Tag: ತಂತ್ರಜ್ಞಾನ

  • ಅಮೆರಿಕದ ಬಳಿಕ ಭಾರತದ ಜೊತೆ ವ್ಯಾಪಾರ, ತಂತ್ರಜ್ಞಾನ ಮಂಡಳಿ ಸ್ಥಾಪಿಸಿದ ಯುರೋಪ್ ಒಕ್ಕೂಟ

    ಅಮೆರಿಕದ ಬಳಿಕ ಭಾರತದ ಜೊತೆ ವ್ಯಾಪಾರ, ತಂತ್ರಜ್ಞಾನ ಮಂಡಳಿ ಸ್ಥಾಪಿಸಿದ ಯುರೋಪ್ ಒಕ್ಕೂಟ

    ನವದೆಹಲಿ: ಉಕ್ರೇನ್ ರಷ್ಯಾ ಯುದ್ಧದಲ್ಲಿ ಯಾರ ಪರವು ನಿಲ್ಲದ ತಟಸ್ಥ ಧೋರಣೆ ಅನುಸರಿಸಿದ ಭಾರತ ಜೊತೆ ಯುರೋಪಿಯನ್ ಒಕ್ಕೂಟ ಮಹತ್ವದ ಒಪ್ಪಂದ ಮಾಡಿಕೊಂಡಿದೆ. ಯುರೋಪಿಯನ್ ಒಕ್ಕೂಟ ಹಾಗೂ ಭಾರತ ತಮ್ಮ ವ್ಯಾಪಾರವನ್ನು ವಿಸ್ತರಿಸಲು ವ್ಯಾಪಾರ ಹಾಗೂ ತಂತ್ರಜ್ಞಾನ ಮಂಡಳಿಯನ್ನು ಸ್ಥಾಪಿಸಲು ಒಪ್ಪಿಕೊಂಡಿವೆ.

    ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಸುರ್ಸುಲಾ ವಾನ್ ಡೆರ್ ಲೇಯೆನ್ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷಿಯ ಮಾತುಕತೆಯಲ್ಲಿ ವ್ಯಾಪಾರ, ಹವಾಮಾನ, ಡಿಜಿಟಲ್ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಕಾರಗಳನ್ನು ಹೆಚ್ಚಿಸಿಕೊಳ್ಳುವುದಾಗಿ ಉಭಯ ರಾಷ್ಟ್ರಗಳು ಒಪ್ಪಂದಗಳನ್ನು ಮಾಡಿಕೊಂಡವು.

    ಈ ಮೊದಲು ಯುರೋಪಿಯನ್ ಒಕ್ಕೂಟ ವ್ಯಾಪಾರ, ತಂತ್ರಜ್ಞಾನ ಮಂಡಳಿಯನ್ನು ಅಮೆರಿಕದ ಜೊತೆ ಮಾಡಿಕೊಂಡಿತ್ತು. ಈಗ ಈ ರೀತಿ ಒಪ್ಪಂದ ಮಾಡಿಕೊಂಡ ಎರಡನೇ ದೇಶ ಭಾರತವಾಗಿರುವುದು ವಿಶೇಷ. ಅದರಲ್ಲೂ ರಷ್ಯಾ ವಿರೋಧಿ ನಿಲುವು ತೆಗೆದುಕೊಳ್ಳದೇ ಇರುವ ಸಮಯದಲ್ಲೇ ಈ ಮಹತ್ವದ ಒಪ್ಪಂದ ನಡೆದಿರುವುದು ಇನ್ನೊಂದು ವಿಶೇಷ. ಸೋಮವಾರ ಭಾರತದ ಈ ನಿರ್ಧಾರವನ್ನು ಯುರೋಪಿಯನ್ ಯೂನಿಯನ್ ಒಪ್ಪಿಕೊಂಡಿದೆ.

    ಡೆರ್ ಲೇಯೆನ್ ಹೇಳಿದ್ದೇನು?
    ಈ ವೇಳೆ ಮಾತನಾಡಿದ ವಾನ್ ಡೆರ್ ಲೇಯೆನ್, ಯುಇ ಇಲ್ಲಿವರೆಗೆ ಅಮೆರಿಕದೊಂದಿಗೆ ವ್ಯಾಪಾರ ಹಾಗೂ ತಂತ್ರಜ್ಞಾನಗಳಲ್ಲಿ ಒಕ್ಕೂಟವನ್ನು ಏರ್ಪಡಿಸಿಕೊಂಡಿತ್ತು. ಇದೀಗ ಬಹು ಮುಖ್ಯವಾದ ಹಾಗೂ ನಮ್ಮ ಎರಡನೇ ಒಕ್ಕೂಟವನ್ನು ಭಾರತದೊಂದಿಗೆ ಸ್ಥಾಪಿಸುವ ಸಮಯ ಎಂದರು. ಭಾರತ ಹಾಗೂ ಯುರೋಪಿಯನ್ ಯೂನಿಯನ್‌ನ ಅಂತರಾಷ್ಟ್ರೀಯ ಸಂಬಂಧದ 60ನೇ ವಾರ್ಷಿಕೋತ್ಸವದ ಸಮಯದಲ್ಲಿ ಈ ಹೊಸ ಒಕ್ಕೂಟ ಬಹು ಮುಖ್ಯವಾದುದು ಎಂದು ಹೇಳಿದರು. ಇದನ್ನೂ ಓದಿ: ಮುಗಿಯದ ವಿಚಾರಣೆ – BBMP ಚುನಾವಣೆ ಮತ್ತಷ್ಟು ವಿಳಂಬ

    ಭಾರತ ಹಾಗೂ ಯುರೋಪ್ ರಾಷ್ಟ್ರಗಳಿಗೆ ಶಕ್ತಿ ಸುರಕ್ಷತೆ ಒಂದು ಅತ್ಯಂತ ಮುಖ್ಯವಾದ ವಿಷಯವಾಗಿದೆ. ಯುರೋಪ್ ಈ ಹಿಂದೆ ರಷ್ಯಾದಿಂದ ಪಡೆಯುತ್ತಿದ್ದ ಇಂಧನಗಳಿಂದ ದೂರ ಉಳಿಯಲು ಇಷ್ಟಪಡುತ್ತಿದ್ದು, ಇದೀಗ ಹೊಸ, ಶುದ್ಧ ಹಾಗೂ ನವೀಕರಿಸಬಹುದಾದ ಶಕ್ತಿಗಳೆಡೆ ಗಮನ ಹರಿಸುತ್ತಿದ್ದೇವೆ. ಇದರಲ್ಲಿ ಸೌರ ಹಾಗೂ ಜಲಜನಕದ ಮೇಲೆ ಭಾರತ ಹಾಗೂ ಯುರೋಪ್‌ನ ಸಹಕಾರ ಪ್ರಮುಖವಾಗಿದೆ.

    ಈ ಸಹಕಾರದಲ್ಲಿ #GlobalGateway ನಿರ್ಣಾಯಕ ಪಾತ್ರ ವಹಿಸಲಿದೆ. ಯುರೋಪ್ ಭಾರತದ 3ನೇ ಪ್ರಮುಖ ವ್ಯಾಪಾರ ಪಾಲುದಾರ ಹಾಗೂ ಅದರ ಪ್ರಮುಖ ಹೂಡಿಕೆದಾರರಲ್ಲಿ ಒಂದಾಗಿದೆ. ನಾವು ಶೀಘ್ರದಲ್ಲೇ ಭಾರತದೊಂದಿಗೆ ವ್ಯಾಪಾರ ಹಾಗೂ ಹೂಡಿಕೆ ಒಪ್ಪಂದಗಳ ಕುರಿತು ಮಾತುಕತೆ ಪ್ರಾರಂಭಿಸಲಿದ್ದೇವೆ. ಇದನ್ನೂ ಓದಿ: ಬುಧವಾರ ಎಲ್ಲ ರಾಜ್ಯಗಳ ಸಿಎಂ ಜೊತೆ ಮೋದಿ ತುರ್ತು ಸಭೆ

    ಭಾರತ ಹಾಗೂ ಯುರೋಪ್‌ನ ಪಾಲುದಾರಿಕೆಯನ್ನು ಬಲಪಡಿಸುವುದು ಈ ದಶಕದ ಪ್ರಮುಖ ಆದ್ಯತೆಯಾಗಿದೆ. ನಾವು ವ್ಯಾಪಾರ, ತಂತ್ರಜ್ಞಾನ ಹಾಗೂ ಭದ್ರತೆಯಲ್ಲಿ ಸಹಕಾರವನ್ನು ಹೆಚ್ಚಿಸುತ್ತೇವೆ. ಈ ವಿಚಾರವಾಗಿ ನಾನು ಅತ್ಯಂತ ಸಂತಸಗೊಂಡಿದ್ದೇನೆ ಹಾಗೂ ಭಾರತ-ಯುರೋಪ್‌ನ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿಯನ್ನು ಸ್ಥಾಪಿಸುತ್ತೇನೆ.

    ಕಳೆದ ವಾರವಷ್ಟೇ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತಕ್ಕೆ ಆಗಮಿಸಿದ್ದರು. ಇವರು ಮರಳಿದ ಎರಡು ದಿನದಲ್ಲಿ ವಾನ್ ಡೆರ್ ಲೇಯೆನ್ ಭಾರತಕ್ಕೆ ಆಗಮಿಸಿ ಮಹತ್ವದ ಒಪ್ಪಂದ ಮಾಡಿದ್ದಾರೆ.

