Tag: ತಬ್ಲಿಘಿ

  • ನೂಪೂರ್‌ಗೆ ಬೆಂಬಲ ನೀಡಿದ್ದಕ್ಕೆ ತಬ್ಲೀಘಿ ಜಮಾತ್‌ನ ಮೂಲಭೂತವಾದಿಗಳಿಂದ ಔಷಧ ವ್ಯಾಪಾರಿಯ ಹತ್ಯೆ: ಎನ್‌ಐಎ

    ನೂಪೂರ್‌ಗೆ ಬೆಂಬಲ ನೀಡಿದ್ದಕ್ಕೆ ತಬ್ಲೀಘಿ ಜಮಾತ್‌ನ ಮೂಲಭೂತವಾದಿಗಳಿಂದ ಔಷಧ ವ್ಯಾಪಾರಿಯ ಹತ್ಯೆ: ಎನ್‌ಐಎ

    ಮುಂಬೈ: ಔಷಧ ವ್ಯಾಪಾರಿ ಉಮೇಶ್‌ ಪ್ರಹ್ಲಾದ್‌ ರಾವ್ ಕೊಲ್ಹೆ ಅವರನ್ನು ಸುನ್ನಿ ಇಸ್ಲಾಮಿಕ್ ಸಂಘಟನೆಯಾದ ತಬ್ಲೀಘಿ ಜಮಾತ್‌ನ(Tablighi Jamaat) ಮೂಲಭೂತವಾದಿ ಇಸ್ಲಾಮಿಸ್ಟ್‌ಗಳು ಹತ್ಯೆ ಮಾಡಿದ್ದಾರೆ ಎಂದು ರಾಷ್ಟ್ರೀಯ ತನಿಖಾ ದಳ(NIA) ಹೇಳಿದೆ.

    ಪೂರ್ವ ಮಹಾರಾಷ್ಟ್ರದ ಅಮರಾವತಿಯ(Amravati) ಔಷಧ ವ್ಯಾಪಾರಿ ಉಮೇಶ್‌ ಪ್ರಹ್ಲಾದರಾವ್ ಕೊಲ್ಹೆ(54) ಅವರ ಹತ್ಯೆಯ ತನಿಖೆ ನಡೆಸಿದ ಎನ್‌ಐಎ 11 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ.

    ಬಿಜೆಪಿ ವಕ್ತಾರೆ ನೂಪೂರ್‌ ಶರ್ಮಾ ಅವರನ್ನು ಬೆಂಬಲಿಸಿ ಉಮೇಶ್‌ ಕೊಲ್ಹೆ ವಾಟ್ಸಪ್‌ನಲ್ಲಿ ಸ್ಟೇಟಸ್‌ ಹಾಕಿದ್ದರು. ಈ ಸ್ಟೇಟಸ್‌ ನೋಡಿ ನಮ್ಮ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ತಿಳಿದು ಆರೋಪಿಗಳು ಹತ್ಯೆ ಮಾಡಿದ್ದಾರೆ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

    ಉಮೇಶ್ ಕೊಲ್ಹೆ ಜೂನ್ 21 ರಂದು ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಮೂವರು ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದರು. ಇದನ್ನೂ ಓದಿ: ನನ್ನ ಪಾಲಿಗೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕಸ: ನಿರ್ದೇಶಕ ಸಯಿದ್ ಅಖ್ತರ್

    ಪ್ರವಾದಿಗೆ ಅವಮಾನ ಮಾಡಿದ್ದಕ್ಕೆ ಆರೋಪಿಗಳು ಪ್ರತೀಕಾರಕ್ಕೆ ತೀರಿಸಲು ಪುತ್ರನ ಎದುರುಗಡೆಯೇ ಬರ್ಬರವಾಗಿ ಹತ್ಯೆ ಮಾಡಿದ್ದರು. ಎಲ್ಲಾ ಆರೋಪಿಗಳು ತಬ್ಲೀಘಿ ಜಮಾತ್‌ ಸಂಘಟನೆಯ ಸದಸ್ಯರಾಗಿದ್ದರು. ಈ ಕೃತ್ಯದ ಮಾಸ್ಟರ್‌ ಮೈಂಡ್‌ ತಬ್ಲಿಘಿ ಜಮಾತ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿದ್ದ ಎಂದು ಎನ್‌ಐಎ ಹೇಳಿದೆ.

    ಇದು ಸಾಮಾನ್ಯ ಕೊಲೆಯಲ್ಲ. ಧಾರ್ಮಿಕ ಮೂಲಭೂತವಾದವನ್ನು ಬೆಳೆಸಿಕೊಂಡ ಮುಸ್ಲಿಂ ಯುವಕರು ಜನರಿಗೆ ಭಯ ಮಾಡಿಸಲು ಎಸಗಿದ ಈ ಕ್ರಿಮಿನಲ್‌ ಪಿತೂರಿ ಭಯೋತ್ಪಾದನಾ ಕೃತ್ಯಕ್ಕೆ ಸಮವಾಗಿದೆ. ಈ ಕೃತ್ಯದ ಬಳಿಕ ಆರೋಪಿಗಳು ಸಂಭ್ರಮಿಸಿದ್ದರು ಎಂದು ಉಲ್ಲೇಖಿಸಿದೆ.

    ಸೌದಿ ಸರ್ಕಾರದಿಂದ ನಿಷೇಧ:
    ಸೌದಿ ಅರೇಬಿಯಾ ಸರ್ಕಾರ ಸುನ್ನಿ ಇಸ್ಲಾಮಿಕ್ ಸಂಘಟನೆಯಾಗಿರುವ ತಬ್ಲಿಘಿ ಜಮಾತ್ ಅನ್ನು ನಿಷೇಧಿಸಿದೆ. ಈ ಸಂಘಟನೆ ಭಯೋತ್ಪಾದನೆ ಚಟುವಟಿಕೆಗಳಿಗೆ ಹೆಬ್ಬಾಗಿಲು ಎಂದಿರುವ ಸರ್ಕಾರ ಈ ಸಂಘಟನೆಯಿಂದ ದೂರ ಇರುವಂತೆ ಪ್ರಜೆಗಳಿಗೆ 2021ರ ಡಿಸೆಂಬರ್‌ನಲ್ಲಿ ಸೂಚಿಸಿತ್ತು.

    ತಬ್ಲಿಘಿಗಳು ಯಾರು?
    ಬ್ರಿಟಿಷರ ಅವಧಿಯಲ್ಲಿ 1926 ರಲ್ಲಿ ಭಾರತದಲ್ಲಿ ಹುಟ್ಟಿಕೊಂಡ ತಬ್ಲಿಘಿ ಜಮಾತ್ ಸುನ್ನಿ ಇಸ್ಲಾಮಿಕ್ ಮಿಷನರಿ ಸಂಘಟನೆಯಾಗಿದೆ. ಮುಸ್ಲಿಂ ಸಂಪ್ರದಾಯ, ಆಚರಣೆ, ಉಡುಪುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಂದು ಪ್ರತಿಪಾದಿಸುತ್ತದೆ. ಜಗತ್ತಿನಾದ್ಯಂತ 35 ರಿಂದ 40 ಕೋಟಿ ಅನುಯಾಯಿಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ. ರಾಜಕೀಯ ಚಟುವಟಿಕೆಯಿಂದ ದೂರ ಇದ್ದು ಧರ್ಮ ಪ್ರಚಾರ ಮಾತ್ರ ನಮ್ಮ ಕೆಲಸ ಎಂದು ಸಂಘಟನೆ ಹೇಳಿಕೊಳ್ಳುತ್ತದೆ.‌

