Tag: ಡ್ರಗ್ ಮಾಫಿಯಾ

  • ಡ್ರಗ್ ದಂಧೆಯಲ್ಲಿ ರಾಜಕಾರಣಿಗಳಾದ್ರೂ ಶಿಕ್ಷೆಯಾಗಲಿ: ಶಾಸಕ ಅಪ್ಪಚ್ಚು ರಂಜನ್

    ಡ್ರಗ್ ದಂಧೆಯಲ್ಲಿ ರಾಜಕಾರಣಿಗಳಾದ್ರೂ ಶಿಕ್ಷೆಯಾಗಲಿ: ಶಾಸಕ ಅಪ್ಪಚ್ಚು ರಂಜನ್

    ಮಡಿಕೇರಿ: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ದಂಧೆಯಲ್ಲಿ ಕನ್ನಡ ಚಿತ್ರರಂಗದ ನಟ ನಟಿಯರು ಇದ್ದಾರೆ ಎನ್ನೋದು ಗೊತ್ತಾಗಿದೆ. ಇವರ ಜೊತೆ ರಾಜಕಾರಣಿಗಳಿದ್ದರೆ ಅವರಿಗೂ ಮುಲಾಜಿಲ್ಲದೆ ತಕ್ಕ ಶಿಕ್ಷೆಯಾಗಬೇಕು ಎಂದು ಮಡಿಕೇರಿ ಬಿಜೆಪಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ.

    ಮಡಿಕೇರಿಯಲ್ಲಿ ಮಾತನಾಡಿದ ಅವರು ಚಿತ್ರರಂಗದವರಿರಲಿ, ರಾಜಕಾರಣಿಗಳಿರಲಿ ಯಾರು ತಪ್ಪು ಮಾಡಿದರೂ ಅದು ತಪ್ಪೇ. ಡ್ರಗ್ಸ್‍ನಿಂದಾಗಿ ನಮಗೆ ಉಳಿಗಾಲವಿಲ್ಲ. ಈ ವ್ಯವಸ್ಥೆಯನ್ನೇ ಡ್ರಗ್ಸ್ ಹಾಳುಮಾಡುತ್ತದೆ ಎಂದು ಕಿಡಿಕಾರಿದರು.

    ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ಸುಮ್ಮನೆ ಬಿಡಬಾರದು. 10 ವರ್ಷಗಳ ಹಿಂದೆ ಪಿಟೀಷನ್ ಕಮಿಟಿಯಲ್ಲಿ ನಾನೂ ಕೂಡ ಇದ್ದೆ. ಆ ವೇಳೆ ಡ್ರಗ್ಸ್ ರೀತಿಯ ಮಾರಾಟ ಚಟುವಟಿಕೆಗಳಿಗೆ ಹೇಗೆ ಕಡಿವಾಣ ಹಾಕಬೇಕು. ಎಲ್ಲೆಲ್ಲಿ ಕಾಲೇಜುಗಳಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಆ ಮೂಲಕ ಹೇಗೆ ಕಾನೂನು ಬಾಹಿರವಾದ ಈ ಚಟುವಟಿಕೆಯನ್ನು ಮಟ್ಟಹಾಕಬೇಕು ಎಂದು ಶಿಫಾರಸು ಮಾಡಿದ್ದೆವು ಎಂದರು.

    ಕೊಡಗಿನ ಹಲವೆಡೆ ಗಾಂಜಾ ಸೊಪ್ಪು ಬೆಳೆ ಮತ್ತು ಮಾರಾಟ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅಂತಹವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

  • ವೃತ್ತಿಯಲ್ಲಿ ಟೆಕ್ಕಿ, ಪ್ರವೃತ್ತಿಯಲ್ಲಿ ಡ್ರಗ್ಸ್ ದಂಧೆಯ ಕಿಂಗ್ ಪಿನ್- ವಿರೇನ್ ಖನ್ನಾ ಬಂಧನ

    – ದೆಹಲಿಯಲ್ಲಿದ್ದುಕೊಂಡೇ ಡ್ರಗ್ ಪಾರ್ಟಿ ಆಯೋಜನೆ

    ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ದಂಧೆಯ ಕಿಂಗ್‍ಪಿನ್ ವೀರೇನ್ ಖನ್ನಾ ಎಂಬಾತನನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿ ವಿರೇನ್ ಖನ್ನಾ ಡ್ರಗ್ ಪಾರ್ಟಿಗಳನ್ನು ಮಾಡಲು ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದೆಹಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

    ಆರೋಪಿ ಕುರಿತು ಖಚಿತ ಮಾಹಿತಿಗಳನ್ನು ಕಲೆಹಾಕಿದ್ದ ಪೊಲೀಸರು ಆತನನ್ನು ಬಂಧಿಸಲು ಕಾರ್ಯಾಚರಣೆಯನ್ನು ನಡೆಸಿದ್ದರು. ಈ ವೇಳೆ ಆತ ದೆಹಲಿಯಲ್ಲಿರುವ ಮಾಹಿತಿ ಲಭಿಸಿತ್ತು. ಕೂಡಲೇ ದೆಹಲಿಗೆ ತೆರಳಿದ ಸಿಸಿಬಿಯ ಇಬ್ಬರು ಪಿಎಸ್‍ಐಗಳು ಆರೋಪಿಯನ್ನು ಬಂಧಿಸಿ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

