Tag: ಡಿ.ಜೆ ಹಳ್ಳಿ

  • ಪ್ಲೀಸ್ ನಮ್ಮ ಮಕ್ಕಳನ್ನು ಬಿಡಿಸಿ ಕೊಡಿ- ಅಖಂಡಗೆ ಪೋಷಕರು ಮನವಿ

    ಪ್ಲೀಸ್ ನಮ್ಮ ಮಕ್ಕಳನ್ನು ಬಿಡಿಸಿ ಕೊಡಿ- ಅಖಂಡಗೆ ಪೋಷಕರು ಮನವಿ

    ಬೆಂಗಳೂರು: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಅವರು ಇಂದು ಡಿ.ಜೆ ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಈ ವೇಳೆ ಸ್ಟೇಷನ್ ಮುಂದೆ ಮತ್ತೆ ಭಾರೀ ಹೈಡ್ರಾಮ ನಡೆಯಿತು.

    ನಮ್ಮ ಮಕ್ಕಳನ್ನು ಹಿಡಿದು ತಂದಿದ್ದಾರೆ. ಅವರೆಲ್ಲ ಯಾವ ತಪ್ಪು ಕೂಡ ಮಾಡಿಲ್ಲ. ಸುಖಾ ಸುಮ್ಮನೆ ಮಕ್ಕಳನ್ನು ಎಳೆದು ತಂದಿದ್ದಾರೆ. ಅವರನ್ನ ಬಿಡಿಸಿಕೊಡಿ ಎಂದು ಪೋಷಕರು ಶಾಸಕರಿಗೆ ಮುತ್ತಿಗೆ ಹಾಕಿದ ಪ್ರಸಂಗ ನಡೆಯಿತು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ, ನಾನೇ ಠಾಣೆಗೆ ಬಂದಿದ್ದೆ. ನಮ್ಮ ಕ್ಷೇತ್ರದ ಅಮಾಯಕರಿಗೆ ತೊಂದರೆ ಆಗಬಾರದು. ಅಪರಾಧಿಗಳಿಗೆ ಶಿಕ್ಷೆಯಾಗಲಿ. ವಿಡಿಯೋಗಳಲ್ಲಿ ಇರೋರಿಗೆ ಶಿಕ್ಷೆಯಾಗಲಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಆರೋಪಿಗಳ ಬೆನ್ನಿಗೆ ನಿಂತ್ರಾ ಅನ್ನೋ ಅನುಮಾನ ಮೂಡಿದೆ.

    ನಮ್ಮ ಕ್ಷೇತ್ರದಲ್ಲಿ ಅಮಾಯಕರು ಮತ್ತು ಕೂಲಿ ಕಾರ್ಮಿಕರು ಇದ್ದಾರೆ. ನನಗೆ ಯಾವ ಹೈಕಮಾಂಡ್ ಒತ್ತಡವೂ ಇಲ್ಲ. ಘಟನೆಯಲ್ಲಿ ತೊಂದರೆಗೆ ಒಳಗಾಗಿರುವವರಿಗೆ ಪರಿಹಾರ ಕೊಡಲು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.

    ಒಟ್ಟಿನಲ್ಲಿ ಬಂಧಿತ ಗಲಭೆಕೊರರಲ್ಲಿ ಅಮಾಯಕರನ್ನ ಬಿಡಲು ಶಾಸಕರು ಠಾಣೆಗೆ ಬಂದು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಹೋಗಿದ್ದಾರೆ. ಅಷ್ಟೇ ಅಲ್ಲ ಶಾಸಕರ ಮಾತಿನಂತೆ ಒಂದಷ್ಟು ಬಂಧಿತ ಗಲಭೆಕೊರರನ್ನ ಬಿಡುಗಡೆ ಮಾಡಲು ತಯಾರಿ ಕೂಡ ಮಾಡಿಕೊಳ್ಳಲಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

  • ಬೆಂಗಳೂರು ಗಲಭೆ – ಕಾಂಗ್ರೆಸ್ ಶೋಧಿಸಿದ ‘ಸತ್ಯ’ ಏನು?

    ಬೆಂಗಳೂರು ಗಲಭೆ – ಕಾಂಗ್ರೆಸ್ ಶೋಧಿಸಿದ ‘ಸತ್ಯ’ ಏನು?

