Tag: ತನಿಖಾ ತಂಡ

  • ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ

    ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ

    ಗುರುಗ್ರಾಮ: ಗುಜರಾತ್‍ನ ಅಂದಿನ ಸಿಎಂ ಆಗಿದ್ದ ನರೇಂದ್ರ ಮೋದಿ ವಿರುದ್ಧ ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಸೂಚನೆ ಮೇರೆಗೆ ತೀಸ್ತಾ ಸೆಟಲ್ವಾಡ್ ಸಂಚು ಮಾಡಿದ್ದರು ಎಂದು ತನಿಖಾ ತಂಡ ತಿಳಿಸಿದೆ.

    ಗುಜರಾತ್ ಪೊಲೀಸರು ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದರು. ತೀಸ್ತಾ ಸೆಟಲ್ವಾಡ್ ಅವರು ನರೇಂದ್ರ ಮೋದಿ ಅವರ ವಿರುದ್ಧ ಅಹ್ಮದ್ ಪಟೇಲ್ ಅವರ ಇಚ್ಛೆಯ ಮೇರೆಗೆ ದೊಡ್ಡ ಪಿತೂರಿ ನಡೆಸಿದ್ದರು ಎಂಬ ವಿಷಯ ಈ ಮೂಲಕ ಬಯಲಿಗೆ ಬಂದಿದೆ. ಇದನ್ನೂ ಓದಿ: ಸಮ್ಮತಿಯ ಸೆಕ್ಸ್‌ನಿಂದ ಅವಿವಾಹಿತೆ ಗರ್ಭಧಾರಣೆ – 20 ವಾರಗಳ ಬಳಿಕ ಗರ್ಭಪಾತಕ್ಕೆ ಅವಕಾಶವಿಲ್ಲ: ಹೈಕೋರ್ಟ್ 

    2002 ರ ಗಲಭೆಯ ನಂತರ ಗುಜರಾತ್‍ನಲ್ಲಿ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಅಹ್ಮದ್ ಪಟೇಲ್ ಅವರ ಆಜ್ಞೆಯ ಮೇರೆಗೆ ಸೆಟಲ್ವಾಡ್ ಒಂದು ಯೋಜನೆಯನ್ನು ರೂಪಿಸಿದ್ದರು ಎಂದು ಸೆಷನ್ಸ್ ನ್ಯಾಯಾಲಯಕ್ಕೆ ಪೊಲೀಸರ ವಿಶೇಷ ತನಿಖಾ ತಂಡ ಸಲ್ಲಿಸಿದ ಅಫಿಡವಿಟ್ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿ.ಡಿ.ಠಕ್ಕರ್ ಅವರು ಎಸ್‍ಐಟಿಯ ಉತ್ತರವನ್ನು ದಾಖಲಿಸಿಕೊಂಡು ಸೋಮವಾರ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದರು.

    ಗುಜರಾತ್ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್.ಬಿ.ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರೊಂದಿಗೆ ಸೆಟಲ್ವಾಡ್ ಅವರನ್ನು ಬಂಧಿಸಲಾಗಿದೆ. ಈ ದೊಡ್ಡ ಪಿತೂರಿಯನ್ನು ಮಾಡುವಾಗ ಅರ್ಜಿದಾರರ(ಸೆಟಲ್ವಾಡ್) ರಾಜಕೀಯ ಉದ್ದೇಶವೆಂದರೆ ಚುನಾಯಿತ ಸರ್ಕಾರವನ್ನು ವಜಾಗೊಳಿಸುವುದು ಅಥವಾ ಅಸ್ಥಿರಗೊಳಿಸುವುದು ಎಂದು ಎಸ್‍ಐಟಿ ಅಫಿಡವಿಟ್‌ನಲ್ಲಿ ಹೇಳಿದೆ.

