Tag: ತಂದೆ-ತಾಯಿ

  • ರಸ್ತೆಯಲ್ಲೇ ಅಟ್ಟಾಡಿಸಿಕೊಂಡು ಹೋಗಿ ಅಪ್ಪ-ಅಮ್ಮನ ಮಚ್ಚಿನಿಂದ ಕೊಚ್ಚಿ ಕೊಂದ!

    ರಸ್ತೆಯಲ್ಲೇ ಅಟ್ಟಾಡಿಸಿಕೊಂಡು ಹೋಗಿ ಅಪ್ಪ-ಅಮ್ಮನ ಮಚ್ಚಿನಿಂದ ಕೊಚ್ಚಿ ಕೊಂದ!

    ತಿರುವನಂತಪುರಂ: ಪಾಪಿ ಮಗನೊಬ್ಬ ತನ್ನ ತಂದೆ-ತಾಯಿಯನ್ನು ಮಚ್ಚಿನಿಂದ ಕೊಚ್ಚಿ ನಿರ್ದಯವಾಗಿ ಕೊಚ್ಚಿ ಕೊಲೆಗೈದ ಘಟನೆ ಕೇರಳದ ತ್ರಿಶೂರ್ ನಲ್ಲಿ ನಡೆದಿದೆ.

    ಈ ಗಟನೆ ಇಂದು ಬೆಳಗ್ಗೆ ನಡೆದಿದ್ದು, ಮಗನಿಂದ್ಲೇ ಮೃತಪಟ್ಟ ದುರ್ದೈವಿಗಳನ್ನು ಕುಟ್ಟನ್ ಹಾಗೂ ಚಂದ್ರಿಕಾ ಎಂದು ಗುರುತಿಸಲಾಗಿದೆ. ಅನೀಶ್ ಕೊಲೆ ಆರೋಪಿಯಾಗಿದ್ದು, ಗಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಕೌಟುಂಬಿಕ ಕಲಹದಿಂದಲೇ ಹತ್ಯೆ ನಡೆದಿದೆ ಎಂಬುದಾಗಿ ಮೇಲ್ನೋಟಕ್ಕೆ ತಿಳಿದುಬಂದಿದೆ. ಮನೆ ಮುಂದೆ ರಸ್ತೆ ಬದಿಯಲ್ಲಿ ಇಬ್ಬರ ಮೃತದೇಹ ದೊರೆತಿದೆ.

    ಮನೆಯಲ್ಲಿ ಆಗಾಗ ಮಗ ಹಾಗೂ ಹತ್ತವರ ನಡುವೆ ಜಗಳ ನಡೆಯುತ್ತಿತ್ತು. ಈ ಜಗಳ ಇಂದು ಬೆಳಗ್ಗೆ ತಾರಕ್ಕೇರಿದ್ದು, ತಂದೆ-ತಾಯಿ ಕೊಲೆ ಮಾಡುವಲ್ಲಿ ಅಂತ್ಯವಾಗಿದೆ. ಅನಿಶ್ ಹೆತ್ತವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆಗೂ ಮುನ್ನ ಇಬ್ಬರನ್ನು ರಸ್ತೆಯಲ್ಲಿ ಅಟ್ಟಿಸಿಕೊಂಡು ಹೋಗಿದ್ದಾನೆ ಎಮದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

    ಸದ್ಯ ಅನೀಶ್ ಬಮಧಿಸಿರುವ ಪೊಲಿಸರು, ಕೊಲೆಯ ಹಿಂದಿನ ಉದ್ದೇಶದ ಕುರಿತು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 3 ವರ್ಷದಿಂದ ದೈಹಿಕ ಸಂಪರ್ಕ ಬೆಳೆಸಿ ವಂಚನೆ- ಸತ್ಯ ತಿಳಿದ ಬಳಿಕ ಯುವತಿ ದೂರು

  • ಮೊದಲ ಬಾರಿಗೆ ತಂದೆ-ತಾಯಿಯನ್ನ ವಿಮಾನದಲ್ಲಿ ಕರೆದೊಯ್ದ ಚಿನ್ನದ ಹುಡುಗ

    ಮೊದಲ ಬಾರಿಗೆ ತಂದೆ-ತಾಯಿಯನ್ನ ವಿಮಾನದಲ್ಲಿ ಕರೆದೊಯ್ದ ಚಿನ್ನದ ಹುಡುಗ

    – ಚಿಕ್ಕ ಕನಸು ನನಸಾಯ್ತು ಅಂದ್ರು ನೀರಜ್ ಚೋಪ್ರಾ

    ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು ದೇಶದ ಪತಾಕೆ ಹಾರಿಸಿರುವ ನೀರಜ್ ಚೋಪ್ರಾ ಅವರು ಇಂದು ತಮ್ಮ ತಂದೆ-ತಾಯಿಯನ್ನು ಮೊದಲ ಬಾರಿಗೆ ವಿಮಾನ ಪ್ರಯಾಣ ಮಾಡಿಸಿದ್ದಾರೆ. ಈ ಮೂಲಕ ತಮ್ಮ ಸಣ್ಣ ಕನಸೊಂದನ್ನು ನನಸು ಮಾಡಿದ್ದಾರೆ.

    ಹೌದು. ತಮ್ಮ ತಂದೆ-ತಾಯಿಯನ್ನು ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪ್ರಯಾಣ ಮಾಡಿಸಬೇಕು ಎಂದು ನೀರಜ್ ಕನಸು ಕಂಡಿದ್ದರು. ಇದೀಗ ಅವರ ಬಹುದಿನಗಳ ಜನಸು ಈಡೇರಿದ್ದು, ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನನ್ನದೊಂದು ಸಣ್ಣ ಕನಸು ಈಗ ನನಸಾಗಿದೆ. ನನ್ನ ಹೆತ್ತವರನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದೇನೆ ಎಮದು ಬರೆದುಕೊಂಡು ಅಪ್ಪ- ಅಮ್ಮನ ಜೊತೆ ವಿಮಾನದೊಳಗೆ ತೆಗೆದುಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಕನ್ನಡಿಗ ಗುರುವಿಗೆ ಅಭಿನಂದನೆ ಸಲ್ಲಿಸಿದ ಚಿನ್ನದ ಹುಡುಗ ನೀರಜ್ ಚೋಪ್ರಾ

    ನೀರಜ್ ಟ್ವಿಟ್ಟರ್ ನಲ್ಲಿ ಈ ರೀತಿ ಪೋಸ್ಟ್ ಮಾಡುತ್ತಿದ್ದಂತೆಯೇ ಅವರ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆದವು. ಅಲ್ಲದೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ನೀರಜ್‌ ಚೋಪ್ರಾ ತರಬೇತಿಗಾಗಿ 7 ಕೋಟಿ ರೂ. ಖರ್ಚು ಮಾಡಿದ್ದ ಸರ್ಕಾರ

