Tag: ಡಿ.ಸಿ.ತಮ್ಮಣ್ಣ

  • ಬೆಂಗಳೂರಿಗರ ಮೇಲೆ ಟ್ರಾನ್ಸ್ ಪೋರ್ಟ್ ಸೆಸ್: ಸಾರಿಗೆ ಸಚಿವರಿಂದ ಶಾಕ್!

    ಬೆಂಗಳೂರಿಗರ ಮೇಲೆ ಟ್ರಾನ್ಸ್ ಪೋರ್ಟ್ ಸೆಸ್: ಸಾರಿಗೆ ಸಚಿವರಿಂದ ಶಾಕ್!

    ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ಹಾಕಿ ಭಾರೀ ಟೀಕೆಗೆ ಗುರಿಯಾಗಿರುವ ಸರ್ಕಾರ ಈಗ ವಿಶೇಷವಾಗಿ ಬೆಂಗಳೂರಿಗರ ಮೇಲೆ ವಿಶೇಷ ಸೆಸ್ ಹಾಕಲು ಮುಂದಾಗಿದೆ.

    ಹೌದು. ಈಗಾಗಲೇ ನಷ್ಟದಲ್ಲಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮೇಲಕ್ಕೆ ಎತ್ತಲು ಹೊಸ ಟ್ರಾನ್ಸ್ ಪೋರ್ಟ್ ಸೆಸ್ ಹಾಕಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ.

    ಹದಗೆಟ್ಟ ರಸ್ತೆಗಳಿಂದಾಗಿ ಬಿಎಂಟಿಸಿ ಬಸ್‍ಗಳು ಹಾಳಾಗುತ್ತಿದೆ. ಈ ಬಸ್‍ ಗಳ ನಿರ್ವಹಣೆಗೆ ವರ್ಷಕ್ಕೆ ಕೋಟ್ಯಂತರ ರೂ. ಹಣವನ್ನು ಬಿಬಿಎಂಟಿಸಿ ವ್ಯಯಿಸುತ್ತಿದೆ. ಹೀಗಾಗಿ ಬಿಎಂಟಿಸಿಗೆ ತಗಲುವ ವೆಚ್ಚವನ್ನು ಸರಿದೂಗಿಸಲು ಬೆಂಗಳೂರಿಗೆ ಮೇಲೆ ಸಾರಿಗೆ ಸೆಸ್ ಹಾಕುವ ಪ್ರಸ್ತಾಪವನ್ನು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಅವರು ಬಿಬಿಎಂಪಿ ಮುಂದಿಡಲಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಈ ವಿಚಾರದ ಬಗ್ಗೆ ಬಿಬಿಎಂಪಿಯ ವಿರೋಧಪಕ್ಷ ನಾಯಕ ಪದ್ಮನಾಭ ರೆಡ್ಡಿ ಪ್ರತಿಕ್ರಿಯಿಸಿ, ರಸ್ತೆಯಲ್ಲಿ ಓಡಾಡುವುದಕ್ಕೆ ಯಾವುದೇ ಸೆಸ್ ಕಟ್ಟಿ ಅಂತ ಜನರಿಗೆ ಹೇಳುವುದಕ್ಕೆ ಆಗೋದಿಲ್ಲ. ಯಾಕೆಂದರೆ ಸಾರ್ವಜನಿಕರು ಈಗಾಗಲೇ ಆಸ್ತಿ ತೆರಿಗೆ ಪಾವತಿ ಮಾಡುತ್ತಾರೆ. ಅದೇ ತೆರಿಗೆಯಲ್ಲಿ ಸರ್ಕಾರ ರಸ್ತೆ ಹಾಗೂ ಸಾರ್ವಜನಿಕ ಮೂಲಭೂತ ಸೌಕರ್ಯಗಳ ವ್ಯವಸ್ಥೆ ನಿರ್ವಹಣೆ ಮಾಡಬೇಕು. ರಸ್ತೆ ವಿಚಾರಕ್ಕೆ ಬಂದಾಗ ಪ್ರತಿಯೊಂದು ವಾಹನ ಖರೀದಿಸಿದಾಗ ಸಾರಿಗೆ ಸರ್ಕಾರಕ್ಕೆ ತೆರಿಗೆ ಪಾವತಿ ಮಾಡಲಾಗುತ್ತದೆ. ಹೀಗಿರುವಾಗ ಸೆಸ್ ಕಟ್ಟಿ ಅನ್ನೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

