Tag: ತನಿಖೆ

  • 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್ – ಹೆಣ್ಣು ಮಕ್ಕಳಿಬ್ಬರ ಕಾಲೇಜು ಫೀಸ್‌ ಕಟ್ಟಲಾಗದೇ ಕೃತ್ಯಕ್ಕಿಳಿದಿದ್ದ ದಂಪತಿ

    2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್ – ಹೆಣ್ಣು ಮಕ್ಕಳಿಬ್ಬರ ಕಾಲೇಜು ಫೀಸ್‌ ಕಟ್ಟಲಾಗದೇ ಕೃತ್ಯಕ್ಕಿಳಿದಿದ್ದ ದಂಪತಿ

    – ಇತ್ತ ಆಸ್ಪತ್ರೆ ಚಿಕಿತ್ಸೆಗೂ ಹಣವಿಲ್ಲದ ಸ್ಥಿತಿ

    ಹೈದರಾಬಾದ್: 2,000 ರೂ.ಗೆ ಸೆಕ್ಸ್ ಲೈವ್ ಸ್ಟ್ರೀಮ್ ಮಾಡ್ತಿದ್ದ ದಂಪತಿಯನ್ನು (Hyderabad Couple) ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಆದ್ರೆ ದಂಪತಿಯ ಬಗ್ಗೆ ಅಚ್ಚರಿ ಸಂಗತಿಯೊಂದು ಬೆಳಕಿಗೆ ಬಂದಿದೆ.

    ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ (Two Daughters). ಪತಿ ವೃತ್ತಿಯಲ್ಲಿ ಕ್ಯಾಬ್‌ ಡ್ರೈವರ್‌ ಆಗಿದ್ದರೆ, ಪತ್ನಿ ಗೃಹಿಣಿಯಾಗಿದ್ದಳು. ಮನೆಯಲ್ಲಿ ಆರ್ಥಿಕ ಸಮಸ್ಯೆಯಿದ್ದ ಕಾರಣ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಪತಿ-ಪತ್ನಿ ಇಬ್ಬರು ಕೃತ್ಯಕ್ಕೆ ಇಳಿದಿದ್ದರು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕೃತ್ಯದಲ್ಲಿ ಭಾಗಿ
    ಆರ್ಥಿಕ ಕೊರತೆಯಿಂದ ಮಕ್ಕಳಿಬ್ಬರ ಕಾಲೇಜು ಶುಲ್ಕ (college fees) ಪಾವತಿಸಿರಲಿಲ್ಲ. ಇಬ್ಬರೂ ಪ್ರತಿಭಾನ್ವಿತ ವಿದ್ಯಾರ್ಥಿಗಳೇ ಆಗಿದ್ದರು. ಒಬ್ಬ ಮಗಳು ಬಿ.ಟೆಕ್‌ ವ್ಯಾಸಂಗ ಮಾಡುತ್ತಿದ್ದರು, ಮತ್ತೊಬ್ಬಳು ಮಗಳು ಇತ್ತೀಚಿಗೆ ನಡೆದ intermediate ಪರೀಕ್ಷೆಯಲ್ಲಿ 470ಕ್ಕೆ 468 ಅಂಕ ಗಳಿಸಿ, ಕಾಲೇಜು ಪ್ರವೇಶಕ್ಕೆ ತಯಾರಿ ನಡೆಸಿದ್ದಳು. ಈ ನಡುವೆ ಆಟೋ ಚಾಲಕನಾಗಿದ್ದ ಪತಿ ಅನಾರೋಗ್ಯದಿಂದ ಬಳಲುತ್ತಿದ್ದ, ಚಿಕಿತ್ಸೆ ಪಡೆಯೋದಕ್ಕೂ ಹಣ ಇರಲಿಲ್ಲ. ಹೀಗಾಗಿ ಸುಲಭವಾಗಿ ಹಣಗಳಿಸಲು ತಮ್ಮ ಲೈಂಗಿಕ ಕೃತ್ಯವನ್ನು ಲೈವ್‌ಸ್ಟ್ರೀಮ್‌ ಮಾಡುವ ಕೆಲಸಕ್ಕೆ ಮುಂದಾದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೋಲ್ಕತ್ತಾದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌; ಟಿಎಂಸಿ ನಾಯಕ ಸೇರಿ ಮೂವರ ಬಂಧನ

    ಹಣ ಗಳಿಸುತ್ತಿದ್ದದ್ದು ಹೇಗೆ?
    ಪರಸ್ಪರ ಒಪ್ಪಿಗೆಯೊಂದಿಗೆ ಕೃತ್ಯಕ್ಕೆ ಇಳಿದಿದ್ದ ದಂಪತಿ ಲೈವ್ ಸ್ಟ್ರೀಮ್‌ಗೆ 2,000 ರೂ. ಪಡೆಯುತ್ತಿದ್ದರು ಮತ್ತು ರೆಕಾರ್ಡ್ ಮಾಡಿದ ಕ್ಲಿಪ್‌ ಅನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದರು. ಹೆಚ್ಚಾಗಿ ಯುವಕರಿಗೆ ಈ ವಿಡಿಯೋಗಳನ್ನು ಸೇಲ್‌ ಮಾಡ್ತಿದ್ದರು. ಇದನ್ನೂ ಓದಿ: ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು

    ಸಾಂದರ್ಭಿಕ ಚಿತ್ರ

    ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಅಂಬರ್‌ಪೇಟೆಯ ಮಲ್ಲಿಕಾರ್ಜುನ ನಗರದಲ್ಲಿರುವ ತಮ್ಮ ಮನೆಯಲ್ಲಿ ದಂಪತಿಯನ್ನ ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದಂಪತಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಮಕ್ಕಳಿಬ್ಬರಿಗೂ ಪೋಷಕರ ಈ ಕೃತ್ಯದ ಬಗ್ಗೆ ತಿಳಿದಿರಲಿಲ್ಲ. ಗುರುತು ಮರೆಮಾಚಲು ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.  ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಿಸಲು 4 ಹಂತದ ಯೋಜನೆ ಪ್ರಸ್ತಾಪಿಸಿದ ರಾಜನಾಥ್ ಸಿಂಗ್

    ದಂಪತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 296 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67 (ಎ) ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

  • 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    – ರೆಕಾರ್ಡ್‌ ವಿಡಿಯೋವನ್ನ 500 ರೂ.ಗೆ ಸೇಲ್‌ ಮಾಡ್ತಿದ್ದ ದಂಪತಿ

    ಹೈದರಾಬಾದ್‌: 2,000 ರೂ.ಗೆ ಸೆಕ್ಸ್‌ ಲೈವ್‌ ಸ್ಟ್ರೀಮ್‌ (Live Stream) ಮಾಡ್ತಿದ್ದ ಹೈದರಾಬಾದ್‌ ಜೋಡಿಯನ್ನು (Hyderabad couple) ಪೊಲೀಸರು ಬಂಧಿಸಿದ್ದಾರೆ.

