Tag: ಡಿಸಿ ಮಂಜುಶ್ರೀ

  • ಪಕ್ಷಪಾತ ಆರೋಪ – ಮಂಡ್ಯ ಜಿಲ್ಲಾಧಿಕಾರಿ ಎತ್ತಂಗಡಿ

    ಪಕ್ಷಪಾತ ಆರೋಪ – ಮಂಡ್ಯ ಜಿಲ್ಲಾಧಿಕಾರಿ ಎತ್ತಂಗಡಿ

    ಬೆಂಗಳೂರು: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿಚಾರದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರ ತಲೆದಂಡವಾಗಿದೆ. ಮಂಜುಶ್ರೀ ಅವರನ್ನು ಚುನಾವಣಾ ಆಯೋಗ ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಪಿ.ಸಿ ಜಾಫರ್ ನೇಮಕವಾಗಿದ್ದಾರೆ.

    ಮಂಡ್ಯ ಡಿಸಿಯಾಗಿದ್ದ ಮಂಜುಶ್ರೀ ವಿರುದ್ಧ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆಯಲ್ಲಿ ವೇಳೆ ವಿಡಿಯೋ ದೃಶ್ಯ ನೀಡಿಲ್ಲ. ಅಷ್ಟೇ ಅಲ್ಲದೇ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸುಮಲತಾ ಅವರು ಆಯೋಗಕ್ಕೆ ದೂರು ನೀಡಿದ್ದರು.

    ಸುಮಲತಾ ಅವರ ದೂರನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗ ಡಿಸಿ ಮಂಜುಶ್ರೀ ಅವರನ್ನು ವರ್ಗಾವಣೆ ಮಾಡಿ ಬಿಸಿ ಮುಟ್ಟಿಸಿದೆ.

    ಸುಮಲತಾ ಆರೋಪ ಏನಿತ್ತು?
    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಸಲ್ಲಿಸಿದ ಫಾರ್ಮ್ ನಂಬರ್ 26ನಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ಚರಾಸ್ತಿ ಹಾಗೂ ಸ್ಥಿರಾಸ್ತಿಯ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ಹೀಗಾಗಿ ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಸುಮಲತಾ ಅವರ ಚುನಾವಣಾ ಏಜೆಂಟ್ ಮದನ್ ಕುಮಾರ್ ಮನವಿ ಮಾಡಿದ್ದರು.

    ನಮ್ಮ ಮನವಿ ಸಲ್ಲಿಸಿದಾಗ ಆಕ್ಷೇಪಣಾ ಅರ್ಜಿ ಸಲ್ಲಿಸಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದರು. ಇದರಿಂದಾಗಿ ನಾಮಪತ್ರ ಪರಿಶೀಲನೆಯ ದೃಶ್ಯವನ್ನು ಸೆರೆ ಹಿಡಿದ ದೃಶ್ಯವನ್ನು ನೀಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿ, ವಿಡಿಯೋ ಕ್ಯಾಮೆರಾಮನ್ ಯಾವುದೋ ಮದುವೆ ಕಾರ್ಯಕ್ಕೆ ಕಳಿಸಿದ್ದೇವೆ. ಹೀಗಾಗಿ ವಿಡಿಯೋ ಫುಟೇಜ್ ನೀಡಲು ಎರಡ್ಮೂರು ದಿನ ಸಮಯ ಬೇಕಾಗುತ್ತದೆ ಅಂತ ಹೇಳಿದ್ದರು. ಆದರೆ ಮರುದಿನವೇ ನಮಗೆ ಅರ್ಧ ವಿಡಿಯೋ ಮಾತ್ರ ಕೊಟ್ಟರು. ಅದರಲ್ಲಿ ನಾನು ಆಕ್ಷೇಪ ವ್ಯಕ್ತಪಡಿಸಿದ ದೃಶ್ಯವನ್ನೇ ಕತ್ತರಿಸಲಾಗಿತ್ತು. ಇದರಿಂದಾಗಿ ಸಂಪೂರ್ಣ ವಿಡಿಯೋ ನೀಡುವಂತೆ ಕೇಳಿದಾಗ, ವಿಡಿಯೋಗ್ರಾಫರ್ ಟ್ಯಾಂಪರ್ ಮಾಡಿದ್ದಾನೆ ಎಂಬ ಸಂಶಯ ಬರುತ್ತಿದೆ. ಈ ಸಂಬಂಧ ಆತನ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು ಎಂದು ಮದನ್ ಈ ಹಿಂದೆ ಮಾಧ್ಯಮಗಳಿಗೆ ತಿಳಿಸಿದ್ದರು. ಈ ಎಲ್ಲ ವಿಚಾರಗಳನ್ನು ಪ್ರಸ್ತಾಪಿಸಿ ಸುಮಲತಾ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

  • ನಾನು ಆಕ್ಷೇಪಿಸಿದ್ದ ವಿಡಿಯೋಗೆ ಕತ್ತರಿ: ಮಂಡ್ಯ ಡಿಸಿ ವಿರುದ್ಧ ಗಂಭೀರ ಆರೋಪ

    ನಾನು ಆಕ್ಷೇಪಿಸಿದ್ದ ವಿಡಿಯೋಗೆ ಕತ್ತರಿ: ಮಂಡ್ಯ ಡಿಸಿ ವಿರುದ್ಧ ಗಂಭೀರ ಆರೋಪ

    ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಪರಿಶೀಲನೆ ವೇಳೆ ಲಿಖಿತ ಆಕ್ಷೇಪಣೆ ಸಲ್ಲಿಸಿದ್ದೆ. ಆದರೆ ಜಿಲ್ಲಾಧಿಕಾರಿ ಮಂಜುಶ್ರೀ ಅವರು, ನೀವು ಯಾವುದೇ ಆಕ್ಷೇಪಣೆ ಪತ್ರ ನೀಡಿಲ್ಲ ಅಂತ ಹಿಂಬರಹ ನೀಡಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಚುನಾವಣಾ ಏಜೆಂಟ್ ಮದನ್ ಕುಮಾರ್ ಆರೋಪಿಸಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಕ್ಷೇಪ ಸಲ್ಲಿಸಿದ್ದಕ್ಕೆ ಸಂಜೆಯವರೆಗೂ ಜಿಲ್ಲಾಧಿಕಾರಿಗಳು ಉತ್ತರ ನೀಡಲಿಲ್ಲ. ಹೀಗಾಗಿ ಖುದ್ದಾಗಿ ನಾನೇ ಡಿಸಿ ಕಚೇರಿಗೆ ತೆರಳಿ ಮಾಹಿತಿ ಕೇಳಿದಾಗ ನಾಮಪತ್ರ ಅಂಗೀಕರಿಸಿದ್ದೇವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದರು. ಇದರಿಂದಾಗಿ ನಾಮಪತ್ರ ಪರಿಶೀಲನೆಯ ವಿಡಿಯೋ ರೆಕಾರ್ಡಿಂಗ್ ಕೊಡುವಂತೆ ಮನವಿ ಸಲ್ಲಿಸಿದ್ದೆ ಎಂದರು. ಇದನ್ನು ಓದಿ: ಒಂದು ವಿಡಿಯೋ ನೋಡ್ಕೊಳ್ಳಕ್ಕಾಗದವರು ಅನ್ಯಾಯ ಹೇಗೆ ತಡೀತಾರೆ: ಡಿಸಿ ವಿರುದ್ಧ ಸುಮಲತಾ ಕಿಡಿ 

    ಜಿಲ್ಲಾಧಿಕಾರಿಗಳು ವಿಡಿಯೋ ಕ್ಯಾಮೆರಾಮನ್ ಯಾವುದೋ ಮದುವೆ ಕಾರ್ಯಕ್ಕೆ ಕಳಿಸಿದ್ದೇವೆ. ಹೀಗಾಗಿ ವಿಡಿಯೋ ಫುಟೇಜ್ ನೀಡಲು ಎರಡ್ಮೂರು ದಿನ ಸಮಯ ಬೇಕಾಗುತ್ತದೆ ಅಂತ ಹೇಳಿದರು. ಆದರೆ ಮರುದಿನ ನಮಗೆ ಅರ್ಧ ವಿಡಿಯೋ ಮಾತ್ರ ಕೊಟ್ಟಿದ್ದಾರೆ. ಅದರಲ್ಲಿ ನಾನು ಆಕ್ಷೇಪ ವ್ಯಕ್ತಪಡಿಸಿದ ದೃಶ್ಯವನ್ನೇ ಕತ್ತರಿಸಲಾಗಿದೆ. ಇದರಿಂದಾಗಿ ಸಂಪೂರ್ಣ ವಿಡಿಯೋ ನೀಡುವಂತೆ ಕೇಳಿದಾಗ, ವಿಡಿಯೋಗ್ರಾಫರ್ ಟ್ಯಾಂಪರ್ ಮಾಡಿದ್ದಾನೆ ಎಂಬ ಸಂಶಯ ಬರುತ್ತಿದೆ. ಈ ಸಂಬಂಧ ಆತನ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಆದರೆ ಇಲ್ಲಿಯವರೆಗೂ ಪ್ರಕರಣ ದಾಖಲಾಗಿಲ್ಲ ಎಂದು ದೂರಿದರು.

    ಚುನಾವಣಾ ಆಯುಕ್ತರು ಮತ್ತು ಸ್ಪೆಷಲ್ ಅಬ್ಸರ್ವರ್ ಮಧು ಮಹಾಜನ್ ಅವರನ್ನು ಭೇಟಿ ಮಾಡಿದ್ದೇನೆ. ವಿಚಾರಣೆ ನಡೆಸಿ ಸೂಕ್ತ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ವಿಡಿಯೋಗ್ರಾಫರ್ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಮಂಜುಶ್ರೀ ಅವರು ಕೂಡ ಪ್ರಕರಣದ ಕುರಿತು ವಿಚಾರಣೆಗಾಗಿ ಇಂದು ಬರುವಂತೆ ಸೂಚಿಸಿದ್ದಾರೆ ಎಂದು ಮದನ್ ಕುಮಾರ್ ಹೇಳಿದರು.