Tag: ಡೆಂಗ್ಯೂ ಕೇಸ್‌

  • ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!

    ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!

    – ಗೃಹಜ್ಯೋತಿ ಯೋಜನೆಯಿಂದ ವಿದ್ಯುತ್ ಉತ್ಪಾದನಾ ಕಂಪನಿಗಳಿಗೆ ಆರ್ಥಿಕ ಸಂಕಷ್ಟ: ಶರವಣ
    – ಡೆಂಗ್ಯೂ ಚಿಕಿತ್ಸೆಗೆ ಹೆಚ್ಚು ಹಣ ಪಡೆದರೆ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಗುಂಡೂರಾವ್‌ ವಾರ್ನಿಂಗ್‌

    ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನದ (Karnataka Assembly Session) ಮೊದಲ ದಿನವೇ ಅಕ್ರಮಗಳ ಸದ್ದು – ಗದ್ದಲ ಜೋರಾಗಿ ನಡೆದಿದೆ. ವಾಲ್ಮೀಕಿ ನಿಗಮದ ಹಗರಣ ಮುಡಾ ಹಗರಣಗಳ ಪ್ರಸ್ತಾಪದ ನಡುವೆ ಕೋವಿಡ್ ನಿರ್ವಹಣೆಯಲ್ಲಿ ಆಗಿರುವ ಹಗರಣಗಳ (Covid Scam) ಬಗ್ಗೆ ಕಾಂಗ್ರೆಸ್ ನಾಯಕ ಯು.ಬಿ ವೆಂಕಟೇಶ್ ದನಿ ಎತ್ತಿದ್ದಾರೆ.

    ಶೂನ್ಯ ವೇಳೆಯಲ್ಲಿ ಮಾತನಾಡಿದ ಯು.ಬಿ ವೆಂಕಟೇಶ್ (UB Venkatesh), ಬೆಂಗಳೂರಿನಲ್ಲಿ 2021-22ರಲ್ಲಿ ಬಿಜೆಪಿ ಸರ್ಕಾರದ ಇದ್ದಾಗ ಕೋವಿಡ್ ನಿರ್ವಹಣೆಯಲ್ಲಿ ದೊಡ್ಡ ಅಕ್ರಮವಾಗಿದೆ. ಔಷಧಿ ಸೇರಿ ಇನ್ನಿತರ ಖರೀದಿಯಲ್ಲಿ ಅಕ್ರಮವಾಗಿದೆ. ಲೆಕ್ಕ ಪರಿಶೋಧನೆ ವರದಿಯಲ್ಲಿ ಅಕ್ರಮದ ಬಗ್ಗೆ ಪ್ರಸ್ತಾಪ ಇದೆ. ಸುಮಾರು 30 ಕೋಟಿ ರೂ. ಅಕ್ರಮದ ಆಗಿದೆ. ಈ ಬಗ್ಗೆ ತನಿಖೆ ಮಾಡಿ ತಪ್ಪು ಮಾಡಿರೋರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ಆಗ್ರಹಿಸಿದರು.

    ʻಗೃಹಜ್ಯೋತಿʼ ಕರ್ನಾಟಕವನ್ನೇ ಬರ್ಬಾದ್ ಮಾಡುವ ಸ್ಕೀಮ್:
    ಇದಕ್ಕೂ ವಿಧಾನ ಪರಿಷತ್ ಕಲಾಪ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಶರವಣ ಮಾತನಾಡಿದರು. ರಾಜ್ಯ ಸರ್ಕಾರದ ಉಚಿತ ವಿದ್ಯುತ್ ಯೋಜನೆಯಿಂದ (Gruha Jyothi Scheme) ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ಬಹಳಷ್ಟು ನಷ್ಟದಲ್ಲಿವೆ. ಕರ್ನಾಟಕವನ್ನೇ ಬರ್ಬಾದ್ ಮಾಡುವ ಸ್ಕೀಮ್ ಇದು. ಇದರಿಂದ ವಿದ್ಯುತ್ ಸರಬರಾಜು ಕಂಪನಿಗಳು ಆರ್ಥಿಕ ಸಂಕಷ್ಟದಲ್ಲಿವೆ. ವಿದ್ಯುತ್ ಉತ್ಪಾದನಾ ಕಂಪನಿಗಳಿಗೂ ಹಣ ಪಾವತಿಯಾಗುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಕೆ.ಜೆ ಜಾರ್ಜ್, ಯಾವುದೇ ವಿದ್ಯುತ್ ಕಂಪನಿಗಳ ಬಾಕಿ ಹಣ ಉಳಿಸಿಕೊಂಡಿಲ್ಲ. ಗೃಹ ಜ್ಯೋತಿ ಅಡಿ ಉಪಯೋಗ ಮಾಡಿದ್ದ ಎಲ್ಲ ವಿದ್ಯುತ್‌ಗೂ ಹಣ ಕಂಪನಿಗಳಿಗೆ ಈಗಾಗಲೇ ಸಂದಾಯವಾಗಿದೆ ಎಂದು ಸ್ಪಷ್ಟನೆ ನೀಡಿದರು.

    ಡೆಂಗ್ಯೂ ವಿಚಾರದಲ್ಲಿ 2 ತಿಂಗಳು ಎಚ್ಚರವಾಗಿರಿ:
    ಇನ್ನೆರಡು ತಿಂಗಳು ಡೆಂಗ್ಯೂ ವಿಚಾರದಲ್ಲಿ ಜನರು ಎಚ್ಚರವಾಗಿ ಇರಬೇಕು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನರಿಗೆ ಕರೆ ನೀಡಿದರು. ವಿಧಾನ ಪರಿಷತ್ ಕಲಾಪ ಪ್ರಶ್ನೋತ್ತರ ಅವಧಿಯ ವೇಳೆ ಬಿಜೆಪಿಯ ಧನಂಜಯ ಸರ್ಜಿ ಅವರ ಬದಲಾಗಿ, ಅರುಣ್ ಡೆಂಗ್ಯೂ ಬಗ್ಗೆ ಪ್ರಶ್ನೆ ಕೇಳಿದ್ರು.

    ಇದಕ್ಕೆ ಉತ್ತರ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಅಂತ ತಿಳಿಸಿದರು.ಈ ವರ್ಷ ನಮ್ಮ ರಾಜ್ಯದಲ್ಲಿ ಡೆಂಗ್ಯೂ ಕೇಸ್ ಜಾಸ್ತಿ ಆಗಿದೆ.ಕಳೆದ ವರ್ಷ ಈ ಅವಧಿಗೆ 25 ಸಾವಿರ ಕೇಸ್ ಇತ್ತು. ಈ ವರ್ಷ ಇಲ್ಲಿವರೆಗೆ 68 ಸಾವಿರ ಕೇಸ್ ಈ ವರೆಗೆ ದಾಖಲಾಗಿದೆ. ಡೆಂಗ್ಯೂವನ್ನ ನಾವು ಗಂಭೀರವಾಗಿ ಪರಿಗಣಿಸಲಾಗಿದೆ. ಸಿಎಂ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಡೆಂಗ್ಯೂವನ್ನ ನೋಟಿಫೈ ಕಾಯಿಲೆ ಅಂತ ಘೋಷಣೆ ಮಾಡಲಾಗಿದೆ. ಯಾವುದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ ಮಾಹಿತಿ ಸರ್ಕಾರಕ್ಕೆ ಕೊಡುವ ವ್ಯವಸ್ಥೆ ಮಾಡಿದ್ದೇವೆ ಎಂದು ವಿವರಿಸಿದರು.

    ಡೆಂಗ್ಯೂ ಚಿಕಿತ್ಸೆಗೆ ಹೆಚ್ಚು ಹಣ ಪಡೆದರೆ ಕ್ರಮ:
    ವಿಶೇಷವಾಗಿ ಟಾಸ್ಕ್ ಫೋರ್ಸ್ ನೇಮಕ ಮಾಡಲಾಗಿದೆ ಎಂದರು. ಚಿಕಿತ್ಸೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಡೆಂಗ್ಯೂ ಕಾಯಿಲೆಯನ್ನು ಕೋವಿಡ್ ಮಾದರಿಯಲ್ಲಿ ಮಾನಿಟರ್ ಮಾಡ್ತಿದ್ದೇವೆ. ಒಂದೇ ಏರಿಯಾದಲ್ಲಿ 2-3 ಕೇಸ್ ಬಂದರೆ ಅದನ್ನ ಹಾಟ್ ಸ್ಪಾಟ್ ಅಂತ ಅಂತ ಘೋಷಣೆ ಮಾಡಿ ಇಡೀ ಏರಿಯಾದಲ್ಲಿ ಫೀವರ್ ಕ್ಲಿನಿಕ್ ಓಪನ್ ಮಾಡಿ ತಪಾಸಣೆ ಮಾಡ್ತಿದ್ದೇವೆ. ಇನ್ನು ಎರಡು ತಿಂಗಳು ನಾವು ಎಚ್ಚರಿಕೆಯಿಂದ ಇರಬೇಕು. ಸೆಪ್ಟೆಂಬರ್ ವರೆಗೂ ನಾವು ಎಚ್ಚರಿಕೆಯಿಂದ ಇರಬೇಕು ಅಂತ ಕರೆ ಕೊಟ್ರು. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಕೊಡುವ ವ್ಯವಸ್ಥೆ ಮಾಡಲಾಗಿದೆ. ಉಚಿತ ಪ್ಲೇಟ್ ಲೈಟ್ಸ್ ಕೂಡಾ ಸರ್ಕಾರಿ ಆಸ್ಪತ್ರೆಯಲ್ಲಿ ಕೊಡಲಾಗ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯೂ ಟೆಸ್ಟ್ ಗೆ ದರ ನಿಗದಿ ಮಾಡಲಾಗಿದೆ. ಹೆಚ್ಚು ಹಣ ಪಡೆದ್ರೆ ಕ್ರಮ ತೆಗೆದುಕೊಳ್ತಿದ್ದೇವೆ ಅಂತ ತಿಳಿಸಿದರು.

  • ಡೆಂಗ್ಯೂ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ – ಬಿಪಿಎಲ್‌ ಕಾರ್ಡ್‌ದಾರರಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಿಸಲು ಸೂಚನೆ!

    ಡೆಂಗ್ಯೂ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ – ಬಿಪಿಎಲ್‌ ಕಾರ್ಡ್‌ದಾರರಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಿಸಲು ಸೂಚನೆ!

    ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ (Dengue Cases) ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ (Health Department Guidelines) ಪ್ರಕಟಿಸಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ; ಜು.15 ಕ್ಕೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ತೀರ್ಮಾನ

    ಕೋವಿಡ್‌ ಸಂದರ್ಭದಲ್ಲಿ ವಾರ್‌ ರೂಮ್‌ ತೆರೆದ ಮಾದರಿಯಲ್ಲೇ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಡೆಂಗ್ಯೂ ವಾರ್‌ ರೂಮ್‌ (Dengue War Room) ತೆರೆಯಲು ಸೂಚನೆ ನೀಡಿದೆ. ಇದರೊಂದಿಗೆ ಇನ್ನೂ ಅನೇಕ ಕ್ರಮಗಳನ್ನು ಕೈಗೊಂಡಿದೆ. ಇದನ್ನೂ ಓದಿ: ಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

    ಮಾರ್ಗಸೂಚಿ ಏನು?
    1. ಒಂದೇ ಸ್ಥಳದಲ್ಲಿ ಎರಡು ಅಥವಾ ಮೂರು ಡೆಂಗ್ಯೂ ಕೇಸ್ ಕಂಡುಬಂದರೆ ಹಾಟ್ ಸ್ಪಾಟ್ ಅಂತ ಪರಿಗಣನೆ
    2. ಹಾಟ್‌ಸ್ಪಾಟ್‌ಗಳಲ್ಲಿ ಲಾರ್ವಾ ನಾಶ ಚಟುವಟಿಕೆಯನ್ನು ತೀವ್ರಗೊಳಿಸುವುದು, ಒಳಾಂಗಣ/ಹೊರಾಂಗಣದಲ್ಲಿ ಲಾರ್ವಾನಾಶಕಗಳ ಬಳಕೆ ಹಾಗೂ ಒಳಾಂಗಣದಲ್ಲಿ ಡೆಂಗ್ಯೂ ನಾಶಕವನ್ನು ಸಿಂಪಡಿಸಿ ಮನೆಯ ಸದಸ್ಯರನ್ನ 30 ನಿಮಿಷಗಳ ಕಾಲ ಮನೆಯಿಂದ ಹೊರಗಡೆ ಇರುವಂತೆ ಸೂಚಿಸುವುದು
    3. ಡೆಂಗ್ಯೂ ಪಾಸಿಟಿವ್ ಆದ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್‌ಗಳನ್ನು ತುರ್ತಾಗಿ ಸಕ್ರೀಯಗೊಳಿಸಬೇಕು.
    4. ಹಾಟ್‌ಸ್ಪಾಟ್‌ ಪ್ರದೇಶಗಳಲ್ಲಿ ಬಿಪಿಎಲ್‌ ಕುಟುಂಬಗಳಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಣೆ ಖಚಿತಪಡಿಸಿಕೊಳ್ಳುವುದು ಹಾಗೂ ಕೈ, ಕಾಲು – ಕುತ್ತಿಗೆಯ ಭಾಗದಲ್ಲಿ ಹಚ್ಚಿಕೊಳ್ಳುವಂತೆ ತಿಳಿಸುವುದು.
    5. ಡೆಂಗ್ಯೂ ಪಾಸಿಟಿವ್ ಆದ ವ್ಯಕ್ತಿಯನ್ನ ಜ್ವರ ಕಾಣಿಸಿಕೊಂಡ ದಿನದಿಂದ 14 ದಿನಗಳ ಕಾಲ ಅನುಪಾಲನೆ ಮಾಡುವುದು
    6. ಬೇವಿನ ಎಣ್ಣೆ ಇಲ್ಲದೇ ಹೋದರೆ ಸಿಟ್ರೋನೆಲ್ ಆಯಿಲ್, ಲೆಮನ್ ಗ್ರೇಸ್ ಆಯಿಲ್ ಅಥವಾ ಡೀಟ್ ಆಧಾರಿತ ಕ್ರೀಂ ಆಯಿಲ್‌ಗಳನ್ನ ವಿತರಣೆ ಮಾಡಬೇಕು
    7. ಡೆಂಗ್ಯೂ ಪ್ರಕರಣಗಳ ನಿರ್ವಹಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಆಸ್ಫತ್ರೆಗಳಲ್ಲಿ 5 ರಿಂದ 10 ಹಾಸಿಗೆಗಳನ್ನು ಮೀಸಲಿಡಬೇಕು.
    8. ಡೆಂಗ್ಯೂ ಜ್ವರ ಪ್ರಕರಣಗಳ ಪರೀಕ್ಷೆ, ಚಿಕಿತ್ಸೆ ಹಾಗೂ ನಿರ್ವಹಣಾ ಸೌಲಭ್ಯವನ್ನು ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲಾ ಆರೋಗ್ಯ ಸಂಸ್ಥೆಗಳು ಎಲ್ಲರಿಗೂ ಸಂಪೂರ್ಣ ಉಚಿತವಾಗಿ ನೀಡಬೇಕು.
    9. ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಸ್ಟಿಂಗ್‌ ಕಿಟ್‌, ಅಗತ್ಯ ಪ್ರಮಾಣದ ಔಷಧಿ ಹಾಗೂ IV Fluids ಔಷಧ ದಾಸ್ತಾನು ಲಭ್ಯತೆಯನ್ನು ಖಚಿತಪಡಿಸಬೇಕು. ಜಿಲ್ಲಾವಾರು ಸರ್ಕಾರಿ ಹಾಗೂ ಖಾಸಗಿ ರಕ್ತನಿಧಿಗಳಿಂದ ಪ್ಲೇಟ್‌ಲೆಟ್‌, ಪ್ಲಾಸ್ಮಾ ಹಾಗೂ ಇತರ ಕಾಂಪೊನೆಂಟ್‌ಗಳ ಬಗ್ಗೆ ಪ್ರತಿದಿನ ಮಾಹಿತಿ ನೀಡಬೇಕು.
    10. ಕಡ್ಡಾಯವಾಗಿ ಡೆಂಗ್ಯೂ ಜ್ವರ ನಿರ್ವಹಣೆ ಸಂಬಂಧ ಶಿಷ್ಟಾಚಾರ ಪಾಲನೆ ಮಾಡಬೇಕು.

  • ಎಸ್ಸಿ, ಎಸ್ಟಿಗೆ ಮೀಸಲಿಟ್ಟಿದ್ದ 14,000 ಕೋಟಿ ಹಣ ರಾಜ್ಯ ಸರ್ಕಾರದಿಂದ ದುರ್ಬಳಕೆ – ಬೊಮ್ಮಾಯಿ ಆರೋಪ

    ಎಸ್ಸಿ, ಎಸ್ಟಿಗೆ ಮೀಸಲಿಟ್ಟಿದ್ದ 14,000 ಕೋಟಿ ಹಣ ರಾಜ್ಯ ಸರ್ಕಾರದಿಂದ ದುರ್ಬಳಕೆ – ಬೊಮ್ಮಾಯಿ ಆರೋಪ

    – ಡೆಂಗ್ಯೂ ರೋಗಿಗಳ ಸಾವಿನ ಸಂಖ್ಯೆ ಮುಚ್ಚಿಡ್ತಿದ್ದಾರೆ ಎಂದ ಸಂಸದ

    ಹಾವೇರಿ: ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಗಳಿಗೆ (SC ST Community) ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.

