Tag: ತಪಸ್ವಿನಿ ಪೂಣಚ್ಚ

  • ಸೀತಾ ಮಾತೆಯ ಲುಕ್‌ನಲ್ಲಿ ಕಂಗೊಳಿಸಿದ ನಟಿ ತಪಸ್ವಿನಿ ಪೂಣಚ್ಚ

    ಸೀತಾ ಮಾತೆಯ ಲುಕ್‌ನಲ್ಲಿ ಕಂಗೊಳಿಸಿದ ನಟಿ ತಪಸ್ವಿನಿ ಪೂಣಚ್ಚ

    ಸ್ಯಾಂಡಲ್‌ವುಡ್ (Sandalwood) ನಟಿ ತಪಸ್ವಿನಿ ಪೂಣಚ್ಚ (Thapaswini Poonacha) ಅವರು ಸೀತಾ ಮಾತೆಯ ಥೀಮ್‌ನಲ್ಲಿ ಸಖತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಸೀತೆಯ ಗೆಟಪ್‌ನಲ್ಲಿ ನಟಿ ಗಮನ ಸೆಳೆದಿದ್ದಾರೆ. ಈ ಕುರಿತ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ:ಧ್ರುವ ಸರ್ಜಾ ಮಕ್ಕಳ ನಾಮಕರಣದಲ್ಲಿ ಭಾಗಿಯಾದ ಸಂಜಯ್ ದತ್

    ‘ಹರಿಕಥೆ ಅಲ್ಲ ಗಿರಿಕಥೆ’ (Harikathe Alla Girikathe) ಚಿತ್ರದ ನಟಿ ತಪಸ್ವಿನಿ ಪೂಣಚ್ಚ ಅವರು ಕೆಂಪು ಬಣ್ಣದ ಧಿರಿಸಿನಲ್ಲಿ ಮಿಂಚಿದ್ದಾರೆ.  ಸೀತಾ ಮಾತೆಯಂತೆ ಕಾಣಿಸಿಕೊಳ್ಳುವ ಮೂಲಕ ತಪಸ್ವಿನಿ ನೋಡುಗರ ಮನಗೆದ್ದಿದ್ದಾರೆ. ನಟಿಯ ಲುಕ್‌ಗೆ ಅಭಿಮಾನಿಗಳು ಬಗೆ ಬಗೆಯ ಕಾಮೆಂಟ್ ಹರಿದು ಬರುತ್ತಿವೆ.

    ರಿಷಬ್ ಶೆಟ್ಟಿಗೆ (Rishab Shetty) ನಾಯಕಿಯಾಗಿ ತಪಸ್ವಿನಿ ಸ್ಯಾಂಡಲ್‌ವುಡ್‌ಗೆ ಪರಿಚಿತರಾದರು. ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರದಲ್ಲಿ ಕೊಡಗಿನ ಕುವರಿ ನಟನೆ ಪ್ರೇಕ್ಷಕರ ಗಮನ ಸೆಳೆದಿತ್ತು. ಪ್ರಸ್ತುತ ‘ಗಜರಾಮ’ (Gajarama) ಸಿನಿಮಾದಲ್ಲಿ ತಪಸ್ವಿನಿ ನಟಿಸಿದ್ದಾರೆ. ಸದ್ಯದಲ್ಲೇ ಈ ಚಿತ್ರ ರಿಲೀಸ್ ಆಗಲಿದೆ.

    ಬಗೆ ಬಗೆಯ ಪಾತ್ರಗಳ ಮೂಲಕ ತಪಸ್ವಿನಿ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಸದ್ಯ ‘ಗಜರಾಮ’ ಚಿತ್ರದಲ್ಲಿ ರಾಜವರ್ಧನ್‌ಗೆ ನಾಯಕಿಯಾಗಿ ತಪಸ್ವಿನಿ ನಟಿಸಿದ್ದು, ಈ ಚಿತ್ರದ ಮೂಲಕ ಕೊಡಗಿನ ಕುವರಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೀಗ ವೈವಾಹಿಕ ಬದುಕು ಮತ್ತು ಸಿನಿಮಾರಂಗ ಎರಡನ್ನು ನಟಿ ನಿಭಾಹಿಸುತ್ತಿದ್ದಾರೆ.