    ಈ ಕುರಿತು ತನಿಖಾ ತಂಡ ಮಾಹಿತಿ ಕೊಟ್ಟಿದ್ದು, ದಿ.ಅಹ್ಮದ್ ಪಟೇಲ್ ಅವರ ಸೂಚನೆಯ ಮೇರೆಗೆ ಈ ಸಂಚು ನಡೆಸಲಾಗಿದೆ ಎಂದು ಸಾಕ್ಷಿಗಳನ್ನು ಉಲ್ಲೇಖಿಸಿ ಆರೋಪಿಸಾಗಿದೆ. 2002 ರಲ್ಲಿ ಗೋಧ್ರಾ ಗಲಭೆ ನಂತರ ಪಟೇಲ್ ಅವರ ಆದೇಶದ ಮೇರೆಗೆ ಸೆಟಲ್ವಾಡ್ 30 ಲಕ್ಷ ರೂ. ಕೊಡಲಾಗಿತ್ತು ಎಂಬುದು ತಿಳಿದುಬಂದಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸರ್ಕಾರಿ ನೌಕರರು 2ನೇ ಮದುವೆಯಾಗಲು ಬೇಕು ಇಲಾಖೆ ಅನುಮತಿ – ಇಲ್ಲವಾದ್ರೆ ಸರ್ಕಾರಿ ಸೌಲಭ್ಯವಿಲ್ಲ

    2002 ರಲ್ಲಿ ಗಲಭೆ ಪ್ರಕರಣಗಳಲ್ಲಿ ಬಿಜೆಪಿ ಸರ್ಕಾರದ ಹಿರಿಯ ನಾಯಕರ ಹೆಸರನ್ನು ಸಿಲುಕಿಸಲು ದೆಹಲಿಯ ಅಧಿಕಾರದಲ್ಲಿದ್ದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರನ್ನು ಸೆಟಲ್ವಾಡ್ ಭೇಟಿಯಾಗುತ್ತಿದ್ದರು ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ: ಸರ್ಕಾರದಿಂದ ತನಿಖಾ ತಂಡ ರಚನೆ

    ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ: ಸರ್ಕಾರದಿಂದ ತನಿಖಾ ತಂಡ ರಚನೆ

    ರಾಯಚೂರು: ಇಲ್ಲಿನ ನಗರಸಭೆ ಸರಬರಾಜು ಮಾಡಿದ್ದ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ನೂರಾರು ಮಂದಿ ಆಸ್ಪತ್ರೆಗೆ ದಾಖಲಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನಗರಸಭೆಯ ಅವ್ಯವಸ್ಥೆಯ ಬಗ್ಗೆ ತನಿಖೆ ನಡೆಸಲು ಇಬ್ಬರು ಅಧಿಕಾರಿಗಳ ತನಿಖಾ ತಂಡವನ್ನು ನೇಮಿಸಿದೆ.

    ಕಲುಷಿತ ನೀರು ಸೇವನೆಯಿಂದ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ನೂರಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪ್ರಕರಣ ತನಿಖೆ ನಡೆಸಲು ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, 3 ದಿನಗಳಲ್ಲಿ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್. ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ನಗರಸಭೆಯಿಂದ ಕಲುಷಿತ ನೀರು ಸರಬರಾಜು- ಮಹಿಳೆ ಸಾವು, ನೂರಕ್ಕೂ ಹೆಚ್ಚು ಜನ ಅಸ್ವಸ್ಥ

    ತನಿಖಾ ಸಮಿತಿಗೆ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಕಲಬುರಗಿಯ ನಗರ ನೀರು ಸರಬರಾಜು ಮಂಡಳಿಯ ಮುಖ್ಯ ಅಭಿಯಂತರರನ್ನು ನೇಮಕ ಮಾಡಲಾಗಿದೆ. ಸಮಿತಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ 3 ದಿನಗಳಲ್ಲಿ ವರದಿ ನೀಡಲು ಸೂಚಿಸಲಾಗಿದೆ. ಇದನ್ನೂ ಓದಿ: ಕಲುಷಿತ ನೀರಿಗೆ ಮೂರನೇ ಬಲಿ – ರಾಯಚೂರು ಬಂದ್‌ಗೆ ಕರೆ

    ಜೂನ್ 7 ರಂದು ತನಿಖಾ ಸಮಿತಿ ರಾಯಚೂರಿಗೆ ಆಗಮಿಸಲಿದ್ದು ನಗರಸಭೆ ಕಚೇರಿ, ಜಲ ಶುದ್ಧೀಕರಣ ಘಟಕ ಸೇರಿ ವಿವಿಧೆಡೆ ಭೇಟಿ ನೀಡಿ ವರದಿ ತಯಾರಿಸಲಿದೆ. ಈ ಹಿನ್ನೆಲೆ ಜಿಲ್ಲಾ ನಗರಾಭಿವೃದ್ಧಿ ಕೋಶದ, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಕಾರ್ಯಪಾಲಕ ಅಭಿಯಂತರರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು ಸೂಚಿಸಿದ್ದಾರೆ.