    ಸೋಷಿಯಲ್‌ ಮೀಡಿಯಾ (Social Media) ಅಪ್ಲಿಕೇಶನ್‌ನಲ್ಲಿ‌ ಸೆಕ್ಸ್‌ (ಲೈಂಗಿಕ ಕ್ರಿಯೆ) ಕೃತ್ಯವನ್ನ ಲೈವ್‌ ಸ್ಟ್ರೀಮ್‌ ಮಾಡಿದ್ದಕ್ಕಾಗಿ ಹೈದರಾಬಾದ್‌ ಪೊಲೀಸರು 41 ವರ್ಷದ ಪತಿ, 37 ವರ್ಷದ ಪತ್ನಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಹಾಡಹಗಲೇ ಹಣ ಎಣಿಸುವಾಗ ಕುತ್ತಿಗೆಗೆ ಚಾಕು ಇಟ್ಟು 2 ಕೋಟಿ ರಾಬರಿ

    ಜೂನ್ 17 ರಂದು ಮಧ್ಯಾಹ್ನ ಅವರ ಮನೆಯ ಟೆರೇಸ್‌ ಮೇಲಿದ್ದಾಗ ಇಬ್ಬರನ್ನೂ ಬಂಧಿಸಲಾಗಿದ್ದು, ಹೈ ಡೆಫಿನಿಷನ್ ಕ್ಯಾಮೆರಾ ಸೇರಿ ಹಲವು ಡಿಜಿಟಲ್‌ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಂಗಳೂರು | ಲವ್, ಸೆಕ್ಸ್, ದೋಖಾ ಆರೋಪ – ಕೇಸ್ ದಾಖಲಾಗ್ತಿದ್ದಂತೆ ಆರೋಪಿ ಯುವಕ ಎಸ್ಕೇಪ್

    ಸುಲಭವಾಗಿ ಹಣಗಳಿಸುವ ಉದ್ದೇಶದಿಂದ ಕೃತ್ಯ
    ವೃತ್ತಿಯಲ್ಲಿ ಕ್ಯಾಬ್‌ ಚಾಲಕನಾಗಿದ್ದ (Cab Driver) ಪತಿ ಸುಲಭವಾಗಿ ಹಣ ಗಳಿಸುವ ಉದ್ದೇಶ ಹೊಂದಿದ್ದ. ಇದಕ್ಕಾಗಿ ಇಬ್ಬರೂ ಒಪ್ಪಿಕೊಂಡು ಕೃತ್ಯದಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ಲೈವ್‌ ಸ್ಟ್ರೀಮ್‌ಗೆ ಯುವಕರು, ವೃದ್ಧದಿಂದ 2,000 ರೂ. ಪಡೆಯುತ್ತಿದ್ದರು ಮತ್ತು ರೆಕಾರ್ಡ್‌ ಮಾಡಿದ‌ ಕ್ಲಿಪ್‌ ಅನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: 3ನೇ ಪತ್ನಿಯ ಹತ್ಯೆಗೈದು ಗೋಣಿ ಚೀಲದಲ್ಲಿ ಪ್ಯಾಕ್ – ಲಗೇಜ್ ಎಂದು ಸರ್ಕಾರಿ ಬಸ್ಸಲ್ಲಿ ಕಳುಹಿಸಿದ್ದವ 24 ವರ್ಷಗಳ ಬಳಿಕ ಅರೆಸ್ಟ್

    ಸಾಂದರ್ಭಿಕ ಚಿತ್ರ

    ಪತ್ನಿ ಗೃಹಿಣಿಯಾಗಿದ್ದು, ದಂಪತಿಗೆ ಇಬ್ಬರು ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳಿದ್ದಾರೆ. ಮಕ್ಕಳಿಬ್ಬರಿಗೂ ಪೋಷಕರ ಈ ಕೃತ್ಯ ತಿಳಿದಿರಲಿಲ್ಲ. ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದಲೇ ಈ ಕೃತ್ಯಕ್ಕಿಳಿದಿದ್ದ ದಂಪತಿ ಗುರುತು ಮರೆಮಾಚಲು ಮುಖಕ್ಕೆ ಮಾಸ್ಕ್‌ ಧರಿಸಿಕೊಳ್ಳುತ್ತಿದ್ದರು. ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಿಸಲು 4 ಹಂತದ ಯೋಜನೆ ಪ್ರಸ್ತಾಪಿಸಿದ ರಾಜನಾಥ್ ಸಿಂಗ್

    ದಂಪತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 296 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67 (ಎ) ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

  • ಸಿಎಂ ಏನು ತಪ್ಪು ಮಾಡಿಲ್ಲ, ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ: ಡಿಕೆಶಿ

    ಸಿಎಂ ಏನು ತಪ್ಪು ಮಾಡಿಲ್ಲ, ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ: ಡಿಕೆಶಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಏನು ತಪ್ಪು ಮಾಡಿಲ್ಲ, ಕಾನೂನಿಗೆ ಗೌರವ ಕೊಟ್ಟು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಡಿಸಿಎಂ ಡಿಕೆಶಿವಕುಮಾರ್ (DCM DK Shivakumar) ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.ಇದನ್ನೂ ಓದಿ: 132 ವರ್ಷ ದಾಖಲೆ ಸರಿಗಟ್ಟಿದ ಟ್ರಂಪ್‌ – ಗೆದ್ದಿದ್ದು ಹೇಗೆ?

    ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ (Lokayuktha) ವಿಚಾರಣೆಗೆ ಹಾಜರಾದ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಅವರು ಕಾನೂನಿಗೆ ಗೌರವ ಕೊಟ್ಟಿದ್ದಾರೆ. ಸಿಎಂಗೆ ನೋಟಿಸ್ ಕೊಟ್ಟಿದ್ರು, ಚುನಾವಣೆ ಪ್ರಚಾರ ಇದ್ದರೂ ಕೂಡ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಕಾನೂನಿಗೆ ಗೌರವ ಕೊಡಬೇಕು ಎಂದು ಪ್ರಚಾರವನ್ನು ಕೈಬಿಟ್ಟು ವಿಚಾರಣೆಗೆ ಹಾಜರಾಗಿದ್ದಾರೆ. ಸಿಎಂ ಅವರು ಒಂದು ವಾರ ವಿನಾಯಿತಿ ಕೇಳಬಹುದಿತ್ತು. ಆದರೆ ಅಧಿಕಾರದಲ್ಲಿ ಇದ್ದುಕೊಂಡು ಅಧಿಕಾರ ದುರುಪಯೋಗ ಮಾಡಬಾರದು ಎಂದು ಹೇಳಿ ಕಾನೂನಿಗೆ ಗೌರವ ಕೊಟ್ಟು ಹೋಗಿದ್ದಾರೆ. ಸಿಎಂ ಏನು ತಪ್ಪು ಮಾಡಿಲ್ಲ. ಲೋಕಾಯುಕ್ತ ಏನು ಕೇಳುತ್ತಾರೋ ಅದಕ್ಕೆ ಉತ್ತರ ಕೊಡುತ್ತಾರೆ ಎಂದು ಪ್ರತಿಕ್ರಿಯೆ ನೀಡಿದರು.

    ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಮುಗಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಲೋಕಾಯುಕ್ತ ಕೇಳಿರುವ ಪ್ರಶ್ನೆಗಳ ಕುರಿತು ಮುಡಾದಲ್ಲಿ ಹಗರಣದಲ್ಲಿ ಏನಿದೆ? ಏನು ಇಲ್ಲ? ಮಂಜೂರು ಮಾಡಿಲ್ಲ, ಸಹಿಯೂ ಹಾಕಿಲ್ಲ ಎಂದು ನೀವು ಲೋಕಾಯುಕ್ತ ಅಧಿಕಾರಿಗಳಿಗೆ ಕೇಳಬೇಕು. ಲೋಕಾಯುಕ್ತದವರು ಕರೆದಿದ್ದರು. ಸಿಎಂ ಹೋಗಿದ್ದಾರೆ ಅಷ್ಟೇ ಎಂದು ತಿಳಿಸಿದರು.ಇದನ್ನೂ ಓದಿ: ‘ಜೈ ಹನುಮಾನ್’ ಸಿನಿಮಾದಲ್ಲಿ ರಾಮನಾಗಿ ರಾಣಾ ದಗ್ಗುಬಾಟಿ?

  • ನಟಿ ಅಮೃತಾ ಆತ್ಮಹತ್ಯೆ: ‘ದೋಣಿ’ ಕಥೆಯ ಹಿಂದಿದೆ ಅನುಮಾನ

    ನಟಿ ಅಮೃತಾ ಆತ್ಮಹತ್ಯೆ: ‘ದೋಣಿ’ ಕಥೆಯ ಹಿಂದಿದೆ ಅನುಮಾನ

    ಡೀ ಕುಟುಂಬ ಮದುವೆಯ ಸಡಗರದಲ್ಲಿ ಸಂಭ್ರಮಿಸುತ್ತಿದ್ದರೆ, ಆ ಕುಟುಂಬಕ್ಕೆ ನೇಣು ಹಾಕಿಕೊಂಡು ಶಾಕ್ ನೀಡಿದ್ದರು ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ (Amrita Pandey). ಮುಂಬೈನಲ್ಲಿ ವಾಸವಿದ್ದ ಅಮೃತಾ, ಮನೆಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾಗಲ್ಪುರಕ್ಕೆ ಬಂದಿದ್ದರು. ಈ ಸಮಯದಲ್ಲಿ ಅವರು ಅಪಾರ್ಟ್‍ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದರು.

    ಸಾವಿಗೆ ಇಂಥದ್ದೇ ಕಾರಣ ಎಂದು ತಿಳಿದು ಬಂದಿಲ್ಲ. ಆದರೆ, ಸಾವಿಗೂ ಮುನ್ನ ಅವರು ವಾಟ್ಸಪ್ ಸ್ಟೇಟಸ್ ಹಾಕಿದ್ದು, ಅದು ಅನುಮಾನ ಮೂಡಿಸುವಂತಿತ್ತು. ಸ್ಟೇಟಸ್ ಹಾಕಿ ಒಂದು ಗಂಟೆ ನಂತರ ಅಮೃತಾ ಶವವಾಗಿ ಪತ್ತೆಯಾಗಿದ್ದರು. ಈ ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ದೋಣಿಯ ಕುರಿತಾದ ಬರಹವಿತ್ತು.

     

    ವಾಟ್ಸಪ್ ಸ್ಟೇಟಸ್ ನಲ್ಲಿ ಅವರು ಅವನ ಜೀವನ 2 ದೋಣಿಯಲ್ಲಿ (Boat) ನಡೆಯುತ್ತಿದೆ. ನಾನು ನನ್ನ ದೋಣೆಯನ್ನು ಮುಳುಗಿಸಿಕೊಳ್ಳುವ ಮೂಲಕ, ಅವನಿಗೆ ದೋಣಿಗೆ ಸುಗಮ ದಾರಿ ಮಾಡಿಕೊಡುವೆ ಎಂದು ಬರೆದುಕೊಂಡಿದ್ದರು. ಈ ದೋಣಿಯ ಅರ್ಥ ಅವರ ಪತಿ ಎಂದು ಹೇಳಲಾಗುತ್ತಿದೆ. ನಟಿಯ ಪತಿಗೆ ಮತ್ತೊಂದು ಸಂಬಂಧವಿತ್ತಾ? ಇದೇ ಕಾರಣಕ್ಕೆ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಸುತ್ತ ತನಿಖೆ ನಡೆಯುತ್ತಿದೆ.

