Tag: ಡಿಸೇಲ್

  • ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಆಪ್ ವಿನೂತನ ಪ್ರತಿಭಟನೆ

    ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಆಪ್ ವಿನೂತನ ಪ್ರತಿಭಟನೆ

    ಬೆಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬೆಂಗಳೂರಲ್ಲಿ ಪ್ರತಿಭಟನೆಗಳನ್ನು ನಡೆಸಲಾಯಿತು. ನಗರದ ಮೌರ್ಯ ವೃತ್ತದಲ್ಲಿ ಆಮ್ ಆದ್ಮಿ ಪಕ್ಷದಿಂದ ಬೇಳೆಕಾಳು, ಬ್ರೆಡ್, ಜಾಮ್, ಬೆಣ್ಣೆಯನ್ನು ಮಾರುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.

    ಬೆಂಗಳೂರು ನಗರ ಘಟಕದ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ವಿತ್ತಿಯ ಕೊರತೆ ಹೊಂದಿರುವ, ನವಜಾತ ಶಿಶುವಿನ ತಲೆಗೂ ಋಣಭಾರ ಹೊರಿಸುವ, ಜನಸಾಮಾನ್ಯರ ಮೇಲೆ ಕೃಷಿಕರ ಹೆಸರಿನಲ್ಲಿ ಬೇಳೆಕಾಳುಗಳ, ಕಣ್ಣಿಗೆ ಕಂಡ ಎಲ್ಲಾ ವಸ್ತುಗಳ ಮೇಲೆ ಸೆಸ್ ಭಾರ ಹೇರಿದ ನಿರ್ಮಲಾ ಸೀತರಾಮನ್ ಅವರ “ಸಾಲ”ದ ಬಜೆಟ್ ಇದಾಗಿದೆ. ಇದೊಂದು ಜನ ವಿರೋಧಿ, ಬೂಸಾ ಬಜೆಟ್ ಎಂದು ಕರೆಯಬಹುದು ಎಂದರು.

    ಮತ್ತೊಂದೆಡೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹಾಗೂ ಆಹಾರ ಸಾಮಾಗ್ರಿಗಳ ಮೇಲೆ ತೆರಿಗೆ ವಿಧಿಸಿರುವುದನ್ನು ಖಂಡಿಸಿ ಸರ್ವ ಸಂಘಟನೆಗಳ ಒಕ್ಕೂಟದ ವತಿಯಿಂದ ಸಿಎಂ ಶಿವಕುಮಾರ್ ನಾಯಕ್ ನೇತೃತ್ವದಲ್ಲಿ ಎತ್ತಿನ ಗಾಡಿ ಓಡಿಸುವ ಮೂಲಕ ಪ್ರತಿಭಟಿಸಲಾಯಿತು.

  • ಪತ್ನಿಯ ಮೇಲೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ ಅರಣ್ಯಾಧಿಕಾರಿ!

    ಪತ್ನಿಯ ಮೇಲೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ ಅರಣ್ಯಾಧಿಕಾರಿ!

    ರಾಯಚೂರು: ರಾಯಚೂರಿನ ಲಿಂಗಸೂಗೂರಿನ ಉಪವಲಯ ಅರಣ್ಯಾಧಿಕಾರಿಯೊಬ್ಬ ಮನೆಯವರ ಮಾತು ಕೇಳಿ ಪತ್ನಿ ಮೇಲೆ ಡೀಸೆಲ್ ಸುರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.

    ಅಧಿಕಾರಿ ಸಂಗಮೇಶ್ ಪಾಟೀಲ್ ಲಿಂಗಸುಗೂರಿನ ತನ್ನ ಮನೆಯಲ್ಲಿ ಪತ್ನಿಯ ಮೇಲೆಯೇ ಡೀಸೆಲ್ ಸುರಿದು ಕೊಲೆ ಮಾಡಲು ಯತ್ನಿಸಿದ್ದಾನೆ. 11 ತಿಂಗಳ ಹಿಂದೆ ಅಧಿಕಾರಿ ಮತ್ತು ಶ್ವೇತಾ ಇಬ್ಬರು ಮದುವೆಯಾಗಿದ್ದರು. ಮದುವೆಯಾಗಿದ್ದಾಗಿನಿಂದ ಅಧಿಕಾರಿ ಪತ್ನಿ ಶ್ವೇತಾ ಪಾಟೀಲ್ ಜೊತೆ ಸಂಸಾರ ಮಾಡದೇ ಪ್ರತಿನಿತ್ಯ ಜಗಳವಾಡುತ್ತಿದ್ದನು. ಕೊನೆಗೆ ಒಂದು ದಿನ ಡೀಸೆಲ್ ಸುರಿದು ಕೊಲೆ ಯತ್ನಿಸಿದ್ದಾನೆ ಅಂತ ಪತ್ನಿ ಶ್ವೇತಾ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಸದ್ಯಕ್ಕೆ ಶ್ವೇತಾ ಪಾಟೀಲ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತೈಲ ಬೆಲೆ ಏರಿಕೆ ವಿರೋಧಿಸಿ ಸೋಮವಾರ ಭಾರತ್ ಬಂದ್- ಏನಿರುತ್ತೆ..? ಏನಿರಲ್ಲ..?

    ತೈಲ ಬೆಲೆ ಏರಿಕೆ ವಿರೋಧಿಸಿ ಸೋಮವಾರ ಭಾರತ್ ಬಂದ್- ಏನಿರುತ್ತೆ..? ಏನಿರಲ್ಲ..?

