Tag: ತಂಬಾಕು

  • ವಿಮಾನದಲ್ಲಿ ಗುಟ್ಕಾ ಕಲೆ – ಸೂಪರ್‌ಸ್ಟಾರ್‌ಗಳ ಕಾಲೆಳೆದ ನೆಟ್ಟಿಗರು

    ವಿಮಾನದಲ್ಲಿ ಗುಟ್ಕಾ ಕಲೆ – ಸೂಪರ್‌ಸ್ಟಾರ್‌ಗಳ ಕಾಲೆಳೆದ ನೆಟ್ಟಿಗರು

    ನವದೆಹಲಿ: ಕೇಂದ್ರ ಸರ್ಕಾರವು ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸಲು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿರುತ್ತದೆ. ಆದರೆ ಈ ಮಧ್ಯೆ ಭಾರತದಲ್ಲಿ ಅನೇಕ ಮಂದಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ.

    ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹಲವಾರು ಪ್ರಸಿದ್ಧ ಸ್ಮಾರಕಗಳ ಸುತ್ತಮುತ್ತ ಗುಟ್ಕಾ ಮತ್ತು ವೀಳ್ಯದೆಲೆ ಕಲೆಗಳನ್ನು ನೀವು ಬಹುಶಃ ನೋಡಿರಬಹುದು. ಆದರೆ ಈಗ ವಿಮಾನದಲ್ಲಿ ಉಗುಳಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:  ಮದುವೆ ಮನೆಯಲ್ಲೂ MES ಕಿರಿಕ್ – ಕನ್ನಡ ಸಾಂಗ್ ಹಾಕಿದ್ದಕ್ಕೆ ವಧು, ವರ, ಕನ್ನಡಿಗರ ಮೇಲೆ ಹಲ್ಲೆ

    ಛತ್ತೀಸ್‍ಗಢ ಕೇಡರ್‌ನ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು, ತಮ್ಮ ಟ್ವಿಟ್ಟರ್‌ನಲ್ಲಿ ವಿಮಾನದ ಕಿಟಕಿಯ ಕೆಳಗೆ ಗುಟ್ಕಾವನ್ನು ಉಗುಳಿರುವ ಕಲೆಯ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಯಾರೋ ತಮ್ಮ ಗುರುತನ್ನು ಬಿಟ್ಟು ಹೋಗಿದ್ದಾರೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    ಸದ್ಯ ವೈರಲ್ ಆಗುತ್ತಿರುವ ಈ ಫೋಟೋ ಹಿಂದಿರುವ ವ್ಯಕ್ತಿ ಯಾರು ಎಂಬ ಕುತೂಹಲ ಮೂಡಿದೆ. ಈ ಪೋಸ್ಟ್‌ಗೆ 16,000 ಕ್ಕೂ ಹೆಚ್ಚು ಲೈಕ್‍ಗಳು ಬಂದಿದ್ದು, ಕೆಲವು ಟ್ವಿಟ್ಟರ್ ಬಳಕೆದಾರರು ಸೂಪರ್‌ಸ್ಟಾರ್‌ಗಳ ತಂಬಾಕು ಸೇವನೆಯ ಜಾಹೀರಾತುಗಳನ್ನು ಟೀಕಿಸಿದ್ದಾರೆ. ಇದನ್ನೂ ಓದಿ: ದಾಳಿ ವೇಳೆ ಸಿಬಿಐ ನನ್ನ ವೈಯಕ್ತಿಕ ದಾಖಲೆಗಳನ್ನು ವಶಪಡಿಸಿಕೊಂಡಿದೆ – ಕಾರ್ತಿ ಚಿದಂಬರಂ ಆರೋಪ

    ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಅಧ್ಯಯನಗಳು ತಿಳಿಸಿದೆ. ಹಲವಾರು ಕಂಪನಿಗಳು ತಂಬಾಕು ಉತ್ಪನ್ನಗಳು ಆರೋಗ್ಯಕ್ಕೆ ಹಾನಿಕಾರಕ ಎಂದು ಪ್ಯಾಕ್‌ ಮೇಲೆ ನಮೂದಿಸಿರುತ್ತದೆ. ಜೊತೆಗೆ  ಚಲನಚಿತ್ರಗಳು ಪ್ರಾರಂಭವಾಗುವ ಮುನ್ನ ಚಿತ್ರಮಂದಿರಗಳಲ್ಲಿ ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು  ಪ್ರಸಾರ ಮಾಡುವ ಮೂಲಕ ಸಂದೇಶ ಸಾರಲಾಗುತ್ತದೆ.

  • ಕೋಟಿ ಕೊಡುತ್ತೇವೆ ಎಂದರೂ ಫ್ಯಾನ್ಸ್‌ಗಾಗಿ ಜಾಹೀರಾತು ನಿರಾಕರಿಸಿದ ಅಲ್ಲು ಅರ್ಜುನ್

    ಕೋಟಿ ಕೊಡುತ್ತೇವೆ ಎಂದರೂ ಫ್ಯಾನ್ಸ್‌ಗಾಗಿ ಜಾಹೀರಾತು ನಿರಾಕರಿಸಿದ ಅಲ್ಲು ಅರ್ಜುನ್

    ಸಿನಿ ಜಗತ್ತಿನಲ್ಲಿ ನಟ, ನಟಿಯರು ಸ್ಟಾರ್ ಆಗುತ್ತಿದ್ದಂತೆಯೇ ಅವರಿಗೆ ಸಿನಿಮಾ ಆಫರ್‌ಗಳ ಜೊತೆ, ಜೊತೆಗೆ ಜಾಹೀರಾತುಗಳಲ್ಲಿ ಅಭಿನಯಿಸಲು ಕೂಡ ಅವಕಾಶಗಳ ಸುರಿಮಳೆಯೇ ಆಗುತ್ತದೆ. ಎಷ್ಟೋ ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಟಿಯರು ನಟಿಸಿರುವ ಪ್ರಾಡಕ್ಟ್ ಎಂದು ಹೆಚ್ಚಾಗಿ ಉಪಯೋಗಿಸಲು ಬಯಸುತ್ತಾರೆ. ಇದರಿಂದ ಪ್ರಾಡಕ್ಟ್‌ಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚು ಡಿಮ್ಯಾಂಡ್ ಬರುವುದರ ಜೊತೆಗೆ ಕಲಾವಿದರಿಗೆ ಬೇಡಿಕೆ ಕೂಡ ಹೆಚ್ಚಾಗುತ್ತದೆ. ಅನೇಕ ತಾರೆಯರು ಒಂದೇ, ಒಂದು ಜಾಹೀರಾತಿನಲ್ಲಿ ಅಭಿನಯಿಸಲು ಕೋಟಿ, ಕೋಟಿ ಸಂಭಾವನೆಯನ್ನು ಪಡೆಯುವುದರ ಜೊತೆ ಜನಪ್ರಿಯತೆಯನ್ನು ಸಹ ಪಡೆಯುತ್ತಾರೆ. ಜಾಹೀರಾತಿನಿಂದ ಇಷ್ಟೆಲ್ಲಾ ಲಾಭವಿದ್ದರೂ ಟಾಲಿವುಡ್ ನಟ ಅಲ್ಲು ಅರ್ಜುನ್ ಮಾತ್ರ ದುಬಾರಿ ಸಂಭಾವನೆ ನೀಡುತ್ತೇವೆ ಎಂದರೂ ಜಾಹೀರಾತುವೊಂದಕ್ಕೆ ನೋ ಎಂದಿದ್ದಾರೆ.

    ಹೌದು, ಕೆಲವು ವರ್ಷಗಳ ಹಿಂದೆ ಮಾಲಿವುಡ್ ಬೆಡಗಿ ನಟಿ ಸಾಯಿ ಪಲ್ಲವಿ ಖ್ಯಾತ ಕಂಪನಿಯೊಂದರ ಫೇರ್‍ನೆಸ್ ಕ್ರೀಮ್ ಜಾಹೀರಾತಿನಲ್ಲಿ ನಟಿಸುವುದಿಲ್ಲ ಎಂದು ಹೇಳುವ ಮೂಲಕ 2 ಕೋಟಿ ರೂ. ಸಂಭಾವನೆಯನ್ನು ತಿರಸ್ಕರಿಸಿದ್ದರು. ಇದೀಗ ಅದೇ ರೀತಿ ಅಲ್ಲು ಅರ್ಜುನ್ ಅವರು ಫೇಮಸ್ ತಂಬಾಕು ಜಾಹೀರಾತಿನಲ್ಲಿ ಅಭಿನಯಿಸಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಭಾರತ ಶ್ರೇಷ್ಠ ವೈವಿಧ್ಯತೆ ದೇಶ, ಎಲ್ಲರ ಬಗ್ಗೆಯೂ ಸಹಿಷ್ಣುತೆ ಹೊಂದಬೇಕು – ಅಲಹಾಬಾದ್ ಹೈಕೋರ್ಟ್

    ತಂಬಾಕು ಬ್ರಾಂಡ್ ಅಂಬಾಸಿಡರ್ ಆಗಲು ಭಾರೀ ಮೊತ್ತವನ್ನು ನೀಡುತ್ತೇವೆ ಎಂದರೂ ವೈಯಕ್ತಿಕವಾಗಿ ತಾವು ತಂಬಾಕು ಸೇವಿಸದ ಕಾರಣ ಈ ಜಾಹೀರಾತಿನಲ್ಲಿ ಅಭಿನಯಿಸುವುದಿಲ್ಲ. ಅಲ್ಲದೇ ತಮ್ಮ ಅಭಿಮಾನಿಗಳು ಜಾಹೀರಾತನ್ನು ವೀಕ್ಷಿಸಿ ತಂಬಾಕು ಸೇವಿಸುವುದನ್ನು ಪ್ರಾರಂಭಿಸುತ್ತಾರೆ. ತಂಬಾಕು ವ್ಯಸನರಾಗಬಹುದು ಹೀಗಾಗಿ ಈ ಜಾಹೀರಾತುವಿನಲ್ಲಿ ಬಿಲ್‍ಕುಲ್ ಅಭಿನಯಿಸುವುದಿಲ್ಲ ಎಂದು ದೂರಸರಿದಿದ್ದಾರೆ ಎನ್ನಲಾಗುತ್ತಿದೆ. ಅಲ್ಲು ಅರ್ಜುನ್ ಅವರ ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಕುಪ್ವಾರದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶ

    ಸಾಮಾನ್ಯವಾಗಿ ಯಾವುದೇ ಸಿನಿಮಾ ಪ್ರಾರಂಭಕ್ಕೂ ಮುನ್ನ ಧೂಮಪಾನ, ಮದ್ಯಪಾನ, ತಂಬಾಕು ಸೇವೆನೆ ಆರೋಗ್ಯಕ್ಕೆ ಹಾನಿಕಾರಕ ಹಾಗಾಗಿ ಇವುಗಳನ್ನು ಯಾರು ಸೇವಿಸಬಾರದು ಎಂಬ ಸಂದೇಶವನ್ನು ನೀಡಲಾಗುತ್ತದೆ. ಸದ್ಯ ಭಾರತೀಯ ಚಲನಚಿತ್ರೋದ್ಯಮದಲ್ಲಿ ಈ ಬದಲಾವಣೆ ಬಹಳ ಒಳ್ಳೆಯದಾಗಿದೆ. ಆದರೆ ಅನೇಕ ಸ್ಟಾರ್ ನಟರು ಇಂತಹ ಜಾಹೀರಾತುವಿನಲ್ಲಿ ಅಭಿನಯಿಸಲು ಹಿಂಜರಿಯದೇ ಇರುವುದನ್ನು ಸಹ ನಾವು ಕಾಣಬಹುದಾಗಿದೆ.

