Tag: ಡಿ ಕಂಪನಿ

  • ನನಗೂ ದರ್ಶನ್‍ಗೂ ಮನಸ್ತಾಪವಾಗಿ ಕೆಲಸ ಬಿಟ್ಟಿರುವುದು ನಿಜ – ಶ್ರೀನಿವಾಸ್

    ನನಗೂ ದರ್ಶನ್‍ಗೂ ಮನಸ್ತಾಪವಾಗಿ ಕೆಲಸ ಬಿಟ್ಟಿರುವುದು ನಿಜ – ಶ್ರೀನಿವಾಸ್

    ಬೆಂಗಳೂರು: ನನಗೂ ನಟ ದರ್ಶನ್ ತೂಗುದೀಪ ಅವರಿಗೂ ಕೆಲಸದ ವಿಷಯದಲ್ಲಿ ಮನಸ್ತಾಪವಿರುವುದು ನಿಜ, ಹೀಗಾಗಿ ಕೆಲಸ ಬಿಟ್ಟಿದ್ದೇನೆ ಎಂದು ನಟ ದರ್ಶನ್ ಮ್ಯಾನೇಜರ್ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀನಿವಾಸ್, ದರ್ಶನ್ ತೂಗುದೀಪ ಅಭಿಮಾನಿಗಳು ಮತ್ತು ಮಾಧ್ಯಮಗಳಿಗೂ ನನ್ನ ನಮಸ್ಕಾರಗಳು. ನನಗೂ ಮತ್ತು ನಟ ದರ್ಶನ್ ತೂಗುದೀಪರವರಿಗೂ ಕೆಲಸದ ವಿಷಯವಾಗಿ ಮನಸ್ತಾಪ ಬಂದಿರುವುದು ನಿಜ. ಆದ ಕಾರಣ ನಾನು ಸೆಪ್ಟೆಂಬರ್ 18 ರಿಂದ ದರ್ಶನ್ ಬಳಿ ಕೆಲಸ ಬಿಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

    ಕೆಲಸ ಬಿಟ್ಟಿದ್ದರಿಂದ ನನ್ನ ಮೇಲೆ ಯಾರೂ ಸಹ ಇಲ್ಲಸಲ್ಲದ ಆರೋಪ ಹೊರಿಸಬೇಡಿ. ನನಗೂ ಕುಟುಂಬ ಇದೆ, ನಾನು ಬೆಂಗಳೂರು ಬಿಟ್ಟು ಎಲ್ಲಿಗೂ ಹೋಗಿಲ್ಲ. ಇಲ್ಲಿಯೇ ಕೆಲಸ ಮಾಡಿಕೊಂಡು ಇದ್ದೇನೆ. ಹೀಗಾಗಿ ಯಾರೂ ಈ ಕುರಿತು ಅಪಪ್ರಚಾರ ಮಾಡಬೇಡಿ ಎಂದು ಶ್ರೀನಿವಾಸ್ ಮನವಿ ಮಾಡಿದ್ದಾರೆ.

    ಡಿ ಕಂಪನಿ ಹೇಳಿದ್ದೇನು?
    ನಟ ದರ್ಶನ್ ತೂಗುದೀಪ್ ಬಳಗದಿಂದ ಮತ್ತೊಬ್ಬ ವ್ಯಕ್ತಿ ಹೊರ ಬಿದ್ದಿರುವ ಕುರಿತು ಡಿ ಕಂಪನಿ ಫೇಸ್‍ಬುಕ್ ಮತ್ತು ಟ್ವಿಟ್ಟರ್‍ನಲ್ಲಿ ತಿಳಿಸಿದೆ. ನಮ್ಮ ಡಿ ಬಾಸ್ ಬಳಿ ಕೆಲಸ ನಿರ್ವಹಿಸುತ್ತಿದ್ದ ಶ್ರೀನಿವಾಸ್ (ಸೀನ) ರವರನ್ನು ತೂಗುದೀಪ ಪರಿವಾರ ಹಾಗೂ ಅಭಿಮಾನಿ ಸಂಘದ ವ್ಯಾವಹಾರಿಕ ಚಟುವಟಿಕೆಗಳಿಂದ ದೂರ ಸರಿಸಲಾಗಿದೆ. ಅವರ ಜೊತೆ ಡಿಬಾಸ್ ರವರ ಹೆಸರಲ್ಲಿ ಯಾವುದೇ ವ್ಯವಹಾರ ಮಾಡದಿರಿ ಎಂದು ಡಿ ಕಂಪನಿ ಹೇಳಿದೆ.

    ಇನ್ನು ಮುಂದೆ ದರ್ಶನ್ ಮತ್ತು ತೂಗುದೀಪ ಕಂಪನಿ ವ್ಯವಹಾರಗಳಿಗೂ ಶ್ರೀನಿವಾಸ್‍ಗೂ ಯಾವುದೇ ಸಂಬಂಧ ಇಲ್ಲ. ಯಾವುದೇ ಕಾರಣಕ್ಕೂ ದರ್ಶನ್ ವ್ಯವಹಾರಗಳಿಗೆ ಸಂಬಂಧಿಸಿದಂತೆ ಶ್ರೀನಿವಾಸ್ ಅವರನ್ನು ಸಂಪರ್ಕಿಸಬಾರದು ಎಂದು ಪೇಜ್‍ನಲ್ಲಿ ತಿಳಿಸಲಾಗಿದೆ.

