Tag: ಡೆಲ್ಲಿ

  • ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಚೆನ್ನೈ – ಡೆಲ್ಲಿಗೆ 3 ವಿಕೆಟ್ ರೋಚಕ ಜಯ

    ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಚೆನ್ನೈ – ಡೆಲ್ಲಿಗೆ 3 ವಿಕೆಟ್ ರೋಚಕ ಜಯ

    ದುಬೈ: ಕ್ಯಾಚ್‌ ಕೈಚೆಲ್ಲಿದ ಸಿಎಸ್‌ಕೆ ಮ್ಯಾಚ್‌ ಸೋತಿದೆ. ಪಂದ್ಯದ 18ನೇ ಓವರ್‌ನ ಮೂರನೇ ಎಸೆತದಲ್ಲಿ ಡೆಲ್ಲಿ ತಂಡದ ಶಿಮ್ರಾನ್ ಹೆಟ್ಮಾಯೆರ್ ಹೊಡೆದ ಹೊಡೆತವನ್ನು ಕ್ಯಾಚ್ ಹಿಡಿಯಲು ವಿಫಲವಾದ ಚೆನ್ನೈ ತಂಡದ ಗೌತಮ್ ಅದನ್ನು ಬೌಂಡರಿಗೆ ಬಿಟ್ಟುಕೊಟ್ಟರು. ಇದರ ಲಾಭ ಪಡೆದ ಡೆಲ್ಲಿ ತಂಡ ಅಂತಿಮವಾಗಿ ಚೆನ್ನೈ ವಿರುದ್ಧ 3 ವಿಕೆಟ್‍ಗಳಿಂದ ಗೆದ್ದು, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ.

    137 ರನ್‍ಗಳ ಗುರಿ ಬೆನ್ನು ಹತ್ತಿದ ಡೆಲ್ಲಿ ತಂಡ ಕೂಡ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಪೃಥ್ವಿ ಶಾ 18 ರನ್ (12 ಎಸೆತ, 3 ಬೌಂಡರಿ) ಸಿಡಿಸಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಶ್ರೇಯಸ್ ಅಯ್ಯರ್ ಕೇವಲ 2 ರನ್‍ಗಳಿಗೆ ಸುಸ್ತಾದರೆ, ರಿಷಬ್ ಪಂತ್ 15 ರನ್ (12 ಎಸೆತ, 1 ಬೌಂಡರಿ, 1 ಸಿಕ್ಸ್) ಬಾರಿಸಿ ವಿಕೆಟ್ ಕೈಚೆಲ್ಲಿಕೊಂಡರು. ಶಿಖರ್ ಧವನ್ ಗೆಲುವಿಗಾಗಿ ಹೋರಾಟ ನಡೆಸಿದರು ಕೂಡ 39 ರನ್ (35 ಎಸೆತ, 3 ಬೌಂಡರಿ, 2ಸಿಕ್ಸ್) ಪೆವಿಲಿಯನ್ ಸೇರಿಕೊಂಡರು. ಕೊನೆಯಲ್ಲಿ ಶಿಮ್ರಾನ್ ಹೆಟ್ಮಾಯೆರ್  ಅಜೇಯ 28 ರನ್ (18 ಎಸೆತ, 2 ಬೌಂಡರಿ, 1 ಸಿಕ್ಸ್) ಬಾರಿಸಿ ತಂಡಕ್ಕೆ ಗೆಲುವಿಗೆ ಕಾರಣರಾದರು. ಇದನ್ನೂ ಓದಿ: ಪಂಡೋರಾ ಪೇಪರ್ ರಹಸ್ಯ- ಸಚಿನ್ ತೆಂಡೂಲ್ಕರ್ ಹೆಸರು ಉಲ್ಲೇಖ

    ಚೆನ್ನೈ ಪರ ಶಾರ್ದೂಲ್ ಠಾಕೂರ್ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಕಿತ್ತರೆ, ಜೋಶ್ ಹೇಜಲ್‍ವುಡ್, ದೀಪಕ್ ಚಹರ್, ಬ್ರಾವೋ ತಲಾ 1 ವಿಕೆಟ್ ಪಡೆದರು.

    ಟಾಸ್ ಸೋತು ಬ್ಯಾಟಿಂಗ್‍ಗಿಳಿದ ಚೆನ್ನೈ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ 13 ರನ್ (13 ಎಸೆತ, 2 ಬೌಂಡರಿ) ಮತ್ತು ಫಾಫ್ ಡು ಪ್ಲೆಸಿಸ್ 10 ರನ್ (8 ಎಸೆತ, 2 ಬೌಂಡರಿ) ಸಿಡಿಸಿ ಔಟ್ ಆಗುವ ಮೂಲಕ ಉತ್ತಮ ಆರಂಭವನ್ನು ನೀಡಲು ವಿಫಲವಾದರು. ಬಳಿಕ ಬಂದ ಕನ್ನಡಿಗ ರಾಬಿನ್ ಉತ್ತಪ್ಪ 19 ರನ್ (19 ಎಸೆತ, 1 ಬೌಂಡರಿ) ಬಾರಿಸಿ ಅಶ್ವಿನ್ ಸ್ಪೀನ್ ಮೋಡಿಗೆ ವಿಕೆಟ್ ಒಪ್ಪಿಸಿದರು. ಇದನ್ನೂ ಓದಿ: ಹೈದಾರಾಬಾದ್‍ಗೆ ಬೇಡವಾದ ಡೇವಿಡ್ ವಾರ್ನರ್

    ರಾಯುಡು ಅರ್ಧಶತಕ: ಚೆನ್ನೈ ತಂಡ 59 ರನ್‍ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದಾಗ ಒಂದಾದ ಅಂಬಾಟಿ ರಾಯುಡು ಮತ್ತು ಮಹೇಂದ್ರ ಸಿಂಗ್ ಧೋನಿ 5ನೇ ವಿಕೆಟ್‍ಗೆ 70 ರನ್ (64 ಎಸೆತ)ಗಳ ಜೊತೆಯಾಟವಾಡಿತು. ಧೋನಿ 18 ರನ್ (27 ಎಸೆತ) ಅವೇಶ್ ಖಾನ್‍ಗೆ ವಿಕೆಟ್ ಒಪ್ಪಿಸಿದರೆ, ರಾಯುಡು ತಂಡಕ್ಕೆ ಆಸರೆಯಾಗುವ ಜೊತೆಗೆ 55 ರನ್ (43 ಎಸೆತ, 5 ಬೌಂಡರಿ, 2 ಸಿಕ್ಸ್) ಅರ್ಧಶತಕ ಸಿಡಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ನಿಗದಿತ ಓವರ್‌ಗಳ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 136ರನ್ ಗಳಿಸಿತು.

    ಡೆಲ್ಲಿ ಪರ ಅಕ್ಷರ್ ಪಟೇಲ್ 2 ವಿಕೆಟ್ ಪಡೆದರೆ, ಅವೇಶ್ ಖಾನ್, ಅನ್‌ರಿಚ್ ನಾಟ್ರ್ಜೆ, ರವಿಚಂದ್ರನ್ ಅಶ್ವಿನ್ ತಲಾ 1 ವಿಕೆಟ್ ಹಂಚಿಕೊಂಡರು.

  • ಡೆಲ್ಲಿಗೆ ಆಧಾರವಾದ ಅಯ್ಯರ್- ಮುಂಬೈ ವಿರುದ್ಧ 4 ವಿಕೆಟ್‍ಗಳ ಜಯ

    ಡೆಲ್ಲಿಗೆ ಆಧಾರವಾದ ಅಯ್ಯರ್- ಮುಂಬೈ ವಿರುದ್ಧ 4 ವಿಕೆಟ್‍ಗಳ ಜಯ

    ದುಬೈ: ಮುಂಬೈ ದಾಳಿಗೆ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿದ ಡೆಲ್ಲಿ ತಂಡಕ್ಕೆ ಆಧಾರವಾದ ಶ್ರೇಯಸ್ ಅಯ್ಯರ್ ಕಡೆಯವರೆಗೆ ಹೋರಾಡಿ 4 ವಿಕೆಟ್‍ಗಳ ಜಯ ತಂದುಕೊಟ್ಟರು.

