Tag: ಡೀಲ್

  • ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ

    ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ

    ಬೆಂಗಳೂರು: ನನಗೂ, ಕೈ ನಾಯಕರ ಆರೋಪಕ್ಕೂ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ.

    ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧದ ಪರ್ಸಂಟೇಜ್ ಆರೋಪ ಸಂಬಂಧ ಮಾತನಾಡಿದ ಡಿಕೆಶಿ, ಬೆಳಗ್ಗೆಯಿಂದ ಕೆಲವು ವಿಚಾರಗಳ ಬಗ್ಗೆ ಭಾರೀ ಚರ್ಚೆಯಾಗ್ತಿದೆ. ಮಾಧ್ಯಮಗೋಷ್ಠಿಯ ಸಂದರ್ಭದಲ್ಲಿ ಕೆಲವು ಆಂತರಿಕವಾದ ಸಂಭಾಷಣೆಗಳು ನಡೆದವು ಎಂಬುದನ್ನು ತೋರಿಸಿದ್ದೀರಿ ಎಂದು ಆರಂಭಿಸಿದರು.

    ಪಕ್ಷ ಶಿಸ್ತನ್ನು ಬಹಳ ಗಮನದಲ್ಲಿಟ್ಟುಕೊಂಡು ಶಿಸ್ತು ಪಾಲನಾ ಕಮಿಟಿ ಏನು  ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಕೈ ನಾಯಕರು ಹೇಳಿರುವ ವಿಚಾರದ ಕುರಿತು ನನಗೂ, ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲದೇ ಇರುವಂತಹ ವಿಚಾರವಾಗಿದೆ. ಈಗಾಗಲೇ ಉಗ್ರಪ್ಪನವರು ಪ್ರೆಸ್ ಮೀಟ್ ಏನು ಹೇಳಬೇಕೋ ಹೇಳಿದ್ದಾರೆ. ಅವರೇ ನಿಮಗೆ ಉತ್ತರ ಕೊಟ್ಟಿದ್ದಾರೆ ಎಂಬುದನ್ನು ಭಾವಿಸಿದ್ದೇನೆ ಎಂದರು. ಇದನ್ನೂ ಓದಿ: ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ

    ಇದೇ ವೇಳೆ ಮಾಧ್ಯಮದ ಮೇಲೆ ಗೂಬೆ ಕೂರಿಸಿದ ಉಗ್ರಪ್ಪ ಅವರ ಬಗ್ಗೆ ಪ್ರಶ್ನೆ ಮಾಡಿದಾಗ, ನಾನು ಮೀಡಿಯಾ ತಪ್ಪು ಅಂತ ಯಾಕೆ ಹೇಳಿ. ನಾವು ಮಾತಾಡಿದ್ದನ್ನು ನೀವು ತೋರಿಸಿದ್ದೀರಿ. ಈ ಹಿಂದೆ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ಮಾತಾಡಿದ್ರು, ತೋರಿಸಿದ್ದೀರಿ. ಇದೀಗ ಇವರು ಮಾತಾಡಿದ್ದಾರೆ ನೀವು ತೋರಿಸಿದ್ದೀರಿ. ಆದರೆ ನನಗೂ ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಭ್ರಷ್ಟಾಚಾರ ಮುಕ್ತವಾಗಲಿ ಅನ್ನೋ ಕಾಳಜಿ ಇದ್ರೆ ಉಗ್ರಪ್ಪ ದೂರು ನೀಡಲಿ: ಆರಗ ಜ್ಞಾನೇಂದ್ರ

    ರಾಜಕಾರಣದಲ್ಲಿ ಚಪ್ಪಾಳೆ ಹೊಡೆಯುವವರು, ಜೈಕಾರ, ಮೊಟ್ಟೆ ಎಸೆಯುವವರು ಹೀಗೆ ಹಲವು ರೀತಿಯ ಜನ ಇದ್ದಾರೆ. ಯಾವ ಜಗಳನೂ ಇಲ್ಲ. ನಿಮ್ಮ ಆಪ್ತ ಸಲೀಂ ಹೇಳಿರುವುದು ಎಷ್ಟು ಸರಿ. ಇಂಟರ್ನಲ್ ಚರ್ಚೆಯಾಗಿದೆ ಹೊರತು ಬಹಿರಂಗ ಹೇಳಿಕೆ ನೀಡಿಲ್ಲ. ಪರ್ಸೆಂಟೇಜ್ ವಿಚಾರದಲ್ಲಿ ಭಾಗಿಯಾಗಿಲ್ಲ. ಅದರ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಗೃಹ ಸಚಿವರು ದೂರು ನೀಡಲು ಹೇಳಿದ್ದಾರೆ ಅಂತೆ. ಅವರೇ ಸುಮೊಟೋ ಕೇಸ್ ದಾಖಲಿಸಿಕೊಂಡರೆ ಒಳ್ಳೆಯದು ಎಂದು ತಿಳಿಸಿದರು. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

  • ನಾಮಪತ್ರ ವಾಪಸ್ ಪಡೆಯಲು 3.5 ಕೋಟಿ ರೂ. ಪಡೆದ್ರಾ ಮುದ್ದಹನುಮೇಗೌಡ?

    ನಾಮಪತ್ರ ವಾಪಸ್ ಪಡೆಯಲು 3.5 ಕೋಟಿ ರೂ. ಪಡೆದ್ರಾ ಮುದ್ದಹನುಮೇಗೌಡ?

    ತುಮಕೂರು: ಮೈತ್ರಿ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿದ್ದ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ರಾಜಣ್ಣ ನಾಮಪತ್ರ ವಾಪಸ್ ಪಡೆಯಲು ತಲಾ 3.5 ಕೋಟಿ ಹಣ ಪಡೆದಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಈ ಬಗ್ಗೆ ಮಾತುಕತೆ ನಡೆಸಿರುವ ಆಡಿಯೋವೊಂದು ಇದೀಗ ವೈರಲ್ ಆಗಿದೆ.

    ಹೌದು. ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಬೆಂಬಲಿಗ ದರ್ಶನ್, ಕಾಂಗ್ರೆಸ್ ಕಾರ್ಯಕರ್ತನೊಂದಿಗೆ ಸಂಭಾಷಣೆ ನಡೆಸಿದ ಆಡಿಯೋ ಈಗ ಲೀಕ್ ಆಗಿದೆ. ಈ ಸಂಭಾಷಣೆಯಲ್ಲಿ ರಾಜಣ್ಣ ಮತ್ತು ಮುದ್ದಹನುಮೇಗೌಡ ತಲಾ 3.5 ಕೋಟಿ ರೂ. ಪಡೆದಿದ್ದಾರೆ. ಆದರೂ ಪ್ರಚಾರಕ್ಕೆ ಬಾರದೆ ಮೋಸ ಮಾಡಿದ್ದಾರೆ ಎಂದು ಆಡಿಯೋದಲ್ಲಿ ಹೇಳಿದ್ದಾರೆ.

    ದೇವೇಗೌಡರು ಗೆದ್ದರೆ ಡಿಸಿಎಂ ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಆಗುತ್ತಾರೆ. ಸಚಿವ ರೇವಣ್ಣ ಡಿಸಿಎಂ ಆಗುತ್ತಾರೆ. ಸಿಎಂ ಕುಮಾರಸ್ವಾಮಿ ಅವರು ಆರೋಗ್ಯ ಸಮಸ್ಯೆಯಿಂದ ವಿಶ್ರಾಂತಿಯಲ್ಲಿ ಇರಲಿದ್ದಾರೆ ಎಂದೆಲ್ಲ ದರ್ಶನ್ ಮಾತನಾಡಿದ್ದಾರೆ. ಜೊತೆಗೆ ದೇವೇಗೌಡರು ಸೋತರೆ ರಾಜಣ್ಣ ಮತ್ತು ಮುದ್ದಹನುಮೇಗೌಡರು ಪಕ್ಷದಿಂದ ಅಮಾನತು ಆಗ್ತಾರೆ ಎಂದು ಸಂಭಾಷಣೆ ನಡೆಸಿದ್ದಾರೆ.

    ಈ ಸಂಭಾಷಣೆಯ ಆಡಿಯೋ ಈಗ ಬಹಿರಂಗವಾಗಿದ್ದು, ಮತ್ತೊಂದು ವಿವಾದಕ್ಕೆ ದರ್ಶನ್ ಸಿಲುಕಿಕೊಂಡಿದ್ದಾರೆ. ಇವರು ಗುರುವಾರವಷ್ಟೆ ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿ ಜಾರಕಿಹೊಳಿ ಬೆಂಬಲಿಗರಿಂದ ಥಳಿಸಿಕೊಂಡಿದ್ದು, ಇದೀಗ ಇನ್ನೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

    ಸಂಭಾಷಣೆಯ ಆಡಿಯೋ ಇಲ್ಲಿದೆ:

  • ರೆಡ್ಡಿ ಬಂಧನ ತಪ್ಪಿಸಿದ್ದು ಸಚಿವ ರಮೇಶ್ ಜಾರಕಿಹೊಳಿ..?

    ರೆಡ್ಡಿ ಬಂಧನ ತಪ್ಪಿಸಿದ್ದು ಸಚಿವ ರಮೇಶ್ ಜಾರಕಿಹೊಳಿ..?

    ಬೆಂಗಳೂರು: ಅಂಬಿಡೆಂಟ್ ಕಂಪೆನಿ ಜೊತೆ 20 ಕೋಟಿ ಡೀಲ್ ಕೇಸಲ್ಲಿ ಜೈಲಿಗೆ ಹೋಗಿದ್ದ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿಯಿಂದ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾಗುತ್ತಾ ಅನ್ನೋ ಪ್ರಶ್ನೆಯೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ.

    ಜನಾರ್ದನ ರೆಡ್ಡಿ ಬಂಧನ ತಪ್ಪಿಸಲು ಕಾಂಗ್ರೆಸ್‍ ನ ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ಯತ್ನಿಸಿದ್ದಾರೆ ಅನ್ನೋ ಮಾಹಿತಿಯೊಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.

    ರೆಡ್ಡಿ ಬಂಧನಕ್ಕೆ ಬಲೆ ಬೀಸುತ್ತಲೇ ರಮೇಶ್ ಜಾರಕಿಹೊಳಿ ಮೂಲಕ ಸಿಎಂ ಮೇಲೆ ರಾಮುಲು ಒತ್ತಡ ಹೇರಿದ್ದಾರಂತೆ. ಸಿಎಂ ಕುಮಾರಸ್ವಾಮಿ ಜೊತೆ ಆತ್ಮಿಯ ಒಡನಾಟ ಹೊಂದಿರುವ ರಮೇಶ್ ಜಾರಕಿಹೊಳಿಯಿಂದ ಈ ಒತ್ತಡ ತಂತ್ರ ಹೂಡಲಾಗಿದೆ. ಆದರೆ ರೆಡ್ಡಿ ಪ್ರಕರಣಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ. ನೀವು ಸುಮ್ಮನಿರಿ ಅಂತ ಕುಮಾರಸ್ವಾಮಿ ಹೇಳಿದ್ದು, ಕೊನೆಗೆ ಡಿಸಿಎಂ ಪರಮೇಶ್ವರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮೂಲಕ ಒತ್ತಡ ಹೇರಲು ಪ್ರಯತ್ನ ಮಾಡಲಾಗಿದೆ ಅಂತ ಹೇಳಲಾಗುತ್ತಿದೆ.

    ರೆಡ್ಡಿ ಅರೆಸ್ಟ್ ಆದ್ರೆ ರಾಮುಲು ಅವರ ವಾಲ್ಮೀಕಿ ಸಮುದಾಯ ಮುನಿಸಿಕೊಳ್ಳಬಹುದು ಎಂದು ಪರೋಕ್ಷ ಬೆದರಿಕೆ ಹಾಕಲಾಗಿತ್ತು. ನಮಗೂ ಕಷ್ಟ ಆಗುತ್ತೆ. ಮುಂದಿನ ದಿನಗಳಲ್ಲಿ ಇದು ಬೇರೆ ಬೆಳವಣಿಗೆಗಳಿಗೂ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಆದರೆ ಇದ್ಯಾವುದಕ್ಕೂ ಮುಖ್ಯಮಂತ್ರಿಯವರು ಸೊಪ್ಪು ಹಾಕಿಲ್ಲ. ಹೀಗಾಗಿ ರಮೇಶ್ ಜಾರಕಿಹೊಳಿ ಪ್ರಯತ್ನಕ್ಕೂ ಯಶಸ್ಸು ಸಿಕ್ಕಿಲ್ಲ. ಈ ಬೆಳವಣಿಗೆಯಿಂದ ಮುಂದಿನ ದಿನಗಳಲ್ಲಿ ದೊಸ್ತಿ ಸರ್ಕಾರಕ್ಕೆ ಕಂಟಕ ಎದುರಾಗುತ್ತಾ ಅನ್ನೋ ಚರ್ಚೆಗಳು ಆರಂಭವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews