Tag: ಡಿಸಿ ಕಚೇರಿ

  • ಚಿಕ್ಕಬಳ್ಳಾಪುರ | ಜಿಲ್ಲಾಡಳಿತ ಭವನದಲ್ಲೇ ನಾಯಿಗಳ ಹಾವಳಿ; ಡಿಸಿ ಕಚೇರಿ ಸಿಬ್ಬಂದಿ ಸುಸ್ತು!

    ಚಿಕ್ಕಬಳ್ಳಾಪುರ | ಜಿಲ್ಲಾಡಳಿತ ಭವನದಲ್ಲೇ ನಾಯಿಗಳ ಹಾವಳಿ; ಡಿಸಿ ಕಚೇರಿ ಸಿಬ್ಬಂದಿ ಸುಸ್ತು!

    ಚಿಕ್ಕಬಳ್ಳಾಪುರ: ಇಲ್ಲಿನ ಜಿಲ್ಲಾಡಳಿತ ಭವನದಲ್ಲೇ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿದಿನ ಕೆಲಸ ಕಾರ್ಯಗಳಿಗೆ ಆ ಜಿಲ್ಲೆಯ ಜನ ಅಲ್ಲಿಗೆ ಭೇಟಿ ನೀಡ್ತಾರೆ. ಮತ್ತೊಂದೆಡೆ ಅಲ್ಲಿಯ ಅಧಿಕಾರಿ ಸಿಬ್ಬಂದಿ, ಅಲ್ಲೆ ಕರ್ತವ್ಯ ಮಾಡ್ತಾರೆ. ಇಂಥದರಲ್ಲಿ ಆ ಭವನಕ್ಕೂ ನಾಯಿಗಳಿಗೂ ಅದೇನ್ ನಂಟೊ ಗೊತ್ತಿಲ್ಲ, ಹಿಂಡು ಹಿಂಡು ನಾಯಿಗಳು ಆ ಜಿಲ್ಲಾಡಳಿತ ಭವನವನ್ನೇ ತಮ್ಮ ಆಶ್ರಯ ತಾಣಗಳನ್ನಾಗಿ ಮಾಡಿಕೊಂಡಿವೆ.

    ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಒಂದಲ್ಲ ಎರಡಲ್ಲ 18ಕ್ಕೂ ಹೆಚ್ಚು ನಾಯಿಗಳು ಇವೆ. ಒಂದೊಂದು ನಾಯಿಗಳು ಒಂದೊಂದು ಕಚೇರಿಯನ್ನು ಹಂಚಿಕೊಂಡಂತೆ ಕಂಡು ಬಂದಿದೆ. ಆ ಕಚೇರಿ ಹತ್ತಿರ ಹೊದ್ರೆ, ಅಲ್ಲೊಂದು ಬೌ ಎನ್ನುತ್ತೆ, ಈ ಕಡೆ ಕಚೇರಿಗೆ ಬಂದ್ರೆ ಇಲ್ಲೊಂದು ಬೌ ಬೌ ಎನ್ನುತ್ತೆ, ಇಲ್ಲಿರುವ ನಾಯಿಗಳು ಕೆಲವು ಸಿಬ್ಬಂದಿಗಳಿಗೆ ಅಭ್ಯಾಸವಾಗಿದ್ರೆ. ಕಚೇರಿಗೆ ಬರೊ ಸಾರ್ವಜನಿಕರನ್ನ ಕಂಡ್ರೆ ಬೌ ಬೌ ಮಾಡ್ತಿವೆ.

    ಸ್ವತಃ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ನಾಯಿಗಳಿಂದ ಎಚ್ಚರಿಕೆಯಿಂದ ಇರುವಂತೆ ಡಿಸಿ ಪಿ.ಎನ್ ರವೀಂದ್ರ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ದಿನದಿಂದ ದಿನಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಾಯಿಗಳ ಸಂತತಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಅಪಾಯ ಆಗುವ ಮುನ್ನ ಎಚ್ಚರ ವಹಿಸಬೇಕಿದೆ.

