ವಿಷಯದ ಬಗ್ಗೆ ತನಿಖೆ ಆರಂಭಿಸಿತ್ತು.

  • ಮೂಗಿನ ಮೂಲಕ ನೀಡುವ ಭಾರತದ ಮೊದಲ ಕೋವಿಡ್-19 ಲಸಿಕೆಗೆ ಡಿಸಿಜಿಐ ಅನುಮೋದನೆ

    ಮೂಗಿನ ಮೂಲಕ ನೀಡುವ ಭಾರತದ ಮೊದಲ ಕೋವಿಡ್-19 ಲಸಿಕೆಗೆ ಡಿಸಿಜಿಐ ಅನುಮೋದನೆ

    ನವದೆಹಲಿ: ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಮೂಗಿನ ಮೂಲಕ ನೀಡುವ ಕೋವಿಡ್‌ ಲಸಿಕೆ ತುರ್ತು ಬಳಕೆಗೆ ಭಾರತೀಯ ಔಷಧಿ ನಿಯಂತ್ರಕ (ಡಿಸಿಜಿಐ) ಮಂಗಳವಾರ ಅನುಮೋದನೆ ನೀಡಿದೆ.

    ಭಾರತದಲ್ಲೇ ಅಭಿವೃದ್ಧಿಪಡಿಸಲಾದ ಮೂಗಿನ ಮೂಲಕ ನೀಡುವ ಮೊದಲ ಕೋವಿಡ್-19 ಲಸಿಕೆ ಇದಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಅವರು, ಕೋವಿಡ್ -19 ವಿರುದ್ಧದ ಭಾರತದ ಹೋರಾಟಕ್ಕೆ ಇದು ದೊಡ್ಡ ಉತ್ತೇಜನ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಮನೆಗೆ ನೀರು ನುಗ್ಗಿ ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ – 9 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ

    COVID

    ಈ ಹೆಜ್ಜೆಯು ಸಾಂಕ್ರಾಮಿಕ ರೋಗದ ವಿರುದ್ಧ ನಮ್ಮ ಸಾಮೂಹಿಕ ಹೋರಾಟವನ್ನು ಮತ್ತಷ್ಟು ಬಲಪಡಿಸುತ್ತದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ವಿಜ್ಞಾನ ಮತ್ತು ಮಾನವ ಸಂಪನ್ಮೂಲಗಳನ್ನು COVID-19 ವಿರುದ್ಧದ ಹೋರಾಟದಲ್ಲಿ ಬಳಸಿಕೊಂಡಿದೆ ಎಂದು ಮಾಂಡವಿಯಾ ಅವರು ಟ್ವೀಟ್‌ ಮಾಡಿ ತಿಳಿಸಿದ್ದಾರೆ.

    ವಿಜ್ಞಾನ ಆಧಾರಿತ ವಿಧಾನ ಮತ್ತು ಸಬ್‌ಕಾ ಪ್ರಯಾಸ್‌ ಘೋಷಣೆಗೆ ಬದ್ಧರಾಗಿ ನಾವು ಕೋವಿಡ್ -19 ಅನ್ನು ಸೋಲಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೇನಾ ಕಂಟೋನ್ಮೆಂಟ್ ಆಸ್ಪತ್ರೆಯಲ್ಲಿ ಆನೆಗಳ ರೌಂಡ್ಸ್ – ವೀಡಿಯೋ ವೈರಲ್

    Live Tv
    [brid partner=56869869 player=32851 video=960834 autoplay=true]

  • ಮಕ್ಕಳಿಗೆ ಲಸಿಕೆ – ಒಂದೇ ದಿನ 3 ಲಸಿಕೆಗಳಿಗೆ ಅನುಮತಿ

    ಮಕ್ಕಳಿಗೆ ಲಸಿಕೆ – ಒಂದೇ ದಿನ 3 ಲಸಿಕೆಗಳಿಗೆ ಅನುಮತಿ

    ನವದೆಹಲಿ: ದೇಶದಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಹಾದಿ ಸುಗಮವಾಗಿದೆ. ಒಂದೇ ದಿನ ಮೂರು ಲಸಿಕೆಗೆ ಅನುಮತಿ ಸಿಕ್ಕಿದೆ

    ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯನ್ನು 6 ರಿಂದ 12 ವರ್ಷದ ಮಕ್ಕಳಿಗೆ ನೀಡಲು ಭಾರತ ಔಷಧ ನಿಯಂತ್ರಣ ಮಂಡಳಿ(ಡಿಸಿಜಿಐ) ತುರ್ತು ಅನುಮತಿ ನೀಡಿದೆ.