  • ನನ್ನ ಕುಟುಂಬದ ಆಸ್ತಿ ತನಿಖೆ ಮಾಡಿಸಲಿ: ಚೆಲುವರಾಯಸ್ವಾಮಿಗೆ ಕುಮಾರಸ್ವಾಮಿ ಸವಾಲ್

    ನನ್ನ ಕುಟುಂಬದ ಆಸ್ತಿ ತನಿಖೆ ಮಾಡಿಸಲಿ: ಚೆಲುವರಾಯಸ್ವಾಮಿಗೆ ಕುಮಾರಸ್ವಾಮಿ ಸವಾಲ್

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಇದೆ. ನನ್ನ ಆಸ್ತಿಯನ್ನು (Property) ತನಿಖೆ (Investigation) ಮಾಡಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಹೆಸರು ಹೇಳದೆ ಪರೋಕ್ಷವಾಗಿ ಸಚಿವ ಚೆಲುವರಾಯಸ್ವಾಮಿಗೆ (N. Chaluvaraya Swamy) ಸವಾಲ್ ಹಾಕಿದ್ದಾರೆ.

    ಕುಮಾರಸ್ವಾಮಿ ಆಸ್ತಿ ತನಿಖೆ ಮಾಡಿಸಿ ಎಂಬ ಚೆಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನನ್ನ ಸ್ನೇಹಿತರೊಬ್ಬರು, ನನ್ನ ಆಸ್ತಿ ತನಿಖೆ ಮಾಡುವ ಭಯಕ್ಕೆ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಈಗ ತನಿಖೆ ಮಾಡಿ ಎಂದು ಹೇಳುತ್ತಿದ್ದಾರೆ. ನಾನು ಈಗಲೂ ಸಿದ್ಧ. ನನ್ನ ಆಸ್ತಿ ತನಿಖೆ ಮಾಡಿಸಿ. ನಿಮ್ಮದೆ ಸರ್ಕಾರ ಇದೆ. ಸಿಎಂಗೆ ಹೇಳಿ ಯಾವ ತನಿಖೆ ಬೇಕೋ ಮಾಡಿಸಿ ಎಂದರು. ಇದನ್ನೂ ಓದಿ: ಐದು ಹೆಸರು ಎಂದರೆ ವರ್ಗ ಏನಯ್ಯ – ಮಗನ ವೈರಲ್ ವೀಡಿಯೋಗೆ ಸಿಎಂ ಪ್ರತಿಕ್ರಿಯೆ

    ನನ್ನ ಆಸ್ತಿ ತನಿಖೆ ಆಗಲಿ. ಅದರ ಜೊತೆ ಮಾಕಳಿ ಗ್ರಾಮದ ಮೂರೂವರೆ ಎಕರೆ ಕೆರೆ ಜಾಗ ಸರ್ವೆ ನಂಬರ್ 13 ಕೆರೆನೇ ಮಾಯ ಆಗಿದೆ. ಆ ಕೆರೆ ಜಾಗ ನಾನು ನುಂಗಿ ಹಾಕಿದ್ದೀನಾ? ಆ ಕೆರೆ ನುಂಗಿ ಹಾಕಿದ್ದು ಯಾರು? ಇದು ತನಿಖೆ ಆಗಲಿ ಅಂತ ಚೆಲುವರಾಯಸ್ವಾಮಿ ವಿರುದ್ಧ ಕುಮಾರಸ್ವಾಮಿ ಬಾಂಬ್ ಸಿಡಿಸಿದರು. ಇದನ್ನೂ ಓದಿ: ಮಾಜಿ ಎಂಎಲ್‌ಎ ರಾಜಕೀಯವಾಗಿ ಭಾಗಿಯಾಗೋದು ಅಪರಾಧವಲ್ಲ: ಯತೀಂದ್ರ ಪರ ಚಲುವರಾಯಸ್ವಾಮಿ ಬ್ಯಾಟಿಂಗ್

    1962ರಲ್ಲಿ ದೇವೇಗೌಡರು ರಾಜಕೀಯಕ್ಕೆ ಬಂದರು. ಒಬ್ಬರು ಕಾರ್ಪೋರೇಟರ್, ಜಿಲ್ಲಾ ಪಂಚಾಯತಿ ಸದಸ್ಯ ಮಾಡಿರೋ ಹಣ ನಾನು ಮಾಡಿಲ್ಲ. ನಾನು ಸಿನಿಮಾದಲ್ಲಿ ದುಡಿದು 45 ಎಕರೆ ಜಾಗ ತೆಗೆದುಕೊಂಡಿದ್ದೇನೆ. ನನ್ನ ಜೊತೆ 24 ಗಂಟೆ ಇದ್ದವರೇ ಇವರು. ಬಲಗೈನಲ್ಲಿ ತೆಗೆದುಕೊಂಡು ಎಡಗೈನಲ್ಲಿ ದಾನ ಮಾಡಿದ್ದೇನೆ. ರಾಜಕೀಯಕ್ಕೆ ನಾನು ಹಣ ಮಾಡಿಲ್ಲ. ಪಕ್ಷ ಉಳಿಸೋಕೆ ನಾನು ಮಾಡಿದ್ದೇನೆ. ನಾನು ಇವರ ರೀತಿ ದುಡ್ಡು ಮಾಡಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿಕೆಶಿಯನ್ನು ಸಿಎಂ ಮಾಡ್ತೀವಿ ಅಂತ ಕುಮಾರಸ್ವಾಮಿ ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು: ಎಸ್‌ಟಿಎಸ್

    ನಾನು 100% ಶುದ್ಧ ಇಲ್ಲ. ಇವತ್ತಿನ ರಾಜಕೀಯ ಅಧಿಕಾರ ದುಡ್ಡು ಇಲ್ಲದೆ ನಡೆಯಲ್ಲ. ಇದನ್ನು ಓಪನ್ ಆಗಿ ಹೇಳಿದ್ದೇನೆ. ಆದರೆ ಇವರ ರೀತಿ ಸರ್ಕಾರದ ಆದೇಶ ಮಾರಾಟಕ್ಕೆ ಇಟ್ಟಿಲ್ಲ. ಚುನಾವಣೆ ಬಂದಾಗ ನಾನು ಭಿಕ್ಷೆ ಬೇಡಿದ್ದೇನೆ. ಆದರೆ ನಾನು ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಲಂಚಕ್ಕೆ ಶಾಸಕರ ಪ್ರೋತ್ಸಾಹ? – ಶರಣು ಸಲಗರ್ ಆಡಿಯೋ ವೈರಲ್

  • ತನಿಷಾ ಕುಪ್ಪಂಡ ಕೇಸ್: ಒರಿಜನಲ್ ವಿಡಿಯೋ ಕೇಳಿದ ಪೊಲೀಸ್

    ತನಿಷಾ ಕುಪ್ಪಂಡ ಕೇಸ್: ಒರಿಜನಲ್ ವಿಡಿಯೋ ಕೇಳಿದ ಪೊಲೀಸ್

    ಬಿಗ್ ಬಾಸ್ ಮನಯೆಲ್ಲಿ ನಟಿ ತನಿಷಾ ಕುಪ್ಪಂಡ (Tanisha Kuppanda) ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದ್ದಂತೆ ನಿನ್ನೆ ಕುಂಬಳಗೋಡು ಪೊಲೀಸರು ಬಿಗ್ ಬಾಸ್ ಮನೆಗೆ ತೆರಳಿ, ನಟಿಯ ವಿಚಾರಣೆ ನಡೆಸಿದ್ದಾರೆ. ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

    ಬಿಗ್ ಬಾಸ್ ಆಡಳಿತ ಮಂಡಳಿಗೂ ಪೊಲೀಸರು ನೋಟಿಸ್ ನೀಡಿದ್ದು, ಪ್ರೊಮೋದ ಓರಿಜನಲ್ ಫುಟೇಜ್ ಕೊಡಲು ಸೂಚಿಸಿದ್ದಾರೆ. ಪ್ರೋಮೋ ವಿಡಿಯೋ ಜೊತೆಗೆ ಒರಿಜಿನಲ್ ವಿಡಿಯೋವನ್ನು ಇಂದು ಪೊಲೀಸರು ಸಂಜೆ ಎಫ್.ಎಸ್.ಎಲ್ ಗೆ ಕಳುಹಿಸುವ ಸಾಧ್ಯತೆ ಇದ್ದು, ವರದಿ ಬಂದ ನಂತರ ತನಿಷಾ ಅವರ ವಿಚಾರಣೆಯನ್ನು ಪೊಲೀಸರು ಮುಂದುವರೆಸಲಿದ್ದಾರೆ.

    ಏನಿದು ಪ್ರಕರಣ?

    ಸದ್ಯ ಬಿಗ್ ಬಾಸ್ ಮನೆಯಲ್ಲಿರುವ ನಟಿ ತನಿಷಾ ಕುಪ್ಪಂಡ ಅವರ ಮೇಲೆ ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನಟಿ ತನಿಷಾ ಕುಪ್ಪಂಡ ವಿರುದ್ಧ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ನವೆಂಬರ್ 11ರಂದು ದೂರು ದಾಖಲಾಗಿದ್ದು, ನವೆಂಬರ್‌ 12 ದೂರಿನ ಆಧಾರದ ಮೇಲೆ‌ ಕುಂಬಳಗೂಡು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಬಗ್ಗೆ ತನಿಷಾ ವಿರುದ್ಧ ಆರೋಪ ಎದುರಾಗಿದೆ.

     

    ಡ್ರೋನ್ ಪ್ರತಾಪ್‌ಗೆ ಮಾತನಾಡುವ ಭರದಲ್ಲಿ ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ಆಗ್ರಹಿಸಿ ಎಸ್‌ಸಿಎಸ್ಟಿ ಕಾಯ್ದೆಯಡಿ ದೂರು ದಾಖಲಾಗಿದೆ. ವರ್ತೂರು ಸಂತೋಷ್ ನಂತರ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಜೈಲು ಸೇರುತ್ತಾರಾ? ಕಾಯಬೇಕಿದೆ.

  • 10ನೇ ತರಗತಿ ವಿದ್ಯಾರ್ಥಿಯನ್ನ ಸೆಕ್ಸ್‌ಗೆ ಪೀಡಿಸುತ್ತಿದ್ದ ಟೀಚರ್‌; ಮತಾಂತರಕ್ಕೂ ಒತ್ತಾಯ – ಕೇಸ್‌ ದಾಖಲು

    10ನೇ ತರಗತಿ ವಿದ್ಯಾರ್ಥಿಯನ್ನ ಸೆಕ್ಸ್‌ಗೆ ಪೀಡಿಸುತ್ತಿದ್ದ ಟೀಚರ್‌; ಮತಾಂತರಕ್ಕೂ ಒತ್ತಾಯ – ಕೇಸ್‌ ದಾಖಲು

    ಲಕ್ನೋ: ಇತ್ತೀಚಿನ ದಿನಗಳಲ್ಲಿ ಕಾಮಕ್ಕೆ ಕಣ್ಣಿಲ್ಲ ಅನ್ನೋದು ಅನೇಕ ಪ್ರಕರಣಗಳಲ್ಲಿ ಸಾಬೀತಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಶಿಕ್ಷಕಿಯೊಬ್ಬಳು (Teacher) ತನ್ನದೇ ಶಾಲೆಯ ವಿದ್ಯಾರ್ಥಿಯನ್ನು (Student) ಸೆಕ್ಸ್‌ಗಾಗಿ ಪೀಡಿಸುತ್ತಿದ್ದ ಪ್ರಕರಣವೇ ಇದಕ್ಕೆ ತಾಜಾ ಉದಾಹರಣೆಯಾಗಿದೆ.

    ಹೌದು.. ಪಾಠ ಕಲಿಸಬೇಕಿದ್ದ ಶಿಕ್ಷಕಿಯೇ ವಿದ್ಯಾರ್ಥಿಗೆ ಪ್ರೇಮಪಾಠ ಹೇಳಿಕೊಡಲು ಶುರು ಮಾಡಿದ್ದಾಳೆ. ವಿದ್ಯಾರ್ಥಿಯನ್ನ ಸೆಕ್ಸ್‌ಗೆ ಪೀಡಿಸುತ್ತಾ, ಮತಾಂತರಕ್ಕೂ ಒತ್ತಡ ಹೇರುತ್ತಿದ್ದ ಶಿಕ್ಷಕಿ ಇದೀಗ ಪೊಲೀಸರಿಗೆ (UP Police) ಸಿಕ್ಕಿಬಿದ್ದಿದ್ದಾಳೆ. ನನ್ನ ಮಗನನ್ನು ತನ್ನೊಂದಿಗೆ ಲೈಂಗಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸುತ್ತಿದ್ದಳು, ಅಶ್ಲೀಲ ವಾಟ್ಸಪ್‌ ಮೆಸೇಜ್‌ಗಳನ್ನು ಕಳುಹಿಸುವ ಮೂಲಕ ಆತನನ್ನ ಸೆಕ್ಸ್‌ಗೆ ಪ್ರಚೋದಿಸುತ್ತಿದ್ದಳು. ಅಷ್ಟೇ ಅಲ್ಲದೇ ಮತಾಂತರಕ್ಕೂ ಒತ್ತಾಯಿಸುತ್ತಿದ್ದಳು ಎಂದು ಮಹಿಳಾ ಶಿಕ್ಷಕಿ ವಿರುದ್ಧ ವಿದ್ಯಾರ್ಥಿಯ ತಂದೆ ದೂರು ದಾಖಲಿಸಿದ್ದಾರೆ.