    ಬೆಂಗಳೂರು: ರಾಜಧಾನಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಡಿಸಿಎಂ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಿತ್ತು. ಈ ಸಮಿತಿಯ ವರದಿ ಇನ್ನೆರಡು ದಿನಗಳಲ್ಲಿ ಕೆಪಿಸಿಸಿಯ ಕೈ ಸೇರಲಿದೆ.

    ಇಡೀ ಘಟನೆ ಕಾಂಗ್ರೆಸ್ ಮೂವರು ನಾಯಕರ ವಿರುದ್ಧ ಸುತ್ತುತ್ತಿದೆ. ಪಕ್ಷದ ಮುಖಂಡರ ಒಳಜಗಳದಿಂದ ಈ ಗಲಾಟೆಯ ಇಷ್ಟು ದೊಡ್ಡಮಟ್ಟದ ರೂಪ ಪಡೆದುಕೊಂಡಿರುವ ಬಗ್ಗೆ ಸತ್ಯ ಶೋಧನ ಸಮಿತಿ ನೀಡಿದ ವರದಿಯಲ್ಲಿದೆ ಎಂಬುವುದು ತಿಳಿದು ಬಂದಿದೆ.

    ಕಾಂಗ್ರೆಸ್ ಶೋಧಿಸಿದ ‘ಸತ್ಯ’: ಬೆಂಗಳೂರು ಗಲಭೆಗೆ ಕಾಂಗ್ರೆಸ್ ನಾಯಕರ ನಡುವಿನ ಒಳ ಜಗಳವೇ ಕಾರಣವಾಗಿದೆ. ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟ ಮೂವರು ನಾಯಕರ ವರ್ತನೆಯಿಂದಾಗಿ ಈ ಪ್ರಮಾಣದ ಗಲಾಟೆ ನಡೆದಿದೆ. ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್ ಕಾರ್ಪೊರೇಟರ್ ಗಳು ಕ್ಷೇತ್ರದಲ್ಲಿ ತಮ್ಮದೇ ಹಿಡಿತ ಇರಬೇಕು ಎಂದು ಪರಸ್ಪರ ಕತ್ತಿ ಮಸೆದಿದ್ದಾರೆ. ಒಬ್ಬರ ವಿರುದ್ದ ಒಬ್ಬರು ಹಗೆ ಸಾಧಿಸಿ ಎರಡನೇ ಹಂತದ ನಾಯಕರನ್ನ ಎತ್ತಿ ಕಟ್ಟಿದ್ದು ಈ ಗಲಭೆಗೆ ಕಾರಣ ಸಮಿತಿ ನೀಡಿದ ವರದಿಯಲ್ಲಿದೆ ಎನ್ನಲಾಗಿದೆ.

    ಶಾಸಕರ ಸಂಬಂಧಿ ಧಾರ್ಮಿಕ ಭಾವನೆ ಕೆರಳಿಸುವ ಪೋಸ್ಟರ್ ಹಾಕಿದ್ದರೂ ಅದನ್ನು ಸರಿಪಡಿಸುವ ಪ್ರಯತ್ನ ಮಾಡದಿರುವುದು. ತಮ್ಮ ಮೇಲೆ ನೇರ ಆರೋಪ ಬರಬಾರದು ಅನ್ನೋ ಕಾರಣಕ್ಕೆ ಬೇರೆ ಬೇರೆ ಸಂಘಟನೆಗಳ ಮೂಲಕ ಗಲಭೆಗೆ ಕುಮ್ಮಕ್ಕು ನೀಡಿರುವ ಸಾಧ್ಯತೆಗಳಿವೆ.

    ಸಂಪತ್‍ರಾಜ್ ವಿರುದ್ಧ ಕೈ ಆರೋಪಪಟ್ಟಿ: ಮಾಜಿ ಮೇಯರ್ ಸಂಪತ್‍ರಾಜ್ ವಿರುದ್ಧ ಇಡೀ ಘಟನೆಯ ಪ್ರಮುಖ ಆರೋಪ ಕೇಳಿ ಬಂದಿದೆ. ಸಂಪತ್ ರಾಜ್ ಕಳೆದ ವಿಧಾನಭಾ ಚುನಾವಣೆಯಲ್ಲಿ ಪುಲಿಕೇಶಿನಗರದ ಟಿಕೆಟ್ ಕೇಳಿದ್ದರು. ಆದರೆ ಒಲ್ಲದ ಮನಸ್ಸಿನಿಂದ ಸಿ.ವಿ.ರಾಮನ್ ನಗರದಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಚುನಾವಣೆ ಸೋತ ನಂತರ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲೆ ಸಂಪತ್‍ರಾಜ್ ಓಡಾಟ ನಡೆಸಿದ್ದರು.

    ಸಂಪತ್ ರಾಜ್ ಮುಂದಿನ ಚುನಾವಣೆಗೆ ಪುಲಿಕೇಶಿನಗರ ಟಿಕೆಟ್ ನನಗೆ ಎಂದು ಹೇಳಿಕೊಂಡು ಓಡಾಟ ನಡೆಸಿದ್ದಾರೆ ಎನ್ನಲಾಗಿದೆ. ಮೇಯರ್ ಆಗಿದ್ದ ನಾನು ನಿಮ್ಮ ಮಾತು ಯಾಕೆ ಕೇಳಬೇಕು ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಸೆಡ್ಡು ಹೊಡೆದಿದ್ದರಂತೆ. ತಮ್ಮ ಜೊತೆಗೆ ಕ್ಷೇತ್ರದ ಉಳಿದ ನಾಲ್ವರು ಕಾಂಗ್ರೆಸ್ ಕಾರ್ಪೋರೇಟರ್ ಗಳನ್ನ ಕಟ್ಟಿಕೊಂಡು ಅಖಂಡ ವಿರುದ್ಧ ರಾಜಕಾರಣ ಮಾಡಿದ್ದರು. ಗಲಭೆಗೆ ಕಾರಣವಾದ ದಿನ ಪ್ರಚೋದನೆ ನೀಡಿರುವ ಬಗ್ಗೆ ಪೊಲೀಸರಿಗೆ ಸಂಪತ್ ರಾಜ್ ಬಗ್ಗೆ ಪ್ರಬಲವಾದ ಅನುಮಾನ ವ್ಯಕ್ತವಾಗಿದೆ. ಒಂದು ವೇಳೆ ಪ್ರಕರಣದಲ್ಲಿ ಸಂಪತ್‍ರಾಜ್ ಕೈವಾಡ ಸಾಬೀತಾದರೆ ಕ್ರಮ ಕೈಗೊಳ್ಳಬಹುದು ಎಂದು ಸತ್ಯ ಶೋಧನೆ ವರದಿಯಲ್ಲಿದೆ ಎಂದು ತಿಳಿದು ಬಂದಿದೆ.

  • ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್​ಗಳಿಗೆ ನೋಟಿಸ್

    ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್​ಗಳಿಗೆ ನೋಟಿಸ್

    – ಮಾಜಿ ಮೇಯರ್ ಆಪ್ತ ವಶಕ್ಕೆ
    – ಮಧ್ಯರಾತ್ರಿ ಮತ್ತೆ 30 ಮಂದಿ ಬಂಧನ

    ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ ಗಳಿಗೆ ನೋಟಿಸ್ ನೀಡಿದ್ದಾರೆ. ಮಾಜಿ ಮೇಯರ್ ಸಂಪತ್‍ರಾಜ್ ಮತ್ತು ಪುಲಕೇಶಿನಗರ ಕಾರ್ಪೋರೇಟರ್ ಅಬ್ದುಲ್ ರಕೀಬ್ ಝಾಕೀರ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

    ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ ಮನೆ ಮೇಲಿನ ದಾಳಿ, ಡಿ ಜೆ ಹಳ್ಳಿ, ಕೆಜಿಹಳ್ಳಿ ಮತ್ತು ಕಾವಲ್‍ಬೈರಸಂದ್ರದಲ್ಲಿ ನಡೆದಿದ್ದ ದಳ್ಳುರಿ ಹಿಂದೆ ರಾಜಕೀಯ ದ್ವೇಷದ ಕಾರಣವಿದೆ ಎಂಬ ಕಾರಣಕ್ಕಾಗಿ ಇಬ್ಬರು ಕಾಂಗ್ರೆಸ್ ಪಾಲಿಕೆ ಸದಸ್ಯರನ್ನ ವಿಚಾರಣೆಗೆ ಕರೆಯಲಾಗಿದೆ. ಗಲಭೆ ಸಂಬಂಧ ಸಂಪತ್‍ರಾಜ್ ಆಪ್ತ ಅರುಣ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅರುಣ್ ಬಳಿ ಇದ್ದ ಮೊಬೈಲ್‍ನ್ನು ಸಂಪತ್‍ರಾಜ್ ಬಳಸುತ್ತಿದ್ದರು ಮತ್ತು ಆ ಮೊಬೈಲ್‍ನಲ್ಲಿ ಗಲಭೆಗೆ ಸಂಬಂಧಿಸಿದ ಮಹತ್ವದ ಸಾಕ್ಷ್ಯಗಳಿರಬಹುದು ಎಂಬ ಶಂಕೆಯಿಂದ ಖಾಕಿಗಳು ವಶಕ್ಕೆ ಪಡೆದಿದ್ದಾರೆ. ಮೊಬೈಲ್‍ನಲ್ಲಿರುವ ಮಾಹಿತಿಗಳನ್ನು ಪೊಲೀಸರು ಕಲೆ ಹಾಕಿದ್ದು ಅದರಲ್ಲಿನ ಸಾಕ್ಷ್ಯಗಳನ್ನ ಆಧರಿಸಿ ಕಾರ್ಪೋರೇಟರ್ ಗಳ ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ಬೆಂಗಳೂರು ಗಲಭೆ ಹಿಂದೆ ಉಗ್ರ ಸಂಘಟನೆಯ ನಂಟು – ಏನಿದು ಅಲ್ ಹಿಂದ್?

    ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ವಿರುದ್ಧ ದೂರು ನೀಡಿದ್ದ ಫಿದೋಸ್ ಪಾಷಾ ಅನ್ನೋರ ಸ್ಕೂಟರ್‍ಗೂ ಡಿಜೆ ಹಳ್ಳಿ ಠಾಣೆ ಎದುರು ಬೆಂಕಿ ಹಚ್ಚಲಾಗಿತ್ತು. ದಂಗೆ ಸಂಬಂಧ ಮಧ್ಯರಾತ್ರಿ ಮತ್ತೆ 30 ಮಂದಿಯನ್ನು ಡಿಜೆ ಹಳ್ಳಿ ಮತ್ತು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಗಲಭೆಯಲ್ಲಿ ಬಂಧಿತರಾದವರ ಸಂಖ್ಯೆ 380ಕ್ಕೆ ಏರಿಕೆ ಆಗಿದೆ. ಇದನ್ನೂ ಓದಿ: ಕೊತ್ತಂಬರಿ, ಕರಿಬೇವಿನ ಸೊಪ್ಪು ತರೋಕೆ ಹೋದವ್ರ ಲಿಸ್ಟ್ ಇದೆ: ಅಶೋಕ್

  • ಮೂರು ಕಾರಣಗಳಿಗೆ ಹೊತ್ತಿ ಉರಿಯಿತು ಬೆಂಗಳೂರು- ವಿಚಾರಣೆ ವೇಳೆ ಬಾಯಿಬಿಟ್ಟ ಕಿರಾತಕರು

    ಮೂರು ಕಾರಣಗಳಿಗೆ ಹೊತ್ತಿ ಉರಿಯಿತು ಬೆಂಗಳೂರು- ವಿಚಾರಣೆ ವೇಳೆ ಬಾಯಿಬಿಟ್ಟ ಕಿರಾತಕರು

    ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ಕೆಲ ವಿಚಾರಗಳನ್ನು ಬಾಯಿ ಬಿಟ್ಟಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣಗಳನ್ನ ಕೊಟ್ಟಿದ್ದಾರೆ. ಮೂರು ಕಾರಣಗಳಿಂದಾಗಿ ಬೆಂಗಳೂರು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ.

    ಬೆಂಗಳೂರಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣ ಕೊಟ್ಟ ಕಿರಾತಕರು!
    1. ಎನ್‍ಆರ್ ಸಿ ಸಿಟ್ಟೇ ಬೆಂಗಳೂರು ಗಲಭೆಗೆ ಕಾರಣವಂತೆ
    2. ‘ನಮ್ಮನ್ನು ದೇಶ ಬಿಟ್ಟು ಓಡಿಸ್ತಾರೆ, ನಾವು ಹುಟ್ಟಿದ್ದು ಇಲ್ಲೇ’
    3. ‘ನಮಗೆ ಸ್ವಾತಂತ್ರ್ಯ ಇಲ್ವಾ? ನಾವ್ಯಾಕೆ ದೇಶ ಬಿಡಬೇಕು?’

    ಗಲಾಟೆ ನಡೆದ ಸ್ಥಳದಲ್ಲಿ ಮೂರು ಪ್ರಚೋದನೆಯ ಮಾತುಗಳನ್ನು ಕೇಳಿದ ಕಿಡಿಗೇಡಿಗಳು ದೊಂಬಿ ಎಬ್ಬಿಸಿದ್ದಾರೆ. ನಮ್ಮ ಕೋಪವನ್ನು ಗಲಭೆ ಮೂಲಕ ತೀರಿಸಿಕೊಂಡಿದ್ದೇವೆ ಎಂದು ಕಿಡಿಗೇಡಿಗಳು ಪೊಲೀಸರ ಮುಂದೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ನವೀನ್ ಆಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣದ ಕುರಿತು ಕೆಲ ಪೋಸ್ಟ್ ಮಾಡಿಕೊಂಡಿದ್ದು, ಗಲಭೆಗೆ ಕಾರಣವಾಗಿದೆ.

  • ಬೆಂಗ್ಳೂರಲ್ಲಿ ನಡೆದ ಧಾರ್ಮಿಕ ಮತಾಂಧತೆಯನ್ನು ಖಂಡಿಸುತ್ತೇನೆ: ಪ್ರಕಾಶ್ ರಾಜ್

    ಬೆಂಗ್ಳೂರಲ್ಲಿ ನಡೆದ ಧಾರ್ಮಿಕ ಮತಾಂಧತೆಯನ್ನು ಖಂಡಿಸುತ್ತೇನೆ: ಪ್ರಕಾಶ್ ರಾಜ್

    ಬೆಂಗಳೂರು: ಸಿಲಿಕಾನ್ ಸಿಟಿಯ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯಲ್ಲಿ ನಡೆದ ಘಟನೆಯನ್ನು ಖಂಡಿಸುವುದಾಗಿ ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.

    ಬೆಂಗಳೂರು ಗಲಭೆಯ ಸಂಬಂಧ ಟ್ವೀಟ್ ಮಡಿರುವ ಅವರು, ಬೆಂಗಳೂರಿನಲ್ಲಿ ನಡೆದ ಗಲಭೆ ಅನಾಗರಿಕವಾದದ್ದಾಗಿದೆ. ಈ ಧಾರ್ಮಿಕ ಮತಾಂಧತೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕಾನೂನನ್ನು ಕೈಗೆ ತೆಗದುಕೊಂಡ ಪ್ರಚೋದರಕರು ಹಾಗೂ ಗೂಂಡಾಗಳಿಗೆ ಕಠಿಣ ಶಿಕ್ಷೆಯಾಗಬೇಕು. ಈ ಸಮಾಜ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಗರಂ ಆಗಿದ್ದಾರೆ.

    ನಡೆದಿದ್ದೇನು?
    ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿ ಎಂದು ಹೇಳಲಾಗುತ್ತಿರುವ ನವೀನ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಸಮುದಾಯದ ವಿರುದ್ಧ ಪೋಸ್ಟ್ ಹಾಕಿದ್ದನೆಂದು ಸಿಟ್ಟಿಗೆದ್ದ ಉದ್ರಿಕ್ತರ ಗುಂಪು ಶಾಸಕರ ಮನೆ ಹಾಗೂ ಎರಡು ಪೊಲೀಸ್ ಠಾಣೆಗಳನ್ನು ಧ್ವಂಸಗೊಳಿಸಿವೆ. ಪ್ರಕರಣ ಸಂಬಂಧ ಈ ಈಗಾಗಲೇ ಹಲವರನ್ನು ಬಂಧಿಸಲಾಗಿದೆ.

    ಘಟನೆಯಿಂದ ಪೊಲೀಸ್ ವಾಹನ, ಸಾರ್ವಜನಿಕರ ವಾಹನ ಸೇರಿ ಒಟ್ಟು 52 ವಾಹನಗಳಿಗೆ ಹಾನಿಯಾಗಿದೆ. 2 ಇನ್ನೋವಾ, 2 ಕೆಎಸ್‍ಆರ್‍ಪಿ ವ್ಯಾನ್, 1 ಸಿಎಆರ್ ವ್ಯಾನ್, 6 ಪೊಲೀಸ್ ಜೀಪ್, ಒಂದು ಚೀತಾ ಬೈಕ್, ಸ್ಟೇಷನ್ ಮುಂದೆ ಜಪ್ತಿ ಮಾಡಿ ನಿಲ್ಲಿಸಿದ್ದ 30 ಇತರೆ ಬೈಕ್, ಒಂದು ಆಟೋ, 2 ಕಾರು, 1 ಬೈಕ್ ಭಸ್ಮವಾಗಿದೆ. ಶಾಸಕರ ಮೂರಂತಸ್ತಿನ ಮನೆ, ಕಚೇರಿಗೆ ಬೆಂಕಿ, ಡಿಜೆ ಹಳ್ಳಿ ಠಾಣೆಗೆ ಬೆಂಕಿ, ಕೆಜಿ ಹಳ್ಳಿ ಠಾಣೆ ಧ್ವಂಸವಾಗಿದ್ದು, ಹತ್ತಕ್ಕೂ ಹೆಚ್ಚು ಅಂಗಡಿಗಳು ಬೆಂಕಿಗಾಹುತಿಯಾಗಿವೆ.

  • ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡ್ಬಾರ್ದು- ಗಲಭೆಗೆ ಡಿಕೆಶಿ ಖಂಡನೆ

    ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡ್ಬಾರ್ದು- ಗಲಭೆಗೆ ಡಿಕೆಶಿ ಖಂಡನೆ

    ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಕೃತ್ಯವನ್ನು ಖಂಡಿಸುತ್ತೇನೆ. ಯಾರೂ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

    ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಕೂಡ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು. ನಿನ್ನೆ ನಡೆದ ಘಟನೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ. ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡಬಾರದು. ಪೊಲೀಸ್ ಠಾಣೆಯ ಆಸ್ತಿ- ಪಾಸ್ತಿಗೆ ಮಾಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ದುಷ್ಕರ್ಮಿಗಳ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆ – ಭಯದಿಂದ ಬಾತ್‍ರೂಮಿನಲ್ಲಿ 3 ಗಂಟೆ ಬಚ್ಚಿಟ್ಟುಕೊಂಡಿದ್ದ ಕುಟುಂಬ

    ಪ್ರಚೋದನಕಾರಿ ಪೋಸ್ಟ್ ಕೂಡ ಸರಿಯಲ್ಲ. ಅದು ಕೂಡ ತಪ್ಪು. ಈ ಸಂಬಂಧ ಇಂದು ಬೆಂಗಳೂರು ಶಾಸಕರ ಸಭೆ ಕರೆದಿದ್ದೇನೆ. ಅಲ್ಲಿ ಚರ್ಚೆ ಮಾಡುತ್ತೇವೆ. ನಮ್ಮ ಶಾಸಕರು ಕೂಡ ಸ್ಥಳಕ್ಕೆ ಹೋಗಿ ಶಾಂತಿ ನೆಲಸುವಂತೆ ಪ್ರಯತ್ನ ಮಾಡಿದ್ದಾರೆ. ಆದರೆ ಯಾರೂ ಕಂಟ್ರೋಲ್‍ಗೆ ಸಿಕ್ಕಿಲ್ಲ. ಬಹಳ ವ್ಯವಸ್ಥಿತವಾದ ಸಂಚು ಇದೆ ಎಂಬುದನ್ನು ಮಾಧ್ಯಮದಲ್ಲಿ ನೋಡಿದ್ದೇನೆ ಎಂದರು.  ಇದನ್ನೂ ಓದಿ: ಕೆ.ಜಿ.ಹಳ್ಳಿ ಗಲಭೆ ಪ್ರಕರಣ – ಪೊಲೀಸರ ಗೋಲಿಬಾರ್‌ಗೆ ಮೂವರು ಬಲಿ, 110 ಮಂದಿ ಅರೆಸ್ಟ್

    ಘಟನೆಯನ್ನು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಖಂಡಿಸುತ್ತದೆ. ಈ ಸಂಬಂಧ ಸರ್ಕಾರ ಕಾನೂನು ಕ್ರಮಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳಲಿ. ನಮ್ಮದು ಯಾವುದೇ ರೀತಿಯ ಅಭ್ಯಂತರವಿಲ್ಲ. ಸಂಪೂರ್ಣ ಸಹಕಾರವನ್ನು ಸರ್ಕಾರಕ್ಕೆ ಕೊಡುವುದಾಗಿ ತಿಳಿಸಿದರು. ಇದನ್ನೂ ಓದಿ: ಕೆಜಿ ಹಳ್ಳಿ ಗಲಭೆ ಪ್ರಕರಣ – ಎಸ್‍ಡಿಪಿಐ ಮುಖಂಡ ಅರೆಸ್ಟ್

    ಬಿ ಎಲ್ ಸಂತೋಷ ಏನ್ ರಾಜಕಾರಣ ಮಾಡ್ತಾರೆ ಮಾಡಲಿ. ರಾತ್ರಿಯಿಂದ ನಾನು ಮಾಹಿತಿ ಪಡೆದಿದ್ದೇನೆ. ಸಿಟಿ ರವಿ ಅಥವಾ ಇನ್ಯಾರದ್ದೋ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಗರಂ ಆದರು. ಇದನ್ನೂ ಓದಿ:  ಬೆಂಕಿ ಹಚ್ಚೋದು ನಮ್ಮ ಸಂಸ್ಕೃತಿಯಲ್ಲ, ನೆಲದ ಕಾನೂನೇ ಅಂತಿಮ: ಖಾದರ್

  • ಮತ್ತೊಂದು ಕೊರೊನಾ ಹಬ್ ಆಗುತ್ತಾ ಡಿಜೆ ಹಳ್ಳಿ?

    ಮತ್ತೊಂದು ಕೊರೊನಾ ಹಬ್ ಆಗುತ್ತಾ ಡಿಜೆ ಹಳ್ಳಿ?

    ಬೆಂಗಳೂರು: ಪಾದರಾಯನಪುರ ಆಯ್ತು, ಶಿವಾಜಿನಗರ ಆಯ್ತು ಈಗ ಡಿಜೆ ಹಳ್ಳಿ ಕೊರೊನಾ ಹಬ್ ಆಗುತ್ತಾ ಎಂಬ ಅನುಮಾನ ಶುರುವಾಗಿದೆ. ರೋಗಿ ನಂ 2180 ಹಿಸ್ಟರಿ ಬೆಂಗಳೂರನ್ನೇ ಬೆಚ್ಚಿ ಬೀಳಿಸುವಂತಿದೆ.

    ಹೌದು. ಬೆಂಗಳೂರಿನ ಗ್ರೀನ್ ಝೂನ್ ವಾರ್ಡ್ ಡಿಜೆ ಹಳ್ಳಿ. ಆದರೆ ರೋಗಿ-2180 ನಿಂದಾಗಿ ಈಗ ಕಂಟೈನ್ಮೆಂಟ್ ಝೋನ್ ಆಗಿದೆ. 34 ವರ್ಷದ ಸೊಂಕಿತ ಮಹಿಳೆ ಸೋಮವಾರ ಉಸಿರಾಟದ ಸಮಸ್ಯೆ ಎಂದು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ್ರು. ಬೋರಿಂಗ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಸೋಂಕು ಪತ್ತೆಯಾಗಿದೆ.

    ಮೂಲತಃ ಡಿಜೆಹಳ್ಳಿ ಸ್ಲಂ ಒಂದರಲ್ಲಿ ವಾಸವಿರುವ ಈಕೆ ಸ್ಲಂ ಬೋರ್ಡ್ ನವರು ನೀಡಿರುವ ಬಿಲ್ಡಿಂಗ್ ನಲ್ಲಿ ವಾಸವಿದ್ರು. ಇಲ್ಲಿ ನಾಲ್ಕು ಬಿಲ್ಡಿಂಗ್ ಇದ್ದು, ಒಂದೇ ಬಿಲ್ಡಿಂಗ್ ನಲ್ಲಿ ನಾಲ್ಕು ಮನೆಗಳಿವೆ. ಇದೀಗ ಈ ನಾಲ್ಕು ಬಿಲ್ಡಿಂಗ್ ನಲ್ಲಿ ವಾಸವಾಗಿದ್ದ ಜನರಿಗೆ ಭಯ ಶುರುವಾಗಿದೆ. ಈಕೆ ಸೋಂಕಿನ ಮೂಲ ಏನು ಎಂಬುದು ಗೊತ್ತಾಗುತ್ತಿಲ್ಲ. ಈಕೆಯ ಕೇಸ್ ಹಿಸ್ಟರಿ ಭಯಂಕರವಾಗಿದ್ದು ಆರೋಗ್ಯಾಧಿಕಾರಿಗಳಲ್ಲಿ ಆತಂಕ ಹೆಚ್ಚಿಸಿದೆ.

    ಮಹಿಳೆಗೆ ಸೊಂಕು ಪತ್ತೆಯಾಗಿರುವ ಬಗ್ಗೆ ತಲೆಕೆಡಿಸಿಕೊಂಡ ಆರೋಗ್ಯಾಧಿಕಾರಿಗಳು, ಕೇಸ್ ಹಿಸ್ಟರಿ ಪತ್ತೆ ಮಾಡಿದ್ದಾರೆ. 10 ದಿನದ ಹಿಂದೆ ರಾಮನಗರದ ಚನ್ನಪಟ್ಟಣಕ್ಕೆ ಮಹಿಳೆ ಪ್ರಯಾಣ ಮಾಡಿದ್ದರು. ಆದರೆ ಯಾವುದರಲ್ಲಿ ಪ್ರಯಾಣ ಮಾಡಿದ್ರು, ಏಕೆ ಹೋಗಿದ್ರು ಯಾರನ್ನು ಭೇಟಿ ಮಾಡಿದ್ರು, ಅಲ್ಲಿ ಏನಾದ್ರು ಸೋಂಕು ಬಂತಾ ಎಂಬ ಅನುಮಾನ ಹುಟ್ಟಿದೆ.

    ಈ ಮಹಿಳೆ ತರಕಾರಿ ವ್ಯಾಪಾರ ಮಾಡ್ತಾ ಇದ್ದು, ಯಾವೆಲ್ಲಾ ಜಾಗದಲ್ಲಿ ಓಡಾಡಿದ್ದಾರೆ ಎಂಬ ತನಿಖೆ ಆರೋಗ್ಯಾಧಿಕಾರಿಗಳು ಮಾಡ್ತಾ ಇದ್ದಾರೆ. ಇಲ್ಲಿ ಸಮುದಾಯ ಕೊರೊನಾ ಹಬ್ಬಿದೆಯಾ ಎಂಬ ಆತಂಕ ಕೂಡ ಆರೋಗ್ಯಾಧಿಕಾರಿಗಳಲ್ಲಿ ಮೂಡಿದೆ. ಈ ಮಹಿಳೆಯದ್ದು ಅವಿಭಕ್ತ ಕುಟುಂಬವಾಗಿದ್ದು, ನಾಲ್ವರು ಮಕ್ಕಳು ಹಾಗೂ ತಂಗಿ ಮಕ್ಕಳು ಸೇರಿ ಒಟ್ಟು 6 ಜನ ವಾಸಿಸುತ್ತಿದ್ದಾರೆ. ಇವರು ಡಿಜೆ ಹಳ್ಳಿಯ ಪಂಚಾತ್ ಹಳ್ಳಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಹೀಗಾಗಿ ತರಕಾರಿ ವ್ಯಾಪಾರ ಮಾಡುವಾಗ ಸೋಂಕಿನ ಲಕ್ಷಣ ಇರುವವರನ್ನ ಮಾತಾಡಿಸಿದ್ರಾ ಎಂಬ ಅನುಮಾನ ಹುಟ್ಟಿಕೊಂಡಿದೆ.

    ಮಹಿಳೆಯ ಮನೆಯಲ್ಲಿ ಮಗಳ ಎಂಗೇಜ್ ಮೆಂಟ್ ಆಗಿದೆ ಎಂದು ಆರೋಗ್ಯಾಧಿಕಾರಿಗಳು ಹೇಳುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಮಾಗಡಿ ಮೂಲದವರು ಬಂದಿದ್ದರು. ಈ ವೇಳೆ ಸೋಂಕು ಹರಡಿದೆಯಾ ಎಂಬ ಆತಂಕ ಕೂಡ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಆಯಾಮಗಳಲ್ಲಿ ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ.

    ಒಟ್ಟಿನಲ್ಲಿ ಮಹಿಳೆಯಿಂದಾಗಿ ಡಿಜೆಹಳ್ಳಿ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಾ, ನಿಯಂತ್ರಣಕ್ಕೆ ಆರೋಗ್ಯಾಧಿಕಾರಿಗಳು ನಯಾ ಪ್ಲಾನ್ ಹುಡುಕುತ್ತಾರ ಕಾದು ನೋಡಬೇಕಿದೆ.