    5ರಿಂದ 12 ವರ್ಷದೊಳಗಿನ ಮಕ್ಕಳಿಗೆ ಬಯೊಲಾಜಿಕಲ್-ಇ ಸಂಸ್ಥೆ ತಯಾರಿಸಿದ ಕಾರ್ಬೇವ್ಯಾಕ್ಸ್ ಲಸಿಕೆ, 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜೈಡಸ್ ಕ್ಯಾಡಿಲ್ಲಾ ಅಭಿವೃದ್ಧಿಪಡಿಸಿರುವ ಜೈಕೋವ್ ಡಿ ಲಸಿಕೆಯ ತುರ್ತು ಬಳಕೆಗೂ ಡಿಸಿಜಿಐ ಅನುಮೋದನೆ ನೀಡಿದೆ. ಇದನ್ನೂ ಓದಿ: ಚೀನಿಯರನ್ನು ಗುರಿಯಾಗಿಸಿ ಕರಾಚಿಯಲ್ಲಿ ಬಾಂಬ್ ಸ್ಫೋಟ – ನಾಲ್ವರು ಸಾವು

    ಮೂರು ಸಂಸ್ಥೆಗಳಿಗೂ ಡಿಸಿಜಿಐ ಕೆಲ ಷರತ್ತುಗಳನ್ನು ವಿಧಿಸಿದೆ. ಲಸಿಕೆ ಹಂಚಿಕೆಯಾದ ನಂತರ ಮೊದಲ ಎರಡು ತಿಂಗಳು ಪ್ರತಿ 15 ದಿನಕ್ಕೊಮ್ಮೆ ಭದ್ರತಾ ದತ್ತಾಂಶಗಳನ್ನು ಡಿಸಿಜಿಐಗೆ ಸಲ್ಲಿಸಬೇಕು. ಆ ನಂತರ ಐದು ತಿಂಗಳಿಗೊಮ್ಮೆ ವಿವರಗಳನ್ನು ನೀಡಬೇಕು ಎಂದು ಸೂಚಿಸಿದೆ. ಶೀಘ್ರವೇ ಕೇಂದ್ರ ಸರ್ಕಾರ, ಲಸಿಕೆ ಹಂಚಿಕೆಗೂ ಗ್ರೀನ್ ಸಿಗ್ನಲ್ ನೀಡುವ ಸಂಭವ ಹೆಚ್ಚಿವೆ.

  • ಮೂರನೇ ಕೊರೊನಾ ಲಸಿಕೆ ಬಂತು – ರಷ್ಯಾದ ಸ್ಪುಟ್ನಿಕ್ -V ತುರ್ತು ಬಳಕೆಗೆ ಅನುಮತಿ

    ಮೂರನೇ ಕೊರೊನಾ ಲಸಿಕೆ ಬಂತು – ರಷ್ಯಾದ ಸ್ಪುಟ್ನಿಕ್ -V ತುರ್ತು ಬಳಕೆಗೆ ಅನುಮತಿ

    ನವದೆಹಲಿ: ಕೋವಿಶೀಲ್ಡ್, ಕೋವಾಕ್ಸಿನ್ ಬಳಿಕ ದೇಶದಲ್ಲಿ ರಷ್ಯಾದ ಸ್ಪುಟ್ನಿಕ್ V ಲಸಿಕೆ ತುರ್ತು ಬಳಕೆಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ.

