Tag: `ತತ್ಸಮ ತದ್ಭವ’

  • ಅತ್ತಿಗೆಯ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಧ್ರುವ ಸರ್ಜಾ : ‘ತತ್ಸಮ ತದ್ಭವ’ ಟ್ರೈಲರ್ ರಿಲೀಸ್

    ಅತ್ತಿಗೆಯ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಧ್ರುವ ಸರ್ಜಾ : ‘ತತ್ಸಮ ತದ್ಭವ’ ಟ್ರೈಲರ್ ರಿಲೀಸ್

    ಮೇಘನಾ ರಾಜ್ ಸರ್ಜಾ (Meghana Raj) ಹಲವು ವರ್ಷಗಳ ನಂತರ ನಟಿಸಿರುವ ‘ತತ್ಸಮ ತದ್ಭವ’ (Tatsama Tadbhava) ಚಿತ್ರದ ಟ್ರೈಲರ್ (Trailer) ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ (Dhruv Sarja) ಹಾಗೂ ಡಾಲಿ ಧನಂಜಯ (Dhananjay) ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೈಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಯಶಸ್ಸನ್ನು ಹಾರೈಸಿದರು. ಹಿರಿಯ ನಟ ಸುಂದರರಾಜ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.

    ನಾನು ಸಿನಿಮಾದಲ್ಲಿ ನಟಿಸಬಾರದು ಎಂದು ನಿರ್ಧರಿಸಿದಾಗ ಬಂದ ಸಿನಿಮಾವಿದು ಎಂದು ಮಾತು ಆರಂಭಿಸಿದ ಮೇಘನರಾಜ್ ಸರ್ಜಾ, ಈ ಚಿತ್ರ ಆರಂಭವಾಗಲು ಕಾರಣ ನನ್ನ ಪತಿ ಚಿರು. ಅವರಿಗೆ ಪ್ರಜ್ವಲ್ (Prajwal Devaraj) ಹಾಗೂ ಪನ್ನಗ ಅವರ ಜೊತೆ ಸೇರಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಬೇಕೆಂಬ ಆಸೆಯಿತ್ತು. ಆನಂತರ ಪನ್ನಗಾಭರಣ ಈ ಚಿತ್ರದ ಕಥೆಯನ್ನು ಹೇಳಲು ನಿರ್ದೇಶಕರನ್ನು ಮನೆಗೆ ಕಳುಹಿಸಿದರು. ಕಥೆ ಇಷ್ಟವಾಯಿತು. ಅಭಿನಯಿಸಿದ್ದೇನೆ. ಪನ್ನಗಾಭರಣ, ಸ್ಫೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಪ್ರಜ್ವಲ್ ಅಭಿನಯಿಸಿದ್ದಾರೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ನಾನು ಈ ಚಿತ್ರ ಮಾಡಲು ಸಹಕಾರ ನೀಡಿದ ನನ್ನ ಎರಡು ಕುಟುಂಬಕ್ಕೆ ಧನ್ಯವಾದ. ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ವಿಶೇಷ ಧನ್ಯವಾದ ಎಂದರು.

    ನಾನು ಈವರೆಗೂ ಮಾಡದ ಪಾತ್ರ ಈ ಚಿತ್ರದಲ್ಲಿ ಮಾಡಿದ್ದೇನೆ. ಬಹಳ ಇಷ್ಟಪಟ್ಟು ಮಾಡಿರುವ ಸಿನಿಮಾವಿದು. ಟ್ರೇಲರ್ ಗೆ ನಮ್ಮ ತಂದೆ ದೇವರಾಜ್ ಅವರು ಧ್ವನಿ ನೀಡಿದ್ದಾರೆ ಎಂದು ಪ್ರಜ್ವಲ್ ದೇವರಾಜ್ ತಿಳಿಸಿದರು. ತತ್ಸಮ ತದ್ಭವ ಒಂದು ಕ್ರೈಮ್ ಥ್ರಿಲ್ಲರ್ ಚಿತ್ರ. ಆದರೆ ಮಾಮೂಲಿ ಕ್ರೈಮ್ ಥ್ರಿಲ್ಲರ್ ಗಳಿಗಿಂತ ವಿಭಿನ್ನ. ನನ್ನ ಕಥೆ ಮೆಚ್ಚಿ ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ, ಚಿತ್ರದಲ್ಲಿ ನಟಿಸಿರುವ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನಾನು ಆಭಾರಿ ಎನ್ನುತ್ತಾರೆ ನಿರ್ದೇಶಕ ವಿಶಾಲ್ ಆತ್ರೇಯ.

    ನಾನು ಸಾಮಾನ್ಯವಾಗಿ ಭಾವುಕನಾಗುವುದಿಲ್ಲ. ಇಂದು ಏಕೋ ಗೊತ್ತಿಲ್ಲ ಸ್ವಲ್ಪ ಭಾವುಕನಾಗುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ಮಾಪಕ ಪನ್ನಗಾಭರಣ, ನಾನು ನಿರ್ಮಾಪಕನಾಗಬೇಕು ಅಂತ ಇರಲಿಲ್ಲ. ನಿರ್ಮಾಪಕನಾದೆ. ನನ್ನೊಟ್ಟಿಗೆ ಕೆಲವು ಸ್ನೇಹಿತರು ಕೈ ಜೋಡಿಸಿದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ಧನ್ಯವಾದ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ ಎಂದರು.

