Tag: ಡೊಳ್ಳು ಸಿನಿಮಾ

  • 68ನೇ ರಾಷ್ಟ್ರ ಪ್ರಶಸ್ತಿ ಪಡೆದ ಸ್ಯಾಂಡಲ್‌ವುಡ್ ತಾರೆಯರು

    68ನೇ ರಾಷ್ಟ್ರ ಪ್ರಶಸ್ತಿ ಪಡೆದ ಸ್ಯಾಂಡಲ್‌ವುಡ್ ತಾರೆಯರು

    68ನೇ ಸಾಲಿನ ರಾಷ್ಟ್ರ ಪ್ರಶಸ್ತಿ (68th National Film Awards) ಪಡೆಯಲಿರುವ ಪ್ರತಿಭಾನ್ವಿತರ ಪಟ್ಟಿಯನ್ನ ಈ ಹಿಂದೆಯೇ ಬಿಡುಗಡೆ ಮಾಡಲಾಗಿತ್ತು. ನಿನ್ನೆ (ಸೆ.30) ನವದೆಹಲಿಯ ವಿಗ್ಯಾನ್ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ನಮ್ಮ ಕನ್ನಡದ ಪ್ರತಿಭಾನ್ವಿತ ಕಲಾವಿದರು ಕೂಡ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿದ್ದಾರೆ.

    68ನೇ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ಇಂದು ನವದೆಹಲಿಯಲ್ಲಿ (New Dehli) ಪ್ರದಾನ ಮಾಡಲಾಯಿತು. ಭಿನ್ನ ಕಥಾಹಂದರ ಹೊಂದಿರುವ ಕನ್ನಡದ `ಡೊಳ್ಳು'(Dollu)  ಚಿತ್ರಕ್ಕಾಗಿ ಪವನ್ ಒಡೆಯರ್ ಮತ್ತು ಸಾಗರ್ ಪುರಾಣಿಕ್, ಉತ್ತಮ ಸಿನಿಮಾಗಾಗಿ `ತಲೆದಂಡ’ (Thaledanda Film) ಚಿತ್ರ, ಸಾಂಸ್ಕೃತಿಕ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶನದ `ನಾದದ ನವನೀತ’ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಇದನ್ನೂ ಓದಿ:ಐಶ್ವರ್ಯ ಪಿಸ್ಸೆ ನಂತರ ದೀಪಿಕಾ ದಾಸ್ ಅಂದ್ರೆ ನನಗಿಷ್ಟ ಎಂದ ಸೈಕ್ ನವಾಜ್

    ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನ ತಮಿಳು ಚಿತ್ರ `ಸೂರರೈ ಪೋಟ್ರು’ (Sorarai Potru) ಲಭಿಸಿದೆ. ಇನ್ನು ಬಾಲಿವುಡ್ ನಟ ಅಜಯ್ ದೇವಗನ್ (Ajay Devagun), ಕಾಲಿವುಡ್ ನಟ ಸೂರ್ಯ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಿ ಗೌರವಿಸಲಾಯ್ತು. `ಸೂರರೈ ಪೋಟ್ರು’ ಚಿತ್ರದ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಿದ್ದಾರೆ. ಸಂಗೀತ ಸಂಯೋಜಕ-ಚಲನಚಿತ್ರ ನಿರ್ಮಾಪಕ ವಿಶಾಲ್ ಭಾರದ್ವಾಜ್ ಅವರು `1232 ಕೆಎಂ’ ಸಾಕ್ಷ್ಯಚಿತ್ರದಲ್ಲಿ `ಮರೇಂಗೆ ತೋ ವಹಿನ್ ಜಾ ಕರ್’ ಹಾಡಿಗಾಗಿ ಅತ್ಯುತ್ತಮ ಸಂಗೀತ ನಿರ್ದೇಶನಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನ ಪಡೆದರು.