  • ತಂತ್ರಜ್ಞಾನ ಅವಕಾಶ ಬಳಸಿ ಯಶಸ್ವಿ ಮಹಿಳಾ ಉದ್ಯಮಿಗಳಾಗಿ: ಉಮಾ ರೆಡ್ಡಿ

    ತಂತ್ರಜ್ಞಾನ ಅವಕಾಶ ಬಳಸಿ ಯಶಸ್ವಿ ಮಹಿಳಾ ಉದ್ಯಮಿಗಳಾಗಿ: ಉಮಾ ರೆಡ್ಡಿ

    ಬೆಂಗಳೂರು: ತಂತ್ರಜ್ಞಾನದ ಅವಕಾಶಗಳನ್ನು ಸೂಕ್ತವಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಯಶಸ್ವಿ ಮಹಿಳಾ ಉದ್ಯಮಿಗಳಾಗಬಹುದು ಎಂದು ಹೈಟೆಕ್ ಮ್ಯಾಗ್ನಟಿಕ್ ಸಲ್ಯೂಶನ್ಸ್ ವ್ಯವಸ್ಥಾಪಕ ನಿರ್ದೇಶಕಿ ಉಮಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

    ಕರ್ನಾಟಕ ಪತ್ರಕರ್ತೆಯರ ಸಂಘ, ಎಫ್ ಕೆಸಿಸಿಐ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಗರದಲ್ಲಿಂದು ಪತ್ರಕರ್ತೆಯರಿಗಾಗಿ ಆಯೋಜಿಸಿದ್ದ ಡಿಜಿಟಲ್ ಲಿಟರಸಿ ಕಾರ್ಯಾಗಾರದಲ್ಲಿ ತಂತ್ರಜ್ಞಾನ ಹಾಗೂ ಅವಕಾಶಗಳ ಕುರಿತು ಮಾತನಾಡಿದರು. ಇದನ್ನೂ ಓದಿ: ಪ್ರಶಾಂತ್ ಸಂಬರಗಿ ಸಾರಥ್ಯದಲ್ಲಿ ಸಿನಿಮಾವಾಗ್ತಿದೆ ‘ಆಗಸ್ಟ್ 15’ರ ಸ್ಟೋರಿ

    ಪ್ರಸ್ತುತ ಡಿಜಿಟಲ್ ಲಿಟರಸಿ ಮುಖ್ಯವಾಗಿದೆ. ಅದರಲ್ಲೂ ಕೋವಿಡ್ ಸಮಯದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾಯಿತು. ಹೆಚ್ಚು ಜನರನ್ನು ತಲುಪಲು ಸಾಧ್ಯವಾಯಿತು. ಪ್ರತಿ ದಿನ ತಂತ್ರಜ್ಞಾನ ಅಪ್ ಗ್ರೇಡ್ ಆಗುತ್ತಿರುತ್ತದೆ. ಅದನ್ನು ಹೇಗೆ ಬಳಸಿಕೊಳ್ಳಬೇಕು, ಪ್ರಯೋಜನಗಳು ಮತ್ತು ನೆಟ್ ವಕಿರ್ಂಗ್ ಕುರಿತು ಅರಿವು ಇರಲೇಬೇಕು. ಅಗತ್ಯವಿರುವ ಮತ್ತು ಸೂಕ್ತವಾದ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿ ಮಹಿಳಾ ಉದ್ಯಮಿಯಾಗಬಹುದು ಎಂದರು. ಇದನ್ನೂ ಓದಿ: 40% ಕಮಿಷನ್ – ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದ ಗುತ್ತಿಗೆದಾರ

    ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ರಜಿನಿ ರಮೇಶ್ ಮಾತನಾಡಿ, ಪ್ರತಿಯೊಬ್ಬರು ತಮ್ಮನ್ನು ತಾವು ತೆರೆದುಕೊಳ್ಳಲು ಸಾಮಾಜಿಕ ಜಾಲತಾಣ ಉತ್ತಮ ವೇದಿಕೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಆದರೂ ಅವುಗಳನ್ನು ವೈಯಕ್ತಿಕ ಸುರಕ್ಷತೆ ಕಾಪಾಡಿಕೊಳ್ಳುವಂತೆ ಎಚ್ಚರಿಕೆಯಿಂದ ಬಳಸಬೇಕು. ಈ ಅರಿವು ಅತ್ಯಗತ್ಯ ಎಂದು ತಿಳಿಸಿದರು. ಪತ್ರಕರ್ತೆಯರಿಗೆ ಅಗತ್ಯವಿರುವ ಸೋಶಿಯಲ್ ಮೀಡಿಯಾ, ಬಳಕೆ, ಉಪಯೋಗ ಕುರಿತು ಪ್ರಾತ್ಯಕ್ಷಿಕೆ ನೀಡುವ ಮೂಲಕ ವಿವರಿಸಿದರು.

    ಸಂಘದ ಅಧ್ಯಕ್ಷೆ ಶಾಂತಲಾ ಧರ್ಮರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಕಾರ್ಯಚಟುವಟಿಕೆ ಹಾಗೂ ಪತ್ರಕರ್ತೆಯರ ಮುಂದಿರುವ ಸವಾಲುಗಳ ಬಗ್ಗೆ ವಿವರಿಸಿದರು. ಕಾರ್ಯಾಗಾರದಲ್ಲಿ ಸಂಘದ ಕಾರ್ಯದರ್ಶಿ ಮಾಲತಿ ಭಟ್, ಹಿರಿಯ ಪತ್ರಕರ್ತೆ ಕೆ.ಹೆಚ್. ಸಾವಿತ್ರಿ, ಆಕಾಶವಾಣಿ ನಿರ್ದೇಶಕಿ ನಿರ್ಮಲಾ ಎಲಿಗಾರ್, ಪಿಐಬಿ ಅಧಿಕಾರಿ ಜಯಂತಿ ಕೆ.ವೈ ಸೇರಿದಂತೆ ಹಿರಿಯ ಹಾಗೂ ಕಿರಿಯ ಪತ್ರಕರ್ತೆಯರು ಭಾಗವಹಿಸಿದ್ದರು.

  • ತಂತ್ರಜ್ಞಾನ ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ: ಮೋದಿ

    ತಂತ್ರಜ್ಞಾನ ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ: ಮೋದಿ

    ನವದೆಹಲಿ: ತಂತ್ರಜ್ಞಾನ ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

    ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶನಿವಾರ ಬೆಳಗ್ಗೆ ಗಾಂಧಿನಗರದ ಲಾವಡ್ ಪ್ರದೇಶದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಾತನಾಡಿದರು. ಭದ್ರತಾ ಪಡೆಗಳನ್ನು ಶ್ಲಾಘಿಸಿದರು ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತದ ಹೋರಾಟಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದರು.

    ದೇಶದ ಭದ್ರತೆಯಲ್ಲಿ ತಂತ್ರಜ್ಞಾನದ ಪಾತ್ರವನ್ನು ಒತ್ತಿ ಹೇಳಿದ ಅವರು, ತಂತ್ರಜ್ಞಾನವು ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ. ಭದ್ರತಾ ಪಡೆಗಳಲ್ಲಿರಲು ಕೇವಲ ದೈಹಿಕ ತರಬೇತಿ ಸಾಕಾಗುವುದಿಲ್ಲ. ಈಗ ವಿಶೇಷ ಸಾಮಥ್ರ್ಯವುಳ್ಳ ಹಾಗೂ ದೈಹಿಕವಾಗಿ ಸದೃಢರಾಗದಿದ್ದರೂ ಸಹ ಭದ್ರತೆಗೆ ಕೊಡುಗೆ ನೀಡಬಹುದು ಎಂದರು. ಇದನ್ನೂ ಓದಿ: ಭಾರತದ ರಫೇಲ್ ಯುದ್ಧ ವಿಮಾನ ಎದುರಿಸಲು ಚೀನಾದ ಜೆ-10ಸಿ ಫೈಟರ್ ಜೆಟ್ ಖರೀದಿಸಿದ ಪಾಕಿಸ್ತಾನ

    ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಾವು ನೋಡಿದ್ದೇವೆ. ಲಾಕ್‍ಡೌನ್ ಸಮಯದಲ್ಲಿ ಸಮವಸ್ತ್ರದಲ್ಲಿ ಅನೇಕ ಪೊಲೀಸರು ಅಗತ್ಯವಿರುವವರಿಗೆ ಆಹಾರ ಮತ್ತು ಔಷಧಿಗಳನ್ನು ನೀಡಿದರು. ಜನರು ಪೊಲೀಸರ ಮಾನವೀಯ ಮುಖವನ್ನು ನೋಡಿದ್ದಾರೆ ಎಂದು ಹೇಳಿದರು.

    ಪೊಲೀಸರ ಬಗ್ಗೆ ಜನರಲ್ಲಿರುವ ಗ್ರಹಿಕೆಯನ್ನು ಬದಲಾಯಿಸುವ ರೀತಿಯಲ್ಲಿ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಬೇಕು. ಪೊಲೀಸ್ ಬಗ್ಗೆ ಜನರಲ್ಲಿ ಒಂದು ಕೆಟ್ಟ ಗ್ರಹಿಕೆ ಇದೆ. ಜನರೊಂದಿಗೆ ಸೌಹಾರ್ದಯುತವಾಗಿರುವ ರೀತಿಯಲ್ಲಿ ಪೊಲೀಸ್ ಪಡೆಯನ್ನು ತರಬೇತುಗೊಳಿಸುವುದು ಕಡ್ಡಾಯವಾಗಿದೆ ಎಂದು ಸಲಹೆ ನೀಡಿದರು. ಇದನ್ನೂ ಓದಿ: ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಮಹಿಳೆ ನಾಮನಿರ್ದೇಶನ

    ಭದ್ರತಾ ಪಡೆಗಳಲ್ಲಿನ ನೇಮಕಾತಿಯಲ್ಲಿನ ಸುಧಾರಣೆಗಳ ಅಗತ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸ್ವಾತಂತ್ರ್ಯದ ನಂತರ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ನೇಮಕಾತಿಯಲ್ಲಿ ಸುಧಾರಣೆಗಳ ಅಗತ್ಯವಿತ್ತು. ದುರದೃಷ್ಟವಶಾತ್ ನಾವು ಹಿಂದುಳಿದಿದ್ದೇವೆ ಎಂದು ಹೇಳಿದರು.

    ಪ್ರಧಾನಿ ಮೋದಿಯವರ ಎರಡು ದಿನಗಳ ಗುಜರಾತ್ ಭೇಟಿ ಶುಕ್ರವಾರ ಪ್ರಾರಂಭವಾಯಿತು. ಅಲ್ಲಿ ಅವರು ವಿಮಾನ ನಿಲ್ದಾಣದಿಂದ ಬಿಜೆಪಿ ಕಚೇರಿ ಕಮಲಂವರೆಗೆ ರೋಡ್‍ಶೋ ನಡೆಸಿದರು. ನಂತರ ಅಹಮದಾಬಾದ್‍ನಲ್ಲಿ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು. ಇದಲ್ಲದೆ ಅಹಮದಾಬಾದ್‍ನ ಜಿಎಂಡಿಸಿ ಮೈದಾನದಲ್ಲಿ ಮಹಾ ಪಂಚಾಯತ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.

    ನಂತರ ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಅವರ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಿ ಅವರ ಜೊತೆ ಕುಳಿತು ಭೋಜನ ಸ್ವೀಕರಿಸಿದರು.

  • ರಕ್ತ ಪರೀಕ್ಷೆಯಿಂದ ಕ್ಯಾನ್ಸರ್ ಕಂಡುಹಿಡಿಯುವ ಹೊಸ ತಂತ್ರಜ್ಞಾನ ಅಭಿವೃದ್ಧಿ

    ರಕ್ತ ಪರೀಕ್ಷೆಯಿಂದ ಕ್ಯಾನ್ಸರ್ ಕಂಡುಹಿಡಿಯುವ ಹೊಸ ತಂತ್ರಜ್ಞಾನ ಅಭಿವೃದ್ಧಿ

    ಲಂಡನ್: ಕ್ಯಾನ್ಸರ್ ಲಕ್ಷಣ ಇಲ್ಲದಿದ್ದರೂ ರಕ್ತದ ಪರೀಕ್ಷೆಯ ಮೂಲಕ ಅದನ್ನು ಕಂಡುಹಿಡಿಯುವಂತಹ ತಂತ್ರಜ್ಞಾನವನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ.

    ಜನರಲ್ಲಿ ಕ್ಯಾನ್ಸರ್‌ನ ಪ್ರಾರಂಭಿಕ ಹಂತದಲ್ಲಿ ಅದರ ಲಕ್ಷಣವನ್ನು ಕಂಡುಹಿಡಿಯುವುದು ವೈದ್ಯರಿಗೆ ಒಂದು ಸವಾಲಿನ ವಿಷಯ. ಹಲವು ಬಾರಿ ರೋಗಿಗಳು ಕ್ಯಾನ್ಸರ್‌ನ ಪ್ರಾರಂಭದ ಹಂತದಲ್ಲಿ ವೈದ್ಯರಿಗೂ ತಿಳಿಯದೇ ಸಾಮಾನ್ಯ ಸಮಸ್ಯೆ ಎಂದುಕೊಂಡು ಕೊನೇ ಹಂತದಲ್ಲಿ ಜೀವವನ್ನೇ ಕಳೆದುಕೊಂಡಿರುವಂತಹ ಘಟನೆಗಳನ್ನು ನಾವು ಸಾಕಷ್ಟು ಬಾರಿ ನೋಡಿರುತ್ತೇವೆ.

    ಕ್ಯಾನ್ಸರ್ ಕಂಡು ಹಿಡಿಯುವುದು ವೈದ್ಯರಿಗೂ ದೊಡ್ಡ ಸವಾಲು. ಹೀಗಿರುವಾಗ ವಿಜ್ಞಾನಿಗಳು ಹೊಸ ತಂತ್ರಜ್ಞಾನ ಕಂಡುಹಿಡಿದಿದ್ದಾರೆ. ಇದರ ಸಹಾಯದಿಂದ ರೋಗಿಗಳ ರಕ್ತದ ಮಾದರಿಯನ್ನು ಬಳಸಿಕೊಂಡು ಅವರಿಗೆ ಕ್ಯಾನ್ಸರ್ ಇದೆಯೇ ಇಲ್ಲವೇ ಎಂಬುದನ್ನು ಸುಲಭವಾಗಿ ಕಂಡು ಹಿಡಿಯಬಹುದು ಎಂದಿದ್ದಾರೆ. ಇದನ್ನೂ ಓದಿ: 12,000 ಕೆಜಿ ತೂಕದ ಬಸ್ಸನ್ನು ಕೂದಲಿನಿಂದ ಎಳೆದ ಭಾರತೀಯ ಮಹಿಳೆ- Video Viral

    ಸಂಶೋಧಕರು ನ್ಯೂಕ್ಲಿಯರ್ ಮ್ಯಾಗ್ನೆಟಿಕ್ ರೆಸೋನೆನ್ಸ್ ಸ್ಪೆಕ್ರೋಸ್ಕೋಪಿ ತಂತ್ರಜ್ಞಾನವನ್ನು ಬಳಸಿಕೊಂಡು, ರಕ್ತದ ಅಣುವನ್ನು ಸರಿಯಾಗಿ ಪರಿಶೀಲನೆ ನಡೆಸುವ ಮೂಲಕ ಕ್ಯಾನ್ಸರ್ ರೋಗ ಪತ್ತೆ ಹಚ್ಚಬಹುದು ಎಂದು ತಿಳಿಸಿದ್ದಾರೆ.

    ಈ ತಂತ್ರಜ್ಞಾನದ ಮೂಲಕ ಕ್ಯಾನ್ಸರ್‌ನ ಲಕ್ಷಣಗಳನ್ನು ಗುರುತಿಸಬಹುದು. ಸಂಶೋಧಕರು ಆಯಾಸ ಹಾಗೂ ತೂಕ ನಷ್ಟಗಳಂತಹ ಲಕ್ಷಣಗಳು ಹೊಂದಿದ್ದ 20 ರೋಗಿಗಳ ರಕ್ತದ ಕಣಗಳಲ್ಲಿ 19 ರೋಗಿಗಳಿಗೆ ಕ್ಯಾನ್ಸರ್ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಇದನ್ನೂ ಓದಿ: ಸ್ಟಾರ್‌ಲಿಂಕ್ ಇಂಡಿಯಾದ ಮುಖ್ಯಸ್ಥ ಸಂಜಯ್ ಭಾರ್ಗವ ರಾಜೀನಾಮೆ

    ಈ ತಂತ್ರಜ್ಞಾನದ ಮೂಲಕ 2000 ದಿಂದ 3000 ಬ್ರಿಟಿಷ್ ರೋಗಿಗಳಲ್ಲಿ ಕ್ಯಾನ್ಸರ್ ಅನ್ನು ಮೊದಲ ಹಂತದಲ್ಲೇ ಪತ್ತೆ ಹಚ್ಚಿದ್ದಾರೆ. ಈ ತಂತ್ರಜ್ಞಾನ ಜಾಗತಿಕವಾಗಿ ಬಳಕೆಯಾದಲ್ಲಿ ಕ್ಯಾನ್ಸರ್‌ಅನ್ನು ವೇಗವಾಗಿ ಪತ್ತೆ ಹಚ್ಚಿ, ರೋಗಿಯ ಜೀವ ಉಳಿಸಲು ಸಹಾಯವಾಗಬಹುದು ಎಂದು ಸಂಶೋಧಕರು ಹೇಳಿದ್ದಾರೆ.

  • ಮೋದಿಯ ಡಿಜಿಟಲ್ ಇಂಡಿಯಾ ಮೂಲಕ ಪ್ರತಿ ಮನೆಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು: ಉದಯ್ ಗರುಡಚಾರ್

    ಮೋದಿಯ ಡಿಜಿಟಲ್ ಇಂಡಿಯಾ ಮೂಲಕ ಪ್ರತಿ ಮನೆಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು: ಉದಯ್ ಗರುಡಚಾರ್

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯ ಡಿಜಿಟಲ್ ಇಂಡಿಯಾ ಕನಸಿನ ಭಾರತ ನನಸು ಮಾಡಲು ಪ್ರತಿ ಮನೆಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ಚಿಕ್ಕಪೇಟೆ ಶಾಸಕರಾದ ಉದಯ್ ಗರುಡಾಚಾರ್ ಅಭಿಪ್ರಾಯಪಟ್ಟಿದ್ದಾರೆ.

    ಸ್ಲಂ ಪ್ರದೇಶದ ಶಾಲಾ ಮಕ್ಕಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಆನಾಥ ಮಕ್ಕಳಿಗೆ ಉಚಿತ ಕಂಪ್ಯೂಟರ್ ತರಬೇತಿ ಮತ್ತು ಪ್ರಾಜೆಕ್ಟ್ ವರ್ಕ್ ಮಾಡಲು ಅನುಕೂಲಕ್ಕೆ ಬಿಗ್-ಬಿ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಸ್ಲಂ ಪ್ರದೇಶದ ಶಾಲಾ ಮಕ್ಕಳು ಮತ್ತು ಆನಾಥ ಮಕ್ಕಳು ಕಾಲೇಜು ,ವಿದ್ಯಾರ್ಥಿಗಳಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿ ಮತ್ತು ಪ್ರಾಜೆಕ್ಟ್ ವರ್ಕ್ ಮಾಡಲು ತರಬೇತಿ ಕೇಂದ್ರ ಉದ್ಘಾಟನೆಯನ್ನು ಉದಯ್ ಗರುಡಾಚಾರ್, ಅರಣ್ಯ ಅಭಿವೃದ್ದಿ ನಿಗಮ ನಿರ್ದೇಶಕಿ ಭಾಗ್ಯವತಿ ಅಮರೇಶ್, ಮಾಹಿತಿ ಹಕ್ಕು ಅಧ್ಯಯನ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಮರೇಶ್ (ಅಂಬರೀಶ್) ಮತ್ತು ಚಲನಚಿತ್ರ ನಿರ್ಮಾಪಕ ಜಾಕ್ ಮಂಜು ಉದ್ಘಾಟನೆ ಮಾಡಿದರು. ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‍ನಲ್ಲಿ ಮತ್ತೆ ಬಿರುಕು – ಚರಣ್‍ಜಿತ್ ಸಿಂಗ್ ಛನ್ನಿ Vs ಸಿಧು

    ಬಳಿಕ ಮಾತನಾಡಿದ ಉದಯ್ ಗರುಡಾಚಾರ್, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಸ್ಲಂ ಪ್ರದೇಶವಿದೆ. ಅಲ್ಲಿ ಪ್ರತಿಭಾವಂತ ಮಕ್ಕಳು ಇದ್ದಾರೆ ಅವರಿಗೆ ಉತ್ತಮ ಕಂಪ್ಯೂಟರ್ ತಂತ್ರಜ್ಞಾನ ಹೊಂದಲು ಮತ್ತು ಶಾಲಾ, ಕಾಲೇಜು ಮಕ್ಕಳ ಪ್ರಾಜೆಕ್ಟ್ ವರ್ಕ್ ಮಾಡಲು ಉಚಿತವಾಗಿ ಕಲಿಸುವುದರಿಂದ ಶ್ರೀಮಂತರ ಮಕ್ಕಳಿಗೆ ಸಿಗುವ ಕಂಪ್ಯೂಟರ್ ಶಿಕ್ಷಣ ಸ್ಲಂ ಪ್ರದೇಶದ ಮಕ್ಕಳಿಗೆ ಸಿಕ್ಕರೆ ಭಾರತ ಭವಿಷ್ಯ ಉಜ್ವಲವಾಗಲಿದೆ .ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಇಂಡಿಯಾ ಯಶ್ವಸಿಯಾಗಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಹೇಳಿದರು. ಇದನ್ನೂ ಓದಿ: ಪುನೀತ್ ಅಂತ್ಯಸಂಸ್ಕಾರಕ್ಕೆ ಶ್ರಮಿಸಿದ ಎಲ್ಲರಿಗೂ ಅಶ್ವಿನಿ ಧನ್ಯವಾ

    ಭಾಗ್ಯವತಿ ಅಮರೇಶ್ ಮಾತನಾಡಿ, ಶಿಕ್ಷಣದಿಂದ ದೇಶ ಅಭಿವೃದ್ದಿ ಸಾಧ್ಯ. ಆರ್ಥಿಕವಾಗಿ ಸಬಲರಾದವರಿಗೆ ಉನ್ನತ ಶಿಕ್ಷಣ ಸಿಗುತ್ತದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಉಚಿತವಾಗಿ ಕಂಪ್ಯೂಟರ್ ತರಬೇತಿ ಮತ್ತು ಪ್ರಾಜೆಕ್ಟ್ ವರ್ಕ್ ಮಾಡಲು 10 ಕಂಪ್ಯೂಟರ್‍ ಗಳನ್ನು ಅಳವಡಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಆಶಯ ನಮ್ಮದು ಎಂದು ಹೇಳಿದರು. ಇದನ್ನೂ ಓದಿ: ನಾನು ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್

    ಕಾರ್ಯಕ್ರಮದಲ್ಲಿ ಬಿ.ಜೆ.ಪಿ.ಪ್ರಮುಖ ಮುಖಂಡರು, ಸ್ಲಂ ಪ್ರದೇಶದ ಮಕ್ಕಳು ಮತ್ತು ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

  • ಊಸರವಳ್ಳಿಯಂತೆ ಬಣ್ಣ ಬದಲಾಗುವ ಚರ್ಮ ಮನುಷ್ಯನಿಗೂ ಬಂತು

    ಊಸರವಳ್ಳಿಯಂತೆ ಬಣ್ಣ ಬದಲಾಗುವ ಚರ್ಮ ಮನುಷ್ಯನಿಗೂ ಬಂತು

    ಸಿಯೋಲ್: ನೈಸರ್ಗಿಕ ಜೀವವಿಜ್ಞಾನದಿಂದ ಪ್ರೇರಿತವಾದ ದಕ್ಷಿಣ ಕೊರಿಯಾದ ಸಂಶೋಧಕರು ಊಸರವಳ್ಳಿಯಂತೆ ಬದಲಾಗುವ ಕೃತಕ ಚರ್ಮವನ್ನು ಕಂಡು ಹಿಡಿದಿದ್ದಾರೆ.

    sದಕ್ಷಿಣ ಕೊರಿಯಾದ ಸಿಯೋಲ್ ರಾಷ್ಟ್ರೀಯ ವಿಶ್ವವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪ್ರಾಧ್ಯಾಪಕ ಕೋ ಸೆಯುಂಗ್ ಹ್ವಾನ್ ಈ ಕೃತಕ ಚರ್ಮವನ್ನು ಕಂಡು ಹಿಡಿದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ನೈಸರ್ಗಿಕ ಜೀವವಿಜ್ಞಾನದಿಂದ ಪ್ರೇರಿತನಾಗಿ ಕೃತಕ ಚರ್ಮದಂತಹ ವಸ್ತುವನ್ನು ಕಂಡು ಹಿಡಿದಿದ್ದೇನೆ. ಈ ಕೃತಕ ಚರ್ಮ ತಾಪಮಾನಕ್ಕೆ ತಕ್ಕಂತೆ ಊಸರವಳ್ಳಿಯ ರೀತಿ ತಕ್ಷಣ ತನ್ನ ಬಣ್ಣವನ್ನ ಬದಲಾಯಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಕ್ಷುಲ್ಲಕ ಕಾರಣಕ್ಕೆ ಕುಟುಂಬಗಳ ಮಧ್ಯೆ ಮಾರಾಮಾರಿ- ಮೂವರಿಗೆ ಗಾಯ

    ಒಂದು ವೇಳೆ ನಾವು ಮರುಭೂಮಿ ರೀತಿಯ ಪ್ರದೇಶಕ್ಕೆ ಹೋದರೆ ಈ ರೀತಿಯ ಚರ್ಮವನ್ನು ಧರಿಸಬಹುದು. ಈ ಮೂಲಕ ನಾವು ಎಷ್ಟೇ ಬಿಸಿಲಿನಲ್ಲಿದ್ದರೂ ಸುಲಭವಾಗಿ ಓಡಾಡಬಹುದು. ಅದೇ ರೀತಿ ನಾವು ತಯಾರಿಸುವ ಈ ಕೃತಕ ಚರ್ಮವನ್ನು ಆ ವಾತಾವರಣಕ್ಕೆ ತಕ್ಕಂತೆ ಬದಲಾಯಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕೋ ಸೆಯುಂಗ್ ಹ್ವಾನ್ ಮತ್ತು ಅವರ ತಂಡ ವಿವಿಧ ಬಣ್ಣಗಳ ಮೇಲೆ ರೋಬೋಟ್ ಅನ್ನು ಬಿಟ್ಟು ತಮ್ಮ ಪ್ರಯೋಗವನ್ನು ಪ್ರದರ್ಶಿಸಿದರು. ರೋಬೋಟ್ ಕೆಂಪು, ನೀಲಿ ಮತ್ತು ಹಸಿರು ಬಣ್ಣಗಳ ಮೇಲೆ ಹೋಗುತ್ತ ಇದ್ದಂತೆ ಆ ಬಣ್ಣಗಳಿಗೆ ತಿರುಗುತ್ತಿತ್ತು ಇದನ್ನು ನೋಡಿದ ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಬೆರಗಾಗಿ ನಿಂತಿದ್ದರು. ಇದನ್ನೂ ಓದಿ: ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ

    ಈ ಕುರಿತು ಪ್ರತಿಕ್ರಿಯಿಸಿದ ಕೋ, ಸೆನ್ಸರ್‍ಗಳಿಂದ ಪತ್ತೆಯಾದ ಬಣ್ಣದ ಮಾಹಿತಿಯನ್ನು ಮೈಕ್ರೊಪ್ರೊಸೆಸರ್ ಗೆ ಮತ್ತು ನಂತರ ಸಿಲ್ವರ್ ನ್ಯಾನೊವೈರ್ ಹೀಟರ್‍ಗಳಿಗೆ ವರ್ಗಾಯಿಸಲಾಗುತ್ತದೆ. ಹೀಟರ್‍ಗಳು ಒಂದು ನಿರ್ದಿಷ್ಟ ತಾಪಮಾನವನ್ನು ತಲುಪಿದ ನಂತರ, ಥರ್ಮೋಕ್ರೋಮಿಕ್ ಲಿಕ್ವಿಡ್ ಸ್ಫಟಿಕ ಪದರವು ಅದರ ಬಣ್ಣವನ್ನು ಬದಲಾಯಿಸುತ್ತೆ ಎಂದು ತಿಳಿಸಿದರು.

  • ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

    ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

    ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಂದು ಕಡೆ ನಾಯಕತ್ವ ಬದಲಾವಣೆ ಕೂಗು ಕೇಳಿ ಬಂದರೆ. ಇನ್ನೊಂದೆಡೆ ಸ್ವಪಕ್ಷೀಯರೇ ಒಬ್ಬರಿಗೊಬ್ಬರು ಆರೋಪಗಳನ್ನು ಹೊರಿಸುತ್ತಿದ್ದಾರೆ. ಈ ನಡುವೆ ಬಿಜೆಪಿಯ ಶಾಸಕ ಅರವಿಂದ್ ಬೆಲ್ಲದ್ ಅವರು ತಮ್ಮ ಫೋನ್ ಕದ್ದಾಲಿಕೆಯಾಗಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

    ಈ ಹಿಂದೆ ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ನಾಯಕರೇ ಫೋನ್ ಕದ್ದಾಲಿಕೆಯ ಆರೋಪ ಮಾಡಿದ್ದರು. ಈಗ ಬಿಜೆಪಿ ಸರ್ಕಾರ ಇರುವಾಗಲೇ ಅವರದೇ ಶಾಸಕರು ಫೋನ್ ಕದ್ದಾಲಿಕೆ ಆರೋಪ ಮಾಡಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧವೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇಲ್ಲಿ ಫೋನ್ ಕದ್ದಾಲಿಕೆ ಎಂದರೇನು? ಯಾರು ಮಾಡಬಹುದು? ಹೇಗೆ ಮಾಡುತ್ತಿದ್ದಾರೆ ಎನ್ನುವ ವಿಚಾರವನ್ನು ವಿವರಿಸಲಾಗಿದೆ. ಇದನ್ನೂ ಓದಿ: ನನ್ನ ಫೋನ್ ಕದ್ದಾಲಿಕೆಯಾಗಿದೆ, ಜೈಲಿನಿಂದ ಕಾಲ್ ಬರುತ್ತೆ – ಬೆಲ್ಲದ್

    ಕ್ರಿಮಿನಲ್ ಕೃತ್ಯ ಎಸಗಲಿರುವವರನ್ನು, ಎಸಗಿದವರನ್ನು ಎಲ್ಲೇ ಅಡಗಿದ್ದರೂ ಪತ್ತೆ ಹಚ್ಚಿ ಅವರನ್ನು ಪತ್ತೆ ಹಚ್ಚಲು ಫೋನ್ ಕದ್ದಾಲಿಕೆ ಮಾಡಲಾಗುತ್ತದೆ. ಕಾನೂನಿನ ಅನ್ವಯ ಸರ್ಕಾರದ ಕೆಲವೇ ಇಲಾಖೆಗಳಿಗೆ ಮಾತ್ರ ಫೋನ್ ಕದ್ದಾಲಿಕೆ ಮಾಡಲು ಅವಕಾಶವಿದ್ದು, ಈಗ ಕೆಲವು ಸಮಾಜ ಘಾತುಕ ಶಕ್ತಿಗಳು ಫೋನ್ ಟ್ಯಾಪಿಂಗ್ ಮಾಡಲು ಆರಂಭಿಸಿವೆ. ಇಂದು ರಾಜಕಾರಣಿಗಳು, ಗಣ್ಯ ವ್ಯಕ್ತಿಗಳ ಫೋನ್ ಟ್ಯಾಪಿಂಗ್ ಹೆಚ್ಚಾಗುತ್ತಿದ್ದು, ಅಡಳಿತ ಪಕ್ಷದ ವಿರುದ್ಧ ವಿರೋಧಿ ಪಕ್ಷಗಳು ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿದೆ.

    ಏನಿದು ಫೋನ್ ಕದ್ದಾಲಿಕೆ?
    ವಿಶೇಷ ಎಲೆಕ್ಟ್ರಾನಿಕ್ ಸಾಧನಗಳ ನೆರವಿನಿಂದ ಇಬ್ಬರು ಮಾತನಾಡುತ್ತಿರುವುದನ್ನು ಮೂರನೇಯವರು ಕದ್ದಾಲಿಸುವುದು ಫೋನ್ ಕದ್ದಾಲಿಕೆ. ಫೋನ್ ಕದ್ದಾಲಿಕೆಗೆ ಕಾನೂನಿನಡಿ ಅವಕಾಶವೂ ಇದೆ. ಆದರೆ ಇದಕ್ಕೆ ನಿರ್ದಿಷ್ಟ ರೀತಿ ನೀತಿಗಳಿವೆ. ಅದು ಹೊರತಾಗಿ ಕದ್ದಾಲಿಸಿದರೆ ಅದು ಕಾನೂನಿನ ಅಡಿ ಅಪರಾಧವಾಗುತ್ತದೆ. ಇದನ್ನೂ ಓದಿ: ವಿಶ್ವನಾಥ್ ಒರಿಜಿನಲ್ ಬಿಜೆಪಿ ಅಲ್ಲ – ರೇಣುಕಾಚಾರ್ಯ

    ಆಧುನಿಕ ತಂತ್ರಜ್ಞಾನ ಬೆಳೆದಂತೆ ಫೋನ್ ಕದ್ದಾಲಿಕೆ ಮಾಡಲೆಂದೇ ಹೊಸ ಸಾಧನಗಳು ತಯಾರಾಗಿವೆ. ಅಲ್ಲದೇ ದೇಶ ವಿದೇಶದಿಂದ ಫೋನ್ ಕದ್ದಾಲಿಕೆ ಮಾಡುವ ಸಾಧನಗಳು ಅಕ್ರಮವಾಗಿ ದೇಶದೊಳಗೆ ರವಾನಿಸುವ ಜಾಲವೂ ಹುಟ್ಟಿಕೊಂಡಿದೆ. ತಜ್ಞರ ಪ್ರಕಾರ ಈ ಸಾಧನಗಳು ಸುಮಾರು ಎರಡು ಕಿ.ಮೀ. ದೂರದ ವರೆಗಿನ ವ್ಯಕ್ತಿಗಳ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡುವ ಸಾಮರ್ಥ್ಯ ಹೊಂದಿರುತ್ತವೆ.

    ಯಾರಿಗೆ ಅನುಮತಿ ಇದೆ?
    ಸಮಾಜ ಘಾತುಕ ಶಕ್ತಿಗಳ ಚಲನವಲನ, ಕ್ರಿಮಿನಲ್ ಸಂಚು, ದೇಶದ, ಗಣ್ಯರ ವಿರುದ್ಧ ದಾಳಿಯಂತಹ ಚಟುವಟಿಕೆಗಳನ್ನು ತಡೆಯಲು ಗುಪ್ತಚರ ಸಂಸ್ಥೆಗಳು ಫೋನ್ ಕದ್ದಾಲಿಕೆ ಮಾಡುತ್ತವೆ. ಸಿಬಿಐ, ಗುಪ್ತಚರ ಇಲಾಖೆ, ಕಂದಾಯ ಗುಪ್ತಚರ, ಮಾದಕವಸ್ತು ನಿಯಂತ್ರಣ ದಳ, ಆದಾಯ ತೆರಿಗೆ ಇಲಾಖೆ ಮತ್ತು ಪೋಲಿಸ್ ಇಲಾಖೆ ಕದ್ದಾಲಿಕೆಯನ್ನು ಕಾನೂನಿನ ಅಡಿ ಮಾಡಬಹುದು. ಫೋನ್ ಕದ್ದಾಲಿಸಲು ಉಪಗ್ರಹ ಆಧಾರಿತ ವ್ಯವಸ್ಥೆಗಳು, ಟೆಲಿಫೋನ್ ಎಕ್ಸ್ ಚೇಂಜ್‍ನ ನೆರವಿನೊಂದಿಗೆ ಪ್ರತ್ಯೇಕ ಎಲೆಕ್ಟ್ರಾನಿಕ್ ವ್ಯವಸ್ಥೆಗಳ ಮೂಲಕ ಕದ್ದಾಲಿಕೆ ಮಾಡಲಾಗುತ್ತದೆ.

