Tag: ಡ್ರಗ್ಸ್ ಕೆಸ್

  • ಶಾರೂಖ್, ಗೌರಿ ಖಾನ್ ಬೆಂಬಲಕ್ಕೆ ನಿಂತ ಹೃತಿಕ್ ಮಾಜಿ ಪತ್ನಿ, ಮಿಕಾ ಸಿಂಗ್!

    ಶಾರೂಖ್, ಗೌರಿ ಖಾನ್ ಬೆಂಬಲಕ್ಕೆ ನಿಂತ ಹೃತಿಕ್ ಮಾಜಿ ಪತ್ನಿ, ಮಿಕಾ ಸಿಂಗ್!

    ಮುಂಬೈ: ಮಾದಕ ದ್ರವ್ಯ ಪ್ರಕರಣದಲ್ಲಿ ಪುತ್ರ ಆರ್ಯನ್ ಖಾನ್ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಶಾರೂಖ್ ಮತ್ತು ಗೌರಿ ಖಾನ್ ಬೆಂಬಲಕ್ಕೆ ಸುಸಾನೆ ಖಾನ್ ಮತ್ತು ಮಿಕಾ ಸಿಂಗ್ ನಿಂತಿದ್ದಾರೆ.

    ಶನಿವಾರ ರಾತ್ರಿ(ಅ.2) ನಡೆದ ಕಾರ್ಡೆಲಿಯಾ ಕ್ರೂಸ್ ಎಕ್ಸ್ ಪ್ರೆಸ್  ಹಡಗಿನಲ್ಲಿ ಮಾದಕದ್ರವ್ಯದ ದಂಧೆಯ ನಂತರ ಅಕ್ಟೋಬರ್ 3 ರಂದು ಆರ್ಯನ್ ನನ್ನು ಬಂಧಿಸಲಾಯಿತು. ನಿನ್ನೆ ಆರ್ಯನ್ ಕಸ್ಟಡಿಯನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಯಿತು. ಈ ಹಿನ್ನೆಲೆ ಬಾಲಿವುಡ್ ಸೆಲೆಬ್ರಿಟಿಗಳಾದ ಸುಸ್ಸಾನೆ ಮತ್ತು ಮಿಕಾ ಅವರು ‘ಸ್ಟಾರ್ ಕಿಡ್’ ನ ಬಂಧನವನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:  ಪಕ್ಷಿಗಳಿಗೆ ಪುನರ್ಜನ್ಮ ನೀಡುತ್ತಿರುವ ರಾಯಚೂರಿನ ಪಕ್ಷಿಪ್ರೇಮಿ ಸಲ್ಲಾವುದ್ದೀನ್

    ಆರ್ಯನ್ ಖಾನ್ ಒಳ್ಳೆಯ ಮಗು!

    ಮುಂಬೈ ಕೋರ್ಟ್ ಸೋಮವಾರ ಆರ್ಯನ್ ಖಾನ್ ನ ಮಾದಕ ವಸ್ತು ನಿಯಂತ್ರಣ ಸಂಸ್ಥೆ (ಎನ್‍ಸಿಬಿ) ಕಸ್ಟಡಿಯನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಯಿತು. ಈ ಹಿನ್ನೆಲೆ ಬಾಲಿವುಡ್ ನಟ ಹೃತಿಕ್ ರೋಷನ್ ಮಾಜಿ ಪತ್ನಿ ಸುಸಾನೆ ಖಾನ್ ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಬಾಲಿವುಡ್ ಮಂದಿ ತಮಗೆ ತೋಚಿದಂತೆ ಹೇಳಿಕೊಳ್ಳುತ್ತಿದ್ದಾರೆ. ಆರ್ಯನ್ ಖಾನ್ ಒಳ್ಳೆಯ ಮಗು, ಆದರೆ ದುರದೃಷ್ಟವಶಾತ್ ಅವರು ಕೆಟ್ಟ ಸಮಯದಲ್ಲಿ, ತಪ್ಪಾದ ಸ್ಥಳದಲ್ಲಿದ್ದರು. ಇದನ್ನು ಬಳಸಿಕೊಂಡು ಅವರನ್ನು ಬಾಲಿವುಡ್‍ನ ಕೆಲವರು ತಮ್ಮದೇ ಶೈಲಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆರ್ಯನ್ ಒಳ್ಳೆಯ ಮಗುವಾಗಿದ್ದರಿಂದ ಇದು ಅನ್ಯಾಯವಾಗಿದೆ. ನಾನು ಗೌರಿ ಮತ್ತು ಶಾರೂಖ್ ಪರವಾಗಿ ನಿಲ್ಲುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

    ಸುಸಾನೆ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಲೇಖಕಿ ಶೋಭಾ ಡಿ, ಆರ್ಯನ್ ಬಂಧನವು ಅವರ ಪೋಷಕರಿಗೆ ಎಚ್ಚರಿಕೆಯ ಗಂಟೆಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ.

