Tag: ಡಿಸ್ಚಾರ್ಚ್

  • ಬಳ್ಳಾರಿಯಲ್ಲಿ ಕೊರೊನಾ ಗೆದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ 72ರ ವೃದ್ಧೆ

    ಬಳ್ಳಾರಿಯಲ್ಲಿ ಕೊರೊನಾ ಗೆದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ 72ರ ವೃದ್ಧೆ

    ಬಳ್ಳಾರಿ: ಕೊರೊನಾ ಸೋಂಕಿನಿಂದ ಜಿಲ್ಲೆಯ 72 ವರ್ಷದ ವೃದ್ಧೆಯೊಬ್ಬರು ಇಂದು ಗುಣಮುಖರಾದ ಹಿನ್ನೆಲೆ ಅವರನ್ನು ಕೋವಿಡ್-19 ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಇದರಿಂದಾಗಿ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 9ಕ್ಕೆ ಏರಿದ್ದು, ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 5ಕ್ಕೆ ಇಳಿದಿದೆ.

    ಜಿಲ್ಲೆಯಲ್ಲಿ ಇದುವರೆಗೆ 14 ಮಂದಿಗೆ ಸೋಂಕು ತಗುಲಿದ್ದು, ಅವರಲ್ಲಿ ಈ ಮೊದಲು ಗುಣಮುಖರಾದ ರೋಗಿ-89, ರೋಗಿ-91, ರೋಗಿ-141, ರೋಗಿ-90 ಮತ್ತು ರೋಗಿ-151 ಅವರನ್ನು ಬಿಡುಗಡೆ ಮಾಡಲಾಗಿತ್ತು. ಮತ್ತೆ ಇನ್ನಿಬ್ಬರನ್ನು 21 ವರ್ಷ ವರ್ಷದ ರೋಗಿ-333 ಮತ್ತು 24 ವರ್ಷದ ರೋಗಿ-337 ಅವರನ್ನು ಬಿಡುಗಡೆ ಮಾಡಲಾಗಿತ್ತು. ಹಾಗೆಯೇ ಗುಣಮುಖರಾದ ಹೊಸಪೇಟೆಯ ರೋಗಿ-336 ಅವರಿಗೆ ಮೂರು ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಇಂದು ಹೊಸಪೇಟೆಯ 72 ವರ್ಷದ ರೋಗಿ-332 ಅವರು ಗುಣಮುಖರಾದ ಹಿನ್ನೆಲೆ ಅವರನ್ನು ಸಹ ಬಿಡುಗಡೆ ಮಾಡಲಾಯಿತು.

    ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್ ಬಸರೆಡ್ಡಿ ಅವರು ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ಧರಾಗಿದ್ದ ವೃದ್ಧೆಗೆ ರೋಗಿ-332 ಅವರಿಗೆ ಹೂಗುಚ್ಛ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ನಂತರ ಅವರಿಗೆ ಪಡಿತರ ಕಿಟ್ ಕಳುಹಿಸಿಕೊಡಲಾಯಿತು.

    ಈ ಸಂದರ್ಭದಲ್ಲಿ ಡಾ.ಎನ್ ಬಸರೆಡ್ಡಿ ಅವರು ಮಾತನಾಡಿ, ರೋಗಿ-332 ಬಗ್ಗೆಯೇ ಸಾಕಷ್ಟು ಚಿಂತಿತರಾಗಿದ್ದೇವು. ಅದಕ್ಕೆ ಅವರ ವಯಸ್ಸು ಕೂಡ ಕಾರಣವಾಗಿತ್ತು. ಈ ಮಹಿಳೆಯ ವಯಸ್ಸು 72 ಆಗಿರವುದರಿಂದ ವಿಶೇಷ ಕಾಳಜಿ ವಹಿಸಿ ಚಿಕಿತ್ಸೆ ನೀಡಲಾಯಿತು. ಅವರು ಗುಣಮುಖರಾಗಿ ಬಿಡುಗಡೆಯಾಗುತ್ತಿರುವುದು ಸಂತಸ ತಂದಿದೆ ಎಂದರು.

  • ಅರ್ಜುನ್ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಅರ್ಜುನ್ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮೈಸೂರು: ಲಘು ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಅರ್ಜುನ್ ಜನ್ಯ ಅವರು ಕಳೆದ ಮಂಗಳವಾರ ಅತಿಯಾದ ಗ್ಯಾಸ್‍ಟ್ರಿಕ್ ಪರಿಣಾಮ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಆಗ ಹೃದಯ ಪರೀಕ್ಷೆ ನಡೆಸಿದ್ದಾಗ ಹೃದಯಾಘಾತವಾಗಿರುವುದು ಸ್ಪಷ್ಟವಾಗಿತ್ತು. ಅವರ ಹೃದಯದಲ್ಲಿ ಶೇಕಡಾ 99 ರಷ್ಟು ಬ್ಲಾಕ್ ಇತ್ತು. ಹೀಗಾಗಿ ಮಂಗಳವಾರ ರಾತ್ರಿಯೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಸಿದ್ದರು.