    ಬೆಂಗಳೂರು: 2014ರ ಚುನಾವಣೆ ಪ್ರಚಾರದಲ್ಲಿ ಮೋದಿ ನೇತೃತ್ವದ ಬಿಜೆಪಿ ಜಪಿಸಿದ್ದು ಅಚ್ಚೇ ದಿನ್ ಮಂತ್ರ. ಆದ್ರೆ ಅಧಿಕಾರಕ್ಕೆ ಬಂದ ನಂತ್ರ ಪ್ರಧಾನಿ ಮೊದಿ ಅದನ್ನು ಮರೆತೆ ಬಿಟ್ಟಂತೆ ಕಾಣುತ್ತಿದೆ. ಯುಪಿಎ ಅವಧಿಗಿಂತ ದೇಶದಲ್ಲಿ ದಿನಗಳು ದುಬಾರಿಯಾಗುತ್ತಿದೆ. ಅದ್ರಲ್ಲೂ ಪೆಟ್ರೋಲ್, ಡೀಸೆಲ್ ಬೆಲೆಯಂತೂ ಯಾರ ಹಿಡಿತಕ್ಕೂ ಸಿಗದ ರೀತಿಯಲ್ಲಿ ಗಗನಮುಖಿಯಾಗಿದೆ.

    ಇದೀಗ ಮತ್ತೆ ಲೋಕಸಭೆ ಚುನಾವಣೆ ಬರುತ್ತಿದೆ. ಅದಕ್ಕೆ ಸಿದ್ಧವಾಗುತ್ತಿರೋ ವಿಪಕ್ಷ ಕಾಂಗ್ರೆಸ್ ಇದೀಗ ತೈಲ ಬೆಲೆ ಅಸ್ತ್ರವನ್ನು ಪ್ರಯೋಗಿಸಿದೆ. ಸೋಮವಾರ ಭಾರತ್ ಬಂದ್‍ಗೆ ಕರೆ ನೀಡಿದೆ. ಸೋಮವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಂದ್ ನಡೆಯಲಿದೆ. ಭಾರತ್ ಬಂದ್‍ಗೆ ಕರೆ ನೀಡುವ ಮೂಲಕ ಬಿಜೆಪಿ ವಿರೋಧಿ ಮಹಾ ಮೈತ್ರಿಕೂಟಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದೆ.

    ಬಂದ್ ಬೆಂಬಲಿಸಿದ ಪಕ್ಷಗಳು:
    * ಜೆಡಿಎಸ್, ಎಸ್‍ಪಿ, ಬಿಎಸ್‍ಪಿ, ಆರ್‍ಜೆಡಿ
    * ಡಿಎಂಕೆ,ಸಿಪಿಎಂ, ಸಿಪಿಐ, ಎಸ್‍ಯುಸಿಐ
    * ಎನ್‍ಸಿಪಿ, ಜನಸೇನಾ, ಶಿವಸೇನೆ, ಎಂಎನ್‍ಎಸ್
    * ಟಿಎಂಸಿಯಿಂದ ಬಂದ್‍ಗೆ ಬೆಂಬಲ ಇಲ್ಲ. (ಪ್ರತಿಭಟನೆ ಮಾತ್ರ)

    ಬಿಜೆಪಿ ಆಡಳಿತ ರಾಜ್ಯಗಳನ್ನು ಹೊರತುಪಡಿಸಿ ದೇಶದ ಉಳಿದೆಲ್ಲಾ ಕೂಡ ಭಾರತ್ ಬಂದ್ ಉಗ್ರ ಸ್ವರೂಪ ತಳೆಯುವ ಸಾಧ್ಯತೆ ಇದೆ. ಅದರಲ್ಲೂ ಕರ್ನಾಟಕದಲ್ಲಿ ರಾಜ್ಯ ಸರ್ಕಾರವೇ ಬಹಿರಂಗವಾಗಿ ಬಂದ್‍ಗೆ ಬೆಂಬಲ ಘೋಷಿಸಿದೆ. ಕನ್ನಡಪರ ಸಂಘಟನೆಗಳು ಸೇರಿದಂತೆ ನೂರಾರು ಸಂಘ ಸಂಸ್ಥೆಗಳು ಬಂದ್‍ಗೆ ಬೆಂಬಲ ಸೂಚಿಸಿವೆ. ರಾಜ್ಯದಲ್ಲಿ ಉತ್ತರ ಕನ್ನಡ, ಹಾವೇರಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಬಂದ್ ಜೋರಾಗೋ ಸಾಧ್ಯತೆ ಇದೆ.

    ಯಾವುದೆಲ್ಲಾ ಇರಲ್ಲ?
    * ಕೆಎಸ್‍ಆರ್ ಟಿಸಿ, ಬಿಎಂಟಿಸಿ ಬಸ್, ಖಾಸಗಿ ಬಸ್ ಸೇವೆ..!
    * ಆಟೋ, ಓಲಾ-ಊಬರ್, ಖಾಸಗಿ ಶಾಲೆಗಳ ವಾಹನಗಳು, ಐಟಿ-ಬಿಟಿ ವಾಹನ
    * ಸರ್ಕಾರಿ ಶಾಲಾ ಕಾಲೇಜು, ಖಾಸಗಿ ಶಾಲಾ ಕಾಲೇಜುಗಳು..!
    * ಸರ್ಕಾರಿ ಕಚೇರಿ, ಬ್ಯಾಂಕುಗಳು, ಗಾರ್ಮೆಂಟ್ಸ್ ?
    * ಥಿಯೇಟರ್, ಶಾಪಿಂಗ್ ಮಾಲ್
    * ಬೀದಿ ಬದಿ ವ್ಯಾಪಾರ, ಅಂಗಡಿಗಳು, ಹೋಟೆಲ್..?