    ಸಂಗೀತ ನಿರ್ದೇಶಕ ವಾಸುಕಿ ವೈಭವ್, ಛಾಯಾಗ್ರಾಹಕ ಶ್ರೀನಿವಾಸ ರಾಮಯ್ಯ, ಕೆ.ಆರ್.ಜಿ ಸ್ಟುಡಿಯೋಸ್ ಯೋಗಿ ಜಿ ರಾಜ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೇಘನಾ ರಾಜ್ ಕೊಟ್ಟರು ಗುಡ್ ನ್ಯೂಸ್ : ಇಂದು ತತ್ಸಮ ತದ್ಭವ ಟ್ರೈಲರ್ ರಿಲೀಸ್

    ಮೇಘನಾ ರಾಜ್ ಕೊಟ್ಟರು ಗುಡ್ ನ್ಯೂಸ್ : ಇಂದು ತತ್ಸಮ ತದ್ಭವ ಟ್ರೈಲರ್ ರಿಲೀಸ್

    ಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ನಟಿ ಮೇಘನಾ ರಾಜ್ ಸರ್ಜಾ. ಇಂದು ಮೇಘನಾ ನಟನೆಯ ತತ್ಸಮ ತದ್ಭವ ಸಿನಿಮಾ ಟ್ರೈಲರ್ (Trailer) ಬಿಡುಗಡೆ ಆಗುತ್ತಿದ್ದು, ಅದನ್ನು ನೋಡಿ ಹಾರೈಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಮದುವೆ ನಂತರ ಮೇಘನಾ ನಟಿಸಿದ ಮೊದಲ ಸಿನಿಮಾ ಇದಾಗಿದೆ. ಹಾಗಾಗಿ ಈ ಸಿನಿಮಾಗಾಗಿ ಕಾದಿದ್ದೇವೆ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ.

    ಮದುವೆ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದ ನಟಿ ಮೇಘನಾ ರಾಜ್ (Meghana Raj) ‘ತತ್ಸಮ ತದ್ಬವ’ (Tatsama Tadbhava)  ಸಿನಿಮಾ ಮೂಲಕ ಮತ್ತೆ ಕಮ್ ಬ್ಯಾಕ್ ಮಾಡಿದ್ದರು. ಮೊನ್ನೆಯಷ್ಟೇ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣ ಕೂಡ ಮುಗಿಸಿದ್ದರು. ಮೇಘನಾ ರಾಜ್ ಹುಟ್ಟುಹಬ್ಬಕ್ಕಾಗಿ ಮೊನ್ನೆಯಷ್ಟೇ ಚಿತ್ರತಂಡ ಅವರ ಪೋಸ್ಟರ್ (Poster)ರಿಲೀಸ್ ಮಾಡಿತ್ತು.

    ‘ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಅಂತಹ ಸ್ನೇಹಿತರು ನನಗಿದ್ದಾರೆ. ನನಗಾಗಿ ಈ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರು ಪ್ರವೇಶ ಮಾಡಿದ್ದೇನೆ. ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಮಾಡಿಕೊಂಡು ನಿರ್ದೇಶನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಈವರೆಗೂ ನಾನು ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೀನೊ, ಇಲ್ಲವೊ? ಗೊತ್ತಿಲ್ಲ ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು  ಮೇಘನಾ ರಾಜ್.

    ನನಗೆ ನಿರ್ದೇಶಕರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಕಥೆಯಲ್ಲಿ  ಒಂದು ಮುಖ್ಯಪಾತ್ರ ಬರುತ್ತದೆ. ಈ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ಕೇಳಿದೆ. ಅವರು ನೀವೇ ಮಾಡುತ್ತಿದ್ದೀರ ಎಂದರು. ಸ್ನೇಹಿತರ ಸಿನಿಮಾ‌ದಲ್ಲಿ ಅಭಿನಯಿಸಿದ ಖುಷಿಯಿದೆ  ಎಂದು ಪ್ರಜ್ವಲ್ ದೇವರಾಜ್ (Prajwal Devaraj) ಮಾತನಾಡಿ ಮೇಘನಾ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಪಿಎಂ ನರೇಂದ್ರ ಮೋದಿ- ಫ್ರೆಂಚ್ ಪ್ರೆಸಿಡೆಂಟ್ ಜೊತೆ ಮ್ಯಾಡಿ ಊಟ

    ಇದೊಂದು ಇನ್ವೆಸ್ಟಿಕೇಶನ್ ಕ್ರೈಮ್ ಥ್ರಿಲ್ಲರ್. ಕನ್ನಡದಲ್ಲಿ ಇಂತಹ ಕಥೆ ಬಂದಿರುವುದು ಅಪರೂಪ. ನೋಡುಗರಿಗೂ ಇಷ್ಟವಾಗಬಹುದೆಂಬ ನಂಬಿಕೆಯಿದೆ ಎಂದಿರುವ ನಿರ್ದೇಶಕ ವಿಶಾಲ್ ಆತ್ರೇಯ,  ಸಂಪೂರ್ಣ ಚಿತ್ರೀಕರಣ ಮುಗಿಸಿ, ರೀರೆಕಾರ್ಡಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಚುನಾವಣೆ ಮುಗಿದ ನಂತರ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಪನ್ನಗ ಭರಣ (Pannagabharana)ತಿಳಿಸಿದ್ದಾರೆ.