    Live Tv
    [brid partner=56869869 player=32851 video=960834 autoplay=true]

  • ಉಗ್ರ ಚಟುವಟಿಕೆಗಳಿಗೆ ಹೆಬ್ಬಾಗಿಲು – ತಬ್ಲಿಘಿ ಸಂಘಟನೆಯನ್ನು ನಿಷೇಧಿಸಿದ ಸೌದಿ ಸರ್ಕಾರ

    ಉಗ್ರ ಚಟುವಟಿಕೆಗಳಿಗೆ ಹೆಬ್ಬಾಗಿಲು – ತಬ್ಲಿಘಿ ಸಂಘಟನೆಯನ್ನು ನಿಷೇಧಿಸಿದ ಸೌದಿ ಸರ್ಕಾರ

    ರಿಯಾದ್‌: ಮಹತ್ವದ ಬೆಳವಣಿಗೆಯಲ್ಲಿ ಸೌದಿ ಅರೇಬಿಯಾ ಸರ್ಕಾರ ಸುನ್ನಿ ಇಸ್ಲಾಮಿಕ್ ಸಂಘಟನೆಯಾಗಿರುವ ತಬ್ಲಿಘಿ ಜಮಾತ್ ಅನ್ನು ನಿಷೇಧಿಸಿದೆ. ಈ ಸಂಘಟನೆ ಭಯೋತ್ಪಾದನೆ ಚಟುವಟಿಕೆಗಳಿಗೆ ಹೆಬ್ಬಾಗಿಲು ಎಂದಿರುವ ಸರ್ಕಾರ ಈ ಸಂಘಟನೆಯಿಂದ ದೂರ ಇರುವಂತೆ ಪ್ರಜೆಗಳಿಗೆ ಎಚ್ಚರಿಕೆ ನೀಡಿದೆ.

    ಮುಂದಿನ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಈ ಕುರಿತು ಜನರಿಗೆ ಮಾಹಿತಿಯನ್ನು ನೀಡಬೇಕೆಂದು ಮಸೀದಿಗಳ ಮುಖ್ಯಸ್ಥರಿಗೆ ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಸೂಚಿಸಿದೆ.

    ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಇಸ್ಲಾಮಿಕ್‌ ವ್ಯವಹಾರ ಸಚಿವ ಡಾ. ಅಬ್ದುಲ್ಲತೀಫ್‌ ಆಲ್‌ ಶೇಖ್‌, ಶುಕ್ರವಾರ ಪ್ರಾರ್ಥನೆ ನಡೆಯುವ ವೇಳೆ ಎಲ್ಲ ಮಸೀದಿಗಳ ಮುಖ್ಯಸ್ಥರು ತಬ್ಲಿಘಿ ಮತ್ತು ದಾವಾ ಸಂಘಟನೆಯ ಬಗ್ಗೆ ಎಚ್ಚರಿಕೆ ನೀಡಿ 4 ಅಂಶಗಳ ಬಗ್ಗೆ ಹೇಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‍ನೊಂದಿಗೆ ಮಾತುಕತೆ ಇಲ್ಲದೇ ಉಗ್ರವಾದ ಅಂತ್ಯ ಅಸಾಧ್ಯವಾಗಿದೆ: ಫಾರೂಕ್ ಅಬ್ದುಲ್ಲಾ

    4 ಅಂಶಗಳು ಯಾವುದು?
    1. ಈ ಸಂಘಟನೆಯ ಜೊತೆ ನಂಟು ಹೊಂದುವುದನ್ನು ನಿಷೇಧಿಸಲಾಗಿದೆ ಎಂಬುದನ್ನು ತಿಳಿಸಬೇಕು.
    2. ತಬ್ಲಿಘಿಗಳ ಪ್ರಮುಖ ತಪ್ಪು ನಡೆಗಳ ಬಗ್ಗೆ ವಿವರಿಸಬೇಕು.
    3. ಭಯೋತ್ಪಾನೆಗೆ ಹೆಬ್ಬಾಗಿಲು, ತಪ್ಪು ಮಾರ್ಗದರ್ಶನ ನೀಡುವ ಈ ಸಂಘಟನೆಯಿಂದ ದೂರ ಇರುವಂತೆ ಹೇಳಬೇಕು.
    4. ತಬ್ಲಿಘಿ ಸಂಘಟನೆಯಿಂದ ಸಮಾಜಕ್ಕೆ ಇರುವ ಅಪಾಯದ ಬಗ್ಗೆ ವಿವರಿಸಬೇಕು.

    ತಬ್ಲಿಘಿಗಳು ಯಾರು?
    ಬ್ರಿಟಿಷರ ಅವಧಿಯಲ್ಲಿ 1926 ರಲ್ಲಿ ಭಾರತದಲ್ಲಿ ಹುಟ್ಟಿಕೊಂಡ ತಬ್ಲಿಘಿ ಜಮಾತ್ ಸುನ್ನಿ ಇಸ್ಲಾಮಿಕ್ ಮಿಷನರಿ ಸಂಘಟನೆಯಾಗಿದೆ. ಮುಸ್ಲಿಂ ಸಂಪ್ರದಾಯ, ಆಚರಣೆ, ಉಡುಪುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಂದು ಪ್ರತಿಪಾದಿಸುತ್ತದೆ. ಜಗತ್ತಿನಾದ್ಯಂತ 35 ರಿಂದ 40 ಕೋಟಿ ಅನುಯಾಯಿಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ. ರಾಜಕೀಯ ಚಟುವಟಿಕೆಯಿಂದ ದೂರ ಇದ್ದು ಧರ್ಮ ಪ್ರಚಾರ ಮಾತ್ರ ನಮ್ಮ ಕೆಲಸ ಎಂದು ಸಂಘಟನೆ ಹೇಳಿಕೊಳ್ಳುತ್ತದೆ.‌ ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕೇರಳದ ಖ್ಯಾತ ಸಿನಿಮಾ ನಿರ್ದೇಶಕ ಅಲಿ ಅಕ್ಬರ್

    ಕಳೆದ ವರ್ಷ ಕೋವಿಡ್ ಮೊದಲ ಅಲೆಯ ಸಮಯದಲ್ಲಿ ಭಾರತದಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಸಾಮೂಹಿಕ ಸಭೆಯ ಆಯೋಜಿಸಿದ್ದಕ್ಕೆ ಈ ಸಂಘಟನೆಯ ವಿರುದ್ಧ ಮೊದಲ ಬಾರಿಗೆ ದೇಶದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿತ್ತು.

    ತಬ್ಲಿಘಿಗಳು ನೇರವಾಗಿ ಉಗ್ರ ಕೃತ್ಯದಲ್ಲಿ ಭಾಗಿಯಾದ ಬಗ್ಗೆ ಉದಾಹರಣೆ ಇಲ್ಲ. ಆದರೆ ಈ ಸಂಘಟನೆ ನೀಡುವ ವಿಪರೀತ ಧರ್ಮ ಬೋಧನೆಯಿಂದ ಇದರ ಅನುಯಾಯಿಗಳು ತೀವ್ರವಾದಿ ಮುಸ್ಲಿಮ್‌ ಸಂಘಟನೆಗಳಿಗೆ ಸೇರುತ್ತಾರೆ ಎನ್ನುವುದು ಅಮೆರಿಕದ ಆರೋಪ.

