Tag: ಡಿಸಿ ಜಗದೀಶ್

  • ಉಡುಪಿಯಲ್ಲಿ 700 ಮನೆ ಮುಳುಗಡೆ – 3500ಕ್ಕೂ ಹೆಚ್ಚು ಜನರ ರಕ್ಷಣೆ

    ಉಡುಪಿಯಲ್ಲಿ 700 ಮನೆ ಮುಳುಗಡೆ – 3500ಕ್ಕೂ ಹೆಚ್ಚು ಜನರ ರಕ್ಷಣೆ

    ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, 24 ಗಂಟೆಯಲ್ಲಿ 2500 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.

    ಜಿಲ್ಲೆಯಾದ್ಯಂತ ಪ್ರವಾಹದ ವಾತಾವರಣ ಇದೆ, ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಆಗಿದೆ. ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಿ ಉಡುಪಿ ಡಿಸಿ ಜಿ ಜಗದೀಶ್ ಮನವಿ ಮಾಡಿದ್ದಾರೆ.

    ರಾತ್ರಿ ವೇಳೆ ಮನೆ ಮುಳುಗಡೆಯಾದರೆ ರಕ್ಷಣಾಕಾರ್ಯ ಕಷ್ಟವಾಗುತ್ತದೆ. ಜಿಲ್ಲಾಡಳಿತದ ಜೊತೆ ಜನ ಕೈಜೋಡಿಸಿ, ಶೀಘ್ರ ಸುರಕ್ಷಿತ ಪ್ರದೇಶಕ್ಕೆ ಬನ್ನಿ ಎಂದು ಹೇಳಿದ್ದಾರೆ. ಕಳೆದ 24 ಗಂಟೆಯಲ್ಲಿ 700 ಮನೆಗಳು ಮುಳುಗಿದೆ. ಜಿಲ್ಲೆಯಲ್ಲಿ ಸುಮಾರು 2,500 ಜನರ ರಕ್ಷಣೆ ಮಾಡಲಾಗಿದೆ. ಸಾರ್ವಜನಿಕರು ಜನಪ್ರತಿನಿಧಿಗಳು ಸೇರಿ ಸಾವಿರಾರು ಜನರ ರಕ್ಷಣೆ ಮಾಡಿದ್ದಾರೆ. ತಗ್ಗು ಪ್ರದೇಶದಲ್ಲಿದ್ದ ಜನ ಸುರಕ್ಷಿತ ತಾಣಗಳಿಗೆ ಬನ್ನಿ ರಕ್ಷಣಾ ಕಾರ್ಯದಲ್ಲಿ ಸಾರ್ವಜನಿಕರು ಅತೀ ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಕ್ಕೆ ಧನ್ಯವಾದ ಎಂದರು.

  • ಮನೆಗಳಲ್ಲಿ ನಾಗರಪಂಚಮಿ ಆರಾಧಿಸಿ, ಸಾರ್ವಜನಿಕವಾಗಿ ಬೇಡ: ಉಡುಪಿ ಡಿಸಿ

    ಮನೆಗಳಲ್ಲಿ ನಾಗರಪಂಚಮಿ ಆರಾಧಿಸಿ, ಸಾರ್ವಜನಿಕವಾಗಿ ಬೇಡ: ಉಡುಪಿ ಡಿಸಿ

    – ನನ್ನ ಹೆಸರಿನಲ್ಲಿ ತಪ್ಪು ಸಂದೇಶ ರವಾನೆಯಾಗುತ್ತಿದೆ

    ಉಡುಪಿ: ಶನಿವಾರ ನಾಗರ ಪಂಚಮಿ ಹಬ್ಬ. ಉಡುಪಿ ಜಿಲ್ಲೆಯಲ್ಲಿ ಸಾಮೂಹಿಕ ನಾಗರಪಂಚಮಿಗೆ ಜಿಲ್ಲೆಯಲ್ಲಿ ಅವಕಾಶ ಇಲ್ಲ. ನಾಗಾರಾಧನೆ ಪೂಜೆ ಮಾಡಬಾರದು ಎಂದು ನಾನು ಹೇಳಿಲ್ಲ. ಮನೆಗಳಲ್ಲಿ ನಾಗಾರಾಧನೆ ಮಾಡಲು ಯಾವುದೇ ನಿರ್ಬಂಧ ಇಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

    ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಹೆಸರಿನಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಮೆಸೇಜನ್ನು ಸಾಮಾಜಿಕ ಜಾಲತಾಣದಲ್ಲಿ ಫಾರ್ವರ್ಡ್ ಮಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಉಡುಪಿಯಲ್ಲಿ ನಾಗಪೂಜೆಗೆ ಅವಕಾಶ ಇಲ್ಲವೆಂಬ ಯಾರೂ ಸಂದೇಶ ರವಾನೆ ಮಾಡಬೇಡಿ ಎಂದರು.

    ಕೊರೊನಾ ಕಾಲದಲ್ಲಿ ಯಾವುದೇ ಹಬ್ಬವನ್ನು ಸಾರ್ವಜನಿಕವಾಗಿ ಆಚರಣೆ ಮಾಡಬಾರದು. ಅವರವರ ಮನೆಯಲ್ಲಿ ನಾಗನ ಕಲ್ಲಿಗೆ ಹಾಲು ಎರೆಯಲು ಅಡ್ಡಿಯಿಲ್ಲ. ಮನೆಯಲ್ಲಿ ಆಚರಣೆ ಮಾಡಲು ಯಾರ ಅನುಮತಿಯ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಸಾರ್ವಜನಿಕರು ಒಟ್ಟಿಗೆ ಸೇರಿ ಆಚರಣೆ ಮಾಡಲು ಅವಕಾಶ ಇಲ್ಲ. ಎಲ್ಲರಿಗೂ ನಾಗರಪಂಚಮಿ ಶುಭಾಶಯ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಶುಭ ಹಾರೈಸಿದ್ದಾರೆ.