    130ರನ್‍ಗಳ ಟಾರ್ಗೆಟ್ ಬೆನ್ನುಹತ್ತಿದ ಡೆಲ್ಲಿ ಕೂಡ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ಟಾಪ್ ಆಡರ್ ಬ್ಯಾಟ್ಸ್‌ಮ್ಯಾನ್‌ಗಳಾದ ಪೃಥ್ವಿ ಶಾ, ಧವನ್, ಸ್ಮಿತ್ ಒಂದಕ್ಕಿ ಮೊತ್ತಕ್ಕೆ ಔಟ್ ಆದರು ಡೆಲ್ಲಿ ನಾಯಕ ರಿಷಬ್ ಪಂತ್ ತಂಡಕ್ಕೆ ಆಸರೆಯಾಗುವ ಸೂಚನೆ ನೀಡಿದರು ಸಹ 26ರನ್(22 ಎಸೆತ, 3 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟ್ ಆದರು. ನಂತರ ಅಯ್ಯರ್ ಜೊತೆ ಸೇರಿದ ರವಿಚಂದ್ರನ್ ಅಶ್ವಿನ್ ಕಡೆಯ 6 ಬಾಲ್‍ಗೆ 4 ರನ್ ಅವಶ್ಯಕತೆ ಇದ್ದಾಗ 19 ಓವರ್‍ ನ ಮೊದಲ ಎಸೆತವನ್ನೇ ಸಿಕ್ಸರ್‌ಗಟ್ಟಿ ಡೆಲ್ಲಿಗೆ ಜಯ ತಂದುಕೊಟ್ಟರು. ಅಯ್ಯರ್ 33ರನ್(33 ಎಸೆತ, 2 ಬೌಂಡರಿ) ಮತ್ತು ಅಶ್ವಿನ್ 20ರನ್ (21 ಎಸೆತ, 1 ಸಿಕ್ಸ್) ಸಿಡಿಸಿ ಅಜೇಯರಾಗಿ ಉಳಿದರು. ಇದನ್ನೂ ಓದಿ: 14ನೇ ಐಪಿಎಲ್‍ಗೆ ಗುಡ್‍ಬೈ ಹೇಳಿದ ಗೇಲ್

    ಅವೇಶ್, ಪಟೇಲ್ ಮಾರಕ ದಾಳಿ
    ಟಾಸ್ ಸೋತು ಮೊದಲು ಬ್ಯಾಟಿಂಗ್‍ಗೆ ಬಂದ ಮುಂಬೈ ತಂಡಕ್ಕೆ ಎದುರಾಳಿ ತಂಡದ ಬೌಲರ್‍ ಗಳಾದ ಅವೇಶ್ ಖಾನ್ ಮತ್ತು ಅಕ್ಷರ್ ಪಟೇಲ್ ಮಾರಕ ದಾಳಿ ಸಂಘಟಿಸಿದರು. ಆರಂಭದಲ್ಲೇ ರೋಹಿತ್ ಶರ್ಮಾ 7ರನ್(10 ಎಸೆತ, 1 ಬೌಂಡರಿ) ಬಾರಿಸಿ ಅವೇಶ್ ಖಾನ್‍ಗೆ ವಿಕೆಟ್ ಒಪ್ಪಿಸಿದರೆ, ಡಿ ಕಾಕ್ 19ರನ್(18 ಎಸೆತ, 1 ಬೌಂಡರಿ, 1 ಸಿಕ್ಸ್) ಸಿಡಿಸಿ ಅಕ್ಷರ್ ಪಟೇಲ್‍ಗೆ ವಿಕೆಟ್ ನೀಡಿ ಔಟ್ ಆದರು, ಆ ಬಳಿಕ ಬಂದ ಸೂರ್ಯಕುಮಾರ್ ಯಾದವ್ 33ರನ್(26 ಎಸೆತ, 2 ಸಿಕ್ಸ್, 2 ಬೌಂಡರಿ)ಚಚ್ಚಿ ಸಿಡಿಯುವ ಸೂಚನೆ ನೀಡಿದರು ಕೂಡ ಪಟೇಲ್ ಅವಕಾಶ ನೀಡದೆ ವಿಕೆಟ್ ಕಿತ್ತು ಪೇವಿಲಿಯನ್ ಕಳುಹಿಸಿದರು.

    ಕುಸಿದ ಮುಂಬೈ
    ವಿಕೆಟ್ ಕಳೆದುಕೊಂಡು ಸಾಗಿದ ಮುಂಬೈ ತಂಡಕ್ಕೆ ಕಡೆಯಲ್ಲಿ ಹಾರ್ದಿಕ್ ಪಾಂಡ್ಯಾ 17ರನ್(18 ಎಸೆತ, 2 ಬೌಂಡರಿ) ಮತ್ತು ಕೃನಾಲ್ ಪಾಂಡ್ಯಾ 13ರನ್(15 ಎಸೆತ 1 ಬೌಂಡರಿ, 1 ಸಿಕ್ಸ್) ಸಿಡಿಸಿ ತಂಡದ ಮೊತ್ತವನ್ನು 120ರ ಗಡಿ ದಾಟಿಸಿದರು. ಅಂತಿಮವಾಗಿ ಮುಂಬೈ ತಂಡ ನಿಗದಿತ ಓವರ್‍ ಗಳ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 129 ರನ್ ಗಳಿಸಿತು. ಇದನ್ನೂ ಓದಿ: ರೋಚಕ ಘಟ್ಟ ತಲುಪಿದ ಐಪಿಎಲ್ – ಪ್ಲೇ ಆಫ್‍ಗೆ ಏರಲು ಯಾವ ತಂಡ ಏನು ಮಾಡಬೇಕು?

    ಡೆಲ್ಲಿ ಪರ ಅವೇಶ್ ಖಾನ್ ಮತ್ತು ಅಕ್ಷರ್ ಪಟೇಲ್ 3 ವಿಕೆಟ್ ಕಿತ್ತು ಮಿಂಚಿದರೆ, ಅನ್ರಿಚ್ ನಾಟ್ರ್ಜೆ ಮತ್ತು ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.

  • ರೋಚಕ ಘಟ್ಟ ತಲುಪಿದ ಐಪಿಎಲ್ – ಪ್ಲೇ ಆಫ್‍ಗೆ ಏರಲು ಯಾವ ತಂಡ ಏನು ಮಾಡಬೇಕು?

    ರೋಚಕ ಘಟ್ಟ ತಲುಪಿದ ಐಪಿಎಲ್ – ಪ್ಲೇ ಆಫ್‍ಗೆ ಏರಲು ಯಾವ ತಂಡ ಏನು ಮಾಡಬೇಕು?

    ದುಬೈ: 14ನೇ ಅವೃತ್ತಿಯ ಐಪಿಎಲ್ ಪಂದ್ಯಗಳು ದಿನೇ ದಿನೇ ರೋಚಕತೆ ಪಡೆದುಕೊಳ್ಳತ್ತಿವೆ. ಟೂರ್ನಿಯ ಕೊನೆಯ ಹಂತದ ಕೆಲವೇ ಕೆಲವು ಲೀಗ್ ಪಂದ್ಯಗಳು ಬಾಕಿ ಉಳಿದಿದ್ದು, ಇನ್ನೂ ಪ್ಲೇ ಆಫ್‍ಗೆ ಯಾವ ತಂಡಗಳು ಎಂಟ್ರಿ ಕೊಡಲಿವೆ ಎಂಬುದು ಖಚಿತವಾಗಿಲ್ಲ.

    ದುಬೈನಲ್ಲಿ ನಡೆಯುತ್ತಿರುವ ದ್ವಿತೀಯಾರ್ಧದ ಐಪಿಎಲ್ ಪಂದ್ಯಗಳು ಅಭಿಮಾನಿಗಳಿಗೆ ರಸದೌತಣ ನೀಡುತ್ತಿವೆ. ಇದುವರೆಗೂ ಒಟ್ಟು ಲೀಗ್‍ನಲ್ಲಿ 43 ಪಂದ್ಯಗಳು ನಡೆದಿದೆ. ಇನ್ನೂ 13 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಆದರೂ ಯಾವ ಯಾವ ತಂಡಗಳು ಪ್ಲೇ ಆಫ್‍ಗೆ ಲಗ್ಗೆಯಿಡಲಿವೆ ಎಂಬುದು ಕೂತಹಲಕಾರಿಯಾಗಿದೆ. 10 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್, 8 ಗೆಲುವು ಹಾಗೂ 2 ಸೋಲುಗಳಿಂದ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. 11 ಪಂದ್ಯಗಳನ್ನಾಡಿರುವ ಡೆಲ್ಲಿ, 8 ಗೆಲುವು ಹಾಗೂ 3 ಸೋಲುಗಳಿಂದ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಪತ್ನಿಯಾಗುವವಳು ನನ್ನಂತೆಯೇ ಕ್ರೀಡಾಪಟುವಾಗಿರಬೇಕು: ನೀರಜ್ ಚೋಪ್ರಾ

    ಬೆಂಗಳೂರು ರಾಯಲ್ ಚಾಲೆಂಜರ್ಸ್ ಕೂಡ ಚೆನ್ನೈ ಹಾಗೂ ಡೆಲ್ಲಿ ನಂತರದ ಸ್ಥಾನದಲ್ಲಿದೆ. 11 ಪಂದ್ಯಗಳನ್ನಾಡಿರುವ ಆರ್‍ಸಿಬಿ 7 ಗೆಲುವು ಹಾಗೂ 4 ಸೋಲುಗಳಿಂದ 14 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. 11 ಪಂದ್ಯಗಳಲ್ಲಿ 5 ಗೆಲುವು, 6 ಸೋಲು ಕಂಡಿರುವ ಕೆಕೆಆರ್ 10 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ 5 ಗೆಲುವು, 6 ಸೋಲುಗಳಿಂದ 5ನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಮ್ಯಾಕ್ಸ್‌ವೆಲ್ ಅಬ್ಬರ -ರಾಜಸ್ಥಾನ ವಿರುದ್ಧ ಬೆಂಗಳೂರಿಗೆ 7 ವಿಕೆಟ್ ಜಯ

    ಎಲ್ಲಾ ತಂಡಗಳಿಗೂ 10 ಪಂದ್ಯಗಳೂ ಮುಗಿದರೂ ಇನ್ನೂ ಪ್ಲೇ ಆಫ್ ಲಗ್ಗೆಯಿಡಲು ಮಾತ್ರ ಸಾಧ್ಯವಾಗಿಲ್ಲ. ಉಳಿದ 13 ಲೀಗ್ ಪಂದ್ಯಗಳ ನಂತರವಷ್ಟೇ ಮುಂದಿನ ಹಂತಕ್ಕೆ ಹೋಗುವ ತಂಡಗಳು ಯಾವುವು ಎಂಬುದು ಖಚಿತವಾಗುತ್ತದೆ.