    ಇಂದು 1.60 ಲಕ್ಷ ಕೊರೊನಾ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಡಿಸಿಜಿಐ ಅನುಮತಿ ನೀಡಿದೆ. 2020ರ ಆಗಸ್ಟ್‌ನಲ್ಲಿ ರಷ್ಯಾ ಈ ಲಸಿಕೆಯನ್ನು ಬಿಡುಗಡೆ ಮಾಡಿತ್ತು. ಕೊರೊನಾ ಸಂಖ್ಯೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ವಿತರಣೆ ಹೆಚ್ಚಿಸಲು ತಜ್ಞರ ಸಮಿತಿ ಸ್ಪುಟ್ನಿಕ್ ಲಸಿಕೆ ಬಳಕೆಗೆ ಅನುಮತಿ ನೀಡುವಂತೆ ಶಿಫಾರಸು ಮಾಡಿತ್ತು. ಈ ಶಿಫಾರಸಿನ ಹಿನ್ನೆಲೆಯಲ್ಲಿ ಡಿಸಿಜಿಐ ಅನುಮತಿ ನೀಡಿದೆ.

    ಸ್ಪುಟ್ನಿಕ್ V ಲಸಿಕೆಯನ್ನು ಭಾರತದಲ್ಲಿ ಡಾ| ರೆಡ್ಡೀಸ್ ಕಂಪನಿ ಜನರ ಮೇಲೆ ಪ್ರಯೋಗ ನಡೆಸುತ್ತಿದ್ದು, ಅನುಮತಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿತ್ತು. ಸ್ಪುಟ್ನಿಕ್ ಲಸಿಕೆಯನ್ನು ಭಾರತದಲ್ಲಿ ಹೈದರಾಬಾದ್‍ನ ಡಾ| ರೆಡ್ಡೀಸ್ ಲ್ಯಾಬೋರೇಟರಿ, ಹೆಟೆರೊ ಬಯೋಫಾರ್ಮಾ, ಗ್ಲಾಂಡ್ ಫಾರ್ಮಾ, ಸ್ಟೆಲಿಸ್ ಬಯೋಫಾರ್ಮಾ ಹಾಗೂ ವಿಕ್ರೋ ಬಯೋಟೆಕ್ ಕಂಪನಿಗಳಲ್ಲಿ ಈಗಾಗಲೇ ತಯಾರಿಸಲಾಗುತ್ತಿದೆ.

    ಭಾರತದಲ್ಲಿ ಸದ್ಯ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳಿಗಷ್ಟೇ ಅನುಮತಿಯಿದ್ದು, ಅವುಗಳನ್ನೇ ಜನರಿಗೆ ನೀಡಲಾಗುತ್ತಿದೆ. ಹೀಗಾಗಿ ಅಲ್ಲಲ್ಲಿ ಕೊರೋನಾ ಲಸಿಕೆಯ ಕೊರತೆ ಕಾಣಿಸಿಕೊಳ್ಳುತ್ತಿದೆ. ಈಗ ಈ ಲಸಿಕೆಗೆ ಒಪ್ಪಿಗೆ ಸಿಕ್ಕಿದರಿಂದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ಸಿಕ್ಕಿದಂತಾಗಿದೆ. ವರ್ಷಕ್ಕೆ 85 ಕೋಟಿ ಸ್ಪುಟ್ನಿಕ್ ಲಸಿಕೆಯನ್ನು ತಯಾರಿಸುವ ಸಾಮರ್ಥ್ಯ ಭಾರತದ ವಿವಿಧ ಘಟಕಗಳಿಗಿರುವುದು ವಿಶೇಷ.

    ಮುಂದಿನ ದಿನಗಳಲ್ಲಿ ಜಾನ್ಸನ್ ಅಂಡ್ ಜಾನ್ಸನ್, ನೋವಾವಾಕ್ಸ್, ಜೈಡಸ್ ಕ್ಯಾಡಿಲಾ ಹಾಗೂ ಇಂಟ್ರಾನೇಸಲ್ (ಮೂಗಿನ ಮೂಲಕ ತೆಗೆದುಕೊಳ್ಳುವ) ಲಸಿಕೆಗೂ ಸರ್ಕಾರ ಅನುಮತಿ ನೀಡುವ ಸಾಧ್ಯತೆಯಿದೆ. ಸುಮಾರು 20 ಬೇರೆ ಬೇರೆ ಕೊರೋನಾ ಲಸಿಕೆಗಳು ದೇಶದಲ್ಲಿ ಪ್ರಯೋಗದ ವಿವಿಧ ಹಂತದಲ್ಲಿವೆ.