  • ತಬ್ಲಿಘಿ ಜಮಾತ್: 2,200 ವಿದೇಶಿಗರಿಗೆ 10 ವರ್ಷ ನಿಷೇಧ ವಿಧಿಸಿದ ಕೇಂದ್ರ

    ತಬ್ಲಿಘಿ ಜಮಾತ್: 2,200 ವಿದೇಶಿಗರಿಗೆ 10 ವರ್ಷ ನಿಷೇಧ ವಿಧಿಸಿದ ಕೇಂದ್ರ

    ನವದೆಹಲಿ: ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 2200 ಮಂದಿ ವಿದೇಶಿಯರಿಗೆ ಕೇಂದ್ರ ಸರ್ಕಾರ 10 ವರ್ಷಗಳ ನಿಷೇಧ ವಿಧಿಸಿದೆ.

    ಭಾರತದಲ್ಲಿ ಕೊರೊನಾ ಪ್ರಕರಣ ಆರಂಭಿಕವಾಗಿ ವರದಿಯಾಗುತ್ತಿದ್ದ ಸಂದರ್ಭದಲ್ಲಿ ತಬ್ಲಿಘಿ ಜಮಾತ್ ಧಾರ್ಮಿಕ ಸಭೆ ಇಡೀ ದೇಶಕ್ಕೆ ಶಾಕ್ ನೀಡಿತ್ತು. ದೇಶದ ಹಲವರು ರಾಜ್ಯಗಳಿಂದ ಆಗಮಿಸಿದ್ದ ಜಮಾತ್ ಸದಸ್ಯರಿಂದ ಸೋಂಕು ಹೆಚ್ಚಾಗಿ ಹರಡಿತ್ತು. ಭಾರತ ಮಾತ್ರವಲ್ಲದೇ ವಿದೇಶದಿಂದ ಆಗಮಿಸಿದ್ದ ಹಲವು ಪ್ರವಾಸಿಗರು ಕೂಡ ಸಭೆಯಲ್ಲಿ ಭಾಗಿಯಾಗಿದ್ದ ಮಾಹಿತಿ ಆ ಬಳಿಕ ಬಹಿರಂಗವಾಗಿತ್ತು. ಪ್ರವಾಸಿ ವೀಸಾ ಪಡೆದು ಭಾರತಕ್ಕೆ ಆಗಮಿಸಿದ್ದ ಹಲವರು ನಿಯಮಗಳನ್ನು ಮೀರಿ ಸಭೆಯಲ್ಲಿ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಈ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

    2200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ಕೇಂದ್ರ ಗೃಹ ಇಲಾಖೆ ಬ್ಲಾಕ್ ಲಿಸ್ಟ್ ಗೆ ಸೇರಿಸಿದ್ದು, ಇವರ ಮೇಲೆ 10 ವರ್ಷ ಭಾರತಕ್ಕೆ ಆಗಮಿಸದಂತೆ ನಿಷೇಧ ವಿಧಿಸಿದೆ. ಜಮಾತ್ ಸಭೆಯಲ್ಲಿ ಭಾಗಿಯಾಗಿದ್ದ ಇವರು ನಿಯಮಗಳನ್ನು ಉಲ್ಲಂಘಿಸಿ ದೆಹಲಿಯ ಮರ್ಕಜ್ ಭವನದಲ್ಲಿ ಜರುಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ಸರ್ಕಾರ ಗುರುತಿಸಿದೆ. ನಿಷೇಧ ಪಟ್ಟಿಯಲ್ಲಿ ಹೆಚ್ಚಿನ ಮಂದಿ ಇಂಡೋನೇಷ್ಯಾಗೆ ಸೇರಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ದೆಹಲಿ ಕಾರ್ಯಕ್ರಮದ ಬಳಿಕ ಹಲವರು ದೇಶದ ವಿವಿಧ ಭಾಗಗಳಲ್ಲಿ ಜರುಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪರಿಣಾಮ ದೇಶದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ದಿಢೀರ್ ಎಂದು ಹೆಚ್ಚಾಗಿತ್ತು. ಮೇ 13 ರಿಂದ 17ರ ವರೆಗೂ ದೆಲಿಯ ನಿಜಾಮುದ್ದೀನ್‍ನಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು.

  • ಮಲೆನಾಡಿಗೆ ತಬ್ಲಿಘಿ, ಮುಂಬೈ ನಂತರ ಕೇರಳ, ಆಂಧ್ರದವರ ಕಂಟಕ

    ಮಲೆನಾಡಿಗೆ ತಬ್ಲಿಘಿ, ಮುಂಬೈ ನಂತರ ಕೇರಳ, ಆಂಧ್ರದವರ ಕಂಟಕ

    – ಮಲೆನಾಡು ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಸೋಂಕಿತರ ಸಂಖ್ಯೆ
    – ಒಂದೇ ದಿನ 10 ಪಾಸಿಟಿವ್ ಪ್ರಕರಣಗಳು ಪತ್ತೆ
    – ಮಹಾರಾಷ್ಟ್ರ ಸೇರಿದಂತೆ ಇತರೇ ರಾಜ್ಯದ ಜನರಿಗಿಲ್ಲ ಪ್ರವೇಶ

    ಶಿವಮೊಗ್ಗ: ಕಳೆದ ಒಂದೂವರೆ ತಿಂಗಳಿನಿಂದ ಗ್ರೀನ್ ಜೋನ್ ನಲ್ಲಿದ್ದ ಶಿವಮೊಗ್ಗಕ್ಕೆ ಇದೀಗ ಸಿಡಿಲಾಘಾತವಾಗಿದ್ದು, ಒಂದೇ ದಿನ 10 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ 14ರಿಂದ ಒಂದೇ ಬಾರಿಗೆ ಏರಿಕೆ ಕಂಡಿದ್ದು, 24ಕ್ಕೆ ಏರಿದೆ. ಹೀಗಾಗಿ ಹೊರ ರಾಜ್ಯಗಳಿಂದ ಶಿವಮೊಗ್ಗಕ್ಕೆ ಬರುವವರಿಗೆ ನೋ ಎಂಟ್ರಿ ಎನ್ನಲಾಗಿದ್ದು, ಇನ್ನು 167 ಮಂದಿಯ ಫಲಿತಾಂಶ ಬರುವುದು ಬಾಕಿ ಇದೆ.

    ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಇತರೆ ಜಿಲ್ಲೆಗಳ ಕೊರೊನಾ ಸೋಂಕಿತರ ಸಂಖ್ಯೆ ಕಂಡು ಆತಂಕದಲ್ಲಿದ್ದ ಮಲೆನಾಡಿನ ಜನತೆಗೆ ಇದೀಗ ಸಿಡಿಲಾಘಾತವಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಒಂದೇ ಬಾರಿಗೆ ಸೋಂಕು ಪೀಡಿತರ ಸಂಖ್ಯೆ 24ಕ್ಕೆ ಏರಿಕೆಯಾಗಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಅದರಲ್ಲೂ ಸೋಮವಾರ ಸಂಜೆಯವರೆಗೂ ಕೇವಲ 14 ಸೋಂಕಿತರ ಸಂಖ್ಯೆ ಇದ್ದು, ರಾತ್ರಿ ಬಳಿಕ 10 ಪಾಸಿಟಿವ್ ಪ್ರಕರಣಗಳು ದೃಢವಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 24ಕ್ಕೆ ಏರಿದೆ. ಈ ಮೊದಲು ತಬ್ಲಿಘಿಗಳು ನಂತರ ಮುಂಬೈನಿಂದ ಬಂದವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಇದೀಗ ಹೊಸದಾಗಿ ಕೇರಳ ಹಾಗೂ ಆಂಧ್ರಪ್ರದೇಶದಿಂದ ಬಂದವರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.