    ಡಿಸಿ ತಮ್ಮಣ್ಣ ವಿರುದ್ಧ ಬಿಬಿಎಂಪಿ ಪಾಲಿಕೆ ಸದಸ್ಯರು ಗರಂ ಆಗಿದ್ದು, ಈಗಾಗ್ಲೇ ಹಲವು ಸೆಸ್ ಗಳನ್ನು ಜನ ಕಟ್ಟುತ್ತಿದ್ದಾರೆ. ಈ ಮಧ್ಯೆ ಹೊಸ ಸೆಸ್ ಹಾಕೋ ಯಾವುದೇ ಪ್ರಸ್ತಾವನೆ ಸರಿಯಲ್ಲ. ಬಿಎಂಟಿಸಿ ಬಸ್ ಗಳೇ ಸಾಕಷ್ಟು ಜಾಹೀರಾತು ಹಾಕೊಂಡು ಬೆಂಗಳೂರಿನ ತುಂಬಾ ಓಡಾಡುತ್ತಿವೆ. ಬಿಎಂಟಿಸಿ ಓಡಾಡೋದ್ರಿಂದಲ್ಲೇ ನಮ್ಮ ರಸ್ತೆಗಳು ಹಾಳಾಗಿವೆ. ಹೀಗಾಗಿ ಬಿಎಂಟಿಸಿಯೇ ಬಿಬಿಎಂಪಿಗೆ ತೆರಿಗೆ ಕಟ್ಟಲಿ ಎಂದು ಕಿಡಿಕಾರಿದ್ದಾರೆ.

    ಸಾರಿಗೆ ಸೆಸ್ ಹಾಕುವ ನಿರ್ಧಾರಕ್ಕೆ ಮೇಯರ್ ಸಂಪತ್‍ ರಾಜ್ ಪ್ರತಿಕ್ರಿಯಿಸಿ, ಈ ಬಗ್ಗೆ ಯಾವುದೇ ಪ್ರಸ್ತಾಪ ಬಿಬಿಎಂಪಿಗೆ ಬಂದಿಲ್ಲ. ಸಚಿವರು ಈ ರೀತಿಯ ಸೆಸ್ ಹಾಕುವ ವಿಚಾರ ಹೇಳಿದ್ದು ಗಮನಕ್ಕೆ ಬಂದಿದೆ. ಬಿಎಂಟಿಸಿ ಬಸ್ ಗಳ ಓಡಾಟದಿಂದ ನಮ್ಮ ರಸ್ತೆಗಳು ಹಾಳಾಗುತ್ತಿವೆ ಎನ್ನುವ ವಿಚಾರ ಹಲವು ಬಾರಿ ಪಾಲಿಕೆಯಲ್ಲಿ ಚರ್ಚೆಯಾಗಿದೆ. ಸೆಸ್ ವಿಧಿಸುವುದು ಅಷ್ಟು ಸುಲಭದ ಕೆಲಸವಲ್ಲ. ಜಾರಿಯಾಗುವ ಮೊದಲು ಸರ್ಕಾರದ ವಲಯದಲ್ಲಿರುವ ಚರ್ಚೆಯಾಗಬೇಕು. ಪಾಲಿಕೆಯಲ್ಲಿ ಚರ್ಚೆಯಾಗಬೇಕು. ಇದೂವರೆಗೂ ಈ ಪ್ರಸ್ತಾಪ ನಮಗೆ ಬಂದಿಲ್ಲ. ಬಂದ ಮೇಲೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

  • ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡೋಕೆ ಸಾಧ್ಯವಿಲ್ಲ: ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ

    ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡೋಕೆ ಸಾಧ್ಯವಿಲ್ಲ: ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ

    ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಎಂದು ಹೇಳಿದ್ದಾರೆ.

    ವಿಧಾನ ಪರಷತ್‍ನಲ್ಲಿ ಮಾತನಾಡಿದ ಸಚಿವರು, ಸಾರಿಗೆ ಇಲಾಖೆ ಈಗಾಗಲೇ ನಷ್ಟದಲ್ಲಿದೆ. ಸಾರಿಗೆ ಇಲಾಖೆಗೆ 25% ಹಣ ಒದಗಿಸಲು ಸಾಧ್ಯವಿಲ್ಲ. ಸರ್ಕಾರ ಇನ್ನು 75% ಹಣ ಬಿಡುಗಡೆ ಮಾಡಬೇಕಿದೆ. ಉಳಿದ 25% ಹಣ ಒದಗಿಸಲು ಸಿಎಂಗೆ ಪತ್ರ ಬರೆಯಲಾಗುವುದು. ಅಲ್ಲಿಯವರೆಗೂ ಉಚಿತ ಬಸ್ ನೀಡಲು ಸಾಧ್ಯವೇ ಇಲ್ಲ ಎಂದು ಡಿ.ಸಿ.ತಮ್ಮಣ್ಣ ತಿಳಿಸಿದರು.

    ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಉಚಿತ ಬಸ್ ಪಾಸ್ ನೀಡಲು ಹೇಳಿದ್ರು. ಅಂದಿನ ಬಜೆಟ್ ಗೆ ಸದನದ ಒಪ್ಪಿಗೆಯೂ ದೊರೆತಿದೆ. ಈಗ ಆರ್ಥಿಕ ಇಲಾಖೆ ಇನ್ನು ಕ್ಲಿಯರೆನ್ಸ್ ಕೊಟ್ಟಿಲ್ಲ ಅಂತ ಹೇಳೋದು ಸರಿಯಲ್ಲ. ಈಗಾಗಲೇ ಶಾಲಾ-ಕಾಲೇಜುಗಳು ಪ್ರಾರಂಭವಾಗಿವೆ. ಕೂಡಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಕಾಂಗ್ರೆಸ್ ನ ಎಸ್.ಆರ್.ಪಾಟೀಲ್, ಐವಾನ್ ಡಿಸೋಜಾ, ಸೇರಿದಂತೆ ಹಲವು ಸದಸ್ಯರು ಆಗ್ರಹಿಸಿದರು.

    ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಸಾರಿಗೆ ಇಲಾಖೆ ನಿಗಮಗಳು ಸ್ವಾಯತ್ತ ಸಂಸ್ಥೆಗಳು. ಕಳೆದ ವರ್ಷದ 5 ಕೋಟಿ ರೂ. ಹಣವೇ ಸರ್ಕಾರದಿಂದ ಇನ್ನು ಬಿಡುಗಡೆ ಆಗಿಲ್ಲ. ಹಣವೇ ಇಲ್ಲದೆ ನಿಗಮ ನಡೆಸೋದು ಹೇಗೆ? ಹಣ ಎಲ್ಲಿಂದ ಬರುತ್ತೆ? ಹಣವನ್ನು ವಿರೋಧ ಪಕ್ಷದವರು ಕೊಡ್ತಾರಾ ಎಂದು ಪ್ರಶ್ನಿಸಿದರು.

    ಇಂತಹ ಹೇಳಿಕೆ ಸಚಿವರು ಹೇಳೋದು ಅವರ ಸರ್ಕಾರದ ಕ್ಷಮತೆ ತೋರುತ್ತದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಇತ್ತ ಸಿದ್ದರಾಮಯ್ಯ ಬಜೆಟ್ ಯಾವುದೇ ಬದಲಾವಣೆ ಮಾಡೊಲ್ಲ ಅಂತ ಸಿಎಂ ಹೇಳಿದ್ದಾರೆ. ಈಗ ಬಸ್ ಪಾಸ್ ನೀಡೊಲ್ಲ ಅಂದ್ರೆ ಹೇಗೆ? ಎಂದು ಕಾಂಗ್ರೆಸ್ ನಾಯಕ ಎಸ್.ಆರ್.ಪಾಟೀಲ್ ಸಚಿವರನ್ನು ಪ್ರಶ್ನಿಸಿದರು.

    ಕೊನೆಗೆ ನಾಯಕರ ನಡುವೆ ಮಾತಿನ ಚಕಮಕಿ ಹೆಚ್ಚಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರೇ ಈಗ ಏನು ಮಾತಾಡದೇ ಸಿಎಂ ಜೊತೆ ಮಾತಾಡಿ ನಾಳೆ ಉತ್ತರ ಕೊಡಿ ಎಂದು ಸಮಾಧಾನ ಮಾಡಿದರು.