    ವಿಶ್ವದ ಮೊದಲ ಕೊರೊನಾ ವ್ಯಾಕ್ಸಿನ್ ಅಭಿವೃದ್ಧಿ ಪಡಿಸಿರುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ 2020ರ ಆಗಸ್ಟ್ 11 ರಂದು ಘೋಷಿಸಿದ್ದರು. ಪುಟಿನ್ ಪುತ್ರಿ ಮರಿಯಾ ಪುಟಿನ್‍ಗೆ ಮೊದಲ ಸ್ಪುಟ್ನಿಕ್ ಲಸಿಕೆ ನೀಡಲಾಗಿತ್ತು. ಉತ್ತಮ ಪರಿಣಾಮ ಬೀರಿದ್ದು, ಸಮೃದ್ಧವಾಗಿ ಆಂಟಿಬಾಡಿಗಳು(ಪ್ರತಿಕಾಯಗಳು) ಉತ್ಪತ್ತಿಯಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಸೋಂಕನ್ನು ನಿಯಂತ್ರಣಕ್ಕೆ ಈ ಲಸಿಕೆ ತರುತ್ತದೆ ಎಂದು ವರದಿಯಾಗಿದೆ.

    ಮಾಸ್ಕೋದಲ್ಲಿರುವ ಸೆಚನೋವ್ ವಿವಿಯ ಗಮಾಲಿಯಾ ಸಂಶೋಧನಾ ಕೇಂದ್ರ ಮತ್ತು ರಷ್ಯಾ ರಕ್ಷಣಾ ಸಚಿವಾಲಯ ಈ ಲಸಿಕೆಯನ್ನು ಅಭಿವೃದ್ಧಿ ಪಡಿಸಿದೆ.

  • ಅಂದು ಸೈನಿಕರನ್ನು ಪ್ರಶ್ನಿಸಿದ್ರು, ಈಗ ಲಸಿಕೆಯನ್ನೂ ಪ್ರಶ್ನಿಸುತ್ತಿದ್ದಾರೆ – ಬಿಜೆಪಿ ಟೀಕೆ

    ಅಂದು ಸೈನಿಕರನ್ನು ಪ್ರಶ್ನಿಸಿದ್ರು, ಈಗ ಲಸಿಕೆಯನ್ನೂ ಪ್ರಶ್ನಿಸುತ್ತಿದ್ದಾರೆ – ಬಿಜೆಪಿ ಟೀಕೆ

    ನವದೆಹಲಿ: ಅಂದು ಭಾರತದ ಸೈನಿಕರನ್ನು ಪ್ರಶ್ನಿಸಿದ್ದರು. ಇಂದು ಭಾರತದಲ್ಲಿ ತಯಾರಾದ ಲಸಿಕೆಯ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ಬಿಜೆಪಿ ಕಾಂಗ್ರೆಸ್‌ ನಾಯಕರನ್ನು ಟೀಕಿಸಿದೆ.

    ಭಾರತ್ ಬಯೋಟೆಕ್ ಅಭಿವೃದ್ಧಿ ಪಡಿಸಿದ ಕೊವಾಕ್ಸಿನ್ ಲಸಿಕೆಗೆ ಡಿಸಿಜಿಐ ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಇದನ್ನು ಟೀಕಿಸಿತ್ತು. ಇದೀಗ ಕಾಂಗ್ರೆಸ್‍ನ ಟೀಕೆ ಮಾಡುವ ಮೂಲಕ ಜನರನ್ನು ಭಯಭೀತಗೊಳಿಸಲು ಮುಂದಾಗುತ್ತಿದೆ ಎನ್ನುವ ಮೂಲಕ ಬಿಜೆಪಿ ಮುಖಂಡರು ಈ ಟೀಕೆಗೆ ತಿರುಗೇಟು ನೀಡಿದ್ದಾರೆ.