    ಸ್ಥಳೀಯರಲ್ಲೂ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಾಳೆಕೊಪ್ಪ, ತೀರ್ಥಹಳ್ಳಿಯ ಹಳ್ಳಿಬೈಲು ಹಾಗೂ ಶಿಕಾರಿಪುರದ ತರಲಘಟ್ಟ ಗ್ರಾಮಗಳನ್ನು ಕಂಟೈನ್ ಮೆಂಟ್ ಜೋನ್‍ಗಳಾಗಿ ಪರಿವರ್ತಿಸಲಾಗಿದೆ. ಜಿಲ್ಲೆಯ ತೀರ್ಥಹಳ್ಳಿಗೆ ಮುಂಬೈ ಮೂಲದಿಂದ ಬಂದಿದ್ದ ಐವರಿಗೆ ಸೋಂಕು ತಗುಲಿರುವುದು ಧೃಢವಾಗಿದ್ದು, ಕೇರಳದಿಂದ ಶಿವಮೊಗ್ಗಕ್ಕೆ ಬಂದಿದ್ದ ಸೂಳೆಬೈಲು ಬಡಾವಣೆಯ ಇಬ್ಬರು ನಿವಾಸಿಗಳು ಹಾಗೂ ಆಂಧ್ರ ಮೂಲದ ಓರ್ವ ವ್ಯಕ್ತಿಗೆ ಸೋಂಕು ಧೃಢವಾಗಿದೆ.

    ಇನ್ನೂ ಆಘಾತಕಾರಿ ವಿಚಾರವೆಂದರೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಇಬ್ಬರಿಗೆ ಸೋಂಕು ತಗುಲಿದೆ. ಕುಂಸಿಯ ಬಾಳೆಕೊಪ್ಪ ಗ್ರಾಮದ 63 ವರ್ಷದ ಹಾಲು ವ್ಯಾಪಾರಿ ಮತ್ತು ಶಿಕಾರಿಪುರದ ತರ್ಲಘಟ್ಟ ಗ್ರಾಮದ ಯುವತಿಯೊಬ್ಬಳಿಗೆ ಹೇಗೆ ಸೋಂಕು ತಗುಲಿದೆ ಎಂಬುದೇ ತಿಳಿಯದಾಗಿದೆ. ಈ ಸಂಬಂಧ ಅಧಿಕಾರಿಗಳು ತನಿಖೆ ಸಹ ಕೈಗೊಂಡಿದ್ದಾರೆ. ಇವರಿಬ್ಬರಿಗೆ ಸೋಂಕು ಹೇಗೆ ತಗುಲಿದೆ ಎಂಬುದೇ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

    ಒಟ್ಟಾರೆ ಶಿವಮೊಗ್ಗದಲ್ಲಿ ಪ್ರಸ್ತುತ 916 ಜನ ಸಾಂಸ್ಥಿಕ ಕ್ವಾರೆಂಟೈನ್ ಮತ್ತು 64 ಮಂದಿ ಹೋಮ್ ಕ್ವಾರೆಂಟೈನ್‍ನಲ್ಲಿದ್ದು, ಕ್ವಾರೆಂಟೈನ್ ವ್ಯವಸ್ಥೆಗಾಗಿ 50 ವಸತಿ ಶಾಲೆಗಳು, ಹೊಟೇಲ್‍ಗಳು ಮತ್ತು ಗ್ರಾಮೀಣ ಭಾಗದಲ್ಲಿ 7 ಶಾಲೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಪಾಸಿಟಿವ್ ಬಂದ ಪ್ರಕರಣಗಳಿಗೆ ಸಂಬಂಧಿಸಿದಂತೆ 67 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದವರು ಹಾಗೂ 150 ಮಂದಿ ದ್ವಿತೀಯ ಹಂತದ ಸಂಪರ್ಕ ಹೊಂದಿದವರನ್ನು ಕ್ವಾರೆಂಟೈನ್ ಮಾಡಲಾಗಿದೆ.

  • ತಬ್ಲಿಘಿಗಳ ನಂತರ ಮಲೆನಾಡಿಗೆ ಮುಂಬೈ ನಂಟಿನ ಕಂಟಕ

    ತಬ್ಲಿಘಿಗಳ ನಂತರ ಮಲೆನಾಡಿಗೆ ಮುಂಬೈ ನಂಟಿನ ಕಂಟಕ

    – ಶಿವಮೊಗ್ಗ ಜಿಲ್ಲೆಯಲ್ಲಿ 12ಕ್ಕೇರಿದ ಸೋಂಕಿತರ ಸಂಖ್ಯೆ
    – ಇಂದು ಮೂವರಿಗೆ ಸೋಂಕು

    ಶಿವಮೊಗ್ಗ: ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದ ದಿನದಿಂದಲೂ ಮಲೆನಾಡಿನ ಶಿವಮೊಗ್ಗ ಜಿಲ್ಲೆ ಗ್ರೀನ್ ಝೋನ್ ನಲ್ಲಿತ್ತು. ಒಂದೂ ಪಾಸಿಟಿವ್ ಪ್ರಕರಣ ಪತ್ತೆಯಾಗಿರಲಿಲ್ಲ. ಆದರೆ ಇದೀಗ ಒಂದೆಡೆ ಅಹಮದಾಬಾದ್‍ನ ತಬ್ಲಿಘಿಗಳು, ಮತ್ತೊಂದೆಡೆ ಮುಂಬೈನಿಂದ ಬಂದ ವಲಸೆ ಕಾರ್ಮಿಕರು ಮಲೆನಾಡಿನ ಮಂದಿಗೆ ಕಂಟಕವಾಗಿ ಕಾಡುತ್ತಿದ್ದಾರೆ. ಹೀಗಾಗಿ ಇಂದು ಮತ್ತೆ ಮೂರು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12ಕ್ಕೇರಿದೆ.

    ಕೊರೊನಾ ಕಾಣಿಸಿಕೊಂಡ ಆರಂಭದಿಂದಲೂ ಜಿಲ್ಲೆ ಹಸಿರು ವಲಯದಲ್ಲಿತ್ತು. ಸರ್ಕಾರ ಲಾಕ್‍ಡೌನ್ ಸಡಿಲಗೊಳಿಸಿದ ನಂತರ ಹೊರ ರಾಜ್ಯಗಳಲ್ಲಿದ್ದ ಜಿಲ್ಲೆಯ ಜನ ಶಿವಮೊಗ್ಗಕ್ಕೆ ಬರಲಾರಂಭಿಸಿದರು. ಹೀಗಾಗಿ ಗುಜರಾತ್‍ನ ಅಹಮದಾಬಾದ್ ನಿಂದ ಬಂದ 8 ಮಂದಿ ತಬ್ಲಿಘಿಗಳಿಗೆ ಮೊದಲು ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತು. ಒಂದೇ ದಿನ 8 ಪಾಸಿಟಿವ್ ಪತ್ತೆಯಾಗಿದ್ದು, ಜಿಲ್ಲೆಯ ಜನತೆಗೆ ಆತಂಕ ಸೃಷ್ಟಿಯಾಗುವಂತೆ ಮಾಡಿತು. ಆದರೆ ಜಿಲ್ಲಾಡಳಿತ ತಬ್ಲಿಘಿಗಳು ಎಲ್ಲೂ ಹೋಗದಂತೆ ಕ್ವಾರಂಟೈನ್ ಮಾಡುವ ಮೂಲಕ ಅನಾಹುತ ತಪ್ಪಿಸಿತು.