  • ಡಿಸಿ ಕಚೇರಿಗೆ ಬೀಗ ಹಾಕಿ ರೈತರಿಂದ ಪ್ರತಿಭಟನೆ

    ಡಿಸಿ ಕಚೇರಿಗೆ ಬೀಗ ಹಾಕಿ ರೈತರಿಂದ ಪ್ರತಿಭಟನೆ

    ಬೆಳಗಾವಿ: ಕಬ್ಬು ಬೆಳೆಗಾರರಿಗೆ 5,500 ರೂ. ದರ ನಿಗದಿ ಮಾಡುವಂತೆ ಒತ್ತಾಯಿಸಿ ಬೆಳಗಾವಿಯ ಡಿಸಿ ಕಚೇರಿಗೆ ಬೀಗ ಹಾಕಿ ರೈತರು ಪ್ರತಿಭಟನೆ ನಡೆಸಿದರು.

    ಬೆಳಗಾವಿ (Belagavi) ಡಿಸಿ ಕಚೇರಿಗೆ (DC Office) ಬೀಗ ಹಾಕಿ ಮುಂಭಾಗದಲ್ಲಿ ಪ್ರತಿಭಟನೆ (Protest) ನಡೆಸಿದ ರೈತರು (Farmer) ಕಬ್ಬು ಬೆಳೆಗಾರರಿಗೆ 5,500 ರೂ. ದರ ನಿಗದಿ ಮಾಡುವಂತೆ ಒತ್ತಾಯ ಮಾಡಿದ್ದರು. ಅಷ್ಟೇ ಅಲ್ಲದೇ ಡಿಸಿ ಕಚೇರಿ ಮುಂಭಾಗದಲ್ಲಿಯೇ ಹಾಸಿಗೆ ಹಾಸಿ ರೈತರು ಪ್ರತಿಭಟಿಸಿದರು. ಇದನ್ನೂ ಓದಿ: ಪುಟಿನ್ ಕನಸಿನ ಸೇತುವೆ ಧ್ವಂಸಗೊಳಿಸಿದ್ದಕ್ಕೆ ಕೆರಳಿದ ರಷ್ಯಾ – ಉಕ್ರೇನ್ ಮೇಲೆ ಮತ್ತಷ್ಟು ತೀವ್ರ ದಾಳಿ

    ರೈತರಿಗೆ 5,500 ರೂ. ದರ ನಿಗದಿ ಸೇರಿದಂತೆ ಇತರ ಬೇಡಿಕೆ ಈಡೇರಿಸುವಂತೆ ನಿನ್ನೆ ಡಿಸಿಗೆ ರೈತರು ಮನವಿ ಮಾಡಿದ್ದರು. ಆದರೆ ಡಿಸಿ ನಿತೇಶ್‌ ಪಾಟೀಲ್‌ ನಡೆಸಿದ ಸಂಧಾನ ವಿಫಲ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರಿದಿದೆ. ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಸ್ಥಳಕ್ಕೆ ಸಕ್ಕರೆ ಸಚಿವರು ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಧಾರಾಕಾರ ಮಳೆ – ಇಂದು, ನಾಳೆ ಯೆಲ್ಲೋ ಅಲರ್ಟ್

    Live Tv
    [brid partner=56869869 player=32851 video=960834 autoplay=true]

  • ವರ್ಕ್‌ ಆರ್ಡರ್‌ ಇಲ್ಲದೇ ಕಾಮಗಾರಿ – ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಪಂಚಾಯತ್‌ನಿಂದ ದೂರು

    ವರ್ಕ್‌ ಆರ್ಡರ್‌ ಇಲ್ಲದೇ ಕಾಮಗಾರಿ – ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಪಂಚಾಯತ್‌ನಿಂದ ದೂರು

    ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶಹೊರಹಾಕಿದ್ದಾರೆ.