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಹೀಗಿದೆ:

    ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ)

    ವಿಶಿಷ್ಟ ಕಥಾಹಂದರ ಸಿನಿಮಾ: ಡೊಳ್ಳು (ಕನ್ನಡ)

    ಸಾಂಸ್ಕೃತಿಕ ವಿಭಾಗದ ಸಿನಿಮಾ: ನಾದದ ನವನೀತ (ಕನ್ನಡ)

    ಅತ್ಯುತ್ತಮ ನಟ: ಅಜಯ್ ದೇವಗನ್ ಮತ್ತು ಸೂರ್ಯ

    ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ

    ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು

    ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು

    ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ

    ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್

    ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ

    ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ

    ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್, ಸುಧಾ ಕೊಂಗರು (ಸೂರರೈ ಪೋಟ್ರು)

    ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ)

    ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್ ದೇಶಪಾಂಡೆ (ಮಿ ವಸಂತ್ ರಾವ್)

    ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)

    Live Tv
    [brid partner=56869869 player=32851 video=960834 autoplay=true]

  • ಡೊಳ್ಳು ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ : ದಾಖಲೆಯ ರೀತಿಯಲ್ಲಿ ಪ್ರಶಸ್ತಿ ಪಡೆದ ಪವನ್ ಒಡೆಯರ್

    ಡೊಳ್ಳು ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ : ದಾಖಲೆಯ ರೀತಿಯಲ್ಲಿ ಪ್ರಶಸ್ತಿ ಪಡೆದ ಪವನ್ ಒಡೆಯರ್

    ಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ನಿರ್ದೇಶಕ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವೀಸ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಸಿನಿಮಾ ಡೊಳ್ಳು. ಡೊಳ್ಳು ಕುಣಿತದ ಸುತ್ತ ಎಣೆದಿರುವ ಈ ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆಯೇ ಹರಿದು ಬಂದಿದೆ. ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಡೊಳ್ಳು ಸಿನಿಮಾ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದುಕೊಂಡಿದೆ. ಇಷ್ಟೆಲ್ಲಾ ಯಶಸ್ಸಿಗೆ ಕಾರಣದವರಿಗೆ ಇಡೀ ಚಿತ್ರತಂಡ ಧನ್ಯವಾದ ಅರ್ಪಿಸಿದೆ.

    ಒಡೆಯರ್ ಮೂವೀಸ್ ನಡಿ ನಿರ್ಮಾಣದ ಮಾಡಿರುವ ಮೊದಲ ಸಿನಿಮಾವಾಗಿದ್ದು, ನಾನು ನನ್ನ ಪತ್ನಿ, ಸ್ನೇಹಿತರಾದ ಹರೀಶ್ ನಾರಾ, ಸಚಿನ್ ತಪಶೆಟ್ಟಿ, ನರಸಿಂಹ ಜೊತೆಗೂಡಿ ಚಿತ್ರ ನಿರ್ಮಾಣ ಮಾಡಿದ್ದೇವೆ. ಇದು ನಿಜವಾದ ಸಿನಿಮಾ. ಇಡೀ ತಂಡ  ಸೇರಿಕೊಂಡು ತುಂಬಾ ಅದ್ಭುತ ಸಿನಿಮಾ ಮಾಡಿದ್ದಾರೆ. ನಿರ್ಮಾಪಕನಾಗಿ ನನಗೂ ಇದು ಹೊಸ ಅನುಭವ. ಸಿನಿಮಾದ ವಿಶೇಷ ಅಂದ್ರೆ ಇಡೀ ಡೊಳ್ಳು ಕಲಾವಿದರು ಅಭಿನಯಿಸಿರುವ ಚಿತ್ರ ಇದಾಗಿದೆ ಎಂದು ನಿರ್ಮಾಪಕ ಪವನ್ ಒಡೆಯರ್ ಅಭಿಪ್ರಾಯ ಹಂಚಿಕೊಂಡರು. ಇದನ್ನೂ ಓದಿ: ಮೂಸೆವಾಲಾ ರೀತಿಯಲ್ಲೇ ಹತ್ಯೆ ಮಾಡೋದಾಗಿ ಸಲ್ಮಾನ್‌ಖಾನ್‌ಗೆ ಬೆದರಿಕೆ – ಕೃಷ್ಣಮೃಗ ಬೇಟೆಯೇ ಮುಳುವಾಯ್ತ?

