Tag: ಡಿ.ಕೆ.ಶಿವಕುಮಾರ್

  • ಸಿದ್ದರಾಮಯ್ಯ ಹಿಂದೆ ನಾನೇ ಇದ್ದೀನಿ: ಡಿ.ಕೆ ಶಿವಕುಮಾರ್

    ಸಿದ್ದರಾಮಯ್ಯ ಹಿಂದೆ ನಾನೇ ಇದ್ದೀನಿ: ಡಿ.ಕೆ ಶಿವಕುಮಾರ್

    ರಾಯಚೂರು: ನಾನೇನಾದರೂ ಆಗಬೇಕಲ್ವಾ, ಹೊರಗಡೆಯಿಂದ ಬಂದವರಿಗೆಲ್ಲ ಸಹಾಯ ಮಾಡಿದ್ದೀನಿ. ಸಿಎಂ ಸಿದ್ದರಾಮಯ್ಯನವರದ್ದು ಮುಗಿಯಲಿ ಅವರ ಹಿಂದೆ ನಾನಿದ್ದೇನೆ ಎಂದು ಸಿಎಂ ಆಗುವ ಆಸೆಯನ್ನ ಇಂಧನ ಸಚಿವ ಡಿ.ಕೆ ಶಿವಕುಮಾರ್ ವ್ಯಕ್ತಪಡಿಸಿದ್ದಾರೆ.

    ರಾಮನಗರ ತಾಲೂಕಿನ ಬಿಡದಿಯ ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್ ಸಿ ಬಾಲಕೃಷ್ಣ ಪರವಾಗಿ ಪ್ರಚಾರ ನಡೆಸಿದ ವೇಳೆ ಮಾತನಾಡಿದ ಅವರು, 45 ಸ್ಥಾನ ಪಡೆದಿರುವ ಬಿಜೆಪಿ 150 ಸ್ಥಾನ ಪಡೆಯುವುದಾಗಿ ಹೇಳುತ್ತಿದ್ದಾರೆ. ಆದರೆ 30 ಸ್ಥಾನ ಪಡೆದಿರುವ ಜೆಡಿಎಸ್ ಸಹ 115 ಸ್ಥಾನ ಗಳಿಸುವುದಾಗಿ ಹೇಳುತ್ತಿದೆ. ತಾವು ಪ್ರವಾಸ ಮಾಡಿದ್ದು, ಜೆಡಿಎಸ್ 30 ರಲ್ಲಿ 10 ಸ್ಥಾನ ಕಳೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

    ಶಿಡ್ಲಘಟ್ಟ, ದೇವನಹಳ್ಳಿ, ಮಾಲೂರು, ಕೆಆರ್ ಪೇಟೆನಲ್ಲಿ ಗೆಲ್ಲುವುದಿಲ್ಲ. ಅಲ್ಲೂ ಸಿ ಫಾರಂ, ಬಿ ಫಾರಂ ಗೊಂದಲ ಇದೆ. ಅಲ್ಲದೇ ಎಚ್‍ಡಿಕೆ ಮುಖ್ಯಮಂತ್ರಿ ಆಗುತ್ತೀನಿ ಅಂದ್ರೆ ಎಂಎಲ್‍ಎ ಗಳು ಬೇಕಲ್ವಾ. ಎಚ್.ಡಿ ಕುಮಾರಸ್ವಾಮಿಯವರನ್ನ ಎಂಪಿ ಮಾಡಿದ್ದೀರಿ, ಸಿಎಂ ಮಾಡಿದ್ದೀರಿ. ದೇವೇಗೌಡರನ್ನ ಸಿಎಂ ಮಾಡಿ, ಪ್ರಧಾನಿಯಾಗಿಯೂ ಮಾಡಿದ್ದೀರಿ. ಅಧಿಕಾರದಲ್ಲಿದ್ದಾಗ ಏನಾದರೂ ಶಾಶ್ವತವಾಗಿರುವಂತಹದ್ದು ಮಾಡಬೇಕಲ್ವಾ ಎಂದ್ರು.

    ಮಾಗಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ರನ್ನ ಗಂಡು ಮಾಡಿದ್ದು ನಾನು, ನನ್ನ ಸಹೋದರ ಸುರೇಶ್. ನೂರು ಮಂಜರನ್ನ ತಯಾರು ಮಾಡಬಹುದು. ಬಾಲಕೃಷ್ಣರಂತಹವರನ್ನ ಸೃಷ್ಟಿ ಮಾಡಲಾಗಲ್ಲ ಅವರು ರೆಡಿಮೆಡ್ ಗಂಡು. ಮಂಜು ಸ್ವಿಚ್ ಆಫ್ ಮಂಜು ಎಂದು ವ್ಯಂಗ್ಯವಾಡಿದರು.

  • ರಾಹುಲ್ ಗಾಂಧಿ ದೇವೇಗೌಡರ ಮಗನ ಸಮಾನ: ಡಿ.ಕೆ. ಶಿವಕುಮಾರ್

    ರಾಹುಲ್ ಗಾಂಧಿ ದೇವೇಗೌಡರ ಮಗನ ಸಮಾನ: ಡಿ.ಕೆ. ಶಿವಕುಮಾರ್

    -ಬುಲೆಟ್ ಬೈಕ್‍ನಲ್ಲಿ ಸಚಿವ ಡಿಕೆಶಿ ರ‍್ಯಾಲಿ

    ಚಿಕ್ಕಮಗಳೂರು: ಮೂಡಿಗೆರೆ ಕಾಂಗ್ರೆಸ್ ಅಭ್ಯರ್ಥಿ ಪರ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಬೈಕ್ ರ‍್ಯಾಲಿಗೆ ಚಾಲನೆ ನೀಡಿದ್ದಾರೆ.