    ಬೆಳಗಾವಿ ಡಿಸಿ ಕಚೇರಿ ಆವರಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನಿಲಜಿ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ

    ಯಾವುದೇ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಬೇಕಾದರೆ ಮೊದಲಿಗೆ ಟೆಂಡರ್ ಕರೆಯಬೇಕು. ಅದಕ್ಕೆ ಅನುಮೋದನೆ ಸಿಗಬೇಕು. ಆದರೆ ಇದ್ಯಾವುದನ್ನು ಪಾಲಿಸದೇ ವರ್ಕ್ ಆರ್ಡರ್ ಇಲ್ಲದೇ ಇದ್ದರೂ ಶಾಸಕಿ ಪುತ್ರನಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದಲ್ಲದೇ ಸಂಬಂಧಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರ ಗಮನಕ್ಕೆ ತರದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಡಿಸಿಗೆ ಒತ್ತಾಯಿಸಿದರು. ಇದನ್ನೂ ಓದಿ: ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ

    Live Tv
    [brid partner=56869869 player=32851 video=960834 autoplay=true]

  • ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

    ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

    ಬೆಳಗಾವಿ: ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದಿದ್ದಕ್ಕೆ ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲವಾಗಿತ್ತು. ಇದರಿಂದಾಗಿ ಏಣಗಿ ಗ್ರಾಮಸ್ಥರು ಅಬ್ದುಲ್ ಖಾದರ್ ಮಿಶ್ರಿಕೋಟಿ (65) ಮೃತದೇಹವನ್ನು ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೃತರ ಸಂಬಂಧಿ ಇಬ್ರಾಹಿಂ ನೇತೃತ್ವದಲ್ಲಿ ಗ್ರಾಮಸ್ಥರಿಂದ ಈ ಪ್ರತಿಭಟನೆ ನಡೆದಿದ್ದು, ಸ್ಮಶಾನಕ್ಕೆ ಹಾದಿ ಕೊಡದ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹಿಂದೂ, ಮುಸ್ಲಿಂ ಎರಡೂ ಸಮುದಾಯದ ಸ್ಮಶಾನಗಳಿಗೆ ತೆರಳಲು ಹಾದಿ ಇಲ್ಲ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಬೆಳಗಾವಿ ಡಿಸಿ ಕಚೇರಿಗೆ ಮೃತದೇಹ ತಂದು ಪ್ರತಿಭಟನೆ ಮಾಡುತ್ತಿದ್ದೇವೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಇಲ್ಲೇ ಸಮಾಧಿ ಮಾಡುತ್ತೇವೆ ಎಂದು ಸಂಬಂಧಿಕರು, ಗ್ರಾಮಸ್ಥರು ಎಚ್ಚರಿಕೆ ನೀಡಿದರು.

    ಬೆಳಗಾವಿ ಡಿಸಿ ಕಚೇರಿ ಎದುರು ಮೃತದೇಹವಿಟ್ಟು ಗ್ರಾಮಸ್ಥರ ಪ್ರತಿಭಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರಿಂದ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದ್ದಾರೆ. ಆದರೂ ಇದಕ್ಕೆ ಕರಗದೇ ಸ್ಮಶಾನಕ್ಕೆ ದಾರಿ ಮಾಡಿಕೊಡುವರೆಗೂ ಪ್ರತಿಭಟನೆ ಹಿಂಪಡೆಯಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಮಾರ್ಕೆಟ್ ಠಾಣೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಸಿಸಿಬಿ ಸಿಪಿಐ ನಿಂಗನಗೌಡ ಪಾಟೀಲ್ ಇದ್ದರು. ಇದನ್ನೂ ಓದಿ: ಇಂದಿನಿಂದ SSLC ಸಪ್ಲಿಮೆಂಟರಿ ಎಕ್ಸಾಂ – ಆಗಸ್ಟ್ ಮೊದಲ ವಾರದಲ್ಲಿ ರಿಸಲ್ಟ್

    ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ ಭೇಟಿ ನೀಡಿ ಪ್ರತಿಭಟನಾನಿರತರ ಮನವೊಲಿಕೆಗೆ ಯತ್ನಿಸಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳ ಕಳಿಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದ ಎಡಿಸಿ ಭರವಸೆ ನೀಡಿದ್ದಾರೆ. ಜೆಸಿಬಿ ದಾರಿ ಹೋಗುವಷ್ಟು ರಸ್ತೆ ಮಾಡಿಸಿ ಕೊಡಿ ತೆರಳುತ್ತೇವೆ ಎಂದ ಗ್ರಾಮಸ್ಥರು  ತಿಳಿಸಿದರು. ಆ ಬಳಿಕ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು. ಇದನ್ನೂ ಓದಿ: ಜುಲೈ 1ರಿಂದ ಕಬ್ಬನ್ ಪಾರ್ಕ್‍ನಲ್ಲಿ ನಾಯಿಗಳಿಗೆ ನಿಷೇಧ

    Live Tv

  • ರೋಹಿತ್ ಚಕ್ರತೀರ್ಥ ಅಣಕು ಶವಯಾತ್ರೆ ನಡೆಸಿ ಕರವೇ ಪ್ರತಿಭಟನೆ

    ರೋಹಿತ್ ಚಕ್ರತೀರ್ಥ ಅಣಕು ಶವಯಾತ್ರೆ ನಡೆಸಿ ಕರವೇ ಪ್ರತಿಭಟನೆ

    ಬೆಳಗಾವಿ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಮರುಪರಿಷ್ಕರಣಾ ಸಮಿತಿಯನ್ನು ವಜಾ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದ ಡಿಸಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.

    ಈ ವೇಳೆ ನಗರದ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ರೋಹಿತ್ ಚಕ್ರತೀರ್ಥ ಅಣಕು ಶವಯಾತ್ರೆ ಮಾಡಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಈ ವೇಳೆ ಸರ್ಕಾರದ ವಿರುದ್ಧ ಕನ್ನಡಪರ ಹೋರಾಟಗಾರರು ಧಿಕ್ಕಾರ ಕೂಗಿದರು. ಡಿಸಿ ಕಚೇರಿ ಆವರಣದ ಮುಂಭಾಗದಲ್ಲಿ ರೋಹಿತ್ ಚಕ್ರತೀರ್ಥ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್ 

    ಈ ಕುರಿತು ಮಾತನಾಡಿದ ಕನ್ನಡ ಸಂಘಟನೆ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ, ಹಿಂದಿನ ವರ್ಷದ ಪಠ್ಯವನ್ನೇ ಮಕ್ಕಳಿಗೆ ವಿತರಿಸಬೇಕು. ಪ್ರೋ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಸಿದ್ಧಪಡಿಸಿದ್ದ ಪಠ್ಯಪುಸ್ತಕ ತರಾತುರಿಯಲ್ಲಿ ಮರು ಪರಿಷ್ಕರಣೆ ಮಾಡಲಾಗುತ್ತಿದೆ. ಭಾಷಾ ಪಠ್ಯ ಮತ್ತು ಸಮಾಜ ವಿಜ್ಞಾನ ಪಠ್ಯಗಳಲ್ಲಿ ಖಂಡನಾರ್ಹ ಬದಲಾವಣೆ ಮಾಡಿರುವ ಆರೋಪ ಕೇಳಿಬಂದಿದೆ ಎಂದರು. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್