     

    ನಟಿ ಶ್ರುತಿ ಕೂಡ ಈ ಸಿನಿಮಾದಲ್ಲಿ ಮಹತ್ವದ ಪಾತ್ರ ಮಾಡಿದ್ದು, ‘ಸಮಾಜದಲ್ಲಿ ಯಾವುದೇ ಹೆಣ್ಣಿಗಾದರೂ ಅನುಕಂಪಕ್ಕಿಂತ, ಅವಕಾಶ ಕೊಡುವುದು ಮುಖ್ಯ. ಮೇಘನಾ ರಾಜ್ ವಿಷಯದಲ್ಲಿ, ಅವರ ಸ್ನೇಹಿತರೆಲ್ಲರೂ ಸೇರಿ ಅವರ ರೀ ಎಂಟ್ರಿಗೆ ಒಳ್ಳೆಯ ಅವಕಾಶ ಕಲ್ಪಿಸಿದ್ದಾರೆ. ನಾನು ಈ ಚಿತ್ರದಲ್ಲಿ ಮನಶಾಸ್ತ್ರಜ್ಞೆಯಾಗಿ ಕಾಣಿಸಿಕೊಂಡಿದ್ದೇನೆ’ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಮೇಘನಾ ರಾಜ್ ಹುಟ್ಟು ಹಬ್ಬಕ್ಕೆ ತತ್ಸಮ ತದ್ಭವ ಪೋಸ್ಟರ್ ರಿಲೀಸ್

    ನಟಿ ಮೇಘನಾ ರಾಜ್ ಹುಟ್ಟು ಹಬ್ಬಕ್ಕೆ ತತ್ಸಮ ತದ್ಭವ ಪೋಸ್ಟರ್ ರಿಲೀಸ್

    ದುವೆ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದ ನಟಿ ಮೇಘನಾ ರಾಜ್ (Meghana Raj) ‘ತತ್ಸಮ ತದ್ಬವ’ (Tatsama Tadbhava)  ಸಿನಿಮಾ ಮೂಲಕ ಮತ್ತೆ ಕಮ್ ಬ್ಯಾಕ್ ಮಾಡಿದ್ದರು. ಮೊನ್ನೆಯಷ್ಟೇ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣ ಕೂಡ ಮುಗಿಸಿದ್ದರು. ಇಂದು ಮೇಘನಾ ರಾಜ್ ಹುಟ್ಟುಹಬ್ಬ (Birthday). ಹಾಗಾಗಿ ತತ್ಸಮ ತದ್ಭವ ಚಿತ್ರತಂಡ ಹುಟ್ಟುಹಬ್ಬಕ್ಕಾಗಿ ಅವರ ಪೋಸ್ಟರ್ (Poster)ರಿಲೀಸ್ ಮಾಡಿದೆ.

    ‘ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಅಂತಹ ಸ್ನೇಹಿತರು ನನಗಿದ್ದಾರೆ. ನನಗಾಗಿ ಈ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರು ಪ್ರವೇಶ ಮಾಡಿದ್ದೇನೆ. ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಮಾಡಿಕೊಂಡು ನಿರ್ದೇಶನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಈವರೆಗೂ ನಾನು ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೀನೊ, ಇಲ್ಲವೊ? ಗೊತ್ತಿಲ್ಲ ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು  ಮೇಘನಾ ರಾಜ್.

    ನನಗೆ ನಿರ್ದೇಶಕರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಕಥೆಯಲ್ಲಿ  ಒಂದು ಮುಖ್ಯಪಾತ್ರ ಬರುತ್ತದೆ. ಈ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ಕೇಳಿದೆ. ಅವರು ನೀವೇ ಮಾಡುತ್ತಿದ್ದೀರ ಎಂದರು. ಸ್ನೇಹಿತರ ಸಿನಿಮಾ‌ದಲ್ಲಿ ಅಭಿನಯಿಸಿದ ಖುಷಿಯಿದೆ  ಎಂದು ಪ್ರಜ್ವಲ್ ದೇವರಾಜ್ (Prajwal Devaraj) ಮಾತನಾಡಿ ಮೇಘನಾ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಪ್ರೀತಿಯಿಂದ ಪ್ರಭಾಸ್‌ಗೆ ಅನುಷ್ಕಾ ಶೆಟ್ಟಿ ಏನೆಂದು ಕರೀತಾರೆ ಗೊತ್ತಾ?