    ವೃತ್ತಿಯಲ್ಲಿ ಟೆಕ್ಕಿಯಾಗಿರುವ ಆರೋಪಿ ಖನ್ನಾ ದೊಡ್ಡ ಪಾರ್ಟಿ ಆರೆಂಜ್ ಮಾಡುತ್ತಿದ್ದ. ನಾಳೆಯೂ ಬೆಂಗಳೂರಿನಲ್ಲಿ ದೊಡ್ಡ ಪಾರ್ಟಿ ನಡೆಸಲು ವೇದಿಕೆ ಸಿದ್ಧ ಮಾಡಿದ್ದ. ಈ ಪಾರ್ಟಿಗೆ ಸಂಬಂಧಿಸಿದ ಫೋಟೋವನ್ನು ಬಿಡುಗಡೆ ಮಾಡಿದ್ದ. ಬಂಧಿತ ಖನ್ನಾ ಮೂಲತಃ ಬೆಂಗಳೂರಿನ ನಿವಾಸಿಯೇ ಆಗಿದ್ದು, ದೆಹಲಿಯ ಮಥೂರ ರಸ್ತೆಯ ನಿವಾಸಿದಲ್ಲಿದ್ದುಕೊಂಡೇ ಬೇರೆ ಬೇರೆ ಪಾರ್ಟಿಗಳನ್ನು ಏರ್ಪಡಿಸಲು ಸಿದ್ಧತೆ ನಡೆಸುತ್ತಿದ್ದ. ಇಂತಹ ಪಾರ್ಟಿಗಳಿಗೆ ಕೇವಲ ಸೆಲೆಬ್ರಿಟಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

  • ನನ್ಗೆ ಮಾತ್ರ ಅಲ್ಲ, ರಾಹುಲ್ ಸಾಕಷ್ಟು ಸಿನಿಮಾ ಸ್ಟಾರ್‌ಗಳಿಗೆ ಪರಿಚಯ: ಸಂಜನಾ ಸ್ಫೋಟಕ ಹೇಳಿಕೆ

    ನನ್ಗೆ ಮಾತ್ರ ಅಲ್ಲ, ರಾಹುಲ್ ಸಾಕಷ್ಟು ಸಿನಿಮಾ ಸ್ಟಾರ್‌ಗಳಿಗೆ ಪರಿಚಯ: ಸಂಜನಾ ಸ್ಫೋಟಕ ಹೇಳಿಕೆ

    ಬೆಂಗಳೂರು: ಸಿಸಿಬಿ ವಶದಲ್ಲಿರುವ ರಾಹುಲ್ ನನಗೆ ಮಾತ್ರವಲ್ಲ ಸಾಕಷ್ಟು ಸಿನಿಮಾ ಸ್ಟಾರ್ ಗಳಿಗೆ ಪರಿಚಯ ಇದ್ದಾರೆ ಎಂದು ನಟಿ ಸಂಜನಾ ಗಲ್ರಾನಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

    ಡ್ರಗ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ನಟಿ ಸಂಜನಾಳ ಅಪ್ತ ರಾಹುಲ್‍ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವಿಚಾರವಾಗಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಜನಾ, ಮೂರು-ನಾಲ್ಕು ವರ್ಷಗಳಿಂದ ರಾಹುಲ್ ನನಗೆ ಪರಿಚಯ. ನನಗೆ ಮಾತ್ರ ಅಲ್ಲ ಸಾಕಷ್ಟು ಸಿನಿಮಾ ಸ್ಟಾರ್‌ಗಳಿಗೆ ಪರಿಚಯ ಇದ್ದಾರೆ. ಆಲ್ ಮೋಸ್ಟ್ ಇಡೀ ಬೆಂಗಳೂರಿಗೆ ರಾಹುಲ್ ಪರಿಚಯ ಎಂದರು.

    ರಾಹುಲ್ ತುಂಬಾ ಒಳ್ಳೆಯ ಹುಡುಗ, ಅವನು ರಿಯಲ್ ಎಸ್ಟೇಟ್ ಮಾಡುತ್ತಾನೆ. ಜೇಕರ್ಬ್ ವರ್ಗಿಸ್ ನಿರ್ದೇಶನದ ಚಂಬಲ್ ಸಿನಿಮಾದಲ್ಲಿ ರಾಹುಲ್ ಸಣ್ಣ ಪಾತ್ರ ಮಾಡಿದ್ದಾನೆ. ರಾಹುಲ್‍ನನ್ನು ನಾನು ರಾಖೀ ಭಾಯ್ ಅಂತಾನೇ ಕರೆಯುತ್ತೇನೆ. ನಾವು ತುಂಬಾ ಕ್ಲೋಸ್ ಫ್ರೆಂಡ್ ಅವನು ನನ್ನ ರಾಖೀ ಅಣ್ಣ. ರಾಹುಲ್ ಆದಷ್ಟು ಬೇಗ ಈ ಎಲ್ಲಾ ಸಮಸ್ಯೆಗಳಿಂದ ಹೊರಗಡೆ ಬರುತ್ತಾನೆ ಎಂದು ಸಂಜನಾ ತಿಳಿಸಿದ್ದಾರೆ. ಇದನ್ನು ಓದಿ: ದೃಷ್ಟಿ ನಿವಾರಣೆಗೆ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೇನೆ: ಸಂಜನಾ

    ಪೊಲೀಸರ ಮೇಲೆ ನನಗೆ ನಂಬಿಕೆ ಇದೆ, ನಾನು ತನಿಖೆಗೆ ಸಹಕರಿಸುತ್ತೇನೆ. ನಾನು ಬೆಂಗಳೂರು ಬಿಟ್ಟು ಎಲ್ಲಿಯೂ ಹೋಗಿಲ್ಲ. ಕಳೆದ ಡಿಸೆಂಬರ್ ಆದಮೇಲೆ ನಾನು ಪಾರ್ಟಿಗಳಿಗೆ ಹೋಗುವುದನ್ನು ಬಿಟ್ಟಿದ್ದೇನೆ. ನಾನು ಅಟೆಂಡ್ ಆಗಿರೊ ಯಾವುದೇ ಪಾರ್ಟಿಗಳಲ್ಲೂ ಡ್ರಗ್ಸ್ ಇರಲಿಲ್ಲ. ಕ್ರಿಸ್ ಮಸ್ ಪಾರ್ಟಿ ಮಾಡಿದ್ದೆ ಲಾಸ್ಟ್ ನಾನು ಯಾವುದೇ ಪಾರ್ಟಿ ಮಾಡಿಲ್ಲ. ನನ್ನ ಗ್ರಹಚಾರ ನಾನು ಅಂದು ಆ ಜಾಗಕ್ಕೆ ಹೋಗಬೇಕಾಗಿ ಬಂತು ಎಂದು ಡ್ರಗ್ಸ್ ಆರೋಪವನ್ನು ಸಂಜನಾ ತಳ್ಳಿ ಹಾಕಿದ್ದಾರೆ.

  • ದೃಷ್ಟಿ ನಿವಾರಣೆಗೆ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೇನೆ: ಸಂಜನಾ

    ದೃಷ್ಟಿ ನಿವಾರಣೆಗೆ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೇನೆ: ಸಂಜನಾ

    – ಪ್ರಶಾಂತ್ ಸಂಬರಗಿ ವಿರುದ್ಧ ಕಿಡಿ

    ಬೆಂಗಳೂರು: ಹೀರೋಗಳ ಬಳಿ 50 ಕಾರು ಇದ್ದರೂ ಯಾರೂ ಪ್ರಶ್ನೆ ಮಾಡಲ್ಲ. ಆದರೆ ನಾಯಕಿಯರ ಬಳಿ ಎರಡು ಕಾರು ಇದ್ರೆ ಪ್ರಶ್ನೆ ಮಾಡುತ್ತಾರೆ ಎಂದು ನಟಿ ಸಂಜನಾ ಗಲ್ರಾನಿ ಅವರು ಹೇಳಿದ್ದಾರೆ.

    ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ಸಂಜನಾ ಅವರ ಹೆಸರು ಕೇಳಿ ಬರುತ್ತಿದೆ. ಈ ವಿಚಾರವಾಗಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು 16 ವರ್ಷದಿಂದ ದುಡಿದ ದುಡಿಮೆಯಲ್ಲಿ ಇಷ್ಟೆಲ್ಲಾ ಸಂಪಾದನೆ ಮಾಡಿದ್ದೇನೆ. ನನಗೆ ಕಣ್ಣು ದೃಷ್ಟಿ ಆಗಿರಬೇಕು. ಅದಕ್ಕೆ ಎಲ್ಲ ವಿದಾದ ನನ್ನನ್ನು ಸುತ್ತಿಕೊಳ್ಳುತ್ತಿದೆ. ಆ ದೃಷ್ಟಿ ನಿವಾರಣೆಗೆ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೇನೆ ಎಂದು ಹೇಳಿದರು.

    ಇದೇ ವೇಳೆ ಪ್ರಶಾಂತ್ ಸಂಬರಗಿ ಬಗ್ಗೆ ಗರಂ ಆದ ಸಂಜನಾ, ನನ್ನ ಬಗ್ಗೆ ಪ್ರಶ್ನೆ ಮಾಡುವುದಕ್ಕೆ ಪ್ರಸಾಂತ್ ಸಂಬರಗಿ ಯಾರು? ನಾನು ಬೀದಿ ನಾಯಿಗೆ ಕೊಡುವಷ್ಟು ಬೆಲೆಯನ್ನು ಅವನಿಗೆ ಕೊಡುವುದಿಲ್ಲ. ನಾನು ಐವತ್ತಕ್ಕೂ ಹೆಚ್ಚು ಸಿನಿಮಾ ಮಾಡಿದ್ದೇನೆ. ಅದೆಲ್ಲಾ ಅವನ ಕಣ್ಣಿಗೆ ಕಾಣಿಸುವುದಿಲ್ವಾ? ಪ್ರಶಾಂತ್ ಸಂಬರಗಿ ಓರ್ವ ಹಂದಿ ಹಂದಿ. ಗಂಧದ ಗುಡಿ ಹೆಸರನ್ನು ಹಾಳು ಮಾಡುತ್ತಿದ್ದಾನೆ ಎಂದು ಕಿಡಿಕಾಡಿದರು.

    ನಾನು 50ಕ್ಕೂ ಸಿನಿಮಾಗಳನ್ನು ಮಾಡಿದ್ದೇನೆ. ಜೊತೆಗೆ ನಾನು ಪಂಚ ಭಾಷಾ ತಾರೆ. 16 ವರ್ಷಗಳ ನನ್ನ ಸಿನಿಮಾ ಜರ್ನಿಯಲ್ಲಿ ಇದನ್ನೆಲ್ಲಾ ಸಂಪಾದನೆ ಮಾಡಿದ್ದೇನೆ. ಬಾಹುಬಲಿ ಸೂಪರ್ ಸ್ಟಾರ್ ಪ್ರಭಾಸ್, ಪವನ್ ಕಲ್ಯಾಣ್, ದರ್ಶನ್, ಸುದೀಪ್, ಶಿವಣ್ಣ ಜೊತೆಗೆ ಸಿನಿಮಾ ಮಾಡಿದ್ದೇನೆ. ನೀವು ಹೀರೋಗಳ ಬಳಿ 50 ಕಾರು ಇದ್ದರೂ ಪ್ರಶ್ನೆ ಮಾಡಲ್ಲ. ಆದರೆ ನಾಯಕಿಯರ ಬಳಿ ಎರಡು ಕಾರು ಇದ್ರೆ ಪ್ರಶ್ನೆ ಮಾಡುತ್ತಾರೆ ಎಂದು ಸಂಜನಾ ಹೇಳಿದ್ದಾರೆ.

  • ಡ್ರಗ್‍ಗೆ ಚಿಕ್ಕನ್ ಪೀಸ್ ಎನ್ನುತ್ತಿದ್ದ ರಾಗಿಣಿ – ತುಪ್ಪದ ಬೆಡಗಿ ಕೋಡ್‍ವರ್ಡ್ ರೀವಿಲ್

    ಡ್ರಗ್‍ಗೆ ಚಿಕ್ಕನ್ ಪೀಸ್ ಎನ್ನುತ್ತಿದ್ದ ರಾಗಿಣಿ – ತುಪ್ಪದ ಬೆಡಗಿ ಕೋಡ್‍ವರ್ಡ್ ರೀವಿಲ್

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ಸಿಕ್ಕಿಬಿದ್ದಿರುವ ನಟಿ ರಾಗಿಣಿಯವರು ಡ್ರಗ್ಸ್ ವಿಚಾರದಲ್ಲಿ ಕೋಡ್‍ವರ್ಡ್‍ಗಳನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.

    ಡ್ರಗ್ ಮಾಫಿಯಾ ವಿಚಾರವಾಗಿ ಇಂದು ನಟಿ ರಾಗಿಣಿಯವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇಂದು ಬೆಳಗ್ಗೆ ರಾಗಿಣಿ ಮನೆ ಮೇಲೆ ದಿಢೀರ್ ದಾಳಿ ಮಾಡಿದ ಅಧಿಕಾರಿಗಳು ಅವರ ಮೊಬೈಲ್ ಫೋನ್, ಲ್ಯಾಪ್‍ಟಾಪ್ ಮತ್ತು ಕಂಪ್ಯೂಟರ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಕೆಲ ಮಹತ್ವದ ಸಾಕ್ಷಿಗಳು ಸಿಕ್ಕಿವೆ ಎನ್ನಲಾಗಿದೆ.

    ಇದರಲ್ಲಿ ರಾಗಿಣಿ ಮತ್ತು ಅವರ ಅಪ್ತ ರವಿಶಂಕರ್ ಕೋಡ್‍ವರ್ಡ್ ಉಪಯೋಗಿಸಿಕೊಂಡು ಡ್ರಗ್ ವಿಚಾರದ ಬಗ್ಗೆ ಚಾಟ್ ಮಾಡುತ್ತಿದ್ದರು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಚಾಟ್ ವೇಳೆ ತಮ್‍ಸಪ್ ಸಿಂಬಲ್ ಸೆಂಡ್ ಮಾಡಿದ್ರೆ ಇವತ್ತು ಡ್ರಗ್ ಬೇಕು ಎಂದು, ಸ್ಟಾರ್ ಇಮೋಜಿ ಕಳುಹಿಸಿದರೆ ಫ್ಲಾಟ್‍ಗೆ ಬರಬೇಕು ಎಂದು ಅರ್ಥ. ಏರೋಪ್ಲೇನ್ ಸಿಂಬಲ್ ಕಳುಹಿಸಿದರೆ ಊರಿಂದ ಹೊರಗಡೆ ಹೋಗುವುದು ಎಂಬಂತೆ ಕೋಡ್‍ವರ್ಡ್ ಸೆಟ್ ಮಾಡಿಕೊಂಡಿದ್ದಾರೆ.

    ಅಂತಯೇ ರವಿಶಂಕರ್ 3 ಚಿಕನ್ ಪೀಸ್, 1 ಕಾಲಿ ಫ್ಲವರ್ ಕಳುಹಿಸಿದರೆ ಕೊಕೈನ್ ಎಂಡಿಎಂಎ, ಎಲ್‍ಎಸ್‍ಡಿ ರೆಡಿ ಇದೆ ಎಂಬ ಅರ್ಥವನ್ನು ಸೂಚಿಸುತ್ತದೆ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಈ ರೀತಿಯ ಚಾಟ್‍ಗಳು ಪೊಲೀಸರು ವಶಕ್ಕೆ ಪಡೆದಿರುವ ರವಿಶಂಕರ್ ಮತ್ತು ರಾಗಿಣಿ ಮೊಬೈಲ್‍ನಲ್ಲಿ ಸಿಕ್ಕಿವೆ. ಜೊತೆಗೆ ಇದೇ ರೀತಿಯ ಕೋಡ್‍ವರ್ಡ್‍ಗಳನ್ನು ಬಳಸುತ್ತಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

  • 40 ವರ್ಷಗಳ ಅನುಭವದಲ್ಲಿ ಡ್ರಗ್ಸ್ ಇರೋದು ನಾನು ಕಂಡಿಲ್ಲ: ಸುಮಲತಾ

    40 ವರ್ಷಗಳ ಅನುಭವದಲ್ಲಿ ಡ್ರಗ್ಸ್ ಇರೋದು ನಾನು ಕಂಡಿಲ್ಲ: ಸುಮಲತಾ

    – ಯುವಜನರು ದುಶ್ಚಟಗಳ ದಾಸರಾಗೋದು ತಪ್ಪು

    ಬೆಂಗಳೂರು: 40 ವರ್ಷಗಳ ಅನುಭವದಲ್ಲಿ ಡ್ರಗ್ಸ್ ಇರೋದು ನಾನು ಕಂಡಿಲ್ಲ ಎಂದು ನಟಿ ಮತ್ತು ಮಂಡ್ಯ ಸಂಸದೆ ಸುಮಲತಾ ಅವರು ಹೇಳಿದ್ದಾರೆ.

    ಇಂದು ಸ್ಯಾಂಡಲ್‍ವುಡ್‍ನಲ್ಲಿ ಖ್ಯಾತ ಗಾಯಕ ಎಸ್‍ಪಿಬಿಯವರು ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥನ ಕಾರ್ಯಕ್ರಮವನ್ನು ಆಯೋಚಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಡ್ರಗ್ ಮಾಫಿಯಾ ಬಗ್ಗೆ ಮಾತನಾಡಿದ ಸುಮಲತಾ ಅವರು, ಯುವಜನರು ದುಶ್ಚಟಗಳ ದಾಸರಾಗುವುದು ತಪ್ಪು ಎಂದು ತಿಳಿಸಿದರು.

    40 ವರ್ಷಗಳ ಅನುಭವದಲ್ಲಿ ಡ್ರಗ್ಸ್ ಇರೋದು ನಾನು ಕಂಡಿಲ್ಲ. ಹಾಗಂತ ಇಲ್ವೇ ಇಲ್ಲ ಅಂತಲ್ಲ, ಆದರೆ ನನ್ನ ಗಮನಕ್ಕೆ ಇಂತಹ ವಿಚಾರಗಳು ಬಂದಿಲ್ಲ. ನಮಗೆ ಗೊತ್ತಿಲ್ಲದ ವಿಷಯಗಳನ್ನು ಮಾತಾಡೋದು ತಪ್ಪಾಗುತ್ತೆ. ಡ್ರಗ್ಸ್ ನ ಕಂಟ್ರೋಲ್ ಮಾಡೋಕೆ ಅಂತಾಲೇ ಏಜೆನ್ಸಿ ಇದೆ. ಖಂಡಿತ ಯಾರೂ ಇದರಲ್ಲಿ ಪಾಲ್ಗೊಂಡಿದ್ದಾರೋ ಅವರನ್ನು ತನಿಖೆ ಮಾಡಲಬೇಕು ಎಂದು ಅಗ್ರಹಿಸಿದರು.