    ಲಸಿಕೆಗೆ ಒಪ್ಪಿಗೆ ಸಿಕ್ಕ ಕೂಡಲೇ ಕಾಂಗ್ರೆಸ್ ನಾಯಕರು ಕಳವಳ ವ್ಯಕ್ತಪಡಿಸಿದ್ದರು. ತಿರುವಂತಪುರಂದ ಸಂಸದ, ಮಾಜಿ ಕೇಂದ್ರ ಮಂತ್ರಿ ಶಶಿ ತರೂರ್ ಅವರು ಕೊವಾಕ್ಸಿನ್ ಇನ್ನೂ 6ನೇ ಹಂತದ ಲಸಿಕೆ ಪ್ರಯೋಗ ಪೂರ್ಣಗೊಳಿಸಿಲ್ಲ . ಅವಧಿಗೂ ಮುನ್ನ ಅನುಮತಿ ನೀಡಿರುವುದು ಅಪಾಯಕಾರಿ ಎಂದು ಹೇಳಿದ್ದದ್ದರು.

    ಆನಂದ್‌ ಶರ್ಮಾ ಅವರು,  ಕಡ್ಡಾಯವಾಗಿ ನಿಯಮಗಳು ಮತ್ತು ದತ್ತಾಂಶಗಳನ್ನು ಪರಿಶೀಲನೆಮಾಡಿ ಹೇಗೆ ವಿತರಣೆಗೆ ಅವಕಾಶ ಕೊಡಲಾಗಿದೆ ಎಂದು ವಿವರಿಸುವಂತೆ ಸರ್ಕಾರವನ್ನು ಪ್ರಶ್ನಿಸಿದ್ದರು.

    ಕಾಂಗ್ರೆಸ್ ನಾಯಕರ ಆರೋಪಕ್ಕೆ ನಾಗರೀಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರತಿಕ್ರಿಯಿಸಿ, ಈ ಮೊದಲು ಅವರು ನಮ್ಮ ಸೈನಿಕರ ಶೌರ್ಯವನ್ನು ಪ್ರಶ್ನಿಸಿದರು. ಈಗ ಸ್ವದೇಶಿಯವಾಗಿ ತಯಾರಿಸಿದ 2 ಲಸಿಕೆಗೆ ಡಿಜಿಸಿಐ ಅನುಮೋದನೆ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

    ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ಪ್ರತಿಕ್ರಿಯಿಸಿ, ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಡುತ್ತಿರುವ ಟೀಕೆ ಭಯವನ್ನುಂಟು ಮಾಡಿರುವುದು ಇದು ಮೊದಲ ಬಾರಿ ಅಲ್ಲ. ಈ ಹಿಂದೆ ಪೋಲಿಯೋ ಲಸಿಕೆ ನೀಡುವಾಗ ಪ್ರಶ್ನೆ ಮಾಡಿದ್ದರು. ಪೋಲಿಯೋದಂತೆ ಸಾಮಾನ್ಯ ರೋಗವಲ್ಲ ಇದೂ ಮಾರಕ ರೋಗ. ಈ ರೋಗ ಬಂದು ಹೆಚ್ಚಿನ ಜನ ಸಾಯಲಿ ಎಂಬುದು ಪ್ರತಿಪಕ್ಷಗಳ ಬಯಕೆ ಇದ್ದಂತಿದೆ ಎಂದು ಕಾಂಗ್ರೆಸ್‍ನ ಟೀಕೆಗೆ ತಿರುಗೇಟು ನೀಡಿದರು.