    ಟೋಕಿಯೋ ಒಲಿಂಪಿಕ್ಸ್ ನ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದಿದ್ದಾರೆ. ನೀರಜ್ ಅವರ ಈ ಸಾಧನೆಯನ್ನು ಇಡೀ ಭಾರತ ಕೊಂಡಾಡಿದೆ. ಬರೋಬ್ಬರಿ 120 ವರ್ಷಗಳ ಬಳಿಕ ಅಥ್ಲೆಟಿಕ್ ನಲ್ಲಿ ಭಾರತಕ್ಕೆ ಚಿನ್ನ ತಂದುಕೊಡುವ ಮೂಲಕ 23 ವರ್ಷದ ನೀರಜ್ ಚೋಪ್ರಾ ಹೀರೋ ಆಗಿ ಮಿಂಚಿದ್ದಾರೆ. ನೀರಜ್ ಅವರ ಈ ಗೆಲುವನ್ನು ಅನೇಕ ಮಂದಿ ವಿವಿಧ ರೀತಿಯಲ್ಲಿ ಆಚರಿಸಿ ಸಂಭ್ರಮಿಸಿದ್ದರು. ಇದನ್ನೂ ಓದಿ: ನಾನು ಸಿಂಗಲ್, ಆಟದ ಮೇಲೆ ಮಾತ್ರ ನನ್ನ ಗಮನ: ನೀರಜ್ ಚೋಪ್ರಾ

  • ಕಾಣೆಯಾಗಿ ಬರೋಬ್ಬರಿ 10 ವರ್ಷಗಳ ಬಳಿಕ ತಂದೆ-ತಾಯಿಯನ್ನು ಸೇರಿದ ಮಗ!

    ಕಾಣೆಯಾಗಿ ಬರೋಬ್ಬರಿ 10 ವರ್ಷಗಳ ಬಳಿಕ ತಂದೆ-ತಾಯಿಯನ್ನು ಸೇರಿದ ಮಗ!

    ಚೆನ್ನೈ: ಪವಾಡ ಎಂಬಂತೆ ಕಳೆದು ಹೋಗಿ ಬರೋಬ್ಬರಿ 10 ವರ್ಷಗಳ ಬಳಿಕ ಮಗನೊಬ್ಬ ತಂದೆ-ತಾಯಿಯ ಜೊತೆಯಾದ ಘಟನೆ ಚೆನ್ನೈನಲ್ಲಿ ನಡೆದಿದೆ.

    ಶಿವಪ್ರಕಾಶ್(42) ಹೆತ್ತವರ ಮಡಿಲು ಸೇರಿದ ಮಗ. ಲಾಕ್ ಡೌನ್ ಸಮಯದಲ್ಲಿ ಶಿವಪ್ರಕಾಶ್ ಬಸ್ತಾರ್ನ ಜಗದಲ್ಪುರದಲ್ಲಿ ಅಲೆದಾಡುತ್ತಿದ್ದ. ಇದನ್ನು ಗಮನಿಸಿದ ಆರೋಗ್ಯಾಧಿಕಾರಿಗಳು ಶಿವಪ್ರಕಾಶ್ ನನ್ನು ಹಿಡಿದು ಕ್ವಾರಂಟೈನ್ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಈ ಸಂದರ್ಭದಲ್ಲಿ ಶಿವಪ್ರಕಾಶ್ ಗೆ ಅಲ್ಲಿನ ಭಾಷೆ ಬರುತ್ತಿರಲಿಲ್ಲ. ಹೀಗಾಗಿ ಪೊಲೀಸರಿಗೆ ಶಿವಪ್ರಕಾಶ್ ಅವರ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗಿರಲಿಲ್ಲ.

    ನಾವು ಅವರ ಬಗ್ಗೆ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸಿದ್ದೇವೆ. ಆದರೆ ಆತನಿಗೆ ಹಿಂದಿ ಬರುತ್ತಿರಲಿಲ್ಲ. ಹೀಗಾಗಿ ನಾವು ಏನೇ ಪ್ರಶ್ನೆಗಳನ್ನು ಕೇಳಿದರೂ ಆತ ಸುಮ್ಮನಾಗುತ್ತಿದ್ದನು. ಆದರೂ ನಾವು ಆತನನ್ನು ಮನವೊಲಿಸಿದೆವು. ಕೆಲವು ತಿಂಗಳು ಕಾಲ ಇಲ್ಲಿಯೇ ಇದ್ದ ಶಿವಪ್ರಕಾಶ್, ಕೊನೆಗೆ ತಮಿಳಿನಲ್ಲಿ ಒಂದೆರಡು ಸಾಲುಗಳನ್ನು ಬರೆದರು. ಹೆಸರು ಶಿವಪ್ರಕಾಶ್ ಆಗಿದ್ದು, ತಿರುವಣ್ಣಾಮಲೈ ಜಿಲ್ಲೆಯ ಚೆಯಾರ್ ನಲ್ಲಿರುವ ಎಚೂರ್ ಗೆ ಸೇರಿದವರು ಎಂಬುದಾಗಿ ತಿಳಿಯಿತು. ಕೂಡಲೇ ಶಿವಪ್ರಕಾಶ್ ಕೊಟ್ಟ ಮಾಹಿತಿಯನ್ನು ಅವರ ಸ್ಥಳೀಯರಿಗೆ ಕಳುಹಿಸಿದ್ದೇವೆ. ಆಗ ಅವರು ಶಿವಪ್ರಕಾಶ್ ನನ್ನು ಗುರುತಿಸಿದರು ಎಂದು ಜಗದಲ್ಪುರ್ ರೆಡ್ ಕ್ರಾಸ್ ಸೊಸೈಟಿಯ ಉಪಾಧ್ಯಕ್ಷ ಅಲೆಕ್ಸಾಂಡರ್ ಎಂ ಚೆರಿಯನ್ ತಿಳಿಸಿದರು.

    ಸಾಂಕ್ರಾಮಿಕ ರೋಗದಿಂದಾಗಿ ಶಿವಪ್ರಕಾಶ್ ಮತ್ತೆ ತಮ್ಮ ತಂದೆ-ತಾಯಿಯನ್ನು ನೋಡುವಂತಾಯಿತು. ಇಲ್ಲವೆಂದರೆ ಅವರು ಇನ್ನೂ ಅಲೆಮಾರಿಯಾಗಿಯೇ ಉಳಿಯುತ್ತಿದ್ದರು ಎಂದು ಬಸ್ತಾರ್ ಜಿಲ್ಲಾಡಳಿತದ ಅಧಿಕಾರಿಗಳು ಹೇಳಿದ್ದಾರೆ. ಬಸ್ತಾರ್ ಜಿಲ್ಲಾಡಳಿತವು ಪ್ರಕಾಶ್ ಅವರ ಹಳ್ಳಿಯ ಸ್ಥಳೀಯರನ್ನು ಸಂಪರ್ಕಿಸಿದಾಗ ಅವರು ಹೆತ್ತವರನ್ನು ಪತ್ತೆಹಚ್ಚಲು ಮತ್ತಷ್ಟು ಸಹಾಯ ಮಾಡಿದರು. ಅವರು ಕಾಣೆಯಾದ ವ್ಯಕ್ತಿಯ ವರದಿಯನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಒಂದು ದಶಕದ ಹಿಂದೆ ದಾಖಲಿಸಿದ್ದರು.

    ಇಷ್ಟು ವರ್ಷ ಎಲ್ಲಿ ಇದ್ದುದಾಗಿ ಶಿವಪ್ರಕಾಶ್ ಬಾಯಿಬಿಟ್ಟಿಲ್ಲ. ಆದರೆ 3-4 ತಿಂಗಳು ಅವರು ಕ್ವಾರಂಟೈನ್ ಆಗಿದ್ದರು. ನಾವು ಆತನನ್ನು ವಾಪಸ್ ಮನೆಗೆ ಸೇರಿಸೋ ಪ್ರಯತ್ನ ಮಾಡಿದ್ದೇವೆ ಹೊರತು, ನಾವು ಅವರ ನಂಬಿಕೆಯನ್ನು ಗೆಲ್ಲುವಲ್ಲಿ ಕೆಲಸ ಮಾಡಿದ್ದೇವೆ ಹೊರತು ಅವರ ಹಿಂದಿನ ಬಗ್ಗೆ ತನಿಖೆ ನಡೆಸಲಿಲ್ಲ. ಜಿಲ್ಲಾಧಿಕಾರಿ ರಜತ್ ಬನ್ಸಾಲ್ ಅವರ ಪ್ರಯತ್ನಕ್ಕೆ ಧನ್ಯವಾದಗಳು, ಪ್ರಕಾಶ್ ಅವರ ಕುಟುಂಬದೊಂದಿಗೆ ಇದ್ದಾರೆ ಎಂದು ಚೆರಿಯನ್ ತಿಳಿಸಿದರು.

  • ತಂದೆ-ತಾಯಿ ವಿವಾಹ ವಾರ್ಷಿಕೋತ್ಸವಕ್ಕೆ ಕಿಚ್ಚನ ಭಾವನಾತ್ಮಕ ಸಾಲು

    ತಂದೆ-ತಾಯಿ ವಿವಾಹ ವಾರ್ಷಿಕೋತ್ಸವಕ್ಕೆ ಕಿಚ್ಚನ ಭಾವನಾತ್ಮಕ ಸಾಲು

    ಬೆಂಗಳೂರು: ಲಾಕ್‍ಡೌನ್ ಸಮಯದಲ್ಲಿ ಎಲ್ಲ ನಟ, ನಟಿಯರು ಮನೆಯಲ್ಲೇ ಕಾಲ ಕಳೆಯುತ್ತಿದ್ದು, ಕುಟುಂಬದೊಂದಿಗೆ ಸಂತಸ ಕ್ಷಣಗಳನ್ನು ಆನಂದಿಸುತ್ತಿದ್ದಾರೆ. ಕಿಚ್ಚ ಸುದೀಪ್ ತಮ್ಮ ಮನೆಯಲ್ಲೇ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದು, ತಂದೆ ತಾಯಿಯ ವಿವಾಹ ವಾರ್ಷಿಕೋತ್ಸಕ್ಕೆ ಶುಭ ಕೋರಿದ್ದು, ಭಾವನಾತ್ಮಕ ಸಾಲುಗಳ ಮೂಲಕ ಟ್ವೀಟ್ ಮಾಡಿದ್ದಾರೆ.

    ಅವರು ನನ್ನನ್ನು ರೂಪಿಸಿದವರು, ಬೆಳೆಸಿದವರು, ಬಿಗಿಗೊಳಿಸಿದವರು, ಅಂದವಾಗಿಸಿದವರು. ಇಷ್ಟು ಮಾತ್ರವಲ್ಲ ನನ್ನನ್ನು ಆಶೀರ್ವದಿಸಿ, ನನಗಾಗಿ ಪ್ರಾರ್ಥಿಸುವವರು. ಅಮ್ಮ-ಅಪ್ಪ 54 ವರ್ಷಗಳ ನಿಮ್ಮ ಒಗ್ಗಟ್ಟಿನ ಜೀವನಕ್ಕೆ ಶುಭಾಶಯ. ನೀವು ಇನ್ನೂ ಹಲವು ವರ್ಷಗಳ ಕಾಲ ನಮ್ಮೊಂದಿಗೆ ಇರಬೇಕಿದೆ. ಲವ್ ಯು ಬೋತ್ ಫಾರ್‍ಎವರ್ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಭಾವನಾತ್ಮಕವಾಗಿ ತಂದೆ, ತಾಯಿಯನ್ನು ನೆನೆದಿದ್ದಾರೆ.

    ಮನೆಯಲ್ಲೇ ಕಾಲ ಕಳೆಯುತ್ತಿರುವ ಕಿಚ್ಚ ಸುದೀಪ್, ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುತ್ತಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಅವರ ಅಭಿಮಾನಿಗಳು ಮಾಡುವ ಸಹಾಯದ ಕುರಿತು ಪ್ರತಿಕ್ರಿಯಿಸುತ್ತಿರುತ್ತಾರೆ. ಅಲ್ಲದೆ ಹಲವು ಅಭಿಮಾನಿಗಳ ಪ್ರಶ್ನೆಗೆಗಳಿಗೆ ಉತ್ತರಿಸುತ್ತಿದ್ದಾರೆ. ಹೀಗೆ ಲಾಕ್‍ಡೌನ್ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗುತ್ತಿದ್ದಾರೆ.

    ಕೋಟಿಗೊಬ್ಬ-3 ಸಿನಿಮಾದಲ್ಲಿ ಕಿಚ್ಚ ಸುದೀಪ್ ಬ್ಯುಸಿಯಾಗಿದ್ದು, ಸಿನಿಮಾ ಅಂತಿಮ ಹಂತ ತಲುಪಿದೆ. ಇನ್ನೇನು ಬಿಡುಗಡೆಯಾಗಲಿದೆ ಎನ್ನುವಷ್ಟರಲ್ಲಿ ಲಾಕ್‍ಡೌನ್ ಘೋಷಣೆಯಾಯಿತು. ಹೀಗಾಗಿ ಸಿನಿಮಾ ಬಿಡುಗಡೆ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಚಿತ್ರವನ್ನು ಶಿವ ಕಾರ್ತಿಕ್ ನಿರ್ದೇಶಿಸುತ್ತಿದ್ದು, ಕಿಚ್ಚನಿಗೆ ಜೋಡಿಯಾಗಿ ಮೆಡೋನ್ನ ಸೆಬಾಸ್ಟಿಯನ್ ನಟಿಸುತ್ತಿದ್ದಾರೆ. ಶ್ರದ್ಧಾ ದಾಸ್ ಇಂಟರ್‍ಪೋಲ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಕ್‍ಲೈನ್ ವೆಂಕಟೇಶ್ ಹಾಗೂ ಎಂ.ಬಿ ಬಾಬು ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

  • ಫೋರ್ಜರಿ ಮಾಡಿ ಆಸ್ತಿ ಕಬಳಿಸಿ ತಂದೆ-ತಾಯಿಯನ್ನು ಬೀದಿಗೆ ಬಿಟ್ಟ ಹೆಣ್ಣುಮಕ್ಕಳು!

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ ತಂದೆ-ತಾಯಿಯನ್ನು ಬೀದಿಗೆ ಬಿಟ್ಟ ಹೆಣ್ಣುಮಕ್ಕಳು!

    – ದ್ರೋಹಕ್ಕೆ ಕಣ್ಣೀರಿಟ್ಟ 90ರ ಹಿರಿ ಜೀವಗಳು

    ಬೆಂಗಳೂರು: ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಿಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿ ಅವರೆಲ್ಲರಿಗೂ ಸೂರು ಮಾಡಿಕೊಟ್ಟ ತಂದೆ-ತಾಯಿ, ಹೆಣ್ಣುಮಕ್ಕಳು ಮನೆ ಕಣ್ಣು ಎನ್ನುವಂತೆ ಸಾಕಿ ಸಲಹಿದರು. ಆದರೆ ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ.

    ಮಕ್ಕಳಿಗಾಗಿ ನಿಸ್ವಾರ್ಥವಾಗಿ ತಮ್ಮ ಸುಖವನ್ನೂ ಮರೆತು ಅವರ ಸುಖಕ್ಕೆ ಬದುಕನ್ನೇ ಹೆತ್ತವರು ಸವೆಯುತ್ತಾರೆ. ಆದರೆ ವೆಲ್ಲಿಯನ್, ಕಮಲಮ್ಮ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿದ್ದಾರೆ. ವೆಲ್ಲಿಯನ್ ದಂಪತಿಗೆ ಒಟ್ಟು ನಾಲ್ಕು ಜನ ಹೆಣ್ಣುಮಕ್ಕಳು. ಈ ಮಕ್ಕಳನ್ನು ಓದಿಸಿ, ಅವರಿಗೊಂದು ಬದುಕು ಕಟ್ಟಿಕೊಟ್ಟಿದ್ದು, ನಾಲ್ಕು ಜನರಿಗೂ ಚಾಮರಾಜಪೇಟೆಯಲ್ಲಿ ಪ್ರತ್ಯೇಕ ಮನೆ ಕಟ್ಟಿಕೊಟ್ಟಿದ್ದಾರೆ. ಇಷ್ಟೆಲ್ಲ ಮಾಡಿದ್ದರೂ ಹೆತ್ತವರು ಮಾತ್ರ ಈ ಮಕ್ಕಳಿಗೆ ಭಾರವಾಗಿದ್ದಾರೆ. ನಾಲ್ವರಲ್ಲಿ ಮೂವರು ಆಸ್ತಿಯನ್ನು ಫೋರ್ಜರಿ ಸಹಿ ಮೂಲಕ ತಮ್ಮ ಹೆಸರಿಗೆ ಬರೆದುಕೊಂಡಿದ್ದು, ತಂದೆ- ತಾಯಿಯನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ.

    ಆದರೆ ಒಬ್ಬಳು ಪುತ್ರಿ ಹೆತ್ತವರನ್ನು ಮನೆಗೆ ಕರೆತಂದು ಸಾಕಲು ಮುಂದಾದಾಗ ಆಕೆಯ ಮನೆ ಸೇರಿದಂತೆ, ಆಸ್ತಿಯನ್ನು ಕೂಡ ಲಪಟಾಯಿಸಲು ಉಳಿದ ಮೂವರು ಸ್ಕೆಚ್ ಹಾಕಿದ್ದಾರಂತೆ. ಹೆಣ್ಣು ಮಕ್ಕಳ ಮೃಗೀಯ ವರ್ತನೆಗೆ ವೃದ್ದ ದಂಪತಿ ಕಣ್ಣೀರು ಹಾಕಿದ್ದಾರೆ.

    ಮಕ್ಕಳಿಗೆಂದು ದಂಪತಿ ವಿಲ್ ಸಹ ಮಾಡಿದ್ದರು. ಅದನ್ನ ನಂಬದೇ ಫೋರ್ಜರಿ ಮಾಡಿ ಆಸ್ತಿಯನ್ನ ಮಕ್ಕಳು ಕಬಳಿಸಿಕೊಂಡಿದ್ದಾರೆ. ಹೆಣ್ಣು ಮಕ್ಕಳಿಗೆ ಇರಲು ಮನೆ ಬೇಕು ಎಂದು ದೊಡ್ಡ ಸೈಟಿನಲ್ಲಿ ನಾಲ್ಕು ಮನೆಗಳನ್ನ ನಿರ್ಮಿಸಿ, ಎಲ್ಲರ ಹೆಸರಲ್ಲೂ ಒಂದೊಂದು ಮನೆಯನ್ನ ದಂಪತಿ ಬರೆದು ವಿಲ್ ಮಾಡಿದ್ದರು. ಆದರೆ ಆ ವಿಲ್ ಅನ್ನು ಹೆಣ್ಣು ಮಕ್ಕಳಿಗೆ ತೋರಿಸಿರಲಿಲ್ಲ. ಇದೇ ವಿಚಾರಕ್ಕೆ ತಂದೆ ತಾಯಿ ಮೇಲೆ ಮಕ್ಕಳು ಮುನಿಸಿಕೊಂಡಿದ್ದರು.

    ನಂತರ ಜನವರಿಯಲ್ಲಿ ಜಿಗಣಿ ರಿಜಿಸ್ಟ್ರಾರ್ ಆಫೀಸಿನಲ್ಲಿ ಸಬ್ ರಿಜಿಸ್ಟ್ರಾರ್ ಮಂಜುನಾಥ್ ಅನ್ನೋರು ಚಿನ್ನಪ್ಪ ಎಂಬವರಿಗೆ ಜನರಲ್ ಪವರ್ ಆಫ್ ಅಟಾರ್ನಿಯ(ಜಿಪಿಎ) ಕೊಟ್ಟು ನಂತರ ಅದನ್ನ ದಾನದ ರೂಪದಲ್ಲಿ ಈ ಹೆಣ್ಣು ಮಕ್ಕಳು ಫೋರ್ಜರಿ ಮಾಡಿ ಬರೆಸಿಕೊಂಡಿದ್ದಾರೆ. ಈಗ ತಾವೇ ಕಟ್ಟಿದ ಮನೆಯಲ್ಲಿ ಇರಲೂ ಆಗದೇ ಕಣ್ಣೀರಿಡುತ್ತಿದ್ದಾರೆ. ಹೆಣ್ಣುಮಕ್ಕಳ ಬಗ್ಗೆ ತಂದೆಗೆ ಹೆಚ್ಚು ಪ್ರೀತಿ ಅಂತಾರೆ ಆದರೆ ಮಕ್ಕಳಿಂದಲೇ ತಂದೆಯ ಇಷ್ಟೊಂದು ನೋವು ಅನುಭವಿಸುತ್ತಿದ್ದಾರೆ.