    ಮ್ಯಾಟರ್ ಕ್ಯಾಂಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಉನ್ನಾವೋ ನಿವಾಸಿ ಕ್ಯಾಂಟ್ ಪ್ರದೇಶದ ಹೆಚ್ಚುವರಿ ಎಸ್ಪಿ ಬ್ರಿಜ್ ನಾರಾಯಣ ಸಿಂಗ್ ಅವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಬಳಿಕ ಅವರು ಸಂಬಂಧಪಟ್ಟ ಪೊಲೀಸ್‌ ಠಾಣೆಗೆ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

    ಆ ಟೀಚರ್‌ ಮಾಡಿದ ಕೆಲಸವಾದರೂ ಏನು?
    ಇಲ್ಲಿನ ಪ್ರತಿಷ್ಟಿತ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿಗೆ ಅದೇ ಕಾಲೇಜಿನ ಮಹಿಳಾ ಶಿಕ್ಷಕಿಯೊಬ್ಬಳು (Female Teacher) ಲೈಂಗಿಕತೆಗೆ ಪ್ರಚೋದಿಸಿದ್ದಾರೆ. ಮೊದಲು ರಾತ್ರಿಯಿಡಿ ಫೋನ್‌ನಲ್ಲಿ ಹರಟೆ ಕೊಚ್ಚುತ್ತಿದ್ದ ಶಿಕ್ಷಕಿ, ಬಳಿಕ ವಿದ್ಯಾರ್ಥಿಯನ್ನ ಲೈಗಿಂಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದಾಳೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಯನ್ನ ಮತಾಂತರಕ್ಕೂ ಒತ್ತಾಯಿಸಿದ್ದಾಳೆ. ಶಿಕ್ಷಕಿಯ ಪತಿ ಮತ್ತು ಸಹೋದರ ಅದೇ ಶಾಲೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಅವರೂ ಸಹ ವಿದ್ಯಾರ್ಥಿಯ ಮತಾಂತರಕ್ಕೆ ಒತ್ತಾಯಿಸಿದ್ದಾರೆ ಎಂದು ಸಂತ್ರಸ್ತನ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಅಲ್ಲದೇ ಶಿಕ್ಷಕಿ ವಿದ್ಯಾರ್ಥಿಯೊಂದಿಗೆ ನಡೆಸಿದ ಚಾಟಿಂಗ್‌ ಸ್ಕ್ರೀನ್‌ಶಾಟ್‌ಗಳನ್ನ ಪೊಲೀಸರಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮತಾಂತರಕ್ಕೆ ಒತ್ತಡ ಹೇರಿರುವ ಬಗ್ಗೆಯೂ ಸಾಕ್ಷಿಗಳನ್ನ ನೀಡುವಂತೆ ಪೊಲೀಸರು ಕೇಳಿದ್ದಾರೆ. ಆದ್ರೆ ಈ ವಿಷಯ ಪ್ರಸ್ತಾಪದ ಚಾಟಿಂಗ್‌ಗಳನ್ನ ವಿದ್ಯಾರ್ಥಿ ಡಿಲೀಟ್‌ ಮಾಡಿರುವುದರಿಂದ ಲೈಂಗಿಕತೆಗೆ ಒತ್ತಾಯಿಸುತ್ತಿದ್ದರು ಎನ್ನುವ ಆರೋಪದ ಮೇಲೆ ತನಿಖೆ ನಡೆಯುತ್ತಿದೆ.

    ವಿದ್ಯಾರ್ಥಿ ತಂದೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎ.ಆರ್.ರೆಹಮಾನ್ ಕಾರ್ಯಕ್ರಮ ವಿರುದ್ಧ ತನಿಖೆಗೆ ಆದೇಶ

    ಎ.ಆರ್.ರೆಹಮಾನ್ ಕಾರ್ಯಕ್ರಮ ವಿರುದ್ಧ ತನಿಖೆಗೆ ಆದೇಶ

    ತ್ತೀಚೆಗಷ್ಟೇ ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ (A.R. Rahman) ಅವರ ಕಾರ್ಯಕ್ರಮದಲ್ಲಿ ಸಾಕಷ್ಟು ಜನರಿಗೆ ತೊಂದರೆ ಆಯಿತು ಎನ್ನುವ ಕಾರಣಕ್ಕಾಗಿ ಆಕ್ರೋಶ ವ್ಯಕ್ತವಾಗಿತ್ತು. ಹತ್ತು ಸಾವಿರ ಜನರಷ್ಟೇ ಸೇರಬಹುದಾದ ಸ್ಥಳದಲ್ಲಿ 40 ಸಾವಿರಕ್ಕೂ ಹೆಚ್ಚು ಜನರಿಗೆ ಟಿಕೆಟ್ ನೀಡಿ ಸಂಘಟಿಕರು ಅವ್ಯವಸ್ಥೆಗೆ ಕಾರಣವಾಗಿದ್ದರು. ಇದರಿಂದಾಗಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ತೊಂದರೆಯಾಗಿತ್ತು ಎಂದು ದೂರಿದ್ದರು. ಈ ಕುರಿತು ರೆಹಮಾನ್ ಕ್ಷಮೆ ಕೂಡ ಕೇಳಿದ್ದರು.