    ಡಿ.ಕೆ.ಶಿವಕುಮಾರ್ ಮೂಡಿಗೆರೆ ನಗರದ ಪ್ರಮುಖ ರಸ್ತೆಗಳಲ್ಲಿ ಬುಲೆಟ್ ಬೈಕ್ ಏರಿ, ಹೆಲ್ಮೆಟ್ ಧರಿಸಿ ತಾವೇ ಬೈಕ್ ಓಡಿಸಿ ರ‍್ಯಾಲಿ ಮಾಡಿದ್ದು, ತಮ್ಮ ಅಭ್ಯರ್ಥಿ ಪರ ಮತಬೇಟೆಯಾಡಿದ್ದಾರೆ. ಡಿಕೆಶಿಯ ಬೈಕ್ ರ‍್ಯಾಲಿಗೆ ಸಾವಿರಾರು ಯುವಕರು ಭಾಗಿಯಾಗಿದ್ದು, ಸಾಥ್ ನೀಡಿದ್ದಾರೆ. ಹೊಯ್ಸಳ ಮೈದಾನದಿಂದ ಅಡ್ಯಂತಾಯ ರಂಗ ಮಂದಿರದ ವರೆಗೆ ಡಿ.ಕೆ.ಶಿವಕುಮಾರ್ ಬೈಕ್ ರ‍್ಯಾಲಿ ಮಾಡಿದ್ದಾರೆ.

    ಇದೇ ವೇಳೆ ರಾಹುಲ್ ರಾಜ್ಯಕ್ಕೆ ಬಂದ ಕೂಡಲೇ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದಿದ್ದ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ ದೇವೇಗೌಡರ ಮಗನ ಸಮಾನ. ದೇವೇಗೌಡರು ಮೊದಲಿಂದಲೂ ಪಕ್ಷದ ಅಧ್ಯಕ್ಷರಾಗಿದ್ದಾರೆ. ರಾಜಕಾರಣದಲ್ಲಿ ಅನುಭವಿಯಾಗಿದ್ದಾರೆ ಎಂದು ಹೇಳಿದ್ದಾರೆ.

    ಗಾಂಧೀ ಕುಟುಂಬ ದೇಶದ ಹಿತಕ್ಕೊಸ್ಕರ ದೊಡ್ಡ ತ್ಯಾಗ ಮಾಡಿದ ಕುಟುಂಬವಾಗಿದೆ. ಆ ಕುಟುಂಬದ ಕುಡಿ ರಾಹುಲ್ ಗಾಂಧಿ. ಅವರಿಗೆ ಜನ ತೋರಿಸುತ್ತಿರುವ ಅಭಿಮಾನ ಮತ್ತು ಪ್ರೀತಿ ನಮಗೆ ಗೊತ್ತಿದೆ. ದೇವೇಗೌಡರು ತುಂಬಾ ಹಿರಿಯರು, ಅವರು ಏನಾದರೂ ಹೇಳಿಕೊಳ್ಳಲಿ ನಮಗೇನೂ ತೊಂದರೆ ಇಲ್ಲ ಎಂದ್ರು.

  • ಅಧಿಕಾರ ಇಲ್ಲದಾಗ ಅಲ್ಲೋಗಿ ಹರಿತೀನಿ ಅಂತಿದ್ದಾರೆ- ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

    ಅಧಿಕಾರ ಇಲ್ಲದಾಗ ಅಲ್ಲೋಗಿ ಹರಿತೀನಿ ಅಂತಿದ್ದಾರೆ- ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

    ಚಿತ್ರದುರ್ಗ: ಅಧಿಕಾರ ಇದ್ದಾಗ ಬಿಜೆಪಿಯವರು ಸಾಧನೆ ಮಾಡಲಿಲ್ಲ. ಅಧಿಕಾರ ಇದ್ದಾಗ ಶ್ರೀರಾಮುಲು ಏನು ಮಾಡಲಿಲ್ಲ, ಶಾಸಕ ಎನ್.ವೈ.ಗೋಪಾಲಕೃಷ್ಣ ಏನು ಮಾಡಲಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

    ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಯೊಗೀಶ್ ಬಾಬು ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುವ ವೇಳೆ ಬಿಜೆಪಿ ವಿರುದ್ಧ ಡಿಕೆಶಿ ಗುಡುಗಿದ್ದು, ಬಿಜೆಪಿ ಅಧಿಕಾರದಲ್ಲಿದ್ದಾಗ ಶ್ರೀರಾಮುಲು ಅವರಿಗೆ ಏನು ಮಾಡಲು ಆಗಲಿಲ್ಲ ಎಂದು ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಶಾಸಕ ಎನ್.ವೈ.ಗೋಪಾಲಕೃಷ್ಣ ಕೂಡ ಅಧಿಕಾರ ಸಿಕ್ಕಾಗ ಏನು ಮಾಡಲಿಲ್ಲ. ಇನ್ನು ಅಧಿಕಾರ ಇಲ್ಲದ ವೇಳೆ ಅಲ್ಲೋಗಿ ಹರಿತೀನಿ, ಹರಿತೀನಿ ಅಂತಿದ್ದಾರೆ. `ಕೊಟ್ಟ ಕುದುರೆಯನೇರಲು ಅರಿಯದವರು ಮತ್ತೊಂದು ಕುದುರೆಯನ್ನೇರಲು ಬಯಸುವವನು ವೀರನೂ ಅಲ್ಲ, ಶೂರನು ಅಲ್ಲ’ ಎನ್ನುವ ವಚನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

    ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಅಂತೆ ಬಿಎಸ್‍ವೈ ಗೆ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಸಾಧ್ಯವಾಗಿಲ್ಲ ಅಂತ ವ್ಯಂಗ್ಯವಾಡಿದ್ರು.