    ಚೆನ್ನೈ, ಡೆಲ್ಲಿ ಪ್ಲೇ ಆಫ್ ಖಚಿತ

    ಈಗಾಗಲೇ 16 ಅಂಕಗಳೊಂದಿಗೆ ಕ್ರಮವಾಗಿ ಒಂದು ಹಾಗೂ 2ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್‍ನತ್ತ ಮುನ್ನಡೆದಿವೆ. ಉಳಿದಿರುವ 4 ಪಂದ್ಯಗಳಲ್ಲಿ ಒಂದು ಪಂದ್ಯ ಗೆದ್ದ, ಡೆಲ್ಲಿ 3ರಲ್ಲಿ ಒಂದು ಪಂದ್ಯ ಗೆದ್ದರೂ ಪ್ಲೇ ಆಫ್ ಪ್ರವೇಶಿಸಲಿದೆ. ಎರಡು ತಂಡಗಳ ನೆಟ್ ರನ್‍ರೇಟ್ ಕೂಡ ಉತ್ತಮವಾಗಿದೆ.

    ಒಂದು ಪಂದ್ಯ ಗೆದ್ದೂ ಆರ್​ಸಿಬಿ ಪ್ಲೇ ಆಫ್‍ಗೆ

    ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಉಳಿದಿರುವ 3 ಪಂದ್ಯಗಳಲಿ ನೆಟ್ ರನ್‍ರೇಟ್ ಜೊತೆಗೆ ಒಂದು ಪಂದ್ಯ ಗೆದ್ದರೂ ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸುವ ಸಾಧ್ಯತೆ ದಟ್ಟವಾಗಿದೆ. ನಿನ್ನೆ ರಾಜಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಅಮೋಘ ಜಯಗಳಿಸಿರುವ ಬೆಂಗಳೂರು, ಚೆನ್ನೈ ಹಾಗೂ ಡೆಲ್ಲಿ ಜೊತೆ ಪ್ಲೇ ಆಫ್‍ಗೆ ಎಂಟ್ರಿ ಕೊಡಲಿದೆ.

    ಸನ್ ರೈಸರ್ಸ್, ರಾಜಸ್ತಾನ್, ಪಂಜಾಬ್ ದೂರ

    ಟೂರ್ನಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಹೈದರಾಬಾದ್ ಈಗಾಗಲೇ ಪ್ಲೇ ಆಫ್ ಕನಸನ್ನು ಕೈ ಚೆಲ್ಲಿದೆ. ರಾಜಸ್ಥಾನ, ಪಂಜಾಬ್ 11 ಪಂದ್ಯಗಳಿಂದ 8 ಅಂಕ ಪಡೆದಿದ್ದರೂ ಪ್ಲೇ ಆಫ್ ಪ್ರವೇಶ ಕಷ್ಟ. ಎರಡು ತಂಡಗಳು, ಉಳಿದಿರುವ ಮೂರು ಪಂದ್ಯಗಳನ್ನು ಗೆದ್ದರೂ ನೆಟ್ ರನ್‍ರೇಟ್ ಕೊರತೆಯುಂಟಾಗಿ ಟೂರ್ನಿಯಿಂದ ಹೊರಬರುವ ಸಾಧ್ಯತೆ ಹೆಚ್ಚಿದೆ.

    ಕೆಕೆಆರ್, ಮುಂಬೈ, ಪಂಜಾಬ್ ನಡುವೆ ಪ್ಲೇ ಆಫ್‍ಗಾಗಿ ಹಣಾಹಣಿ

    ಪ್ಲೇ ಆಫ್‍ಗಾಗಿ ಮೂರು ತಂಡಗಳಿಗೂ ಉಳಿದಿರುವ 3 ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. 5 ಜಯದೊಂದಿಗೆ 10 ಅಂಕಗಳಿಸಿರುವ ಮುಂಬೈ ಕೆಕೆಆರ್ ನಾಲ್ಕನೇ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸಿವೆ. ಮುಂದಿನ ಪಂದ್ಯಗಳನ್ನು ಗೆದ್ದು ನೆಟ್ ರನ್‍ರೇಟ್‍ನಲ್ಲಿ ಚೇತರಿಕೆ ಕಂಡು ಸೆಮಿಸ್ ಹಂತಕ್ಕೆ ತಲುಪಲು ಕೆಕೆಆರ್ ಹಾಗೂ ಮುಂಬೈ ಹರಸಾಹಸ ಪಡಬೇಕಿದೆ.

  • ಡೆಲ್ಲಿ ಮಣಿಸಿದ ಕೋಲ್ಕತ್ತಾ – 3 ವಿಕೆಟ್‍ಗಳ ಜಯ

    ಡೆಲ್ಲಿ ಮಣಿಸಿದ ಕೋಲ್ಕತ್ತಾ – 3 ವಿಕೆಟ್‍ಗಳ ಜಯ

    ಶಾರ್ಜಾ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೆಕೆಆರ್ 3 ವಿಕೆಟ್‍ಗಳ ಜಯ ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ.

    ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 128 ರನ್‍ಗಳ ಗುರಿಯನ್ನು ಕೆಕೆಆರ್ 18.2 ಓವರ್‍ಗಳಲ್ಲಿ ಹೊಡೆದು ಜಯವನ್ನು ತನ್ನದಾಗಿಸಿಕೊಂಡಿದೆ. ಸೋತರೂ ಡೆಲ್ಲಿ, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಮುಂದುವರಿದಿದೆ. ಇದನ್ನೂ ಓದಿ: ಕೋಲ್ಕತ್ತಾಗೆ 7 ವಿಕೆಟ್‍ಗಳ ಭರ್ಜರಿ ಜಯ – 4ನೇ ಸ್ಥಾನಕ್ಕೆ ಜಿಗಿತ

    ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಬಹೃತ್ ಮೊತ್ತ ದಾಖಲಿಸುವ ಸೂಚನೆ ನೀಡಿತು. ಸ್ಮಿತ್ 39 ರನ್ (34 ಎಸೆತ 4 ಬೌಂಡರಿ) ಸಿಡಿಸಿ ವಿಕೆಟ್ ಒಪ್ಪಿಸಿದರು. ಶಿಖರ್ ಧವನ್ 24ರನ್ (20 ಎಸೆತ 5 ಬೌಂಡರಿ) ಗಳಿಸಿದರು. ಕೆಕೆಆರ್ ಬೌಲರ್‍ಗಳ ದಾಳಿಗೆ ನಲುಗಿದ ಡೆಲ್ಲಿ ರನ್ ಗಳಿಸಲು ಪರಾದಡಿತು. ನಾಯಕ ರಿಷಭ್ ಪಂತ್ 39 ರನ್ (36 ಎಸೆತ 3 ಬೌಂಡರಿ) ಸಿಡಿಸಿ ರನ್ ಔಟ್‍ಗೆ ಬಲಿಯಾದರು. ಇನ್ನುಳಿದ ಯಾವೊಬ್ಬ ಡೆಲ್ಲಿ ಬ್ಯಾಟ್ಸ್‍ಮನ್ ಕೂಡ ಕೆಕೆಆರ್ ಬೌಲಿಂಗ್ ದಾಳಿಯನ್ನು ಎದುರಿಸಲಾಗದೆ ಪೆವಿಲಿಯನ್ ಪರೆಡ್ ನಡೆಸಿದರು. ನಿಗದಿತ 20 ಓವರ್‍ಗಳಲ್ಲಿ ಡೆಲ್ಲಿ ತಂಡ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಲಷ್ಟೆ ಶಕ್ತವಾಯಿತು. ಕೆಕೆಆರ್ ಪರ ನರೈನ್ ಹಾಗೂ ಫರ್ಗುಸನ್ ತಲಾ 2 ವಿಕೆಟ್ ಪಡೆದು ಮಿಂಚಿದರು. ಇದನ್ನೂ ಓದಿ: ಜೇಸನ್ ರಾಯ್ ಅಬ್ಬರಕ್ಕೆ ಮಕಾಡೆ ಮಲಗಿದ ರಾಜಸ್ಥಾನ್ ರಾಯಲ್ಸ್: ಹೈದರಾಬಾದ್‍ಗೆ ಜಯ