  • ನಿಷೇಧಿತ ತಂಬಾಕುಗಳ ಜಾಹಿರಾತಿಗೆ ಸಾಮಾಜಿಕ ಜಾಲತಾಣವೇ ವೇದಿಕೆ

    ನಿಷೇಧಿತ ತಂಬಾಕುಗಳ ಜಾಹಿರಾತಿಗೆ ಸಾಮಾಜಿಕ ಜಾಲತಾಣವೇ ವೇದಿಕೆ

    ಬೆಂಗಳೂರು: ತಂಬಾಕು ಸೇವನೆ ಹಾಗೂ ಜಾಹೀರಾತಿಗೆ ಕಡಿವಾಣವಿದ್ದರೂ ಸಾಮಾಜಿಕ ಜಾಲತಾಣದಲ್ಲಿ ತಂಬಾಕು ಸೇವನೆ ಹಾಗೂ ಮಾರಾಟದ ಬಗ್ಗೆ ರಾಜರೋಷವಾಗಿ ಜಾಹೀರಾತು ನೀಡಲಾಗುತ್ತಿದೆ ಎಂದು ನ್ಯಾಷನಲ್ ಲಾ ಸ್ಕೂಲ್ ಹಾಗೂ ಕನ್ಸೂಮರ್ ಲಾ ಆಂಡ್ ಪ್ರಾಕ್ಟೀಸಸ್ ಸಹಯೋಹದಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

    2019ರಲ್ಲಿ ಎಲೆಕ್ಟ್ರಾನಿಕ್ ನಿಕೋಟಿನ್ ಡೆಲಿವೆರಿ ಸಿಸ್ಟಮ್ಸ್ (ಇಎನ್‍ಡಿಎಸ್) ಮತ್ತು ಹೀಟೆಡ್ ತಂಬಾಕು ಪದಾರ್ಥ ಇವುಗಳ ಮೇಲೆ ಕೇಂದ್ರ ಸರ್ಕಾರ ಕಾನೂನಾತ್ಮಕವಾಗಿ ನಿಷೇಧ ಹೇರಿದೆ. ಈ ಬಗ್ಗೆ ಎಲ್ಲಿಯೂ ಜಾಹೀರಾತು ನೀಡುವಂತಿಲ್ಲ. ಆದರೆ ಸಾಮಾಜಿಕ ಜಾಲತಾಣವಾದ ಫೇಸ್‍ಬುಕ್, ಟ್ವಿಟ್ಟರ್, ಇನ್‍ಸ್ಟಾಗ್ರಾಮ್, ಟೆಲಿಗ್ರಾಮ್‍ಗಳಲ್ಲಿ ಜಾಹಿರಾತು ನೀಡಲಾಗುತ್ತಿದೆ ಎನ್ನುವುದು ಸಮೀಕ್ಷೆ ಮೂಲಕ ತಿಳಿದು ಬಂದಿದೆ. ಇದನ್ನೂ ಓದಿ : ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಅಪ್ಡೇಟ್ : ಯಾವಾಗ, ಏನು ಅಂತ ನೋಡ್ಕೊಂಡ್ ಬಿಡಿ

    ನ್ಯಾಷನಲ್ ಲಾ ಸ್ಕೂಲ್ ಇಂಡಿಯಾ ಆನ್‍ಲೈನ್ ಮೂಲಕ ಈ ಸಮೀಕ್ಷೆ ನಡೆಸಲಾಗಿದೆ. ಒಟ್ಟು 23 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು, ವಿದ್ಯಾರ್ಥಿಗಳ ಬಾರ್ ಅಸೋಸಿಯೇಷನ್‍ನ ಒಟ್ಟು 4,049 ವಿದ್ಯಾರ್ಥಿಗಳನ್ನು ಈ ಸಮೀಕ್ಷೆಯಲ್ಲಿ ಒಳಪಡಿಸಲಾಗಿತ್ತು.

    ಶೇ.46 ರಷ್ಟು ಪುರುಷರು ಹಾಗೂ ಶೇ.51 ರಷ್ಟು ಮಹಿಳೆಯರು ಈ ಅಧ್ಯಯನದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಸಮೀಕ್ಷೆ ಪ್ರಕಾರ ಶೇ. 38.1 ರಷ್ಟು ಕರ್ನಾಟಕದಲ್ಲಿ ನಿಷೇಧಿತ ತಂಬಾಕು ಸೇವನೆ ಮಾರಾಟದಲ್ಲಿದ್ದು, ಕರ್ನಾಟಕವೇ ಮುಂಚೂಣಿ ರಾಜ್ಯವಾಗಿದೆ. ಮಹಾರಾಷ್ಟ್ರ ಶೇ.12.4, ತಮಿಳುನಾಡು ಶೇ.9.3, ಉತ್ತರ ಪ್ರದೇಶ ಶೇ.6.7 ಹಾಗೂ ಕೇರಳ ಶೇ.6.5 ರಷ್ಟು ಪ್ರಮಾಣದಲ್ಲಿ ಚಾಲ್ತಿಯಲ್ಲಿವೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ಪ್ರಯತ್ನ ನಿಲ್ಲಲ್ಲ: ಮೋದಿ