  • ಚುನಾವಣಾ ನೀತಿ ಸಂಹಿತೆಯಿಂದ ಪಾರಾಗಲು ಡಿಕೆಶಿ ಆಪ್ತ ಮಾಸ್ಟರ್ ಪ್ಲಾನ್

    ಚುನಾವಣಾ ನೀತಿ ಸಂಹಿತೆಯಿಂದ ಪಾರಾಗಲು ಡಿಕೆಶಿ ಆಪ್ತ ಮಾಸ್ಟರ್ ಪ್ಲಾನ್

    ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಆದ್ರೂ ಕೆಲ ರಾಜಕೀಯ ಮುಖಂಡರು ಮತ್ತು ಆಪ್ತರು ಸರ್ಕಾರ ನೀಡಿರುವ ಸೌಲಭ್ಯಗಳನ್ನು ಮಾತ್ರ ಹಿಂದಕ್ಕೆ ನೀಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸರ್ಕಾರಿ ವಾಹನಗಳನ್ನು ಬಿಟ್ಟು, ಖಾಸಗಿ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

    ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಕೆ. ಶೇಷಾದ್ರಿ ಈಗಲೂ ಸರ್ಕಾರಿ ವಾಹನವನ್ನೇ ಬಳಕೆ ಮಾಡ್ತಿದ್ದಾರೆ. ಆದ್ರೆ ಚುನಾವಣಾ ಅಧಿಕಾರಿಗಳಿಗೆ ತಿಳಿಯದಂತೆ ಸರ್ಕಾರಿ ವಾಹನವನ್ನು ಮಾರ್ಪಾಡು ಮಾಡಿಕೊಂಡಿದ್ದಾರೆ.

    ಏನದು ಮಾರ್ಪಾಡು?: ಸರ್ಕಾರಿ ವಾಹನ ಅಂತ ಇರೋ ಸ್ಟಿಕ್ಕರ್ ಗಳನ್ನ ತೆಗೆದು, ನಂಬರ್ ಪ್ಲೇಟ್ ನ್ನೂ ಕಿತ್ತು ಹಾಕಿ ರಾಜಾರೋಷವಾಗಿ ಓಡಾಡ್ತಿದ್ದಾರೆ. ಸ್ಟಿಕ್ಕರ್ ಗಳನ್ನು ಕಿತ್ತು ಹಾಕಿ ಸರ್ಕಾರಿ ವಾಹನದಲ್ಲಿ ಶೇಷಾದ್ರಿ ಅವರು ಪ್ರಯಾಣಿಸುವ ದೃಶ್ಯಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

  • ಹೆಲಿಕಾಪ್ಟರ್ ಹತ್ತುವಾಗ ಇಲ್ಲದ ನೀತಿ ಸಂಹಿತೆ ಇಳಿಯುವಷ್ಟರಲ್ಲಿ ಜಾರಿ-ಸಂಕಷ್ಟಕ್ಕೆ ಸಿಲುಕಿದ ಇಂಧನ ಸಚಿವ

    ಹೆಲಿಕಾಪ್ಟರ್ ಹತ್ತುವಾಗ ಇಲ್ಲದ ನೀತಿ ಸಂಹಿತೆ ಇಳಿಯುವಷ್ಟರಲ್ಲಿ ಜಾರಿ-ಸಂಕಷ್ಟಕ್ಕೆ ಸಿಲುಕಿದ ಇಂಧನ ಸಚಿವ

    ಶಿವಮೊಗ್ಗ: ಹೆಲಿಕಾಪ್ಟರ್ ಹತ್ತುವಾಗ ಇಲ್ಲದ ನೀತಿ ಸಂಹಿತೆ ಇಳಿಯುಷ್ಟರಲ್ಲಿಯೇ ಜಾರಿಯಾಗಿದ್ದರಿಂದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೆಲ ಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಇಂದು ನಡೆಯಿತು.

    ಜಕ್ಕೂರು ವಿಮಾನ ನಿಲ್ದಾಣದಿಂದ ಸಚಿವರು ಶಿವಮೊಗ್ಗದಲ್ಲಿ ನಿಗದಿಯಾಗಿ ಮೆಸ್ಕಾ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಲು ಪ್ರಯಾಣ ಬೆಳೆಸಿದ್ದರು. ಸಚಿವರನ್ನು ಕರೆದೊಯ್ಯಲು ಶಿವಮೊಗ್ಗ ಹೆಲಿಪ್ಯಾಡ್ ಗೆ ಬಂದಿದ್ದ ಸರ್ಕಾರಿ ವಾಹನವನ್ನು ಜಿಲ್ಲಾಡಳಿತ ಹಿಂದೆ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಖಾಸಗಿ ಕಾರ್ ವ್ಯವಸ್ಥೆ ಮಾಡಿದ್ದರು.