    ಭಾರತ್ ಬಂದ್‍ಗೆ ಬಿಎಂಟಿಸಿ, ಕೆಎಸ್‍ಆರ್ ಟಿಸಿಯ ನಾಲ್ಕು ಸಾರಿಗೆ ನಿಗಮಗಳ ನೌಕರರು ಬಂದ್‍ಬೆ ಬೆಂಬಲ ಸೂಚಿಸಿರೋ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರು ಸೇರಿ ರಾಜ್ಯದಲ್ಲಿ ಎಲ್ಲಿಯೂ ಬಸ್‍ಗಳು ರಸ್ತೆಗೆ ಇಳಿಯಲ್ಲ. ದಕ್ಷಿಣ ಕನ್ನಡ, ಮಡಿಕೇರಿ ಸೇರಿ ಹಲವೆಡೆ ಖಾಸಗಿ ಬಸ್‍ಗಳ ಮಾಲೀಕರ ಸಂಘವೂ ಬಂದ್‍ಗೆ ಬೆಂಬಲ ಸೂಚಿಸಿದೆ. ಆಟೋ, ಓಲಾ-ಊಬರ್, ಖಾಸಗಿ ಶಾಲೆಗಳ ವಾಹನಗಳು, ಐಟಿ-ಬಿಟಿ ವಾಹನಗಳ ಸಂಸಘಗಳು ಬಂದ್‍ಗೆ ಬೆಂಬಲ ಸೂಚಿಸಿವೆ. ಕೆಲ ಆಟೋ ಸಂಘಟನೆಗಳು ಮಾತ್ರ ಬಂದ್‍ಗೆ ಬೆಂಬಲ ನೀಡಿಲ್ಲ. ಸರ್ಕಾರಿ ಶಾಲಾ ಕಾಲೇಜು, ಖಾಸಗಿ ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿ, ಬ್ಯಾಂಕುಗಳು, ಗಾರ್ಮೆಂಟ್ಸ್ ಗಳು ನಾಳೆಯ ಪರಿಸ್ಥಿತಿ ನೋಡಿಕೊಂಡು ಅಂತಿಮ ತೀರ್ಮಾನ ತೆಗೆದುಕೊಳ್ಳಲಿವೆ. ಥಿಯೇಟರ್‍ಗಳು, ಶಾಪಿಂಗ್ ಮಾಲ್‍ಗಳು ಬಂದ್ ಆಗಲಿವೆ. ಬೀದಿಬದಿ ವ್ಯಾಪಾರಿಗಳ ಸಂಘಟನೆ ಬಂದ್‍ಗೆ ಬೆಂಬಲ ಸೂಚಿಸಿವೆ. ಅಂಗಡಿ ಹೋಟೆಲ್‍ಗಳು ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲಿವೆ.

    ಯಾವೆಲ್ಲ್ಲಾ ಸೇವೆ ಲಭ್ಯ?
    * ಔಷಧಿಗಳು, ಆಸ್ಪತ್ರೆ, ಆಂಬ್ಯುಲೆನ್ಸ್
    * ತರಕಾರಿ, ಹಾಲು ಸರಬರಾಜು, ಪತ್ರಿಕೆ
    * ಮೆಟ್ರೋ ಸಂಚಾರ ಸೇವೆಗಳು

    ತುರ್ತು ಅಗತ್ಯಗಳಾದ ಔಷಧಿಗಳು, ಆಸ್ಪತ್ರೆ, ಆಂಬ್ಯುಲೆನ್ಸ್ ಸೇವೆಗಳು, ತರಕಾರಿ, ಹಾಲು ಸರಬರಾಜು, ಪತ್ರಿಕೆ, ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ. ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ, ಬೌರಿಂಗ್, ಕೆಸಿ ಜನರೆಲ್ ಆಸ್ಪತ್ರೆಗಳೂ ಒಪನ್ ಇರಲಿವೆ.

    ಇತ್ತ ಭಾರತ್ ಬಂದ್‍ಗೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ಇದು ರಾಜಕೀಯ ಪ್ರೇರಿತ ಬಂದ್. ನಿರ್ಲಕ್ಷ್ಯ ಮಾಡಿ ಎಂದು ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ರಾಜದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಕರೆ ನೀಡಿರೋ ಭಾರತ್ ಬಂದ್ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೋಮವಾರ ಭಾರತ ಬಂದ್-ಸ್ತಬ್ಧವಾಗುತ್ತಾ ಕರ್ನಾಟಕ..?

    ಸೋಮವಾರ ಭಾರತ ಬಂದ್-ಸ್ತಬ್ಧವಾಗುತ್ತಾ ಕರ್ನಾಟಕ..?

    ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆಕೊಟ್ಟಿರುವ ಭಾರತ್ ಬಂದ್ ಗೆ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಇರೋದ್ರಿಂದ ವ್ಯಾಪಕ ಬೆಂಬಲ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಿದ್ದೇವೆ ಅಂತಾ ಹೇಳಿದ್ದು ಸಾರಿಗೆ ನಿಗಮಗಳು ಕೂಡ ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ. ಸರ್ಕಾರವೇ ಬಂದ್ ಗೆ ಬೆಂಬಲ ಕೊಡೋದ್ರಿಂದ ಬೆಂಗಳೂರಿನಲ್ಲಿ ಬಂದ್ ಬಿಸಿ ಹೇಗಿರಲಿದೆ? ಭಾರತ್ ಬಂದ್ ದಿನ ಏನಿರುತ್ತೆ? ಏನಿರಲ್ಲ ಎಂಬುದರ ಮಾಹಿತಿ ಇಲ್ಲಿದೆ.

    ಬಂದ್‍ಗೆ ಬೆಂಬಲ ಕೊಟ್ಟ ಸಂಘಟನೆಗಳು:
    1. ಬಿಎಂಟಿಸಿ, ಕೆ.ಎಸ್.ಆರ್.ಟಿ.ಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳಿಂದಲೂ ಬೆಂಬಲ. ಬಂದ್ ದಿನ ಬಸ್ ಇರಲ್ಲ.
    2. ಕೆಲ ಆಟೋ ಯೂನಿಯನ್ ನಿಂದ ಬೆಂಬಲ
    3. ಓಲಾ ಉಬರ್ ಸಂಘದಿಂದ ಸಂಪೂರ್ಣ ಬೆಂಬಲ
    4. ಚಿತ್ರ ಪ್ರದರ್ಶನ ಬಂದ್ ಸಾಧ್ಯತೆ.
    5. ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಬೆಂಬಲ (ಕೇಂದ್ರ ಸರ್ಕಾರ ಸ್ವಾಮ್ಯದ ಕಚೇರಿಯ ಮುಂದೆ ಪ್ರತಿಭಟನೆ)
    6. ಕನ್ನಡ ಒಕ್ಕೂಟ ವಾಟಾಳ್ ನಾಗರಾಜ್ ರಿಂದ ಬೆಂಬಲ
    7. ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಆಯಾಯ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟ.

    ಬಂದ್‍ಗೆ ‘ಕೈ’ ಕೊಟ್ಟ ಸಂಘಟನೆಗಳು:
    1. ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡದ ಕ್ಯಾಮ್ಸ್. (ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟ ಸಾಧ್ಯತೆ)
    2. ಲಾರಿ ಸಂಘದ ಬೆಂಬಲ ಇಲ್ಲ.
    3. ಖಾಸಗಿ ಟ್ಯಾಕ್ಸಿಗಳ ಬೆಂಬಲ ಇಲ್ಲ.
    4. ಕೆಲ ಆಟೋ ಯೂನಿಯನ್ ಬೆಂಬಲ ಇಲ್ಲ.
    5. ಮೆಟ್ರೋ ಸಂಚಾರ.
    6. ಬ್ಯಾಂಕ್ ಗಳು ಕಾರ್ಯನಿರ್ವಹಿಸುವ ಸಾಧ್ಯತೆ.

    ಗೊಂದಲದಲ್ಲಿರುವವರು:
    1. ಹೋಟೆಲ್ ಮಾಲೀಕರ ಸಂಘದಿಂದ ಬಂದ್‍ಗೆ ಬೆಂಬಲ ಕೊಡಬೇಕೋ? ಬೇಡೆವೋ? ಎಂಬುದರ ಬಗ್ಗೆ ಭಾನುವಾರ ಸಂಜೆ ಅಂತಿಮ ನಿರ್ಧಾರ
    2. ಖಾಸಗಿ ಬಸ್ ಗಳಿಂದ ಇನ್ನು ಅಂತಿಮ ನಿರ್ಧಾರ ಪ್ರಕಟವಾಗಿಲ್ಲ.

    ಈ ಮಧ್ಯೆ ಇಂದು ಕಾಂಗ್ರೆಸ್ ಯುವ ಮೋರ್ಚದಿಂದ ಮೌರ್ಯ ಸರ್ಕಲ್ ನಲ್ಲಿ ತೈಲ ದರ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಕೂಡ ಪ್ರತಿಭಟನೆ ಯಲ್ಲಿ ಪಾಲ್ಗೊಂಡು, ಬೆಲೆ ಏರಿಕೆ ತಡೆಯುವಲ್ಲಿ ಕೇಂದ್ರ ವಿಫಲವಾಗಿದೆ ಅಂತಾ ಕಿಡಿಕಾರಿದರು. ಇದೇ ವೇಳೆ ಸೋಮವಾರ ನಡೆಯುವ ಬಂದ್‍ಗೆ ಬೆಂಬಲ ಕೊಡುವಂತೆ ವಾಹನ ಸವಾರರಿಗೆ ಮನವಿ ಮಾಡಿದರು. ಕನ್ನಡ ಒಕ್ಕೂಟ ನಾಗೇಶ್ ಬಣದಿಂದ ಬನ್ನಪ್ಪ ಪಾರ್ಕ್ ನಲ್ಲಿ ತೈಲ ಬೆಲೆ ವಿರೋಧಿಸಿ ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್ ನ್ನು ತಲೆಯ ಮೇಲೆ ಹೊತ್ತುಕೊಂಡು ಪ್ರತಿಭಟನೆ ಮಾಡಿದರು.

    ಸೋಮವಾರ ಭಾರತ್ ಬಂದ್ ಕರ್ನಾಟಕದಲ್ಲಿ, ಬೆಂಗಳೂರಿನಲ್ಲಿ ಸಕ್ಸಸ್ ಆಗೋದು ಬಹುತೇಕ ಖಚಿತವಾಗಿದೆ. ಬಂದ್ ದಿನ ಮೋದಿ ಸರ್ಕಾರದ ವಿರುದ್ಧ ಪುರಭವನದ ಮುಂದೆ ಬೃಹತ್ ಹೋರಾಟಕ್ಕೆ ಸಮ್ಮಿಶ್ರ ಸರ್ಕಾರ ರೆಡಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=u9AYRhmlwlo

  • ರಾಹುಲ್ ಇಮೇಜ್ ಡ್ಯಾಮೇಜ್‍ಗೆ ತಡೆ ಹಾಕಲು `ಕೈ’ ನಾಯಕರಿಂದ ಎಚ್‍ಡಿಕೆ ಮೇಲೆ ಒತ್ತಡ!

    ರಾಹುಲ್ ಇಮೇಜ್ ಡ್ಯಾಮೇಜ್‍ಗೆ ತಡೆ ಹಾಕಲು `ಕೈ’ ನಾಯಕರಿಂದ ಎಚ್‍ಡಿಕೆ ಮೇಲೆ ಒತ್ತಡ!

    ಬೆಂಗಳೂರು: ರಾಜ್ಯ ಬಜೆಟ್‍ನಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾರೀ ಟೀಕೆಗೆ ಗುರಿಯಾಗಿದ್ದರು. ಈ ಬೆನ್ನಲ್ಲೇ ಈಗ ತೈಲದ ಮೇಲಿನ ಸೆಸ್ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

    ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೈಕಲ್ ಏರಿ ಪ್ರತಿಭಟನೆ ಮಾಡಿದ್ದರು. ಆದರೆ ಈಗ ರಾಜ್ಯದ ದೋಸ್ತಿ ಸರ್ಕಾರವೇ ತೈಲ ದರ ಏರಿಕೆ ಮಾಡಿರುವುದು ಟೀಕೆಗೆ ಕಾರಣವಾಗಿದೆ.

    ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಟೀಕೆ ಮಾಡಿ, ಫೋಟೋ, ಹೇಳಿಕೆ ಹರಿಬಿಡುತ್ತಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಕಾಂಗ್ರೆಸ್ ನಾಯಕರು ತೈಲದ ಮೇಲಿನ ಸೆಸ್ ವಾಪಾಸ್ ಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

  • ಇಂಧನ ಬೆಲೆ ಏರಿಕೆ ಸ್ಕೂಟರ್ ಗೆ  ಬೆಂಕಿ ಹಚ್ಚಿ ಪ್ರತಿಭಟನೆ

    ಇಂಧನ ಬೆಲೆ ಏರಿಕೆ ಸ್ಕೂಟರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ

    ಹೈದರಾಬಾದ್: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ ದೇಶಾದ್ಯಂತ ಜನರು ಪ್ರತಿಭಟನೆಗೆ ಮುಂದಾಗಿದ್ದಾರೆ. ಆಂಧ್ರ ಪ್ರದೇಶದಲ್ಲಿಯೂ ತೆಲಗು ದೇಶಂ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

    ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ನಂದಿಗಾಮ ಗ್ರಾಮದಲ್ಲಿ ಟಿಡಿಪಿ ಕಾರ್ಯಕರ್ತರು ತಮ್ಮ ಸ್ಕೂಟರ್ ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ಹೊರಹಾಕಿದ್ರು. ಕಾರ್ಯಕರ್ತರು ಸ್ಕೂಟರ್‍ಗೆ ಬೆಂಕಿ ಹಚ್ಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಈಗಾಗಲೇ ಪೆಟ್ರೋಲ್, ಡೀಸೆಲ್ ರೇಟ್ ಜಾಸ್ತಿ ಆಗಿದೆ. ಈ ಮಧ್ಯೆ ಮತ್ತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಹೆಚ್ಚುತ್ತಲೇ ಇದ್ದು, ಕೆಲದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್‍ಗೆ 3ರಿಂದ 4 ರೂಪಾಯಿಯಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

    ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 24ರಿಂದ ಮೇ 14ರವರೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಪರಿಷ್ಕರಣೆ ಆಗಿರಲಿಲ್ಲ. ಈಗ ಪ್ರತಿ ದಿನ ಹೆಚ್ಚಾಗುತ್ತಿದ್ದು, ಮಂಗಳವಾರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 78.12 ರೂ. ಇದ್ದರೆ, ಪ್ರತಿ ಲೀಟರ್ ಡೀಸೆಲ್ ಬೆಲೆ 69.25 ರೂ. ಇದೆ.

    2 ವರ್ಷದ ಹಿಂದೆ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ ಗೆ 40 ಡಾಲರ್(ಅಂದಾಜು 2,700 ರೂ.) ಇತ್ತು. ಆದರೆ ಈಗ ದುಪ್ಪಟ್ಟು ಆಗಿದ್ದು 79 ಡಾಲರ್(ಅಂದಾಜು 5,300 ರೂ.) ಆಗಿದೆ.

    ಬೆಲೆ ಏರಿಕೆ ಆಗುತ್ತಿರೋದು ಯಾಕೆ?
    ಈ ಹಿಂದೆ ಪೆಟ್ರೋಲಿಯಂ ರಫ್ತು ರಾಷ್ಟ್ರಗಳ(ಒಪೆಕ್) ನಡುವೆ ಶೀತಲ ಸಮರವಿತ್ತು. ಹೀಗಾಗಿ ಈ ರಾಷ್ಟ್ರಗಳು ತೈಲ ಉತ್ಪಾದನೆಗೆ ಯಾವುದೇ ಮಿತಿ ಹಾಕಿರಲಿಲ್ಲ. ಆದರೆ ಈಗ ಈ ರಾಷ್ಟ್ರಗಳ ಮಿತಿ ಹಾಕಿದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ದಿನವೂ ಏರಿಕೆಯಾಗುತ್ತಿದೆ. ಎಸ್‍ಆಂಡ್‍ಪಿ ಗ್ಲೋಬಲ್ ಪ್ಯಾಂಟ್ ಅಧ್ಯಯನದ ಪ್ರಕಾರ ತೈಲ ಉತ್ಪಾದಿಸುವ 14 ದೇಶಗಳಲ್ಲಿ ಉತ್ಪಾದನೆ ಕಡಿಮೆಯಾಗಿದೆ. ಈ ಹಿಂದೆ ಪ್ರತಿದಿನ 32 ದಶಲಕ್ಷ ಬ್ಯಾರೆಲ್ ಉತ್ಪಾದಿಸುತ್ತಿದ್ದರೆ ಏಪ್ರಿಲ್ ನಲ್ಲಿ 1.40 ದಶಲಕ್ಷ ಕಡಿಮೆಯಾಗಿದೆ. ವಿಶ್ವದೆಲ್ಲೆಡೆ ಭಾರೀ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಒಪೆಕ್ ರಾಷ್ಟ್ರಗಳು ಜೂನ್ 22 ರಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ವೇಳೆ ತೈಲ ಉತ್ಪಾನೆಯ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