    ಅಧ್ಯಯನದ ಕುರಿತು ಮಾತನಾಡಿದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ಪ್ರೋಫೆಸರ್. ಅಶೋಕ್ ಪಾಟೀಲ್, ಭಾರತದಲ್ಲಿ ಇ-ಸಿಗರೇಟುಗಳನ್ನು ಎಲೆಕ್ಟ್ರಾನಿಕ್ ಪ್ಲಾಟ್‍ಫಾರಂಗಳ ಮೂಲಕ ಹೆಚ್ಚಿನ ಜಾಹಿರಾತಿಗೆ ಅವಕಾಶ ಸಿಕ್ಕಿದೆ. ನಿಷೇಧಿತ ಇ-ಸಿಗರೇಟು ಹೆಚ್ಚಾಗಿ ಟೆಲಿಗ್ರಾಂನಲ್ಲಿ ಜಾಹಿರಾತು ನೀಡಲಾಗುತ್ತಿದೆ ಎಂದು ಶೇ.60ರಷ್ಟು ಮಂದಿ ಹೇಳಿದ್ದಾರೆ ಎಂದು ತಿಳಿಸಿದರು.

    ಉಳಿದಂತೆ ವಾಟ್ಸಪ್‍ನಲ್ಲಿ ಶೇ.22.6, ಫೇಸ್‍ಬುಕ್‍ನಲ್ಲಿ ಶೇ.17.3, ಟಿಕ್‍ಟಾಕ್‍ನಲ್ಲಿ ಶೇ.14.3 ಹಾಗೂ ಟ್ವಿಟ್ಟರ್‍ನಲ್ಲಿ ಶೇ.6.8 ರಷ್ಟು ಜಾಹಿರಾತು ಕಂಡಿರುವುದಾಗಿ ಸಮೀಕ್ಷೆಗೆ ಒಳಪಟ್ಟವರು ಅಭಿಪ್ರಾಯ ಪಟ್ಟಿದ್ದಾರೆ ಎಂದರು. ಸರ್ಕಾರವೂ ನಿಷೇಧದ ಬಳಿಕ ಯುವ ಜನತೆಯನ್ನು ದಾರಿ ತಪ್ಪಿಸಲು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡುವವರ ವಿರುದ್ಧ ಹದ್ದಿನ ಕಣ್ಣಿಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

  • ಆಂಧ್ರದಲ್ಲಿ ಒಂದು ವರ್ಷ ಗುಟ್ಕಾ, ಪಾನ್ ಮಸಾಲ ನಿಷೇಧ

    ಆಂಧ್ರದಲ್ಲಿ ಒಂದು ವರ್ಷ ಗುಟ್ಕಾ, ಪಾನ್ ಮಸಾಲ ನಿಷೇಧ

    ವಿಜಯವಾಡ: ತಂಬಾಕು, ನಿಕೊಟಿನ್ ಹಾಗೂ ಇತರೆ ತಂಬಾಕಿನ ಉತ್ಪನ್ನಗಳ ತಯಾರಿಕೆಯಾದ ಗುಟ್ಕಾ ಹಾಗೂ ಪಾನ್ ಮಸಾಲಗಳ ಮಾರಾಟವನ್ನು ಆಂಧ್ರಪ್ರದೇಶ ಸರ್ಕಾರ ನಿಷೇಧಿಸಿದೆ.

    ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ ಅಡಿಯಲ್ಲಿ ಈ ಕಾನೂನನ್ನು ಜಾರಿಗೆ ತರಲಾಗಿದೆ. ಇನ್‌ಸ್ಟಿಟ್ಯೂಟ್ ಆಫ್ ಪ್ರಿವೆಂಟಿವ್ ಮೆಡಿಸಿನ್, ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳು ಮತ್ತು ಆರೋಗ್ಯ, ಆಹಾರ ಸುರಕ್ಷತಾ ನಿರ್ದೇಶನಾಲಯದ ಆಯುಕ್ತರು ಈ ಆದೇಶವನ್ನು ಹೊರಡಿಸಿದ್ದಾರೆ.

    ಇಂದಿನಿಂದ ಒಂದು ವರ್ಷದವರೆಗೆ ಈ ನಿಯಮವೂ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ತಿಳಿಸಿದೆ. ರಾಜ್ಯ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಪದಾರ್ಥಗಳನ್ನು ಹೊಂದಿರುವ ಗುಟ್ಕಾ, ಪಾನ್ ಮಸಾಲ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟದಿಂದ ಅಪಾರ ಹಾನಿಯಾಗುತ್ತದೆ. ಅದನ್ನು ತಿನ್ನುವುದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಲೆಗಳು ಬರುವ ಸಾಧ್ಯತೆಯಿದ್ದು, ಇದರಿಂದಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಯುಎಸ್, ಭಾರತದ 900ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದ CEO

    ತಂಬಾಕು ಉತ್ಪನ್ನಗಳನ್ನು ಜಗಿಯುವ ತಂಬಾಕು, ಖೈನಿ, ಖರ್ರಾ, ಪರಿಮಳಯುಕ್ತ ತಂಬಾಕು ಹೀಗೆ ವಿವಿಧ ಬಗೆಯಲ್ಲಿ ಪ್ಯಾಕ್ ಮಾಡಲಾಗುವ ತಂಬಾಕು ಮಾರಾಟವನ್ನು ಇಡೀ ಆಂಧ್ರಪ್ರದೇಶದಲ್ಲಿ ಒಂದು ವರ್ಷಗಳ ಕಾಲ ನಿಷೇಧಿಸಲಾಗಿದೆ.