    ನಿಯಮ ಏನು ಹೇಳುತ್ತೆ: 1885ರ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಸೆಕ್ಷನ್ 5 (2)ರಲ್ಲಿ 419ನೇ ಮತ್ತು 419ಎ ನಿಬಂಧನೆಗಳಲ್ಲಿ ಫೋನ್ ಕರೆಗಳ ಮಾಹಿತಿ ಪಡೆಯುವ, ಕೇಳುವ ಬಗ್ಗೆ ಹೇಳಲಾಗಿದೆ. ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ, ಭದ್ರತೆಗೆ ತೊಂದರೆಯಾಗುವ ವಿಚಾರಗಳಲ್ಲಿ ಫೋನ್ ಕದ್ದಾಲಿಕೆಗೆ ಅವಕಾಶವಿದ್ದು ಕ್ಯಾಬಿನೆಟ್ ಕಾರ್ಯದರ್ಶಿ, ಕಾನೂನು ಕಾರ್ಯದರ್ಶಿ ಈ ಬಗ್ಗೆ ನಿರ್ಧಾರ ಕೈಗೊಂಡು, ಗೃಹ ಇಲಾಖೆಗೆ ಮಾಹಿತಿ ನೀಡಬೇಕು. ಈ ಬಗ್ಗೆ ಗೃಹ ಇಲಾಖೆ 2 ತಿಂಗಳೊಳಗೆ ಪರಿಶೀಲನೆ ನಡೆಸಿ ತೀರ್ಮಾನಿಸಬೇಕು. ಒಂದು ಬಾರಿ ಅನುಮತಿ ನೀಡಿದರೆ ಅದು 6 ತಿಂಗಳ ಅವಧಿಯದ್ದಾಗಿರುತ್ತದೆ. ಹೀಗೆ ಕದ್ದಾಲಿಕೆ ವೇಳೆ ಪಡೆದ ಮಾಹಿತಿಗಳನ್ನು ಬಳಸಿ 2 ತಿಂಗಳೊಳಗೆ ಅವುಗಳನ್ನು ನಾಶಪಡಿಸಬೇಕು. ಇದು ಹೊರತಾಗಿ ಕೋರ್ಟ್ ನಿರ್ದೇಶನದ ಮೇರೆಗೆ ಫೋನ್ ಕದ್ದಾಲಿಕೆಗೆ ಅವಕಾಶವಿದೆ.

    ಒಂದೊಮ್ಮೆ ಫೋನ್ ಕದ್ದಾಲಿಕೆಯಾದರೆ ವ್ಯಕ್ತಿಯ ಖಾಸಗಿ ತನಕ್ಕೆ ಧಕ್ಕೆ ತಂದದ್ದಕ್ಕಾಗಿ ಆತ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಬಹುದು. ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಬಹುದು. ಅಕ್ರಮ ಕದ್ದಾಲಿಕೆ ವಿಚಾರದ ಬಗ್ಗೆ ಭಾರತೀಯ ಟೆಲಿಗ್ರಾಫ್ ಕಾಯ್ದೆಯ ಸೆ26(ಬಿ) ಅಡಿಯಲ್ಲಿ ಕೋರ್ಟ್‍ಗೂ ದೂರು ನೀಡಬಹುದು. ಒಂದು ವೇಳೆ ಕದ್ದಾಲಿಸಿದ್ದು ಸಾಬೀತಾದರೆ ಅಪರಾಧಿಗೆ 3 ವರ್ಷಗಳ ವರೆಗೆ ಕಾರಾಗೃಹ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶವಿದೆ.

  • ಕೆಲ ತಿಂಗಳಲ್ಲೇ ಮಾಸಿಕ 17 ಕೋಟಿ ಕೋವಿಡ್ ಲಸಿಕೆ ತಯಾರಿ- ಅಶ್ವತ್ಥನಾರಾಯಣ

    ಕೆಲ ತಿಂಗಳಲ್ಲೇ ಮಾಸಿಕ 17 ಕೋಟಿ ಕೋವಿಡ್ ಲಸಿಕೆ ತಯಾರಿ- ಅಶ್ವತ್ಥನಾರಾಯಣ

    – ಆವಿಷ್ಕಾರ, ನವೋದ್ಯಮ ಕ್ಷೇತ್ರದಲ್ಲಿ ಕರ್ನಾಟಕ
    – ಫ್ರಾನ್ಸ್ ನಡುವೆ ಮಹತ್ವದ ಒಪ್ಪಂದ
    – ಫ್ರೆಂಚ್ ವಿದೇಶಾಂಗ ಸಚಿವರ ಜೊತೆ ಡಿಸಿಎಂ ಮಾತುಕತೆ

    ಬೆಂಗಳೂರು: ಕೋವಿಡ್ ಮಹಾಮಾರಿಯಿಂದ ನಮ್ಮ ಜನರನ್ನು ರಕ್ಷಣೆ ಮಾಡಿಕೊಳ್ಳಲು ಭಾರತವು ಲಸಿಕೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ಇನ್ನು ಕೆಲ ತಿಂಗಳಲ್ಲೇ ಮಾಸಿಕ 17 ಕೋಟಿ ಲಸಿಕೆಗಳನ್ನು ಉತ್ಪಾದನೆ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಆವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆ (KITS) ಮತ್ತು ಇಂಡೋ- ಫ್ರೆಂಚ್ ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟ (IFCCI) ನಡುವೆ ಏರ್ಪಟ್ಟ ಒಪ್ಪಂದದ ವೇಳೆ ಮಾತನಾಡಿದ ಅಶ್ವತ್ಥನಾರಾಯಣ ಅವರು, “ಸದ್ಯಕ್ಕೆ ಮಾಸಿಕ 7 ಕೋಟಿ ಕೋವಿಡ್ ಲಸಿಕೆಯನ್ನು ಉತ್ಪಾದನೆ ಮಾಡುತ್ತಿದೆ. ಇದಕ್ಕೆ ಇನ್ನೂ 10 ಕೋಟಿ ಲಸಿಕೆ ಸೇರಲಿದೆ. ತದ ನಂತರ ಕರ್ನಾಟಕವೂ ಸೇರಿ ದೇಶಾದ್ಯಂತ ಲಸಿಕೆ ಅಭಿಯಾನ ಮತ್ತಷ್ಟು ವೇಗಗೊಳ್ಳಲಿದೆ. ಇದರ ಜತೆ ಮತ್ತಷ್ಟು ಹೊಸ ಲಸಿಕೆಗಳು ಕೂಡ ಬರಲಿವೆ. ಅವು ರಾಜ್ಯಕ್ಕೂ ಲಭ್ಯವಾಗಲಿವೆ” ಎಂದರು.

    ಕೋವಿಡ್ ಮತ್ತಿತರೆ ಜಾಗತಿಕ ಸವಾಲುಗಳ ನಡುವೆಯೂ ಕರ್ನಾಟಕದಲ್ಲಿ ವಿದೇಶಿ ಹೂಡಿಕೆ ಮೇಲ್ಮುಖವಾಗಿಯೇ ಇದೆ. ಅದಕ್ಕೂ ಮೊದಲು, ಅಂದರೆ, 2000ರಿಂದ 2019ರವರೆಗೆ ರಾಜ್ಯಕ್ಕೆ 49.7 ಶತಕೋಟಿ ಡಾಲರ್ ವಿದೇಶಿ ಹೂಡಿಕೆ ಹರಿದುಬಂದಿದೆ. ವಿದೇಶಿ ಹೂಡಿಕೆ ಒಳಹರಿವಿನಲ್ಲಿ ರಾಜ್ಯವು ಮಹಾರಾಷ್ಟ್ರ ಮತ್ತು ನವದೆಹಲಿಯ ನಂತರ ಮೂರನೇ ಅಗ್ರರಾಜ್ಯವಾಗಿದೆ. ಕೋವಿಡ್‍ಗೂ ಮೊದಲು ಕರ್ನಾಟಕ ಹೂಡಿಕೆ ಅತ್ಯುತ್ತಮ ತಾಣವಾಗಿತ್ತು. ಅದೇ ರೀತಿ ಕೋವಿಡ್ಡೋತ್ತರ ಕಾಲದಲ್ಲಿಯೂ ಹೂಡಿಕೆಗೆ ಪ್ರಶಸ್ತ್ಯ ನೆಲೆಯಾಗಿದೆ ಎಂದು ನುಡಿದರು.

    ಮಾಹಿತಿ ತಂತ್ರಜ್ಞಾನ (ಐಟಿ) ಉತ್ಪನ್ನಗಳ ರಫ್ತು ವಹಿವಾಟಿನಲ್ಲಿ ಕರ್ನಾಟಕ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತದ ಐಟಿ ರಫ್ತಿಗೆ ಕರ್ನಾಟಕ ಅತಿದೊಡ್ಡ ಕೊಡುಗೆ ಶೇ.40ರಷ್ಟಿ ಇದೆ. ಇದು ತೆಲಂಗಾಣ, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಿಗಿಂತ ಹೆಚ್ಚು ಹಾಗೂ ಅದರಲ್ಲಿ ಕರ್ನಾಟಕ ಮತ್ತಿತರೆ ರಾಜ್ಯಗಳ ನಡುವೆ ಭಾರೀ ಅಂತರವಿದೆ. ಕೈಗಾರಿಕೆ, ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿ ಇತ್ಯಾದಿ ಕ್ಷೇತ್ರಗಳಲ್ಲಿ ಕರ್ನಾಟಕವು ಅತ್ಯಂತ ಸಮೃದ್ಧ ರಾಜ್ಯವಾಗಿದೆ. ಒಟ್ಟು ದೇಶಿಯ ಉತ್ಪನ್ನದಲ್ಲಿ (GSDP) 220 ಶತಕೋಟಿ ಡಾಲರ್ ಹೊಂದಿದೆ. ಮುಖ್ಯವಾಗಿ ಐಟಿ, ಬಿಟಿ, ಇಎಸ್‍ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ) ಮತ್ತು ಎವಿಜಿಸಿ (ಆನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್) ಮುಂತಾದ ಕ್ಷೇತ್ರಗಳಿಗಾಗಿ ಪ್ರತ್ಯೇಕ ನೀತಿಗಳನ್ನೂ ರೂಪಿಸಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಅವರು ತಿಳಿಸಿದರು.