    ಮಧ್ಯಾಹ್ನ 12.40ಕ್ಕೆ ಶಿವಮೊಗ್ಗ ಹೆಲಿಪ್ಯಾಡ್‍ಗೆ ಬಂದ ಸಚಿವರು ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ಮಾತನಾಡಿ, ಹೌದು ನಾನು ಕಾಪ್ಟರ್ ಹತ್ತುವಾಗ ಯಾವುದೇ ನೀತಿ ಸಂಹಿತೆ ಜಾರಿಯಾಗಿರಲಿಲ್ಲ. ಆದ್ರೆ ಮಾರ್ಗ ಮಧ್ಯೆ ನೀತಿ ಸಂಹಿತೆ ಜಾರಿಯಾಗಿರುವುದು ಗೊತ್ತಾಯಿತು. ಹಾಗಾಗಿ ಹೆಲಿಪ್ಯಾಡ್ ನಿಂದ ಖಾಸಗಿ ವಾಹನದಲ್ಲಿಯೇ ತೆರಳುತ್ತಿದ್ದೇನೆ ಅಂತಾ ಹೇಳಿದ್ರು.

  • ಕ್ರೇನ್ ಮೂಲಕ ಸಚಿವ ಶಿವಕುಮಾರ್ ಗೆ 300 ಕೆ.ಜಿ ತೂಕದ ಸೇಬಿನ ಹಾರ ಹಾಕಿ ಸನ್ಮಾನ!

    ಕ್ರೇನ್ ಮೂಲಕ ಸಚಿವ ಶಿವಕುಮಾರ್ ಗೆ 300 ಕೆ.ಜಿ ತೂಕದ ಸೇಬಿನ ಹಾರ ಹಾಕಿ ಸನ್ಮಾನ!

    ಮಂಡ್ಯ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನೂರಾರು ಸೇಬು ಹಣ್ಣುಗಳುವುಳ್ಳ ಬೃಹತ್ ಹಾರವನ್ನು ಹಾಕಿ ಸನ್ಮಾನಿಸಲಾಗಿದೆ.

    ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಇಂಡವಾಳು ಸಚ್ಚಿದಾನಂದ್ ಅವರು ಈ ಹಾರವನ್ನು ಹಾಕಿಸಿದ್ದಾರೆ. ಕ್ರೇನ್ ಮೂಲಕ 300 ಕೆ.ಜಿ. ತೂಕವುಳ್ಳ ಸೇಬಿನ ಹಾರ ಹಾಕುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಸೇಬನ್ನು ಕಿತ್ತು ತಿಂದು ಜನರತ್ತ ಸಂತೋಷದಿಂದ ಕೈ ಬೀಸಿದರು. ಸೇಬಿನ ಹಾರಕ್ಕೆ ಬರೋಬ್ಬರಿ 1 ಲಕ್ಷದ 60 ಸಾವಿರ ರೂ. ಖರ್ಚಾಗಿದೆ ಅಂತಾ ತಿಳಿದು ಬಂದಿದೆ.

    ಕ್ಷೇತ್ರದಲ್ಲಿನ ನಾಯಕರ ಬಂಡಾಯ ಶಮನ ಮಾಡಲು ಸಚಿವರು ಶ್ರೀರಂಗಪಟ್ಟಣ ಕ್ಷೇತ್ರಕ್ಕೆ ಆಗಮಿಸಿದ್ದರು. ಈ ವೇಳೆ ಟಿಕೆಟ್ ಆಕಾಂಕ್ಷಿಯಾಗಿರುವ ಸಚ್ಚಿದಾನಂದ್ ಅವರು ಅದ್ಧೂರಿ ಸ್ವಾಗತದ ಮೂಲಕ ಸಚಿವರನ್ನು ಓಲೈಕೆಗೆ ಮುಂದಾಗಿದ್ದಾರೆ. ಸುಮಾರು 10 ಕಿ.ಮೀ.ವರೆಗೆ ನಡೆದ ಮೆರವಣಿಗೆಯಲ್ಲಿ ಕ್ರೇನ್ ಮೂಲಕ ಹೂ ಮಳೆ ಸುರಿಸುವ ಮೂಲಕ ಸಚ್ಚಿದಾನಂದ್ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ರು.

    ಬೃಹತ್ ಮತ್ತು ವಿಭಿನ್ನ ಹಾರ ಹಾಕಿದ್ದಕ್ಕೆ ಪರ-ವಿರೋಧಗಳು ಚರ್ಚೆ ಆಗ್ತಿವೆ. ಹಣವುಳ್ಳವರ ರಾಜಕೀಯ ಅಂತಾ ಕೆಲವರು ಟೀಕಿಸಿದ್ರೆ, ಇನ್ನು ಕೆಲವರು ಅಭಿಮಾನದ ಹಾರ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಚಿವರಿಗೆ ಹಾರ ಹಾಕಿದ ನಂತರ ಸ್ಥಳದಲ್ಲಿ ನೆರೆದಿದ್ದ ಕಾರ್ಯಕರ್ತರು ಸೇಬು ಹಣ್ಣಿಗಾಗಿ ಕಿತ್ತಾಡಿದ ಘಟನೆಯೂ ನಡೆಯಿತು.