  • ಬಜೆಟ್ ನಲ್ಲಿ ಸಾರಿಗೆ ಇಲಾಖೆಯಿಂದ ಜನತೆಗೆ ಗುಡ್ ನ್ಯೂಸ್

    ಬಜೆಟ್ ನಲ್ಲಿ ಸಾರಿಗೆ ಇಲಾಖೆಯಿಂದ ಜನತೆಗೆ ಗುಡ್ ನ್ಯೂಸ್

    ಬೆಂಗಳೂರು: ಬಹು ನಿರೀಕ್ಷೆಯ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ವಾಹನ ಸವಾರರ ಜೇಬಿಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ಟಾಮಿ ಕತ್ತರಿ ಹಾಕಿದ್ದಾರೆ.

    ಗುರುವಾರ ಸಿಎಂ ಕುಮಾರಸ್ವಾಮಿ ಮಂಡಿಸಿದ ಬಜೆಟಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಇದರಿಂದ ಬಸ್ ದರ ಸಹ ಏರಿಕೆಯಾಗುತ್ತೆನೋ ಎಂದು ಜನಸಾಮಾನ್ಯರು ಅಂದಾಜಿಸಿದ್ದರು. ಆದರೆ ಸಂಜೆ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಬಿಎಂಟಿಸಿ ದರ ಏರಿಕೆಯಿಲ್ಲ ಎಂದಿದ್ದಾರೆ.

    ಬಿಎಂಟಿಸಿ ಬಸ್ ಮತ್ತು ಟಿಕೆಟ್ ದರವನ್ನು ಶೇ. 15 ರಿಂದ 20 ರಷ್ಟು ಏರಿಕೆ ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪೊನ್ನುರಾಜು ಅವರು ಸಚಿವರಿಗೆ ಮನವಿ ಸಲ್ಲಿಸಿದ್ದರು. ಡೀಸೆಲ್ ದರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಗಮವು ನಿತ್ಯ ಕೋಟ್ಯಾಂತರ ರೂಪಾಯಿಗಳ ನಷ್ಟ ಅನುಭವಿಸುತ್ತಿದೆ. ಹೀಗಾಗಿ ಬಸ್, ಪ್ರಯಾಣ ದರ ಏರಿಸಬೇಕು ಎಂದು ಕೋರಲಾಗಿತ್ತು. ಆದರೆ ಸರ್ಕಾರ ಬಂದು ಕೆಲ ದಿನಗಳಲ್ಲೇ ದರ ಏರಿಕೆ ಮಾಡಿದ್ರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಸಲ್ಲಿಕೆಯಾಗಿದ್ದ ಪ್ರಸ್ತಾವನೆಯನ್ನು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ತಿರಸ್ಕರಿಸಿದ್ದರು.

    ಪ್ರೈವೇಟ್ ಬಸ್ ಸರ್ವಿಸ್ ಗಳ ತೆರಿಗೆ ಹೆಚ್ಚಳ ಮಾಡಿದ್ದೇವೆ. ಇದರಿಂದ ವಾರ್ಷಿಕ 56 ಕೋಟಿ ರೂ. ಆದಾಯ ಸಾರಿಗೆ ಇಲಾಖೆಗೆ ಬರಲಿದೆ. ನಾಲ್ಕು 4,500 ಬಸ್ ಗಳನ್ನ ಖರೀದಿ ಮಾಡಲು ಬಜೆಟ್ ನಲ್ಲಿ ಅನುಮೋದನೆ ಸಿಕ್ಕಿದೆ. ಜೊತೆಗೆ ನೂರು ಕೋಟಿ ರೂಪಾಯಿ ಅಭಿವೃದ್ಧಿಗೆ ನೀಡಿದ್ದಾರೆ. ನಾವು ಒಂದು ಸಾವಿರ ಕೋಟಿ ಬೇಡಿಕೆ ಇಟ್ಟಿದ್ದೆವು. ಆದರೆ ನಮ್ಮ ಸಮರ್ಪಕವಾಗಿ ಬಜೆಟ್ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ಸಿಗುವ ಭರವಸೆ ಇದೆ. ಹಾಗೇ ಎಲೆಕ್ಟ್ರಿಕಲ್ ಬಸ್ ಖರೀದಿ ಮಾಡಲು ಮುಂದಾಗಿದ್ದೇವೆ. ಬೆಂಗಳೂರಿಗೆ ಎಲೆಕ್ಟ್ರಿಕಲ್ ಬಸ್ ಗಳನ್ನ ಪರಿಚಯಿಸುವ ಕೆಲಸ ಮಾಡುತ್ತೇವೆ ಅಂತ ಸಚಿವ ತಮ್ಮಣ್ಣ ಹೇಳಿದ್ದಾರೆ.