    ಆ ಜಾಗಕ್ಕೆ ನಾನು ಹೋಗಬೇಕಿತ್ತು..!

    ಸಿಂಗರ್ ಮಿಕಾ ಸಿಂಗ್ ಕೂಡ ಈ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ್ದು, ಆರ್ಯನ್ ಬಿಟ್ಟರೇ ಬೇರೆ ಯಾರೂ ಆ ಹಡಗಿನಲ್ಲಿ ಇರಲಿಲ್ಲವಾ ಎಂದು ಪ್ರಶ್ನಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ವಾವ್ ಎಂತಹ ಸುಂದರವಾದ ಕಾರ್ಡೆಲಿಯಾ ಕ್ರೂಸ್. ಅಲ್ಲಿಗೆ ನಾನು ಭೇಟಿ ಕೊಡಬೇಕಿತ್ತು. ಅಲ್ಲಿ ಬಹಳಷ್ಟು ಜನರಿದ್ದಾರೆ, ಆದರೆ ಆರ್ಯನ್ ನನಗೆ ಕಾಣಿಸುತ್ತಿಲ್ಲ. ಆದರೆ ಇವರಿಗೆ ಮಾತ್ರ ಈ ದೊಡ್ಡ ಹಡಗಿನಲ್ಲಿ ಆರ್ಯನ್ ಮಾತ್ರ ಕಾಣಿಸುತ್ತಿದ್ದಾನೆ ಎಂದು ವ್ಯಂಗ್ಯವಾಗಿ ಬರೆದು ಶುಭೋದಯ ಅದ್ಭುತ ದಿನ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ಯಾರೂ ನನ್ನನ್ನು ಕೈಹಿಡಿದಿಲ್ಲ: ರಣವೀರ್ ಸಿಂಗ್

    ಈ ಹಿಂದೆ ಬಾಲಿವುಡ್ ಸೆಲೆಬ್ರಿಟಿಗಳಾದ ಸುನೀಲ್ ಶೆಟ್ಟಿ, ಸುಚಿತ್ರಾ ಕೃಷ್ಣಮೂರ್ತಿ, ಹಂಸಲ್ ಮೆಹ್ತಾ ಮತ್ತು ಪೂಜಾ ಭಟ್ ಇತರರು ಶಾರುಖ್ ಖಾನ್ ಪರವಾಗಿ ಮಾತನಾಡಿದರು. ಸಲ್ಮಾನ್ ಖಾನ್ ಅವರು ತಮ್ಮ ಬೆಂಬಲವನ್ನು ಸೂಚಿಸಲು ಎಸ್‌ಆರ್‌ಕೆ  ಅವರ ಮನೆ ಮನ್ನತ್‍ಗೆ ಭೇಟಿ ನೀಡಿದರು.

  • ಬರೀ ಯೂರಿನ್, ರಕ್ತ ಪರೀಕ್ಷೆ ಮಾಡಿದ್ರೆ ಸಾಲದು -ಹೇರ್ ಫೋಲಿಕಲ್ ಟೆಸ್ಟ್‌ಗೆ ಇಂದ್ರಜಿತ್ ಆಗ್ರಹ