    ಇದೊಂದು ಇನ್ವೆಸ್ಟಿಕೇಶನ್ ಕ್ರೈಮ್ ಥ್ರಿಲ್ಲರ್. ಕನ್ನಡದಲ್ಲಿ ಇಂತಹ ಕಥೆ ಬಂದಿರುವುದು ಅಪರೂಪ. ನೋಡುಗರಿಗೂ ಇಷ್ಟವಾಗಬಹುದೆಂಬ ನಂಬಿಕೆಯಿದೆ ಎಂದಿರುವ ನಿರ್ದೇಶಕ ವಿಶಾಲ್ ಆತ್ರೇಯ,  ಸಂಪೂರ್ಣ ಚಿತ್ರೀಕರಣ ಮುಗಿಸಿ, ರೀರೆಕಾರ್ಡಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಚುನಾವಣೆ ಮುಗಿದ ನಂತರ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಪನ್ನಗ ಭರಣ (Pannagabharana)ತಿಳಿಸಿದ್ದಾರೆ.

    ನಟಿ ಶ್ರುತಿ ಕೂಡ ಈ ಸಿನಿಮಾದಲ್ಲಿ ಮಹತ್ವದ ಪಾತ್ರ ಮಾಡಿದ್ದು, ‘ಸಮಾಜದಲ್ಲಿ ಯಾವುದೇ ಹೆಣ್ಣಿಗಾದರೂ ಅನುಕಂಪಕ್ಕಿಂತ, ಅವಕಾಶ ಕೊಡುವುದು ಮುಖ್ಯ. ಮೇಘನಾ ರಾಜ್ ವಿಷಯದಲ್ಲಿ, ಅವರ ಸ್ನೇಹಿತರೆಲ್ಲರೂ ಸೇರಿ ಅವರ ರೀ ಎಂಟ್ರಿಗೆ ಒಳ್ಳೆಯ ಅವಕಾಶ ಕಲ್ಪಿಸಿದ್ದಾರೆ. ನಾನು ಈ ಚಿತ್ರದಲ್ಲಿ ಮನಶಾಸ್ತ್ರಜ್ಞೆಯಾಗಿ ಕಾಣಿಸಿಕೊಂಡಿದ್ದೇನೆ’ ಎಂದಿದ್ದಾರೆ.

  • ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಚಿತ್ರೀಕರಣ ಮುಕ್ತಾಯ

    ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಚಿತ್ರೀಕರಣ ಮುಕ್ತಾಯ

    ಕೆಲವು ವರ್ಷಗಳಿಂದ ಖ್ಯಾತ ನಟಿ ಮೇಘನರಾಜ್ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಈಗ ‘ತತ್ಸಮ ತದ್ಭವ’ (Tatsama Tadbhava) ಚಿತ್ರದ ಮೂಲಕ ಮೇಘನರಾಜ್ (Meghana Raj) ರೀ ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ‘ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಅಂತಹ ಸ್ನೇಹಿತರು ನನಗಿದ್ದಾರೆ. ನನಗಾಗಿ ಈ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರು ಪ್ರವೇಶ ಮಾಡಿದ್ದೇನೆ. ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಮಾಡಿಕೊಂಡು ನಿರ್ದೇಶನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಈವರೆಗೂ ನಾನು ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೀನೊ, ಇಲ್ಲವೊ? ಗೊತ್ತಿಲ್ಲ ಎಂದರು ಮೇಘನರಾಜ್. ಇದನ್ನೂ ಓದಿ: ನಟ ಚೇತನ್‌ ಭಾರತದ ವೀಸಾ ರದ್ದು

    ನನಗೆ ನಿರ್ದೇಶಕರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಕಥೆಯಲ್ಲಿ  ಒಂದು ಮುಖ್ಯಪಾತ್ರ ಬರುತ್ತದೆ. ಈ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ಕೇಳಿದೆ. ಅವರು ನೀವೆ ಮಾಡುತ್ತಿದ್ದೀರ ಎಂದರು. ಸ್ನೇಹಿತರ ಸಿನಿಮಾ‌ದಲ್ಲಿ ಅಭಿನಯಿಸಿದ ಖುಷಿಯಿದೆ  ಎಂದು ಪ್ರಜ್ವಲ್ ದೇವರಾಜ್ (Prajwal Devaraj) ತಿಳಿಸಿದರು.

    ಇದೊಂದು ಇನ್ವೆಸ್ಟಿಕೇಶನ್ ಕ್ರೈಮ್ ಥ್ರಿಲ್ಲರ್. ಕನ್ನಡದಲ್ಲಿ ಇಂತಹ ಕಥೆ ಬಂದಿರುವುದು ಅಪರೂಪ. ನೋಡುಗರಿಗೂ ಇಷ್ಟವಾಗಬಹುದೆಂಬ ನಂಬಿಕೆಯಿದೆ ಎಂದರು ನಿರ್ದೇಶಕ ವಿಶಾಲ್ ಆತ್ರೇಯ. ಇಂದು ಚಿತ್ರೀಕರಣ ಮುಕ್ತಾಯವಾಗಿದೆ. ರೀರೆಕಾರ್ಡಿಂಗ್ ನಡೆಯುತ್ತಿದೆ. ಚುನಾವಣೆ ಮುಗಿದ ನಂತರ ಬಿಡುಗಡೆ ಮಾಡುತ್ತೇವೆ ಎಂದು ನಿರ್ಮಾಪಕ ಪನ್ನಗ ಭರಣ ತಿಳಿಸಿದರು.