  • ರವಿ ಪೂಜಾರಿಯನ್ನ ವಶಕ್ಕೆ ಪಡೆಯಲು ಸರದಿ ಸಾಲಿನಲ್ಲಿ ನಿಂತ ತನಿಖಾ ತಂಡಗಳು

    ರವಿ ಪೂಜಾರಿಯನ್ನ ವಶಕ್ಕೆ ಪಡೆಯಲು ಸರದಿ ಸಾಲಿನಲ್ಲಿ ನಿಂತ ತನಿಖಾ ತಂಡಗಳು

    ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯನ್ನ ಕರ್ನಾಟಕ ಪೊಲೀಸರು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಇದೀಗ ಬೇರೆ ರಾಜ್ಯದ ತನಿಖಾ ತಂಡಗಳು ಡಾನ್ ರವಿ ಪೂಜಾರಿಯನ್ನ ವಶಕ್ಕೆ ಪಡೆಯಲು ನಾ ಮುಂದು ಎಂದು ಸರದಿ ಸಾಲಿನಲ್ಲಿ ನಿಂತಿವೆ.

    ಬೆಂಗಳೂರು, ಮಂಗಳೂರು ಪೊಲೀಸರ ತನಿಖೆ ಮುಗಿಯುತ್ತಿದ್ದಂತೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದರು. ಈಗ ಕೇರಳ ಕ್ರೈಂ ಬ್ರಾಂಚ್ ಪೊಲೀಸರು ಮುಂಬೈ ಪೊಲೀಸರಿಗೂ ಮೊದಲೇ ರವಿ ಪೂಜಾರಿಯನ್ನ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಇದನ್ನೂ ಓದಿ: ‘ಪವರ್’ಫುಲ್ ವ್ಯಕ್ತಿಗೆ ಒಂದು ಕರೆ – ಡಾನ್ ರವಿ ಪೂಜಾರಿ ಅರೆಸ್ಟ್

    ಡಾನ್ ರವಿ ಪೂಜಾರಿ 2018ರಲ್ಲಿ ಮಲಿಯಾಳಂ ನಟಿ ಒಬ್ಬರನ್ನ ಬೆದರಿಕೆ ಹಾಕಿದ್ದಲ್ಲದೆ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರ ಬಗ್ಗೆ ಕೇರಳದಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಬೆದರಿಕೆ ಕರೆ ದಾಖಲಿಸಿಕೊಂಡಿರುವ ಕೇರಳ ಪೊಲೀಸರು ಭಾನುವಾರ ಬೆಂಗಳೂರಿಗೆ ಬಂದು ಸಿಸಿಬಿ ಪೊಲೀಸರ ಜೊತೆ ಮಾತುಕತೆ ನಡೆಸಿ ಹೋಗಿದ್ದಾರೆ. ಇದನ್ನೂ ಓದಿ: ಭೂಗತ ಪಾತಕಿ ರವಿ ಪೂಜಾರಿಗೆ ಮಗಳ ಭವಿಷ್ಯದ್ದೇ ಚಿಂತೆ

    ಸಿಸಿಬಿ ಪೊಲೀಸ್ ಡಾನ್ ರವಿ ಪೂಜಾರಿಯನ್ನ ಎಷ್ಟು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ರವಿಪೂಜಾರಿ ಪೊಲೀಸರ ಕಸ್ಟಡಿ ಮುಗಿದ ಬಳಿಕ ಮತ್ತೆ ಕಸ್ಟಡಿಗೆ ಪಡೆಯುತ್ತಾರೋ ಅಥವಾ ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡುತ್ತಾರೋ ಎಂಬುದರ ಬಗ್ಗೆ ಮಾಹಿತಿ ಪಡೆದು ಹೋಗಿದ್ದಾರೆ.

    ಆರೋಪಿ ರವಿ ಪೂಜಾರಿ ಪೊಲೀಸ್ ಕಸ್ಟಡಿ ಮುಗಿಯುತ್ತಿದ್ದಂತೆ ನ್ಯಾಯಾಂಗ ಬಂಧನಕ್ಕೆ ಕೊಟ್ಟರೆ ಬಾಡಿ ವಾರೆಂಟ್ ಮೇಲೆ ಕೇರಳಕ್ಕೆ ಕರೆದುಕೊಂಡು ಹೋಗಲು ಕೇರಳ ಪೊಲೀಸರು ತುದಿಗಾಲಿನಲ್ಲಿ ನಿಂತಿದ್ದಾರೆ.