    ಈ ಕಾರ್ಯಕ್ರಮದಲ್ಲಿ ನನ್ನದು ಸಂಗೀತ ನೀಡುವ ಪಾತ್ರವಷ್ಟೇ. ಉಳಿದಂತೆ ಯಾವ ವಿಚಾರವೂ ನನಗೆ ಗೊತ್ತಿರಲಿಲ್ಲ. ಹೆಚ್ಚು ಸಂಖ್ಯೆಯಲ್ಲಿ ಜನರು ಬಂದಿದ್ದರಿಂದ ನೂಕು ನುಗ್ಗಲು ಉಂಟಾಗಿದೆ. ಅದಕ್ಕಾಗಿ ಕ್ಷಮೆ ಕೇಳುತ್ತೇನೆ ಮತ್ತು ಈ ಕುರಿತಂತೆ ಯಾರನ್ನೂ ನಾನು ದೂರುವುದಿಲ್ಲ ಎಂದು ರೆಹಮಾನ್ ಟ್ವೀಟ್ ಮಾಡಿದ್ದರು. ಈ ಕಾರ್ಯಕ್ರಮದ ಕುರಿತಂತೆ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ ತನಿಖೆಗೆ (Investigation) ಮುಂದಾಗಿದೆ. ಇದನ್ನೂ ಓದಿ:ಕಿಚ್ಚನ 50ನೇ ಚಿತ್ರಕ್ಕೆ ‘ಕಾಂತಾರ’ ಹೀರೋ ಆ್ಯಕ್ಷನ್ ಕಟ್

    ರೆಹಮಾನ್ ಅವರ ಈ ಸಂಗೀತ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಕೂಡ ಆಗಿದೆ ಎಂದು ವರದಿಗಳು ಆಗಿವೆ. ಅಲ್ಲದೇ ಪೊಲೀಸ್ ಭದ್ರತೆ ಕೂಡ ಸೂಕ್ತವಾಗಿ ಇರಲಿಲ್ಲ ಎನ್ನುವ ದೂರುಗಳಿವೆ. ಇವೆಲ್ಲವನ್ನೂ ಪರಿಗಣಿಸಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಈಗಾಗಲೇ ಭದ್ರತೆಗೆ ನಿಯೋಜನೆಗೊಂಡಿದ್ದ ಅಧಿಕಾರಿಗೆ ವರ್ಗಾವಣೆ ಶಿಕ್ಷೆ ಕೂಡ ನೀಡಲಾಗಿದೆ.

     

    ಈ ಕಾರ್ಯಕ್ರಮದಲ್ಲಿ ಒಟ್ಟು 36 ಸಾವಿರ ಟಿಕೆಟ್ ಮಾರಾಟವಾಗಿವೆಯಂತೆ. ಜೊತೆಗೆ ಟಿಕೆಟ್ ಇಲ್ಲದೇ ಅನೇಕರು ಒಳ ನುಗ್ಗಿದ್ದಾರೆ ಎಂದು ಹೇಳಲಾಗುತ್ತಿದೆ. ನಕಲಿ ಟಿಕೆಟ್ ಪಡೆದೂ ಜನರು ನುಗ್ಗಿದ್ದಾರೆ ಎನ್ನುವ ಮಾಹಿತಿ ಇದೆ. ಈ ಎಲ್ಲವನ್ನೂ ತನಿಖೆಗೆ ಒಳಪಡಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಅಪರ್ಣಾ ಸಾವಿಗೆ ಮತ್ತೊಂದು ತಿರುವು: ದಿನಕ್ಕೊಂದು ಸ್ಫೋಟಕ ಮಾಹಿತಿ

    ನಟಿ ಅಪರ್ಣಾ ಸಾವಿಗೆ ಮತ್ತೊಂದು ತಿರುವು: ದಿನಕ್ಕೊಂದು ಸ್ಫೋಟಕ ಮಾಹಿತಿ

    ಳೆದ ವಾರವಷ್ಟೇ ನೇಣಿಗೆ ಶರಣಾಗಿದ್ದ (Suicide)  ಮಲಯಾಳಂ ಖ್ಯಾತ ನಟಿ ಅಪರ್ಣಾ ನಾಯರ್ (Aparna Nair) ಸಾವಿನ ಸುದ್ದಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತದೆ.  ಅಪರ್ಣಾ ಸಾವಿಗೆ ಪತಿಯ ಮತ್ತೊಂದು ಸಂಬಂಧ ಎಂದು ಹೇಳಲಾಗುತ್ತಿದ್ದು, ಸ್ವತಃ ಅಪರ್ಣಾ ತಂಗಿಯ ಜೊತೆಯೇ ಪತಿ ಅಫೇರ್ ಇಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ.

    ಅಪರ್ಣಾ ತಂಗಿಯೊಂದಿಗೆ ಪತಿಯು ಸಂಬಂಧ ಇಟ್ಟುಕೊಂಡಿರುವ ವಿಚಾರವಾಗಿ ಹಲವಾರು ಬಾರಿ ಮನೆಯಲ್ಲಿ ಗಲಾಟೆ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೂ ಅಪರ್ಣಾ ದೂರು ನೀಡಿದ್ದರು. ಆದರೂ ಪತಿ ಸರಿ ಹೋಗಿರಲಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ. ಈ ನಡೆಯೇ ಅಪರ್ಣಾ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ರಮೇಶ್ ಅರವಿಂದ್ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಗುಡ್ ನ್ಯೂಸ್

    ಈ ಹಿಂದೆ ಅಪರ್ಣಾ ಅವರ ಪತಿಯ ಕುಡಿತವೇ ಸಾವಿಗೆ ಕಾರಣವೆಂದು ಎಫ್.ಐ.ಆರ್ ನಲ್ಲಿ ದಾಖಲಾಗಿತ್ತು. ಗಂಡನ ಕುಡಿತದ ಚಟಕ್ಕೆ ಅಪರ್ಣಾ ಬೇಸತ್ತು ಹೋಗಿದ್ದರಿಂದ, ಈ ವಿಚಾರವನ್ನು ಹಲವಾರು ಬಾರಿ ತಮ್ಮ ತಾಯಿಯ ಜೊತೆ ಹಂಚಿಕೊಂಡಿದ್ದರಂತೆ. ಸಾವಿಗೂ ಎರಡು ಗಂಟೆ ಮುಂಚೆ ತಾಯಿಗೆ ಕರೆ ಮಾಡಿ, ತನ್ನ ನೋವನ್ನು ಹೇಳಿಕೊಂಡಿದ್ದರು ಎಂದು ಅಪರ್ಣಾ ಸಹೋದರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗಸ್ಟ್ 31ರ ಸಂಜೆ 7.30ರ ಹೊತ್ತಿಗೆ ಅಪರ್ಣಾ ಅವರ ದೇಹ ನೇಣು (Suicide) ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿತ್ತು. ಅವರ ತಾಯಿ ಮತ್ತು ಸಹೋದರಿ ಕೂಡಲೇ ಅಪರ್ಣಾ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆ ತಲುಪುವುದರ ಹೊತ್ತಿಗೆ ಅಪರ್ಣಾ ಉಸಿರು ಚೆಲ್ಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದರು.