    ನಟಿ ಶ್ರುತಿ ಮಾತನಾಡಿ, ‘ಸಮಾಜದಲ್ಲಿ ಯಾವುದೇ ಹೆಣ್ಣಿಗಾದರೂ ಅನುಕಂಪಕ್ಕಿಂತ, ಅವಕಾಶ ಕೊಡುವುದು ಮುಖ್ಯ. ಮೇಘನಾ ರಾಜ್ ವಿಷಯದಲ್ಲಿ, ಅವರ ಸ್ನೇಹಿತರೆಲ್ಲರೂ ಸೇರಿ ಅವರ ರೀ ಎಂಟ್ರಿಗೆ ಒಳ್ಳೆಯ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿಸಿ, ನಾನು ಈ ಚಿತ್ರದಲ್ಲಿ ಮನಶಾಸ್ತ್ರಜ್ಞೆಯಾಗಿ ಕಾಣಿಸಿಕೊಂಡಿದ್ದೇನೆ ಎಂದರು. ಚಿತ್ರದಲ್ಲಿ ಒಂದು ಹಾಡಿದೆ. ರೀರೆರ್ಡಿಂಗ್ ಕೆಲಸ ನಡೆಯುತ್ತಿದೆ ಎಂದು ಸಂಗೀತ ನಿರ್ದೇಶಕ ವಾಸುಕಿ ವೈಭವ್ ಹೇಳಿದರು.

  • ಎಮೋಷನಲ್ ನಿಂದನೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

    ಎಮೋಷನಲ್ ನಿಂದನೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

    ಸ್ಯಾಂಡಲ್‌ವುಡ್ (Sandalwood) ನಟಿ ಮೇಘನಾ ರಾಜ್ (Meghana Raj) `ತತ್ಸಮ ತದ್ಭವ’ ಚಿತ್ರದ ಮೂಲಕ ಕಮ್‌ಬ್ಯಾಕ್ ಮಾಡ್ತಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಈ ಚಿತ್ರದ ಮೂಲಕ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ಕೊಡಲು ಬರುತ್ತಿದ್ದಾರೆ. ಹಾಗೆಯೇ ತಮ್ಮ ಎಮೋಷನಲ್ ಜರ್ನಿಯ ಬಗ್ಗೆ ನಟಿ ಮಾತನಾಡಿದ್ದಾರೆ. ಹೆಣ್ಣು ಮಕ್ಕಳಿಗಿರುವ ಸಮಾಜದ ಚೌಕಟ್ಟು ಅವರ ದೃಷ್ಟಿಕೋನದ ಬಗ್ಗೆ ಮೇಘನಾ ಮೌನ ಮುರಿದಿದ್ದಾರೆ.

    ಸಮಾಜದಲ್ಲಿ ಹೆಣ್ಣು ಹೀಗೆಯೇ ಇರಬೇಕು. ಇಂತಹ ಕೆಲಸಗಳನ್ನೇ ಮಾಡಬೇಕು ಎಂದೆಲ್ಲಾ ನಿರೀಕ್ಷೆ ಮಾಡುತ್ತಿದ್ದರು. ಅದರಿಂದ ನನಗೆ ತುಂಬಾ ಹಿಂಸೆ ಆಗುತ್ತಿತ್ತು. ನನ್ನ ಪ್ರಕಾರ ದೇಶದಲ್ಲಿ ಅತಿ ದೊಡ್ಡ ನಿಂದನೆ ಅಂದ್ರೆ ಅದು ಭಾವನಾತ್ಮಕ ನಿಂದನೆ ಎನ್ನಬಹುದು. ನನ್ನ ಭಾವನೆಗಳನ್ನು ವ್ಯಕ್ತ ಪಡಿಸುವುದಕ್ಕೆ ತುಂಬಾ ಇಷ್ಟ ಪಡುವ ವ್ಯಕ್ತಿನಾನು ಅದು ಹೇಗೆ ಇರಲಿ ನಾನು ವ್ಯಕ್ತಪಡಿಸುವೆ. ಆದರೆ ತುಂಬಾ ಭಾವನೆಗಳನ್ನು ಹಿಡಿದಿಟ್ಟಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು ಹಾಗೆ ಆಗಬಾರದು ಎಂದು ಮೇಘನಾ ರಾಜ್ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