  • ಮದುವೆಯಲ್ಲಿ ತಂಬಾಕು ಸೇವಿಸುತ್ತಿದ್ದ ವರನಿಗೆ ವಧುವಿನಿಂದ ಕಪಾಳಮೋಕ್ಷ

    ಮದುವೆಯಲ್ಲಿ ತಂಬಾಕು ಸೇವಿಸುತ್ತಿದ್ದ ವರನಿಗೆ ವಧುವಿನಿಂದ ಕಪಾಳಮೋಕ್ಷ

    ವಿವಾಹ ಸಮಯದಲ್ಲಿ ತಂಬಾಕು ಸೇವಿಸುತ್ತಿದ್ದ ವರನಿಗೆ ವಧು ಎಲ್ಲರ ಮುಂದೆ ಕಪಾಳ ಮೋಕ್ಷ ಮಾಡಿರುವ ವೀಡಿಯೋವೊಂದು ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    bride

    ಪ್ರಸ್ತುತ ಮದುವೆ ಸೀಸನ್ ಆಗಿರುವುದರಿಂದ ಹಲವಾರು ಮದುವೆಯ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದೆ. ಮದುವೆ ಸಮಾರಂಭದ ವೇಳೆ ನಡೆಯುವ ಹಲವಾರು ಹಾಸ್ಯಮಯ ಮತ್ತು ಇಂಟ್ರೆಸ್ಟಿಂಗ್ ದೃಶ್ಯಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಸದ್ಯ ವಿವಾಹ ನಡೆಯುತ್ತಿದ್ದ ವೇಳೆ ತಂಬಾಕು ಸೇವಿಸುತ್ತಿದ್ದ ವರನಿಗೆ ವಧು ಹೊಡೆದು ತಂಬಾಕನ್ನು ಉಗುಳಿಸಿದ್ದಾರೆ. ಇದನ್ನೂ ಓದಿ:ಜನರ ಮರ್ಯಾದೆಯನ್ನೆ ಬಂಡವಾಳ ಮಾಡಿಕೊಂಡಿದ್ದ ಗ್ಯಾಂಗ್ ರೇಪ್ ಕಿರಾತಕರು

    ಈ ವೀಡಿಯೋವನ್ನು ನಿರಂಜನ್ ಮಹಾಪಾತ್ರಾ ಎಂಬವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ಮಂಟಪದಲ್ಲಿ ವಧು, ವರ ಇಬ್ಬರು ಕುಳಿತುಕೊಂಡಿರುತ್ತಾರೆ. ಈ ವೇಳೆ ವಧು ಪಂಡಿತರನ್ನು ಏನೋ ಪ್ರಶ್ನೆ ಕೇಳುತ್ತಾರೆ. ಅದಕ್ಕೆ ಪಂಡಿತರು ಉತ್ತರಿಸಿದಾಗ ಆತನಿಗೆ ಹೊಡೆಯುತ್ತಾರೆ. ಬಳಿಕ ಕೋಪದಿಂದ ಪಕ್ಕಕ್ಕೆ ತಿರುಗಿ ನೋಡಿದಾಗ ವರ ತಂಬಾಕು ಅಗಿಯುತ್ತಿರುವುದನ್ನು ಕಂಡು ವರನ ಕಪಾಳಕ್ಕೆ ಹೊಡೆದು ಅದನ್ನು ಉಗುಳಲು ಹೇಳುತ್ತಾರೆ. ಕೂಡಲೇ ಗಾಬರಿಯಿಂದ ವರ ತಂಬಾಕನ್ನು ಉಗುಳಿ ಮತ್ತೆ ವಧುವಿನ ಪಕ್ಕಕ್ಕೆ ಬಂದು ಭಯದಿಂದ ಕುಳಿತುಕೊಳ್ಳುತ್ತಾನೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದ್ದು, ನೋಡುಗರಿಗೆ ಸಖತ್ ನಗು ತರಿಸುತ್ತಿದೆ. ಇದನ್ನೂ ಓದಿ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.1 ರಿಂದ ದ್ವಿತೀಯ ಪಿಯುಸಿ ಆರಂಭಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್

  • ಅಕ್ರಮ ತಂಬಾಕು ಶೆಡ್ ಮೇಲೆ ದಾಳಿ – 3 ಲಕ್ಷ ಮೌಲ್ಯದ ವಸ್ತುಗಳು ವಶ

    ಅಕ್ರಮ ತಂಬಾಕು ಶೆಡ್ ಮೇಲೆ ದಾಳಿ – 3 ಲಕ್ಷ ಮೌಲ್ಯದ ವಸ್ತುಗಳು ವಶ

    ವಿಜಯಪುರ: ಅಕ್ರಮವಾಗಿ ತಂಬಾಕು ಮಿಶ್ರಿತ ಮಾವಾ ತಯಾರಿಸುತ್ತಿದ್ದ ಶೆಡ್ ಮೇಲೆ ಚಡಚಣ ಪೊಲೀಸರು ದಾಳಿ ನಡೆಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

    ಈ ಸಂಬಂಧ 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದಾಳಿ ವೇಳೆ 3.87.300 ಲಕ್ಷ ರೂ. ಮೌಲ್ಯದ ಕಚ್ಚಾ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಬಂಧಿತರನ್ನು ಚಡಚಣ ಪಟ್ಟಣದ ಹುಸೇನ್ ಸಾಬ್ ನದಾಫ್, ಗಣೇಶ್ ಮೋರೆ ಬಂಡು ಬುರುಡ, ಹಾವಿನಾಳ ಗ್ರಾಮದ ಪರಶುರಾಮ್ ವಾಘಮೋರೆ, ಚಡಚಣದ ರಾಜು ವಾಘಮೋರೆ, ಗೌಸ ಕಾಮಲೆ ಹಾಗೂ ಶಂಕರ್ ಬುರುಡ ಎಂದು ಗುರುತಿಸಲಾಗಿದೆ.