  • ‘ಹರಿಕಥೆ ಅಲ್ಲ ಗಿರಿ ಕಥೆ’ ಚಿತ್ರದ ನಾಯಕಿ ತಪಸ್ವಿನಿ ಪೂಣಚ್ಚ ಮದುವೆ ಫೋಟೋಸ್

    ‘ಹರಿಕಥೆ ಅಲ್ಲ ಗಿರಿ ಕಥೆ’ ಚಿತ್ರದ ನಾಯಕಿ ತಪಸ್ವಿನಿ ಪೂಣಚ್ಚ ಮದುವೆ ಫೋಟೋಸ್

    ಸ್ಯಾಂಡಲ್‌ವುಡ್ (Sandalwood) ನಟಿ ತಪಸ್ವಿನಿ ಪೂಣಚ್ಚ (Thapaswini Poonacha) ಅವರು ಸೈಲೆಂಟ್ ಆಗಿ ಹಸೆಮಣೆ ಏರಿದ್ದಾರೆ. ‘ಹರಿಕಥೆ ಅಲ್ಲ ಗಿರಿ ಕಥೆ’ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ನಾಯಕಿಯಾಗಿದ್ದ ಕೂರ್ಗ್ ಬ್ಯೂಟಿ ತಪಸ್ವಿನಿ, ರಕ್ಷತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಮದುವೆ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

    ‘ಹರಿಕಥೆ ಅಲ್ಲ ಗಿರಿ ಕಥೆ’ (Harikathe Ala Girikathe) ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ (Rishab Shetty) ತಪಸ್ವಿನಿ ಜೋಡಿಯಾಗಿ ನಟಿಸಿದ್ದರು. ಮೊದಲ ಸಿನಿಮಾದಲ್ಲೇ ಕೊಡಗಿನ ನಟಿ ಗಮನ ಸೆಳೆದಿದ್ದರು. ಸದ್ಯ ರಾಜವರ್ಧನ್‌ಗೆ ನಾಯಕಿಯಾಗಿ ‘ಗಜರಾಮ’ (Gajarama) ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಈ ಚಿತ್ರ ತೆರೆಗೆ ಬರಲಿದೆ. ಇದನ್ನೂ ಓದಿ:Kendada Seragu: ‘ಈ ಹುಡುಗಿ ಎಷ್ಟು ಚೆಂದ’ ಎಂದು ಹೆಜ್ಜೆ ಹಾಕಿದ ಹರೀಶ್ ಅರಸು-ಪೂರ್ಣಿಮಾ

    ಕೊಡಗಿನ ಕುವರಿ (Coorg) ತಪಸ್ವಿನಿ ಪೂಣಚ್ಚ ಅವರು ಕಳೆದ ಜೂನ್‌ನಲ್ಲಿ ರಕ್ಷತ್ ಮುತ್ತಣ್ಣ ಜೊತೆ ವೈವಾಹಿಕ ಜೀವನಕ್ಕೆ(Wedding) ಕಾಲಿಟ್ಟಿದ್ದರು. ಒಂದು ತಿಂಗಳ ನಂತರ ಇದೀಗ ತಮ್ಮ ಮದುವೆಯ ಬಗ್ಗೆ ನಟಿ ಹೇಳಿಕೊಂಡಿದ್ದಾರೆ. ಕೊಡಗಿನ ಸಂಪ್ರಾದಾಯದಂತೆ ತಪಸ್ವಿನಿ- ರಕ್ಷತ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ.

    ನಟಿ ತಪಸ್ವಿನಿ ಅವರು ಕೆಂಪು ಬಣ್ಣದ ಸೀರೆಯಲ್ಲಿ ಕೊಡಗಿನ ಲುಕ್‌ನಲ್ಲಿ ಮಿಂಚಿದ್ದಾರೆ. ವರ ರಕ್ಷತ್ ಅವರು ಬಿಳಿ ಬಣ್ಣ ಶೇರ್ವಾನಿ ಮತ್ತು ಪೇಟ ಧರಿಸಿ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಒಟ್ನಲ್ಲಿ ನವಜೋಡಿಗೆ ಅಭಿಮಾನಿಗಳು, ಆಪ್ತರು ಶುಭಕೋರಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜವರ್ಧನ್‌ಗೆ ನಾಯಕಿಯಾದ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ

    ರಾಜವರ್ಧನ್‌ಗೆ ನಾಯಕಿಯಾದ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ

    ರಾಜವರ್ಧನ್ ‘ಗಜರಾಮ’ನಾಗಿ (Gajarama) ಅಬ್ಬರಿಸಲು ರೆಡಿಯಾಗಿದ್ದಾರೆ. ಬಿಚ್ಚುಗತ್ತಿಯ ಮೂಲಕ ಸ್ಯಾಂಡಲ್‌ವುಡ್‌ ಸಿನಿರಸಿಕರ ಮನಗೆದ್ದಿರುವ ಹ್ಯಾಂಡ್ಸಮ್ ನಟ ಇವರು. ಯುವ ನಿರ್ದೇಶಕ ಸುನೀಲ್ ಕುಮಾರ್ ವಿ.ಎ  ಕಥೆ ಕೇಳಿ ಇಂಪ್ರೆಸ್ ಆಗಿರುವ ರಾಜವರ್ಧನ್ ಗಜರಾಮನಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಮೂಲಕ ಕಿಕ್ ಕೊಡ್ತಿರೋ ‘ಗಜರಾಮ’ನಿಗೆ ಈಗ ನಾಯಕಿಯೂ ಸಿಕ್ಕಿದ್ದಾರೆ.