    ನಾವು ನಮ್ಮಂತೆಯೇ ಸಮಾಜದ ಮುಂದೆ ಇರುವುದಕ್ಕೆ ಅದೆಷ್ಟೋ ಹೆಣ್ಣು ಮಕ್ಕಳು ಹೆದರಿಕೊಳ್ಳುತ್ತಾರೆ. ಕಾರಣ ಜನರು ನಮ್ಮನ್ನು ಜಡ್ಜ್ ಮಾಡುತ್ತಾರೆ ಎಂದು. ನನ್ನ ನಿಜವಾದ ಭಾವನೆಗಳನ್ನು ತೋರಿಸಿಕೊಂಡರೆ ನಮ್ಮನ್ನು ತಪ್ಪಾಗಿ ನೋಡುತ್ತಾರೆ ಎನ್ನುವ ಭಾವನೆ ಮೂಡುತ್ತದೆ. ಪುರುಷರಿಗೆ ಹೋಲಿಸಿಕೊಂಡರೆ ನಾವು ತುಂಬಾನೇ ಕಂಟ್ರೋಲ್ ಮಾಡುತ್ತೀವಿ ಎಂದು ಮೇಘನಾ ಹೇಳಿದ್ದಾರೆ. ಇದನ್ನೂ ಓದಿ: ಕಿಚ್ಚ ಸುದೀಪ್ ನಟನೆಯ ಹೊಸ ಸಿನಿಮಾ ಏಪ್ರಿಲ್ ನಲ್ಲಿ ಘೋಷಣೆ

    ಕಳೆದ 30 ವರ್ಷಗಳಲ್ಲಿ ಪುರುಷ ಪ್ರಧಾನ ಸಿನಿಮಾಗಳು ಹೆಚ್ಚಾಗಿದೆ. ಈಗ ಟ್ರೆಂಡ್ ಬದಲಾಗಿದೆ. ಮಹಿಳಾ ಪ್ರಧಾನ ಸಿನಿಮಾಗಳು ಬರುತ್ತಿವೆ. ನಾನು ಚಿತ್ರರಂಗಕ್ಕೆ ಕಾಲಿಟ್ಟಾಗ 13 ವರ್ಷ ಹುಡುಗಿ. ನಾಯಕಿಯರಿಗೆ ಹೆಚ್ಚ ಸಮಯ ಇರುವುದಿಲ್ಲ ಎಂದು ಈಗಲೂ ಹಾಗೆ ಯೋಚನೆ ಮಾಡಬಾರದು. ಸಿನಿಮಾ ಅಂದ್ರೆ ಬರೀ ಗ್ಲಾಮರ್ ಅಲ್ಲ ಅದಕ್ಕೂ ಮೀರಿದ ಕಲೆಯದು. ಬಾಲಿವುಡ್‌ನಲ್ಲಿ 40 ವರ್ಷದವರು ಇಂದಿಗೂ ನಾಯಕಿಯರು ನಟಿಸುತ್ತಾರೆ. ಜನರು ಯೋಚಿಸುವ ರೀತಿ ಬದಲಾಗಬೇಕು ಎಂದು ನಟಿ ಮೇಘನಾ ಮಾತನಾಡಿದ್ದಾರೆ.

    `ತತ್ಸಮ ತದ್ಭವ’ (Tatsama Tadbhava) ಚಿತ್ರವನ್ನು ಪನ್ನಗಾಭರಣ ನಿರ್ಮಾಣ ಮಾಡ್ತಿದ್ದಾರೆ. ಮೇಘನಾ ರಾಜ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಅರವಿಂದ್ ಅಯ್ಯರ್, ಮಹತಿ ಭಟ್, ಟಿ.ಎಸ್ ನಾಗಾಭರಣ, ರಾಜಶ್ರೀ, ಬಾಲಾಜಿ ಮನೋಹರ್ ಸೇರಿದಂತೆ ಹಲವರು ನಟಿಸಿದ್ದಾರೆ.

  • ಮೇಘನಾ ರಾಜ್ ಬೆಂಬಲಕ್ಕೆ ನಿಂತ ಚಿತ್ರೋದ್ಯಮ

    ಮೇಘನಾ ರಾಜ್ ಬೆಂಬಲಕ್ಕೆ ನಿಂತ ಚಿತ್ರೋದ್ಯಮ

    ನಿಮ್ಮೊಂದಿಗೆ ವರ್ಷದ ಕನಸು ಹಂಚಿಕೊಳ್ಳಲಿದ್ದೇನೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು ನಟಿ ಮೇಘನಾ ರಾಜ್ (Meghana Raj). ಕೊನೆಗೂ ಅವರು ನಿನ್ನೆ ಆ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದರು. ಅವರ ಕನಸಿಗೆ ಇಡೀ ಚಿತ್ರೋದ್ಯಮವೇ ಬೆಂಬಲವಾಗಿ ನಿಂತಿದೆ. ನೂರಕ್ಕೂ ಅಧಿಕ ನಟ ನಟಿಯರಿಂದ ಏಕಕಾಲಕ್ಕೆ ಮೇಘನಾ ರಾಜ್ ನಟನೆಯ “ತತ್ಸಮ ತದ್ಭವ” (Tatsama Tadbhava) ಚಿತ್ರದ ಪೋಸ್ಟರ್ (Poster) ಬಿಡುಗಡೆ ಮಾಡಲಾಗಿದೆ.