    ತಬ್ಲಿಘಿಗಳಾಯ್ತು ಇದೀಗ ಮುಂಬೈ ನಂಟು ಮಲೆನಾಡಿಗರಿಗೆ ಕಂಟಕವಾಗಿದೆ. ಮುಂಬೈನಿಂದ ತೀರ್ಥಹಳ್ಳಿ ತಾಲೂಕಿನ ಗ್ರಾಮಕ್ಕೆ ಬಂದಿದ್ದ ವ್ಯಕ್ತಿಗೆ ಶುಕ್ರವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ಮೂರು ದಿನಗಳ ಹಿಂದೆ ಮುಂಬೈನಿಂದ ಆಗಮಿಸಿದ್ದ, ರಿಪ್ಪನ್ ಪೇಟೆ ಸಮೀಪ ಕ್ವಾರಂಟೈನ್ ಗೆ ಒಳಗಾಗಿದ್ದ ಮೂವರಿಗೆ ಕೊರೊನಾ ಸಂಕು ಇರುವುದು ಪತ್ತೆಯಾಗಿದೆ. ಇದರಲ್ಲಿ ಹೊಸನಗರ ತಾಲೂಕಿನ 42 ವರ್ಷದ ರೋಗಿ ನಂ.1089 ಹಾಗೂ 4 ವರ್ಷದ ರೋಗಿ ನಂ.1090 ಹೆಣ್ಣು ಮಗುವಿಗೂ ಸೋಂಕು ತಗುಲಿದೆ. ಅಲ್ಲದೆ ಸಾಗರದ 38 ವರ್ಷದ ಮಹಿಳೆ ರೋಗಿ ನಂ.1088 ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಂದು ಪತ್ತೆಯಾದ ಮೂವರ ಜೊತೆ 12 ಮಂದಿ ಪ್ರಾಥಮಿಕ ಸಂಪರ್ಕದಲ್ಲಿದ್ದು, ಎಲ್ಲರನ್ನೂ ಮೆಗ್ಗಾನ್ ಆಸ್ಪತ್ರೆಯ ಐಸೋಲೇಷನ್ ನಲ್ಲಿ ಇಡಲಾಗಿದೆ.

    ಮಲೆನಾಡಿನ ಮಂದಿಗೆ ಹೊರಗಿನವರೇ ಕಂಟಕವಾಗಿ ಕಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಯಾವೊಬ್ಬ ಸ್ಥಳೀಯರಿಗೆ ಪಾಸಿಟಿವ್ ಇರುವುದು ಪತ್ತೆಯಾಗಿಲ್ಲ. ಬದಲಿಗೆ ಹೊರಗಿನಿಂದ ಬಂದವರಿಗೆ ಪಾಸಿಟಿವ್ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ. ಆದರೆ ಜನತೆ ಮೈಮರೆಯದೇ ಜಾಗೃತರಾಗಿರಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

  • ತಬ್ಲಿಘಿಗಳ ನಂಟಿನಿಂದ ಗದಗಕ್ಕೆ ಮತ್ತೆ ವಕ್ಕರಿಸಿದ ಕೊರೊನಾ

    ತಬ್ಲಿಘಿಗಳ ನಂಟಿನಿಂದ ಗದಗಕ್ಕೆ ಮತ್ತೆ ವಕ್ಕರಿಸಿದ ಕೊರೊನಾ

    ಗದಗ: ಜಿಲ್ಲೆಗೆ ಮತ್ತೆ ಕೊರೊನಾ ವೈರಸ್ ವಕ್ಕರಿಸಿದ್ದು, ಮೊನ್ನೆಯಷ್ಟೇ ಮೂವರಿಗೆ ಕೊರೊನಾ ದೃಢವಾಗಿತ್ತು. ಈಗ ಮತ್ತೆ ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ.

    ಮೇ 12ರ ರಾತ್ರಿ ವೇಳೆ ಗುಜರಾತ್‍ನ ಅಹಮದಾಬಾದ್‍ನಿಂದ ಗದಗ ನಗರಕ್ಕೆ 9 ಜನ ತಬ್ಲಿಘಿಗಳು ಬಂದಿದ್ದರು. ಈ 9 ಮಂದಿ ಪೈಕಿ 4 ಜನರಿಗೆ ಇಂದು ಸೋಂಕು ದೃಢಪಟ್ಟಿದೆ. ಈ ನಾಲ್ವರು ನಗರದ ಬೆಟಗೇರಿ ನಿವಾಸಿಗಳು ಎನ್ನಲಾಗುತ್ತಿದೆ.

    ಗದಗಕ್ಕೆ ಬಂದ ಕೂಡಲೆ ಇವರನ್ನು ಕನಗಿನಹಾಳ ರಸ್ತೆ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇದರಲ್ಲಿ 62 ವರ್ಷದ ರೋಗಿ-970 ನಗರದ ಬೆಟಗೇರಿ ಕಬಾಡಿ ರಸ್ತೆ ನಿವಾಸಿ, 47 ವರ್ಷದ ರೋಗಿ-971 ಬೆಟಗೇರಿ ಗಾಂಧಿ ನಗರ(ಸೆಟಲ್ಮೆಂಟ್) ನಿವಾಸಿ, 44 ವರ್ಷದ ರೋಗಿ-972 ಬೆಟಗೇರಿ ತೆಗ್ಗಿನಪೇಟೆ ನಿವಾಸಿ, 28 ವರ್ಷದ ಯುವಕ ರೋಗಿ-973 ಬೆಟಗೇರಿ ಮಂಜುನಾಥ ನಗರ(ಕಣವಿ ಪ್ಲಾಟ್) ನಿವಾಸಿಗಳೆಂದು ಗುರುತಿಸಲಾಗಿದೆ.

    ಇವರು ಗುಜರಾತ್‍ನ ಅಹಮದಾಬಾದ್‍ನಲ್ಲಿ ನಡೆದ ಧರ್ಮಸಭೆಯಲ್ಲಿ ಭಾಗವಹಿಸಿದ್ದ ತಬ್ಲಿಘಿಗಳಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12 ಪ್ರಕರಣಗಳು ಪತ್ತೆಯಾಗಿದ್ದು, ಇವರಲ್ಲಿ 80 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ನಾಲ್ವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸದ್ಯ 7 ಜನರು ಗದಗ ಜಿಮ್ಸ್ ಆಸ್ಪತ್ರೆಯ ಕೊರೊನಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಬ್ಲಿಘಿಗಳ ನಂಟು ಇದೀಗ ಗದಗ ಜಿಲ್ಲೆಗೆ ಕಂಠಕವಾಗಿದ್ದು, ಜನರಲ್ಲಿ ಮತ್ತಷ್ಟು ಆಂತಕವನ್ನು ಹೆಚ್ಚಿಸಿದೆ.