    ಈ ಒಪ್ಪಂದ ಬಹಳ ಮಹತ್ವದ್ದು:
    ಮೊದಲಿನಿಂದಲೂ ಭಾರತ ಮತ್ತು ಫ್ರಾನ್ಸ್ ಸಹಜ ಪಾಲುದಾರ ದೇಶಗಳಾಗಿವೆಯಲ್ಲದೆ ಸಾಂಸ್ಕೃತಿಕ, ಆರ್ಥಿಕ, ವಿಜ್ಞಾನ-ತಂತ್ರಜ್ಞಾನ, ಶಿಕ್ಷಣ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಎರಡೂ ದೇಶಗಳು ನಿಕಟವಾಗಿ ಕೆಲಸ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತ ಮತ್ತು ಫ್ರಾನ್ಸ್ ಬಹಳ ನಿಕಟವಾಗಿ ಕೆಲಸ ಮಾಡುತ್ತಿವೆ. ಕರ್ನಾಟಕ ಆವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆ (KITS)ಮತ್ತು ಇಂಡೋ-ಫ್ರೆಂಚ್ ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟ (IFCCI) ನಡುವೆ ಏರ್ಪಟ್ಟ ಒಪ್ಪಂದ ಅತ್ಯಂತ ಮಹತ್ವಪೂರ್ಣವಾಗಿದೆ. ಈ ಒಪ್ಪಂದದ ಮೂಲಕ ಭಾರತ ಮತ್ತು ಫ್ರಾನ್ಸ್ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸುವಲ್ಲಿ ಕರ್ನಾಟಕದ ಪಾತ್ರ ಮುನ್ನೆಲೆಗೆ ಬಂದಂತೆ ಆಗಿದೆ. ತಂತ್ರಜ್ಞಾನ, ಸ್ಟಾರ್ಟ್ ಆಪ್ ಇನ್ನಿತರೆ ಕ್ಷೇತ್ರಗಳಲ್ಲಿ ರಾಜ್ಯವು ಫ್ರಾನ್ಸ್ ಜತೆ ಮತ್ತಷ್ಟು ನಿಕಟವಾಗಿ ಕೆಲಸ ಮಾಡಲಿದೆ. ಒಪ್ಪಂದವು ಎರಡೂ ದೇಶಗಳ ನಡುವಿನ ನಾವೀನ್ಯತಾ ಸಹಯೋಗದ ಬೆಳವಣಿಗೆಗೆ ಪ್ರಮುಖ ಮೈಲಿಗಲ್ಲು. ಈ ಒಪ್ಪಂದವು ಎರಡೂ ದೇಶಗಳ ಉದ್ಯಮಶೀಲತೆ ಮತ್ತು ಆವಿಷ್ಕಾರದ ಹಿನ್ನೆಲೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯಪಟ್ಟರು.

    ಒಪ್ಪಂದಕ್ಕೆ ಐಟಿ ಇಲಾಖೆ ನಿರ್ದೇಶಕ ಗೋಪಾಲಕೃಷ್ಣ ಮತ್ತು ಇಂಡೋ-ಫ್ರೆಂಚ್ ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟದ ಯಹೋನನ್ ಸ್ಯಾಮ್ಯುಯಲ್ ಅಂಕಿತ ಹಾಕಿದರು. ಒಪ್ಪಂದ ಏರ್ಪಡುವುದಕ್ಕೂ ಮುನ್ನ ಡಿಸಿಎಂ ಡಾ.ಅಶ್ವತ್ಥನಾರಾಯಣ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅವರು ಫ್ರಾನ್ಸ್ ನ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಜೀನ್ ವಿಯಾಸ್ ಲೆ ಡ್ರಿಯಾನ್ ಹಾಗೂ ಭಾರತದಲ್ಲಿರುವ ಫ್ರಾನ್ಸ್ ರಾಯಭಾರಿ ಇಮ್ಯಾನ್ಯುಯಲ್ ಲೆನಿಯಾನ್, ಬೆಂಗಳೂರು ಫ್ರಾನ್ಸ್ ರಾಯಭಾರ ಕಚೇರಿಯ ಕಾನ್ಸುಲೇಟ್ ಜನರಲ್ ಮಾರ್ಜೋರಿ ವ್ಯಾನ್‍ಬೆಲಿಂಗ್ಹೆಮ್ ಜತೆ ಮಾತುಕತೆ ನಡೆಸಿದರು. ಕಾರ್ಯಕ್ರಮದಲ್ಲಿ ಐಟಿ ಇಲಾಖೆಯ ಪ್ರಧಾನ ವ್ಯವಸ್ಥಾಪಕಿ ಚಂಪಾ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ತಂತ್ರಜ್ಞಾನ, ಸಾಮಾಜಿಕ ಜವಾಬ್ದಾರಿ ಎರಡೂ ಕೈಹಿಡಿದು ಸಾಗಬೇಕು: ಡಾ.ಆರ್.ಪೂರ್ಣಿಮಾ

    ತಂತ್ರಜ್ಞಾನ, ಸಾಮಾಜಿಕ ಜವಾಬ್ದಾರಿ ಎರಡೂ ಕೈಹಿಡಿದು ಸಾಗಬೇಕು: ಡಾ.ಆರ್.ಪೂರ್ಣಿಮಾ

    ಬೆಂಗಳೂರು: ತಂತ್ರಜ್ಞಾನ ಮತ್ತು ಸಾಮಾಜಿಕ ಜವಾಬ್ದಾರಿ ಎರಡೂ ಕೈಹಿಡಿದು ಸಾಗಬೇಕು ಎಂದು ಹಿರಿಯ ಪತ್ರಕರ್ತೆ, ಲೇಖಕಿ ಮತ್ತು ಪ್ರಕಾಶಕಿ ಡಾ.ಆರ್.ಪೂರ್ಣಿಮಾ ಅಭಿಪ್ರಾಯಪಟ್ಟರು.

    ಸುರಾನಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ತಾಯ್ನುಡಿ ದಿನ- 2021 ಹಾಗೂ ತಂತ್ರಜ್ಞಾನ ಲೇಖಕ ಟಿ.ಜಿ.ಶ್ರೀನಿಧಿ ಬರೆದಿರುವ ‘ಬೆರಳ ತುದಿಯ ಬೆರಗು’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲದ ಜೊತೆ ನಾವೆಲ್ಲರೂ ಹೆಜ್ಜೆ ಹಾಕಲೇ ಬೇಕು. ಅದಕ್ಕೆ ತಂತ್ರಜ್ಞಾನದ ನೆರವು ಅತ್ಯಗತ್ಯ. ನಮ್ಮ ಜೀವನದ ಭಾಗವಾಗಿರುವ ತಂತ್ರಜ್ಞಾನ, ನಮ್ಮ ಚಿಂತನೆಯ ಕೀಲಿಕೈ ಕೂಡ ಆಗಿರುತ್ತದೆ. ಸಮಾಜದ ಜೊತೆ ಸಂವಾದಕ್ಕೆ ಸಾಧನವೂ ಆಗಿರುತ್ತದೆ. ಅದನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು ಎಂದರು.

    ಲೇಖಕ ಶ್ರೀನಿಧಿ ಮಾತನಾಡಿ, 2023ರ ವೇಳೆಗೆ ಭಾರತದ ಒಟ್ಟು ಜನಸಂಖ್ಯೆಯ ಶೇ.68ರಷ್ಟು ಜನ ಮೊಬೈಲ್ ಬಳಕೆದಾರರಾಗಲಿದ್ದಾರೆ ಎಂದು ಸಮೀಕ್ಷೆಗಳು ಹೇಳಿವೆ. ಮೊಬೈಲ್ ಹಾಗೂ ಅಂತರ್‍ಜಾಲದ ಸಂಪರ್ಕಕ್ಕೆ ಬರುವ ಇಷ್ಟೆಲ್ಲ ಹೊಸ ಬಳಕೆದಾರರಲ್ಲಿ ಬಹಳಷ್ಟು ಜನ ಸಣ್ಣ ನಗರಗಳು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿರಲಿದ್ದಾರೆ. ತಮ್ಮ ಮಾತೃಭಾಷೆಯಲ್ಲೇ ಅಂತರಜಾಲ-ವಿಶ್ವವ್ಯಾಪಿ ಜಾಲಗಳನ್ನು ಬಳಸಲಿದ್ದಾರೆ. ಹೀಗಾಗಿಯೇ ಐಟಿ ಕ್ಷೇತ್ರದ ಭವಿಷ್ಯ ಸ್ಥಳೀಯ ಭಾಷೆಗಳಲ್ಲಿದೆ ಎಂದು ತಿಳಿಸಿದರು.

    ಸುರಾನಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಇಜ್ಞಾನ ಟ್ರಸ್ಟ್ ಸಹಯೋಗದೊಡನೆ ಆಯೋಜಿಸಲಾಗಿದ್ದ ‘ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ’ ಕಾರ್ಯಾಗಾರವನ್ನೂ ಅತಿಥಿಗಳು ಉದ್ಘಾಟಿಸಿದರು. ಭಾಷೆಗೆ ಸಂಬಂಧಿಸಿದ ತಂತ್ರಜ್ಞಾನಗಳು, ಕನ್ನಡದ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿರುವ ಅವಕಾಶಗಳು ಸೇರಿದಂತೆ ಹಲವು ವಿಷಯಗಳ ಸ್ಥೂಲ ಪರಿಚಯ ಮಾಡಿಕೊಡುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಮಾಹಿತಿ ತಂತ್ರಜ್ಞಾನ ನಮ್ಮ ಜೀವನದ ಎಲ್ಲ ಕ್ಷೇತ್ರಗಳನ್ನೂ ಪ್ರಭಾವಿಸುತ್ತಿರುವ ಈ ಹೊತ್ತಿನಲ್ಲಿ ಕನ್ನಡದ ವಿದ್ಯಾರ್ಥಿಗಳಿಗೂ ಮಾಹಿತಿ ತಂತ್ರಜ್ಞಾನ ಜಗತ್ತಿನ ಪರಿಚಯ ಇರಬೇಕಾದ್ದು ಅತ್ಯಗತ್ಯ. ಆ ಉದ್ದೇಶದಿಂದಲೇ ಸುರಾನಾ ಕಾಲೇಜಿನ ಕನ್ನಡ ವಿಭಾಗ ಕಳೆದ ಹಲವು ವರ್ಷಗಳಿಂದ ಇಂತಹ ಕಾರ್ಯಾಗಾರಗಳನ್ನು ಆಯೋಜಿಸುತ್ತಿದೆ ಎಂದು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ವತ್ಸಲಾ ಮೋಹನ್ ಹೇಳಿದರು.

    ಸುರಾನಾ ಕಾಲೇಜಿನ ಪ್ರಾಂಶುಪಾಲೆ ಡಾ.ಭವಾನಿ ಎಂ.ಆರ್., ಕನ್ನಡ ವಿಭಾಗದ ಡಾ.ವಿಶಾಲಾ ವಾರಣಾಶಿ, ಡಾ.ಸುಷ್ಮಾ ಎಂ., ಡಾ.ಕೃಪ ಎ., ಇಜ್ಞಾನ ಟ್ರಸ್ಟ್‍ನ ಟಿ.ಎಸ್.ಗೋಪಾಲ್, ಡಾ. ಎಚ್.ಆರ್.ಅಪ್ಪಣ್ಣಯ್ಯ, ಬಿ.ಎಸ್.ವಿಶ್ವನಾಥ, ಎನ್.ಜಿ.ಚೇತನ್, ಅಭಿಷೇಕ್ ಜಿ.ಎಸ್.ಉಪಸ್ಥಿತರಿದ್ದರು. ತಂತ್ರಜ್ಞಾನ ಜಗತ್ತು ಕುರಿತ ಮೂವತ್ತು ಬರಹಗಳ ಸಂಕಲನವಾದ ‘ಬೆರಳ ತುದಿಯ ಬೆರಗು’ ಕೃತಿಯನ್ನು ವಿಕಾಸ ಪ್ರಕಾಶನ ಪ್ರಕಟಿಸಿದೆ. 128 ಪುಟಗಳ ಈ ಕೃತಿಯ ಬೆಲೆ 120 ರೂ. ಆಗಿದೆ.

  • ಕೊರೊನಾ ತಡೆಗೆ ಚೀನಾದಲ್ಲಿ ಪೊಲೀಸರಿಗೆ ಸ್ಮಾರ್ಟ್ ಹೆಲ್ಮೆಟ್- ಏನಿದರ ವಿಶೇಷತೆ?

    ಕೊರೊನಾ ತಡೆಗೆ ಚೀನಾದಲ್ಲಿ ಪೊಲೀಸರಿಗೆ ಸ್ಮಾರ್ಟ್ ಹೆಲ್ಮೆಟ್- ಏನಿದರ ವಿಶೇಷತೆ?

    ಬೀಜಿಂಗ್: ಕೊರೊನಾ ಚೀನಾವನ್ನು ಹಿಂಡಿ ಹಿಪ್ಪೆ ಮಾಡಿದ್ದು, ಚೀನಾದಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ವಿಶ್ವಾದ್ಯಂತ ಸುಮಾರು ಮೂರು ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ.  ಒಂದು ಲಕ್ಷಕ್ಕೂ ಹೆಚ್ಚು ಜನ ಸೋಂಕಿಗೆ ಒಳಗಾಗಿದ್ದಾರೆ. ಸಾವು ತಡೆಯಲು ಚೀನಾ ಹೊಸ ಹೊಸ ತಂತ್ರಜ್ಞಾನ ಆವಿಷ್ಕರಿಸುತ್ತಿದ್ದು, ಇದೀಗ ಪೊಲೀಸರಿಗಾಗಿ ಸ್ಮಾರ್ಟ್ ಹೆಲ್ಮೆಟ್‍ಗಳನ್ನು ಸಿದ್ಧಪಡಿಸಿದೆ.

    ಈ ಸ್ಮಾರ್ಟ್ ಹೆಲ್ಮೆಟ್‍ಗಳನ್ನು ಈಗಾಗಲೇ ಚೀನಾ ಪೊಲೀಸರು ಬಳಸುತ್ತಿದ್ದು, ಈ ಹೆಲ್ಮೆಟ್‍ಗಳು ಸ್ವಯಂಚಾಲಿತವಾಗಿ ಪಾದಚಾರಿಗಳ ದೇಹದ ಉಷ್ಣಾಂಶವನ್ನು ಕಂಡುಹಿಯುತ್ತವೆ. ಪೊಲೀಸು ಗಸ್ತಿನಲ್ಲಿದ್ದಾಗ ಪಾದಚಾರಿಗಳ ದೇಹದ ಉಷ್ಣಾಂಶದಲ್ಲಿ ಏರುಪೇರಾಗಿದ್ದರೆ ತಕ್ಷಣ ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಮೂಲಕ ಕೊರೊನಾ ವೈರಸ್ ವಿರುದ್ಧ ಚೀನಾ ಸಮರ ಸಾರಿದೆ.

    ಸ್ಮಾರ್ಟ್ ಹೆಲ್ಮೆಟ್‍ಗಳು ಪಾದಚಾರಿಗಳ ದೇಹದ ಉಷ್ಣಾಂಶವನ್ನು ಕ್ಷಣಾರ್ಧದಲ್ಲಿ ಪೊಲೀಸರಿಗೆ ತೋರಿಸುತ್ತವೆ. ಈ ಮೂಲಕ ವ್ಯಕ್ತಿಗಳ ದೇಹದ ತಾಪಮಾನದಲ್ಲಿ ಏರುಪೇರಾಗಿರುವುದು ತಿಳಿಯುತ್ತದೆ. ಆಗ ರೋಗ ಇರುವುದು ತಿಳಿಯುತ್ತದೆ, ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಅನುಕೂಲವಾಗುತ್ತದೆ. ಈ ಐಡಿಯಾ ಇಟ್ಟುಕೊಂಡು ಚೀನಾ ಕೊರೊನಾ ವಿರುದ್ಧ ಹೋರಾಟ ಮುಂದುವರಿಸಿದೆ.

    ಈ ಸ್ಮಾರ್ಟ್ ಹೆಲ್ಮೆಟ್ ಕಾರ್ಯನಿರ್ವಹಣೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ಮಾರ್ಟ್ ಹೆಲ್ಮೆಟ್‍ಗಳಲ್ಲಿನ ಕ್ಯಾಮೆರಾಗಳು ಮನುಷ್ಯನ ದೇಹದ ಉಷ್ಣಾಂಶವನ್ನು ಪತ್ತೆ ಮಾಡುವುದರಿಂದ ರೋಗ ತಡೆಗೆ ಸಹಕಾರಿಯಾಗಿದೆ. ಕೊರೊನಾ ತಡೆಗೆ ಚೀನಾ ಉತ್ತಮ ಉಪಾಯ ಕಂಡುಕೊಂಡಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

    ವಿಡಿಯೋದಲ್ಲಿ ಈ ಕುರಿತು ತೋರಿಸಲಾಗಿದ್ದು, ಪೊಲೀಸರು ದಿಟ್ಟಿಸಿ ನೋಡುವ ವ್ಯಕ್ತಿಯ ದೇಹದ ಉಷ್ಣಾಂಶ ಹೆಲ್ಮೆಟ್‍ನ ಗಾಜಿನ ಪರದೆ ಮೇಲೆ ಕಾಣಿಸಿಕೊಳ್ಳುತ್ತದೆ. ಈ ಮೂಲಕ ರೋಗ ಇರುವ ವ್ಯಕ್ತಿಯನ್ನು ಪೊಲೀಸರು ಪತ್ತೆ ಹಚ್ಚಬಹುದಾಗಿದೆ. ಈ ಹೆಲ್ಮೆಟ್‍ನ ಕ್ಯಾಮೆರಾಗಳು 5 ಮೀಟರ್ ಅಂತರದಲ್ಲಿದ್ದ ಯಾವುದೇ ವ್ಯಕ್ತಿಯ ದೇಹದ ಉಷ್ಣಾಂಶವನ್ನು ತೋರಿಸುತ್ತವೆ. ಅಲ್ಲದೆ ಅಲಾರ್ಮ್ ಸೌಂಡ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.