  • ಲೋಕನಾಥ್-ಹ್ಯಾರಿಸ್ ಮಧ್ಯೆ ಸಂಧಾನ ಮಾಡಿಲ್ಲ, ವಿದ್ವತ್ ತಂದೆ ನನ್ನ ಸ್ನೇಹಿತರಷ್ಟೇ- ಡಿಕೆಶಿ

    ಲೋಕನಾಥ್-ಹ್ಯಾರಿಸ್ ಮಧ್ಯೆ ಸಂಧಾನ ಮಾಡಿಲ್ಲ, ವಿದ್ವತ್ ತಂದೆ ನನ್ನ ಸ್ನೇಹಿತರಷ್ಟೇ- ಡಿಕೆಶಿ

    ಬೆಂಗಳೂರು: ವಿದ್ವತ್ ಮೇಲೆ ನಲಪಾಡ್ ಹಲ್ಲೆ ಪ್ರಕರಣದಲ್ಲಿ ನಲಪಾಡ್ ತಂದೆ ಶಾಸಕ ಹ್ಯಾರಿಸ್ ಹಾಗು ವಿದ್ವತ್ ತಂದೆ ಲೋಕನಾಥ್ ಮಧ್ಯೆ ನಾನು ಯಾವುದೇ ರೀತಿಯ ಸಂಧಾನ ಪ್ರಯತ್ನ ಮಾಡಿಲ್ಲ ಅಂತಾ ಇಂಧನ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕನಾಥ್ ಹಾಗೂ ಹ್ಯಾರಿಸ್ ಮಧ್ಯೆ ನಾನೇನು ಸಂಧಾನ ಮಾಡಿಲ್ಲ, ಅದರ ಅಗತ್ಯ ನನಗಿಲ್ಲ. ಲೋಕನಾಥ್ ನನ್ನ ಸ್ನೇಹಿತರಷ್ಟೆ, ತಪ್ಪು ಯಾರೇ ಮಾಡಿದ್ರೂ ತಪ್ಪೇ. ಹ್ಯಾರಿಸ್ ಕೂಡ ಈ ಬಗ್ಗೆ ಕ್ಷಮೆಯನ್ನು ಕೇಳಿದ್ದಾರೆ ಅಂತಾ ಹೇಳಿದ್ರು. ಇದನ್ನೂ ಓದಿ: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ಸೀದಾ ರೂಪಯೇ ಸರ್ಕಾರ ಎಂಬ ಮೋದಿ ಟೀಕೆಗೆ ಇದೇ ವೇಳೆ ಡಿಕೆಶಿ ತಿರುಗೇಟು ನೀಡಿದ್ರು. ಪ್ರಧಾನಿ ಸ್ಥಾನದಲ್ಲಿರುವವರು ಏನು ಮಾತನಾಡಬೇಕು, ಮಾತನಾಡಬಾರದು ಎಂಬ ಸೂಕ್ಷ್ಮವನ್ನು ಆರಿಯಬೇಕು. ಮಾತನಾಡಬೇಕಾದರೆ ಜವಾಬ್ದಾರಿಯುತವಾಗಿ ಮಾತಡಬೇಕು ಅಂದ್ರು. ಇದನ್ನೂ ಓದಿ:ಶಾಂತಿನಗರದಲ್ಲಿ ರೌಡಿ ನಲಪಾಡ್ ಹೇಳಿದ್ದೇ ಶಾಸನವಂತೆ..!

    ಚಿದಂಬರಂ ಪುತ್ರ ಕಾರ್ತಿ ಚಿದಂಬರಂನನ್ನು ಬಂಧನಕ್ಕೆ ಒಳಪಡಿಸಿರುವುದು ರಾಜಕೀಯ ಪ್ರೇರಿತ. ಇದರಲ್ಲಿ ಯಾವುದೇ ರೀತಿಯ ಆನುಮಾನವೇ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಕಿಡಿಕಾರಿದ್ರು. ಇದನ್ನೂ ಓದಿ:  ಯುಬಿ ಸಿಟಿ ಗಲಾಟೆ ಹೇಗಾಯ್ತು? ಯಾವೆಲ್ಲ ಸೆಕ್ಷನ್ ಹಾಕಲಾಗಿದೆ? ಆರೋಪಿಗಳ ಉದ್ಯೋಗ ಏನು? ನಲಪಾಡ್ ರೌಡಿಸಂ ಫುಲ್ ಡಿಟೇಲ್ ಇಲ್ಲಿದೆ

  • ರಾಜ್ಯದ ಪವರ್ ಫುಲ್ ಸಚಿವರ ಗುಟ್ಟು ರಟ್ಟು – ಐಟಿ ಇಲಾಖೆ ಡಿಕೆಶಿ ಮೇಲೆ ಕೇಸ್ ಹಾಕಿದ್ದು ಯಾಕೆ?

    ರಾಜ್ಯದ ಪವರ್ ಫುಲ್ ಸಚಿವರ ಗುಟ್ಟು ರಟ್ಟು – ಐಟಿ ಇಲಾಖೆ ಡಿಕೆಶಿ ಮೇಲೆ ಕೇಸ್ ಹಾಕಿದ್ದು ಯಾಕೆ?

    ಬೆಂಗಳೂರು: ರಾಜ್ಯದ ಪವರ್ ಫುಲ್ ಮಿನಿಸ್ಟರ್ ಅಂತಾನೇ ಕರೆಸಿಕೊಳ್ಳುವ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಆದಾಯ ತೆರಿಗೆ ಇಲಾಖೆಯ ದಾಳಿಯಲ್ಲಿ ಏನಾಯಿತು? ಮತ್ತು ಯಾವ ಆಧಾರದ ಮೇಲೆ ಪ್ರಕರಣ ದಾಖಲು ಮಾಡಲಾಗ್ತಾಯಿದೆ ಎಂಬುದರ ಬಗ್ಗೆ ಪಬ್ಲಿಕ್ ಟಿವಿಗೆ ಎಕ್ಸ್ ಕ್ಲೂಸಿವ್ ಮಾಹಿತಿಗಳು ಲಭ್ಯವಾಗಿವೆ.