  • ಕೊರೊನಾ ವೈರಸ್ ಹರಡುವಿಕೆ ಜಿಹಾದಿನ ಇನ್ನೊಂದು ರೂಪ: ಆಯನೂರು ಮಂಜುನಾಥ್

    ಕೊರೊನಾ ವೈರಸ್ ಹರಡುವಿಕೆ ಜಿಹಾದಿನ ಇನ್ನೊಂದು ರೂಪ: ಆಯನೂರು ಮಂಜುನಾಥ್

    – ಸಿಎಎ ಬಗ್ಗೆ ಬಾಯಿ ಬಿಡೋ ನಕಲಿ ಜಾತ್ಯಾತೀತವಾದಿಗಳು ತಬ್ಲಿಘಿಗಳ ಬಗ್ಗೆ ಬಾಯಿಯೇ ಬಿಡುತ್ತಿಲ್ಲ

    ಶಿವಮೊಗ್ಗ: ಕೇಂದ್ರ ಸರ್ಕಾರ ಸಿಎಎ ವರದಿ ಜಾರಿಗೆ ಮುಂದಾದ ವೇಳೆ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ, ಆರೋಪ ಮಾಡುತ್ತಿದ್ದ ನಕಲಿ ಜಾತ್ಯಾತೀತವಾದಿಗಳು ಇದೀಗ ರಾಷ್ಟ್ರದ ನೆಮ್ಮದಿ ಹಾಳು ಮಾಡುತ್ತಿರುವ ತಬ್ಲಿಘಿಗಳ ಕೃತ್ಯದ ಬಗ್ಗೆ ಬಾಯಿಯೇ ಬಿಡುತ್ತಿಲ್ಲ ಎಂದು ಎಂಎಲ್‍ಸಿ ಆಯನೂರು ಮಂಜುನಾಥ್ ಕಿಡಿ ಕಾರಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಅವರು, ದೇಶದ ಹಿತದೃಷ್ಟಿಯಿಂದ ಹಾಗೂ ಜನರ ಆರೋಗ್ಯದ ದೃಷ್ಟಿಯಿಂದ ತಬ್ಲಿಘಿಗಳ ಕೃತ್ಯವನ್ನು ಪ್ರತಿಯೊಬ್ಬರು ಖಂಡಿಸಬೇಕಿದೆ. ಕೊರೊನಾ ಕಾಣಿಸಿಕೊಂಡ ಆರಂಭದ ದಿನದಿಂದಲೂ ಗ್ರೀನ್‍ಝೋನ್‍ನಲ್ಲಿದ್ದ ಶಿವಮೊಗ್ಗಕ್ಕೆ ತಬ್ಲಿಘಿಗಳಿಂದಾಗಿ ಅಪಾಯಕಾರಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ತಬ್ಲಿಘಿ ನಂಟಿನ ಕಾರಣದಿಂದಾಗಿ ಭಯದ ವಾತಾವರಣ ಉಂಟಾಗಿದೆ ಎಂದರು.

    ಒಂದು ಸಣ್ಣ ಸಮುದಾಯದಿಂದ ದೇಶದೆಲ್ಲೆಡೆ ಈ ಭೀತಿ ಎದುರಾಗಿದೆ. ಆ ಸಮುದಾಯದ ನಾಯಕರುಗಳು ಸಹ ಕೊರೊನಾ ಪರೀಕ್ಷೆಗೆ ಒಳಪಡಲು ಹಿಂದೇಟು ಹಾಕುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಸಮುದಾಯದ ಜನರಿಗೆ ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಹೇಳಬೇಕಿದ್ದ ನಾಯಕರುಗಳೇ ಇಂದು ತಲೆ ಮರೆಸಿಕೊಂಡು ಓಡಾಡುತ್ತಿದ್ದಾರೆ ಎಂದು ಆರೋಪಿಸಿದರು.

    ದೇಶದಲ್ಲಿ ಕೊರೊನಾ ವೈರಸ್ ಹರಡುವಿಕೆ ಜಿಹಾದಿನ ಇನ್ನೊಂದು ರೂಪದ ಚಟುವಟಿಕೆಯಾಗಿದೆ. ನಿಜಾಮುದ್ದೀನ್ ಹಾಗೂ ಅಹಮದಾಬಾದ್‍ನ ಭಯದಿಂದ ದೇಶ ಆತಂಕಕ್ಕೊಳಗಾಗಿದೆ. ಅಲ್ಲದೇ ತಬ್ಲಿಘಿಗಳೆಂದರೆ ಸಂಪೂರ್ಣ ಮುಸಲ್ಮಾನ್ ಸಮುದಾಯವಲ್ಲ. ಇದೊಂದು ಸಣ್ಣ ಸಮೂಹದ ಒಂದು ಗುಂಪು ಈ ರೀತಿ ಚಟುವಟಿಕೆ ನಡೆಸುತ್ತಿದೆ. ಆದರೆ ರಾಷ್ಟ್ರದಲ್ಲಿ ಕೊರೊನಾ ಹಬ್ಬಿಸಲು ಹೊರಟಿದೆಯೇನೋ ಎಂಬ ಸಂಶಯ ಮುಸಲ್ಮಾನ್ ಸಮುದಾಯದ ಕಡೆ ತಿರುವಂತೆ ಮಾಡಿದೆ. ಅಲ್ಲದೇ ಎಲ್ಲಾ ಮುಸಲ್ಮಾನರನ್ನು ಸಂಶಯದಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

    ಈಗಾಗಿ ತಬ್ಲಿಘಿಗಳನ್ನು ಆ ಸಮುದಾಯದ ನಾಯಕರುಗಳೇ ನಿಯಂತ್ರಿಸಬೇಕು. ಆದರೆ ಇದುವರೆಗೂ ಯಾವುದೇ ಮುಖಂಡರು ಇದರ ವಿರುದ್ದ ಧ್ವನಿ ಎತ್ತಲೇ ಇಲ್ಲ. ನಮ್ಮ ರಾಷ್ಟ್ರ, ರಾಜ್ಯಗಳ ಜನರು ಆರೋಗ್ಯವಂತರಾಗಿ ಇರಬೇಕು ಅಂದರೆ ಇವರನ್ನು ನಿಯಂತ್ರಿಸಲೇಬೇಕಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

  • ಗುಜರಾತ್‍ನಿಂದ ಬರುವಾಗ ನೆಗೆಟಿವ್ – ಶಿವಮೊಗ್ಗಕ್ಕೆ ಬಂದಾಗ ತಬ್ಲಿಘಿಗಳಿಗೆ ಕೊರೊನಾ ಪಾಸಿಟಿವ್

    ಗುಜರಾತ್‍ನಿಂದ ಬರುವಾಗ ನೆಗೆಟಿವ್ – ಶಿವಮೊಗ್ಗಕ್ಕೆ ಬಂದಾಗ ತಬ್ಲಿಘಿಗಳಿಗೆ ಕೊರೊನಾ ಪಾಸಿಟಿವ್

    – ಮುಂಬೈ, ಬೆಳಗಾವಿ ಗಡಿ ಮೂಲಕ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಎಂಟ್ರಿ

    ಶಿವಮೊಗ್ಗ: ಗುಜರಾತ್‍ನ ಅಹಮದಾಬಾದ್‍ನಿಂದ ಶುಕ್ರವಾರ ರಾತ್ರಿ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದ ತಬ್ಲಿಘಿಗಳಿಂದ ಈಗ ಗ್ರೀನ್ ಝೋನ್‍ನಲ್ಲಿದ್ದ ಜಿಲ್ಲೆ ರೆಡ್ ಝೋನ್ ಪಟ್ಟಿಗೆ ಸೇರಿದೆ.

    ಅಹಮದಾಬಾದ್‍ನಿಂದ ಬಂದ 9 ತಬ್ಲಿಘಿಗಳ ಪೈಕಿ 8 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಾರ್ಚ್ 5ರಂದು ಗುಜರಾತ್‍ನ ಅಹಮದಾಬಾದ್‍ಗೆ ದಾವಣಗೆರೆಯಿಂದ ರೈಲಿನ ಮೂಲಕ ಜಿಲ್ಲೆಯ ಈ 9 ಜನರು ತೆರಳಿದ್ದರು. ಜಮಾತ್‍ನ ನಿಜಾಮುದ್ದೀನ್ ಸಮಾವೇಶದಲ್ಲಿ ಭಾಗವಹಿಸಿದ ನಂತರ ಮಸೀದಿಯೊಂದರಲ್ಲಿ ಇವರೆಲ್ಲಾ ಆಶ್ರಯ ಪಡೆದಿದ್ದರು. ಅಲ್ಲದೇ ಲಾಕ್‍ಡೌನ್ ವೇಳೆ ಗುಜರಾತ್ ಸರ್ಕಾರ ಇವರನ್ನೆಲ್ಲಾ ಕ್ವಾರಂಟೈನ್‍ನಲ್ಲಿ ಕೂಡ ಇರಿಸಿತ್ತು. ಅಲ್ಲಿನ ಸರ್ಕಾರದ ಅನುಮತಿ ಮೇರೆಗೆ ಶುಕ್ರವಾರ ರಾತ್ರಿ ಈ ತಬ್ಲಿಘಿಗಳು ಮುಂಬೈ, ಬೆಳಗಾವಿ ಮೂಲಕ ಶಿವಮೊಗ್ಗಕ್ಕೆ ಎಂಟ್ರಿಯಾಗಿದ್ದರು. ಗುಜರಾತ್‍ನಿಂದ ಬಸ್ಸಿನಲ್ಲಿ ಬಂದಿದ್ದ ತಬ್ಲಿಘಿಗಳು ಮೊದಲು ನಗರದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣಕ್ಕೆ ತಲುಪಿದ್ದರು. ಇವರನ್ನು ಬಿಟ್ಟು ಬಸ್ ಗುಜರಾತ್‍ಗೆ ವಾಪಸ್ ತೆರೆಳಿದೆ. ಇದನ್ನೂ ಓದಿ: ತಬ್ಲಿಘಿಗಳಿಂದ ಶಿವಮೊಗ್ಗಕ್ಕೂ ವಕ್ಕರಿಸಿದ ಕೊರೊನಾ – 8 ಸೋಂಕಿತ ಪ್ರಕರಣ ಪತ್ತೆ

    ಇವರೆಲ್ಲರನ್ನೂ ಪ್ರಾಥಮಿಕ ಹಂತದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಹಾಗೆಯೇ ಶಿವಮೊಗ್ಗದ ಬಾಪೂಜಿನಗರದ ಹಾಸ್ಟೆಲ್‍ವೊಂದರಲ್ಲಿ ಇವರನ್ನು ಕ್ವಾರಂಟೈನ್ ಮಾಡಿ ನಿಗಾವಹಿಸಲಾಗಿತ್ತು. ಆದರೆ ಇಂದು ಈ 9 ಮಂದಿಯಲ್ಲಿ 8 ಮಂದಿಗೆ ಸೊಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾ ದೃಢಪಟ್ಟ 8 ಸೋಂಕಿತರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಸೋಂಕಿತರ ವಿವರ:
    ರೋಗಿ 808: ಶಿವಮೊಗ್ಗದ ಶಿಕಾರಿಪುರದ 65 ವರ್ಷದ ವೃದ್ಧ. ಅಹಮದಾಬಾದ್, ಗುಜರಾತ್‍ಗೆ ಪ್ರಯಾಣಿಸಿದ್ದರು.
    ರೋಗಿ 809: ಶಿವಮೊಗ್ಗದ ಶಿಕಾರಿಪುರದ 65 ವರ್ಷದ ವೃದ್ಧ. ಅಹಮದಾಬಾದ್, ಗುಜರಾತ್‍ಗೆ ಪ್ರಯಾಣಿಸಿದ್ದರು.
    ರೋಗಿ-810: ಶಿವಮೊಗ್ಗ ಶಿಕಾರಿಪುರದ 18 ವರ್ಷದ ಯುವಕ. ಗುಜರಾತ್‍ನ ಅಹಮದಾಬಾದ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
    ರೋಗಿ-811: ಶಿವಮೊಗ್ಗ ಶಿಕಾರಿಪುರದ 56 ವರ್ಷದ ಪುರುಷ. ಗುಜರಾತ್‍ನ ಅಹಮದಾಬಾದ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
    ರೋಗಿ-812: ಶಿವಮೊಗ್ಗ ಶಿಕಾರಿಪುರದ 43 ವರ್ಷದ ಪುರುಷ. ಗುಜರಾತ್‍ನ ಅಹಮದಾಬಾದ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
    ರೋಗಿ-813: ಶಿವಮೊಗ್ಗ ಶಿಕಾರಿಪುರದ 25 ವರ್ಷದ ಯುವಕ. ಗುಜರಾತ್‍ನ ಅಹಮದಾಬಾದ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
    ರೋಗಿ-814: ಶಿವಮೊಗ್ಗ ತೀರ್ಥಹಳ್ಳಿಯ 27 ವರ್ಷದ ಯುವಕ. ಗುಜರಾತ್‍ನ ಅಹಮದಾಬಾದ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
    ರೋಗಿ-815: ಶಿವಮೊಗ್ಗ ಶಿಕಾರಿಪುರದ 20 ವರ್ಷದ ಯುವಕ. ಗುಜರಾತ್‍ನ ಅಹಮದಾಬಾದ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.

  • ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿ – ಮಲೆನಾಡಿಗರನ್ನು ಆವರಿಸಿಕೊಂಡ ಕೊರೊನಾ ಭೀತಿ

    ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿ – ಮಲೆನಾಡಿಗರನ್ನು ಆವರಿಸಿಕೊಂಡ ಕೊರೊನಾ ಭೀತಿ

    ಶಿವಮೊಗ್ಗ: ಗ್ರೀನ್ ಝೋನ್‍ನಲ್ಲಿದ್ದ ಚಿತ್ರದುರ್ಗ ಜಿಲ್ಲೆ ತಬ್ಲಿಘಿಗಳ ಎಂಟ್ರಿಯಿಂದ ರೆಡ್ ಝೋನ್‍ಗೆ ಬಂದಿದ್ದು, ಇದೇ ಹಾದಿಯಲ್ಲೀಗ ಶಿವಮೊಗ್ಗ ಇದೆ ಎನಿಸುತ್ತಿದೆ. ಯಾಕಂದ್ರೆ ಇದೀಗ ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿಯಾಗಿದ್ದು, ಮಲೆನಾಡಿಗರಲ್ಲಿ ಕೊರೊನಾ ಭೀತಿ ಹೆಚ್ಚಿಸಿದೆ.

    ಜಿಲ್ಲೆಯ ಶಿಕಾರಿಪುರ ಮೂಲದ 8 ಮತ್ತು ತೀರ್ಥಹಳ್ಳಿಯ ಒಬ್ಬರು ತಬ್ಲಿಘಿಗಳು ಗುಜರಾತ್‍ನ ಅಹಮದಾಬಾದ್‍ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದು, ಇದು ಮಲೆನಾಡಿಗರಲ್ಲಿ ಭೀತಿ ಹೆಚ್ಚಿಸಿದೆ. ಮಾರ್ಚ್ 5ರಂದು ಗುಜರಾತ್‍ನ ಅಹಮದಾಬಾದ್‍ಗೆ ದಾವಣಗೆರೆಯಿಂದ ರೈಲಿನ ಮೂಲಕ ಜಿಲ್ಲೆಯ 9 ಜನರು ತೆರಳಿದ್ದರು. ನಿಜಾಮುದ್ದೀನ್ ಸಮಾವೇಶದಲ್ಲಿ ಭಾಗವಹಿಸಿದ ನಂತರ ಮಸೀದಿಯೊಂದರಲ್ಲಿ ಇವರೆಲ್ಲಾ ಆಶ್ರಯ ಪಡೆದಿದ್ದರು. ಅಲ್ಲದೇ ಲಾಕ್‍ಡೌನ್ ವೇಳೆ ಗುಜರಾತ್ ಸರ್ಕಾರ ಇವರನ್ನೆಲ್ಲಾ ಕ್ವಾರಂಟೈನ್‍ನಲ್ಲಿ ಕೂಡ ಇರಿಸಿತ್ತು. ಅಲ್ಲಿನ ಸರ್ಕಾರದ ಅನುಮತಿ ಮೇರೆಗೆ ಶುಕ್ರವಾರ ರಾತ್ರಿ ಈ ತಬ್ಲಿಘಿಗಳು ಮುಂಬೈ, ಬೆಳಗಾವಿ ಮೂಲಕ ಇದೀಗ ಶಿವಮೊಗ್ಗಕ್ಕೆ ಎಂಟ್ರಿಯಾಗಿದ್ದಾರೆ. ಇವರೆಲ್ಲರನ್ನೂ ಪ್ರಾಥಮಿಕ ಹಂತದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶಿವಮೊಗ್ಗದ ಬಾಪೂಜಿನಗರದ ಹಾಸ್ಟೆಲ್‍ವೊಂದರಲ್ಲಿ ಇವರನ್ನು ಕ್ವಾರಂಟೈನ್ ಮಾಡಿ ನಿಗಾವಹಿಸಲಾಗಿದೆ.