    ಡೆಲ್ಲಿ ನೀಡಿದ್ದ ಸಾಧಾರಣ ಗುರಿ ಬೆನ್ನತ್ತಿದ ಕೋಲ್ಕತ್ತಾ ಉತ್ತಮ ಆರಂಭ ಪಡೆಯಿತು. ಶುಬ್‍ಮನ್ ಗಿಲ್ 30ರನ್ (33 ಎಸೆತ 1 ಬೌಂಡರಿ 2 ಸಿಕ್ಸರ್) ಸಿಡಿಸಿ ರಬಾಡಗೆ ವಿಕೆಟ್ ಒಪ್ಪಿಸಿದರು. ಡ್ಯಾಸಿಂಗ್ ಓಪನರ್ ವೆಂಕಟೇಶ್ ಅಯ್ಯರ್ 14ರನ್ (15 ಎಸೆತ 2 ಬೌಂಡರಿ) ಗಳಿಸಿ ಯಾದವ್‍ಗೆ ವಿಕೆಟ್ ಕೊಟ್ಟು ಹೊರ ನಡೆದರು. ಅಲ್ಪ ಮೊತ್ತವನ್ನು ಬೆನ್ನತ್ತಲು ತಿಣುಕಾಡಿದ ಕೆಕೆಆರ್‍ಗೆ ನಿತೀಶ್ ರಾಣಾ ಅಜೇಯ 36ರನ್ (27 ಎಸೆತ 2 ಬೌಂಡರಿ 2 ಸಿಕ್ಸರ್) ಸಿಡಿಸುವ ಮೂಲಕ ಜಯ ದೊರಕಿಸಿಕೊಟ್ಟರು. ಡೆಲ್ಲಿ ಪರ ಅವೇಶ್ ಖಾನ್ 3 ವಿಕೆಟ್ ಪಡೆದರೆ ಅಶ್ವಿನ್ 1 ಹಾಗೂ ಲಲಿತ್ ಯಾದವ್ 1 ವಿಕೆಟ್ ಪಡೆದರು.

  • ದೆಹಲಿಯ ಆಸ್ಪತ್ರೆಗಳ ಮೇಲೆ ಅಫ್ಘಾನಿಸ್ತಾನ ಅವಲಂಬಿತವಾಗಿದೆ: ಪರಿಸ್ಥಿತಿ ಬಿಚ್ಚಿಟ್ಟ ಜಾನ್

    ದೆಹಲಿಯ ಆಸ್ಪತ್ರೆಗಳ ಮೇಲೆ ಅಫ್ಘಾನಿಸ್ತಾನ ಅವಲಂಬಿತವಾಗಿದೆ: ಪರಿಸ್ಥಿತಿ ಬಿಚ್ಚಿಟ್ಟ ಜಾನ್

    ಉಡುಪಿ: ಭಾರತದ ಔಷಧ ಅಫ್ಘಾನಿಸ್ತಾನಕ್ಕೆ ಸದಾ ರವಾನೆಯಾಗುತ್ತದೆ. ಗಂಭೀರ ಆರೋಗ್ಯ ಪರಿಸ್ಥಿತಿಗಳು ಉಂಟಾದ ಸಂದರ್ಭದಲ್ಲಿ ಅಫ್ಘಾನಿಸ್ತಾನದಿಂದ ಡೆಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಾರೆ ಎಂಬ ಸತ್ಯಾಂಶವನ್ನು ಅಘ್ಘಾನಿಸ್ತಾನದಿಂದ ತಾಯ್ನಾಡಿಗೆ ಮರಳಿರುವ ಮಲ್ಪೆಯ ಜಾನ್ ಎಂಬವರು ಬಿಚ್ಚಿಟ್ಟಿದ್ದಾರೆ.

    ಅಫ್ಘಾನಿಸ್ತಾನ ತಾಲಿಬಾನ್ ಕೈವಶವಾಗುವ ದಿನವೇ ಮಲ್ಪೆಯ ಜಾನ್ ಭಾರತಕ್ಕೆ ವಾಪಸ್ಸಾಗಿದ್ದಾರೆ. ಫ್ಯೂಯೆಲ್ ಸೂಪರ್ ವೈಸರಾಗಿ ಜಾನ್ ಅವರು ವೃತ್ತಿ ನಿರ್ವಹಿಸುತ್ತಿದ್ದರು. ಅಲ್ಲಿಂದ ತಾಯ್ನಾಡಿಗೆ ಮರಳಿದ ಬಳಿಕ ಅಲ್ಲಿನ ಸ್ಥಿತಿಯನ್ನು ಟಿವಿಯಲ್ಲಿ ನೋಡಿ ದೇವರೇ ನನ್ನನ್ನು ಕರೆಸಿಕೊಂಡರು ಎಂದು ಜಾನ್ ಖುಷಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣಕ್ಕೆ 5 ಸಾವಿರ ಅಮೆರಿಕ ಸೈನಿಕರ ನಿಯೋಜನೆ

    ಅಘ್ಘಾನಿಸ್ತಾನ ಪರಿಸ್ಥಿತಿ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಜಾನ್, ಕಳೆದ 10 ದಿನಗಳಿಂದ ತಾಲಿಬಾನಿಗಳು ನಮ್ಮ ಎಲ್ಲಾ ಕಂಪನಿಗಳನ್ನು ವಶಪಡಿಸಿಕೊಂಡು ಬರುತ್ತಿದ್ದರು. ಕಾಬೂಲ್ ಬ್ರಾಂಚ್ ಮಾತ್ರ ನಮ್ಮ ಕೈಯಲ್ಲಿ ಉಳಿದಿತ್ತು. ನಮಗೆ ಮೆಸೇಜ್ ಮೂಲಕ ಬಾಸ್ ಮಾಹಿತಿಯನ್ನು ಕೊಟ್ಟಿದ್ದರು. ಕೂಡಲೇ ದೇಶಕ್ಕೆ ವಾಪಸಾಗಲು ಸಿದ್ಧರಾಗಿ ಎಂದು ಹೇಳಿದರು.

    ಟಿಕೆಟ್ ಮಾಡಿ ಕಳುಹಿಸಿದರು. ವಿಮಾನದಲ್ಲಿ ಕುಳಿತು ಅರ್ಧ ಗಂಟೆಯ ಒಳಗೆ ಅಫ್ಘಾನಿಸ್ತಾನ ಚಿತ್ರಣವೇ ಬದಲಾಗಿದೆ. ತಾಲಿಬಾನ್‍ಗಳು ದೇಶ ವಶಪಡಿಸಿದ್ದಾರೆ ಎಂಬ ಮಾಹಿತಿ ನನಗೆ ಗೊತ್ತಾಯಿತು. ಸಂಕಟ ಸಮಯದಲ್ಲಿ ದೇವರೇ ನನ್ನನ್ನು ಅಲ್ಲಿಂದ ಕರೆದುಕೊಂಡು ಬಂದಿದ್ದಾರೆ ಎಂದು ಅನಿಸುತ್ತದೆ. ದೇವರ ಕೃಪೆಯಿಂದ ನಾನು ವಾಪಸ್ ಬಂದಿದ್ದೇನೆ. ಮನುಷ್ಯ ಮಾತ್ರರಿಂದ ಈ ಕೆಲಸ ಆಗಲು ಸಾಧ್ಯವಿಲ್ಲ. ಅಫ್ಘಾನ್ ಜನಕ್ಕೆ ಆ ದಿನದ ಯೋಚನೆ ಮಾತ್ರ. ಭವಿಷ್ಯದ ಬಗ್ಗೆ ನಾಳಿನ ಬಗ್ಗೆ ಯಾರೂ ಯೋಚನೆ ಮಾಡುವುದಿಲ್ಲ. ಇಂದಿನ ದಿನ ಬದುಕಿದರೆ, ಈ ದಿನ ಚೆನ್ನಾಗಿ ಹೋದರೆ ಆಯ್ತು ಎಂದು ಜೀವನ ಮಾಡುತ್ತಾರೆ. ನಾಳಿನ ಬಗ್ಗೆ ಆಲೋಚನೆಗಳೇ ಅಲ್ಲಿನ ಜನಕ್ಕೆ ಇರುವುದಿಲ್ಲ ಎಂದು ಅಲ್ಲಿನ ಮಾಹಿತಿ ನೀಡಿದರು. ಇದನ್ನೂ ಓದಿ: ತಾಲಿಬಾನಿಗಳನ್ನ RSS, ಬಜರಂಗದಳಕ್ಕೆ ಹೋಲಿಸಿದ ಕವಿ ಮುನ್ವರ್ ರಾಣಾ

    ಅಫ್ಘನ್ನರಿಗೆ ಭಾರತದಲ್ಲೇ ಚಿಕಿತ್ಸೆ:
    ಕಾಬೂಲ್ ಪಟ್ಟಣದಲ್ಲಿ ವಾರಕ್ಕೆ ಎರಡು-ಮೂರು ಬಾರಿ ಬಾಂಬ್ ಸ್ಫೋಟಗಳು ಆಗುತ್ತಿರುತ್ತವೆ. ಅಫ್ಘಾನಿಸ್ತಾನದಲ್ಲಿ ಭಾರತೀಯರಿಗೆ ಬಹಳ ಗೌರವ ಇದೆ. ಅಫ್ಘಾನಿಸ್ತಾನ ದೇಶಕ್ಕೆ ಭಾರತ ದೇಶದಿಂದ ಬಹಳ ಸಹಾಯಗಳು ಆಗಿದೆ. ಆ ಕೃತಜ್ಞತಾಭಾವ ಅವರಲ್ಲಿದೆ. ಭಾರತದ ಔಷಧ ಅಫ್ಘಾನಿಸ್ತಾನಕ್ಕೆ ಸದಾ ರವಾನೆಯಾಗುತ್ತದೆ. ಗಂಭೀರ ಆರೋಗ್ಯ ಪರಿಸ್ಥಿತಿಗಳು ಉಂಟಾದ ಸಂದರ್ಭದಲ್ಲಿ ಅಫ್ಘಾನಿಸ್ತಾನದಿಂದ ಡೆಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಾರೆ. ದೆಹಲಿಯ ಲಜಪತ್ ನಗರದಲ್ಲಿ ಅಪಘಾನಿಸ್ತಾನದವರೇ ಹೆಚ್ಚು ವಾಸಿಸುತ್ತಿದ್ದಾರೆ. ಅಲ್ಲಿ ಆಸ್ಪತ್ರೆಯಿಲ್ಲ, ಸರಿಯಾದ ಚಿಕಿತ್ಸೆಗಳು ಸಿಗುವುದಿಲ್ಲ. ಅಮೆರಿಕ ಅಲ್ಲಿ 20 ವರ್ಷದ ಕಾಂಟ್ರ್ಯಾಕ್ಟರ್ ಇಟ್ಟುಕೊಂಡಿತ್ತು. ವಾಪಸ್ ಯಾಕೆ ಹೋದರು ಎಂಬ ಬಗ್ಗೆ ನಮಗೆ ಮಾಹಿತಿಯಿಲ್ಲ ಎಂದು ಅಲ್ಲಿನ ಸ್ಥಿತಿಯನ್ನು ವಿವರಿಸಿದರು.

    ಅಫ್ಘಾನಿಸ್ತಾನದಲ್ಲಿ ಮಿಲಿಟರಿಗೆ, ಸ್ಪೆಷಲ್ ಕೋರ್ಸ್‍ಗಳಿಗೆ 20 ವರ್ಷಗಳ ಕಾಲ ಅಮೆರಿಕ ಟ್ರೈನಿಂಗ್ ಕೊಟ್ಟಿತ್ತು. ಎಲ್ಲಾ ವ್ಯರ್ಥ ಆಗಿದೆ. ಅಮೆರಿಕ 20 ವರ್ಷಗಳಿಂದ ಅಘ್ಘಾನಿಸ್ತಾನಕ್ಕೆ ಮಾಡಿದ ಎಲ್ಲಾ ಸವಲತ್ತುಗಳನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡಿದ್ದಾರೆ. ಇನ್ನೂ ಒಂದೆರಡು ತಿಂಗಳಿನಲ್ಲಿ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ನನ್ನ ಕಂಪನಿ ಮಾಲೀಕರು ಹೇಳಿದ್ದಾರೆ. ನನ್ನನ್ನು ಮತ್ತೆ ಕೆಲಸಕ್ಕೆ ಬರುವಂತೆ ಹೇಳಿದ್ದಾರೆ. ಆದರೆ ಹೋಗುವ ಬಗ್ಗೆ ಅಥವಾ ಇಲ್ಲೇ ಇರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡರು. ಇದನ್ನೂ ಓದಿ: ಪ್ರಾಣಿಗಳನ್ನು ತುಂಬಿಕೊಂಡಂತೆ 800 ಜನ ಒಂದೇ ವಿಮಾನದಲ್ಲಿ ಭಾರತಕ್ಕೆ ಬಂದಿಲ್ಲ

  • ಕೊರೊನಾದ ಮುಂದೆ ಸೋಲೊಪ್ಪಿಕೊಳ್ಳಬೇಡಿ- ಸೋಂಕಿತರಿಗೆ ಯುವ ವೈದ್ಯೆಯ ಮನದ ಮಾತು

    ಕೊರೊನಾದ ಮುಂದೆ ಸೋಲೊಪ್ಪಿಕೊಳ್ಳಬೇಡಿ- ಸೋಂಕಿತರಿಗೆ ಯುವ ವೈದ್ಯೆಯ ಮನದ ಮಾತು

    ಡೆಲ್ಲಿ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ರೋಗಿಗಳಿಗೆ ಯುವ ವೈದ್ಯರೊಬ್ಬರು ಬಹಳ ಆತ್ಮೀಯವಾಗಿ ಉಪಚರಿಸಿ ಧೈರ್ಯ ತುಂಬಿರುವ ಘಟನೆ ಡೆಲ್ಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

    ದೇಶದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿ ಹಬ್ಬುತ್ತಿದ್ದಂತೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಆಸ್ಪತ್ರೆಗೆ ಸೇರುತ್ತಿರುವವರ ಸಂಖ್ಯೆಯು ಕೂಡ ಹೆಚ್ಚಾಗುತ್ತಿದೆ. ಡೆಲ್ಲಿ ಆಸ್ಪತ್ರೆಯೊಂದರಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ಕೊಡುತ್ತಿರುವ ಯುವ ವೈದ್ಯೆ ಡಾ. ಸಂದ್ರಾ ಸೆಬಾಸ್ಟಿಯನ್ ತಾನು ಕಂಡಂತಹ ಕೊರೊನಾ ಸಾವಿನ ಘಟನೆಯೊಂದಿಗೆ ಜನರು ಮಾಡುತ್ತಿರುವ ನಿರ್ಲಕ್ಷದ ಕುರಿತಾಗಿ ಮಾತನಾಡಿದ್ದಾರೆ.

    ಸಂದ್ರಾ ಸೆಬಾಸ್ಟಿಯನ್ ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು, ಕೊರೊನಾ ರೋಗಿಗಳಿಗೆ ಧೈರ್ಯ ತುಂಬುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಸೆಬಾಸ್ಟಿನ್ ಕೊರೊನಾ ಸೋಂಕಿತರನ್ನು ಬಹಳ ಹತ್ತಿರದಿಂದ ಗಮನಿಸಿದ್ದರು. ಹಾಗಾಗಿ ಇದರ ಭೀಕರತೆ ಅವರಿಗೆ ಸರಿಯಾಗಿ ಅರ್ಥವಾಗಿದೆ. ಈ ಕುರಿತು ತಿಳಿಸಿದ ಸೆಬಾಸ್ಟಿನ್ ತನ್ನ ಕುಟುಂಬದವರೆಲ್ಲರಿಗೂ ಕೊರೊನಾ ಬಂದು ಪಟ್ಟಂತಹ ಕಷ್ಟವನ್ನು ಕಂಡು ಹಾಗೂ ತನ್ನ ಕಣ್ಣಮುಂದೆ ನೂರಾರು ಜನ ಸಾಯುವುದನ್ನು ಕಂಡು ತಾನು ವೈದ್ಯೆಯಾಗಿ ಇತರರನ್ನು ಬದುಕಿಸಬೇಕೆಂಬ ಹಂಬಲದಿಂದ ರಾತ್ರಿ ಹಗಲು ಎನ್ನದೆ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಿ ಐಸಿಯುನಲ್ಲಿದ್ದ ರೋಗಿಗಳಿಗೆ ಧೈರ್ಯ ತುಂಬುವ ಮೂಲಕ ಸೋಂಕಿನಿಂದ ಹೊರಬರುವಂತೆ ಮಾಡಿದ್ದಾರೆ.

    ಆದರೂ ಕೂಡ ಕೊರೊನಾ ಎರಡನೇ ಅಲೆ ತುಂಬಾ ಕ್ರೂರವಾಗಿದ್ದು ಜನ ಮಾಸ್ಕ್ ಮತ್ತು ಸಾಮಾಜಿಕ ಅಂತರ ಸಹಿತ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸಬೇಕು ಎಂದು ಜನರೊಂದಿಗೆ ಮನವಿ ಮಾಡಿಕೊಂಡಿದ್ದಾರೆ.

  • ಪೊಲಾರ್ಡ್ ಬ್ಯಾಟಿಂಗ್ ಸುನಾಮಿ- ಮುಂಬೈಗೆ ರೋಚಕ 4 ವಿಕೆಟ್ ಜಯ

    ಪೊಲಾರ್ಡ್ ಬ್ಯಾಟಿಂಗ್ ಸುನಾಮಿ- ಮುಂಬೈಗೆ ರೋಚಕ 4 ವಿಕೆಟ್ ಜಯ

    ನವದೆಹಲಿ: ಬೌಂಡರಿ ಸಿಕ್ಸರ್‍ ಗಳ ಸುರಿಮಳೆಗೈದ ಕೀರನ್ ಪೊಲಾರ್ಡ್ ಸ್ಪೋಟಕ ಆಟದಿಂದಾಗಿ ಮುಂಬೈ ತಂಡ ರೋಚಕವಾಗಿ 4 ವಿಕೆಟ್‍ಗಳ ಜಯ ಗಳಿಸಿತು.

    ಚೆನ್ನೈ ತಂಡ ನೀಡಿದ 219 ರನ್‍ಗಳ ಗುರಿ ಬೆನ್ನಟ್ಟಿದ ಮುಂಬೈ ತಂಡದ ಪರವಾಗಿ ಕೊನೆಯ ಬಾಲ್‍ನಲ್ಲಿ ಪೊಲಾರ್ಡ್ ಎರಡು ರನ್ ಕದಿಯುವ ಮೂಲಕ ಮುಂಬೈ ತಂಡಕ್ಕೆ ಜಯ ತಂದುಕೊಟ್ಟರು.

    ಮುಂಬೈ ಬ್ಯಾಟಿಂಗ್ ಸರದಿಯಲ್ಲಿ ಸುನಾಮಿಯಂತೆ ಬ್ಯಾಟ್‍ಬೀಸಿದ ಪೊಲಾರ್ಡ್ 87ರನ್(34 ಎಸೆತ, 6 ಬೌಂಡರಿ, 8 ಸಿಕ್ಸ್) ಸಿಡಿಸಿ ಅಜೇಯರಾಗಿ ಉಳಿಯುವ ಮೂಲಕ ಮುಂಬೈಗೆ ರೋಚಕ ಜಯ ತಂದುಕೊಟ್ಟರು. ಇವರಿಗೆ ಉತ್ತಮ ಸಾಥ್ ನೀಡಿದ ಕೃಣಾಲ್ ಪಾಂಡ್ಯ 32 ರನ್(23 ಎಸೆತ, 2 ಬೌಂಡರಿ, 2 ಸಿಕ್ಸರ್) ಮತ್ತು ಹಾರ್ದಿಕ್ ಪಾಂಡ್ಯ 16 ರನ್( 7 ಎಸೆತ, 2 ಸಿಕ್ಸ್) ಸಿಡಿಸಿ ತಂಡಕ್ಕೆ ನೆರವಾದರು. ಈ ಮೊದಲು ಮುಂಬೈ ತಂಡಕ್ಕೆ ಕ್ವಿಂಟನ್ ಡಿಕಾಕ್ ಮತ್ತು ರೋಹಿತ್ ಶರ್ಮಾ ಉತ್ತಮ ಆರಂಭವನ್ನು ಒದಗಿಸಿದರು ಡಿಕಾಕ್ 38ರನ್ (28 ಎಸೆತ,4 ಬೌಂಡರಿ, 1 ಸಿಕ್ಸ್) ಬಾರಿಸದರೆ ರೋಹಿತ್ ಶರ್ಮಾ 35ರನ್ (24 ಎಸೆತ 4 ಬೌಂಡರಿ, 1 ಸಿಕ್ಸರ್) ಸಿಡಿಸಿದರು.

    ಟಾಸು ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಕೇವಲ 4ರನ್(4 ಎಸೆತ, 1 ಬೌಂಡರಿ) ಸಿಡಿಸಿ ಪೆವಿಲಿಯನ್ ಸೇರಿಕೊಂಡರು. ನಂತರ ಬಂದ ಮೊಯೀನ್ ಅಲಿ, ಫಾಫ್ ಡು’ಪ್ಲೆಸಿಸ್ ಸೇರಿಕೊಂಡು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಮೊಯೀನ್ ಅಲಿ 58 ರನ್( 36 ಎಸೆತ, 5 ಬೌಂಡರಿ, 5 ಸಿಕ್ಸ್) ಸಿಡಿಸದರೆ, ಫಾಫ್ ಡು’ಪ್ಲೆಸಿಸ್ 50ರನ್ (28 ಎಸೆತ,2 ಬೌಂಡರಿ, 4 ಸಿಕ್ಸರ್) ಬಾರಿಸಿ ಔಟ್ ಆದರು ಬಿರುಸಿನ ಬ್ಯಾಟಿಂಗ್ ನಡೆಸಿದ ಈ ಜೋಡಿ ಎರಡನೇ ವಿಕೆಟ್‍ಗೆ 108 ರನ್ (61 ಎಸೆತ) ಒಟ್ಟುಗೂಡಿಸಿದರು.

    ರಾಯುಡು ಸ್ಪೋಟಕ ಆಟ
    11ನೇ ಓವರ್‍ನ ಕೊನೆಯಲ್ಲಿ 116ರನ್‍ಗೆ 4 ವಿಕೆಟ್ ಕಳೆದುಕೊಂಡಿದ್ದ ಚೆನ್ನೈಗೆ ನಂತರ ಬಂದ ಅಂಬಾಟಿ ರಾಯುಡು ಬೌಂಡರಿ, ಸಿಕ್ಸರ್‍ ಗಳ ಸುರಿಮಳೆಗೈದರು ಮುಂಬೈ ಬೌಲರ್‍ ಗಳ ಬೆವರಿಳಿಸಿದ ರಾಯುಡು ಮತ್ತು ರವೀಂದ್ರ ಜಡೇಜಾ ಜೋಡಿ 5ನೇ ವಿಕೆಟ್‍ಗೆ ಮುರಿಯದ 102ರನ್ (56 ಎಸೆತ)ಗಳ ಜೊತೆಯಾಟವಾಡಿದರು. ಅಂಬಾಟಿ ರಾಯುಡು 72 ರನ್(27 ಎಸೆತ, 4 ಬೌಂಡರಿ, 7 ಸಿಕ್ಸರ್) ಸಿಡಿಸಿ ಅಜೇಯರಾಗಿ ಉಳಿದರು. ಇವರಿಗೆ ಉತ್ತಮ ಸಾಥ್ ನೀಡಿದ ರವೀಂದ್ರ ಜಡೇಜಾ 22ರನ್ (22 ಬಾಲ್, 2 ಬೌಂಡರಿ) ಬಾರಿಸಿದರು. ಅಂತಿಮವಾಗಿ ಚೆನ್ನೈ 20 ಓವರ್‍ ಗಳಲ್ಲಿ 4 ವಿಕೆಟ್ ಕಳೆದುಕೊಂಡು 218ರನ್ ಮಾಡಿತು.

    ಮುಂಬೈ ಪರ ಕೀರನ್ ಪೊಲಾರ್ಡ್ 2 ವಿಕೆಟ್ ಪಡೆದರೆ ಟ್ರೆಂಟ್ ಬೌಲ್ಟ್ ಮತ್ತು ಬುಮ್ರಾ ತಲಾ ಒಂದು ವಿಕೆಟ್ ಕಬಳಿಸಿದರು.

    ರನ್ ಏರಿದ್ದು ಹೇಗೆ?

    50 ರನ್-37 ಎಸೆತ
    100 ರನ್-61 ಎಸೆತ
    150 ರನ್-96 ಎಸೆತ
    218 ರನ್-120 ಎಸೆತ

  • ಮೊದಲ ಓವರಿನಲ್ಲಿ 6 ಬೌಂಡರಿ, ಪೃಥ್ವಿ ಶಾ ಸ್ಫೋಟಕ ಆಟ – ಡೆಲ್ಲಿಗೆ 7 ವಿಕೆಟ್‍ಗಳ ಭರ್ಜರಿ ಜಯ

    ಮೊದಲ ಓವರಿನಲ್ಲಿ 6 ಬೌಂಡರಿ, ಪೃಥ್ವಿ ಶಾ ಸ್ಫೋಟಕ ಆಟ – ಡೆಲ್ಲಿಗೆ 7 ವಿಕೆಟ್‍ಗಳ ಭರ್ಜರಿ ಜಯ

    ನವದೆಹಲಿ: ಪೃಥ್ವಿ ಶಾ ಅವರ ಸ್ಫೋಟಕ ಅರ್ಧಶತಕದಿಂದ ಡೆಲ್ಲಿ ಕ್ಯಾಪಿಟಲ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ.

    ಗೆಲ್ಲಲು 155 ರನ್‍ಗಳ ಸವಾಲನ್ನು ಪಡೆದ ಡೆಲ್ಲಿ ತಂಡ 16.3 ಓವರ್‍ ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಗೆಲುವು ಸಾಧಿಸಿತು. ಈ ಮೂಲಕ ಡೆಲ್ಲಿ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿ ಬೆಂಗಳೂರು ತಂಡವನ್ನು ಮೂರನೇ ಸ್ಥಾನಕ್ಕೆ ತಳ್ಳಿತು.

    ಮೊದಲ ಓವರಿಗೆ 25 ರನ್: ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ಪೃಥ್ವಿ ಶಾ ಶಿವಂ ಮಾವಿ ಎಸೆದ ಮೊದಲ ಓವರಿನಲ್ಲಿ 6 ಬೌಂಡರಿ ಹೊಡೆದರು. ಮೊದಲ ಬಾಲ್ ವೈಡ್ ಆಗಿದ್ದ ಕಾರಣ ಈ ಓವರಿನಲ್ಲಿ 25 ರನ್ ಬಂದಿತ್ತು.