    ಮೂರು ದಿನಗಳ ಪರೀಕ್ಷೆ ನಂತರ ಇವತ್ತು ಅರ್ಜುನ್ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎರಡು ತಿಂಗಳು ಸಂಪೂರ್ಣ ವಿಶ್ರಾಂತಿ ತೆಗೆದು ಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಎರಡು ತಿಂಗಳು ಸಿನಿಮಾ ಕೆಲಸ ಹಾಗೂ ರಿಯಾಲಿಟಿ ಶೋ ಗಳಿಂದ ಅರ್ಜುನ್ ಜನ್ಯ ದೂರ ಉಳಿಯಲಿದ್ದಾರೆ.

    ಅರ್ಜುನ್ ಅವರ ಆರೋಗ್ಯದ ಬಗ್ಗೆ ಗುರುವಾರ ಪ್ರತಿಕ್ರಿಯಿಸಿದ್ದ ಅಪೋಲೋ ಹೃದ್ರೋಗ ತಜ್ಞ ಆದಿತ್ಯ ಉಡುಪ, ಭಾನುವಾರ ಮಧ್ಯಾಹ್ನ ಅರ್ಜುನ್ ಜನ್ಯ ಅವರು ಗ್ಯಾಸ್ಟ್ರಿಕ್, ತಲೆ ನೋವು, ಎದೆ ನೋವು ಹಾಗೂ ಬೆನ್ನು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗ ನಾವು ಅವರಿಗೆ ಚಿಕಿತ್ಸೆ ನೀಡಿದಾಗ ಅವರ ಗ್ಯಾಸ್ಟ್ರಿಕ್ ಸಮಸ್ಯೆ ಸರಿ ಹೋಯಿತು. ಮಂಗಳವಾರ ರಾತ್ರಿ ಮತ್ತೆ ಅವರಿಗೆ ಇಸಿಜಿ ಮಾಡಿಸಿದಾಗ ವರದಿಯಲ್ಲಿ ಕೆಲವು ವ್ಯತ್ಯಾಸಗಳು ಕಂಡು ಬಂತು. ಅಲ್ಲದೆ ಅರ್ಜುನ್ ಅವರಿಗೆ ಬೆನ್ನು, ಎದೆ ಹಾಗೂ ತಲೆ ನೋವು ಜಾಸ್ತಿಯಾಗಿತ್ತು. ಹಾಗಾಗಿ ಮತ್ತೆ ಇಸಿಜಿ ಮಾಡಿಸಿದ್ದೇವು ಎಂದಿದ್ದರು.

    ಇಸಿಜಿ ವರದಿ ಬಂದಾಗ ಅರ್ಜುನ್ ಅವರ ಬಳಿ ಹೋಗಿ ಆರೋಗ್ಯ ಹೇಗಿದೆ ಎಂದು ಕೇಳಿದ್ದೇವು. ಆಗ ಅವರು ಹೊಟ್ಟೆ ನೋವು ಕಡಿಮೆ ಆಗಿದೆ. ಆದರೆ ತುಂಬಾ ಬೆನ್ನು ಹಾಗೂ ತಲೆ ನೋವು ಇದೆ, ಸ್ವಲ್ಪ ಎದೆ ನೋವಾಗುತ್ತಿದೆ ಎಂದರು. ಇಸಿಜಿಯಲ್ಲಿ ಬಹಳ ವ್ಯತ್ಯಾಸ ಕಂಡಿದ್ದರಿಂದ ತಕ್ಷಣ ಆಂಜಿಯೋಗ್ರಾಂ ಪರೀಕ್ಷೆ ಮಾಡಿದ್ವಿ. ಆಗಲೇ ಶೇ. 99 ಹಾರ್ಟ್ ಬ್ಲಾಕೇಜ್ ಆಗಿದೆ ಎಂಬುದು ತಿಳಿಯಿತು. ತಕ್ಷಣ ಅವರ ಕುಟುಂಬಸ್ಥರು ಜೊತೆ ಮಾತನಾಡಿ ಆಂಜಿಯೋಪ್ಲ್ಯಾಸ್ಟಿ ಮಾಡಲಾಯಿತು. ಚಿಕಿತ್ಸೆ ನಡೆದ ಅವರು ಸಂಪೂರ್ಣ ನಿರಾಳರಾದರು ಎಂದು ಮಾಹಿತಿ ನೀಡಿದ್ದರು.

    ಮಂಗಳವಾರ ಬೆಳಗ್ಗೆ 2.30ಕ್ಕೆ ಅರ್ಜುನ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಮಾಡಿದ್ದೇವೆ. ನಿಜವಾಗಿಯೂ 2 ಗಂಟೆ ತಡವಾಗಿದ್ರೆ ಕೆಟ್ಟ ಪರಿಣಾಮ ಎದುರಿಸಬೇಕಿತ್ತು. ಸದ್ಯ ಎಲ್ಲವು ಸರಿಯಾಗಿದೆ. ಚಿಕಿತ್ಸೆ ಪಡೆದು ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಿದ್ದೇವೆ. ಸದ್ಯಕ್ಕೆ ಅರ್ಜುನ್ ಜನ್ಯ ಕ್ಷೇಮವಾಗಿದ್ದಾರೆ ಎಂದು ಹೃದ್ರೋಗ ತಜ್ಞ ಆದಿತ್ಯ ಉಡುಪ ಗುರುವಾರ ಹೇಳಿದ್ದರು.