    ನಟಿ ಮೇಘನಾ ರಾಜ್ ಸರ್ಜಾ ಬಹಳ ದಿನಗಳ ನಂತರ ಮತ್ತೆ ನಟನೆಗೆ ಮರಳಿರುವ ಚಿತ್ರ “ತತ್ಸಮ ತದ್ಭವ”ದ ಫಸ್ಟ್ ಲುಕ್ ಪೋಸ್ಟರ್ ಹೊರಬಂದಿದೆ. ನಿರ್ದೇಶಕ ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ನೂತನ ಪ್ರತಿಭೆ ವಿಶಾಲ್ ಆತ್ರೇಯ (Vishal Atreya) ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ.

    ವಿಶೇಷವೆಂದರೆ, ಫೆಬ್ರವರಿ 19 ರಂದು “ತತ್ಸಮ ತದ್ಭವ” ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನೂರಕ್ಕೂ ಹೆಚ್ಚು ನಟನಟಿಯರು ತಮ್ಮ ಸಮಾಜಿಕ ಜಾಲತಾಣದಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲ. ಪ್ರಪಂಚದಾದ್ಯಂತ 30 ಕ್ಕೂ ಹೆಚ್ಚಿನ ದೇಶಗಳಲ್ಲಿರುವ ಕನ್ನಡ ಹಾಗೂ ಇತರ ಸಂಘಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಪ್ರೋತ್ಸಾಹ ನೀಡಿರುವುದು ಹೆಮ್ಮೆಯ ವಿಷಯ..

    ಚಿತ್ರದ ಸುಮಧುರ ಹಾಡುಗಳಿಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಶ್ರೀನಿವಾಸ್ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಸಂಕಲನ, ನಿಖಿತ ಪ್ರಿಯ ವಸ್ತ್ರವಿನ್ಯಾಸ ಹಾಗೂ ಸಂತೋಷ್ ಪಂಚಾಲ್ ಕಲಾ ನಿರ್ದೇಶನವಿರುವ “ತತ್ಸಮ ತದ್ಭವ” ಚಿತ್ರಕ್ಕಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತತ್ಸಮ ತದ್ಭವ ಚಿತ್ರದ ನಟನೆಗೆ ಮರಳಿದ ಮೇಘನಾ ರಾಜ್‌

    ತತ್ಸಮ ತದ್ಭವ ಚಿತ್ರದ ನಟನೆಗೆ ಮರಳಿದ ಮೇಘನಾ ರಾಜ್‌

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಹಿಸುದ್ದಿ ಹಂಚಿಕೊಂಡ ಮೇಘನಾ ರಾಜ್‌: ಅಭಿಮಾನಿಗಳ ಪ್ರಶ್ನೆಗೆ ಇಲ್ಲಿದೆ ಉತ್ತರ

    ಸಿಹಿಸುದ್ದಿ ಹಂಚಿಕೊಂಡ ಮೇಘನಾ ರಾಜ್‌: ಅಭಿಮಾನಿಗಳ ಪ್ರಶ್ನೆಗೆ ಇಲ್ಲಿದೆ ಉತ್ತರ

    ಸ್ಯಾಂಡಲ್‌ವುಡ್ (Sandalwood) ನಟಿ ಮೇಘನಾ ರಾಜ್ ಸರ್ಜಾ (Meghana Raj Sarja) ಕೊನೆಗೂ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ನೀವೆಲ್ಲರೂ ಕೇಳುವ ಪ್ರಶ್ನೆಗೆ ಉತ್ತರ ನೀಡುವ ಸಮಯ ಬಂದಿದೆ ಎಂದು ಪೋಸ್ಟ್ ಮಾಡುವ ಮೂಲಕ ನಟಿ ಅಭಿಮಾನಿಗಳಿಗೆ ಕುತೂಹಲ ಕೆರಳಿಸಿದ್ದರು. ಈಗ ಹೊಸ ಸಿನಿಮಾ ಅನೌನ್ಸ್ ಮಾಡುವ ಮೂಲಕ ಆ ಕುತೂಹಲಕ್ಕೆ ತೆರೆಬಿದ್ದಿದೆ.