    ಇಂತಹ ಅವಕಾಶ ಮಾಡಿಕೊಟ್ಟಿದ್ದಕ್ಕೆ ಪವನ್ ಸರ್ ಗೆ ಧನ್ಯವಾದ. ಕಿರುಚಿತ್ರಗಳನ್ನು ನಿರ್ದೇಶನ ಮಾಡಿದವರಿಗೆ ಸಿನಿಮಾ ಮಾಡುವುದು ದೊಡ್ದ ಸಾಹಸ. ಆ ಸಾಹಸ ಮಾಡುವುದಕ್ಕೆ ಇಡೀ ತಂಡ ಸಪೋರ್ಟ್ ಮಾಡಿದೆ. ಈ ಯಶಸ್ಸಿಗೆ ಕಾರಣವರಾದ ಎಲ್ಲರಿಗೂ ಧನ್ಯವಾದ ಎಂದು ನಿರ್ದೇಶಕ ಸಾಗರ್ ಪುರಾಣಿಕ್ ತಮ್ಮ ಅನಿಸಿಕೆ ಹಂಚಿಕೊಂಡರು.

    ಸಾಗರ್ ಪುರಾಣಿಕ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿರುವ ಡೊಳ್ಳು ಚಿತ್ರದಲ್ಲಿ ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ, ನಾಯಕ-ನಾಯಕಿಯಾಗಿ ನಟಿಸಿದ್ದು, ಬಾಬು ಹಿರಣಯ್ಯ, ಚಂದ್ರ ಮಯೂರ್ ಶರಣ್ ಸುರೇಶ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅನಂತ್ ಕಾಮತ್ ಸಂಗೀತ, ಅಭಿಲಾಷ್ ಕಲಾಥಿ ಕ್ಯಾಮೆರಾವಿರುವ ಡೊಳ್ಳು ಸಿನಿಮಾ ಸದ್ಯದಲ್ಲಿಯೇ ಥಿಯೇಟರ್ ಅಂಗಳಕ್ಕೆ ಲಗ್ಗೆ ಇಡಲಿದೆ.

  • ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರಕ್ಕೆ ಮತ್ತೆರಡು ಪುರಸ್ಕಾರ

    ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರಕ್ಕೆ ಮತ್ತೆರಡು ಪುರಸ್ಕಾರ

    ನ್ನಡ ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ಮಾಣದ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಾಗರ್ ಪುರಾಣಿಕ್ ನಿರ್ದೇಶನದ ಡೊಳ್ಳು ಸಿನಿಮಾಗೆ ಇದೀಗ ಮತ್ತೊಂದು ಅಂತಾರಾಷ್ಟ್ರೀಯ ಸಿನಿಮೋತ್ಸವದ ಪ್ರಶಸ್ತಿ ಸಂದಿದೆ. ರಾಜಸ್ಥಾನದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಕನ್ನಡದ ಡೊಳ್ಳು ಚಿತ್ರಕ್ಕೆ ಸ್ಪೆಷಲ್ ಜೂರಿ ಅವಾರ್ಡ್ ಬೆಸ್ಟ್ ರಿಜಿನಲ್ ಫ್ಯೂಚರ್ ಫಿಲ್ಮ್ ಮತ್ತು ಬೆಸ್ಟ್ ಡೆಬ್ಯುಟಿ ಡೈರೆಕ್ಷನ್ ಆಫ್ ರಿಜಿನಲ್ ಫೀಚರ್ ಫಿಲ್ಮ್ ಎರಡು ಪ್ರಶಸ್ತಿಗಳ ಗೌರವ ದೊರೆತಿದೆ. ಈ ಸಂದರ್ಭದಲ್ಲಿ ನಿರ್ದೇಶಕ ಸಾಗರ್ ಪುರಾಣಿಕ್ ಪಬ್ಲಿಕ್ ಟಿವಿ ಡಿಜಿಟಲ್ ಜತೆ ಮಾತನಾಡಿದ್ದಾರೆ.

    “ರಾಜಸ್ಥಾನ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವೆಲ್ ನಲ್ಲಿ ಸಿನಿಮಾಗೆ ಮತ್ತು ವೈಯಕ್ತಿಕವಾಗಿ ನನಗೆ ಪ್ರಶಸ್ತಿ ಬಂದಿದ್ದು ತುಂಬಾ ಖುಷಿ ತಂದಿದೆ. ಕನ್ನಡದ ಸಿನಿಮಾವೊಂದಕ್ಕೆ ಇಂತಹ ರಾಷ್ಟ್ರೀಯ ಮನ್ನಣೆ ಸಿಕ್ಕಾಗ ಸಹಜವಾಗಿಯೇ ಸಂಭ್ರಮ ಆಗುತ್ತದೆ. ಈಗಾಗಲೇ ಹತ್ತಾರು ಅಂತಾರಾಷ್ಟ್ರೀಯ ಸಿನಿಮೋತ್ಸವದ ಪ್ರಶಸ್ತಿಗಳು ಡೊಳ್ಳು ಚಿತ್ರಕ್ಕೆ ಬಂದಿವೆ. ನನ್ನ ಸಂಸ್ಕೃತಿಯನ್ನು ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನಕ್ಕೆ ಎಲ್ಲ ಕಡೆಯಿಂದಲೂ ಉತ್ತಮ ಪ್ರತಿಕ್ರಿಯೆ ಬಂದಿದೆ’ ಎನ್ನುತ್ತಾರೆ ಸಾಗರ್ ಪುರಾಣಿಕ್. ಇದನ್ನೂ ಓದಿ : ಸ್ಟಾರ್ ತಾರಾಗಣದ ಬಹು ನಿರೀಕ್ಷಿತ ‘ತ್ರಿಕೋನ’ ಬಿಡುಗಡೆಗೆ ರೆಡಿ

     

    ನಾನಾ ನೆಲದಲ್ಲಿ ಡೊಳ್ಳಿನ ಸೌಂಡು

    ಸಾಗರ್ ಪುರಾಣಿಕ್ ನಿರ್ದೇಶನದ ಡೊಳ್ಳು ಚಿತ್ರಕ್ಕೆ ಈಗಾಗಲೇ ಅಮೆರಿಕಾದ ಬಾಸ್ಟನ್ ನಗರಿಯಲ್ಲಿ ನಡೆದ ಕಲೈಡೋಸ್ಕೋಪ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಭಾರತೀಯ ಸಿನಿಮಾ ಪ್ರಶಸ್ತಿ ಮತ್ತು ಅತ್ಯುತ್ತಮ ತಾಂತ್ರಿಕ ಸಿನಿಮಾ ಹೀಗೆ ಎರಡು ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ಅಮೆರಿಕಾದ ಡಲ್ಲಾಸ್- ನ್ಯೂಯಾರ್ಕ್ ನಗರದ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೂ ಈ ಸಿನಿಮಾ ಅಧಿಕೃತವಾಗಿ ಆಯ್ಕೆಯಾಗಿ ವಿದೇಶಿ ನೆಲದಲ್ಲಿ ಕನ್ನಡ ಧ್ವಜ ಹಾರಿಸಿತ್ತು. ಅಲ್ಲದೇ, ಪ್ರತಿಷ್ಠಿತ ಧಾಕಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೂ ಡೊಳ್ಳು ಅಧಿಕೃತವಾಗಿ ಆಯ್ಕೆಯಾಗಿ ಹೆಮ್ಮೆ ಮೂಡಿಸಿತ್ತು.

    ಗೋವಾದಲ್ಲಿ ನಡೆಯುವ 52 ಅಂತಾರಾಷ್ಟ್ರೀಯ  ಚಲನಚಿತ್ರೋತ್ಸವಕ್ಕೆ ಕನ್ನಡದಿಂದ ನಾಲ್ಕು ಚಿತ್ರಗಳು ಆಯ್ಕೆಯಾಗಿದ್ದವು. ಅದರಲ್ಲಿ ಡೊಳ್ಳು ಕೂಡ ಒಂದಾಗಿತ್ತು.  ನೇಪಾಳ ಅಂತಾರಾಷ್ಟ್ರೀಯ ಸಿನಿಮೋತ್ಸವ, ಇನೋವೇಟಿವಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ದಾದಾ ಸಾಹೇಬ್ ಫಾಲ್ಕೆ ಹೆಸರಿನ ಅವಾರ್ಡ್, ಗೋವಾ ಫಿಲ್ಮ್ ಫೆಸ್ಟಿವಲ್ ನಲ್ಲಿ ಡೆಬ್ಯು ಕಾಂಪಿಟೇಷನ್ ವಿಭಾದಲ್ಲೂ ಆಯ್ಕೆ ಆಗಿತ್ತು. ಚೆನ್ನೈನಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವ, ಕೇಂದ್ರ ಸರಕಾರದಿಂದ ಬೆರ್ನಾಲ್ ಫೆಸ್ಟಿವೆಲ್ ಆಯ್ಕೆಯಾದ  9 ಭಾರತೀಯ ಸಿನಿಮಾಗಳ್ಲಲಿ ಡೊಳ್ಳು ಕೂಡ ಒಂದು ಎನ್ನುವ ಹೆಗ್ಗಳಿಕೆ ಈ ಸಿನಿಮಾ ಪಾತ್ರವಾಗಿತ್ತು.