    ಮರು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲು ಸರ್ಕಾರ ಹೊರಟಿದೆ. ಇದರಿಂದ ಲಕ್ಷಾಂತರ ಮಕ್ಕಳ ಭವಿಷ್ಯ, ಶಿಕ್ಷಣ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಸರ್ಕಾರ ಮೊಂಡುತನಕ್ಕೆ ಬಿದ್ದರೆ ತಕ್ಕ ಪಾಠ ಕಲಿಸುತ್ತೇವೆ. ಶಿಕ್ಷಣ ವ್ಯವಸ್ಥೆಯಲ್ಲಿ ರಾಜಕೀಯ ಮಾಡದೇ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪರಿಷ್ಕರಣಾ ಸಮಿತಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

  • ದೆಹಲಿ ಗಲಭೆ ಖಂಡಿಸಿ ಹಾವೇರಿಯಲ್ಲಿ ರೈತರ ಉಪವಾಸ ಸತ್ಯಾಗ್ರಹ

    ದೆಹಲಿ ಗಲಭೆ ಖಂಡಿಸಿ ಹಾವೇರಿಯಲ್ಲಿ ರೈತರ ಉಪವಾಸ ಸತ್ಯಾಗ್ರಹ

    ಹಾವೇರಿ: ಗಣರಾಜ್ಯೋತ್ಸವ ದಿನದಂದು ರೈತರ ಹೆಸರಿನಲ್ಲಿ ದೆಹಲಿಯಲ್ಲಿ ನಡೆದ ಕಿಡಿಗೇಡಿಗಳ ಕೃತ್ಯ ಖಂಡಿಸಿ ಹಾವೇರಿಯಲ್ಲಿ ರೈತಸಂಘದ ಕಾರ್ಯಕರ್ತರು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು.

    ರೈತರು ನ್ಯಾಯಯುತ ಬೇಡಿಕೆಗಾಗಿ ಸತ್ಯಾಗ್ರಹ ನಡೆಸುವಾಗ ರೈತರ ಸತ್ಯಾಗ್ರಹಕ್ಕೆ ಮಸಿ ಬಳಿಯಲು ಕೆಲವು ಕಿಡಿಗೇಡಿಗಳು ಕೃತ್ಯ ನಡೆಸಿದ್ದಾರೆ. ಹೀಗಾಗಿ ಕಿಡಿಗೇಡಿಗಳ ಕೃತ್ಯವನ್ನ ಖಂಡಿಸಿ ಸತ್ಯಕ್ಕೆ ಸಾವಿಲ್ಲ ಎಂಬ ಘೋಷಣೆಯಡಿ ರೈತರು ನಗರದ ಜಿಲ್ಲಾಡಳಿತ ಭವನದ ಮುಂದೆ ಸತ್ಯಾಗ್ರಹ ನಡೆಸಿದರು.

    ದೆಹಲಿಯಲ್ಲಿನ ರೈತರ ಸತ್ಯಾಗ್ರಹ ಹತ್ತಿಕ್ಕಲು ಕಾಣದ ಕೈಗಳು ಕಿಡಿಗೇಡಿಗಳ ಮೂಲಕ ಕೃತ್ಯ ನಡೆಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ವಿರೋಧಿ ನೀತಿ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಕೂಡಲೇ ಸರಕಾರಗಳು ರೈತರ ಸತ್ಯಾಗ್ರಹಕ್ಕೆ ಮಸಿ ಬಳಿಯುವ ಕೃತ್ಯಗಳನ್ನು ಮಾಡುವ ಕಿಡಿಗೇಡಿಗಳನ್ನು ಬಿಡದೇ ರೈತರ ನ್ಯಾಯಯುತ ಬೇಡಿಕೆ ಈಡೇರಿಸಲು ಮುಂದಾಗಬೇಕಿದೆ ಎಂದು ಆಗ್ರಹಿಸಿದರು.

  • ಕೊರೊನಾ ಭೀತಿ: ಡಿಸಿ ಕಚೇರಿ ಸಿಬ್ಬಂದಿಗೆ ಮರದ ಕೆಳಗೆ ಕೆಲಸ

    ಕೊರೊನಾ ಭೀತಿ: ಡಿಸಿ ಕಚೇರಿ ಸಿಬ್ಬಂದಿಗೆ ಮರದ ಕೆಳಗೆ ಕೆಲಸ

    – ಸಾರ್ವಜನಿಕರಿಗೆ ವಿನಾಕಾರಣ ಕಚೇರಿ ಒಳಗೆ ಪ್ರವೇಶವಿಲ್ಲ

    ರಾಯಚೂರು: ಕೊರೊನಾ ವೈರಸ್ ಭೀತಿಯಿಂದ ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳು ಬೀದಿಗೆ ಬರುವಂತಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ಸಾರ್ವಜನಿಕ ಸಂಪರ್ಕ ಇರುವ ಜಿಲ್ಲಾಧಿಕಾರಿ ಕಚೇರಿಯ ಆವಾಕ, ಜಾವಕ ವಿಭಾಗಗಳನ್ನ ಕಚೇರಿಯಿಂದ ಹೊರಕ್ಕೆ ಇಡಲಾಗಿದೆ. ವಾಹನ ಪಾರ್ಕಿಂಗ್ ಬಳಿ ಟೇಬಲ್ ಹಾಕಿಕೊಂಡು ಸಿಬ್ಬಂದಿ ಕುಳಿತಿದ್ದಾರೆ.

    ರಸ್ತೆಯಲ್ಲೆ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿರುವ ಸಿಬ್ಬಂದಿ ಮರದ ಕೆಳಗೆ ಫೈಲ್ ಗಳನ್ನ ಹಿಡಿದು ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಆದೇಶದ ಮೇರೆಗೆ ಎರಡು ವಿಭಾಗ ಕಚೇರಿಯಿಂದ ಹೊರಗೆ ಕಾರ್ಯನಿರ್ವಹಿಸುತ್ತಿವೆ. ಅಲ್ಲದೆ ಕಚೇರಿ ಆವರಣದಲ್ಲಿ ಹೆಚ್ಚು ಜನ ನಿಲ್ಲದಂತೆ ಸೂಚನೆ ನೀಡಲಾಗಿದ್ದು, ಗುಂಪುಗುಂಪಾಗಿ ಕಚೇರಿಗೆ ಬರುವ ಜನರನ್ನ ಪೊಲೀಸ್ ಸಿಬ್ಬಂದಿ ಚದುರಿಸುತ್ತಿದ್ದಾರೆ. ವಾಹನಗಳನ್ನ ಒಳಬರದಂತೆ ತಡೆಹಿಡಿಯುತ್ತಿದ್ದಾರೆ.

    ಸಂತೆ, ಜಾತ್ರೆ, ಉರುಸುಗಳನ್ನು ಬಂದ್ ಮಾಡಲಾಗಿದೆ. ಔಷಧಿ ಅಂಗಡಿಯಲ್ಲಿ ಹ್ಯಾಂಡ್ ಸೈನೆಟೈಸ್ ಹಾಗೂ ಮಾಸ್ಕ್ ಹೆಚ್ಚಿನ ದರ ಮಾರಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಅಂತ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ. ಎನ್‍ಡಿಆರ್‍ಆಫ್ ನಿಂದ ಹಣ ಬಳಕೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಸೋಂಕಿತರ ಆರೋಗ್ಯಕ್ಕೆ ಬೇಕಾಗುವ ವಸ್ತು ಖರೀದಿಸಲು ಸೂಚಿಸಲಾಗಿದೆ.