    ಕನ್ನಡದ ಪ್ರತಿಭಾನ್ವಿತ ನಟಿ ಮೇಘನಾ ರಾಜ್ ಅವರು ಪತಿ ಚಿರು (Chiranjeevi Sarja) ನಿಧನದ ನಂತರ ಸಾಕಷ್ಟು ನೋವು, ಸಂಕಷ್ಟಗಳನ್ನ ಎದುರಿಸಿದ್ದರು. ನಟಿಯ ಎರಡನೇ ಮದುವೆ ಬಗ್ಗೆ, ಸಿನಿಮಾಗೆ ಕಮ್‌ಬ್ಯಾಕ್ ಆಗುವ ಬಗ್ಗೆ ಹಲವು ಪ್ರಶ್ನೆಗಳನ್ನ ಮೇಘನಾಗೆ ಕೇಳುತ್ತಿದ್ದರು. (ಫೆ.18)ರಂದು ಶನಿವಾರ ಮೇಘನಾ ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದರು. 2020, ಭಾನುವಾರವಾಗಿತ್ತು ನನ್ನ ವಿಚಾರದಲ್ಲಿ ತೀವ್ರವಾದ ಬದಲಾವಣೆಯಾದವು. ಆಗಿನಿಂದಲೂ ನನಗೆ ಒಂದು ಪ್ರಶ್ನೆಯನ್ನು ಕೇಳಲಾಗುತ್ತಿದೆ. ಫೆಬ್ರವರಿ 19ರ ಭಾನುವಾರ ನಾನು ಆ ಪ್ರಶ್ನೆಗೆ ಉತ್ತರ ಕೊಡ್ತೀನಿ. 2023ರ ಫೆಬ್ರವರಿ 19ರ ಬೆಳಗ್ಗೆ 10:35ಕ್ಕೆ ಎಂದು ಅಪ್‌ಡೇಟ್‌ ನೀಡಿದ್ದರು. ಆ ಕುತೂಹಲಕ್ಕೆ ಈಗ ತೆರೆಬಿದ್ದಿದೆ.

    ಬಹುಭಾಷಾ ನಟಿ ಮೇಘನಾ ರಾಜ್ ಅವರು `ತತ್ಸಮ ತದ್ಭವ’ (Tatsama Tadbhava) ಸಿನಿಮಾ ಮೂಲಕ ಮತ್ತೆ ನಟನೆಗೆ ಕಮ್ ಬ್ಯಾಕ್ ಆಗಿದ್ದಾರೆ. ಸ್ತ್ರೀ ಪ್ರಧಾನ ಪಾತ್ರದ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಲಿದ್ದಾರೆ. ಸದ್ಯ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನ ರಿಲೀಸ್ ಮಾಡುವ ಮೂಲಕ ಮೋಹಕತಾರೆ ರಮ್ಯಾ ಅವರು ಮೇಘನಾಗೆ ಸಾಥ್‌ ನೀಡಿದ್ದಾರೆ. ಜೊತೆಗೆ ಕಮ್ ಬ್ಯಾಕ್‌ಗೆ ಶುಭಹಾರೈಸಿದ್ದಾರೆ.

     

    View this post on Instagram

     

    A post shared by Meghana Raj Sarja (@megsraj)

    ವಿಶಾಲ್ ಅತ್ರೇಯಾ ನಿರ್ದೇಶನದ `ತತ್ಸಮ ತದ್ಭವ’ ಚಿತ್ರದಲ್ಲಿ ಮೇಘನಾ (Meghana Raj) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೇಘನಾ ರಾಜ್ ಅವರ ಬಾಯಿಯನ್ನು ಬಲವಂತವಾಗಿ ಮುಚ್ಚಲಾಗಿದೆ. ಪೋಸ್ಟರ್ ಲುಕ್ ಕುತೂಹಲ ಕೆರಳಿಸಿದೆ. ಕನ್ನಡ ಮತ್ತು ಮಲಯಾಳಂನಲ್ಲಿ ಮೂಡಿ ಬಂದಿರುವ ಈ ಚಿತ್ರಕ್ಕೆ ಪನ್ನಗ ಭರಣ (Pannaga Bharana) ಅವರು ಸಿನಿಮಾ ನಿರ್ಮಾಣ ಮಾಡಿದ್ದಾರೆ. ʻಕೆಆರ್‌ಜಿʼ (KRG Studio) ಸಂಸ್ಥೆ ಈ ಚಿತ್ರವನ್ನು ವರ್ಲ್ಡ್ ವೈಡ್ ರಿಲೀಸ್ ಮಾಡಲಿದ್ದಾರೆ. ಇದನ್ನೂ ಓದಿ: ಖ್ಯಾತ ತಮಿಳು ಹಾಸ್ಯ ನಟ ಮಯಿಲ್‌ಸಾಮಿ ಹಠಾತ್ ನಿಧನ

    ನಿಮ್ಮನ್ನು ಮತ್ತೆ ಬೆಳ್ಳಿತೆರೆಯಲ್ಲಿ ನೋಡುವುದು ಯಾವಾಗ? ಎಂದು ಹೆಚ್ಚು ಕೇಳಲಾದ ಪ್ರಶ್ನೆಗೆ ಅಂತಿಮವಾಗಿ ಉತ್ತರ ಇಲ್ಲಿದೆ ಎಂದು ಹೇಳಿದ್ದಾರೆ.ಭಯದಿಂದ ಸಿಕ್ಕಿಹಾಕಿಕೊಂಡಾಗ ನಿರ್ಭಯವಾಗಿರುವುದು ಅವಳ ಏಕೈಕ ಮಾರ್ಗವಾಗಿದೆ ಎಂದು ಕ್ಯಾಪ್ಷನ್ ನೀಡಿ ಪೋಸ್ಟರ್ ಶೇರ್ ಮಾಡಿದ್ದಾರೆ. ನಟಿಯ ಹೊಸ ಹೆಜ್ಜೆಗೆ ಅಭಿಮಾನಿಗಳು ಶುಭಕೋರಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k