    ಕಳೆದ 50 ದಿನಗಳಿಂದ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ದಿನದ 24 ಗಂಟೆಯೂ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ, ರಾತ್ರಿ-ಹಗಲು ಕೊರೊನಾ ನಿಯಂತ್ರಣ ಮಾಡುವಲ್ಲಿ ಹಾಗೂ ಜಿಲ್ಲೆಗೆ ಕೊರೊನಾ ಹರಡದಂತೆ ಶ್ರಮಿಸುತ್ತಿದ್ದಾರೆ. ಅದರೊಂದಿಗೆ ಎಲ್ಲಾ ತಹಶೀಲ್ದಾರ್ ಗಳು, ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯ್ತಿ ನೌಕರರು, ಆರೋಗ್ಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ, ನಗರಸಭೆ, ಪಟ್ಟಣ ಪಂಚಾಯ್ತಿ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗದ ಹಿನ್ನೆಲೆ ಜಿಲ್ಲೆ ಹಸಿರು ಪಟ್ಟಿಯಲ್ಲಿದೆ. ಆದರೆ ಜನರ ಜಿಲ್ಲಾಡಳಿತಕ್ಕೆ ಸಹಕಾರ ನೀಡದೇ, ವಿನಾಕಾರಣ ತಿರುಗಾಟದಿಂದಾಗಿ ಇದೀಗ ಕೊರೊನಾ ನಿಯಂತ್ರಣ ಕೈತಪ್ಪಿ ಹೋಗುವ ಎಲ್ಲಾ ಸಾಧ್ಯತೆ ಕಾಣಿಸುತ್ತಿದೆ.

    ಅಲ್ಲದೇ ಈಗಾಗಲೇ ಬೇರೆ ಜಿಲ್ಲೆ-ರಾಜ್ಯದಿಂದ ನೂರಾರು ವಾಹನಗಳು ಶಿವಮೊಗ್ಗ ಜಿಲ್ಲೆಯೆಲ್ಲೆಡೆ ಓಡಾಡತೊಡಗಿದ್ದು, ಇದು ಸ್ಥಳೀಯರಲ್ಲಿ ಭಯ ಹೆಚ್ಚಾಗುವಂತೆ ಮಾಡಿದೆ. ಇದೆಲ್ಲದರ ಜೊತೆಯಲ್ಲಿ ಸುಳ್ಳು ಸುದ್ದಿಗಳನ್ನು ಒಂದು ವರ್ಗ ಹಬ್ಬಿಸುತ್ತಿದ್ದು, ಇದು ಕೂಡ ಭಯದ ವಾತಾವರಣ ನಿರ್ಮಾಣವಾಗುವಂತೆ ಮಾಡಿದೆ. ಜನರು ಸಹ ಎಂದೂ ತರಕಾರಿ-ಹಣ್ಣುಗಳನ್ನು ನೋಡಿಯೇ ಇಲ್ಲವೆಂಬ ರೀತಿಯಲ್ಲಿ ಖರೀದಿಗೆ ಮುಗಿ ಬಿದ್ದಿರುವುದನ್ನ ಗಮನಿಸಿದರೆ ಜಿಲ್ಲೆ ಹಸಿರು ಹೋಗಿ ಕೆಂಪು ಪಟ್ಟಿಗೆ ಬರುವ ಸಾಧ್ಯತೆ ಹೆಚ್ಚಿದೆ. ಈ ಪರಿಸ್ಥಿತಿ ಕೈ ಮೀರಿ ಹೋದರೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು, ಕಳೆದ ಒಂದೂವರೆ ತಿಂಗಳಿನಿಂದ ಪಟ್ಟ ಶ್ರಮ ವ್ಯರ್ಥವಾಗಲಿದ್ದು, ಜನರು ಈ ಬಗ್ಗೆ ಯೋಚಿಸಿ ಜಿಲ್ಲಾಡಳಿತಕ್ಕೆ ಸಹಕರಿಸಿ, ವಿನಾಕಾರಣ ಓಡಾಡದೆ ಜಾಗೃತಿವಹಿಸಬೇಕಿದೆ.

  • ಸ್ಥಳೀಯರ ಮನವೊಲಿಸಿ 17 ತಬ್ಲಿಘಿಗಳು ತುಮಕೂರಿನಲ್ಲಿ ಕ್ವಾರಂಟೈನ್

    ಸ್ಥಳೀಯರ ಮನವೊಲಿಸಿ 17 ತಬ್ಲಿಘಿಗಳು ತುಮಕೂರಿನಲ್ಲಿ ಕ್ವಾರಂಟೈನ್

    ತುಮಕೂರು: ಶತಾಯಗತಾಯ ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದು, ಗ್ರಾಮಸ್ಥರ ಮನವೊಲಿಸಿ 17 ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡಿದ್ದಾರೆ.

    ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇದರಲ್ಲಿ ಪಾವಗಡದ ವೈ.ಎನ್.ಹೊಸಕೋಟೆಯ 13 ಜನರಿದ್ದು, ಉಳಿದ 5 ಜನ ಆಂಧ್ರ ಮೂಲದವರು ಎಂದು ಗುರುತಿಸಲಾಗಿದೆ.

    ಕ್ವಾರಂಟೈನ್ ಮಾಡಲು ಅವಕಾಶ ಕೊಡದೆ ಸ್ಥಳೀಯರು ಆರಂಭದಲ್ಲಿ ತಗಾದೆ ತೆಗೆದಿದ್ದರು. ಇಡೀ ರಾತ್ರಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ತಹಶಿಲ್ದಾರ್ ವರದರಾಜು ಸೇರಿದಂತೆ ಅಧಿಕಾರಿಗಳಿಂದ ಗ್ರಾಮಸ್ಥರ ಮನವೊಲಿಕೆ ಪ್ರಕ್ರಿಯೆ ನಡೆದಿತ್ತು. ಅಧಿಕಾರಿಗಳು ಗ್ರಾಮಸ್ಥರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಸ್ಥಳೀಯರು ಬೆಳಗ್ಗೆ 5 ಗಂಟೆಗೆ ಕ್ವಾರಂಟೈನ್ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ.


    ಸಂಪೂರ್ಣ ಚೆಕಪ್ ಮಾಡಿ ಕ್ವಾರಂಟೈನ್ ಮಾಡಿ ನಂತರ ಅಧಿಕಾರಿಗಳು ಹಾಸ್ಟಲ್ ಸೀಲ್ ಡೌನ್ ಮಾಡಿದ್ದಾರೆ. ಪಾವಗಡ ಪಿಎಸ್‍ಐ ನಾಗರಾಜು, ವೈದ್ಯಾಧಿಕಾರಿ ತಿರುಪತಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.