    ಆರೋಪಿಗಳು ಚಡಚಣ ಪಟ್ಟಣದ ಖೂಬಾ ಮಸೀದಿ ಬಳಿಯ ಶೆಡ್‍ನಲ್ಲಿ ಸುಣ್ಣದ ನೀರು, ತಂಬಾಕು ಹಾಗೂ ಅಡಕೆ ಚೂರು ಬಳಸಿ ಯಂತ್ರದ ಮೂಲಕ ಕಲಬೆರಕೆ ಮಾವಾ ತಯಾರಿಸಿ ಮಾರಾಟ ಮಾಡುತ್ತಿವುದಾಗಿ ಖಚಿತ ಮಾಹಿತಿ ಮೇರೆಗೆ ಚಡಚಣ ಪೊಲೀಸರು ದಾಳಿ ನಡೆಸಿದ್ದಾರೆ.

    ದಾಳಿ ವೇಳೆ ಪೊಲೀಸರು ಆರೋಪಿಗಳಿಂದ 3 ಲಕ್ಷ ರೂ. ಬೆಲೆ ಬಾಳುವ 30 ಕೆ.ಜಿ 50 ಚೀಲ ಅಡಿಕೆ ಚೂರು, 33 ಸಾವಿರ ಮೌಲ್ಯದ 10 ಕೆ.ಜಿ ಸುಣ್ಣ ಸೇರಿ ತಂಬಾಕು ಚೀಟುಗಳು, ಮಾವಾ ಪ್ಯಾಕೆಟ್, ಮಾವಾ ತಯಾರಿಸುವ ಯಂತ್ರ, 6 ಮೊಬೈಲ್ ಸೇರಿ ಒಟ್ಟು 3.87.300 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

  • ದಿಢೀರ್ ಬಂತು 15 ಸಾವಿರಕ್ಕೂ ಹೆಚ್ಚು ಟಪಾಲ್ – ಕಂಗಲಾದ ವಿಧಾನಸಭೆ ಸಿಬ್ಬಂದಿ

    ದಿಢೀರ್ ಬಂತು 15 ಸಾವಿರಕ್ಕೂ ಹೆಚ್ಚು ಟಪಾಲ್ – ಕಂಗಲಾದ ವಿಧಾನಸಭೆ ಸಿಬ್ಬಂದಿ

    ಬೆಂಗಳೂರು: ಸಿಎಂ, ಮೂವರು ಸಚಿವರು, ನಾಲ್ವರು ಅಧಿಕಾರಿಗಳಿಗೆ ಬಂದಿರುವ ಟಪಾಲ್‍ಗಳನ್ನು ನೋಡಿ ವಿಧಾನಸಭೆ ಸಿಬ್ಬಂದಿ ಕಂಗಾಲಾಗಿದ್ದಾರೆ.

    ಒಂದಲ್ಲ ಎರಡಲ್ಲ ಬರೋಬ್ಬರಿ 15 ಸಾವಿರಕ್ಕೂ ಹೆಚ್ಚು ಪತ್ರಗಳು ಬಂದಿವೆ. ಈ ಟಪಾಲ್‍ಗಳನ್ನು ನೋಡಿ ಸಿಬ್ಬಂದಿ ಗಾಬರಿಯಾಗಿದ್ದಾರೆ. ಒಂದೇ ಕವರ್, ಒಂದೇ ವಿಷಯ ಹೊಂದಿರುವ ಸಾವಿರಾರು ಪತ್ರಗಳಿವೆ. ಸಿಎಂ ಕಚೇರಿಗೂ 5 ಸಾವಿರ ಟಪಾಲ್‍ಗಳು ಬಂದಿವೆ.

    ತಂಬಾಕು ಉತ್ಪನ್ನ ನಿಷೇಧ ಕಾಯ್ದೆ ಜಾರಿಗೊಳಿಸದಂತೆ ಸಾವಿರಾರು ಪತ್ರಗಳ ಮೂಲಕ ಒತ್ತಡ ಹೇರಲಾಗುತ್ತಿದೆ. ಭ್ರಷ್ಟ ಅಧಿಕಾರಿಗಳು ಬೆಂಗಳೂರಿನ ಅಂಗಡಿ ಮುಂಗಟ್ಟುಗಳಿಗೆ ದೌರ್ಜನ್ಯ ಮಾಡ್ತಿದ್ದಾರೆ. ತಂಬಾಕು ಸಿಗರೇಟ್ ನಿಷೇಧದ ಹೆಸರಲ್ಲಿ ದೌರ್ಜನ್ಯ ಎಸಗಿ ಹಣ ವಸೂಲಿ ಮಾಡ್ತಿದ್ದಾರೆ. ಇದನ್ನು ನಿಯಂತ್ರಿಸುವಂತೆ ಆಗ್ರಹಿಸಿ ಪತ್ರ ಚಳುವಳಿ ಆರಂಭಿಸಿದ್ದಾರೆ. ಅಂಗಡಿ ಮಾಲೀಕರು ಸಿಎಂ ಯಡಿಯೂರಪ್ಪ, ಭೈರತಿ ಬಸವರಾಜ್, ಸುಧಾಕರ್ ಸೇರಿ ಅಧಿಕಾರಿಗಳಿಗೂ ಪತ್ರ ಬರೆದಿದ್ದಾರೆ.

    ಟಪಾಲ್‍ನ ವಿಚಾರ ನೋಡಿ ಸಚಿವರ ಕಚೇರಿ ಸಿಬ್ಬಂದಿಗಳು ತಲೆ ಕೆಡಿಸಿಕೊಂಡಿದ್ದಾರೆ. ಬೆಂಗಳೂರಿನ ಅಂಗಡಿ ಮುಂಗಟ್ಟುಗಳ ಮಾಲೀಕರಿಂದ ಸಚಿವರು ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ. ಸಿಗರೇಟ್ ತಂಬಾಕು ಉತ್ಪನ್ನ ಮಾರಾಟ ಮಾಡುವ ಸ್ಥಳಗಳ ನಿಯಂತ್ರಣ ಕಾಯ್ದೆ ವಿರೋಧಿಸಿ ಅಂಗಡಿ ಮುಂಗಟ್ಟು ಮಾಲೀಕರು ಪತ್ರ ಬರೆದಿದ್ದಾರೆ. ಬರೋಬ್ಬರಿ 5 ಸಾವಿರಕ್ಕೂ ಹೆಚ್ಚು ಅಂಗಡಿ ಮಾಲೀಕರಿಂದ 15 ಸಾವಿರಕ್ಕೂ ಹೆಚ್ಚು ಪತ್ರಗಳನ್ನು ಬರೆದಿದ್ದಾರೆ.

    ಭಾರೀ ಸಂಖ್ಯೆಯಲ್ಲಿ ಬಂದ ಪೋಸ್ಟ್‍ಗಳನ್ನು ನೋಡಿ, ನಮ್ಮ ಬಳಿ ಈ ಟಪಾಲ್‍ಗಳನ್ನು ನೋಡಲು ಸಾಧ್ಯವಿಲ್ಲ. ನೀವು ಬಂದು ತೆಗೆದುಕೊಂಡು ಹೋಗಿ ವಿಧಾನಸಭೆಯ ಸಿಬ್ಬಂದಿ ಸಚಿವರ ಸಿಬ್ಬಂದಿಗೆ ಕರೆ ಮಾಡಿ ತಿಳಿಸಿದ್ದಾರೆ.

  • ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದ್ರೆ ದಂಡದ ಜೊತೆಗೆ ಕೇಸ್ ದಾಖಲು

    ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದ್ರೆ ದಂಡದ ಜೊತೆಗೆ ಕೇಸ್ ದಾಖಲು

    ಬೆಂಗಳೂರು: ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಉಗುಳುವುದು ಕಾನೂನು ರೀತಿ ಅಪರಾಧವಾಗಿದೆ. ಒಂದು ವೇಳೆ ಉಗುಳಿದ್ದು ಕಂಡು ಬಂದರೆ ಅಂತವರಿಗೆ ದಂಡದ ಜೊತೆ ಐಪಿಸಿ ಸೆಕ್ಷನ್ ಅಡಿ ಕೇಸ್ ದಾಖಲು ಮಾಡಿಕೊಳ್ಳಲಾಗುತ್ತದೆ ಎಂದು ಸರ್ಕಾರ ಆದೇಶಿಸಿದೆ.

    ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಶ್ರೀರಾಮುಲು, ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಇಂದಿನಿಂದಲೇ ನಿಷೇಧವಾಗಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಐಪಿಸಿ ಸೆಕ್ಷನ್ 188, 268, 269, 270 ರ ಅಡಿ ಕೇಸ್ ದಾಖಲು ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

    ಪ್ರತೀ ವರ್ಷ ಮೇ 31 ವಿಶ್ವ ತಂಬಾಕು ರಹಿತ ದಿನಾಚರಣೆಯಾಗಿರುತ್ತದೆ. ಈ ದಿನವಾದ ಇಂದು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿಯುವುದು, ಉಗುಳುವುದನು ನಿಷೇಧಗೊಳಿಸಿ ಆದೇಶ ಮಾಡಲಾಗಿದೆ ಎಂದು ಸಚಿವರು ಘೋಷಣೆ ಮಾಡಿದ್ದಾರೆ.

  • ಎಣ್ಣೆ ಮುಗಿತು ಈಗ ತಂಬಾಕಿಗೂ ಕ್ಯೂ!

    ಎಣ್ಣೆ ಮುಗಿತು ಈಗ ತಂಬಾಕಿಗೂ ಕ್ಯೂ!

    ಬಳ್ಳಾರಿ: ನಾಲ್ಕನೇ ಹಂತದ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಎಣ್ಣೆ ಆಯ್ತು ಈಗ ಜಗಿಯುವ ತಂಬಾಕು ಖರೀದಿಗೂ ಭಾರೀ ಪ್ರಮಾಣದ ಕ್ಯೂ ನಿಂತುಕೊಂಡು ಖರೀದಿಸಿದ್ದಾರೆ.

    ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿ ಜಗಿಯುವ ತಂಬಾಕು ಉತ್ಪನ್ನಗಳಾದ ವಿಮಲ್, ಗುಟ್ಕಾ ಡೀಲರ್ ಅಂಗಡಿಗಳ ಮುಂದೆ ಇಂದು ನೂರಾರು ಮಂದಿ ನಿಂತಿದ್ದರು. ಬೆಳಗ್ಗೆ 5 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತ ಜನರು ಗುಟ್ಕಾ ಖರೀದಿಸಿದ್ದಾರೆ.

    ಒಬ್ಬರಿಗೆ 2 ಪಾಕೆಟ್ ಮಾತ್ರ ವಿತರಿಸಲಾಗುತ್ತಿದ್ದು, ಒಂದು ಪಾಕೆಟ್‍ಗೆ ರೂ. 125ರಂತೆ ಮಾರಾಟ ಮಾಡಲಾಗುತ್ತಿದೆ. ಚಿಲ್ಲರೆ ಅಂಗಡಿಗಳಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಗುಟ್ಕಾ ಪ್ರಿಯರು ನೇರವಾಗಿ ಹೋಲ್‍ಸೇಲ್ ಡೀಲರ್ ಬಳಿಯೇ ಹೋಗಿ ಜಗಿಯುವ ತಂಬಾಕು ಖರೀದಿಸಿದ್ದಾರೆ.

    ಲಾಕ್‍ಡೌನ್ ಬಳಿಕ ಗುಟ್ಕಾ, ತಂಬಾಕು ಉತ್ಪನ್ನಗಳ ಮಾರಾಟವನ್ನು ಮೂರ್ನಾಲ್ಕು ಪಟ್ಟು ಹೆಚ್ಚಿನ ದರದಲ್ಲಿ ಡೀಲರ್ ಗಳು ಮಾರಾಟಕ್ಕೆ ಮುಂದಾಗಿದ್ದರು. ಸದ್ಯ ನಿಗದಿತ ದರದಲ್ಲಿ ಮಾರಾಟವಾಗುತ್ತಿದ್ದರೂ ಗ್ರಾಹಕರು ಸಾಮಾಜಿಕ ಅಂತರ, ಮುಂಜಾಗ್ರತಾ ಕ್ರಮಕೈಗೊಳ್ಳದೆ ಕ್ಯೂನಲ್ಲಿ ನಿಂತಿದ್ದರು.

  • ತಂಬಾಕು ನಿಯಂತ್ರಣಕ್ಕಾಗಿ ವಿದ್ಯಾರ್ಥಿಗಳಿಂದ ಗುಲಾಬಿ ಆಂದೋಲನ

    ತಂಬಾಕು ನಿಯಂತ್ರಣಕ್ಕಾಗಿ ವಿದ್ಯಾರ್ಥಿಗಳಿಂದ ಗುಲಾಬಿ ಆಂದೋಲನ

    ತುಮಕೂರು: ಶಾಲಾ ಕಾಲೇಜುಗಳ ಸುತ್ತಮುತ್ತ ತಂಬಾಕು ಮಾರಾಟ ಹಾಗೂ ಸೇವನೆ ಮಾಡಬೇಡಿ ಎಂದು ಸ್ವತಃ ವಿದ್ಯಾರ್ಥಿಗಳೇ ವಿನೂತನವಾಗಿ ಗುಲಾಬಿ ಆಂದೋಲನ ನಡೆಸಿದ್ದಾರೆ.

    ಅಂಗಡಿ ಮಾಲೀಕರಿಗೆ, ಗ್ರಾಹಕರಿಗೆ ಗುಲಾಬಿ ಹೂವು ಕೊಟ್ಟು ತಂಬಾಕು ಮಾರಾಟ ಹಾಗೂ ಸೇವನೆ ಮಾಡಬೇಡಿ ಎಂದು ವಿಭಿನ್ನವಾಗಿ ಮನವಿ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆ ಆರೋಗ್ಯ ಇಲಾಖೆಯ ತಂಬಾಕು ನಿಯಂತ್ರಣ ಕೋಶದಿಂದ ಈ ವಿಶೇಷ ಗುಲಾಬಿ ಆಂದೋಲನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಇದರಲ್ಲಿ ನೂರಾರು ವಿದ್ಯಾರ್ಥಿಗಳು ಕೈಜೋಡಿಸಿದರು. ಶಾಲಾ-ಕಾಲೇಜಿನ 100 ಮೀಟರ್ ಸುತ್ತಮುತ್ತ ಸಿಗರೇಟ್, ಗುಟ್ಕಾದಂತಹ ತಂಬಾಕು ಉತ್ಪನಗಳ ಮಾರಾಟ ಮತ್ತು ಸೇವನೆ ಮಾಡಬೇಡಿ ಎಂದು ಪ್ರೀತಿಪೂರ್ವಕವಾಗಿ ಮನವಿ ಮಾಡಿಕೊಂಡರು.

    ಈ ವಿನೂತನ ಗುಲಾಬಿ ಆಂದೋಲನದಲ್ಲಿ ಪಾಲ್ಗೊಂಡ ನೂರಾರು ವಿದ್ಯಾರ್ಥಿಗಳು ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಹೋಗಿ, ತಂಬಾಕು ಸೇವನೆಯಿಂದಾಗುವ ತೊಂದರೆಗಳ ಬಗ್ಗೆ ಅರಿವು ಮೂಡಿಸಿದರು. ಜಿಲ್ಲಾ ಆರೋಗ್ಯ ಅಧಿಕಾರಿ ಚಂದ್ರಕಲಾ, ತಂಬಾಕು ನಿಯಂತ್ರಣ ಅಧಿಕಾರಿ ಡಾ.ಮೋಹನ್ ದಾಸ್ ಸೇರಿದಂತೆ ಹಲವು ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.