    ನಾನು ಒಬ್ಬ ಸೆಲೆಬ್ರಿಟಿ ಆಗಿ ಅಲ್ಲ. ಒಬ್ಬ ತಾಯಿಯಾಗಿ ಹೇಳುತ್ತಿದ್ದೇನೆ, ಯುವಜನರು ದುಶ್ಚಟಗಳ ದಾಸರಾಗುವುದು ತಪ್ಪು ಎಂದರು. ಚಿತ್ರರಂಗ ಅಂತಲ್ಲಾ ಎಲ್ಲಾ ಕಡೆ ಈ ಡ್ರಗ್ಸ್ ಮಾಫಿಯಾ ಇದೆ ಎಂದು ಸುಮಲತಾ ಅವರು ಹೇಳಿದ್ದಾರೆ.

  • ಶ್ರೀಲಂಕಾದಲ್ಲಿ ಕ್ಯಾಸಿನೋ ಹೊಂದಿರುವ ರಾಹುಲ್ ಸಂಜನಾಗೆ ಪರಿಚಯವಾಗಿದ್ದು ಹೇಗೆ?

    ಶ್ರೀಲಂಕಾದಲ್ಲಿ ಕ್ಯಾಸಿನೋ ಹೊಂದಿರುವ ರಾಹುಲ್ ಸಂಜನಾಗೆ ಪರಿಚಯವಾಗಿದ್ದು ಹೇಗೆ?

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ್ದರೆ, ಸಂಜನಾ ಆಪ್ತ ರಾಹುಲ್ ಮತ್ತು ಶರ್ಮಿಳಾ ಮಾಂಡ್ರೆಯ ಗೆಳೆಯ ಕಾರ್ತಿಕ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ವೇಳೆ ಒಂದೊಂದೆ ಸ್ಫೋಟಕ ವಿಚಾರಗಳು ಪ್ರಕಟವಾಗುತ್ತಿದೆ.

    ಬೆಂಗಳೂರಿನಲ್ಲಿ ಹೈಟೆಕ್ ಡ್ರಗ್ ದಂಧೆ ಮಾಡುತ್ತಿದ್ದ ಮೂವರು ಡ್ರಗ್ ಡೀಲರ್ ಗಳನ್ನು ಎನ್‍ಸಿಬಿ ಪೊಲೀಸರ ಬಂಧಿಸಿದ್ದರು. ಇವರ ಕೊಟ್ಟ ಮಾಹಿತಿ ಮೇರೆಗೆ ಈಗ ನಟಿ ಸಂಜನಾಗೆ ಅಪ್ತನಾಗಿದ್ದ ರಾಹುಲ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಓರ್ವ ಡ್ರಗ್ ಡೀಲರ್ ಎಂದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ.

    ರಾಹುಲ್ ಬೆಂಗಳೂರಿನ ಬನಶಂಕರಿ ನಗರದ ನಿವಾಸಿಯಾಗಿದ್ದಾನೆ. ಈತ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿದ್ದು, ಈ ಕ್ಯಾಸಿನೋಗೆ ಗ್ರಾಹಕರನ್ನು ಪ್ಯಾಕೇಜ್‍ನಲ್ಲಿ ಕಳಿಸಿಕೊಡುತ್ತಿದ್ದ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಜೊತೆಗೆ ಈತ ಪಾರ್ಟಿಗಳನ್ನು ಆಯೋಜನೆ ಮಾಡೋದರಲ್ಲಿ ಪಂಟರ್ ಆಗಿದ್ದ, ಹೀಗೆ ಒಂದು ಪಾರ್ಟಿಯಲ್ಲೇ ಸಂಜನಾಗೆ ಪರಿಚಯವಾಗಿದ್ದ. ಅಂದಿನಿಂದ ಯಾವುದೇ ಪಾರ್ಟಿಯಿದ್ದರೂ ಸಂಜನಾಗೆ ಆಹ್ವಾನ ಕೊಡುತ್ತಿದ್ದ ಎಂದು ತಿಳಿದು ಬಂದಿದೆ.

    ಶ್ರೀಲಂಕಾದಲ್ಲಿ ನಡೆದಿದ್ದ ಕ್ಯಾಸಿನೋ ಪಾರ್ಟಿಗೆ ಸಂಜನಾ ಸೇರಿದಂತೆ ಬೇರೆ ಬೇರೆ ಚಿತ್ರರಂಗದ ನಟಿಯರನ್ನು ರಾಹುಲ್ ಕರೆಸಿದ್ದ. ಸದ್ಯ ರಾಹುಲ್ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಲಭಿಸಿದ್ದು, ಸಂಜನಾಗೂ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಸಮನ್ಸ್ ನೀಡುವ ಸಾಧ್ಯತೆಯಿದೆ.

    ಈತನ ಬಗ್ಗೆ ಇಂದು ಬೆಳಗ್ಗೆ ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ್ದ ಸಂಜನಾ, ಆತ ನನ್ನನ್ನು ಅಕ್ಕ ಎಂದು ಕರೆಯುತ್ತಾನೆ. ತುಂಬ ಒಳ್ಳೆಯವನು ಮತ್ತು ಜ್ಯಾಲಿ ಮನುಷ್ಯ. ರಾಹುಲ್ ಆ ತರದ ಹುಡುಗ ಅಲ್ಲ. ನನಗೆ ಸಹೋದರಿಲ್ಲ, ಪ್ರತಿ ವರ್ಷ ನಾನು ಆತನಿಗೆ ರಾಖಿ ಕಟ್ಟುತ್ತೇನೆ. ಆತನನ್ನು ಪೊಲೀಸರು ಏಕೆ ಕರೆದುಕೊಂಡು ಹೋಗಿದ್ದಾರೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದರು.

    ಅಸಲಿಗೆ ಸ್ಟಾರ್ ನಟ ನಟಿಯರಲ್ಲದೆ ರಾಜಕಾರಣಿಗಳ ಮಕ್ಕಳೂ ಕೂಡ ರಾಹುಲ್‌ಗೆ ಆಪ್ತರು. ರಾಹುಲ್ ಗೆ ಶ್ರೀಲಂಕದಾ ಕ್ಯಾಸಿನೋ ಗಳ ಹಿಡಿತವಿದೆ. ಹೀಗಾಗಿಯೇ ರಾಜಕಾರಣಿಗಳ ಮಕ್ಕಳನ್ನು ಕ್ಯಾಸಿನೋಗೆ ಕಳುಹಿಸುತ್ತಿದ್ದ. ಕ್ಯಾಸಿನೋಗೆ ಕಳುಹಿಸಿಕೊಡುವ ಮೂಲಕ ರಾಜಕಾರಣಿಗಳ ಮಕ್ಕಳ ಸ್ನೇಹವನ್ನು ಸಂಪಾದಿಸುತ್ತಿದ್ದ. ಕ್ಯಾಸಿನೋಗಳಲ್ಲಿ ಪಾರ್ಟಿ ಆಯೋಜನೆ ಮಾಡಿ ಎಲ್ಲವನ್ನು ರಾಹುಲ್ ಒದಗಿಸಿಕೊಡುತ್ತಿದ್ದ.

  • ಪ್ರಚಾರಕ್ಕಾಗಿ ಈ ರೀತಿ ಮಾಡ್ತಿದ್ದಾರೆ – ಸಂಬರಗಿ ವಿರುದ್ಧ ಸಾರಾ ಗೋವಿಂದು ಆಕ್ರೋಶ

    ಪ್ರಚಾರಕ್ಕಾಗಿ ಈ ರೀತಿ ಮಾಡ್ತಿದ್ದಾರೆ – ಸಂಬರಗಿ ವಿರುದ್ಧ ಸಾರಾ ಗೋವಿಂದು ಆಕ್ರೋಶ

    ಬೆಂಗಳೂರು: ಪ್ರಚಾರಕ್ಕಾಗಿ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಸಾರಾ ಗೋವಿಂದ್ ಅವರು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾದ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಈ ವಿಚಾರದ ಬಗ್ಗೆ ಮಾತನಾಡಿದ್ದ ಪ್ರಶಾಂತ್ ಸಂಬರಗಿಯವರು, ಕೆಲ ನಟ-ನಟಿಯರು ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ಆರೋಪ ಮಾಡಿದ್ದರು. ಇದಕ್ಕೆ ಸಾರಾ ಗೋವಿಂದ್ ಅವರು ಸಂಬರಗಿ ನಮ್ಮ ಚಿತ್ರರಂಗದವರೇ ಅಲ್ಲ ಎಂದು ದೂರಿದ್ದರು. ಈಗ ಇದೇ ವಿಚಾರವಾಗಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ.

    ಇಂದು ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಾರಾ ಗೋವಿಂದು, ಹಾದಿ ಬಿದಿಯಲ್ಲಿ ಮಾತಾಡೋರಿಗೆಲ್ಲಾ ಉತ್ತರ ಕೊಡೋಕಾಗಲ್ಲ. ಪ್ರಶಾಂತ್ ಸಂಬರಗಿ ಯಾರು? ನಮ್ಮ ಮೆಂಬರ್ ಅಲ್ಲ, ಸದಸ್ಯ ಅಲ್ಲ. ಕನ್ನಡ ಚಿತ್ರ ರಂಗಕ್ಕೂ ಪ್ರಶಾಂತ್ ಸಂಬರಗಿಗೂ ಏನ್ ಸಂಬಂಧ, ಚಿತ್ರರಂಗಕ್ಕೆ ಇವರ ಕೊಡುಗೆ ಏನು? ನಮ್ಮ ಬಗ್ಗೆ ಮಾತಾಡೋಕೆ, ಪ್ರಶ್ನೆ ಮಾಡೋಕೆ ಇವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.

    ವಾಣಿಜ್ಯ ಮಂಡಳಿಗೆ ಒಂದು ಘನತೆ, ಗೌರವ ಇದೆ. ಎಲ್ಲೋ ಕುಳಿತುಕೊಂಡು ಮಾತಾಡೋದಲ್ಲ. ಮೊದಲು ಕನ್ನಡ ಬೆಳೆಸಿ, ಕನ್ನಡತನ ಉಳಿಸಿ ಆಮೇಲೆ ಚಿತ್ರರಂಗದ ಬಗ್ಗೆ ಮಾತಾಡಿ. ನಮ್ಮ ಚಿತ್ರರಂಗ ಬೆಳೆಸೋದಕ್ಕೆ, ಉಳಿಸೋದಕ್ಕೆ ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ. ನಿಮ್ಮಿಂದ ನಾವು ಕಲಿಯಬೇಕಿಲ್ಲ, ಚಿತ್ರರಂಗದ ಬಗ್ಗೆ ಮಾತಾಡುವಾಗ ಹಗುರವಾಗಿ ಮಾತಾಡಬೇಡಿ. ಮಂಡಳಿ ರಚನೆ ಆಗಿ 75 ವರ್ಷ ಆಗಿದೆ. ವಾಣಿಜ್ಯ ಮಂಡಳಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಅವರ ಮಾತಿಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸಾರಾ ಗೋವಿಂದು ಅವರು ಕಿಡಿಕಾರಿದ್ದಾರೆ.

  • ಸಿಸಿಬಿ ಪೊಲೀಸರಿಗೆ ನನಗಿಂತ ಹೆಚ್ಚಿನ ಮಾಹಿತಿ ಗೊತ್ತಿದೆ: ಇಂದ್ರಜಿತ್

    ಸಿಸಿಬಿ ಪೊಲೀಸರಿಗೆ ನನಗಿಂತ ಹೆಚ್ಚಿನ ಮಾಹಿತಿ ಗೊತ್ತಿದೆ: ಇಂದ್ರಜಿತ್

    – ನಾನೊಬ್ಬ ಮೆಸೆಂಜರ್ ಆಗಿದ್ದು ಮೆಸೆಂಜರನ್ನು ಕೊಲ್ಲಬೇಡಿ

    ಬೆಂಗಳೂರು: ಸಿಬಿಐಗೆ ನನಗಿಂತ ಹೆಚ್ಚಿನ ಮಾಹಿತಿ ಗೊತ್ತಿದೆ ಎಂದು ನಟಿ-ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಹೇಳಿದ್ದಾರೆ.