     

  • ಡಿಸಿಜಿಐ ಶೋಕಾಸ್ ನೋಟಿಸ್ – ಕೊರೊನಾ ವ್ಯಾಕ್ಸಿನ್ ಪ್ರಯೋಗ ನಿಲ್ಲಿಸಿದ ಸೆರಮ್

    ಡಿಸಿಜಿಐ ಶೋಕಾಸ್ ನೋಟಿಸ್ – ಕೊರೊನಾ ವ್ಯಾಕ್ಸಿನ್ ಪ್ರಯೋಗ ನಿಲ್ಲಿಸಿದ ಸೆರಮ್

    ನವದೆಹಲಿ: ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಶೋಕಾಸ್ ನೋಟಿಸ್ ಬಳಿಕ ಪುಣೆಯ ಸೆರಮ್ ಇನ್ಸಿಟ್ಯೂಟ್ ಆಫ್ ಇಂಡಿಯ ಸಂಸ್ಥೆ ಕೊರೊನಾ ಲಸಿಕೆ ಪ್ರಯೋಗಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ.

    ಪ್ರಯೋಗಗಳನ್ನು ನಿಲ್ಲಿಸಿರುವ ಬಗ್ಗೆ ಇಂದು ಸೆರಮ್ ಸಂಸ್ಥೆ ಅಧಿಕೃತ ಮಾಹಿತಿ ನೀಡಿದೆ. ದೇಶದ 17 ಪ್ರದೇಶಗಳಲ್ಲಿ 1,600 ಮಂದಿಯ ಮೇಲೆ ಪ್ರಯೋಗ ನಡೆಸಲಾಗುತ್ತಿತ್ತು ಡಿಸಿಜಿಐ ಶೋಕಾಸ್ ನೋಟಿಸ್ ಹಿನ್ನೆಲೆ ಪ್ರಯೋಗ ನಿಲ್ಲಿಸಿದೆ ಎಂದು ಹೇಳಿದೆ.

    ಬ್ರಿಟನ್ ನಲ್ಲಿ ಈ ಲಸಿಕೆ ಪ್ರಯೋಗ ಒಳಪಟ್ಟ ವ್ಯಕ್ತಿಗೆ ಅನಾರೋಗ್ಯ ಉಂಟಾದ ಹಿನ್ನಲೆ, ಅಲ್ಲಿ ಪ್ರಯೋಗಗಳನ್ನು ನಿಲ್ಲಿಸಲಾಗಿದೆ. ಲಸಿಕೆ ಅಭಿವೃದ್ಧಿ ಪಡಿಸಿರುವ ಸಂಸ್ಥೆ ಅಸ್ಟ್ರಾಜೆನಿಕಾ ಪ್ರಯೋಗಗಳು ಪುನಾರಂಭಿಸಿದ ಬಳಿಕವಷ್ಟೇ ಭಾರತದಲ್ಲಿ ಪ್ರಯೋಗಗಳು ಮತ್ತೆ ಆರಂಭವಾಗಲಿದೆ ಎಂದು ಸೆರಮ್ ಹೇಳಿದೆ.

    ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ ಆಕ್ಸ್ ಫರ್ಡ್ ಯೂನಿವರ್ಸಿಟಿ ಮತ್ತು ಆಸ್ಟ್ರಾಜೆನೆಕಾ ಫಾರ್ಮಾ ಕಂಪನಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಕೊರೊನಾ ವ್ಯಾಕ್ಸಿನ್ ಅನ್ನು ಭಾರತದಲ್ಲಿ ಮಾನವರ ಮೇಲೆ ಎರಡು ಮತ್ತು ಮೂರನೇ ಹಂತದಲ್ಲಿ ಪ್ರಯೋಗ ನಡೆಸುತ್ತಿತ್ತು.

    ಲಸಿಕೆಯಿಂದ ವ್ಯಕ್ತಿ ಅನಾರೋಗ್ಯಕ್ಕೆ ಒಳಪಟ್ಟ ವಿಚಾರ ತಿಳಿಸದ ಹಿನ್ನೆಲೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಶೋಕಾಸ್ ನೋಟಿಸ್ ನೀಡಿತ್ತು. ಮತ್ತು ಕೂಡಲೇ ಪ್ರಯೋಗಗಳನ್ನು ನಿಲ್ಲಿಸಲು ಆದೇಶಿಸಿತ್ತು.