  • ಶೌಚಾಲಯ ಪರಿಶೀಲನೆ ನಡೆಸಿದ ಸಚಿವ ತಿಮ್ಮಣ್ಣ: ಮುಜುಗರಕ್ಕೀಡಾದ ಮಹಿಳೆಯರು

    ಶೌಚಾಲಯ ಪರಿಶೀಲನೆ ನಡೆಸಿದ ಸಚಿವ ತಿಮ್ಮಣ್ಣ: ಮುಜುಗರಕ್ಕೀಡಾದ ಮಹಿಳೆಯರು

    ಚಿಕ್ಕಮಗಳೂರು: ಬಸ್ ನಿಲ್ದಾಣದ ಶೌಚಾಲಯ ವ್ಯವಸ್ಥೆ ತಿಳಿಯಲು ಸಾರಿಗೆ ಸಚಿವ ಡಿಸಿ ತಿಮ್ಮಣ್ಣ ಅವರೇ ನೇರವಾಗಿ ಮಹಿಳಾ ಶೌಚಾಲಯಕ್ಕೆ ಹೋದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

    ಸಾರಿಗೆ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ಸಚಿವರು ಮುಂದಾಗಿದ್ದು, ಇಂದು ಚಿಕ್ಕಮಗಳೂರು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದ್ದರು. ಹೀಗಾಗಿ ಶೌಚಾಲಯದ ವ್ಯವಸ್ಥೆ ತಿಳಿಯಲು ಪುರುಷರು ಹಾಗೂ ಮಹಿಳಾ ಶೌಚಾಲಯಗಳಿಗೆ ಸ್ವತಃ ತಾವೇ ಭೇಟಿ ನೀಡಿ ಪರಿಶೀಲನೆಗೆ ಮುಂದಾದರು. ಮಹಿಳಾ ಶೌಚಾಲಯಕ್ಕೆ ಸಚಿವರ ಭೇಟಿಯಿಂದಾಗಿ ನಿಲ್ದಾಣದಲ್ಲಿದ್ದ ಮಹಿಳೆಯರು ಮುಜುಗರಕ್ಕೆ ಒಳಗಾದರು.

    ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲದಿರುವುದಕ್ಕೆ ಸಚಿವ ತಿಮ್ಮಣ್ಣ ಅವರು ಅಸಮಾಧಾನ ಹೊರಹಾಕಿ, ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು. ಅಲ್ಲದೇ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

  • ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಸ್ ಟಿಕೆಟ್ ದರ ಏರಲ್ಲ: ಸಾರಿಗೆ ಸಚಿವ ಡಿ ಸಿ ತಮ್ಮಣ್ಣ

    ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಸ್ ಟಿಕೆಟ್ ದರ ಏರಲ್ಲ: ಸಾರಿಗೆ ಸಚಿವ ಡಿ ಸಿ ತಮ್ಮಣ್ಣ

    ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.

    ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪದವಿವರೆಗೆ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿಗಳೇ ಈ ಘೋಷಣೆ ಮಾಡುತ್ತಾರೆ ಎಂದು ತಿಳಿಸಿದರು.

    ಉಚಿತ ಬಸ್ ಪಾಸ್ ನೀಡಿದರೆ ಇಲಾಖೆಗೆ ಸುಮಾರು 620 ಕೋಟಿ ರೂ. ಹೊರೆಯಾಗುತ್ತದೆ. ಇದರಲ್ಲಿ 15% ರಷ್ಟನ್ನು ಸಂಸ್ಥೆ ಭರಿಸಲಿದ್ದು ಉಳಿದದ್ದನ್ನು ಶಿಕ್ಷಣ ಇಲಾಖೆ ಅಥವಾ ಸರ್ಕಾರ ಭರಿಸಿದರೇ ಶೀಘ್ರವೇ ರಾಜ್ಯದ ಒಟ್ಟು 19.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದರು.

    ಖಾಸಗಿ ಡೀಸೆಲ್ ವಾಹನಗಳಿಗೆ ಕಡಿವಾಣಕ್ಕೆ ಚಿಂತನೆ ನಡೆಸಲಾಗಿದೆ. ಅಲ್ಲದೇ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದ ಪಾರ್ಕಿಂಗ್ ಗೆ ತೊಂದರೆಯಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೊಸ ಕಾರುಗಳ ಖರೀದಿಗೆ ಪಾರ್ಕಿಂಗ್ ಸೌಲಭ್ಯ ಇದ್ದರೇ ಮಾತ್ರ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲು ಯೋಜನೆ ರೂಪಿಸಲಾಗುವುದು. ಸಾರ್ವಜನಿಕರು ಹೆಚ್ಚಾಗಿ ಸಮೂಹ ಸಾರಿಗೆಯನ್ನು ಬಳಸಬೇಕು ಎಂದರು.

    ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳು ಬಸ್ ಟಿಕೆಟ್ ದರ ಏರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ಆದರೆ ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ಸಭೆಯಲ್ಲಿ ಬಸ್ ದರ ಏರಿಸುವ ಬದಲು ಸಾರಿಗೆ ಸಂಸ್ಥೆಗಳಲ್ಲಿ ಆಗುತ್ತಿರುವ ನಷ್ಟವನ್ನು ಕಡಿಮೆಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ವಿವರಿಸಿದರು.

    ನಮ್ಮ ಮೆಟ್ರೋ ಸೇವೆಯನ್ನು ಸಾರಿಗೆ ಇಲಾಖೆಯಡಿ ತರುವುದಕ್ಕೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇವೆ. ನಮ್ಮ ಮೆಟ್ರೋ ಸಾರಿಗೆ ಇಲಾಖೆಯಡಿ ಬಂದರೆ ಹಲವು ಸಮಸ್ಯೆಗಳು ಬಗೆಹರಿಯುತ್ತವೆ. ಸಾರಿಗೆ ಸಂಸ್ಥೆಯು ಮೆಟ್ರೋಗಿಂತ ಯಾವ ರೀತಿಯಿಂದಲೂ ಕಮ್ಮಿ ಇಲ್ಲ. ಆದರೆ ಸಮಯದ ಉಳಿತಾಯಕ್ಕೆ ಜನ ಮೆಟ್ರೋವನ್ನೇ ಅವಲಂಭಿಸಿರುವುದು ಅನಿವಾರ್ಯ. ಅಲ್ಲದೆ ಮೆಟ್ರೋ ಸಂಪರ್ಕಕ್ಕೆ ಸಂಸ್ಥೆಯೂ ಅನೇಕ ಹೊಸ ಬಸ್‍ಗಳನ್ನು ಕಲ್ಪಿಸಿದೆ ಎಂದು ತಿಳಿಸಿದರು.

  • ಸಚಿವ ಡಿ.ಸಿ ತಮ್ಮಣ್ಣ ಬೆಂಬಲಿಗನ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ!

    ಸಚಿವ ಡಿ.ಸಿ ತಮ್ಮಣ್ಣ ಬೆಂಬಲಿಗನ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ!

    ಮಂಡ್ಯ: ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಬೆಂಬಲಿಗನ ಒಡೆತನದ ವಸತಿ ಗೃಹದ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಬಾಂಗ್ಲಾ ಮೂಲದ ಮೂವರು ಯುವತಿಯರನ್ನು ರಕ್ಷಣೆ ಮಾಡಿರುವ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದೆ.

    ಒಡನಾಡಿ ಸಂಸ್ಥೆಯವರು ನೀಡಿದ ದೂರಿನ ಮೇರೆಗೆ ಮೈಸೂರು ಬೆಂಗಳೂರು ಹೆದ್ದಾರಿ ಪಕ್ಕದಲ್ಲೇ ಪ್ರಕೃತಿ ವಸತಿಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸತತ 5 ಗಂಟೆಗಳ ಕಾಲ ಹುಡುಕಾಟದ ನಂತರ ಗುಹೆ ರೀತಿಯ ರಹಸ್ಯ ಕೊಠಡಿಯಲ್ಲಿ ಯುವತಿಯರನ್ನು ಅಡಗಿಸಿಟ್ಟಿದ್ದು ಪತ್ತೆಯಾಗಿದೆ.

    ವಸತಿ ಗೃಹವು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರೊಬ್ಬರ ಸಹೋದರನದ್ದಾಗಿದ್ದು, ಆತ ಸಾರಿಗೆ ಸಚಿವರ ಬೆಂಬಲಿಗ ಎಂದು ಹೇಳಲಾಗುತ್ತಿದೆ. ವಸತಿ ಗೃಹವನ್ನು ಬೇರೆಯವರಿಗೆ ಬಾಡಿಗೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.