    ಶಿಖರ್ ಧವನ್ ಮತ್ತು ಪೃಥ್ವಿ ಶಾ ಮೊದಲ ವಿಕೆಟಿಗೆ 87 ಎಸೆತಗಳಲ್ಲಿ 132 ರನ್ ಜೊತೆಯಾಟವಾಡಿ ಕೋಲ್ಕತ್ತಾದಿಂದ ಪಂದ್ಯವನ್ನು ಕಸಿದಿದ್ದರು. ಶಿಖರ್ ಧವನ್ 46 ರನ್(47 ಎಸೆತ, 4 ಬೌಂಡರಿ, 1 ಸಿಕ್ಸರ್) ಹೊಡೆದು ಔಟಾದರು. ಪೃಥ್ವಿ ಶಾ 18 ಎಸೆತಗಳಲ್ಲಿ ಅರ್ಧಶತಕ ಹೊಡೆದು 82 ರನ್(41 ಎಸೆತ, 11 ಬೌಂಡರಿ, 3 ಸಿಕ್ಸರ್) ಹೊಡೆದು ಔಟಾದರು. ರಿಷಭ್ ಪಂತ್ 16 ರನ್(8 ಎಸೆತ, 2 ಬೌಂಡರಿ, 1 ಸಿಕ್ಸರ್) ಹೊಡೆದು ವಿಕೆಟ್ ಒಪ್ಪಿಸಿದರು.

    ಆಂಡ್ರೆ ರೆಸೆಲ್ ಆರ್ಭಟ
    ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ಪರ ನಿತೀಶ್ ರಾಣಾ 15 ರನ್ (12 ಎಸೆತ, 1 ಬೌಂಡರಿ, 1 ಸಿಕ್ಸ್) ಶುಭಮನ್ ಗಿಲ್ 43ರನ್(38 ಎಸೆತ, 4 ಬೌಂಡರಿ, 1 ಸಿಕ್ಸರ್) ಸಿಡಿಸಿ ಔಟ್ ಆದರು. ಬಳಿಕ ಮಧ್ಯಮ ಕ್ರಮಾಂಕದಲ್ಲಿ ಕೋಲ್ಕತ್ತಾ ಪರ ಯಾವೊಬ್ಬ ಬ್ಯಾಟ್ಸ್‍ಮ್ಯಾನ್ ಕೂಡ ಅಬ್ಬರಿಸಲಿಲ್ಲ. ಕೊನೆಗೆ ಬಿಗ್‍ಹಿಟ್ಟರ್ ಆಂಡ್ರೆ ರೆಸೆಲ್ 45ರನ್ (27 ಎಸೆತ, 2 ಬೌಂಡರಿ, 4 ಸಿಕ್ಸರ್) ಬಾರಿಸಿ ಅಜೇಯರಾಗಿ ಉಳಿದು ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಅಂತಿಮವಾಗಿ ಕೋಲ್ಕತ್ತಾ 6 ವಿಕೆಟ್ ಕಳೆದುಕೊಂಡು 154ರನ್ ಗಳಿಸಿತು.

    ಡೆಲ್ಲಿ ಪರ ಬೌಲಿಂಗ್‍ನಲ್ಲಿ ಮಿಂಚಿದ ಲಲಿತ್ ಯಾದವ್ 3 ಓವರ್ ಎಸೆದು 13 ರನ್ ನೀಡಿ 3 ವಿಕೆಟ್ ಪಡೆದರು. ಇವರಿಗೆ ಉತ್ತಮ ಸಾಥ್ ನೀಡಿದ ಅಕ್ಷರ್ ಪಟೇಲ್ ಕೂಡ 2 ವಿಕೆಟ್ ಕಿತ್ತರು. ಆವೇಶ್ ಖಾನ್ ಮತ್ತು ಮಾರ್ಕಸ್ ಸ್ಟೋಯ್ನಿಸ್ ತಲಾ 1 ವಿಕೆಟ್ ಪಡೆದರು.

  • ನಿಮ್ಮಿಂದ 1 ನಿಮಿಷ ತಡವಾಗಿದೆ, ನನಗೆ ದಂಡ ಹಾಕುವಂತಿಲ್ಲ – ಅಂಪೈರ್‍ ಗೆ ಪಂತ್ ಕಮೆಂಟ್

    ನಿಮ್ಮಿಂದ 1 ನಿಮಿಷ ತಡವಾಗಿದೆ, ನನಗೆ ದಂಡ ಹಾಕುವಂತಿಲ್ಲ – ಅಂಪೈರ್‍ ಗೆ ಪಂತ್ ಕಮೆಂಟ್

    ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ನಾಯಕ ರಿಷಬ್ ಪಂತ್ ಐಪಿಎಲ್‍ನಲ್ಲಿ ಕನಿಷ್ಠ-ಓವರ್ ರೇಟ್ ದಂಡದ ಬಗ್ಗೆ ಭಾರೀ ತಲೆ ಕೆಡಿಸಿಕೊಂಡಂತೆ ಕಂಡು ಬಂದಿದೆ. ರಾಜಸ್ಥಾನ ವಿರುದ್ಧ ಪಂದ್ಯದಲ್ಲಿ ಡೆಲ್ಲಿ ತಂಡದ ನಾಯಕ ಪಂತ್, ಅಂಪೈರ್ ಒಂದು ನಿಮಿಷ ತಡೆದು ಬೌಲ್ ಮಾಡಿಸಿದ್ದಕ್ಕೆ ಈ ಒಂದು ನಿಮಿಷವನ್ನು ವ್ಯರ್ಥಮಾಡಿದ್ದು ನೀವು ನಾನಲ್ಲ ಎಂದು ಅಂಪೈರ್‍ ಗೆ ಹೇಳಿದ್ದಾರೆ

    14ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮೊದಲು ಡೆಲ್ಲಿ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರು ಭುಜದ ನೋವಿನಿಂದ ಐಪಿಎಲ್‍ನಿಂದ ದೂರ ಸರಿದಿದ್ದರು. ಅವರ ಬದಲಾಗಿ ಪಂತ್ ಅವರಿಗೆ ಡೆಲ್ಲಿ ತಂಡದ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿತ್ತು. ನಾಯಕತ್ವದ ಹೊಣೆ ಹೊತ್ತಿರುವ ಪಂತ್ ತಂಡವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದು, ಮೊದಲ ಪಂದ್ಯವನ್ನು ಚೆನ್ನೈ ವಿರುದ್ಧ ಗೆದ್ದು ಬೀಗಿತ್ತು. ಅದರೆ ಎರಡನೇ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಮುಗ್ಗರಿಸಿದೆ. ಆದರೂ ಕೂಡ ಪಂತ್ ನಾಯಕತ್ವಕ್ಕೆ ಮಾತ್ರ ಮೆಚ್ಚುಗೆ ವ್ಯಕ್ತವಾಗಿದೆ.

    ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಆರ್ ಅಶ್ವಿನ್ ಬೌಲಿಂಗ್ ಬಂದಾಗ ಅಂಪೈರ್ 30 ಅಡಿ ದೂರದಲ್ಲಿ ಫೀಲ್ಡರ್‍ ಗಳು ನಿಂತಿದ್ದಾರ ಎಂದು ನೋಡುವುದಕ್ಕಾಗಿ ಅಶ್ವಿನ್ ಅವರನ್ನು ತಡೆದು ಪರಿಶೀಲನೆಗೆ ಇಳಿದಿದ್ದಾರೆ. ಇದನ್ನು ಗಮನಿಸಿದ ಪಂತ್ ಈ ಒಂದು ನಿಮಿಷವನ್ನು ನೀವು ವ್ಯರ್ಥ ಮಾಡಿರುವುದು. ಪಂದ್ಯ ಲೇಟ್ ಆಗಿದೆ ಎಂದು ನನಗೆ ದಂಡಹಾಕುವಂತಿಲ್ಲ ಎಂದು ಅಂಪೈರ್‍ ಗೆ ಸೂಚ್ಯವಾಗಿ ಹೇಳಿದ್ದಾರೆ. ಪಂತ್ ಮಾತು ಇದು ಸ್ಟಂಪ್ ಮೈಕ್‍ನಲ್ಲಿ ರೆಕಾರ್ಡ್ ಆಗಿದೆ. ಇದನ್ನು ಗಮನಿಸಿರುವ ಪಂತ್ ಅಭಿಮಾನಿಗಳು ಅವರ ಕ್ಯಾಪ್ಟನ್ಸಿಗೆ ಮೆಚ್ಚುಗೆ ಸೂಚಿಸಿದ್ದಾರೆ.