     

    ಅನಿರೀಕ್ಷಿತ ಅವಕಾಶ

    ಡೊಳ್ಳು ಸಾಗರ್ ಪುರಾಣಿಕ್ ಅವರಿಗೆ ಬಂದ ಅನಿರೀಕ್ಷಿತ ಅವಕಾಶವಂತೆ. ಅಂದುಕೊಂಡಂತೆ ಆಗಿದ್ದರೆ, ನಿರ್ದೇಶಕ ಪವನ್ ಒಡೆಯರ್ ಮತ್ತು ಸಾಗರ್ ಒಂದು ಸಿನಿಮಾ ಮಾಡಬೇಕಿತ್ತು. ಅದು ಮುಂದುವರೆಯಲಿಲ್ಲ. ಈ ವೇಳೆಯಲ್ಲಿ ಸಾಗರ್ ಮತ್ತೊಂದು ಸಿನಿಮಾ ತಯಾರಿ ಮಾಡಿಕೊಳ್ಳುತ್ತಿದ್ದರಂತೆ. ಆಗ ತಮ್ಮ ಹೊಸ ಪ್ರೊಡಕ್ಷನ್ ಕಂಪೆನಿ ಶುರು ಮಾಡಿ, ಒಂದೊಳ್ಳೆ ಸಿನಿಮಾ ಮಾಡಬೇಕು ಎನ್ನುವುದು ಪವನ್ ಒಡೆಯರ್ ಆಸೆ ಆಗಿತ್ತು. ಸಡನ್ನಾಗಿ ನೆನಪಾಗಿದ್ದು ಸಾಗರ್ ಪುರಾಣಿಕ್. ಪವನ್ ಒಡೆಯರ್ ನಿರ್ಮಾಣದ ಮೊದಲ ಸಿನಿಮಾವನ್ನು ಸಾಗರ್ ಕಡೆಯಿಂದಲೇ ನಿರ್ದೇಶನ ಮಾಡಿಸಬೇಕು ಎನ್ನುವ ಆಸೆ ಮತ್ತು ಪವನ್ ಸಿನಿಮಾದಲ್ಲಿ ಕೆಲಸ ಮಾಡಬೇಕು ಎನ್ನುವ ಸಾಗರ್ ಆಸೆಯನ್ನು ಡೊಳ್ಳು ಸಿನಿಮಾ ಈಡೇರಿಸಿದೆ. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ: ವಕ್ಫ್ ಮಂಡಳಿಯ ಸುತ್ತೋಲೆಯಲ್ಲಿ ಏನಿದೆ? ಸುಪ್ರೀಂ ಕೋರ್ಟ್ ಹೇಳಿದ್ದೇನು?