    ಶಿಗ್ಗಾಂವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್ಸಿ, ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಆ ಸಮುದಾಯಗಳಿಗೆ ಮೋಸ ಮಾಡುತ್ತಿದೆ. ರಾಜ್ಯ ಸರ್ಕಾರ ದಿವಾಳಿ ಆಗಿರೋದನ್ನು ಪ್ರತಿ ಹೆಜ್ಜೆಯಲ್ಲೂ ಪ್ರದರ್ಶನ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡುವುದರಿಂದ ಹಿಡಿದು ಎಲ್ಲಾ ದರ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ (Congress Guarantee Scheme) ಅನುದಾನವನ್ನು ವರ್ಗಾಯಿಸುತ್ತಿದ್ದಾರೆ. ಎಸ್ಸಿ, ಎಸ್ಟಿ ಸಮುದಾಯಗಳಿಗೆ ಬಳಕೆ ಆಗಬೇಕಿದ್ದ 14,000 ಕೋಟಿ ರೂ. ಅನುದಾನ, ಗ್ಯಾರಂಟಿಗಳಿಗೆ ಹೋಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

    ಎಸ್ಟಿ, ಎಸ್ಟಿ ಸಮುದಾಯದ ಜನರಿಗೆ ಗ್ಯಾರಂಟಿ ಮೂಲಕ ಅನುಕೂಲ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್‌‌ನವರು ಹೇಳುತ್ತಾರೆ. ಆದ್ರೆ ವೋಟಿಗಾಗಿ ಮಾಡಿದ ಯೋಜನೆಗಳಿಗೆ ಆ ಸಮುದಾಯಕ್ಕೆ ಸೇರಬೇಕಿರುವ ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದು ಕಾನೂನು ಉಲ್ಲಂಘನೆಯೂ ಆಗಿದೆ. ಸರ್ಕಾರ ಸುಭದ್ರವಾಗಿದ್ದಿದ್ದರೇ ಅವರ ಹಣಕ್ಕೆ ಯಾಕೆ ಕೈ ಹಾಕಿದ್ದಾರೆ? ವಾಲ್ಮೀಕಿ ನಿಗಮದ ಹಣ ಸಹ ಲೂಟಿ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: SCSP – TSP ಯೋಜನೆಯ 14 ಸಾವಿರ ಕೋಟಿ ಹಣ ಕಾಂಗ್ರೆಸ್‌ ಗ್ಯಾರಂಟಿಗೆ ಬಳಕೆ

    ಡೆಂಗ್ಯೂ ರೋಗಿಗಳ ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ:
    ಅಲ್ಲದೇ ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಡೆಂಗ್ಯೂ ಸಾವಿನ ಸಂಖ್ಯೆಯನ್ನು ಕಡಿಮೆ ತೋರಿಸುತ್ತಿದೆ. ಡೆಂಗ್ಯೂ ರೋಗಿಗಳ ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ. ಹಾವೇರಿಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಜನರು ದಾವಣಗೆರೆ, ಹುಬ್ಬಳ್ಳಿಗೆ ಹೋಗುತ್ತಿದ್ದಾರೆ, ಕೆಲವರು ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ. ಆದ್ರೆ ಇದೆಲ್ಲವನ್ನು ಸರ್ಕಾರ ಮುಚ್ಚಿಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಡೆಂಗ್ಯೂನಿಂದ ಜನ ಸಾಯ್ತಿದ್ರೆ, ಸಚಿವರು ಸ್ವಿಮ್ಮಿಂಗ್ ಪೂಲ್‍ನಲ್ಲಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಕಿಡಿ

    ಡೆಂಗ್ಯೂಗೆ ಹಾವೇರಿಯಲ್ಲೇ ಅತಿಹೆಚ್ಚು ಸಾವು:
    ಡೆಂಗ್ಯೂ ಹೆಚ್ಚಾಗುತ್ತಿದೆ ಅಂತ ನಾನು ಮೊದಲೇ ಹೇಳಿದ್ದೆ. ಸರ್ಕಾರ ಯಾವ್ದೇ ವ್ಯವಸ್ಥೆ ಮಾಡಿಕೊಳ್ಳದೇ ಇದ್ದುದರಿಂದ ರೋಗಿಗಳು ಪರದಾಡುತ್ತಿದ್ದಾರೆ. ಸಾವು ನೋವು ಹೆಚ್ಚಾಗುತ್ತಿವೆ. ಇಡೀ ರಾಜ್ಯದಲ್ಲಿ ಹಾವೇರಿಯಲ್ಲೇ ಡೆಂಗ್ಯೂಗೆ ಅತಿಹೆಚ್ಚು ಸಾವು ಸಂಭವಿಸಿದೆ. ಕೂಡಲೇ ಡಿಹೆಚ್‌ಒ ವರ್ಗಾವಣೆ ಮಾಡಬೇಕು. ಸಮರ್ಥ ಆರೋಗ್ಯಾಧಿಕಾರಿಯನ್ನ ನಿಯೋಜಿಸಬೇಕು. ಆಶಾ ಕಾರ್ಯಕರ್ತೆಯರ ಸಹಾಯ ತೆಗೆದುಕೊಂಡು ಜಾಗೃತಿ ಮೂಡಿಸಬೇಕು, ಪ್ರತಿಯೊಬ್ಬರಿಗೂ ಚಿಕಿತ್ಸೆ ಸಿಗುವಂತಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕರು-ಭದ್ರತಾಪಡೆಗಳ ನಡುವೆ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ

    ಮುಂದಿನ ವಾರದಲ್ಲೇ NH ಕಾಮಗಾರಿ ಕುರಿತು ಚರ್ಚೆ:
    ನಾನು ಸಂಸತ್ ಅಧಿವೇಶನಕ್ಕೆ ತೆರಳಿದ್ದಾಗ ಹಾವೇರಿ ವಿಭಾಗದಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಬಳಿ ಮಾತನಾಡಿದ್ದೇನೆ. ಈ ಬಗ್ಗೆ ಚರ್ಚಿಸಲು ಅವರು ಮುಂದಿನ ವಾರ ವಿಶೇಷ ಸಮಯ ನೀಡಿದ್ದಾರೆ. ಆಮೆಗತಿಯಲ್ಲಿ ನಡೆಯುತ್ತಿರುವ NH-4 ಕಾಮಗಾರಿ ಹಾಗೂ ಹಾನಗಲ್, ಶಿಗ್ಗಾಂವಿ, ಸವಣೂರು, ಲಕ್ಷ್ಮೇಶ್ವರ, ಗದಗ ಮಾರ್ಗವಾಗಿ ಹಾಯ್ದು ಹೋಗುವ ಇಳಕಲ್-ಕಾರವಾರ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾಡುವ ಯೋಜನೆ, ರಿಂಗ್ ರಸ್ತೆಗಳ ನಿರ್ಮಾಣ, ಆರ್‌ಒಬಿ ನಿರ್ಮಾಣ ಮಾಡುವ ಕುರಿತು ಪ್ರಾಥಮಿಕ ಹಂತದ ಚರ್ಚೆ ನಡೆಸಿದ್ದೇನೆ. ಈ ಎಲ್ಲ ವಿಷಯಗಳ ಕುರಿತು ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಅಗತ್ಯ ಸಹಕಾರ ನೀಡುವುದಾಗಿ ನಿತಿನ್ ಗಡ್ಕರಿ ತಿಳಿಸಿದ್ದಾರೆ ಎಂದು ವಿವರಿಸಿದ್ದಾರೆ.

    ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರದ ಸಹಕಾರ ಅಗತ್ಯ:
    ಇನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜೊತೆಗೆ ಶಿವಮೊಗ್ಗ ಶಿಕಾರಿಪುರ ಮಾರ್ಗವಾಗಿ ರಾಣೆಬೆನ್ನೂರು ಹೊಸ ರೈಲು ಮಾರ್ಗದ ಕುರಿತು ಚರ್ಚೆ ನಡೆಸಲಾಗಿದೆ. ಇದರ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರದ ಸಹಕಾರ ಅಗತ್ಯವಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆಗೆ ಪತ್ನಿ ಸ್ಪರ್ಧೆ ವದಂತಿಗೆ ಡಾ. ಮಂಜುನಾಥ್ ಸ್ಪಷ್ಟನೆ

    ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಧನ್ಯವಾದ ಹೇಳ್ತೀನಿ:
    ಶಿಗ್ಗಾಂವಿ ಉಪ ಚುನಾವಣೆಗೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ‌ಸಮಿತಿ ಮಾಡಿದ್ದೇವೆ. ಪಕ್ಷವು ಸಮೀಕ್ಷೆ ಮಾಡಿಸಿದ ನಂತರ ಅಭ್ಯರ್ಥಿಯನ್ನ ಆಯ್ಕೆ ಮಾಡುತ್ತದೆ. ನನ್ನ ಮೇಲೆ ಶಿಗ್ಗಾವಿ ಜನರ ಋಣ ಇದೆ. ರಾಜಕೀಯವಾಗಿ ಬೆಳೆಯಲು ಮಹಾ ಜನತೆಯ ಆಶೀರ್ವಾದ ಇದೆ. ಇದಕ್ಕೆ ಚುನಾವಣೆ ಪ್ರಕ್ರಿಯೆ ನಡೆಯುತ್ತದೆ. ಜನತೆಗೆ ಕೃತಜ್ಞತೆ ಹೇಳಬೇಕು ಅಂತ ಇದೆ. ರಾಜಕೀಯ ಮೀರಿ ಈ ಕ್ಷೇತ್ರದ ಜನರ ಜೊತೆಗೆ ಅನೋನ್ಯತೆ ಇದೆ. ಬರುವ ಜುಲೈ 12ರಿಂದ ಹಂತ ಹಂತವಾಗಿ ಧನ್ಯವಾದ ಯಾತ್ರೆ ಮಾಡುತ್ತೇನೆ. ಪ್ರತಿ‌ ಗ್ರಾಮದ ಜನರನ್ನು ಭೇಟಿಯಾಗಿ‌ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.

  • 6,187 ಡೆಂಗ್ಯೂ ಪ್ರಕರಣ ಪತ್ತೆ – ಬೆಂಗ್ಳೂರಲ್ಲಿ ಮನೆ ಮನೆ ಸಮೀಕ್ಷೆ ನಡೆಸುವಂತೆ ಪಾಲಿಕೆಗೆ ಸೂಚನೆ!

    6,187 ಡೆಂಗ್ಯೂ ಪ್ರಕರಣ ಪತ್ತೆ – ಬೆಂಗ್ಳೂರಲ್ಲಿ ಮನೆ ಮನೆ ಸಮೀಕ್ಷೆ ನಡೆಸುವಂತೆ ಪಾಲಿಕೆಗೆ ಸೂಚನೆ!

    – ಡೆಂಗ್ಯೂ ಪತ್ತೆಗೆ ಟೆಸ್ಟಿಂಗ್‌ ಕಿಟ್‌ ವಿತರಣೆ – ದಿನೇಶ್‌ ಗುಂಡೂರಾವ್‌

    ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು (Dengue Case) ಹೆಚ್ಚುತ್ತಿರುವ ಹಿನ್ನೆಲೆ ವಿಧಾನಸೌಧದಲ್ಲಿಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಡೆಂಗ್ಯೂ ನಿಯಂತ್ರಣಕ್ಕೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಯಿತು.

    ಗ್ರಾಮೀಣ ಭಾಗದಲ್ಲೇ ಕೇಸ್‌ ಹೆಚ್ಚು:
    ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ಮೊದಲೆಲ್ಲಾ ಡೆಂಗ್ಯೂ ಪ್ರಕರಣ ಒಂದು ವರ್ಷ ಹೆಚ್ಚಿದ್ದರೆ, ಮುಂದಿನ ವರ್ಷ ಇಳಿಕೆಯಾಗುತ್ತಿತ್ತು. ಆದ್ರೆ ಈ ವರ್ಷ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಪ್ರಸಕ್ತ ವರ್ಷದ ಜನವರಿಯಿಂದ 6,187 ಕೇಸ್‌ ದಾಖಲಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 2,900 ಕೇಸ್‌ ದಾಖಲಾಗಿತ್ತು. ಒಟ್ಟಾರೆ ದಾಖಲಾಗಿರುವ ಪ್ರಕರಣಗಳಲ್ಲಿ 56% ಗ್ರಾಮೀಣ ಭಾಗದಲ್ಲಿ ಪತ್ತೆಯಾಗಿದೆ, ನಗರ ಪ್ರದೇಶಗಳಲ್ಲಿ 44% ಪಾಸಿಟಿವ್ ಆಗಿದೆ. 6 ಮಂದಿ ಸಾವನ್ನಪ್ಪಿದ್ದಾರೆ. ಅವರು ಸಹ ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ವಿವರಿಸಿದರು.

    ರಸ್ತೆಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಹೆಚ್ಚಾಗಿ ನೀರು ನಿಲ್ಲುತ್ತಿರುವುದೇ ಇದಕ್ಕೆ ಕಾರಣ. ಅದರಲ್ಲೂ ಬೆಂಗಳೂರು ನಗರ (Bengaluru City) ಡೆಂಗ್ಯೂ ಪ್ರಕರಣಗಳ ಏರಿಕೆಗೆ ಸೂಕ್ತ ಪ್ರದೇಶವಾದಂತೆ ಕಾಣ್ತಿದೆ. ನಿರಂತರವಾಗಿ ಮಳೆ ಬಂದರೆ ಕೇಸ್‌ ಕಡಿಮೆ ಆಗುತ್ತದೆ. ಅದಕ್ಕಾಗಿ ಟೆಸ್ಟಿಂಗ್‌ ಕಿಟ್‌ (Dengue Testing Kit) ಸರಬರಾಜು ಮಾಡ್ತಾ ಇದ್ದೇವೆ. ಇದರೊದಿಗೆ ಪ್ಯಾರಸೆಟಮಲ್ ಮಾತ್ರೆ ಕೊಡಬಹುದು, ಜೊತೆಗೆ ಪ್ಲೇಟ್‌ಲೆಟ್ಸ್‌ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.

    ಖಾಸಗಿ ಆಸ್ಪತ್ರೆಗಳು ಕೇಸ್‌ಗಳನ್ನ ವರದಿ ಮಾಡ್ಬೇಕು:
    ಡೆಂಗ್ಯೂ ಪ್ರಕರಣಗಳ ಬಗ್ಗೆ ಅನೇಕ ಖಾಸಗಿ ಆಸ್ಪತ್ರೆಗಳು ವರದಿ ಮಾಡುತ್ತಿಲ್ಲ. ಐಎಹೆಚ್‌ ವೆಬ್‌ಸೈಟ್‌ನಲ್ಲಿ ವರದಿ ಮಾಡುತ್ತಿಲ್ಲ. ಸದ್ಯಕ್ಕೆ 6,187 ಕೇಸ್‌ ಇದೆ. ಇದರ ಸಂಖ್ಯೆ ಹೆಚ್ಚಿರಬಹುದು. ಹಾಗಾಗಿ ಖಾಸಗಿ ಆಸ್ಪತ್ರೆಗಳು ವರದಿ ಮಾಡುವಂತೆ ಸೂಚಿಸಿದ್ದೇವೆ. ಜೊತೆಗೆ ತಪ್ಪು ಮಾಹಿತಿ ಹರಡಬಾರದು ಎಂಬ ಕಾರಣಕ್ಕೆ ದಿನನಿತ್ಯ ಡೆಂಗ್ಯೂ ಬುಲೆಟಿನ್ ಬಿಡುಗಡೆ ಮಾಡ್ತೆವೆ. ನಗರಪಾಲಿಕೆಗಳು ಪ್ರತಿ ನಗರದಲ್ಲೂ ಮನೆ ಮನೆ ಸರ್ವೆ ಮಾಡುವಂತೆ ಸೂಚನೆ ನೀಡಿದ್ದೇವೆ. ಪ್ರತಿ ಶುಕ್ರವಾರ ಡೆಂಗ್ಯೂ ಬಗ್ಗೆ ತಪಾಸಣೆಗೆ ನಿಗಾವಹಿಸಲು ತಿಳಿಸಿದ್ದೇವೆ ಎಂದು ಮಾಹಿತಿ ನೀಡಿದರು.

    ಶಾಲೆಗಳಲ್ಲೂ ಜಾಗೃತಿ ಮೂಡಿಸಲು ತಯಾರಿ:
    ಡೆಂಗ್ಯೂ ಎಲ್ಲೆಲ್ಲಿ ಪಾಸಿಟಿವ್‌ ಪ್ರಕರಣಗಳು ಬರುತ್ತವೆ, ಅಲ್ಲಿ ಮಾನಿಟರ್‌ ಮಾಡಲು ಸೂಚಿಸಿದ್ದೇವೆ. ಲಾರ್ವ ನಾಶ ಮಾಡಬೇಕು, ಫಾಗಿಂಗ್ ಮಾಡಬೇಕು. ಜೊತೆಗೆ ಬೆಂಗಳೂರು ನಗರದಲ್ಲಿರುವ ಕ್ಷೇಮಾಭಿವೃದ್ಧಿ ಸಂಘಗಳ ಸಭೆ ಕರೆದು ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಜೊತೆಗೆ ವೈದ್ಯಕೀಯ ಅಧಿಕಾರಿಗಳು ಹತ್ತಿರದ ಶಾಲೆಗಳಿಗೆ ತೆರಳಿ ವಿಜ್ಞಾನ ಶಿಕ್ಷಕರಿಂದ ಮಕ್ಕಳಿಗೆ ಜಾಗೃತಿ ಮೂಡಿಸುವ ಬಗ್ಗೆ ತರಬೇತಿ ನೀಡುವಂತೆ ಸೂಚಿಸಿದ್ದೇವೆ.