Tag: ಡೋಂಗಿ ಬಾಬಾ

  • ಗದಗದಲ್ಲಿ ಕಾಮುಕ ಡೋಂಗಿ ಬಾಬಾನಿಗೆ ಹಿಗ್ಗಾಮುಗ್ಗ ಥಳಿತ

    ಗದಗದಲ್ಲಿ ಕಾಮುಕ ಡೋಂಗಿ ಬಾಬಾನಿಗೆ ಹಿಗ್ಗಾಮುಗ್ಗ ಥಳಿತ

    ಗದಗ: ನಗರದಲ್ಲಿ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಕಾಮುಕ ಡೋಂಗಿ ಬಾಬಾ ಅಲಿಯಾಸ್ ಆಸೀಫ್ ಜಾಗಿರದಾರ್ ಎಂಬವನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ಮೂಲತ: ವಿಜಯಪುರ ಜಿಲ್ಲೆಯವನಾಗಿದ್ದ ಡೋಂಗಿ ಬಾಬಾ ಆಸೀಫ್, ಎಸ್ ಎಂ.ಕೃಷ್ಣಾ ನಗರದಲ್ಲಿ ತನ್ನ ಪತ್ನಿ ಮನೆಯಲ್ಲಿಯೇ ಬಹಳ ದಿನಗಳಿಂದ ಠಿಕಾಣಿ ಹೂಡಿದ್ದನು. ಕಷ್ಟಪಟ್ಟು ದುಡಿಯದೇ ಆರಾಮಾಗಿ ಹಣ ಸಂಪಾದನೆ ಮಾಡಬೇಕೆಂದು ಕೊಂಡಿದ್ದ ಆಸೀಫ್, ದೇವರ ಹೆಸರಲ್ಲಿ ಮಾಟ, ಮಂತ್ರ, ಅಂತ್ರ, ತಂತ್ರಗಳನ್ನು ಮಾಡಿಕೊಡುತ್ತಿದ್ದನು. ಇದನ್ನೂ ಓದಿ: ಮಂಡ್ಯ ಕದನಕ್ಕೆ ಹೆಚ್‍ಡಿಕೆ ವಿರಾಮ – ದಳಪತಿ ಸೈಲೆಂಟ್ ಆಗಿದ್ದರ ಹಿಂದಿದ್ಯಾ ಲೆಕ್ಕಾಚಾರ..?

    ಕುದಿಯೋ ಎಣ್ಣೆ ಹಾಗೂ ಸುಡುವ ತುಪ್ಪದಲ್ಲಿ ಕೈ ಹಾಕುವುದು, ಅದರಿಂದ ಬೊಂಡಾ ಬಜ್ಜಿ ತೆಗೆಯುವುದು, ಹೀಗೆ ದೇವರ ಪವಾಡವೆಂಬಂತೆ ಜನರಿಗೆ ಮಂಕುಬೂದಿ ಎರಚುತ್ತಿದ್ದನು. ಮೈಮೇಲೆ ದೇವರು ಬಂದಂತೆ ನಟಿಸಿ ಜನರಲ್ಲಿ ನಂಬಿಕೆ ಹುಟ್ಟಿಸಿ ಮನಬಂದಂತೆ ಹಣ ಲೂಟಿ ಮಾಡುತ್ತಿದ್ದ. ಹಿಂದೂ ದೇವರುಗಳನ್ನು ಅಶ್ಲೀಲವಾಗಿ ನಿಂದಿಸುತ್ತಿದ್ದನು. ಅಲ್ಲದೇ ಸಮಸ್ಯೆ ಹೊತ್ತು ಬಂದ ಸುಂದರ ಮಹಿಳೆಯರನ್ನು ಲೈಂಗಿಕತೆಗೆ ಬಳಸಿಕೊಳ್ಳುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