    ಪಂತ್ ಈ ರೀತಿ ಹೇಳಲು ಕಾರಣ ಐಪಿಎಲ್‍ನ ನಿಯಮ. 14ನೇ ಆವೃತ್ತಿಯ ಐಪಿಎಲ್‍ನ ನಿಯಮದ ಪ್ರಕಾರ ಪಂದ್ಯ ಸರಿಯಾದ ಸಮಯಕ್ಕೆ ಮುಗಿಯಬೇಕು. ಇಲ್ಲದೆ ಹೋದರೆ ಕನಿಷ್ಠ-ಓವರ್ ರೇಟ್ ಅಪರಾಧದಗಳಿಗೆ ಸಂಬಂಧಿಸಿದಂತೆ, ಐಪಿಎಲ್ ನೀತಿ ಸಂಹಿತೆ ಅಡಿಯಲ್ಲಿ ತಂಡದ ನಾಯಕನಿಗೆ ದಂಡ ಹಾಕಲಾಗುತ್ತದೆ ಇದನ್ನು ತಪ್ಪಿಸುವ ಸಲುವಾಗಿ ಪಂತ್ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

    ಚೆನ್ನೈ ಮತ್ತು ಡೆಲ್ಲಿ ನಡುವಿನ ಪಂದ್ಯದಲ್ಲಿ ಕನಿಷ್ಠ-ಓವರ್ ರೇಟ್ ಕಾಯ್ದುಕೊಳ್ಳಲು ವಿಫಲವಾಗಿದ್ದ ಚೆನ್ನೈ ತಂಡದ ನಾಯಕ ಎಂ.ಎಸ್ ಧೋನಿ ಅವರಿಗೆ 12 ಲಕ್ಷ ರೂಪಾಯಿ ದಂಡ ಬಿದ್ದಿತ್ತು. ಇದನ್ನು ಗಮನಿಸಿರುವ ಪಂತ್ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ತಮ್ಮ ತಂಡದ ಆಟಗಾರರು ಬೇಗನೆ ಓವರ್ ಎಸೆದು ಮುಗಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದರು.

  • ರಿಷಬ್ ಪಂತ್‍ಗೆ ಒಲಿದ ಡೆಲ್ಲಿ ಕ್ಯಾಪ್ಟನ್ ಪಟ್ಟ

    ರಿಷಬ್ ಪಂತ್‍ಗೆ ಒಲಿದ ಡೆಲ್ಲಿ ಕ್ಯಾಪ್ಟನ್ ಪಟ್ಟ

    ನವದೆಹಲಿ: 14ನೇ ಆವೃತ್ತಿಯ ಐಪಿಎಲ್‍ಗೆ ಇನ್ನೇನೂ ಕೆಲವೇ ದಿನಗಳು ಬಾಕಿ ಉಳಿದಿರುವಂತೆ ತಂಡಗಳು ಈಗಾಗಲೇ ಅಭ್ಯಾಸ ಆರಂಭಿಸಿದೆ. ಈ ನಡುವೆ ಡೆಲ್ಲಿ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರ ಅನುಪಸ್ಥಿತಿಯಲ್ಲಿ ಡೆಲ್ಲಿ ತಂಡವನ್ನು ಮುನ್ನಡೆಸುವ ಭಾಗ್ಯ ಭಾರತ ತಂಡದ ಯುವ ವಿಕೆಟ್‍ಕೀಪರ್ ಬ್ಯಾಟ್ಸ್‌ಮ್ಯಾನ್ ರಿಷಬ್ ಪಂತ್ ಅವರಿಗೆ ಒಲಿದು ಬಂದಿದೆ.

    ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆ ಭಾರತ ತಂಡದ ಆಟಗಾರ ಶ್ರೇಯಸ್ ಅಯ್ಯರ್ ಅವರು ಎಡಭುಜದ ನೋವಿಗೆ ತುತ್ತಾಗಿ ತಂಡದಿಂದ ಹೊರಗುಳಿದಿದ್ದರು ಇದಾದ ಬಳಿಕ ಪರೀಕ್ಷಿಸಿದ ವೈದ್ಯರು ಅಯ್ಯರ್ ಅವರಿಗೆ 2 ತಿಂಗಳ ವಿಶ್ರಾಂತಿ ಬೇಕು ಎಂದಿದ್ದಾರೆ. ಹಾಗಾಗಿ ಈ ಬಾರಿಯ ಐಪಿಎಲ್‍ನಿಂದ ಅಯ್ಯರ್ ಹೊರಗುಳಿದಿದ್ದಾರೆ. ಹಾಗಾಗಿ ಡೆಲ್ಲಿ ಫ್ರಾಂಚೈಸ್ 2021ರ ಐಪಿಎಲ್‍ನಲ್ಲಿ ಡೆಲ್ಲಿತಂಡವನ್ನು ರಿಷಬ್ ಪಂತ್ ಮುನ್ನಡೆಸಲಿದ್ದಾರೆ ಎಂದು ಅಧಿಕೃತವಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದೆ.

    ಡೆಲ್ಲಿ ತಂಡದ ನಾಯಕನಾಗುತ್ತಿದ್ದಂತೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಪಂತ್ ನಾನು ಡೆಲ್ಲಿಯಲ್ಲೇ ಹುಟ್ಟಿಬೆಳೆದವನು. 6 ವರ್ಷಗಳ ಹಿಂದೆ ಐಪಿಎಲ್ ಪಯಣವನ್ನು ಆರಂಭಿಸಿದೆ. ಆದರೆ ಆವತ್ತಿನಿಂದ ನನಗೆ ಡೆಲ್ಲಿ ತಂಡವನ್ನು ಮುನ್ನಡೆಸಬೇಕೆಂಬ ಕನಸಿತ್ತು. ಆ ಕನಸು ಇದೀಗ ನನಸಾಗಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ.

    23 ವರ್ಷದ ಪಂತ್ ಆಸ್ಟ್ರೇಲಿಯಾ ಪ್ರವಾಸದಲ್ಲಿ ಉತ್ತಮ ಬ್ಯಾಟಿಂಗ್ ನಿರ್ವಹಿಸಿ ಭಾರತ ತಂಡಕ್ಕೆ ಐತಿಹಾಸಿಕ ಟೆಸ್ಟ್ ಗೆಲುವು ತಂದುಕೊಟ್ಟಿದ್ದಾರೆ. ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್, ಟಿ20 ಮತ್ತು ಏಕದಿನ ಸರಣಿಯಲ್ಲಿ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು.

    ಡೆಲ್ಲಿ ತಂಡದಲ್ಲಿ ಘಟಾನುಘಟಿ ಆಟಗಾರರ ದಂಡೇ ಇದ್ದು ಕ್ಯಾಪ್ಟನ್ ಪಟ್ಟಕ್ಕಾಗಿ ಸ್ಟೀವ್ ಸ್ಮಿತ್, ಅಜಿಂಕ್ಯ ರಹಾನೆ ಮತ್ತು ಆರ್. ಅಶ್ವಿನ್ ನಡುವೆ ತೀವ್ರ ಪೈಪೋಟಿ ಇತ್ತು. ಅಂತಿಮವಾಗಿ ಪಂತ್ ಹೆಗಲಿಗೆ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿದೆ.

    ಪಂತ್ ಈ ಮೊದಲು ರಣಜಿ ಪಂದ್ಯಗಳಲ್ಲಿ ಮತ್ತು ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಡೆಲ್ಲಿ ತಂಡವನ್ನು ಮುನ್ನಡೆಸಿರುವ ಅನುಭವವಿದೆ. ಪಂತ್ ಹಾಗೂ ಇತರ ಪ್ರಮುಖ ಆಟಗಾರರು ಈಗಾಗಲೇ ತಂಡವನ್ನು ಕೂಡಿಕೊಂಡಿದ್ದು ತರಬೇತಿ ಆರಂಭಿಸಿದ್ದಾರೆ.

    ಕಳೆದ ವರ್ಷ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಡೆಲ್ಲಿ ತಂಡ ಅಮೋಘ ನಿರ್ವಹಣೆ ತೋರಿ ಫೈನಲ್ ಪ್ರವೇಶಿಸಿತ್ತು. ಆದರೆ ಫೈನಲ್‍ನಲ್ಲಿ ಮುಂಬೈ ವಿರುದ್ಧ ಮುಗ್ಗರಿಸಿತ್ತು. ಆದರೆ ಈ ಬಾರಿ ಪಂತ್ ನಾಯಕತ್ವದಲ್ಲಿ ಡೆಲ್ಲಿ ತಂಡ ಕಣಕ್ಕಿಳಿಯಲಿದ್ದು, ತಂಡ ಯಾವ ರೀತಿಯ ನಿರ್ವಹಣೆ ತೋರಲಿದೆ? ಪಂತ್ ಯಾವರೀತಿ ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ.

    ಡೆಲ್ಲಿ ತಂಡ ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 10 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. 14ನೇ ಆವೃತ್ತಿಯ ಐಪಿಎಲ್ ಪಂದ್ಯಾಟಗಳು ಏಪ್ರಿಲ್ 9 ರಿಂದ ಮೇ 30ರ ವರೆಗೆ ಬೆಂಗಳೂರು, ಚೆನ್ನೈ, ದೆಹಲಿ, ಅಹಮದಾಬಾದ್, ಕೋಲ್ಕತ್ತಾ ಹಾಗೂ ಮುಂಬೈ ನಗರಗಳಲ್ಲಿ ನಡೆಯಲಿದೆ.