    ಡೊಳ್ಳಿನ ಸೌಂಡೇ ಸಿನಿಮಾಗೆ ಪ್ರೇರಣೆ

    ನಿರ್ದೇಶಕ ಸಾಗರ್ ಪುರಾಣಿಕ್ ಅವರು ಡೊಳ್ಳು ಬಾರಿಸುವುದನ್ನು ಹಲವಾರು ಬಾರಿ ನೋಡಿದ್ದರೂ, ಅವತ್ತು ಕಾರ್ಯಕ್ರಮವೊಂದಕ್ಕೆ ಹೋದಾಗ ಸಡನ್ನಾಗಿ ಶುರುವಾದ ಡೊಳ್ಳಿನ ಸೌಂಡ್ ಗೆ ಮಾರು ಹೋಗಿ, ಅದನ್ನೇ ಮೂಲವಾಗಿಟ್ಟುಕೊಂಡು ಕಥೆ ಬರೆಯುವುದಕ್ಕೆ ಶುರು ಮಾಡಿದರಂತೆ. ಬರಹಗಾರ ಶ್ರೀನಿಧಿ ಡಿ.ಎಸ್ ಇದಕ್ಕೆ ಸಾಥ್ ನೀಡಿದ್ದಾರೆ. ನಗರೀಕರಣ ಮತ್ತು ವಾಸ್ತವತೆಯನ್ನು ಡೊಳ್ಳಿನೊಂದಿಗೆ ಸಮೀಕರಿಸಿ ಸಿನಿಮಾ ಮಾಡಿದ್ದಾರೆ. ಅದೇ ಕಾರಣಕ್ಕಾಗಿಯೇ ಡೊಳ್ಳು ಇಷ್ಟೊಂದು ಅಂತಾರಾಷ್ಟ್ರೀಯ ಮನ್ನಣೆ ದೊರೆತಿದೆ. ಸಿನಿಮಾ ಮಾಡುವಾಗ ಮಳೆ ಸೇರಿದಂತೆ ಹಲವು ಅಡೆತಡೆಗಳು ಎದುರಾದವು. ಯಾವುದನ್ನೂ ಲೆಕ್ಕಿಸದೇ ಬಜೆಟ್ ಹಿಗ್ಗಿದರೂ, ತಲೆಕಡೆಸಿಕೊಳ್ಳದೇ ಡೊಳ್ಳು ಚಿತ್ರವನ್ನು ಮಾಡಿದೆ ಸಾಗರ್ ಮತ್ತು ಪವನ್ ಟೀಮ್.

    ಅಪ್ಪ ಅಧ್ಯಕ್ಷರಾಗಿದ್ದು ಸಂಭ್ರಮ ಸಂಕಟ

    ಸಾಗರ್ ಪುರಾಣಿಕ್, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ಪುತ್ರ. ಒಂದು ಕಡೆ ತಂದೆಯವರು ಅಧ್ಯಕ್ಷರಾಗಿ ಸಿನಿಮಾ ರಂಗಕ್ಕೆ ಸಾಕಷ್ಟು ಒಳ್ಳೆಯ ಕೆಲಸವನ್ನು ಮಾಡುತ್ತಿರುವುದಕ್ಕೆ ಸಂಭ್ರಮವಾದರೆ, ಮತ್ತೊಂದು ಕಡೆ ತಂದೆಯು ಅಕಾಡಮಿಯಲ್ಲಿ ಇದ್ದಾರೆ ಅನ್ನುವ ಕಾರಣಕ್ಕಾಗಿ ಸಾಗರ್ ಚಿತ್ರಕ್ಕೆ ಅನೇಕ ಅಡೆತಡೆಗಳು ಎದುರಾಗುತ್ತಿವೆಯಂತೆ. ‘ನಾನೊಬ್ಬ ಸಿನಿಮಾ ಮೇಕರ್ ಎಂದು ಪರಿಗಣಿಸದೇ ಅಪ್ಪನು ಅಕಾಡಮಿ ಅಧ್ಯಕ್ಷೆ ಅನ್ನುವ ಕಾರಣಕ್ಕೆ ನನ್ನ ಚಿತ್ರಕ್ಕೆ ಅನೇಕ ಸಂಕಷ್ಟಗಳು ಎದುರಾಗುತ್ತವೆ’ ಎನ್ನುತ್ತಾರೆ ಸಾಗರ್.

    ಡೊಳ್ಳು ಸಿನಿಮಾವನ್ನು ಪ್ರೇಕ್ಷಕರಿಗೆ ಅರ್ಪಿಸಿ ಇದೀಗ ಮತ್ತೊಂದು ಹೊಸ ಸಿನಿಮಾದತ್ತ ಮುಖ ಮಾಡಿದ್ದಾರಂತೆ ಸಾಗರ್. ಕಥೆ ಸಿದ್ಧವಾಗುತ್ತಿದೆಯಂತೆ. ಮುಂದಿನ ದಿನಗಳಲ್ಲಿ ಈ ಸಿನಿಮಾದ ಮಾಹಿತಿ ನೀಡುವುದಾಗಿ ಹೇಳುತ್ತಾರೆ.