    ತಂದೆ ತಾಯಿ ಕಣ್ಣಿಗೆ ಕಾಣೋ ದೇವರು ಅಂತಾರೆ ಆದರೆ ಕೇವಲ ತಂದೆ ತಾಯಿಯೇ ಕಷ್ಟ ಪಟ್ಟು ಸಂಪಾದಿಸಿದ ಆಸ್ತಿಗಾಗಿ ಅವರನ್ನೇ ಬೀದಿ ಪಾಲು ಮಾಡಲು ಹೊರಟಿರುವ ಇಂತಹ ಮಕ್ಕಳಿಗೆ ಕಾನೂನು ತಕ್ಕ ಶಾಸ್ತಿ ಮಾಡಬೇಕು ಅನ್ನೊದು ನೊಂದವರ ಒತ್ತಾಯವಾಗಿದೆ.

  • ತಂದೆ, ತಾಯಿ ಗುದ್ದಾಟಕ್ಕೆ ಬಲಿಯಾಯ್ತು 5 ತಿಂಗಳ ಕಂದಮ್ಮ

    ತಂದೆ, ತಾಯಿ ಗುದ್ದಾಟಕ್ಕೆ ಬಲಿಯಾಯ್ತು 5 ತಿಂಗಳ ಕಂದಮ್ಮ

    ನವದೆಹಲಿ: ತಂದೆ, ತಾಯಿ ಜಗಳದಲ್ಲಿ ಕೂಸು ಬಡವಾಯ್ತು ಎನ್ನುವ ಗಾದೆ ಮಾತಿದೆ. ಆದ್ರೆ ರಾಷ್ಟ್ರ ರಾಜಧಾನಿಯಲ್ಲಿ ತಂದೆ-ತಾಯಿ ಜಗಳ, ಗುದ್ದಾಟಕ್ಕೆ 5 ತಿಂಗಳ ಪುಟ್ಟ ಕಂದಮ್ಮ ಬಲಿಯಾಗಿದೆ.

    ಪೂರ್ವ ದೆಹಲಿಯ ಕೊಂಡ್ಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ನಿವಾಸಿ ದೀಪ್ತಿ(29) ಹಾಗೂ ಸತ್ಯಜೀತ್(32) ಅವರ 5 ತಿಂಗಳ ಮಗು ಸಾವನ್ನಪ್ಪಿದೆ. ಭಾನುವಾರ ದೀಪ್ತಿ ಹಾಗೂ ಸತ್ಯಜೀತ್ ನಡುವೆ ಜಗಳ ನಡೆದಿತ್ತು. ಈ ವೇಳೆ ಅವರಿಬ್ಬರ ನಡುವೆ ಹೊಡೆದಾಟ ಕೂಡ ನಡೆದಿತ್ತು. ಈ ವೇಳೆ ಪತಿ ತನ್ನ ಪತ್ನಿಗೆ ಕೋಲಿನಿಂದ ಹೊಡೆಯುತ್ತಿದ್ದಾಗ ಕೋಲಿನಲ್ಲಿದ್ದ ಕಬ್ಬಿಣದ ಮೊಳೆ ತುಂಡಾಗಿ, ಆಕಸ್ಮಿಕವಾಗಿ ಹಾಸಿಗೆ ಮೇಲೆ ಮಲಗಿದ್ದ ಮಗುವಿನ ತಲೆ ಬಡಿದಿತ್ತು. ಆಗ ದಂಪತಿ ಮಗುವಿಗೆ ಪ್ರಥಮ ಚಿಕಿತ್ಸೆ ಕೊಟ್ಟು ಸುಮ್ಮನಾಗಿದ್ದರು. ಈ ಬಗ್ಗೆ ಹೆಚ್ಚೇನು ತಲೆಕೆಡಿಸಿಕೊಂಡಿರಲಿಲ್ಲ.

    ಬುಧವಾರ ಇದ್ದಕ್ಕಿದ್ದ ಹಾಗೆ ಮಗು ವಾಂತಿ ಮಾಡಲು ಆರಂಭಿಸಿ, ಅಸ್ವಸ್ಥಗೊಂಡಿತು. ಈ ವೇಳೆ ದೀಪ್ತಿ ಮಗುವನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆಸ್ಪತ್ರೆಗೆ ಕರೆತರುವ ಮೊದಲೇ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗೆ ಮಗುವಿನ ಮೃತದೇಹ ಕಳುಹಿಸಿದಾಗ ಮಗು ಹೇಗೆ ಸಾವನ್ನಪ್ಪಿತು ಎಂಬುದು ಬೆಳಕಿಗೆ ಬಂತು.

    ಮಗುವಿನ ತಲೆಗೆ ಕಬ್ಬಿಣದ ವಸ್ತುವಿನಿಂದ ಹೊಡೆತಬಿದ್ದಿದೆ, ಆದ್ದರಿಂದ ಅದರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಮಗು ಮೃತಪಟ್ಟಿದೆ ಎಂದು ಮರಣೋತ್ತರ ಪರೀಕ್ಷೆ ವರದಿಯಿಂದ ತಿಳಿದಿದ್ದು, ಈ ಸಂಬಂಧ ಗಾಜಿಪುರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 304ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಈ ಬಗ್ಗೆ ತಿಳಿಯುತ್ತಿದ್ದಂತೆ ಆರೋಪಿ ಸತ್ಯಜೀತ್ ತಲೆಮರಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಹೆತ್ತವರ ದುರಂತ ಸಾವಿಗೆ ಕಾರಣವಾಯ್ತು ರಾಕ್ಷಸ ಮಗ, ಸೊಸೆಯ ಕಿರುಕುಳ

    ಹೆತ್ತವರ ದುರಂತ ಸಾವಿಗೆ ಕಾರಣವಾಯ್ತು ರಾಕ್ಷಸ ಮಗ, ಸೊಸೆಯ ಕಿರುಕುಳ

    ಬೆಂಗಳೂರು: ಮಗ-ಸೊಸೆಯ ಕಿರುಕುಳಕ್ಕೆ ವೃದ್ಧ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು, ಆರೋಪಿಗಳ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ಗಿರನಗರ ನಿವಾಸಿ ಕೃಷ್ಣಮೂರ್ತಿ(70) ಹಾಗೂ ಸ್ವರ್ಣಮೂರ್ತಿ(68) ಆತ್ಮಹತ್ಯೆ ಮಾಡಿಕೊಂಡಿದ್ದ ವೃದ್ಧ ದಂಪತಿ. ಆಗಸ್ಟ್ 23ರಂದು ಫ್ಯಾನಿಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಘಟನೆ ನಡೆದ ಬಹುದಿನಗಳ ಬಳಿಕ ಹೆತ್ತವರ ಸಾವಿಗೆ ಮಗ ಹಾಗೂ ಸೊಸೆಯೇ ಕಾರಣವೆಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

    ಮನೆಯ ಗೋಡೆಯ ಮೇಲೆ ಕೃಷ್ಣಮೂರ್ತಿ ಅವರು ಕೊನೆ ಸಂದೇಶ ಬರೆದಿದ್ದರು, ಇತ್ತ ಸ್ವರ್ಣಮೂರ್ತಿ ಅವರ ಹಣೆ ಮೇಲೆ ಸಂದೇಶವೊಂದು ಬರೆದಿತ್ತು. ಇದರ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಾಗ ಸತ್ಯಾಂಶ ಹೊರಬಿದ್ದಿದೆ.