    ರಾಜವರ್ಧನ್ (Rajavardhan) ಜೊತೆ ನಾಯಕಿಯಾಗಿ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ (Tapaswini Poonachha) ತೆರೆ ಹಂಚಿಕೊಳ್ಳುತ್ತಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ಚಿತ್ರದಲ್ಲಿ ನಾಯಕಿಯಾಗಿ ಗಮನ ಸೆಳೆದಿದ್ದ ತಪಸ್ವಿನಿ ಪೂಣಚ್ಚ ಈಗ ‘ಗಜರಾಮ’ನ ಜೋಡಿಯಾಗಿದ್ದಾರೆ. ನಾಯಕಿಯಾಗಿ ತಪಸ್ವಿನಿಗಿದು ಎರಡನೇ ಸಿನಿಮಾ. ಇದನ್ನೂ ಓದಿ:‘ಬಿಗ್ ಬಾಸ್’ ಮನೆಗೆ ಬ್ರಹ್ಮಾಂಡ ಗುರೂಜಿ ಹೋದರೆ ಮಜವಾಗಿರತ್ತೆ ಅಂತಿದ್ದಾರೆ ನೆಟ್ಟಿಗರು

    ಹರಿಕಥೆ ಅಲ್ಲ ಗಿರಿಕಥೆ ಚಿತ್ರಕ್ಕೆ ನಾನು ಸೆಲೆಕ್ಟ್ ಆಗಿದ್ದೇ ಆಕಸ್ಮಿಕವಾಗಿ.  ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅನ್ನೋದು ನನ್ನ ಉದ್ದೇಶ ಆಗಿರಲಿಲ್ಲ. ಆದ್ರೆ ಇನ್ ಸ್ಟಾಗ್ರಾಮ್ ನಲ್ಲಿ ಒಂದು ಫೋಟೋ ನೋಡಿ ಚಿತ್ರತಂಡ ನನ್ನ ಸಂಪರ್ಕ ಮಾಡಿದ್ರು. ಕಥೆ ಕೇಳಿ ಇಷ್ಟ ಆಯ್ತು, ಒಪ್ಪಿಕೊಂಡೆ. ಇದೀಗ ‘ಗಜರಾಮ’ ಸಿನಿಮಾ ಅವಕಾಶ ಸಿಕ್ಕಿದೆ. ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ನಂತರ ಸಾಕಷ್ಟು ಸಿನಿಮಾ ಆಫರ್ ಬರ್ತಿದೆ. ಆದರೆ ಗಜರಾಮ ಸಿನಿಮಾ ಪಾತ್ರ ಇಷ್ಟ ಆಯ್ತು. ಹಳ್ಳಿ ಹುಡುಗಿ ಪಾತ್ರದಲ್ಲಿ ಈ ಸಿನಿಮಾದಲ್ಲಿ ನಾನು ಕಾಣಿಸಿಕೊಳ್ಳುತ್ತಿದ್ದೇನೆ ಎನ್ನುತ್ತಾರೆ ನಟಿ ತಪಸ್ವಿನಿ ಪೂಣಚ್ಚ.

    ನಿರ್ದೇಶನ ವಿಭಾಗದಲ್ಲಿ ದುಡಿದ ಅನುಭವ ಇರುವ ಸುನೀಲ್ ಕುಮಾರ್ (Sunil Kumar) ‘ಗಜರಾಮ’ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಆಕ್ಷನ್ ಮಾಸ್ ಎಂಟಟೈನರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ್ಕಕೆ ಮನೋಮೂರ್ತಿ ಸಂಗೀತ, ಕೆ.ಎಸ್.ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್‌ನಡಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಕೂಡ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದೇ ತಿಂಗಳಾಂತ್ಯಕ್ಕೆ ಸಿನಿಮಾ ಸೆಟ್ಟೇರಲಿದೆ.

    Live Tv
    [brid partner=56869869 player=32851 video=960834 autoplay=true]