    ಸ್ಯಾಂಡಲ್‍ವುಡ್ ಮೂರನೇ ಪೀಳಿಗೆಯ ಯುವ ನಟ-ನಟಿಯರು ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಆರೋಪ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ಮಾಹಿತಿ ಕೂಡ ನೀಡಿದ್ದರು. ಇಂದು ಮತ್ತೆ ಎರಡನೇ ಬಾರಿ ಇಂದ್ರಜಿತ್ ಅವರು ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

    ವಿಚಾರಣೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ನಾನು ನೀಡಿದ ಮಾಹಿತಿ ಬಗ್ಗೆ ಸ್ಪಷ್ಟನೆ ನೀಡಬೇಕಿತ್ತು. ಅದಕ್ಕೆ ನನ್ನನ್ನು ಕರೆಸಿದ್ದಾರೆ. ಬಂದು ಸ್ಪಷ್ಟನೆ ನೀಡಿದ್ದೇನೆ. ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಸಿಸಿಬಿ ಪೊಲೀಸರ ಮೇಲೆ ನನಗೆ ಭರವಸೆ ಇದೆ. ಅವರು ಒಳ್ಳೆಯ ಕೆಲಸವನ್ನು ಮಾಡುತ್ತಿದ್ದಾರೆ. ಅವರಿಗೆ ಕೆಲಸ ಮಾಡಲು ಸ್ವಾತಂತ್ರ್ಯ ಸಿಕ್ಕಿದೆ. ಇದೆಲ್ಲವೂ ಕ್ಲೀನ್ ಆಗುತ್ತದೆ ಎಂದು ಹೇಳಿದರು.

    ನಾನು ಒಬ್ಬ ಮೆಸೆಂಜರ್. ಯಾರೇ ಆಗಲಿ ಮೆಸೆಂಜರ್ ಅನ್ನು ಕೊಲ್ಲಬೇಡಿ. ನಾನು ಪರಿವಾಳದ ರೀತಿ, ಮಾಹಿತಿ ಕೊಟ್ಟು ಅಧಿಕಾರಿಗಳ ತನಿಖೆಗೆ ಸಹಾಯವಾಗುವ ರೀತಿಯಲ್ಲಿ ಮಾಡುತ್ತಿದ್ದೇನೆ. ನನಗೆ ಏನೂ ತಿಳಿದೆ ಅದನ್ನು ಹೇಳಿದ್ದೇನೆ. ಅವರು ತನಿಖೆ ಮಾಡಲಿದ್ದಾರೆ. ಇದರಿಂದ ಸಮಾಜಕ್ಕೆ ಅರಿವಾಗಿದೆ, ಭಯ ಬಂದಿದೆ. ಚಿತ್ರರಂಗದ ನಟ-ನಟಿಯರಿಗೂ ಅರಿವಾಗಿದೆ. ಕಾಲೇಜು ವಿದ್ಯಾರ್ಥಿಗಳು ಈ ಮೆಸೇಜ್ ಹೋಗಬೇಕಿತ್ತು, ಹೋಗಿದೆ ಎಂದು ಇಂದ್ರಜಿತ್ ತಿಳಿಸಿದ್ದಾರೆ.

    ಸಿಸಿಬಿ ಪೊಲೀಸರಿಗೆ ನನಗಿಂತ ಹೆಚ್ಚಿನ ಮಾಹಿತಿ ಇದೆ. ಅವರು ತನಿಖೆ ಮಾಡುತ್ತಿದ್ದಾರೆ. ನಾನು ಈಗ ಏನೇ ಹೇಳಿದರು ಅದ ತನಿಖೆಗೆ ಧಕ್ಕೆ ಆಗಲಿದೆ. ನನಗೆ ಯಾರದ್ದೋ ಸರ್ಟಿಫಿಕೆಟ್ ಬೇಕಿಲ್ಲ. ನಾನೂ ಕನ್ನಡದಲ್ಲಿ 9 ಸಿನಿಮಾ ಮಾಡಿದ್ದೇನೆ. ಬೇರೆ ಭಾಷೆಯಲ್ಲಿ ಸಿನಿಮಾ ಮಾಡಿದ್ದೇನೆ. ನನಗೆ ಜನರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ನನಗೆ ಚಿತ್ರರಂಗ ಒಳ್ಳೆಯ ದಾರಿಯಲ್ಲಿ ಹೋಗಬೇಕು. ಇಂದು ಯಾವುದೇ ಹೊಸ ಹೆಸರನ್ನು ಕೊಟ್ಟಿಲ್ಲ ಎಂದು ಇಂದ್ರಜಿತ್ ಹೇಳಿದ್ದಾರೆ.

  • ಗಾಂಜಾ ಡ್ರಗ್ ಅಲ್ಲ ಅದು ಮೆಡಿಸಿನ್, ಅದನ್ನು ಕಾನೂನು ಬದ್ಧ ಮಾಡಿ: ಯುವ ನಟ ರಾಕೇಶ್

    ಗಾಂಜಾ ಡ್ರಗ್ ಅಲ್ಲ ಅದು ಮೆಡಿಸಿನ್, ಅದನ್ನು ಕಾನೂನು ಬದ್ಧ ಮಾಡಿ: ಯುವ ನಟ ರಾಕೇಶ್

    – ನಾನು ಗಾಂಜಾ ತೆಗೆದುಕೊಳ್ಳುತ್ತೇನೆ

    ಬೆಂಗಳೂರು: ಗಾಂಜಾ ಡ್ರಗ್ ಅಲ್ಲ ಅದೊಂದು ಮೆಡಿಸಿನ್ ಎಂದು ಯುವನಟ ರಾಕೇಶ್ ಅಡಿಗ ಹೇಳಿದ್ದಾರೆ.

    ಚಂದನವದಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ ರಾಕೇಶ್, ಗಾಂಜಾದ ಬಗ್ಗೆ ಎಲ್ಲರಿಗೂ ತಪ್ಪು ಕಲ್ಪನೆ ಇದೆ. ಅದನ್ನು ತೆಗೆದು ಹಾಕಬೇಕು. ಗಂಜಾ ಡ್ರಗ್ ಅಲ್ಲ. ಅದು ಮೆಡಿಸಿನ್ ಆಗಿದ್ದು ಅದನ್ನು ಕಾನೂನು ಬದ್ಧಮಾಡಿ ಎಂದು ತಿಳಿಸಿದ್ದಾರೆ.

    ಡ್ರಗ್ ಎಂಬುದು ಇಡೀ ಪ್ರಪಂಚದಲ್ಲೇ ಇದೆ. ಈಗ ಸ್ಯಾಂಡಲ್‍ವುಡ್‍ನಲ್ಲಿ ಕೆಲವರನ್ನು ಗುರುತಿಸಿ ಅವರನ್ನು ಅಪರಾಧಿಗಳನ್ನಾಗಿ ಮಾಡಬೇಡಿ. ಅವರನ್ನು ಹೊರಗೆ ಇಡುವುದು ಬೇಡ. ಯಾರು ಅದನ್ನು ತೆಗೆದುಕೊಳ್ಳುತ್ತಿದ್ದಾರೆ ಎನ್ನುವುದಕ್ಕಿಂತ ಯಾರು ತಂದು ಮಾರುತ್ತಿದ್ದಾರೆ ಅವರನ್ನು ಹಿಡಿದುಕೊಳ್ಳಬೇಕು. ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ಹೇಳುತ್ತಿದ್ದೇನೆ ಗಾಂಜಾವನ್ನು ಡ್ರಗ್‍ನಿಂದ ದೂರ ಇಡಬೇಕು. ಗಾಂಜಾ ಒಂದು ಗಿಡ, ಅದಕ್ಕೆ ನೂರಾರು ವರ್ಷಗಳ ಇತಿಹಾಸವಿದೆ ಎಂದು ರಾಕೇಶ್ ಹೇಳಿದರು.

    ಗಾಂಜಾ ತೆಗೆದುಕೊಂಡರೆ ಮಾತ್ರ ನಶೆಯಾಗುತ್ತದೆಯೇ, ಡ್ರಿಂಕ್ಸ್ ಮಾಡಿದರೆ ನಶೆ ಆಗುವುದಿಲ್ಲವೇ? ಗಾಂಜಾ ಬಗ್ಗೆ ಮೋದಿಯವರಿಗೂ ಬಹಿರಂಗ ಪತ್ರ ಬರೆಯಲಾಗಿದೆ. ಅಯಷ್ಮಾನ್ ಇಲಾಖೆಯವರು ಇದರ ಬಗ್ಗೆ ಸಂಶೋಧನೆ ಮಾಡುತ್ತಿದ್ದಾರೆ. ಈ ಹಿಂದೆ ಗಾಂಜಾ ಭಾರತೀಯ ಸಂಸ್ಕೃತಿಗೆ ಬೆರೆತು ಹೋಗಿತ್ತು. 1985ರಲ್ಲಿ ಇದು ಬ್ಯಾನ್ ಆಯ್ತು, ಹಾಗಾದರೆ 1985ರವರೆಗೆ ಭಾರತದಲ್ಲಿ ಎಲ್ಲರೂ ಡ್ರಗ್ ಅಡಿಕ್ಟ್ ಆಗಿದ್ರಾ ಎಂದು ರಾಕೇಶ್ ಪ್ರಶ್ನೆ ಮಾಡಿದ್ದಾರೆ.

    ಮಿಡೀಯಾದಲ್ಲಿ ಡ್ರಿಂಕ್ಸ್ ಮಾಡಿ ಅಪರಾಧ ಮಾಡಿದರೆ, ಗಾಂಜಾ ಮತ್ತಿನಲ್ಲಿ ಮಾಡಿದ್ದಾರೆ ಎಂದು ತೋರಿಸುತ್ತಾರೆ. ಇದರ ಬಗ್ಗೆ ವಿಜ್ಞಾನಿಗಳು ಕೇಳಿ ಗಾಂಜಾದ ಉಪಯೋಗಗಳ ಬಗ್ಗೆ ಹೇಳುತ್ತಾರೆ. ನಾವು ಎಲ್ಲ ವಿಚಾರದಲ್ಲೂ ಅಮೆರಿಕವನ್ನು ಫಾಲೋ ಮಾಡುತ್ತೇವೆ. ಅವರು ಅಲ್ಲಿ ಇದನ್ನು ಕಾನೂನು ಬದ್ಧ ಮಾಡಿದ್ದಾರೆ. ಅವರಿಗೆ ಹೆಚ್ಚು ಆದಾಯ ಬರುತ್ತದೆ. ಗಾಂಜಾದಿಂದ ನಮ್ಮ ಆರ್ಥಿಕತೆ ಮತ್ತು ಮೆಡಿಸಿನ್ ವಿಭಾಗಕ್ಕೆ ಲಾಭವಿದೆ. ಮದ್ಯಕ್ಕಿಂತ ಗಾಂಜಾ ಒಳ್ಳೆಯದು ಎಂದು ರಾಕೇಶ್ ಅಭಿಪ್ರಾಯಪಟ್ಟರು.

    ಜೊತೆಗೆ ನಾನೂ ಗಾಂಜಾವನ್ನು ತೆಗೆದುಕೊಳ್ಳುತ್ತಿದ್ದೆ. ಈಗಲೂ ಅದರಿಂದ ಮಾಡಿದ ಕೇಕ್, ಕುಕಿಗಳನ್ನು ಯಾರದರೂ ಮಾಡಿಕೊಟ್ಟರೆ ತಿನ್ನುತ್ತೇನೆ ಎಂದು ರಾಕೇಶ್ ಬಹಿರಂಗವಾಗಿ ಹೇಳಿಕೆ ನೀಡಿದರು.