    ಸಾಯುವ ಮುನ್ನ ಗೋಡೆಯ ಮೇಲೆ ಮಗ ಹಾಗೂ ಸೊಸೆಯ ಕಿರುಕುಳದ ಮಾಹಿತಿ ಬಿಚ್ಚಿಟ್ಟು ವೃದ್ಧ ತಂದೆ ಸಹಿ ಮಾಡಿದ್ದರು. “ನರಕದಿಂದ ಸ್ವರ್ಗದ ಕಡೆಗೆ ಪಯಣ, ನಮ್ಮಿಬ್ಬರ ಸಾವಿಗೆ ಸೊಸೆ ಸ್ನೇಹ ಸೂರ್ಯನಾರಾಯಣ, ಮಗ ಮಂಜುನಾಥ್ ಶ್ರೇಯಸ್ ಚಿತ್ರಹಿಂಸೆಯೇ ಕಾರಣ. ಅವರು ನಮ್ಮಿಬ್ಬರಿಗೂ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾರೆ” ಎಂದು ಗೋಡೆಯ ಮೇಲೆ ಬರೆದು ಕೊನೆಯಲ್ಲಿ ಸಹಿ ಮಾಡಿದ್ದರು. ಇತ್ತ ತಾಯಿ ಹಣೆ ಮೇಲೆ “ನನ್ನನ್ನು ಕ್ಷಮಿಸು” ಎಂದು ಬರೆದುಕೊಂಡು, ಕೊನೆಗೆ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದರು.

    ಈ ದುರಂತ ಸಾವಿನ ಹಿಂದಿನ ರಹಸ್ಯದ ತನಿಖೆಗೆ ಮುಂದಾದ ಗಿರನಗರ ಪೊಲೀಸರು, ಪ್ರಕರಣವನ್ನು ಭೇದಿಸಿದ್ದಾರೆ. ಈಗಾಗಲೇ ಸೊಸೆ ಸ್ನೇಹ ಹಾಗೂ ಮಗ ಮಂಜುನಾಥ್ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲು ಮಾಡಿದ್ದಾರೆ.

  • ಮಗಳ ಕನ್ಯಾದಾನದ ಮುನ್ನ ಮದ್ವೆಯಾದ ತಂದೆ-ತಾಯಿ

    ಮಗಳ ಕನ್ಯಾದಾನದ ಮುನ್ನ ಮದ್ವೆಯಾದ ತಂದೆ-ತಾಯಿ

    ಭೋಪಾಲ್: ಸಂಪ್ರದಾಯದ ಪ್ರಕಾರ ಕನ್ಯಾದಾನ ಮಾಡುವುದು ಪುಣ್ಯದ ಕೆಲಸ ಎನ್ನಲಾಗುತ್ತದೆ. ಹೀಗಾಗಿ ಮಧ್ಯ ಪ್ರದೇಶದಲ್ಲಿ ಮಗಳ ಮದುವೆ ಮಾಡಿಸುವ ಹಿಂದಿನ ದಿನ ತಂದೆ-ತಾಯಿ ಮದುವೆಯಾಗಿ, ಮಾರನೆ ದಿನ ಮಗಳಿಗೆ ಕನ್ಯಾದಾನ ಮಾಡಿರುವ ಅಪರೂಪದ ಘಟನೆ ನಡೆದಿದೆ.

    ಇದೇನಪ್ಪ ಮಗಳ ಮದುವೆ ಮಾಡುವ ಹಿಂದಿನ ದಿನ ತಂದೆ-ತಾಯಿ ಮದುವೆನಾ? ಇದು ಯಾವ ಪದ್ಧತಿ ಎಂದು ಅಚ್ಚರಿ ಅನಿಸಬಹುದು. ಆದರೆ ವಾಸ್ತವವಾಗಿ ಇದು ಪದ್ಧತಿ ಅಥವಾ ಸಂಪ್ರದಾಯವಲ್ಲ, ಬದಲಿಗೆ 25 ವರ್ಷಗಳಿಂದ ಲಿವ್ ಇನ್ ರಿಲೇಷನ್ ಶಿಪ್‍ನಲ್ಲಿದ್ದ ಜೋಡಿ ಮಗಳ ಕನ್ಯಾದಾನ ಮಾಡಲು ಮದುವೆಯಾಗಿದ್ದಾರೆ.ಇದನ್ನೂ ಓದಿ:ತಾಯಿಯ ಪುನರ್ ವಿವಾಹದ ಬಗ್ಗೆ ಮಗನ ಭಾವನಾತ್ಮಕ ಪೋಸ್ಟ್ – ನೆಟ್ಟಿಗರಿಂದ ಶ್ಲಾಘನೆ

    ಹೌದು. ಮಧ್ಯಪ್ರದೇಶದ ಅಶೋಕ್ ನಗರ ನಿವಾಸಿ 55 ವರ್ಷದ ಪರಿಮಲ್ ಸಿಂಗ್ ಅವರು ಲಿವ್ ಇನ್ ನಲ್ಲಿದ್ದ 50 ವರ್ಷದ ಮಹಿಳೆಯನ್ನು ಮದುವೆಯಾಗಿದ್ದಾರೆ. ಲಿವ್ ಇನ್ ರಿಲೇಷನ್ ಶಿಪ್‍ನಲ್ಲಿದ್ದ ಪರಿಮಲ್ ಜೋಡಿಗೆ ನಾಲ್ಕು ಮಕ್ಕಳಿದ್ದಾರೆ. ಇಷ್ಟು ವರ್ಷ ಲಿವ್ ಇನ್‍ನಲ್ಲಿದ್ದ ಜೋಡಿ ತಮ್ಮ ಮೊದಲ ಮಗಳ ಮದುವೆ ಮಾಡಿಸಲು ಮುಂದಾದಾಗ ತಂದೆ- ತಾಯಿ ಮದುವೆ ಆಗದೆ ಕನ್ಯಾದಾನ ಮಾಡಲು ಸಾಧ್ಯವಿಲ್ಲ ಎಂದು ಪಂಡಿತರು ಹೇಳಿದ್ದಾರೆ. ಹೀಗಾಗಿ ತಮ್ಮ ಮಗಳ ಕನ್ಯಾದಾನ ಬೇರೆಯವರ ಕೈಯಿಂದ ಆಗಬಾರದು ಎಂದು ಪರಿಮಲ್ ಜೋಡಿ ಮಗಳ ಮದುವೆ ಮಾಡುವ ಹಿಂದಿನ ದಿನ ತಾವೂ ಅಧಿಕೃತವಾಗಿ ಮದುವೆಯಾಗಿದ್ದಾರೆ. ಬಳಿಕ ಮಾರನೆ ದಿನ ಮಗಳ ಕನ್ಯಾದಾನ ಮಾಡಿದ್ದಾರೆ.

    ಮಕ್ಕಳೇ ಮುಂದೆ ನಿಂತು ತಂದೆ-ತಾಯಿ ಮದುವೆ ಮಾಡಿಸಿದ್ದು ಈ ಮದುವೆಯ ವಿಶೇಷವಾಗಿತ್ತು. ದಿಬ್ಬಣದಲ್ಲಿ ಮಕ್ಕಳು ಖುಷಿಯಿಂದ ಪಾಲ್ಗೊಂಡು ತಂದೆ-ತಾಯಿ ಮದುವೆಯನ್ನು ಮಾಡಿಸಿ, ಮರುದಿನ ಸಹೋದರಿಯ ಮದುವೆ ಸರಳವಾಗಿ, ಸಂಭ್ರಮದಿಂದ ಮಾಡಿಸಿದ್ದಾರೆ.

  • ಜೈನ ಸನ್ಯಾಸಿನಿಯಾದ 12ರ ಬಾಲಕಿ

    ಜೈನ ಸನ್ಯಾಸಿನಿಯಾದ 12ರ ಬಾಲಕಿ

    -ಮಗಳ ನಿರ್ಧಾರಕ್ಕೆ ಹೆತ್ತವರ ಸಮ್ಮತಿ

    ಸೂರತ್: 12ರ ಬಾಲಕಿಯೊಬ್ಬಳು ಜೈನ ಸನ್ಯಾಸಿನಿಯಾಗಿ ದೀಕ್ಷೆ ಪಡೆಯಲು ಮುಂದಾಗಿದ್ದಾಳೆ. ಮಗಳ ಈ ನಿರ್ಧಾರಕ್ಕೆ ತಂದೆ-ತಾಯಿ ಕೂಡ ಬೆಂಬಲ ನೀಡಿರುವುದು ಸದ್ಯ ಎಲ್ಲರ ಗಮನ ಸೆಳೆದಿದೆ.

    ಸೂರತ್‍ನ 12 ವರ್ಷದ ಖುಷಿ ಶಾ ಜೈನ ಸನ್ಯಾಸಿನಿ ಆಗಲು ನಿರ್ಧರಿಸಿದ್ದಾಳೆ. ಖುಷಿ ಕುಟುಂಬದಲ್ಲಿ ಜೈನ ಸನ್ಯಾಸತ್ವ ಸ್ವೀಕರಿಸುತ್ತಿರುವುದು ಇವರೇ ಮೊದಲೇನಲ್ಲ. ಹೀಗಾಗಿ ಈ ಬಗ್ಗೆ ಬಾಲಕಿ ಮಾತನಾಡಿ, ನಾನು ಚಿಕ್ಕವಳಿದ್ದಾಗ ನಮ್ಮ ಕುಟುಂಬದ ನಾಲ್ವರು ಸನ್ಯಾಸತ್ವದ ಹಾದಿ ಹಿಡಿದಿದ್ದರು. ಸಿಮಂದರ್ ಸ್ವಾಮೀಜಿ ತಮ್ಮ ಎಂಟನೇ ವಯಸ್ಸಿನಲ್ಲಿ ಸನ್ಯಾಸತ್ವ ದೀಕ್ಷೆ ಸ್ವೀಕರಿಸಿದ್ದರು. ನಾನು 12ನೇ ವಯಸ್ಸಿನಲ್ಲಿ ದೀಕ್ಷೆ ಪಡೆಯುತ್ತೇನೆ ಎಂದು ಹೇಳಿದಳು.

    ಸರ್ಕಾರಿ ಉದ್ಯೋಗಿಯಾಗಿರುವ ಖುಷಿ ತಂದೆ ವಿನಿತ್ ಶಾ ಹಾಗೂ ತಾಯಿ ಮಗಳ ಈ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ತಮ್ಮ ಮಗಳು ತನ್ನ ಆಂತರ್ಯದ ಬಗ್ಗೆ ತಿಳಿದುಕೊಂಡಿದ್ದಾಳೆ. ಇದು ಎಲ್ಲ ಮಕ್ಕಳಲ್ಲಿ ಬರುವುದಿಲ್ಲ. ನಮ್ಮ ಮಗಳ ಬಗ್ಗೆ ನಮಗೆ ಹೆಮ್ಮೆ ಇದೆ. ಆಕೆ ಸನ್ಯಾಸಿಯಾಗಿ ಲಕ್ಷಾಂತರ ಜನರ ಬದುಕಿನಲ್ಲಿ ಬೆಳಕು ತರಲಿ ಎಂದು ಮಗಳ ನಿರ್ಧಾರಕ್ಕೆ ತಂದೆ-ತಾಯಿ ಶುಭ ಹಾರೈಸಿದರು.

    ಕಳೆದ ವರ್ಷ ನವೆಂಬರ್‍ನಲ್ಲಿ ಆಕೆ 6ನೇ ತರಗತಿಯಲ್ಲಿ ಓದುತ್ತಿದ್ದಾಗಲೇ ಶಾಲೆ ಬಿಟ್ಟಿದ್ದಾಳೆ. 6ನೇ ತರಗತಿ ಪರೀಕ್ಷೆಯಲ್ಲಿ 97 ಅಂಕ ಪಡೆದಿದ್ದಳು. ಈಗಾಗಲೇ ಆಕೆ ಬರಿಗಾಲಲ್ಲಿ ಸಾವಿರಾರು ಕಿ.ಮೀ ಪ್ರವಾಸ ಮಾಡಿದ್ದಾಳೆ. ದೀಕ್ಷೆಯ ನಂತರ ಜೀವನವನ್ನು ಮತ್ತಷ್ಟು ಹತ್ತಿರದಿಂದ ನೋಡಲಿದ್ದಾಳೆ ಎಂದು ತಂದೆ ತಿಳಿಸಿದರು.

    ತಾಯಿ ಮಾತನಾಡಿ, ನಮ್ಮ ಮಗಳು ಡಾಕ್ಟರ್ ಆಗಬೇಕು ಎಂದು ನಾನು ಬಯಸಿದ್ದೆ. ಆದರೆ, ಅವಳ ನಿರ್ಧಾರಕ್ಕೆ ನಾವು ಆಕೆ ದೀಕ್ಷೆ ತೆಗೆದುಕೊಳ್ಳುವುದಕ್ಕೆ ಸಮ್ಮತಿಸಿದ್ದೇವೆ. ಆಕೆಯ ಆಸೆಯನ್ನು ಪೂರೈಸುವುದು ನಮ್ಮ ಕರ್ತವ್ಯ. ಆಕೆಯ ನಿರ್ಧಾರದಿಂದ ನಮಗೆ ಹೆಮ್ಮೆ ಇದೆ ಎಂದು ಮಗಳ ನಡೆಗೆ ಬೆಂಬಲಿಸಿದರು.