    ಈ ಡೋಂಗಿ ಬಾಬಾನ ಮೋಸದ ಪವಾಡ ಬಯಲಾಗುತ್ತಿದ್ದಂತೆ, ಆಕ್ರೋಶಗೊಂಡ ಜನರು ಆತನಿಗೆ ಹಿಗ್ಗಾಮುಗ್ಗ ಗೂಸಾ ಕೊಟ್ಟು ಸ್ಥಲೀಯ ಪೊಲಿಸರಿಗೆ ಒಪ್ಪಿಸಿದ್ದಾರೆ. ಡೋಂಗಿ ಬಾಬಾನಿಗೆ ಮೋಸ ಹೋದ ಜನರು ಮುಖಮೂತಿ ನೋಡದೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ಹೊಡೆತಕ್ಕೆ ಡೋಂಗಿ ಬಾಬಾ ಆಸೀಫ್, ನಾನು ಮಾಡಿದ್ದು ತಪ್ಪಾಗಿದೆ, ನಾನು ಮಾಡಿದ್ದೆಲ್ಲ ಮೋಸ, ತಪ್ಪಾಗಿದೆ ಕ್ಷಮಿಸಿ, ನನ್ನನ್ನು ಬಿಟ್ಟುಬಿಡಿ ಎಂದು ಅದೆಷ್ಟೇ ಕೈ ಕಾಲು ಹಿಡಿದು ಬೇಡಿಕೊಂಡರೂ, ಜನ ಮಾತ್ರ ಡೋಂಗಿಯ ಚಳಿ ಬಿಡಿಸಿದ್ದಾರೆ. ಓರ್ವ ಮಹಿಳೆಯಂತೂ ಬಾಬಾನಿಗೆ ಮನಸೋ ಇಚ್ಚೇ ಗೂಸಾ ಕೊಟ್ಟಿದ್ದಾಳೆ. ಇದೀಗ ಆರೋಪಿಯನ್ನು ಗದಗ ಗ್ರಾಮೀಣ ಪೊಲೀಸರಿಗೆ ಒಪ್ಪಿಸಿದ್ದು, ತನಿಖೆ ಮಾಡಿ ಅಸಲಿ ಮುಖ ಬಯಲು ಮಾಡಬೇಕಾಗಿದೆ. ಮಾಟ, ಮಂತ್ರ, ತಂತ್ರ ಎಂದು ಮೋಸ ಮಾಡುವವರು ಇನ್ನು ಮುಂದಾದ್ರೂ ಎಚ್ಚೆತ್ತುಕೊಳ್ಳಬೇಕಿದೆ.

    ಜನ ಎಲ್ಲಿವರೆಗೂ ಮೋಸ ಹೋಗುತ್ತಾರೋ, ಅಲ್ಲಿಯವರೆಗೂ ಮೋಸ ಮಾಡುವವರು ಇದ್ದೇ ಇರುತ್ತಾರೆ ಎಂಬುವುದು ಸತ್ಯ ಅನ್ನುವುದಕ್ಕೆ ಮುದ್ರಣಾ ನಗರಿಯಲ್ಲಿ ನಡೆದ ಈ ಘಟನೆ ಒಂದು ಸಾಕ್ಷಿಯಾಗಿದೆ. ಇದನ್ನೂ ಓದಿ: ಹಳೇ ವೈಷಮ್ಯ, ಬಿಜೆಪಿ ನಾಯಕನ ಸಂಬಂಧಿ ಹತ್ಯೆ ಕೇಸ್ – ಆರೋಪಿಗಳು ಅಂದರ್

  • ನೀವು ಬೇಡ, ನಿಮ್ಮ ಎಂಜಿನಿಯರ್ ಮಗಳು ಬೇಕು – ಮೈ ಮೇಲೆ ದೇವರು ಬಂದಿದೆ ಎಂದು ಡೋಂಗಿ ಬಾಬಾನ ಡ್ರಾಮಾ

    ನೀವು ಬೇಡ, ನಿಮ್ಮ ಎಂಜಿನಿಯರ್ ಮಗಳು ಬೇಕು – ಮೈ ಮೇಲೆ ದೇವರು ಬಂದಿದೆ ಎಂದು ಡೋಂಗಿ ಬಾಬಾನ ಡ್ರಾಮಾ

    ಚಿತ್ರದುರ್ಗ: ನನ್ನ ಮೇಲೆ ದೇವರು ಬಂದಿದ್ದಾನೆ. ನಿಮ್ಮ ಎಂಜಿನಿಯರ್ ಮಗಳನ್ನು ಕೇಳುತ್ತೆ ಎಂದು ಹೇಳಿದ ಡೋಂಗಿ ಬಾಬಾನಿಗೆ ಜನರು ಥಳಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕಂಚೀಪುರ ಗ್ರಾಮದಲ್ಲಿ ನಡೆದಿದೆ.

    ಕಂಚೀಪುರ ಗ್ರಾಮದ ಲೋಕೇಶ್ ಥಳಿತಕ್ಕೊಳಗಾದ ಡೋಂಗಿ ದೇವಮಾನವ. ಅರಸೀಕೆರೆ ನಿವಾಸಿ ಟೀಚರ್ ದಂಪತಿಗೆ ದೇವಮಾನವನಿಂದ ಕಿರುಕುಳದ ಆರೋಪ ಕೇಳಿಬಂದಿದ್ದು, ಸದ್ಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನನ್ನ ಮೇಲೆ ಬರುವ ದೇವರು ಎಂಜಿನಿಯರ್ ಹುಡುಗಿಯರನ್ನೇ ಕೇಳುತ್ತೆ. ನೀವು ನಿಮ್ಮ ಮಗಳನ್ನು ಕೊಡಲಿಲ್ಲ ಎಂದರೆ ನಿಮಗೆ ತೊಂದರೆ ಆಗುತ್ತದೆ ಎಂದು ಡೋಂಗಿ ಬಾಬಾ ಡೈಲಾಗ್ ಹೊಡೆದಿದ್ದಾನೆ. ಪೂಜೆ ಮಾಡಿಕೊಡುವ ನೆಪದಲ್ಲಿ ಶಿಕ್ಷಕ ದಂಪತಿಗೆ ತನ್ನ ಮಗಳನ್ನು ಕೊಡುವಂತೆ ದೇವರು ಒತ್ತಾಯ ಮಾಡ್ತಾನೆ ಎಂದು ಹೇಳಿದ್ದಾನೆ.

    ದೇವಮಾನವ ಎಂದು ಮರ್ಯಾದೆ ಕೊಟ್ಟು ಮನೆ ಒಳಗೆ ಸೇರಿಸಿದ್ದರೆ ಮಗಳನ್ನೇ ಕೇಳಿದ್ದನ್ನು ನೋಡಿದ ಗ್ರಾಮಸ್ಥರು ಆಕ್ರೋಶಗೊಂಡು ಡೋಂಗಿ ಬಾಬಾನನ್ನು ಹಿಗ್ಗಾ ಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.

  • ಬಾಯಲ್ಲಿ ಚೊಂಬು ಇಟ್ಟು, ಪೇಪರ್‍ನಲ್ಲಿ ಬೆನ್ನು ಉಜ್ಜಿ ಹೊಟ್ಟೆಯಿಂದ ಏನಾದ್ರೂ ಬಿದ್ರೆ ಕಂಟಕ ಬಿಡ್ತು ಅಂತಾನೆ ಈ ಡೋಂಗಿ ಬಾಬಾ!