  • ಕರ್ನಾಟಕ ಮತದಾನದ ಬೆನ್ನಲ್ಲೇ ಶಾಕ್ – ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಶುರು

    ಕರ್ನಾಟಕ ಮತದಾನದ ಬೆನ್ನಲ್ಲೇ ಶಾಕ್ – ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಶುರು

    ಬೆಂಗಳೂರು: ಕರ್ನಾಟಕದಲ್ಲಿ ಮತದಾನ ಮುಗಿಯುತ್ತಿದ್ದಂತೆ ನಿರೀಕ್ಷೆಯಂತೆ ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಳವಾಗಿವೆ.

    ತೈಲ ಕಂಪನಿಗಳು ಲೀಟರ್ ಪೆಟ್ರೋಲ್‍ಗೆ 17 ಪೈಸೆ, ಡೀಸೆಲ್‍ಗೆ 21 ಪೈಸೆಯಷ್ಟು ಹೆಚ್ಚಿಸಿವೆ. ದಿನಂಪ್ರತಿ ಬೆಲೆ ಏರಿಳಿಕೆ ಮಾಡೋ ನಿಯಮವಿದ್ದರೂ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದುಬಾರಿ ಮತ್ತು ಡಾಲರ್ ಎದುರು ರೂಪಾಯಿ ದುರ್ಬಲಗೊಂಡಿದ್ದರೂ ಏಪ್ರಿಲ್ 24ರಿಂದ ಭಾನುವಾರದವರೆಗೆ ದರ ಏರಿಕೆ ಮಾಡಿರಲಿಲ್ಲ. ಇದನ್ನೂ ಓದಿ: ಎಲೆಕ್ಷನ್ ರಿಸಲ್ಟ್ ಬಿಸಿಯ ಮಧ್ಯೆ ಕರೆಂಟ್ ಶಾಕ್!

    ಗುಜರಾತ್ ಚುನಾವಣೆ ವೇಳೆಯೂ ಇದೇ ತಂತ್ರ ಅನುಸರಿಸಲಾಗಿತ್ತು. ಮೂಲಗಳ ಪ್ರಕಾರ ಪೆಟ್ರೋಲ್ ಲೀಟರ್‍ಗೆ 3 ರೂಪಾಯಿಯಷ್ಟು, ಡೀಸೆಲ್ 1 ರೂಪಾಯಿ 50 ಪೈಸೆಯಷ್ಟು ದುಬಾರಿಯಾಗಲಿದೆ. ವಿಚಿತ್ರ ಅಂದ್ರೆ ಆಗಸ್ಟ್ 1, 2013ರಂದು ಪೆಟ್ರೋಲ್ ಬೆಲೆ 74 ರೂಪಾಯಿ 10 ಪೈಸೆ, ಡೀಸೆಲ್ ಬೆಲೆ ಮೇ 13, 2014ರಂದು 56 ರೂಪಾಯಿ 71 ಪೈಸೆಯಷ್ಟಿತ್ತು. ಇಂದು ಪ್ರತಿ ಲೀಟರ್ ಗೆ 76.01 ಇದೆ.

  • ರಾಯಚೂರಿನಲ್ಲಿ ಡೀಸೆಲ್ ಲಾರಿಗಳೆರಡು ಪಲ್ಟಿ- ಕ್ಯಾನ್ ಹಿಡಿದು ಮುಗಿಬಿದ್ದ ಜನರು

    ರಾಯಚೂರಿನಲ್ಲಿ ಡೀಸೆಲ್ ಲಾರಿಗಳೆರಡು ಪಲ್ಟಿ- ಕ್ಯಾನ್ ಹಿಡಿದು ಮುಗಿಬಿದ್ದ ಜನರು

    ರಾಯಚೂರು: ಡೀಸೆಲ್ ಸಾಗಿಸುತ್ತಿದ್ದ ಎರಡು ಲಾರಿಗಳು ಒಂದಾದ ಮೇಲೆ ಒಂದು ಪಲ್ಟಿಯಾಗಿದ್ದು, ಡೀಸೆಲ್ ಸೋರಿಕೆಯಾಗಿರುವ ಘಟನೆ ಜಿಲ್ಲೆಯ ಸಿರವಾರ ಬಳಿ ನಡೆದಿದೆ.

    ಕಲಬುರ್ಗಿಯಿಂದ ಸಿರವಾರಕ್ಕೆ ಡೀಸೆಲ್ ತರುತ್ತಿದ್ದ ಐದು ಲಾರಿಗಳಲ್ಲಿ ಎರಡು ಲಾರಿಗಳು ಚಾಲಕರ ನಿಯಂತ್ರಣ ತಪ್ಪಿ ನೂರು ಮೀಟರ್ ಅಂತರದಲ್ಲಿ ರಸ್ತೆ ಪಕ್ಕ ಉರುಳಿ ಬಿದ್ದಿವೆ. ಈ ಅಪಘಾತದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಎರಡು ಲಾರಿಗಳು ಪಲ್ಟಿಯಾದ ಪರಿಣಾಮ ಎರಡನೇ ಟ್ಯಾಂಕರ್ ನಲ್ಲಿದ್ದ ಡಿಸೇಲ್ ಸೋರಿಕೆಯಾಗಿದೆ.

    ಎರಡನೇ ಟ್ಯಾಂಕರ್ ಡಿಸೇಲ್ ಸೋರಿಕೆಯಾಗುವುದನ್ನ ತಿಳಿದ ಜನರು ಮುಗಿಬಿದ್ದು, ಕ್ಯಾನ್ ಗಳಲ್ಲಿ ಡೀಸೆಲ್ ತುಂಬಿಕೊಂಡು ಹೋಗಿದ್ದಾರೆ. ಲಾರಿ ಒಳಗೆ ಸಿಲುಕಿದ್ದ ಚಾಲಕನನ್ನ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದಾರೆ.

    ಈ ಸಂಬಂಧ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಡೀಸೆಲ್ ಟ್ಯಾಂಕರ್ ಪಲ್ಟಿ- ಬಕೆಟ್, ಡಬ್ಬಿಗಳಲ್ಲಿ ಡೀಸೆಲ್ ತುಂಬಿಕೊಂಡು ಹೋದ್ರು ಜನ

    ಡೀಸೆಲ್ ಟ್ಯಾಂಕರ್ ಪಲ್ಟಿ- ಬಕೆಟ್, ಡಬ್ಬಿಗಳಲ್ಲಿ ಡೀಸೆಲ್ ತುಂಬಿಕೊಂಡು ಹೋದ್ರು ಜನ

    ಯಾದಗಿರಿ: ಡೀಸೆಲ್ ಹೊತ್ತೊಯ್ಯುತ್ತಿದ್ದ  ಟ್ಯಾಂಕರೊಂದು ಪಲ್ಟಿಯಾದ ಘಟನೆ ಶಹಾಪೂರ ತಾಲೂಕಿನ ಹುಲಕಲ್ ಗ್ರಾಮದ ಬಳಿ ನಡೆದಿದೆ.

    ಭಾರತ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದೆ. ಈ ಸಮಯದಲ್ಲಿ ಯಾವುದೇ ವಾಹನಗಳು ಸಂಚರಿಸಿದ ಕಾರಣ ಭಾರೀ ದುರಂತ ತಪ್ಪಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ.

    ಟ್ಯಾಂಕರ್ ನಲ್ಲಿದ್ದ ಡಿಸೇಲ್ ಸೊರಿಕೆಯಾಗುತ್ತಿರುವುದನ್ನು ಕಂಡ ಗ್ರಾಮಸ್ಥರು ಡಬ್ಬಿ ಹಾಗೂ ಬಕೆಟ್ ಗಳಲ್ಲಿ ಡಿಸೇಲ್ ತುಂಬಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.

    ಭೀಮರಾಯನ ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ನಾವು ಅಬಕಾರಿ ಸುಂಕ ಇಳಿಸಿದ್ದೇವೆ, ನೀವು ವ್ಯಾಟ್ ಇಳಿಸಿ: ಧರ್ಮೇಂದ್ರ ಪ್ರಧಾನ್

    ನಾವು ಅಬಕಾರಿ ಸುಂಕ ಇಳಿಸಿದ್ದೇವೆ, ನೀವು ವ್ಯಾಟ್ ಇಳಿಸಿ: ಧರ್ಮೇಂದ್ರ ಪ್ರಧಾನ್

    ಬೆಂಗಳೂರು: ಮಂಗಳವಾರವಷ್ಟೇ ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತಗೊಳಿಸಿದ್ದು ಕೇಂದ್ರ ಸರ್ಕಾರ ಇದೀಗ ರಾಜ್ಯ ಸರ್ಕಾರಗಳಿಗೆ ಮೌಲ್ಯವರ್ಧಿತ ತೆರಿಗೆ ಕಡಿತಗೊಳಿಸುವಂತೆ ಹೇಳಿದೆ.

    ಕಳೆದ 3 ತಿಂಗಳಿಂದ ನಾಗಾಲೋಟದಲ್ಲಿ ಸಾಗುತ್ತಿದ್ದ ತೈಲ ಬೆಲೆ ಇಳಿಕೆಗೆ ಅಬಕಾರಿ ಸುಂಕದಲ್ಲಿ 2 ರೂಪಾಯಿ ಕಡಿತ ಮಾಡಿದ್ದ ಕೇಂದ್ರ ಸರ್ಕಾರ ಈಗ ರಾಜ್ಯಗಳೂ ಶೇ.5ರಷ್ಟು ಕಡಿತಗೊಳಿಸಿ ಅಂತ ಹೇಳಿ ಜಾಣತನ ಮೆರೆದಿದೆ.

    ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ರಾಜ್ಯ ಸರ್ಕಾರಗಳು ವ್ಯಾಟ್ ಮೂಲಕ ಹೇರುತ್ತಿರುವ ತೆರಿಗೆಗಳನ್ನು ಇಳಿಕೆ ಮಾಡುವಂತೆ ಸೂಚಿಸಿದೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೆಂದ್ರ ಪ್ರಧಾನ್ ಕೂಡ ಪತ್ರ ಬರೆದಿದ್ದಾರೆ. ಅಬಕಾರಿ ಸುಂಕವನ್ನು ನಾವು ಇಳಿಕೆ ಮಾಡಿರೋದ್ರಿಂದ ಪೆಟ್ರೋಲ್ ಬೆಲೆ ಲೀಟರ್‍ಗೆ 2 ರೂಪಾಯಿ 50 ಪೈಸೆ ಹಾಗೂ ಡೀಸೆಲ್ ಬೆಲೆ 2 ರೂಪಾಯಿ 25 ಪೈಸೆ ಇಳಿಕೆಯಾಗಿದೆ. ನೀವು ಕೂಡ ವ್ಯಾಟ್ ರೂಪದಲ್ಲಿ ಹಾಕುತ್ತಿರುವ ತೆರಿಗೆಯನ್ನು ಇಳಿಕೆ ಮಾಡಿದ್ರೆ ಪೆಟ್ರೋಲ್ ಬೆಲೆ ಲೀಟರ್‍ಗೆ 5 ರೂಪಾಯಿ ಇಳಿಕೆಯಾಗಲಿದೆ ಅಂತ ಜಾರಿಕೊಂಡಿದ್ದಾರೆ. ಇಷ್ಟಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಾಕುತ್ತಿರುವ ತೆರಿಗೆಯನ್ನು ಇಳಿಸಿದ್ರೆ ಅರ್ಧಕರ್ಧ ಬೆಲೆ ಇಳಿಕೆಯಾಗುವುದಂತೂ ಸತ್ಯ.

    ಯಾವ ರಾಜ್ಯದಲ್ಲಿ ವ್ಯಾಟ್ ಎಷ್ಟಿದೆ?
    ಕರ್ನಾಟಕ: ಪೆಟ್ರೋಲ್ – ಶೇ.30, ಡೀಸೆಲ್ – ಶೇ.19
    ಮಹಾರಾಷ್ಟ್ರ: ಪೆಟ್ರೋಲ್ – ಶೇ.47.64, ಡೀಸೆಲ್ – ಶೇ.28.39
    ಆಂಧ್ರ ಪ್ರದೇಶ: ಪೆಟ್ರೋಲ್ – ಶೇ. 38.83, ಡೀಸೆಲ್ – ಶೇ. 30.82
    ಮಧ್ಯಪ್ರದೇಶ: ಪೆಟ್ರೋಲ್ – ಶೇ. 38.79, ಡೀಸೆಲ್ – ಶೇ. 30.22
    ತೆಲಂಗಾಣ: ಪೆಟ್ರೋಲ್ – ಶೇ. 35.20, ಡೀಸೆಲ್ – ಶೇ.27.00
    ಕೇರಳ: ಪೆಟ್ರೋಲ್ – ಶೇ. 34.06

    ಪೆಟ್ರೋಲ್ ಹಾಗೂ ಡೀಸೆಲ್ ಮೂಲಕ ಆದಾಯ ಸಂಗ್ರಹ ಮಾಡುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ದೇಶದಲ್ಲೇ ಐದನೇ ಸ್ಥಾನವಿದೆ. ದೇಶದಲ್ಲೇ ಅತಿ ಹೆಚ್ಚು ತೆರಿಗೆ ವಿಧಿಸೋ ಮಹಾರಾಷ್ಟ್ರ ಸರ್ಕಾರ ಆದಾಯ ಸಂಗ್ರಹದಲ್ಲಿ ಮೊದಲ ಸ್ಥಾನವಿದೆ. ಸೇವಾ ತೆರಿಗೆ, ಪ್ರವೇಶ ತೆರಿಗೆಗಳ ಮೂಲಕ ರಾಜ್ಯಗಳು ಸಂಗ್ರಹ ಮಾಡುವ ಹಣ ಈ ಕೆಳಗಿನಂತಿದೆ.

    ತೆರಿಗೆ ಸಂಗ್ರಹದಲ್ಲಿ ಯಾರು ಮೊದಲು:
    ನಂ.1 ಮಹಾರಾಷ್ಟ್ರ: 23,160 ಕೋಟಿ ರೂ.
    ನಂ.2 ಗುಜರಾತ್: 15,958 ಕೋಟಿ ರೂ.
    ನಂ.3 ಉತ್ತರಪ್ರದೇಶ: 15, 850 ಕೋಟಿ ರೂ.
    ನಂ.4 ತಮಿಳುನಾಡು: 12, 563 ಕೋಟಿ ರೂ.
    ನಂ.5 ಕರ್ನಾಟಕ: 11,103 ಕೋಟಿ ರೂ.

    ಯಾರಿಗೆ ಎಷ್ಟು?
    ಪೆಟ್ರೋಲ್ ಮೇಲೆ ಅಬಕಾರಿ ಸುಂಕ: 21.48 ಪೈಸೆ (ಲೀಟರ್‍ಗೆ)
    ಪೆಟ್ರೋಲ್ ಮೇಲೆ ವ್ಯಾಟ್: ಶೇ.27
    ಡೀಲರ್ಸ್‍ಗಳ ಕಮಿಷನ್: 3.23 (ಲೀಟರ್‍ಗೆ)

    ಡೀಸೆಲ್ ಮೇಲೆ ಅಬಕಾರಿ ಸುಂಕ: 17.33 (ಲೀಟರ್‍ಗೆ)
    ಡೀಸೆಲ್ ಮೇಲಿನ ವ್ಯಾಟ್: ಶೇ.27
    ಡೀಲರ್ಸ್‍ಗಳ ಕಮಿಷನ್: 2.17 (ಲೀಟರ್‍ಗೆ)