    ಜೈನ ಸನ್ಯಾಸತ್ವ ದೀಕ್ಷೆ ಸ್ವೀಕರಿಸುವುದು ಸಾಮಾನ್ಯವಲ್ಲ. ಅದು ಬರೀ ಪ್ರಕ್ರಿಯೆ ಮಾತ್ರವಲ್ಲ, ಕಠಿಣ ವ್ರತಗಳನ್ನು ನಿರ್ವಹಿಸಬೇಕಿರುತ್ತದೆ. ದೀಕ್ಷೆ ನೀಡುವ ಸಮಯದಲ್ಲಿ ದೇಹದ ಮೇಲಿನ ವ್ಯಾಮೋಹ ಕಳೆದುಕೊಳ್ಳಲು ತಲೆ ಕೂದಲನ್ನು ಸಂಪೂರ್ಣವಾಗಿ ತೆಗೆಯಲಾಗುತ್ತದೆ. ಹೊಸ ಸನ್ಯಾಸಿಗಳು ಮಹಾವ್ರತ ಹೆಸರಿನ ಐದು ಪ್ರತಿಜ್ಞೆಗಳನ್ನು ಪಾಲಿಸಬೇಕಾಗಿರುತ್ತದೆ. ಇದರಲ್ಲಿ ಪ್ರತಿದಿನ ಕ್ರಿಯಾದಿಗಳು ಒಳಗೊಂಡಿರುತ್ತವೆ. ಹಾಗೆಯೇ ಎಂಟು ಸಿದ್ಧಾಂತಗಳನ್ನು (ಪ್ರವಚನ ಮಾತ್ರಕ್) ಅಭ್ಯಾಸ ಮಾಡಬೇಕು. ಜೊತೆಗೆ ಆರು ಕಡ್ಡಾಯ ಕ್ರಿಯೆಗಳನ್ನು (ಅವಸ್ಯಾಕ್) ಪಾಲಿಸಲೇಬೇಕು. ಈ ಎಲ್ಲಾ ಕಠಿಣ ವ್ರತ, ಸಿದ್ಧಾಂತ ಹಾಗೂ ಕ್ರಿಯೆಗಳನ್ನು ಪಾಲಿಸಿ ಜೈನ ಸನ್ಯಾಸಿನಿಯಾಗಲು ಖುಷಿ ಮುಂದಾಗಿದ್ದಾಳೆ.

  • ನಿಶ್ಚಿತಾರ್ಥದ ಬಳಿಕ ಮಗಳು ಎಸ್ಕೇಪ್ – ಚಿಕ್ಕಬಳ್ಳಾಪುರದಲ್ಲಿ ತಂದೆ, ತಾಯಿ ಆತ್ಮಹತ್ಯೆ

    ನಿಶ್ಚಿತಾರ್ಥದ ಬಳಿಕ ಮಗಳು ಎಸ್ಕೇಪ್ – ಚಿಕ್ಕಬಳ್ಳಾಪುರದಲ್ಲಿ ತಂದೆ, ತಾಯಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಮದುವೆ ನಿಶ್ಚಯವಾಗಿದ್ದ ಮಗಳು ಪ್ರಿಯಕರನೊಂದಿಗೆ ಪರಾರಿಯಾಗಿದ್ದು, ಇದರಿಂದ ನೊಂದ ಯುವತಿಯ ಪೋಷಕರು ಆತ್ಮಹತ್ಯೆಗೆ ಶರಣಾದ ಘಟನೆ ಗೌರಿಬಿದನೂರು ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ 37 ವರ್ಷದ ಚೌಡಮ್ಮ ಹಾಗೂ 43 ವರ್ಷದ ಚೌಡಪ್ಪ ಮೃತ ದಂಪತಿ. ದಂಪತಿಯ ಕಿರಿಯ ಪುತ್ರಿ ಮಧುಶ್ರೀಗೆ ಮದುವೆ ನಿಶ್ಚಯವಾಗಿದ್ದು, ಆದರೆ ಮದುವೆಗೂ ಮುನ್ನವೇ ಆಕೆ ತನ್ನ ಪ್ರಿಯಕರನ ಜೊತೆ ಓಡಿಹೋಗಿದ್ದಾಳೆ. ಈ ಹಿಂದೆ ಮೊದಲ ಮಗಳು ಕೂಡ ಓಡಿಹೋಗಿ ಪ್ರಿಕರನನ್ನು ಮದುವೆಯಾಗಿದ್ದಳು. ಈ ಹಿನ್ನೆಲೆಯಲ್ಲಿ ನೊಂದ ಅಪ್ಪ- ಅಮ್ಮ ನೇಣಿಗೆ ಶರಣಾಗಿದ್ದಾರೆ.

    ಮಗಳು ಮಧುಶ್ರೀ ಮದುವೆಗೆ ಬೇಕಾದ ಸಕಲ ಸಿದ್ಧತೆಗಳಲ್ಲಿ ದಂಪತಿ ತೊಡಗಿಕೊಂಡಿದ್ದರು. ಆದರೆ ಕಳೆದೆರಡು ದಿನಗಳಿಂದ ಮಗಳು ಮಧುಶ್ರೀ ಕಾಣೆಯಾಗಿದ್ದು, ಪ್ರೀತಿಸಿದ ಯುವಕನ ಜೊತೆ ಪರಾರಿಯಾಗಿ ವಿವಾಹವಾಗಿರುವ ವಿಷಯ ತಿಳಿದು ಮನನೊಂದಿದ್ದರು.

    ಕಳೆದ 3 ವರ್ಷಗಳ ಹಿಂದೆಯೂ ಸಹ ಮೊದಲ ಮಗಳು ಅನುಶ್ರೀ ಸಹ ಪ್ರೀತಿಸಿದ ಯುವಕನ ಜೊತೆ ಪರಾರಿಯಾಗಿ ಮದುವೆಯಾಗಿದ್ದಳು. ಮೂಲತಃ ನೇಕಾರ ವೃತ್ತಿಯಲ್ಲಿ ತೊಡಗಿಕೊಂಡು ಬೆಂಗಳೂರಿನ ಯಲಹಂಕದಲ್ಲಿ ವಾಸವಾಗಿದ್ದ ದಂಪತಿ ಶನಿವಾರ ಸ್ವಗ್ರಾಮ ಬೇವಿನಹಳ್ಳಿಗೆ ಆಗಮಿಸಿದ್ದಾರೆ. ಮಕ್ಕಳ ಈ ನಿರ್ಧಾರದಿಂದ ಅವಮಾನ ಆಗಿದೆ ಎಂದು ಮನನೊಂದಿದ್ದ ದಂಪತಿ ಗ್ರಾಮದ ಹೊರವಲಯದ ಜಮೀನಿನಲ್ಲಿನ ಹುಣಸೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಇಂದು ಬೆಳಗ್ಗೆ ಗ್ರಾಮಸ್ಥರು ಮೃತದೇಹ ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದು, ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.