     

    ತಿರುವನಂತಪುರಂ (Thiruvananthapuram) ನಿವಾಸದಲ್ಲಿ ಪತಿ, ಇಬ್ಬರು ಮಕ್ಕಳೊಂದಿಗೆ ಅಪರ್ಣಾ ವಾಸಿಸುತ್ತಿದ್ದರು. ಕೇವಲ 31ನೇ ವಯಸ್ಸಿನಲ್ಲೇ ಕುಟುಂಬ ಮತ್ತು ಅಪಾರ ಅಭಿಮಾನಿಗಳನ್ನು ನಟಿ ಅಗಲಿದ್ದಾರೆ. ತನಿಖೆ (Investigation) ನಡೆಸುತ್ತಿರುವ ಪೊಲೀಸರಿಗೆ ದಿನಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಅಂತಿಮವಾಗಿ ಅಪರ್ಣಾ ಸಾವಿಗೆ ಕಾರಣ ಏನು ಎನ್ನುವುದು ಕೋರ್ಟಿನಲ್ಲೇ ಅಂತಿಮವಾಗಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Udupi College Video Row – ತನಿಖೆ ಶುರು ಮಾಡಿದ ಕುಂದಾಪುರ ಡಿವೈಎಸ್ಪಿ

    Udupi College Video Row – ತನಿಖೆ ಶುರು ಮಾಡಿದ ಕುಂದಾಪುರ ಡಿವೈಎಸ್ಪಿ

    ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ (Vide0) ಚಿತ್ರೀಕರಣ ಘಟನೆಗೆ ಸಂಬಂಧಪಟ್ಟ ಹಾಗೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಕುಂದಾಪುರ (Kundapura) ಡಿವೈಎಸ್ಪಿ ಪ್ರಕರಣದ ತನಿಖೆ ಶುರು ಮಾಡಿದ್ದಾರೆ. ಕಾಲೇಜಿಗೆ ಭೇಟಿ ಕೊಟ್ಟು ಆಡಳಿತ ಮಂಡಳಿಯ ವಿಚಾರಣೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

    ಉಡುಪಿಯ (Udupi) ಕಾಲೇಜಿನ ವಿಡಿಯೋ ಪ್ರಕರಣ ತನಿಖೆ ಹಂತದಲ್ಲಿದೆ. ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್‌ನಿಂದ ಜಾಮೀನು ನೀಡಲಾಗಿದೆ. ಹಿಂದಿನ ತನಿಖಾಧಿಕಾರಿಯನ್ನು ಬದಲು ಮಾಡಿರುವ ಎಸ್‌ಪಿ ಅಕ್ಷಯ್ ಮಚ್ಚೀಂದ್ರ ಹಾಕೆ ಹಿರಿಯ ಪೊಲೀಸ್ ಅಧಿಕಾರಿ ಬೆಳ್ಳಿಯಪ್ಪ ಅವರಿಗೆ ತನಿಖೆಯ ಜವಾಬ್ದಾರಿ ನೀಡಿದ್ದಾರೆ. ಕುಂದಾಪುರದಲ್ಲಿ ದಕ್ಷ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳ್ಳಿಯಪ್ಪ ಉಡುಪಿಯ ಕಾಲೇಜಿಗೆ ಬಂದು ತನಿಖೆಯನ್ನು (Investigation) ಆರಂಭಿಸಿದ್ದಾರೆ. ಇದನ್ನೂ ಓದಿ: ಆಗಸ್ಟ್‌ನಲ್ಲಿ ಬರುವ ಜುಲೈ ತಿಂಗಳ ಕರೆಂಟ್ ಬಿಲ್ ಫ್ರೀ: ಕೆಜೆ ಜಾರ್ಜ್

    ಆಡಳಿತ ಮಂಡಳಿಯ ಸಿಬ್ಬಂದಿಗಳ ಜೊತೆ ಮಾತನಾಡಿದ ಅವರು, ಜುಲೈ 18ರಂದು ನಡೆದ ಎಲ್ಲಾ ಬೆಳವಣಿಗೆಗಳನ್ನು ಸ್ಥಳದಲ್ಲಿದ್ದವರಿಂದ ಪಡೆದುಕೊಂಡಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಪಟ್ಟ ಅಗತ್ಯ ಹೇಳಿಕೆಗಳನ್ನು ದಾಖಲು ಮಾಡಿಕೊಂಡಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಮೇಲೂ ಪ್ರಕರಣ ದಾಖಲಾಗಿದ್ದು, ನಿರ್ದೇಶಕರನ್ನು ವಿಚಾರಣೆ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸನ್ನಿಹಿತ – ವರಿಷ್ಠರ ಭೇಟಿಗೆ ದೆಹಲಿಗೆ ಸಿಟಿ ರವಿ

    ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪುನರ್ ವಿಮರ್ಶೆ ಮಾಡಿದ್ದಾರೆ. ವಿದ್ಯಾರ್ಥಿನಿಯರನ್ನು ಹೊರಗಿನಿಂದ ಬಂದು ಭೇಟಿ ಮಾಡುತ್ತಿದ್ದರು ಎನ್ನುವ ಆರೋಪದಡಿ ಸಿಸಿಟಿವಿ ದೃಶ್ಯಗಳಲ್ಲಿ ಸಾಕ್ಷಿಗಳ ಲಭ್ಯತೆಗಾಗಿ ಜಾಲಾಡಿದ್ದಾರೆ. ಈಗಾಗಲೇ ಆರೋಪಿ ಮೂವರು ವಿದ್ಯಾರ್ಥಿನಿಯರು ಮತ್ತು ಸಂತ್ರಸ್ತೆಯ ಹೇಳಿಕೆಗಳನ್ನು ಹಿಂದಿನ ತನಿಖಾಧಿಕಾರಿ ಮಂಜುನಾಥ ಗೌಡ ಪಡೆದಿದ್ದರು. ಇದೀಗ ಬೆಳ್ಳಿಯಪ್ಪ ಮತ್ತೊಂದು ಸುತ್ತಿನ ಮಾತುಕತೆ ಮಾಡಿ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿಗಾಗಿ ಕಾಯುತ್ತಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ವರ್ಗಾವಣೆ ದಂಧೆ, ಸಿಎಂ ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ: ಬೊಮ್ಮಾಯಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]