    ಬರೀ ಯೂರಿನ್, ರಕ್ತ ಪರೀಕ್ಷೆ ಮಾಡಿದ್ರೆ ಸಾಲದು -ಹೇರ್ ಫೋಲಿಕಲ್ ಟೆಸ್ಟ್‌ಗೆ ಇಂದ್ರಜಿತ್ ಆಗ್ರಹ

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೀ ಯೂರಿನ್ ಹಾಗೂ ರಕ್ತ ಪರೀಕ್ಷೆ ನಡೆಸಿದರೆ ಸಾಲದು. ಹೇರ್ ಫೋಲಿಕಲ್ ಟೆಸ್ಟ್ ಮಾಡಬೇಕು ಎಂದು ನಿರ್ಮಾಪಕ ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಪ್ರಕರಣ ಸಂಬಂಧ ಯಾರನ್ನು ವಿಚಾರಣೆಗೆ ಕರೆದಿದ್ದೀರೋ ಅವರಿಗೆ ಯಾವುದೇ ರೀತಿಯ ಭಯ ಹುಟ್ಟಿಲ್ಲ. ಕೊರೊನಾ ಎರಡನೇ ಅಲೆಯ ಬಳಿಕ ಅವರು ಮತ್ತೆ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಡ್ರಗ್ಸ್‌ ನಟಿಯರಿಗೆ ಹೇರ್ ಫೋಲಿಕಲ್ ಟೆಸ್ಟ್‌ – ಏನಿದು ಟೆಸ್ಟ್‌? ನಿಖರ ಹೇಗೆ?

    ನಾನು ಈ ಹಿಂದೆ ಹೇಳಿದಂತೆ ಇದೊಂದು ಇಡೀ ಕರ್ನಾಟಕದ ಇತಿಹಾಸದಲ್ಲಿಯೇ ದೊಡ್ಡ ಸ್ಕ್ಯಾಮ್ ಆಗಿದೆ. ರಾಜಕೀಯ, ಸಮಾಜ, ಯುವಕ ಹಾಗೂ ಚಿತ್ರರಂಗದ ಆ್ಯಂಗಲ್ ಗಳಿವೆ. ಹೀಗಾಗಿ ನೀವು ಕಳಿಸಿರುವವ ಸಂದೇಶದಿಂದ ಯಾರಿಗೂ ಭಯ ಇಲ್ಲ. ಇಂದಿಗೂ ಕೋಟ್ಯಂತರ ರೂ. ಡ್ರಗ್ಸ್ ಕರ್ನಾಟಕ ಮಾತ್ರವಲ್ಲದೇ ಅದರಲ್ಲೂ ಬೆಂಗಳೂರಿನಲ್ಲಿ ಡಂಪ್ ಆಗುತ್ತಿದೆ ಎಂದು ಇಂದ್ರಜಿತ್ ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಡ್ರಗ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ಒಟ್ಟಿನಲ್ಲಿ ಈ ಹಿಂದೆ ಕೆಲವರನ್ನು ಅರೆಸ್ಟ್ ಮಾಡಿ ಟೆಸ್ಟ್ ಮಾಡಿದ್ರಿ. ಇನ್ನೂ ಕೆಲವರನ್ನು ವಿಚಾರಣೆ ನಡೆಸಿ ಹಾಗೆಯೇ ಬಿಟ್ಟು ಕಳುಹಿಸಿದ್ದೀರಿ. ಈ ವಿಚಾರದಲ್ಲಿ ಕೆಲವರಿಗೆ ಬೆಣ್ಣೆ, ಇನ್ನೂ ಕೆಲವರಿಗೆ ಸುಣ್ಣ ಮಾಡಿದ್ದೀರಿ. ಹೀಗಾಗಿ ಇಂದು ಕುಡ ಪಾರ್ಟಿಗಳು ನಡೆಯಲು ಕಾರಣವಾಗಿದೆ. ಹೀಗೆ ಯಾಕೆ ಮಾಡಿದ್ದೀರಿ ಎಂದು ಇಂದ್ರಜಿತ್ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಖುಷಿ ಆಗುತ್ತೆ ಅಂತಿದ್ರು ಅನುಶ್ರೀ: ಕಿಶೋರ್ ಅಮನ್ ಶೆಟ್ಟಿ

  • ನಾನು ಯಾವತ್ತೂ ಡ್ರಗ್ಸ್ ಸೇವಿಸಿಲ್ಲ: ದಿಯಾ ಮಿರ್ಜಾ

    ನಾನು ಯಾವತ್ತೂ ಡ್ರಗ್ಸ್ ಸೇವಿಸಿಲ್ಲ: ದಿಯಾ ಮಿರ್ಜಾ

    – ತನ್ನ ಮೇಲಿನ ಆರೋಪ ನಿರಾಕರಿಸಿದ ನಟಿ

    ಮುಂಬೈ: ಸ್ಯಾಂಡಲ್‍ವುಡ್ ನಂತೆ ಬಾಲಿವುಡ್ ಅಂಗಳದಲ್ಲಿಯೂ ಡ್ರಗ್ಸ್ ಪ್ರಕರಣ ದಿನೇ ದಿನೇ ಹೊಸ ರೂಪಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ನಟಿ ದಿಯಾ ಮಿರ್ಜಾ ಅವರು, ನಾನು ಯಾವತ್ತೂ ಡ್ರಗ್ಸ್ ಸೇವಿಸಿಲ್ಲ ಎಂದು ಹೇಳುವ ಮೂಲಕ ತನ್ನ ಮೇಲಿನ ಆರೋಪಗಳನ್ನು ಅಲ್ಲಗೆಳೆದಿದ್ದಾರೆ.

    ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ದಿಯಾ, ನನ್ನ ವಿರುದ್ಧ ಕೇಳಿಬರುತ್ತಿರುವ ಆರೋಪಗಳೆಲ್ಲವೂ ಸುಳ್ಳಾಗಿದ್ದು, ಆಧಾರ ರಹಿತವಾಗಿದೆ. ಅಲ್ಲದೆ ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದೊಂದು ನನ್ನ ವಿರುದ್ಧದ ಪಿತೂರಿಯಾಗಿದೆ ಎಂದಿದ್ದಾರೆ.

    ಇಂತಹ ಕುಲ್ಲಕ ವರದಿಗಾರಿಕೆ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತದ್ದಾಗಿದೆ. ಹಲವು ವರ್ಷಗಳ ಕಠಿಣ ಪರಿಶ್ರಮದಿಂದ ನನ್ನ ವೃತ್ತಿ ಜೀವನವನ್ನು ಉತ್ತಮವಾಗಿ ರೂಪಿಸಿಕೊಂಡು ಬಂದಿದ್ದೇನೆ ಎಂದು ಕಿಡಿಕಾರಿದ್ದಾರೆ.

    ನನ್ನ ಜೀವನದಲ್ಲಿ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಎಂದಿಗೂ ಸೇವಿಸಿಲ್ಲ. ಓರ್ವ ಭಾರತದ ಪ್ರಜೆಯಾಗಿ ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದೇನೆ. ನನ್ನ ಬೆಂಬಲಕ್ಕೆ ನಿಂತವರಿಗೆಲ್ಲರಿಗೂ ಅನಂತ ಅನಂತ ಧನ್ಯವಾದಗಳನ್ನು ಅರ್ಪಿಸುವುದಾಗಿ ಟ್ವೀಟ್ ನಲ್ಲಿ ದಿಯಾ ಮಿರ್ಜಾ ತಿಳಿಸಿದ್ದಾರೆ.

    ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ತನಿಖೆಯ ವೇಳೆ ಡ್ರಗ್ಸ್ ಪ್ರಕರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಮಾದಕ ದ್ರವ್ಯ ಸೇವಿಸುತ್ತಾರೆ ಎಂಬ ವಿಚಾರದಡಿಯಲ್ಲಿ ಅನುಜ್ ಕೇಶ್ವಾನಿಯನ್ನು ತನಿಖೆಗೆ ಒಳಪಡಿಸಲಾಗಿತ್ತು. ಈ ವೇಳೆ ದಿಯಾ ಮಿರ್ಜಾ ಹೆಸರು ಕೇಳಿಬಂದಿದ್ದು, ಎನ್‍ಸಿಬಿ ನಟಿಯನ್ನು ತನಿಖೆ ಮಾಡುತ್ತಿದೆ ಎಂದು ಹೇಳಲಾಗಿತ್ತು.

    ಡ್ರಗ್ಸ್ ಕೇಸ್ ಗೆ ಸಂಬಂಧಪಟ್ಟಂತೆ ದಿಯಾ ಹಾಗೂ ಅವರ ಮ್ಯಾನೇಜರ್ ನಡುವೆ ನಡೆದ ವಾಟ್ಸಪ್ ಸಂದೇಶಗಳು ಎನ್‍ಸಿಬಿಗೆ ಸಿಕ್ಕಿವೆಯಂತೆ. ಕೇಶ್ವಾನಿ ಗೆಳತಿ ದಿಯಾ ಮ್ಯಾನೇಜರ್ ಎಂಬುದು ಕೂಡ ಬಹಿರಂಗವಾಗಿದ್ದು, 2019ರಲ್ಲಿ ದಿಯಾ ಡ್ರಗ್ಸ್ ಖರೀದಿ ಮಾಡಿರುವ ಬಗ್ಗೆ ಎನ್‍ಸಿಬಿಗೆ ಮಾಹಿತಿ ಸಿಕ್ಕಿದೆ ಎಂಬ ಮಾಹಿತಿ ಕೂಡ ಲಭ್ಯವಾಗಿತ್ತು.