    ಡಿ.ಕೆ.ಶಿವಕುಮಾರ್ ಅವರ ಮನೆಯ ಮೇಲೆ ಐಟಿ ದಾಳಿ ವೇಳೆ ವಶಪಡಿಸಿಕೊಂಡ ಬಹುತೇಕ ಆಸ್ತಿ ಪತ್ರಗಳಿಗೆ ಸರಿಯಾದ ದಾಖಲೆಗಳಿಲ್ಲ. ಸಚಿವರು ದಾಖಲೆಯಿಲ್ಲದೇ ಹಲವು ಕಡೆ ಕೋಟ್ಯಾಂತರ ರೂಪಾಯಿ ವ್ಯವಹಾರ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೋಟ್ಯಂತರ ರುಪಾಯಿಗಳನ್ನು ಕೇವಲ ಚೀಟಿಗಳಲ್ಲಿ ಬರೆದುಕೊಳ್ಳಲಾಗಿತ್ತು ಮತ್ತು ಈ ಎಲ್ಲ ವ್ಯವಹಾರಗಳಿಗೆ ಯಾವುದೇ ರೀತಿಯಲ್ಲಿ ಸಚಿವರು ತೆರಿಗೆಯನ್ನು ಪಾವತಿ ಮಾಡಿಲ್ಲ. ದಾಳಿ ಸಮಯದಲ್ಲಿ ಸಚಿವರು ಕೆಲ ದಾಖಲೆಗಳನ್ನು ನಾಶಪಡಿಸಲು ಯತ್ನಿಸಿದ್ದರು ಎನ್ನಲಾಗಿದೆ.

    ಐಟಿ ದಾಳಿ ವೇಳೆ 5 ಕೋಟಿ ರೂಪಾಯಿಗಳ ವ್ಯವಹಾರಕ್ಕೆ ಟ್ಯಾಕ್ಸ್ ಕಟ್ಟದೆ ಇರುವುದು ಬೆಳಕಿಗೆ ಬಂದಿದೆ. ಇನ್ನೂ ಹಲವು ಕಂಪೆನಿಗಳ ಜೊತೆ ಡಿ.ಕೆ.ಶಿವಕುಮಾರ್ ಒಪ್ಪಂದ ಮಾಡಿಕೊಂಡಿದ್ದು, ಅರ್ಧ ಹಣವನ್ನು ಚೆಕ್ ಮೂಲಕ ಮತ್ತು ಇನ್ನರ್ಧ ಹಣವನ್ನು ಕ್ಯಾಶ್ ಮೂಲಕ ಪಡೆದಿದ್ದಾರೆ. ಕ್ಯಾಶ್ ನಲ್ಲಿ ಪಡೆದ ಹಣಕ್ಕೆ ಸಚಿವರು ತೆರಿಗೆ ಪಾವತಿ ಮಾಡಿಲ್ಲ. ಈ ರೀತಿಯ ವ್ಯವಹಾರದಲ್ಲಿ ಒಂದು ಕಂಪನಿ ಜೊತೆ ಒಪ್ಪಂದ ಮಾಡಿಕೊಂಡು 7 ಕೋಟಿ ರೂಪಾಯಿಗೂ ಹೆಚ್ಚಿನ ಹಣಕ್ಕೆ ತೆರಿಗೆ ವಂಚನೆ ಮಾಡಿದ್ದಾರೆ ಅಂತಾ ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

    ಡಿ.ಕೆ ಶಿವಕುಮಾರ್ ಗೌರವಾನ್ವಿತ ವ್ಯಕ್ತಿಯಾಗಿದ್ದು, ಪ್ರಸ್ತುತ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾರೆ. ಜವಬ್ದಾರಿಯುತ ಸಚಿವರಾಗಿ ಉದ್ದೇಶಪೂರ್ವಕವಾಗಿ ತೆರಿಗೆ ವಂಚನೆ ಮಾಡಿದ್ದಾರೆ. ಕಾನೂನಿನ ಬಗ್ಗೆ ಅರಿವಿದ್ರೂ ಮೋಸ ಮಾಡಿದ್ದು, ಹೀಗಾಗಿ ಇವರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಐಟಿ ಇಲಾಖೆ ಕೋರ್ಟ್ ಗೆ ಮನವಿ ಮಾಡಿದೆ.

  • ಪವರ್ ಮಿನಿಸ್ಟರ್ ಗೆ ಐಟಿ ಇಲಾಖೆಯಿಂದ ಬಿಗ್ ಶಾಕ್!

    ಪವರ್ ಮಿನಿಸ್ಟರ್ ಗೆ ಐಟಿ ಇಲಾಖೆಯಿಂದ ಬಿಗ್ ಶಾಕ್!

    ಬೆಂಗಳೂರು: ರಾಜ್ಯದ ಪವರ್ ಅಂಡ್ ಪವರ್ ಪುಲ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಅವರಿಗೆ ಸಂಕಷ್ಟ ಶುರುವಾಗಿದೆ. ಎಲೆಕ್ಷನ್ ನಿಂತು ಜಯಭೇರಿ ಬಾರಿಸಿ ಪಕ್ಷವನ್ನು ಮುನ್ನೆಡಸೋ ಉತ್ಸಾಹದಲ್ಲಿದ್ದ ಪವರ್ ಮಿನಿಸ್ಟರ್ ಈಗ ಬಂಧನದ ಭೀತಿ ಎದುರಿಸುತ್ತಿದ್ದಾರೆ.