    ಬಾಯಲ್ಲಿ ಚೊಂಬು ಇಟ್ಟು, ಪೇಪರ್‍ನಲ್ಲಿ ಬೆನ್ನು ಉಜ್ಜಿ ಹೊಟ್ಟೆಯಿಂದ ಏನಾದ್ರೂ ಬಿದ್ರೆ ಕಂಟಕ ಬಿಡ್ತು ಅಂತಾನೆ ಈ ಡೋಂಗಿ ಬಾಬಾ!

    ವಿಜಯಪುರ: ಜಿಲ್ಲೆಯಲ್ಲೊಬ್ಬ ಮಾಟ ಮಂತ್ರ ಹೋಗಲಾಡಿಸುವ ಡೋಂಗಿ ಬಾಬಾನಿರುವ ಬಗ್ಗೆ ಬೆಳಕಿಗೆ ಬಂದಿದೆ. ಈತ ತಂಬಿಗೆ ಬಾಬಾ ಅಂತಾನೇ ಫೇಮಸ್ಸ್ ಆಗಿದ್ದಾನೆ.

    ಹೌದು. ವಿಜಯಪುರದ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ವಂದಾಲ ಗ್ರಾಮದ ಈ ಡೋಂಗಿ ಸ್ವಾಮಿಯ ಹೆಸರು ಧರ್ಮಣ್ಣ. ಇವನು ಬಾಯಲ್ಲಿ ಖಾಲಿ ತಂಬಿಗೆ ಇಟ್ಟು, ಬೆನ್ನಿನ ಮೇಲೆ ಪೇಪರ್‍ನಿಂದ ಸವರುತ್ತಾನೆ. ಆಗ ಮಾಟ ಮಂತ್ರಕ್ಕೆ ಒಳಗಾದ್ರೆ ಅವರ ಬಾಯಿಂದ ಕಸವೋ, ಕಡ್ಡಿಯೋ ಅಥವಾ ಕಾಳೋ ಇಲ್ಲವೇ ಹಿಟ್ಟಿನ ಉಂಡೆಯೋ ಬೀಳುತ್ತಂತೆ. ಹೀಗೆ ಬಾಯಿಂದ ಬಿದ್ದ ವಸ್ತು ರೂಪದಲ್ಲಿ ಮಾಟ ಮಂತ್ರ ಮಾಯವಾಗುತ್ತಂತೆ.

    ವಿಚಿತ್ರ ಅಂದ್ರೆ ತಲೆ ಹಾಗೂ ಬೆನ್ನಿನ ಮೇಲೆ ಕೂಡಾ ಪೇಪರ್ ಇಟ್ಟು ಪೆನ್ನಿನಿಂದ ಗೀಚುತ್ತಾನೆ. ತದನಂತರ ಬೇರೆ ಪೇಪರ್ ಕೊಟ್ಟು ಅದನ್ನು ಸೊಂಟದ ಮಧ್ಯೆ ಭಾಗ ಅಂದ್ರೆ ಕಿಬ್ಬೊಟ್ಟೆಯಲ್ಲಿ ಇಟ್ಟುಕೊಳ್ಬೇಕು ಅಂತ ಹೇಳುತ್ತಾನೆ. ಹೀಗೆ ಮಾಡುತ್ತಾ ಕಿಲಾಡಿ ಬಾಬಾ ಧರ್ಮಣ್ಣ ಇಬ್ಬರಿಂದ 200- 300 ರೂಪಾಯಿ ತೆಗೆದುಕೊಳ್ಳುತ್ತಾನೆ. ಅಲ್ಲದೇ ಈತನ ಪತ್ನಿಯ ಕೈಯಿಂದ ತಾಯ್ತ ಕೊಡಿಸಿ 50 ರೂಪಾಯಿ ವಸೂಲಿ ಮಾಡುತ್ತಿದ್ದಾನೆ ಅಂತ ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