    ಇದಕ್ಕೆ ಅಭಿಮಾನಿಗಳು ಯಾವ ಕಾರಣಕ್ಕೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದ ಕಮೆಂಟ್ ಮಾಡಿ ಪ್ರಶ್ನಿಸುತ್ತಿದ್ದಾರೆ. ಇತ್ತೀಚೆಗೆ ಶ್ರೀನಿವಾಸ್ ಒಂದು ಹೋಟೆಲ್ ಆರಂಭಿಸಿದ್ದರು. ಅಷ್ಟು ಬಿಟ್ಟರೆ ಯಾವ ಕಾರಣಕ್ಕೆ ಶ್ರೀನಿವಾಸ್ ವಿರುದ್ಧ ಈ ನಿರ್ಧಾರ ಕೈಗೊಳ್ಳಲಾಗಿದೆ ತಿಳಿದು ಬಂದಿಲ್ಲ. ಕಳೆದ ವರ್ಷ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ಕೂಡ ಹಣಕಾಸು ವ್ಯವಹಾರದ ವಿಚಾರವಾಗಿ ದಚ್ಚು ಕ್ಯಾಂಪ್‍ನಿಂದ ಹೊರ ಬಿದ್ದಿದ್ದರು.

    ಈ ಕುರಿತು ಕೇವಲ ಡಿ ಕಂಪನಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ತಿಳಿಸಿದೆ. ನಟ ದರ್ಶನ್ ತೂಗುದೀಪ್ ಆಗಲಿ ಅಥವಾ ಅವರ ಸಹೋದರ ದಿನಕರ್ ತೂಗುದೀಪ್ ಆಗಲಿ ಈ ಕುರಿತು ಅಧಿಕೃತವಾಗಿ ಸ್ಪಷ್ಟಪಡಿಸಿಲ್ಲ.

  • ‘ಡಿ ಕಂಪನಿ’ಯ ಉತ್ತಮ ಕೆಲಸಕ್ಕೆ ಶಿಕ್ಷಣ ಸಚಿವರ ಮೆಚ್ಚುಗೆ

    ‘ಡಿ ಕಂಪನಿ’ಯ ಉತ್ತಮ ಕೆಲಸಕ್ಕೆ ಶಿಕ್ಷಣ ಸಚಿವರ ಮೆಚ್ಚುಗೆ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸಕಲೇಶಪುರ ತಾಲೂಕಿನ ಸರ್ಕಾರಿ ಶಾಲೆಯನ್ನು ಡಿ ಕಂಪನಿ ದತ್ತು ಪಡೆದ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದನ್ನು ನೋಡಿದ ಸುರೇಶ್ ಕುಮಾರ್ ಅವರು ದರ್ಶನ್ ಅಭಿಮಾನಿಗಳ ಈ ಉತ್ತಮ ಕಾರ್ಯವನ್ನು ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ‘ಡಿ ಕಂಪನಿ’ಗೆ ಅಭಿನಂದನೆ ತಿಳಿಸಿದ್ದಾರೆ. ಈ ಅನುಕರಣೀಯ ಕಾರ್ಯ ಮಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ (ಡಿ ಬಾಸ್) ಅಭಿಮಾನಿಗಳಿಗೆ ರಾಜ್ಯದ ಶಿಕ್ಷಣ ಸಚಿವನಾಗಿ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಬರೆದು ಪಬ್ಲಿಕ್ ಟಿವಿಯ ವರದಿಯನ್ನು ಹಾಕಿ ಟ್ವೀಟ್ ಮಾಡಿದ್ದಾರೆ.

    ಸುರೇಶ್ ಕುಮಾರ್ ಅವರು ತಮ್ಮ ಕಾರ್ಯವನ್ನು ಶ್ಲಾಘಿಸಿದಕ್ಕೆ ಇತ್ತ ‘ಡಿ ಕಂಪನಿ’ಯ ಟ್ವಿಟ್ಟರ್ ಖಾತೆಯಿಂದ ಅಭಿಮಾನಿಗಳು ಸಚಿವರಿಗೆ ಧನ್ಯವಾದ ತಿಳಿಸಿದ್ದಾರೆ. ರಾಜ್ಯದ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ನಮ್ಮ ಡಿ ಕಂಪನಿಯ ಸದಸ್ಯರಿಗೆ ಮತ್ತು ಡಿ ಬಾಸ್ ಅಭಿಮಾನಿಗಳಿಗೆ ಹೃತ್ಪೂರ್ವಕ ಧನ್ಯವಾದ ತಿಳಿಸಿದ್ದಾರೆ ಎಂದು ಟ್ವೀಟ್ ಮಾಡಿ ಖುಷಿಯನ್ನು ಹಂಚಿಕೊಂಡಿದ್ದಾರೆ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ `ಡಿ ಕಂಪನಿ’ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಗ್ರಾಮ ರಾಮೇನಹಳ್ಳಿಯ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದು ಶಾಲಾ ಅಭಿವೃದ್ಧಿಗೆ ಮುಂದಾಗಿದೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದರು.

    ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದರು.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.

    ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿ ತಂದಿದೆ ಎಂದಿದ್ದರು.

  • ಸರ್ಕಾರಿ ಶಾಲೆ ದತ್ತು ಪಡೆದುಕೊಂಡ ಡಿಬಾಸ್ ಫ್ಯಾನ್ಸ್

    ಸರ್ಕಾರಿ ಶಾಲೆ ದತ್ತು ಪಡೆದುಕೊಂಡ ಡಿಬಾಸ್ ಫ್ಯಾನ್ಸ್

    ಹಾಸನ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

    ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಇದನ್ನೂ ಓದಿ: ‘ಡಿ’ ಕಂಪನಿಯ ‘ದಿನಕರೋತ್ಸವ’ದಲ್ಲಿ ಟಕ್ಕರ್!

    ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.

    ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿಯನ್ನು ತಂದಿದೆ ಎಂದರು.