    2017, ಆಗಸ್ಟ್ ತಿಂಗಳಲ್ಲಿ ಐಟಿ ರೇಡ್ ವೇಳೆ ದಾಖಲೆ ಹರಿದು ಹಾಕಿರೋ ಆರೋಪಕ್ಕೆ ಗುರಿಯಾಗಿರೋ ಪವರ್ ಮಿನಿಸ್ಟರ್ ಗೆ ಆರ್ಥಿಕ ಅಪರಾಧಗಳ ಕೋರ್ಟ್ ಎಫ್‍ಐಆರ್ ದಾಖಲಿಸಲು ಸೂಚನೆ ನೀಡಿದೆ. ದಾಖಲೆ ಹರಿದು ಹಾಕಿರುವ ಬಗ್ಗೆ ಕೋರ್ಟ್ ಗೆ ಮಾಹಿತಿ ನೀಡಿದ ಐಟಿ ಅಧಿಕಾರಿಗಳಿಗೆ ಕೂಡಲೇ ಅವರ ವಿರುದ್ಧ ದೂರು ದಾಖಲಿಸಿ ಅಂತ ಸೂಚನೆ ನೀಡಿ ಮಾರ್ಚ್ 22 ರೊಳಗೆ ಖುದ್ದು ಹಾಜರಾಗುವಂತೆ ಸೂಚನೆ ನೀಡಿದೆ.

    ಕೋರ್ಟ್ ಸೂಚನೆ ನೀಡುತ್ತಿದ್ದಂತೆ ಘಟನೆ ನಡೆದ ಈಗಲ್ ಟನ್ ರೆಸಾರ್ಟ್ ವ್ಯಾಪ್ತಿಯ ಸ್ಥಳೀಯ ಪೊಲೀಸ್ ಸ್ಟೇಷನ್‍ನಲ್ಲಿ ಐಟಿ ಇಲಾಖೆ ಇಂದು ಐಪಿಸಿ ಸೆಕ್ಷನ್ 201 ಮತ್ತು 204 ಜೊತೆಗೆ ಐಟಿ ಸೆಕ್ಷನ್ 276 (ಸಿ)ಯ ಅಡಿಯಲ್ಲಿ ದೂರು ನೀಡಲು ಸಿದ್ದತೆ ಮಾಡಿಕೊಂಡಿದೆ. ದೂರು ದಾಖಲಾಗುತ್ತಿದ್ದಂತೆ ಎಫ್‍ಐಆರ್ ದಾಖಲಿಸಲಿರೋ ಪೊಲೀಸರು ಡಿ.ಕೆ.ಶಿವಕುಮಾರ್ ಅವರನ್ನ ಬಂಧಿಸೋ ಸಾಧ್ಯತೆಯನ್ನು ಸಹ ತಳ್ಳಿಹಾಕುವಂತಿಲ್ಲ.

    ಇನ್ನೊಂದು ಕಡೆ ಈಗಾಗಲೇ ಕೋರ್ಟ್ ಆದೇಶದಿಂದ ಬಂಧನದ ಭೀತಿ ಎದುರಿಸುತ್ತಿರೋ ಡಿ ಕೆ ಶಿವಕುಮಾರ್ ಇಂದು ಆರ್ಥಿಕ ಅಪರಾಧಗಳ ಕೋರ್ಟ್ ನೀಡಿರೋ ಆದೇಶದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಬಗ್ಗೆ ತಮ್ಮ ವಕೀಲರ ಜೊತೆ ಮಾತುಕತೆ ನಡೆಸಿರೋ ಡಿ.ಕೆ.ಶಿವಕುಮಾರ್ ಯಾವುದಕ್ಕೂ ರೆಡಿ ಇರುವಂತೆ ವಕೀಲರಿಗೆ ಸೂಚನೆ ನೀಡಿದ್ದಾರೆ ಅಂತಾ ಎನ್ನಲಾಗಿದೆ.

  • ಸೆಲ್ಫಿ ಕ್ಲಿಕ್ಕಿಸಲು ಮುಂದಾಗಿದ್ದ ಕಾರ್ಯಕರ್ತನ ಕೈಗೆ ಡಿಕೆಶಿ ಏಟು – ಮೊಬೈಲ್ ಕೆಳಕ್ಕೆ

    ಸೆಲ್ಫಿ ಕ್ಲಿಕ್ಕಿಸಲು ಮುಂದಾಗಿದ್ದ ಕಾರ್ಯಕರ್ತನ ಕೈಗೆ ಡಿಕೆಶಿ ಏಟು – ಮೊಬೈಲ್ ಕೆಳಕ್ಕೆ

    ಬಳ್ಳಾರಿ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೊಸಪೇಟೆಯಲ್ಲಿ ಸೆಲ್ಫಿ ಕ್ಲಿಕ್ಕಿಸಲು ಆಗಮಿಸಿದ್ದ ಕಾರ್ಯಕರ್ತರ ಕೈಗೆ ಹೊಡೆದಿದ್ದಾರೆ.

    ಭಾನುವಾರ ಬಳ್ಳಾರಿಯ ಹೊಸಪೇಟೆಯಲ್ಲಿ ಫೆಬ್ರವರಿ 10ರಂದು ನಡೆಯಲಿರುವ ರಾಹುಲ್ ಗಾಂಧಿ ಸಮಾವೇಶದ ಸಿದ್ಧತೆ ವೀಕ್ಷಿಸಲು ಡಿಕೆ ಶಿವಕುಮರ್ ಆಗಮಿಸಿದ್ದರು.

    ಕಾಂಗ್ರೆಸ್ ಕಾರ್ಯಕರ್ತರು ಸಚಿವರನ್ನು ನೋಡಲು ಮುಗಿಬಿದ್ದರು. ಈ ಗುಂಪಿನಲ್ಲಿದ್ದ ಒಬ್ಬರು ಮೊಬೈಲ್ ತೆಗೆದು ಸೆಲ್ಫಿ ತೆಗೆಯಲು ಮುಂದಾಗಿದ್ದರು. ಇದರಿಂದ ಕೋಪಗೊಂಡ ಡಿಕೆಶಿವಕುಮಾರ್ ಮೊಬೈಲ್ ಇಟ್ಕೊಂಡವರ ಕೈಗೆ ಬಾರಿಸಿದ್ದಾರೆ. ಮೊಬೈಲ್ ಕೆಳಗಡೆ ಬಿದ್ದಿದೆ.

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಜಯನಗರ ಸಾಮ್ರಾಜ್ಯದಿಂದಲೇ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ. ಫೆಬ್ರವರಿ 10 ರಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದ ಮೂಲಕ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ರಾಹುಲ್ ಗಾಂಧಿ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಪ್ರವಾಸ ಮಾಡಿ ಪ್ರಚಾರ ಮಾಡಲಿದ್ದು, ಹೊಸಪೇಟೆ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿಯಲ್ಲಿ ಪ್ರವಾಸ ಮಾಡಲಿದ್ದಾರೆಂದು ಪ್ರಚಾರ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಪ್ರವಾಸಕ್ಕೆ ಮುನ್ನವೇ ರಾಜ್ಯ ಕಾಂಗ್ರೆಸ್‍ನಲ್ಲಿ ಅಸಮಾಧಾನ ಸ್ಫೋಟ

    ಯಾವುದೇ ಷರತ್ತು ಒಪ್ಪಂದ ಒತ್ತಡವಿಲ್ಲದೇ ಆನಂದಸಿಂಗ್ ಮತ್ತು ನಾಗೇಂದ್ರ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಾವೂ ಸಹ ಸದ್ಯಕ್ಕೆ ಟಿಕೆಟ್ ನೀಡುವ ಆಶ್ವಾಸನೆ ನೀಡಿಲ್ಲ ಮತ್ತು ಜೊತೆಗೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಯಾರ ಮೇಲೆಯೂ ಗಂಭಿರ ಆರೋಪಗಳಿಲ್ಲ. ರಸ್ತೆಯಲ್ಲಿ ಬರೋ ದೇವಾಲಯಗಳಿಗೆ, ಗುಡಿಗಳಿಗೆ ಭೇಟಿ ನೀಡೋದು ನಮ್ಮ ಸಂಸ್ಕೃತಿ, ಹಾಗಾಗಿ ರಾಹುಲ್ ಗಾಂಧಿ ಸಂಚರಿಸುವ ಮಾರ್ಗದಲ್ಲಿ ಬರುವ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ ಅಂತಾ ತಿಳಿಸಿದರು. ಇದನ್ನೂ ಓದಿ: ಸೆಲ್ಫಿ ಕ್ಲಿಕ್ಕಿಸುತ್ತಿದ್ದ ವಿದ್ಯಾರ್ಥಿಯ ಕೈಗೆ ಏಟು ಕೊಟ್ಟ ಸಚಿವ ಡಿಕೆಶಿ

    ಡಿಕೆ ಶಿವಕುಮರ್ ಸೆಲ್ಫಿ ಕ್ಲಿಕ್ಕಿಸಲು ಬಂದವರ ಮೇಲೆ ಹೊಡೆದಿರುವುದು ಇದೇ ಮೊದಲಲ್ಲ. ಈ ಹಿಂದೆ ಕಳೆದ ನವೆಂಬರ್ ನಲ್ಲಿ ಬೆಳಗಾವಿಯ ಶೇಖ್ ಹೋಮಿಯೋಪತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಹಕ್ಕು ದಿನಾಚರಣೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬ ಹಿಂದಿನಿಂದ ಸೆಲ್ಫಿ ಕ್ಲಿಕ್ಕಿಸಲು ಮುಂದಾಗಿದ್ದ. ಇದನ್ನು ನೋಡಿದ ಡಿಕೆ ಶಿವಕುಮಾರ್ ಸಿಟ್ಟಾಗಿ ಆತನ ಕೈಗೆ ಹೊಡೆದಿದ್ದರು. ಕೂಡಲೇ ವಿದ್ಯಾರ್ಥಿ ಆ ಸ್ಥಳದಿಂದ ಓಡಿ ಹೋಗಿದ್ದ. ಇದನ್ನೂ ಓದಿ: ‘ಕೈ’ ಹಿಡಿದ ಆನಂದ್ ಸಿಂಗ್ ಮತ್ತು ಟೀಂ- ಮತ್ತಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್ಸಿಗಂತೆ!

    https://www.youtube.com/watch?v=8S9cLKIhKYg

    https://youtu.be/uJyAgNhH1MQ