  • ಕತ್ತಲ ಕೋಣೆಯಲ್ಲಿ ಬೆತ್ತಲಾಗುತ್ತಿದ್ದ ಡೋಂಗಿ ಬಾಬಾ ಇದೀಗ ಪೊಲೀಸರ ಅತಿಥಿ

    ಕತ್ತಲ ಕೋಣೆಯಲ್ಲಿ ಬೆತ್ತಲಾಗುತ್ತಿದ್ದ ಡೋಂಗಿ ಬಾಬಾ ಇದೀಗ ಪೊಲೀಸರ ಅತಿಥಿ

    ಮಡಿಕೇರಿ: ಮೂರು ತಿಂಗಳ ಹಿಂದೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಂಡಂಗೇರಿ ಗ್ರಾಮಕ್ಕೆ ಆಗಮಿಸಿದ ಡೋಂಗಿ ಬಾಬಾ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

    ಈ ಡೋಂಗಿ ಬಾಬಾ ಇಕ್ಬಾಲ್ ಬಾಬಾ ಎಂದು ತನ್ನನ್ನು ಪರಿಚಯ ಮಾಡಿಕೊಂಡು ಬಾಡಿಗೆ ಕಟ್ಟಡವೊಂದರಲ್ಲಿ ತನ್ನ ಕಾರ್ಯ ಚಟುವಟಿಕೆ ಪ್ರಾರಂಭಿಸಿದ್ದ. ಕತ್ತಲು ಕವಿದ ಅಮಾಯಕರ ಬಾಳಿನಲ್ಲಿ ಬೆಳಕು ಚೆಲ್ಲುತ್ತೇನೆಂದು ಬೊಗಳೆ ಬಿಡುತ್ತಾ ಕತ್ತಲ ಕೋಣೆಯೊಂದರಲ್ಲಿ ಕುಳಿತು ಮಂತ್ರ ಮತ್ತು ಮೈ ಸವರುವ ತಂತ್ರ ಶುರುವಚ್ಚಿಕೊಂಡಿದ್ದ. ಮಹಿಳಾ ಗಿರಾಕಿಗಳೇ ಹೆಚ್ಚಾಗಿರುವ ಬಾಬಾ ತನ್ನ ಕತ್ತಲ ಕೋಣೆಯಲ್ಲಿ ಬೆತ್ತಲಾಗುತ್ತಿದ್ದಾನೆ ಎಂಬುವುದನ್ನರಿತ ಕೊಂಡಂಗೇರಿ ನಿವಾಸಿಗಳು, ಆತನ ಅರಮನೆ ಒಳಹೊಕ್ಕಾಗ ಬಾಬಾನ ಬೆತ್ತಲೆ ರಹಸ್ಯ ಬಯಲಾಗಿದೆ. ಬಳಿಕ ಬಾಬಾನನ್ನು ಹಿಡಿದು ಹಿಗ್ಗಾ-ಮುಗ್ಗಾ ಥಳಿಸಿದ ಗ್ರಾಮಸ್ಥರು ಆತನನ್ನು ಸಿದ್ದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.

    ನಮ್ಮ ದೇಶದಲ್ಲಿ ಮೂಢ ನಂಬಿಕೆಗಳ ಬೇರು ಗಟ್ಟಿ ಇರುವವರೆಗೂ ಬಾಬಾ ರಾಮ-ರಹೀಮರಂತಹ ಕಾಮುಕ ಮರಗಳು ಬೃಹದಾಕಾರವಾಗಿ ಬೆಳೆಯುತ್ತಿರುತ್ತವೆ. ಆದ್ದರಿಂದ ಇಂತಹ ಬಾಬಾರನ್ನು ಮೊಳಕೆಯಲ್ಲಿಯೇ ಚಿವುಟಬೇಕಾದ ಅನಿವಾರ್ಯತೆ ಇದೆ. ಅದನ್ನು ಮಾಡಿಸಬೇಕು ಅಂತ ಕೊಂಡಂಗೇರಿ ಗ್ರಾಮಸ್ಥರು ಹೇಳಿದ್ದಾರೆ.

    ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.