    ಸರ್ಕಾರಿ ಕಚೇರಿಗಳಿಗೆ ಅನಾವಶ್ಯಕವಾಗಿ ಬರೋದು ಬೇಡ. ಡಿಸಿ ಕಚೇರಿಯಲ್ಲಿ ಆವಕ ಸಿಬ್ಬಂದಿಯನ್ನು ಹೊರಗಡೆ ನಿಯೋಜಿಸಲಾಗಿದೆ. ಬಾರ್ ಹಾಗೂ ರೆಸ್ಟೋರೆಂಟ್ ಇಂದಿನಿಂದ ಬಂದ್ ಮಾಡಲಾಗುವುದು. ಆಧಾರ್ ನೋಂದಣಿ ಕೇಂದ್ರಗಳನ್ನು ಒಂದು ವಾರ ಬಂದ್ ಮಾಡಲಾಗುವುದು. ಪ್ರತಿಭಟನೆ ಕೊಡುವವರು ಕಡಿಮೆ ಜನರು ಬಂದು ಮನವಿ ಕೊಡಿ ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

  • ಡಿಸಿ ಕಚೇರಿ ದ್ವಾರದಲ್ಲಿ ಮಲಗಿಸಿ, ಮಗನಿಂದ ತಾಯಿಯ ದಯಾಮರಣಕ್ಕೆ ಮನವಿ

    ಡಿಸಿ ಕಚೇರಿ ದ್ವಾರದಲ್ಲಿ ಮಲಗಿಸಿ, ಮಗನಿಂದ ತಾಯಿಯ ದಯಾಮರಣಕ್ಕೆ ಮನವಿ

    ತುಮಕೂರು:ನಿಗೂಢ ಖಾಯಿಲೆಯಿಂದ ನರಳುತಿದ್ದ ತಾಯಿಯ ದಯಾಮರಣಕ್ಕೆ ಅನುಮತಿ ಕೊಡುವಂತೆ ಮಗನೊಬ್ಬ ತುಮಕೂರು ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.

    ನಿಸ್ತೇಜ ಸ್ಥಿತಿಯಲ್ಲಿರುವ ತಾಯಿಯನ್ನು ಡಿಸಿ ಕಚೇರಿ ದ್ವಾರದಲ್ಲಿ ಮಲಗಿಸಿ ದಯಾಮರಣಕ್ಕಾಗಿ ಮಗ ಅಂಗಲಾಚಿದ್ದಾರೆ. ತುಮಕೂರು ನಗರದ ಗಾರ್ಡನ್ ರಸ್ತೆಯ ನಿವಾಸಿ ನಾಗರಾಜ್ ತನ್ನ ತಾಯಿ ನಾಗರತ್ನಮ್ಮಾರ ದಯಾಮರಣಕ್ಕಾಗಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ದಯಾಮರಣಕ್ಕೆ ಸುಪ್ರೀಂ ಅನುಮತಿ: ಏನಿದು ಲಿವಿಂಗ್ ವಿಲ್? ತೀರ್ಪಿನಲ್ಲಿ ಏನಿದೆ? ತಪ್ಪು ಮಾಡಿದ್ರೆ ಶಿಕ್ಷೆ ಏನು?

    ಕೈಕಾಲು ಸ್ವಾದೀನ ಕಳೆದುಕೊಂಡ ನಾಗರತ್ನಮ್ಮ ಕಳೆದ 10 ವರ್ಷದಿಂದ ಹಾಸಿಗೆ ಹಿಡಿದಿದ್ದಾರೆ. ನಾಗರತ್ನಮ್ಮ ಅವರಿಗೆ ಎಷ್ಟೇ ಚಿಕಿತ್ಸೆ ಕೊಡಿಸಿದರೂ ಕಾಯಿಲೆ ಮಾತ್ರ ಗುಣಮುಖವಾಗಿರಲಿಲ್ಲ. ಇದರಿಂದ ಬೇಸತ್ತ ಮಗ ನಾಗರಾಜು ತಾಯಿಯನ್ನು ಕರೆದುಕೊಂಡು ಡಿಸಿ ಕಚೇರಿ ಬಳಿ ಹೋಗಿ ತಾಯಿಯ ದಯಾಮರಣಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

    ನಂತರ ತಾಯಿ ಮಗನ ಪರಿಸ್ಥಿತಿ ನೋಡಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು ತಕ್ಷಣ ನಾಗರತ್ನಮ್ಮಾಳರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv