Tag: ಡಿ.ವಿ.ಸದಾನಂದಗೌಡ

  • ಸಿದ್ದರಾಮಯ್ಯರನ್ನ ಹಡಗಿನಲ್ಲಿ ಅಂಡಮಾನ್‍ಗೆ ಕಳುಹಿಸಿಕೊಡಬೇಕು: ಡಿ.ವಿ.ಸದಾನಂದಗೌಡ

    ಸಿದ್ದರಾಮಯ್ಯರನ್ನ ಹಡಗಿನಲ್ಲಿ ಅಂಡಮಾನ್‍ಗೆ ಕಳುಹಿಸಿಕೊಡಬೇಕು: ಡಿ.ವಿ.ಸದಾನಂದಗೌಡ

    – ಗೂಬೆ ಕೂರಿಸುವುದರಲ್ಲೂ ಸಿದ್ದರಾಮಯ್ಯ ನಿಸ್ಸೀಮರು

    ಬೆಂಗಳೂರು: ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹಡಗಿನಲ್ಲಿ ಅಂಡಮಾನ್, ನಿಕೋಬಾರ್​ಗೆ ಕಳುಹಿಸಬೇಕು. ಅಲ್ಲಿ ವೀರ್ ಸಾವರ್ಕರ್ ಹೇಗಿದ್ದರು ಎನ್ನುವುದು ಅವರಿಗೆ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಸಿದ್ದರಾಮಯ್ಯ ಅವರಿಗೆ ಬೇರೆ ಕೆಲಸ ಇಲ್ಲ. ರಾತ್ರಿಯಲ್ಲ ನಿದ್ದೆಗೆಟ್ಟು ಏನ್ಮಾಡಬೇಕು ಅಂತ ಯೋಚನೆ ಮಾಡುತ್ತಿರುತ್ತಾರೆ. ಇಂತಹ ಸಮಯದಲ್ಲಿ ಈ ರೀತಿಯ ಇತಿಹಾಸ ತಿರುಚುವ ಹೇಳಿಕೆ ನೀಡಿ ಅಪಹಾಸ್ಯಕ್ಕೆ ಈಡಾಗುತ್ತಿದ್ದಾರೆ. ಹಾಗಾಗಿ ಅವರು ಅಂಡಮಾನ್‍ಗೆ ಹೋಗಿ ವೀರ್ ಸಾವರ್ಕರ್ ವಾಸವಿದ್ದ ಜೈಲಿನ ಸ್ಥಿತಿಗತಿ ನೋಡಿಕೊಂಡು ಬರಬೇಕು. ಆಗ ಅವರಲ್ಲಿರುವ ಕೆಟ್ಟ ಬುದ್ಧಿ ಸರಿ ಹೋಗುತ್ತದೆ ಎಂದು ಕುಟುಕಿದರು.

    ಚರಿತ್ರೆಯನ್ನು ಮತ್ತೆ ತಾನೇ ಬರೆಯುತ್ತೇನೆ ಎಂಬ ಹುಂಬುತನದ ಕೆಲಸ ಸರಿಯಲ್ಲ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕಾಲದಲ್ಲಿ ವೀರ್ ಸಾವರ್ಕರ್ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಇಂದಿರಾ ಗಾಂಧಿ ಸಿದ್ದರಾಮಯ್ಯನವರ ನಾಯಕರಲ್ಲವೇ? ಸುಮ್ಮನೆ ಅವರ ಅಂಚೆ ಚೀಟಿ ಜಾರಿಗೆ ತರುತ್ತಿದ್ರಾ? ಸಿದ್ದರಾಮಯ್ಯ ಅವರನ್ನು 5 ವರ್ಷ ಮುಖ್ಯಮಂತ್ರಿಯಾಗಿ ಸಹಿಸಿಕೊಂಡಿರುವುದೇ ದೊಡ್ಡ ವಿಚಾರ ಎಂದು ವಾಗ್ದಾಳಿ ನಡೆಸಿದರು.

    ಗೂಬೆ ಕೂರಿಸುವದರಲ್ಲು ಸಿದ್ದರಾಮಯ್ಯನವರು ನಿಸ್ಸೀಮರು. ಕುಹಕದ ಮಾತು ಮತ್ತು ವಕ್ರ ಮಾತುಗಳನ್ನಾಡುವುದು ಅವರ ಕೆಲಸ. ಸಿದ್ದರಾಮಯ್ಯನವರು ಏನು ಅನ್ನೋದು ಕಾಂಗ್ರೆಸ್ಸಿವರಿಗೆ ಗೊತ್ತು. ಒಮ್ಮೆ ಅಂಡಮಾನ್, ನಿಕೋಬಾರ್ ಗೆ ಹೋಗಿ ಸಾವರ್ಕರ ಬಗ್ಗೆ ತಿಳಿಯಲಿ. ಸಾರ್ವಜಿಕರಿಂದ ಹಣ ಪಡೆದು ಅವರನ್ನು ಕಳುಹಿಸಿಕೊಡುವ ವ್ಯವಸ್ಥೆ ಮಾಡೋಣ ಎಂದರು.

    ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬೇಕು ಎನ್ನುವುದು ನಮ್ಮದು ಆದ್ಯತೆ. ಆದರೆ ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವನ್ನು ಅದಕ್ಕೆ ತಳಕು ಹಾಕುವುದು ಸರಿಯಲ್ಲ. ಇಂತಹ ಮಾತುಗಳಿಂದ ಜನರ ತಲೆ ಹಾಳು ಮಾಡುವ ಪ್ರವೃತ್ತಿ ಯಾರಿಗೂ ಶೋಭೆ ತರುವಂತದ್ದಲ್ಲ ಎಂದು ಗುಡುಗಿದರು.

    ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ವಿಳಂಭ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ಈಗಾಗಲೆ ಒಂದು ಹಂತದ ಹಣ ಬಿಡುಗಡೆಯಾಗಿದೆ. ಬಾಕಿ ಹಣ ಬಿಡುಗಡೆಗು ಸಿದ್ಧತೆ ನಡೆದಿದೆ. ರಾಜ್ಯ ಸರ್ಕಾರವು ಕೇಂದ್ರಕ್ಕೆ ಎಲ್ಲಾ ದಾಖಲೆಗಳನ್ನು ಸಲ್ಲಿಸಿದೆ. ಮುಂದಿನ ಹಂತದಲ್ಲಿ ಹಣ ಬಿಡುಗಡೆಯಾಗಲಿದೆ. ಮೊದಲ ಹಂತದಲ್ಲಿ ಕರ್ನಾಟಕ 1,200 ಕೋಟಿ ರೂ. ಹಾಗೂ ಬಿಹಾರ ರಾಜ್ಯಕ್ಕೆ 400 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.

    ಎಸ್.ಟಿ.ಸೋಮಶೇಖರ್ ಬಿಜೆಪಿ ಸೇರ್ಪಡೆಗೆ ಯಶವಂತಪುರ ಬಿಜೆಪಿ ಘಟಕ ಪರ ವಿರೋಧ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಅವರಿಗೆ ಟಿಕೆಟ್ ನೀಡಬೇಕಾ ಅಥವಾ ಬೇಡ್ವಾ ಎನ್ನುವ ತೀರ್ಮಾನ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ತಿಳಿಸಿದರು.

  • ಸೂಲಿಬೆಲೆ, ಡಿವಿಎಸ್ ಟ್ವೀಟ್ ವಾರ್ ರಿಪೋರ್ಟ್ ಪಡೆದ ಅಮಿತ್ ಶಾ

    ಸೂಲಿಬೆಲೆ, ಡಿವಿಎಸ್ ಟ್ವೀಟ್ ವಾರ್ ರಿಪೋರ್ಟ್ ಪಡೆದ ಅಮಿತ್ ಶಾ

    – ಕೇಂದ್ರ ಸಚಿವರಿಗೆ ಶಾ ಕ್ಲಾಸ್

    ನವದೆಹಲಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ನಡುವಿನ ವಾಕ್ ಸಮರ ಭಾರೀ ಸದ್ದು ಮಾಡಿದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಎಚ್ಚೆತ್ತುಕೊಂಡಿದೆ.

    ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೂಲಿಬೆಲೆ ಹಾಗೂ ಸದಾನಂದಗೌಡ ಅವರ ಟ್ವಿಟ್ಟರ್ ವಾರ್‍ನ ಸಂಪೂರ್ಣ ರಿಪೋರ್ಟ್ ಅನ್ನು ತರಿಸಿಕೊಂಡಿದ್ದಾರೆ. ಕನ್ನಡದಲ್ಲಿರುವ ಟ್ವೀಟ್‍ಗಳನ್ನು ಭಾಷಾಂತರ ಮಾಡಿಸಿ ಪ್ರತಿ ಪದದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಮೋದಿ ಹೆಸರೇಳದಿದ್ದರೆ ಅವರ ಭಾಷಣ ಕೇಳಲು ಯಾರು ಬರುತ್ತಾರೆ – ಸೂಲಿಬೆಲೆಗೆ ಸಿಂಹ ಟಾಂಗ್

    ಹಿರಿಯರಾಗಿ ಒಂದು ವಿಚಾರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲರಾಗಿದ್ದೀರಿ. ನಿಮ್ಮ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗುತ್ತಿದೆ. ಇದಕ್ಕೆ ಯಾರು ಹೊಣೆ ಎಂದು ಅಮಿತ್ ಶಾ, ಸದಾನಂದಗೌಡ ಅವರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

    ಆಗಿದ್ದೇನು?:
    ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಆಗಬೇಕಾದ ತಕ್ಷಣ ಪರಿಹಾರ, ಮಧ್ಯಂತರ ಪರಿಹಾರ ಮತ್ತು ದೀರ್ಘಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

    ಇದನ್ನು ರಿಟ್ವೀಟ್ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ, ಲಾಲ್! ಇವರು ಈಗ ಬಂದರು.. ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾಷ್ಟ್ರ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೆ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ ಎಂದು ಡಿ.ವಿ ಸದಾನಂದಗೌಡರನ್ನು ಪ್ರಶ್ನಿಸಿದ್ದರು.

    ಈ ವಿಚಾರವಾಗಿ ಬೆಂಗಳೂರಿನಲ್ಲಿ ಬುಧವಾರ ಅಸಮಾಧಾನ ಹೊರ ಹಾಕಿದ್ದ ಕೇಂದ್ರ ಸಚಿವರು, ಯಾರೋ ಕುಳಿತುಕೊಂಡು ಟ್ವೀಟ್ ಮಾಡುತ್ತಾರೆ. ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್‍ಗೆ ಸೇರುತ್ತಾರೆ. ಭಾಷಣಗಳಿಂದ, ಟ್ವೀಟ್‍ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ. ಇಂತಹ ಮಾತುಗಳು ಹಾಗೂ ಜನರ ಬಗ್ಗೆ ಬಹಳ ನೋವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ಪರಸ್ಪರ ವಾಕ್ ಹಾಗೂ ಟ್ವೀಟ್ ಸಮರದ ಬೆನ್ನಲ್ಲೇ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಬ್ಲಾಕ್ ಮಾಡಿದ್ದರು. ಕೇಂದ್ರ ಸಚಿವರು ಬ್ಲಾಕ್ ಮಾಡಿರುವುದನ್ನು ಸ್ಕ್ರೀನ್ ಶಾರ್ಟ್ ತೆಗೆದು ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ನಿಮಗೆ ಧನ್ಯವಾದ (ಥ್ಯಾಂಕ್ ಯೂ) ಎಂದು ಬರೆದುಕೊಂಡಿದ್ದರು. ಕೇಂದ್ರ ಸಚಿವರ ನಡೆಯ ಬಗ್ಗೆ ನೆಟ್ಟಿಗರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

    ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವರು, ನಾನು ಯಾಕೆ ಬ್ಲಾಕ್ ಮಾಡಬೇಕು? ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇದೆ. ಆದರೆ ಅದಕ್ಕೊಂದು ಮಾರ್ಗವಿದೆ. ಬುಧವಾರ 3-4 ಗಂಟೆ ಟ್ವಿಟ್ಟರ್ ಸ್ಥಗಿತಗೊಂಡಿತ್ತು. ಈ ವೇಳೆ ಬ್ಲಾಕ್ ಆಗಿರಬಹುದು ಎಂದು ಹಾರಿಕೆ ಉತ್ತರ ನೀಡಿದ್ದಾರೆ.

    ಡಿವಿಎಸ್ ಹೇಳಿಕೆಯ ಬೆನ್ನಲ್ಲೇ ಸೂಲಿಬೆಲೆ ಅಭಿಮಾನಿಗಳು ಸದಾನಂದಗೌಡರೇ, ಸಂಸದರನ್ನು ಪ್ರಶ್ನಿಸುವುದು ದೇಶದ್ರೋಹವಾದರೇ ನಾನು ದೇಶದ್ರೋಹಿಯೇ ಎಂದು ಬರೆದು #StopUrArroganceDVS #IamWithChakravarthySulibele #NotFairModiji  ಬಳಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

    https://twitter.com/Vivekgs7555/status/1179700408396070912

  • ಟ್ವಿಟ್ಟರ್‌ನಲ್ಲಿ ಸೂಲಿಬೆಲೆಗೆ ಬ್ಲಾಕ್ ಭಾಗ್ಯ ಕಲ್ಪಿಸಿದ ಸದಾನಂದಗೌಡ

    ಟ್ವಿಟ್ಟರ್‌ನಲ್ಲಿ ಸೂಲಿಬೆಲೆಗೆ ಬ್ಲಾಕ್ ಭಾಗ್ಯ ಕಲ್ಪಿಸಿದ ಸದಾನಂದಗೌಡ

    – ಕೇಂದ್ರ ಸಚಿವರಿಗೆ ಧನ್ಯವಾದ ತಿಳಿಸಿದ ಸೂಲಿಬೆಲೆ

    ಬೆಂಗಳೂರು: ಪರಸ್ಪರ ವಾಕ್ ಹಾಗೂ ಟ್ವೀಟ್ ಸಮರದ ಬೆನ್ನಲ್ಲೇ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಬ್ಲಾಕ್ ಮಾಡಿದ್ದಾರೆ.

    ಕೇಂದ್ರ ಸಚಿವರು ಬ್ಲಾಕ್ ಮಾಡಿರುವುದನ್ನು ಸ್ಕ್ರೀನ್ ಶಾರ್ಟ್ ತೆಗೆದು ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ನಿಮಗೆ ಧನ್ಯವಾದ (ಥ್ಯಾಂಕ್ ಯೂ) ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಟ್ವಿಟ್ಟಿಗರು ತಮ್ಮದೆ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸೂಲಿಬೆಲೆ ದೇಶದ್ರೋಹಿನಾ? – ಡಿವಿಎಸ್ ಪರೋಕ್ಷ ಕಿಡಿ

    ನಮಗೂ ಬ್ಲಾಕ್ ಭಾಗ್ಯ ಕೊಟ್ಟಿದ್ದಾರೆ ಎಂದು ಪೂರ್ವಿ ರಾಜ್ ಅರಸು ರಿಟ್ವೀಟ್ ಮಾಡಿದ್ದಾರೆ. ಪ್ರಣವ್ ಭಟ್ ರಿಟ್ವೀಟ್ ಮಾಡಿ, ತಾಕತ್ತಿದ್ದರೆ ಪ್ರಶ್ನೆಗೆ ಉತ್ತರ ಕೊಡುವ ಪ್ರಯತ್ನ ಮಾಡಿ. ಅದನ್ನು ಬಿಟ್ಟು ಬ್ಲಾಕ್ ಮಾಡೋದಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಮೋದಿ ಅಮೆರಿಕಗೆ ಹೋದ್ರೆ ಇಲ್ಲಿ ಯಾರೂ ಊಟ, ತಿಂಡಿ ಮಾಡಲ್ವಾ – ಸಂಸದರಿಗೆ ಸೂಲಿಬೆಲೆ ಪ್ರಶ್ನೆ

    ಚಕ್ರವರ್ತಿ ಸೂಲೆಬೆಲೆ ಅವರೇ ನೀವು ಪ್ರಧಾನಿ ನರೇಂದ್ರ ಮೋದಿ ಪರ ಮತಯಾಚನೆ ಮಾಡಿ ಕಷ್ಟಪಟ್ಟಿದ್ದು ಇವರಿಗೆ ಪರೋಕ್ಷವಾಗಿ ಅನುಕೂಲವೇ ಆಯಿತು. ಮುಂದೆಯೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲ್ಲಾ, ಬರೋಕೆ ಬಿಡಲ್ಲ. ಯುವಜನತೆ ಒಂದು ಕರೆ ಕೊಟ್ಟರೆ ಇವರೆಲ್ಲಾ ಮಕಾಡೆ ಮಲಗೋದು ಗ್ಯಾರಂಟಿ ಎಂದು ಯೋಗಿ ಎಂಬವರು ಟ್ವೀಟ್ ಮಾಡಿದ್ದಾರೆ.

    ಇದಕ್ಕೂ ಮುನ್ನ ನಗರದಲ್ಲಿ ಮಾತನಾಡಿದ್ದ ಕೇಂದ್ರ ಸಚಿವರು, ಯಾರೋ ಕುಳಿತುಕೊಂಡು ಟ್ವೀಟ್ ಮಾಡುತ್ತಾರೆ. ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್‍ಗೆ ಸೇರುತ್ತಾರೆ. ಭಾಷಣಗಳಿಂದ, ಟ್ವೀಟ್‍ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ. ಇಂತಹ ಮಾತುಗಳು ಹಾಗೂ ಜನರ ಬಗ್ಗೆ ಬಹಳ ನೋವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

  • ಸೂಲಿಬೆಲೆ ದೇಶದ್ರೋಹಿನಾ? – ಡಿವಿಎಸ್ ಪರೋಕ್ಷ ಕಿಡಿ

    ಸೂಲಿಬೆಲೆ ದೇಶದ್ರೋಹಿನಾ? – ಡಿವಿಎಸ್ ಪರೋಕ್ಷ ಕಿಡಿ

    ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಪರೋಕ್ಷವಾಗಿ ದೇಶದ್ರೋಹಿ ಎಂದು ಕರೆದಿದ್ದಾರೆ. ಅವರ ಹೇಳಿಕೆ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ.

    ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಯಾರೋ ಕುಳಿತುಕೊಂಡು ಟ್ವೀಟ್ ಮಾಡುತ್ತಾರೆ. ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್‍ಗೆ ಸೇರುತ್ತಾರೆ. ಭಾಷಣಗಳಿಂದ, ಟ್ವೀಟ್‍ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ. ಇಂತಹ ಮಾತುಗಳು ಹಾಗೂ ಜನರ ಬಗ್ಗೆ ಬಹಳ ನೋವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮೋದಿ ಅಮೆರಿಕಗೆ ಹೋದ್ರೆ ಇಲ್ಲಿ ಯಾರೂ ಊಟ, ತಿಂಡಿ ಮಾಡಲ್ವಾ – ಸಂಸದರಿಗೆ ಸೂಲಿಬೆಲೆ ಪ್ರಶ್ನೆ

    ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ಗುರುವಾರ ಕ್ಯಾಬಿನೆಟ್ ಸಭೆ ಇದೆ. ನಾನು ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಇಬ್ಬರು ಸೇರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ, ರಾಜ್ಯಕ್ಕೆ ಆದಷ್ಟು ಬೇಗ ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದರು.

    ಈ ಹಿಂದೆ ನೆರೆ ಪರಿಹಾರದ ಹಣ ಹೇಗೆ ದುರುಪಯೋಗ ಆಗುತ್ತಿತ್ತು ಅಂತ ಗೊತ್ತಿದೆ. ಇದನ್ನು ಸಾಮಾನ್ಯ ಜನರು ಅರ್ಥ ಮಾಡಿಕೊಳ್ಳಬೇಕು. ಈಗಾಗಲೇ ಎನ್‍ಡಿಆರ್ ಎಫ್ ಫಂಡ್ ಬಿಡುಗಡೆ ಮಾಡಲಾಗಿದೆ. ಮಂಗಳವಾರ ಸಹೃದಯದಿಂದ ಬಿಹಾರ ನೆರೆ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಆದರೆ ಅದನ್ನೇ ದೊಡ್ಡ ವಿಷಯ ಮಾಡುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು. ಇದನ್ನೂ ಓದಿ: ಪ್ರಧಾನಿ ಅಮೆರಿಕಕ್ಕೆ ಹೋಗಿದ್ದರಿಂದ ನೆರೆ ಪರಿಹಾರ ಪ್ರಕಟಿಸಲು ತಡವಾಗಿದೆ – ಪ್ರಹ್ಲಾದ್ ಜೋಷಿ

    ಕೇಂದ್ರ ತಂಡವು ಬಂದು ನೆರೆ ಪೀಡಿತ ಪ್ರದೇಶಗಳ ಪರಿಶೀಲನೆ ಮಾಡಿದೆ. ಮಳೆ ನಿಲ್ಲದೇ ಮನೆ ಕಟ್ಟಲು ಸಾಧ್ಯವಾಗುತ್ತಾ? ಹಿಂದೆಲ್ಲಾ ದುಡ್ಡು ನುಂಗಿ ಹಾಕುವವರೇ ಜಾಸ್ತಿ ಇದ್ದರು. ಹಣ ತರಬೇಕು, ಇಲ್ಲಿ ಅದನ್ನು ಕೊಳ್ಳೆ ಹೊಡೆಯಬೇಕು ಅಂತ ಕಾಯುತ್ತಿದ್ದರು. ಈ ಬಾರಿ ಅದಕ್ಕೆ ಅವಕಾಶ ಇಲ್ಲ. ಸಂತ್ರಸ್ತರಿಗೆ ಆದಷ್ಟು ಬೇಗ ಪರಿಹಾರ ಕೊಡುವ ಕೆಲಸ ರಾಜ್ಯ ಮತ್ತು ಕೇಂದ್ರ ಸರ್ಕಾರ ಮಾಡಲಿವೆ ಎಂದು ಹೇಳಿದರು. ಇದನ್ನೂ ಓದಿ:  ಯಾರೂ ಕಿಸೆಯಿಂದ ಪರಿಹಾರ ಕೊಡಲು ಆಗಲ್ಲ: ಪ್ರತಾಪ್ ಸಿಂಹ

    ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಕೇಳುತ್ತಿದ್ದಂತೆ ಕೇಂದ್ರ ಸಚಿವರು, ಎಲ್ಲರಿಗೂ ಆಯ್ತಲ್ಲಾ, ಮತ್ತೆ ಅವರಿಗೆ ಏನು ಸ್ಪೆಷಲ್ ಎಂದು ಗುಡುಗಿದರು. ಇದನ್ನೂ ಓದಿ: ಸಿಂಹಗೆ ಮೋದಿ ದೇವ್ರು ಇರ್ಬೋದು, ಬೇಕಾದ್ರೆ ಪೂಜೆ ಮಾಡ್ಲಿ – ಆದ್ರೆ ಮೊದ್ಲು ಪರಿಹಾರ ಕೊಡ್ಲಿ: ಕಾಂಗ್ರೆಸ್ ಕಿಡಿ

  • ಅನರ್ಹರು ಬಿಜೆಪಿ ಸೇರುತ್ತಾರೆ, ಸ್ಪರ್ಧಿಸುವ ಅವಕಾಶ ಸಿಗುತ್ತೆ – ಸದಾನಂದಗೌಡ

    ಅನರ್ಹರು ಬಿಜೆಪಿ ಸೇರುತ್ತಾರೆ, ಸ್ಪರ್ಧಿಸುವ ಅವಕಾಶ ಸಿಗುತ್ತೆ – ಸದಾನಂದಗೌಡ

    ಉಡುಪಿ: ಅನರ್ಹತೆ ಹೊಂದಿದ ಶಾಸಕರಿಗೆ ಮತ್ತೆ ಸ್ಪರ್ಧೆ ಮಾಡುವ ಅವಕಾಶ ಸಿಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅನರ್ಹ ಶಾಸಕರ ಕುರಿತು ಭರವಸೆಯ ಮಾತುಗಳನ್ನಾಡಿದ್ದಾರೆ.

    ಉಪಚುನಾವಣೆಯ ವೇಳಾಪಟ್ಟಿ ಪ್ರಕಟವಾದ ಹಿನ್ನೆಲೆ ನಗರದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸೋಮವಾರ ಸುಪ್ರೀಂ ಕೋರ್ಟ್‍ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯಲಿದೆ. ಒಂದೇ ದಿನದಲ್ಲಿ ಎಲ್ಲವೂ ಇತ್ಯರ್ಥ ಆಗಬಹುದು. ನಾಮಪತ್ರ ಸಲ್ಲಿಸಲು ಇನ್ನೂ ಹಲವು ದಿನ ಬಾಕಿ ಇದೆ. ಕಾನೂನಿನ ಚೌಕಟ್ಟಿನಲ್ಲಿ ಶಾಸಕರಿಗೆ ಸಮಸ್ಯೆಗಳು ಆಗಿದೆ. ಇದು ಸೋಮವಾರ ಇತ್ಯರ್ಥವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

    ಅನರ್ಹರು ಮೊದಲು ಬಿಜೆಪಿ ಸೇರುತ್ತಾರೆ. ನಂತರ ಬಿಜೆಪಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಪಕ್ಷದ ತೀರ್ಮಾನಕ್ಕೆ ಅನರ್ಹ ಶಾಸಕರು ಬದ್ಧರಾಗಿದ್ದರೆ ಅವರು ಬಿಜೆಪಿಯಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಸದಾನಂದಗೌಡರು ಸ್ಪಷ್ಟಪಡಿಸಿದ್ದಾರೆ.

    ನಾವು ಚುನಾವಣೆಗೆ ಸಿದ್ಧರಿದ್ದೇವೆ, ಸರ್ಕಾರ ರಚನೆಯಾದಾಗಿನಿಂದಲೂ ಚುನಾವಣೆಗೆ ತಯಾರಿ ಶುರು ಮಾಡಿದ್ದೇವೆ. ಲೋಕಸಭಾ ಚುನಾವಣಾ ಫಲಿತಾಂಶದ ಮೂಲಕ ಜನ ತೀರ್ಮಾನಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರದ ಕನಸನ್ನು ಜನ ಕಂಡಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಶಾಸಕರು ಅಯೋಗ್ಯ ಸರ್ಕಾರವನ್ನು ತಿರಸ್ಕರಿಸಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

    ನೆರೆ ಪರಿಹಾರ ಸದುಪಯೋಗ ಆಗುವಾಗ ಕೇಂದ್ರ ಸರ್ಕಾರ ಪರಿಹಾರ ಕೊಡುತ್ತದೆ. ಕೇಂದ್ರ ಸರ್ಕಾರ ಎಸ್‍ಡಿಆರ್‍ಎಫ್ ನಿಂದ ಈಗಾಗಲೇ 380 ಕೋಟಿ ರೂ. ಕೊಟ್ಟಿದೆ. ನೆರೆ ನಷ್ಟದ ವರದಿಗಳನ್ನು ಗೃಹ ಇಲಾಖೆ ಪಡೆದುಕೊಂಡಿದೆ. ತಾತ್ಕಾಲಿಕ ಪರಿಹಾರಕ್ಕೆ ರಾಜ್ಯದಲ್ಲಿ ಸಾಕಷ್ಟು ದುಡ್ಡು ಇದೆ. ಕೇಂದ್ರದ ನೆರೆ ಪರಿಹಾರ ಬೇಡ, ರಾಜ್ಯದ ಬೊಕ್ಕಸದಲ್ಲಿ ಸಾಕಷ್ಟು ಹಣ ಇದೆ ಅಂದಿರುವ ಸಂಸದ ತೇಜಸ್ವಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಡಿವಿಎಸ್, ಸಂಸದರು ಸದ್ಯಕ್ಕೆ ಪರಿಹಾರ ಬೇಡ ಅಂದಿರಬಹುದು. ಆದರೆ ಶಾಶ್ವತ ಕಾಮಗಾರಿಗೆ ಕೇಂದ್ರದ ಅನುದಾನ ಅವಶ್ಯಕ. ಅಷ್ಟು ದೊಡ್ಡ ಮೊತ್ತ ಕೇಂದ್ರ ದಿಂದ ಕೊಡಲು ಮಾತ್ರ ಸಾಧ್ಯ ಎಂದರು.

    ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಜೆಡಿಎಸ್ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡದ್ದೇ ಆಶ್ಚರ್ಯ. ಅವರಪ್ಪ- ಇವರಪ್ಪ ಅಂತ ಬೈದುಕೊಂಡವರು ಒಂದಾದದ್ದು ಬಹಳ ವಿಶೇಷ. ಅಧಿಕಾರಕ್ಕಾಗಿ ಮೈತ್ರಿಯಾದದ್ದು ಹೆಚ್ಚು ಬಾಳಿಕೆ ಬರಲ್ಲ. ಎರಡೂ ಪಕ್ಷದ ಸಜ್ಜನ ಶಾಸಕರು ಮೈತ್ರಿಯಿಂದ ನೊಂದು ಹೊರ ಬರಬೇಕಾಯ್ತು ಎಂದರು.

    ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿವಿಎಸ್, ಅಧಿಕಾರಕ್ಕಾಗಿ ಜೆಡಿಎಸ್, ಕಾಂಗ್ರೆಸ್ ಏನು ಬೇಕಾದರೂ ಮಾಡುತ್ತವೆ. ಕುರ್ಚಿಗಾಗಿ ಅಂತಹ ಹೇಳಿಕೆ ಸಾಮಾನ್ಯ. ಸಿದ್ದರಾಮಯ್ಯನವರಿಗೆ ಮತ್ತೆ ಸಿಎಂ ಆಗುವ ಆಸೆಯಿದೆ. ಸೋತರೂ ಗೆದ್ದರೂ ಅವರಿಗೆ ಯಾವುದಾದರೂ ಕುರ್ಚಿ ಬೇಕೆ ಬೇಕು. ಕುಮಾರಸ್ವಾಮಿಯನ್ನು ಇಳಿಸಿ ಕುರ್ಚಿ ಹಿಡಿಯಲಿಲ್ವೇ? ಇದೆಲ್ಲ ಪಕ್ಷದ ವರಿಷ್ಠರಿಗೆ ಗೊತ್ತಾಗಿದೆ. ಅದೇ ಕಾರಣಕ್ಕೆ ಸೋನಿಯಾ ಗಾಂಧಿ ಭೇಟಿಗೆ ಅವಕಾಶ ಸಿಗಲಿಲ್ಲ. ಅಧಿಕಾರಕ್ಕಾಗಿ ಸಿದ್ದರಾಮಯ್ಯ ಎಲ್ಲ ಪಕ್ಷಕ್ಕೆ ಹೋಗಿ ಬಂದರು. ಆದರೆ ಬಿಜೆಪಿಯಲ್ಲಿ ಮಾತ್ರ ಸಿದ್ದರಾಮಯ್ಯನವರಿಗೆ ಪ್ರವೇಶವಿಲ್ಲ ಎಂದರು.

  • ಪ್ರವಾಹದಲ್ಲಿ ಸಿಲುಕಿದ್ದ ಮಕ್ಕಳನ್ನು ಹೆಗಲ ಮೇಲೆ ಹೊತ್ತು ರಕ್ಷಿಸಿದ ಪೊಲೀಸ್ ಪೇದೆ: ವಿಡಿಯೋ

    ಪ್ರವಾಹದಲ್ಲಿ ಸಿಲುಕಿದ್ದ ಮಕ್ಕಳನ್ನು ಹೆಗಲ ಮೇಲೆ ಹೊತ್ತು ರಕ್ಷಿಸಿದ ಪೊಲೀಸ್ ಪೇದೆ: ವಿಡಿಯೋ

    ಗಾಂಧಿನಗರ: ಗುಜರಾತ್‍ನಲ್ಲಿ ಭೀಕರ ಮಳೆಯಾಗುತ್ತಿದ್ದು, ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ಪೊಲೀಸ್ ಪೇದೆಯೊಬ್ಬರು ಭುಜದ ಮೇಲೆ ಹೊತ್ತು ರಕ್ಷಣೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪೊಲೀಸ್ ಪೇದೆ ಪೃಥ್ವಿರಾಜ್ ಜಡೇಜಾ ಅವರು ಶನಿವಾರ ಮೊರ್ಬಿ ಜಿಲ್ಲೆಯ ಪ್ರವಾಹ ಸಂತ್ರಸ್ತರ ರಕ್ಷಣೆಗೆ ನಿಯೋಜನೆ ಗೊಂಡಿದ್ದರು. ಈ ವೇಳೆ ತಂಕರ ಪಟ್ಟಣದಲ್ಲಿ ಇಬ್ಬರು ಬಾಲಕಿಯರು ಪ್ರವಾಹಕ್ಕೆ ಸಿಲುಕಿದ್ದರು. ಆ ಮಕ್ಕಳನ್ನು ಪೇದೆ ಪೃಥ್ವಿರಾಜ್ ಅವರು ಭುಜದ ಮೇಲೆ ಹೊತ್ತು ಪ್ರವಾಹದ ಮಧ್ಯೆ ಸುಮಾರು 1.5 ಕಿಮೀ ದೂರ ಸಾಗಿ ರಕ್ಷಣೆ ಮಾಡಿದ್ದಾರೆ.

    ಪೃಥ್ವಿರಾಜ್ ಅವರ ಸಾಹಸದ ದೃಶ್ಯವನ್ನು ಸ್ಥಳದಲ್ಲಿದ್ದ ಕೆಲವರು ತಮ್ಮ ಮೊಬೈಲ್ ಹಾಗೂ ಕ್ಯಾಮೆರಾದಲ್ಲಿ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಫೇಸ್‍ಬುಕ್, ಟ್ವಿಟ್ಟರ್ ಹಾಗೂ ವಾಟ್ಸಪ್ ಸೇರಿದಂತೆ ವಿವಿಧ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೃಥ್ವಿರಾಜ್ ಅವರ ಕರ್ತವ್ಯ ನಿಷ್ಠೆ ಹಾಗೂ ಮಾನವೀಯತೆ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಈ ಕುರಿತು ಗುಜರಾತ್‍ನ ಡಿಜಿಪಿ ಷಂಷೀರ್ ಸಿಂಗ್ ಅವರು ಟ್ವೀಟ್ ಮಾಡಿದ್ದು, ನಮ್ಮ ಭುಜ ನಿಮ್ಮ ರಕ್ಷಣೆಗಾಗಿ ಇವೆ. ಮೊರ್ಬಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಪೃಥ್ವಿರಾಜ್ ಅವರು ವೀರರಂತೆ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಸಂತ್ರಸ್ತರಿಗೆ ಅಭಯ ನೀಡಿದ್ದಾರೆ.

    ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಕೂಡ ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರವಾಹದಲ್ಲಿ ಸಿಲುಕಿರುವ ಜನರನ್ನು ರಕ್ಷಣೆ ಮಾಡಲು ನಮ್ಮ ವೀರ ಯೋಧರು, ಭದ್ರತಾ ಸಿಬ್ಬಂದಿ ಬದ್ಧತೆ ಹಾಗೂ ತ್ಯಾಗವನ್ನು ಮೆರೆಯುತ್ತಿದ್ದಾರೆ. ಈ ವಿಡಿಯೋವನ್ನು ಒಮ್ಮೆ ನೋಡಿ ಎಂದು ತಿಳಿಸಿದ್ದಾರೆ.

    https://twitter.com/DVSadanandGowda/status/1160372596191289346

  • ಸಬ್ ಅರ್ಬನ್ ರೈಲು ಯೋಜನೆಗೆ ರಾಜ್ಯ ಸರ್ಕಾರದಿಂದ ವಿಳಂಬ – ಡಿವಿಎಸ್ ಆರೋಪ

    ಸಬ್ ಅರ್ಬನ್ ರೈಲು ಯೋಜನೆಗೆ ರಾಜ್ಯ ಸರ್ಕಾರದಿಂದ ವಿಳಂಬ – ಡಿವಿಎಸ್ ಆರೋಪ

    ಬೆಂಗಳೂರು: ಸಬ್ ಅರ್ಬನ್ ರೈಲು ಯೋಜನೆಗೆ ಕೇಂದ್ರ ಸರ್ಕಾದಿಂದ ಹಣ ಬಿಡುಗಡೆಯಾಗಿದ್ದರೂ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಡಿ.ವಿ ಸದಾನಂದಗೌಡ ಆರೋಪ ಮಾಡಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಕೇಂದ್ರ ರೈಲ್ವೆ ಮಂತ್ರಿಯಾಗಿದ್ದಾಗ ಐದು ವರ್ಷದಿಂದ ನಿರಂತರ ಚರ್ಚೆ ಮಾಡಿ ಕೇಂದ್ರ ಬಜೆಟ್‍ನಲ್ಲಿಲ್ಲಿ 17 ಸಾವಿರ ಕೋಟಿ ರೂ ಬಿಡುಗಡೆ ಮಾಡಿಸಿದ್ದೆ. ಆದರಂತೆ ಸಬ್ ಅರ್ಬನ್ ರೈಲು ಯೋಜನೆಯ ವೆಚ್ಚದಲ್ಲಿ ಕೇಂದ್ರ – ರಾಜ್ಯಕ್ಕೆ 50:50 ವೆಚ್ಚಕ್ಕೆ ಇಳಿಸಿ ಆರು ಪ್ರಾಥಮಿಕ ರೈಲು ಕೊಟ್ಟು ಯೋಜನೆಯನ್ನು ಆರಂಭ ಮಾಡಿದ್ದೆವು. ಆದರೆ ಈ ಯೋಜನೆ ಇನ್ನೂ ಮುಂದಕ್ಕೆ ಹೋಗಿಲ್ಲ ಇದಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪ ಮಾಡಿದರು.

    ಸಬ್ ಅರ್ಬನ್ ಯೋಜನೆಗೆ ಕೇಂದ್ರ ಸರ್ಕಾದಿಂದ ಆಗಬೇಕಾದ ಎಲ್ಲ ಕೆಲಸಗಳನ್ನು ಮಾಡಿಕೊಡಲಾಗಿದೆ. ಆದರೆ ಯೋಜನೆ ಮುಂದಕ್ಕೆ ಹೋಗುತ್ತಿಲ್ಲ. ಈ ಸಂಬಂಧ ನಾನು ಸದ್ಯದಲ್ಲೇ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆಯುತ್ತೇನೆ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಜೊತೆ ಸೇರಿ ಯೋಜನೆ ಸಂಬಂಧ ಮಾತನಾಡುತ್ತೇನೆ ಎಂದರು.

    ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರು ಈಗಾಗಲೇ ನನ್ನ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯಲ್ಲಿ ಹಲವು ಮಹತ್ತರ ಕೆಲಸ ಮಾಡಿದ್ದಾರೆ. ನಾನು ಇಲಾಖೆಯ ಕೆಲಸಗಳಿಗೆ ಇನ್ನಷ್ಟು ವೇಗ ಒದಗಿಸುತ್ತೇನೆ. ಜನೌಷಧಿ ಕೇಂದ್ರಗಳು ಜನರ ನಡುವೆ ಮೆಚ್ಚುಗೆ ಗಳಿಸಿವೆ. ಕೆಲವು ಕಡೆ ಜನೌಷಧಿ ಕೇಂದ್ರಗಳಿಗೆ ಔಷಧಿಗಳ ಕೊರತೆ ಆಗಿದ್ದು ಔಷಧಿಗಳ ಕೊರತೆ ನಿವಾರಿಸಲು ಕ್ರಮಕೈಗೊಳ್ಳುತ್ತೇನೆ. ಕ್ಯಾನ್ಸರ್ ಸಂಬಂಧಿ ಔಷಧಿಗಳನ್ನೂ ಜನೌಷಧಿಗೆ ತರುತ್ತೇವೆ ಎಂದು ಭರವಸೆ ನೀಡಿದರು.

    ಇದೇ ವೇಳೆ ಪ್ರಥಮ ಕೇಂದ್ರ ಕ್ಯಾಬಿನೆಟ್ ಸಭೆಯ ಬಗ್ಗೆ ಮಾತನಾಡಿ, ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರು ರೈತಪರ ನಿಲುವುಗಳನ್ನು ಕೈಗೊಂಡಿದ್ದಾರೆ. ಇದು ಕೇಂದ್ರ ಸರ್ಕಾರದ ಮುಂದಿನ ನಡೆಗೆ ದಿಕ್ಸೂಚಿಯಾಗಿದೆ. ಮುಂದಿನ 15 ದಿನಗಳಲ್ಲಿ ನನ್ನ ಗೃಹ ಕಚೇರಿಯಲ್ಲಿ ಸಣ್ಣ ಕಾರ್ಯಾಲಯ ಸ್ಥಾಪನೆ ಮಾಡುತ್ತೇವೆ. ನಾವು ನಾಲ್ವರು ಕೇಂದ್ರ ಮಂತ್ರಿಗಳು ರಾಜ್ಯದ ಜನರಿಗೆ ಸದಾ ಲಭ್ಯ. ಮುಂದಿನ ನೂರು ದಿನಗಳಲ್ಲಿ ಏನಾಗಬೇಕು ಎನ್ನುವ ರೂಪುರೇಷೆ ಸಿದ್ಧಪಡಿಸಲು ಪ್ರಧಾನಿಯವರು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ನಾವೆಲ್ಲ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

    ಸಿಎಂ ಕುಮಾರಸ್ವಾಮಿ ಅವರು ಗ್ರಾಮವಾಸ್ತವ್ಯದ ಬಗ್ಗೆ ಕೇಳಿದ ಪ್ರಶ್ನೆಗೆ, ಈ ಹಿಂದೆ ಕುಮಾರಸ್ವಾಮಿ ಮಾಡಿದ ಗ್ರಾಮವಾಸ್ತವ್ಯ ಅವರಿಗೆ ಸರಿಯಾದ ಫಲಕೊಟ್ಟಿಲ್ಲ. ಅವರು ವಾಸ್ತವ್ಯ ಮಾಡಿದ್ದ ಹಳ್ಳಿಗಳಲ್ಲೇ ಅವರಿಗೆ ತಿರುಗು ಬಾಣವಾಗಿತ್ತು. ಹಾಗಾಗಿ ಈಗ ಶಾಲೆಯಲ್ಲಿ ವಾಸ್ತವ್ಯ ಮಾಡಲು ಹೊರಟಿದ್ದಾರೆ. ಹುಡುಗರು ಶಾಲೆಗಳಿಗೆ ಕಲಿಯಲು ಹೋಗುತ್ತಾರೆ. ಈಗ ಕುಮಾರಸ್ವಾಮಿಯವರೂ ಸಹ ಶಾಲಾ ವಾಸ್ತವ್ಯವದ ಮೂಲಕ ಕಲಿಯಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.

    ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸಿಎಂ ಅವರ ಕಾಲೆಳೆದ ಡಿವಿಎಸ್, ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ 24 ಗಂಟೆಗಳಲ್ಲಿ ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ನಾನು ಭವಿಷ್ಯ ಹೇಳಿದ್ದು ನಿಜ. ಅದರಂತೆ ಕುಮಾರಸ್ವಾಮಿ ರಾಜೀನಾಮೆಗೆ ಮುಂದಾಗಿದ್ದು ನಿಜ. ಆದರೆ ಬೇರೆಯವರು ಬಾಗಿಲು ಬಂದ್ ಮಾಡಿ ಅವರನ್ನು ಒಳಗೆ ಕೂರುವಂತೆ ಮಾಡಿದರು. ನಾನೇನು ಮಾಡಲಿ? ಭವಿಷ್ಯ ಕೇಳಿಕೊಂಡು ಬಂದು ಗೆಲ್ಲುತ್ತೇನೆ ಎಂದ ದೇವೇಗೌಡರೇ ಸೋತುಹೋದರು. ಇನ್ನು ನಮ್ಮ ಭವಿಷ್ಯ ಹೇಗೆ ಸತ್ಯವಾಗುತ್ತದೆ ಎಂದು ವ್ಯಂಗ್ಯವಾಡಿದರು.

    ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಸುಳಿವು ನೀಡಿದ ಸದಾನಂದಗೌಡರು, ನಾವು ಮೈತ್ರಿ ಸರ್ಕಾರ ಬೀಳಿಸಲು ಹೋಗಲ್ಲ. ಅವರಾಗಿಯೇ ಬೀಳಿಸಿದರೆ ನಾವು ಹೊಣೆಯಲ್ಲ. ಹಾಗೇನಾದರೂ ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲಿದೆ. ರಾಜ್ಯದಲ್ಲಿ ನಾವು ಮತ್ತೆ ಬಹುದೊಡ್ಡ ಪಕ್ಷವಾಗಿ ಅಧಿಕಾರ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಅಧಿಕಾರ ಕಳೆದುಕೊಳ್ಳುತ್ತಿರೋರು ತಿರುಗಾಡಲೇ ಬೇಕು: ನಾಯ್ಡುಗೆ ಸದಾನಂದಗೌಡ ಟಾಂಗ್

    ಅಧಿಕಾರ ಕಳೆದುಕೊಳ್ಳುತ್ತಿರೋರು ತಿರುಗಾಡಲೇ ಬೇಕು: ನಾಯ್ಡುಗೆ ಸದಾನಂದಗೌಡ ಟಾಂಗ್

    ಬೆಂಗಳೂರು: ಯಾವ್ಯಾವ ರಾಜ್ಯದಲ್ಲಿ ಯಾರ್ಯಾರು ಅಧಿಕಾರ ಕಳೆದುಕೊಳ್ಳುತ್ತಿದ್ದಾರೋ ಅವರೆಲ್ಲಾ ತಿರುಗಾಡಲೇ ಬೇಕು. ಹೀಗಾಗಿ ಎಲ್ಲಾ ಕಡೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿರುಗಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟಾಂಗ್ ಕೊಟ್ಟಿದ್ದಾರೆ.

    ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ಜನರು ನಂಬುತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಅವರು ಈ ಬಾರಿ ಸೋಲುವುದು ಖಚಿತ. ಈ ಮೂಲಕ ಔಟ್ ಆಫ್ ಪವರ್ ಆಗುತ್ತಾರೆ. ಸಿಎಂ ಕುಮಾರಸ್ವಾಮಿ ಹಾಗೂ ಚಂದ್ರಬಾಬು ನಾಯ್ಡು ಸಮಾನ ಮನಸ್ಕರು. ತಮ್ಮ ಪವರ್ ಹೋಗುತ್ತೆ ಅಂತ ಕುಮಾರಸ್ವಾಮಿಯವರು ಈಗಾಗಲೇ ನಿಶ್ಚಯ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

    ಮೈತ್ರಿ ಸರ್ಕಾರದ ಅಸ್ತಿತ್ವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾಳೆ ಸಾಯಂಕಾಲದವರೆಗೂ ಮಾತ್ರ ಕುಮಾರಸ್ವಾಮಿ ಸಿಎಂ ಆಗಿರುತ್ತಾರೆ. ಗರಿಷ್ಠ ಎಂದರೆ ನಾಡಿದ್ದು ಬೆಳಗ್ಗೆವರಗೆ ಮಾತ್ರ ಅವರು ಮುಖ್ಯಮಂತ್ರಿಯಾಗಿ ಇರುತ್ತಾರೆ. ಮೇ 24ರಂದು ಅವರು ಅಧಿಕಾರದಿಂದ ಕೆಳಗಿಳಿಯುತ್ತಾರೆ. ಹೊಸ ಸರ್ಕಾರ ರಚನೆಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಶೇಕಡಾ ನೂರಕ್ಕೆ ನೂರರಷ್ಟು ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಭವಿಷ್ಯ ನುಡಿದರು.

    ಸತ್ಯವನ್ನು ಬಹಳ ಕಾಲ ಮುಚ್ಚಿಡಲು ಸಾಧ್ಯವಿಲ್ಲ. ಮಾಜಿ ಸಚಿವ ರೋಷನ್ ಬೇಗ್ ಸತ್ಯ ಹೇಳಿದ್ದಾರೆ. ಕಾಂಗ್ರೆಸ್‍ನ ಕೆಲವರ ಒತ್ತಡಕ್ಕೆ ಸಹಿಸಿಕೊಂಡು ಸಾಕಾಗಿತ್ತು. ಹೀಗಾಗಿ ಎಲ್ಲವನ್ನೂ ಹೊರಹಾಕಿದ್ದಾರೆ. ಸಿದ್ದರಾಮಯ್ಯನವರು ರಾಜ್ಯ ಕಂಡ ಅತ್ಯಂತ ದುರಂಹಕಾರಿ ಮಾಜಿ ಸಿಎಂ ಎಂದು ಕಿಡಿಕಾರಿದರು.

    ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಒಬ್ಬ ಶಾಸಕರು ಮಾತ್ರ ಇದ್ದಾರೆ. ಉಳಿದ ಏಳೂ ವಿರೋಧ ಪಕ್ಷದ ಶಾಸಕರು. ಆದರೂ ನಾನು ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸವಿದೆ. ಚುನಾವಣೆಯ ಕೊನೆಯ ಎರಡು ದಿನಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‍ನ ಶಾಸಕರು ತಮ್ಮ ಎಲ್ಲಾ ಚಟುವಟಿಕೆಗಳನ್ನು ನಡೆಸಿದ್ದಾರೆ. ಹೀಗಾಗಿ ಕಳೆದ ಬಾರಿಗಿಂತ ಗೆಲುವಿನ ಅಂತರದಲ್ಲಿ ಸ್ವಲ್ಪ ವ್ಯತ್ಯಾಸವಾಗಬಹುದು ಎಂದು ತಿಳಿಸಿದರು.

  • ಬಿಜೆಪಿ ಬಿಟ್ರೆ ಯಾವ ಪಕ್ಷಕ್ಕೂ ರಾಜಕೀಯ ಸ್ಥಿರತೆ ಸಾಧ್ಯವಾಗ್ತಿಲ್ಲ: ಡಿವಿಎಸ್

    ಬಿಜೆಪಿ ಬಿಟ್ರೆ ಯಾವ ಪಕ್ಷಕ್ಕೂ ರಾಜಕೀಯ ಸ್ಥಿರತೆ ಸಾಧ್ಯವಾಗ್ತಿಲ್ಲ: ಡಿವಿಎಸ್

    – ಸಿದ್ದರಾಮಯ್ಯನವರೇ ಎಲ್ಲಿ ಹೋಯ್ತು ನಿಮ್ಮ ಮಹಾ ಘಟಬಂಧನ್

    ಬೆಂಗಳೂರು: ಬಿಜೆಪಿಯನ್ನು ಬಿಟ್ಟರೆ ಯಾವ ಪಕ್ಷಗಳಿಗೂ ರಾಜಕೀಯ ಸ್ಥಿರತೆ ಕಂಡುಕೊಳ್ಳುವುದಕ್ಕೆ ಆಗುತ್ತಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವರು, ಈ ಬಾರಿಯ ಚುನಾವಣೆಯ ವಿಶೇಷ ಎಂಬಂತೆ ಬೆಂಗಳೂರಿನಲ್ಲಿ ಮಹಾ ಘಟಬಂದನ್ ಶುರು ಮಾಡಿದ್ದರು. ಆದರೆ ಅದು ಇಲ್ಲಿಗೆ ಸೀಮಿತವಾಯಿತು. ರಾಜ್ಯದಲ್ಲಿ ಬಿಜೆಪಿ ಅಧಿಕಾರದಿಂದ ದೂರ ಇರಬೇಕೆಂದು ಜೆಡಿಎಸ್-ಕಾಂಗ್ರೆಸ್ ನಾಯಕರು ಒಂದಾದರು. ಆದರೆ ಈಗ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಉರುಳಿಸಲು ಶುರು ಮಾಡಿದ್ದಾರೆ. ಸಿದ್ದರಾಮಯ್ಯನವರೇ ಎಲ್ಲಿ ಹೋಯಿತು ನಿಮ್ಮ ಮಹಾ ಘಟಬಂಧನ್ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು.

    ಈ ಬಾರಿಯ ಲೋಕಸಭಾ ಚುನಾವಣೆ ರಾಜ್ಯದ ವಿಚಾರಗಳ ಮೇಲೆ ಚುನಾವಣೆ ನಡೆಯುವುದಿಲ್ಲ. ರಾಷ್ಟ್ರೀಯ ವಿಚಾರಗಳ ಮೇಲೆ ಚುನಾವಣೆ ನಡೆಯುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಅಂತ್ಯಗೊಳಿಸಲು ಜನ ತೀರ್ಮಾನಿಸಿದ್ದಾರೆ. ದೇಶದಲ್ಲಿ ಹತ್ತು ವರ್ಷಗಳ ಕಾಲ ರಿಮೋಟ್ ಕಂಟ್ರೋಲ್ ಪ್ರಧಾನಿ ಇದ್ದರು. ಭ್ರಷ್ಟಾಚಾರಯುಕ್ತ ಸರ್ಕಾರವಿತ್ತು. ಆದರೆ ಈಗ ಭ್ರಷ್ಟಾಚಾರ ಮುಕ್ತ ಸರ್ಕಾರವಿದೆ ಎಂದು ಹೇಳಿದರು.

    ರಾಜ್ಯ ಸರ್ಕಾರವು 40,000 ಓಲಾ ಟ್ಯಾಕ್ಸಿಗಳ ಸೇವೆಯನ್ನು ಆರು ತಿಂಗಳ ಕಾಲ ರದ್ದು ಮಾಡಿದೆ. ಓಲಾ ಸಂಸ್ಥೆಯವರು ತಪ್ಪು ಮಾಡಿದ್ದರೆ ಅದರ ವಿರುದ್ಧ ಕಾನೂನು ಕ್ರಮ ಜರುಗಿಸಿ, ದಂಡ ವಿಧಿಸಿ. ಅದನ್ನು ಬಿಟ್ಟು ಓಲಾ ಕ್ಯಾಬ್ ಚಾಲಕರ ಹೊಟ್ಟೆ ಮೇಲೆ ಹೊಡೆಯಬೇಡಿ. ಚುನಾವಣೆ ಸಂದರ್ಭದಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿರುವುದರ ಹಿಂದೆ ಬೇರೆಯ ಹುನ್ನಾರವೇ ಇದೆ ಎಂದು ದೂರಿದರು.

    ಬಿಜೆಪಿ ಎರಡಂಕಿ ದಾಟಲು ಬಿಡಲ್ಲ ಎಂಬ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು, ಅವರು ಇರುವುದೇ ಎರಡು. ಅದಕ್ಕಾಗಿ ಅವರಿಗೆ ಯಾವಾಗಲೂ ಎರಡಂಕಿಯ ಬಗ್ಗೆಯೇ ಚಿಂತೆ ಎಂದು ತಿರುಗೇಟು ಕೊಟ್ಟರು.

    ನಟ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ವಿಚಾರವಾಗಿ ಮಾತನಾಡಿದ ಸಚಿವರು, ನಾಳೆ ನನ್ನ ಮನೆ ಮೇಲೂ ದಾಳಿಯಾಗಬಹುದು. ಕುತಂತ್ರ ರಾಜಕಾರಣ ಸಲ್ಲದು. ಇಂತಹ ರಾಜಕಾರಣದ ಬಳಿಕ ನಾಯಕರು ತಬ್ಬಿಕೊಂಡು ಒಂದಾಗುತ್ತಾರೆ. ಆದರೆ ಪಕ್ಷದ ಕಾರ್ಯಕರ್ತರು ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.

  • ಸ್ವತಃ ಕೋತಿ ಬೆಣ್ಣೆ ತಿಂದು ಕುರಿ ಮುಖಕ್ಕೆ ಹಚ್ಚಿದ್ದು ಹಿಂಗೆ- ಕಾಂಗ್ರೆಸ್ ವಿರುದ್ಧ ಡಿ.ವಿ.ಸದಾನಂದಗೌಡ ವ್ಯಂಗ್ಯ

    ಸ್ವತಃ ಕೋತಿ ಬೆಣ್ಣೆ ತಿಂದು ಕುರಿ ಮುಖಕ್ಕೆ ಹಚ್ಚಿದ್ದು ಹಿಂಗೆ- ಕಾಂಗ್ರೆಸ್ ವಿರುದ್ಧ ಡಿ.ವಿ.ಸದಾನಂದಗೌಡ ವ್ಯಂಗ್ಯ

    ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎನ್ನುವ ಆದೇಶ ಪತ್ರವನ್ನು ಹಾಕಿ, ಟ್ವೀಟ್ ಮೂಲಕ ರಾಜ್ಯ ಕೈ ನಾಯಕರ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ವ್ಯಂಗ್ಯವಾಡಿದ್ದಾರೆ.

    ಇದಪ್ಪಾ ವರಸೆ! ಅಂತಿಮವಾಗಿ ತೆರೆಗೆ ದೃಶ್ಯ ಬಂದಿದೆ. ತಾವೇ ಸೂತ್ರಧಾರಿ ತಾವೇ ಪಾತ್ರಧಾರಿ. ಯಾರಲ್ಲಿ ದೂತರೇ! ನನ್ನ ಸಭೆಗೆ ಹಾಜಾರಾಗದ ವಂದಿ ಮಾಗಧರನ್ನು ನನ್ನ ಸಾಮ್ರಾಜ್ಯದಿಂದಲೇ ಉಚ್ಚಾಟಿಸಿ. ಇದು ಕಟ್ಟಾಜ್ಞೆ, ರಾಜಾಜ್ಞೆ. ಸ್ವತಃ ಕೋತಿ ಬೆಣ್ಣೆ ತಿಂದು ಕುರಿ ಮುಖಕ್ಕೆ ಹಚ್ಚಿದ್ದು ಹಿಂಗೆ ಎಂದು ಸಸಚಿವರು ಟ್ವೀಟ್ ಮಾಡಿದ್ದಾರೆ.

    ಆಪರೇಷನ್ ಕಮಲದ ಭೀತಿಯಿಂದ ಎಚ್ಚೆತ್ತುಕೊಂಡ ಕಾಂಗ್ರೆಸ್ ನಾಯಕರು ಶುಕ್ರವಾರ ಕಾಂಗ್ರೆಸ್ ಶಾಸಕರ ಸಭೆಯನ್ನು ಕರೆದಿದ್ದಾರೆ. ಈ ಸಭೆಗೆ ಕಡ್ಡಾಯವಾಗಿ ಎಲ್ಲ ಶಾಸಕರು ಹಾಜರಾಗಬೇಕು ಎಂದು ಸೂಚಿಸಿದೆ. ಕಾಂಗ್ರೆಸ್ನ ಈ ಆದೇಶವನ್ನು ಎತ್ತಿ ಹಿಡಿದು ಡಿ.ವಿ.ಸದಾನಂದಗೌಡ ಅವರು ಕೈ ನಾಯಕರ ಕಾಲೆಳೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv