Tag: ತರಾಟೆ

  • ಏಕ್ತಾ ಕಪೂರ್‌ಗೆ XXX ಸಂಕಷ್ಟ: ಯೂತ್ಸ್ ಹಾಳು ಮಾಡುತ್ತಿದ್ದೀರಿ ಎಂದ ಸುಪ್ರೀಂ ಕೋರ್ಟ್

    ಏಕ್ತಾ ಕಪೂರ್‌ಗೆ XXX ಸಂಕಷ್ಟ: ಯೂತ್ಸ್ ಹಾಳು ಮಾಡುತ್ತಿದ್ದೀರಿ ಎಂದ ಸುಪ್ರೀಂ ಕೋರ್ಟ್

    ಬಾಲಿವುಡ್ ಖ್ಯಾತ ನಿರ್ಮಾಪಕಿ, ನಿರ್ದೇಶಕಿ ಏಕ್ತಾ ಕಪೂರ್ (Ekta Kapoor) ನಿರ್ಮಾಣದ ವೆಬ್ ಸರಣಿ ಬಗ್ಗೆ ಸುಪ್ರೀಂ ಕೋರ್ಟ್ (Court) ಅಸಮಾಧಾನ ವ್ಯಕ್ತಪಡಿಸಿದೆ. XXX ನಂತಹ ಚಿತ್ರಗಳಿಂದ ನೀವು ಯುವಕರನ್ನು ಹಾಳು ಮಾಡುತ್ತಿದ್ದೀರಿ ಎಂದು ತರಾಟೆಗೆ ತಗೆದುಕೊಂಡಿದೆ. ಏಕ್ತಾ ಕಪೂರ್ ನಿರ್ಮಾಣದಲ್ಲಿ ಈ ವೆಬ್ ಸರಣಿ ಮೂಡಿ ಬರುತ್ತಿದ್ದು, ಯುವ ಜನತೆಯ ಮನಸ್ಸನ್ನು ಹಾಳು ಮಾಡುವಂತಹ ವಿಷಯವನ್ನು ಅದು ಒಳಗೊಂಡಿದೆ ಎನ್ನಲಾಗುತ್ತಿದೆ.

    ಇದೇ ವೆಬ್ ಸರಣಿಯ‍ಲ್ಲಿ ಯೋಧರಿಗೆ ಅವಮಾನ ಮಾಡುವಂತಹ ಸರಣಿಯೊಂದು ಪ್ರಸಾರವಾಗಿದ್ದು, ಅದರಲ್ಲಿ ಯೋಧರಿಗೆ ಮತ್ತು ಅವರ ಪತ್ನಿಗೆ ಅಪಮಾನ ಮಾಡಲಾಗಿದೆ ಎಂದು ಬಿಹಾರದ ಮಾಜಿ ಯೋಧ ಶಂಭು ಕುಮಾರ್ ದೂರು ನೀಡಿದ್ದರು. ಯೋಧರು ಗಡಿ ಕಾಯುತ್ತಿದ್ದರೆ, ಅವರ ಪತ್ನಿ ಬೇರೆಯವರೊಂದಿಗೆ ಸಂಬಂಧ ಬೆಳೆಸಿರುತ್ತಾರೆ ಎಂಬ ಅರ್ಥ ಬರುವಂತಹ ಕಂಟೆಂಟ್ ಅನ್ನು ಅದು ಒಳಗೊಂಡಿತ್ತು ಎನ್ನಲಾಗುತ್ತಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಾಜಣ್ಣ ಮೇಲೆ ಪ್ರಶಾಂತ್ ಸಂಬರ್ಗಿ ವಾಗ್ದಾಳಿ

    ಈ ದೂರಿಗೆ ಸಂಬಂಧಪಟ್ಟಂತೆ ಸತತವಾಗಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಕೋರ್ಟಿಗೆ ಹಾಜರಾಗದ ಕಾರಣ, ಬಂಧನ ವಾರೆಂಟ್ ಜಾರಿ ಮಾಡಲಾಗಿತ್ತು. ಇದನ್ನು ರದ್ದು ಮಾಡುವಂತೆ ಏಕ್ತಾ ಮತ್ತೆ ಕೋರ್ಟಿಗೆ ಮೊರೆ ಹೋಗಿದ್ದರು. ಈ ಸಮಯದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ವೆಸ್ ಸರಣಿ ಬಗ್ಗೆ ಕಿಡಿಕಾರಿದ್ದಾರೆ. ನೀವು ಯಾವ ರೀತಿಯ ಸಂದೇಶವನ್ನು ನೀಡುತ್ತಿದ್ದೀರಿ ಮತ್ತು ಯಾರು ಅದನ್ನು ನೋಡಬೇಕು ಎಂದು ಬಯಸಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ವೆಬ್ ಸರಣಿಗೆ (Web Series) ಸಂಬಂಧಿಸಿದಂತೆ ಈಗಾಗಲೇ ಹಲವು ದೃಶ್ಯಗಳನ್ನು ತಗೆದುಹಾಕಿರುವುದಾಗಿ ಈ ಹಿಂದೆಯೇ ಏಕ್ತಾ ಹೇಳಿಕೊಂಡಿದ್ದರು. ಯಾವ ದೃಶ್ಯಗಳು ಆಕ್ಷೇಪಾರ್ಹ ಎಂದು ಜನರು ಹೇಳಿದ್ದರೋ, ಅದೆಲ್ಲವನ್ನೂ ಕಿತ್ತು ಹಾಕಲಾಗಿದೆ ಎಂದೂ ತಿಳಿಸಿದ್ದರು. ಹಾಗಾಗಿ ಕೋರ್ಟಿಗೆ ಹಾಜರಾಗುತ್ತಿಲ್ಲ ಎಂದು ಅವರ ಪರ ವಕೀಲರು ತಿಳಿಸಿದ್ದರು. ಆದರೆ, ಈ ಮಾತನ್ನು ಕೋರ್ಟ್ ಒಪ್ಪಲಿಲ್ಲ. ಬಿಹಾರದಲ್ಲಿ ನಡೆಯುತ್ತಿರುವ ಕೇಸ್ ಬಗ್ಗೆಯೂ ಸುಪ್ರೀಂ ಕೋರ್ಟ್ ವರದಿ ಕೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಅಧಿಕಾರಿಗಳಿಗೆ ಮೂಡಬಿದಿರೆ ಶಾಸಕರಿಂದ ತರಾಟೆ

    ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಅಧಿಕಾರಿಗಳಿಗೆ ಮೂಡಬಿದಿರೆ ಶಾಸಕರಿಂದ ತರಾಟೆ

    ಮಂಗಳೂರು: ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಮೂಡಬಿದಿರೆ ನಾಡ ಕಚೇರಿಯ ಅಧಿಕಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ತರಾಟೆಗೆ ತೆಗೆದುಕೊಂಡಿದ್ದಾರೆ.

    ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಶಾಸಕ ಉಮಾನಾಥ ಕೋಟ್ಯಾನ್ ಅವರು ಏಕಾಏಕಿ ಮೂಡಾ ಕಚೇರಿಗೆ ತೆರಳಿದ್ದಾರೆ. ಈ ವೇಳೆ ಜನರು ಸರತಿ ಸಾಲಿನಲ್ಲಿ ನಿಂತದ್ದನ್ನು ಕಂಡ ಶಾಸಕರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತನ್ನ ರೌದ್ರಾವತಾರ ತೋರಿದ್ದಾರೆ.

    ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿ. ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತರೂ ಅವರ ಸಮಸ್ಯೆ ಕೇಳುವವರಿಲ್ಲ. ಸವಲತ್ತುಗಳಿಗಾಗಿ ಅವರು ನಿಮ್ಮಲ್ಲಿ ಗೋಗರೆಯ ಬೇಕೇ ಎಂದು ಪ್ರಶ್ನಿಸಿ ತರಾಟೆ ತೆಗೆದುಕೊಂಡರು.

    ಅಲ್ಲದೆ ಅಧಿಕಾರಿಗಳು ಯಾವಾಗಲೂ ಮೊಬೈಲ್‍ನಲ್ಲೇ ಬ್ಯುಸಿಯಾಗುತ್ತಿದ್ದಾರೆ. ಇನ್ನು ಮುಂದೆ ಕೆಲಸದ ವೇಳೆ ಯಾರಾದರೂ ಮೊಬೈಲ್ ಬಳಸುತ್ತಿರುವುದು ಕಂಡಲ್ಲಿ ಅವರನ್ನು ನೋಡಿಕೊಳ್ಳುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

  • ನಿಮ್ಮನ್ನ ಬೈದು ನಮಗೆ ಬಿಪಿ ಬರುತ್ತೆ, ದನಕಾಯೋಕೆ ಹೋಗಿ – ಅಧಿಕಾರಿಗೆ ಜಿ.ಪಂ ಅಧ್ಯಕ್ಷ ಕ್ಲಾಸ್

    ನಿಮ್ಮನ್ನ ಬೈದು ನಮಗೆ ಬಿಪಿ ಬರುತ್ತೆ, ದನಕಾಯೋಕೆ ಹೋಗಿ – ಅಧಿಕಾರಿಗೆ ಜಿ.ಪಂ ಅಧ್ಯಕ್ಷ ಕ್ಲಾಸ್

    – ಕೆಲಸ ಮಾಡಕ್ಕೆ ಆಗಲ್ಲ ಅಂದ್ರೆ ಟ್ರಾನ್ಸ್ಫರ್ ಮಾಡಿಸಿಕೊಂಡು ಹೋಗಿ

    ಚಿಕ್ಕಬಳ್ಳಾಪುರ: “ಥೂ ನಿಮ್ಮನ್ನ ಬೈದು ನಮಗೆ ಬಿಪಿ ಬರುತ್ತೆ. ದನಕಾಯೋಕೆ ಹೋಗಿ, ಕೆಲಸ ಮಾಡಕೆ ಆಗಲ್ಲ ಅಂದರೆ ವರ್ಗಾವಣೆ ಮಾಡಿಸಿಕೊಂಡು ಹೋಗಿ” ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಜಿಲ್ಲಾ ಮಟ್ಟದ ಕ್ರೀಡಾ ಯುವಜನಸೇವಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಕ್ರೀಡಾ ಯುವಜನ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ರುದ್ರಪ್ಪಗೆ ಜಿ.ಪ ಅಧ್ಯಕ್ಷ ಎಚ್.ವಿ ಮಂಜುನಾಥ್ ಹಾಗೂ ಜಿ.ಪ ಸದಸ್ಯರು ಸೇರಿದಂತೆ ಜಿ.ಪ ಸಿಇಓ ಸಹ ತರಟೆಗೆ ತೆಗೆದುಕೊಂಡರು.

    ನಿಮ್ಮ ಕೈಯಲ್ಲಿ ಕೆಲಸ ಮಾಡೋಕೆ ಆಗೋದಿಲ್ಲ ಅಂದರೆ ವರ್ಗಾವಣೆ ಮಾಡಿಕೊಂಡು ಹೊರಟು ಹೋಗಿ ಎಂದರು. ಬಳಿಕ ಅಧ್ಯಕ್ಷರು ಹಾಗೂ ಸದಸ್ಯರ ದೂರುಗಳಿಂದ ಎಚ್ಚೆತ್ತಾ ಜಿಲ್ಲಾ ಪಂಚಾಯತ್ ಸಿಇಓ ಗುರುದತ್ ಹೆಗಡೆ ಅವರು ರುದ್ರಪ್ಪರನ್ನ ಸೇವೆಯಿಂದ ವಿಮುಕ್ತಿಗೊಳಿಸಿ, ಬೇರೆಯವರನ್ನ ನಿಯೋಜಿಸುವಂತೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಎಚ್ಚರಿಕೆ ನೀಡಿದರು.

    ಚಿಂತಾಮಣಿ ನಗರದ ಕ್ರೀಡಾಂಗಣದಲ್ಲಿನ ಮಳಿಗೆಗೆಳ ಬಾಡಿಗೆ ಒಂದೂವರೆ ಕೋಟಿ ಬಾಕಿ ಇದ್ದು, ಎರಡು ವರ್ಷಗಳಿಂದ ಹಣ ವಸೂಲಿ ಮಾಡದೇ ರುದ್ರಪ್ಪ ಕರ್ತವ್ಯಲೋಪ ತೋರಿದ್ದಾರೆ. ಈ ಬಗ್ಗೆ ಕೇಳಿದರೆ ಕ್ಷೇತ್ರದ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಇದಕ್ಕೆ ತಡೆ ಒಡ್ಡಿದ್ದಾರೆ ಎಂದು ಆರೋಪಿಸಿದ್ದು, ಇದರಿಂದ ಕೆರಳಿದ ಅಧ್ಯಕ್ಷರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಅಷ್ಟೇ ಅಲ್ಲದೆ ಕ್ರೀಡಾಂಗಣಗಳಲ್ಲಿನ ಶೌಚಾಲಯಗಳ ಸ್ವಚ್ಛತೆ ಕಾಪಾಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿನ ಈಜುಕೊಳದ ನಿರ್ವಹಣೆ ಸಹ ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ಜಿ.ಪ ಸದಸ್ಯರು ರುದ್ರಪ್ಪ ವಿರುದ್ಧ ಕೆಂಡಾಮಂಡಲರಾದರು. ಈ ವೇಳೆ ರೋಸಿ ಹೋದ ಜಿ.ಪಂ ಅಧ್ಯಕ್ಷ ಮಂಜುನಾಥ್ ಅವರು ಪ್ರತಿ ಬಾರಿ ಸಭೆಯಲ್ಲೂ ಇದೇ ವಿಷಯ ಬಗ್ಗೆ ಚರ್ಚೆ ನಡೆಯುತ್ತದೆ. ಪದೇ ಪದೇ ಚರ್ಚೆ ಆಗುತ್ತಿದ್ದರೂ ನೀವು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಜಿಲ್ಲಾ ಮಟ್ಟದ ಅಧಿಕಾರಿಯಾಗಲು ನಿಮಗೆ ಅರ್ಹತೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಎಷ್ಟಾದರೂ ಖರ್ಚು ಮಾಡಿ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಿ- ಅಧಿಕಾರಿಗಳಿಗೆ ದೇಶಪಾಂಡೆ ಎಚ್ಚರಿಕೆ

    ಎಷ್ಟಾದರೂ ಖರ್ಚು ಮಾಡಿ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಿ- ಅಧಿಕಾರಿಗಳಿಗೆ ದೇಶಪಾಂಡೆ ಎಚ್ಚರಿಕೆ

    -ತಪ್ಪು ಮಾಹಿತಿ ನೀಡಿದ್ದ ಅಧಿಕಾರಿಗೆ ಖಡಕ್ ವಾರ್ನಿಂಗ್

    ಚಾಮರಾಜನಗರ: ಎಷ್ಟು ಹಣ ಬೇಕದರೂ ಖರ್ಚು ಮಾಡಿ. ಯಾವುದೇ ಕಾರಣಕ್ಕೂ ಜನರು ಗುಳೇ ಹೋಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಆರ್ ವಿ ದೇಶಪಾಂಡೆ ಅವರು ಬರ ಪರಿಶೀಲನಾ ಸಭೆಯಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಜಿಲ್ಲೆಯಲ್ಲಿನ ಕೊಳವೆಬಾವಿಗಳ ಬಗ್ಗೆ ಸರಿಯಾದ ಮಾಹಿತಿ ನೀಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ರವಿಕುಮಾರ್ ಗೆ ದೇಶಪಾಂಡೆ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಭೆಯ ಮುಂಭಾಗಕ್ಕೆ ಕರೆಸಿ ಅಧಿಕಾರಿಗೆ ಸಚಿವರು ಕ್ಲಾಸ್ ತೆಗೆದುಕೊಂಡಿದ್ದಾರೆ. 4 ಸಾವಿರ ಕೊಳವೆ ಬಾವಿ ಇವೆ, 6 ಸಾವಿರ ಚಾಲ್ತಿಯಲ್ಲಿ ಇವೆ ಎಂದು ತಪ್ಪು ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದರು. ಹೀಗಾಗಿ ಬರದ ನಡುವೆ ನೀರಿಗಾಗಿ ಜನ ಪರಿತಪಿಸುತ್ತಿರುವಾಗ ತಪ್ಪು ಮಾಹಿತಿ ನೀಡಿದಕ್ಕೆ ಸಚಿವರು ಗರಂ ಆಗಿ ಅಧಿಕಾರಿಗೆ ಎಚ್ಚರಿಗೆ ನೀಡಿದರು.

    ಯಾವುದೇ ಕಾರಣಕ್ಕೂ ಜನರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗಬಾರದು. ಎಷ್ಟು ಹಣ ಬೇಕದರೂ ಖರ್ಚು ಮಾಡಿ. ಯಾವುದೇ ಕಾರಣಕ್ಕೂ ಜನರು ಗುಳೇ ಹೋಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ದೇಶಪಾಂಡೆ ಅವರು ಸೂಚಿಸಿದರು.

    ನಾವು ಕೇಳಿದರೆ ತುಂಬ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಹೇಳುತ್ತೀರಾ ಆದ್ರೆ ಕಂದಾಯ ಸಚಿವರ ಮುಂದೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳುತ್ತೀರಾ ಎಂದು ಹನೂರು ಶಾಸಕ ನರೇಂದ್ರ ಕೂಡ ಅಧಿಕಾರಿಯ ತರಾಟೆ ತೆಗೆದುಕೊಂಡರು.

    ಅಷ್ಟೇ ಅಲ್ಲದೆ ಜುಲೈನಲ್ಲಿ ಮೋಡ ಬಿತ್ತನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ರೈತರು ಸಂಕಷ್ಟದಲ್ಲಿ ಇದ್ದಾರೆ. ಮುಂದಿನ ತಿಂಗಳು ಮೋಡ ಬಿತ್ತನೆ ಮಾಡಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ಎರಡು ಕೇಂದ್ರಗಳನ್ನಾಗಿ ಮಾಡಲಾಗಿದೆ. ಟೆಕ್ನಿಕಲ್ ಟೀಮ್ ಎಲ್ಲಿ ಮೋಡ ಬಿತ್ತನೆ ಮಾಡಬೇಕೆಂದು ತೀರ್ಮಾನ ಮಾಡುತ್ತದೆ. ಚಾಮರಾಜನಗರದಲ್ಲೂ ಮೋಡ ಬಿತ್ತನೆ ಮಾಡಲು ಅವಕಾಶವಿದೆ. ಇದಕ್ಕೆ ಜಿಲ್ಲಾಧಿಕಾರಿ ಪ್ರಸ್ತಾವನೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • NWKRTC ಅಧಿಕಾರಿಗೆ ಸಿಬ್ಬಂದಿಯಿಂದ ಹಿಗ್ಗಾಮುಗ್ಗಾ ಕ್ಲಾಸ್!

    NWKRTC ಅಧಿಕಾರಿಗೆ ಸಿಬ್ಬಂದಿಯಿಂದ ಹಿಗ್ಗಾಮುಗ್ಗಾ ಕ್ಲಾಸ್!

    ಗದಗ: ಎನ್‍ಡಬ್ಲೂಕೆಆರ್ ಟಿಸಿ ಚಾಲಕರು, ನಿರ್ವಾಹಕರುಗಳಿಗೆ ಹಲವು ವಿಷಯಗಳಿಗೆ ಕಿರುಕುಳ ನೀಡುತ್ತಿದ್ದ ಅಧಿಕಾರಿಯನ್ನು ಸಿಬ್ಬಂದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ಡಿಪೋದಲ್ಲಿ ನಡೆದಿದೆ.

    ರಜೆ, ಹಾಗೂ ಡ್ಯೂಟಿ ಹಾಕುವ ವಿಷಯದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಗದಗ ಎನ್‍ಡಬ್ಲೂಕೆಆರ್ ಟಿಸಿ ಸಿಬ್ಬಂದಿಗಳು ಬೇಸತ್ತಿದ್ದಾರೆ. ಡಿಪೋ ಮ್ಯಾನೇಜರ್ ಶಶಾಂಕ್ ನಾಯಕ್ ಹಾಗೂ ಎಟಿಎಸ್ ಕಳಸದ ಎಂಬ ಅಧಿಕಾರಿಗಳು ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

    ಜ್ವರವಿದೆ, ಹುಷಾರಿಲ್ಲ ಎಂದು ಹೇಳಿದರೂ ಸಿಬ್ಬಂದಿ ಕೆಲಸಕ್ಕೆ ಬರಲೇಬೇಕು, ಕುಟುಂಬದಲ್ಲಿ ಯಾರೇ ಮೃತಪಟ್ಟರೂ ಮಾರನೆ ದಿನವೇ ಕೆಲಸಕ್ಕೆ ಹಾಜರಿರಬೇಕು. ಅಲ್ಲದೆ ಇನ್ನೂ ಯಾವುದಕ್ಕಾದರೂ ರಜೆ ಬೇಕೆಂದರೆ ರಜೆ ನೀಡದೇ ಅಧಿಕಾರಿಗಳು ಗೋಳಾಡಿಸುತ್ತಾರೆ ಎಂದು ಚಾಲಕ, ನಿರ್ವಾಹಕರು ಆರೋಪಿಸಿದ್ದಾರೆ.

    ಹಲವಾರು ವಿಷಯಗಳಿಗೆ ಕಿರುಕುಳ ನೀಡುತ್ತಾರೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಬೇಸತ್ತ ಸಿಬ್ಬಂದಿ ಅಧಿಕಾರಿ ಎ.ಟಿ.ಎಸ್ ಕಳಸದ ಅವರಿಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರು ಈ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆಹಿಡಿದುದ್ದು, ಸಿಬ್ಬಂದಿ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ವಿಡಿಯೋ ಸದ್ಯ ಎಲ್ಲೆಡೆ ಫುಲ್ ವೈರಲ್ ಆಗಿದೆ.

  • ಪ್ರಚಾರಕ್ಕೆ ಬಂದ ನಿಖಿಲ್‍ಗೆ ಮಹಿಳೆಯಿಂದ ತರಾಟೆ

    ಪ್ರಚಾರಕ್ಕೆ ಬಂದ ನಿಖಿಲ್‍ಗೆ ಮಹಿಳೆಯಿಂದ ತರಾಟೆ

    ಮಂಡ್ಯ: ಪ್ರಚಾರಕ್ಕೆ ಹೋದ ಮೈತ್ರಿ ಪಕ್ಷದ ಲೋಕಸಭಾ ಚುನಾವಣೆ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

    ನಿಖಿಲ್ ಪ್ರಚಾರಕ್ಕೆಂದು ಸಾರಂಗಿಗೆ ಬಂದಿದ್ದರು. ಈ ವೇಳೆ ಪ್ರಚಾರಕ್ಕೆ ಬಂದ ನಿಖಿಲ್‍ಗೆ ಸಾರಂಗಿ ಗ್ರಾಮದ ಮಹಿಳೆಯೊಬ್ಬರು ನಿಮಗೆ ವೋಟ್ ಹಾಕಿ ಎಂದು ಕೇಳುವವರಲ್ಲಿ ನಾನೂ ಒಬ್ಬಳು. ಆದರೆ ನಮ್ಮ ಊರಿನ ಚರಂಡಿ, ರಸ್ತೆ ನೋಡಿ ಎಂದು ಅಳಲು ತೋಡಿಕೊಂಡರು.

    ಮಹಿಳೆ ಅಳಲನ್ನು ತೋಡಿಕೊಳ್ಳುವ ವೇಳೆ ಜೆಡಿಎಸ್ ಮುಖಂಡರು ಅವರನ್ನು ಸಮಾಧಾನ ಪಡಿಸಲು ಮುಂದಾದರು. ಈ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಸಮಸ್ಯೆಯನ್ನು ಹೇಳಲಿ ಬಿಡಿ ಎಂದು ಮುಖಂಡರನ್ನು ಸುಮ್ಮನಿರಿಸಿದರು. ಆಗ ಮಹಿಳೆ ಇಂದು ಈ ರಸ್ತೆ, ಚರಂಡಿ ನಾನು ಸ್ವಚ್ಛಗೊಳಿಸಿದ್ದೇನೆ. ನಮ್ಮ ಊರಿನ ಪರಿಸ್ಥಿತಿ ನಿಮಗೆ ತಿಳಿಯಬೇಕು ಎಂದು ತರಾಟೆಗೆ ತೆಗೆದುಕೊಂಡರು.

    ಸಮಸ್ಯೆ ಬಗೆಹರಿಸೋದಾಗಿ ಎಂದು ನಿಖಿಲ್ ಮಹಿಳೆಗೆ ಭರವಸೆ ನೀಡಿದರು. ನಂತರ ನಾನು ಹೋಗಬಹುದೇ ಎಂದು ಮಹಿಳೆ ಬಳಿ ಕೇಳಿಕೊಂಡರು. ಮಹಿಳೆ ಸಮಸ್ಯೆ ಕೇಳಿ ನಿಖಿಲ್ ಮುಂದೆ ಸಾಗಿದರು.

  • ಗಂಭೀರ ಸಭೆಯಲ್ಲಿ ಬೇಜವಾಬ್ದಾರಿ ತೋರಿದ ಮಂತ್ರಿಗೆ ಶಾಸಕ ದೇವಾನಂದ ಚವ್ಹಾಣ್ ಕ್ಲಾಸ್!

    ಗಂಭೀರ ಸಭೆಯಲ್ಲಿ ಬೇಜವಾಬ್ದಾರಿ ತೋರಿದ ಮಂತ್ರಿಗೆ ಶಾಸಕ ದೇವಾನಂದ ಚವ್ಹಾಣ್ ಕ್ಲಾಸ್!

    ವಿಜಯಪುರ: ಕೆಡಿಪಿ ಸಭೆಯಲ್ಲಿ ಫೋನಿನಲ್ಲಿ ಹರಟೆ ಹೊಡೆಯುತ್ತಾ ಬೇಜವಾಬ್ದಾರಿ ಪ್ರದರ್ಶಿಸಿದ ಜಿಲ್ಲಾ ಉಸ್ತವಾರಿ ಹಾಗೂ ಕೈಗಾರಿಕಾ ಮಂತ್ರಿ ಎಂ.ಸಿ ಮನಗೋಳಿ ಅವರನ್ನು ನಾಗಠಾಣ ಶಾಸಕ ದೇವಾನಂದ ಚವ್ಹಾಣ್ ತರಾಟೆಗೆ ತೆಗೆದುಕೊಂಡಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆ ತಾವೇ ಸ್ವತಃ ಅಕ್ರಮ ಮರಳು ಸಾಗಿಸುತ್ತಿದ್ದ ಲಾರಿ ಹಿಡಿದು ಶಾಸಕ ದೇವಾನಂದ್ ಚವ್ಹಾಣ್ ಜನರಿಂದ ಭೇಷ್ ಎನಿಸಿಕೊಂಡಿದ್ದರು. ಈಗ ಸಭೆಯಲ್ಲಿ ಮಂತ್ರಿಗಳನ್ನೇ ತರಾಟೆಗೆ ತೆಗೆದುಕೊಳ್ಳುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

    ಇಂದು ನಡೆದ ಕೆಡಿಪಿ ಸಭೆಯಲ್ಲಿ ಫೋನಿನಲ್ಲಿ ಹರಟೆ ಹೊಡೆಯುತ್ತಿದ್ದ ವಿಜಯಪುರ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಸಖತ್ ಕ್ಲಾಸ್ ತೆಗೆದುಕೊಳ್ಳುವ ಮೂಲಕ ರೆಬಲ್ ಸ್ಟೈಲ್ ಪ್ರದರ್ಶಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬರಗಾಲದ ಕುರಿತಾಗಿ ಗಂಭೀರ ಚರ್ಚೆ ನಡೆಯುತ್ತಿತ್ತು. ಈ ವೇಳೆ ಸಚಿವ ಎಂ.ಸಿ ಮನಗೂಳಿ ಫೋನ್ ಸಂಭಾಷಣೆಯಲ್ಲಿ ನಿರತರಾಗಿದ್ದರು. ಇದನ್ನು ಕಂಡು ದೇವಾನಂದ ಅವರು ಸಿಡಿದೆದ್ದರು.

    ಸಭೆಯಲ್ಲಿ ಬರಗಾಲದ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಇದಕ್ಕೆ ಪರಿಹಾರ ಹುಡುಕಬೇಕಾದ ನೀವೇ ಫೋನಿನಲ್ಲಿ ಮಾತನಾಡುತ್ತಾ ಕುಳಿತರೆ ಹೇಗೆ ಎಂದು ಸಖತ್ ಕ್ಲಾಸ್ ತೆಗೆದುಕೊಂಡರು. ಒಂದು ಕಡೆಗೆ ಶಾಸಕರೊಬ್ಬರು ಮಂತ್ರಿಗಳನ್ನ ತರಾಟೆಗೆ ತೆಗೆದುಕೊಳ್ಳುತ್ತಿದ್ದರೆ ಇನ್ನೊಂದೆಡೆ ಅಧಿಕಾರಿ ವರ್ಗ ಒಂದು ಕ್ಷಣ ಆಶ್ಚರ್ಯದಿಂದ ನೋಡುತ್ತಾ ಕುಳಿತಿತ್ತು.

    ಜಿಲ್ಲೆಯಲ್ಲಿ ಭೀಕರ ಬರಗಾಲ ಆವರಿಸಿದೆ. ನಾನು ಬರಗಾಲ ಪರಿಹಾರ ಕ್ರಮಕ್ಕಾಗಿ ಡಾಕ್ಯುಮೆಂಟ್ ರೆಡಿಮಾಡಿಕೊಂಡು ಬಂದಿದ್ದರೆ, ನೀವು ಫೋನಿನಲ್ಲಿ ಮಾತನಾಡ್ತಾ ನಿರ್ಲಕ್ಷ್ಯ ತೋರುವುದು ಎಷ್ಟು ಸರಿ ಎಂದು ಶಾಸಕ ದೇವಾನಂದ್ ಅವರು ಪ್ರಶ್ನಿಸಿದಾಗ ಸಚಿವರು ತುಟಿಕ್ ಪಿಟಿಕ್ ಎನ್ನದೆ ನಂತರ ಸಭೆ ವಿಚಾರದಲ್ಲಿ ಮಗ್ನರಾದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ಕ್ಲಾಸ್!

    ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ಕ್ಲಾಸ್!

    ಬೆಂಗಳೂರು: ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆಯ ಆದೇಶ ಹೊರಡಿಸಿದರೂ ಖಾಸಗಿ ಹೋಟೆಲಿನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

    ಪ್ರಿಯಾಂಕ್ ಖರ್ಗೆ ಕಾರ್ಯಕ್ರಮಕ್ಕೆ ಭಾರೀ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಈ ವಿಚಾರ ಹೈಕಮಾಂಡ್ ಅಂಗಳಕ್ಕೆ ತಲುಪಿತ್ತು. ಹೀಗಾಗಿ ಬೆಳ್ಳಂಬೆಳಗ್ಗೆ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಕೆ.ಸಿ.ವೇಣುಗೋಪಾಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸರ್ಕಾರದಿಂದ ರಜೆ ಘೋಷಣೆ – ಸಮಾಜ ಕಲ್ಯಾಣ ಇಲಾಖೆಯಿಂದ ಫೈವ್‍ಸ್ಟಾರ್ ಹೋಟೆಲ್‍ನಲ್ಲಿ ಕಾರ್ಯಕ್ರಮ!

    ಯಾವ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಸಾಮಾನ್ಯ ಜ್ಞಾನ ನಿಮಗೆ ಇಲ್ಲದೇ ಹೋಯ್ತೇ? ಸಿದ್ದಗಂಗಾ ಶ್ರೀಗಳಂತ ಸಾಧಕರು ಅಗಲಿದಾಗ ಈ ಕಾರ್ಯಕ್ರಮ ನಡೆಸಿ ವಿವಾದ ಮಾಡಿಕೊಳ್ಳಬೇಕಾದ ಅವಶ್ಯಕತೆ ಏನಿತ್ತು? ಈ ವಿಚಾರಗಳು ಭಾವನಾತ್ಮಕವಾದ ವಿಷಯಗಳು ಎನ್ನುವುದು ನಿಮಗೆ ಗೊತ್ತಾಗುದಿಲ್ಲವೇ? ಇದರಿಂದ ಆಗುವ ಪರಿಣಾಮಗಳೇನು ಅಂತ ಯೋಚಿಸುವ ಶಕ್ತಿಯು ನಿಮಗಿಲ್ಲವೇ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲದೇ ಈ ವಿಚಾರವಾಗಿ ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಪ್ರಿಯಾಂಕ್ ಖರ್ಗೆಗೆ ಸೂಚನೆಯನ್ನು ಕೂಡ ವೇಣುಗೋಪಾಲ್ ನೀಡಿದ್ದಾರೆ.

    ಸಮಾಜ ಕಲ್ಯಾಣ ಇಲಾಖೆ ಸಮಾನತೆ ಅನ್ವೇಷಣೆ ಸಂವಿಧಾನ ಸಂಭಾಷಣೆ ಕಾರ್ಯಕ್ರಮವನ್ನು ಬೆಂಗಳೂರಿನ ಅಶೋಕ ಹೋಟೆಲ್‍ನಲ್ಲಿ ಆಯೋಜಿಸಿದೆ. ಮಂಗಳವಾರ ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಕಾರ್ಯಕ್ರಮವನ್ನು ಮುಂದುವರಿಸಲಾಯಿತು. ಇಡೀ ರಾಜ್ಯವೇ ಶೋಕಾಚರಣೆ ಮಾಡುತ್ತಿರುವಾಗ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ತಪ್ಪು ಎಂದು ಬಿಜೆಪಿ ಆಕ್ಷೇಪಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಕಟು ಟೀಕೆ ವ್ಯಕ್ತವಾಗಿತ್ತು.

    https://www.youtube.com/watch?v=kX1PUyGudYg

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಂಎಲ್‍ಸಿ ರಘು ಆಚಾರ್ ಗೆ ಆವಾಜ್ ಹಾಕಿದ ತರಳುಬಾಳು ಗುರುಪೀಠದ ಭಕ್ತ

    ಎಂಎಲ್‍ಸಿ ರಘು ಆಚಾರ್ ಗೆ ಆವಾಜ್ ಹಾಕಿದ ತರಳುಬಾಳು ಗುರುಪೀಠದ ಭಕ್ತ

    ಚಿತ್ರದುರ್ಗ: ತರಳುಬಾಳು ಗುರುಪೀಠದ ಸಾಣೇಹಳ್ಳಿ ಶಾಖಾ ಮಠದ ಶ್ರೀಗಳ ವಿರುದ್ಧ ಎಂಎಲ್‍ಸಿ ರಘು ಆಚಾರ್ ಹೇಳಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಮಠದ ಭಕ್ತ ರಘು ಆಚಾರ್ ಅವರಿಗೆ ಕರೆ ಮಾಡಿ ಆವಾಜ್ ಹಾಕಿದ್ದಾರೆ.

    `ನಾ ರಾಜಕೀಯ ಬಿಡ್ತೀನಿ ಶ್ರೀಗಳೇ ನೀವು ಮಠ ಬಿಟ್ಟು ಹೊರ ಬನ್ನಿ’ ಎಂದು ಎಂಎಲ್‍ಸಿ ರಘು ಆಚಾರ್ ಶ್ರೀಗಳ ಬಗ್ಗೆ ಹಗರುವಾಗಿ ಮಾತನಾಡಿದ್ದರು. ಇದರಿಂದ ಆಕ್ರೋಶಗೊಂಡ ತರಳುಬಾಳು ಮಠದ ಭಕ್ತ ಲೋಕೇಶ್ ಎಂಬವರು ರಘು ಆಚಾರ್ ಅವರಿಗೆ ಕರೆ ಮಾಡಿ ಆವಾಜ್ ಹಾಕಿದ್ದಾರೆ.

    ಒಬ್ಬರ ಬಗ್ಗೆ ಮಾತನಾಡುವಾಗ ಹುಷಾರ್ ಆಗಿ ಮಾತಾಡು, ಸಾಣೇಹಳ್ಳಿಗೆ ಎಷ್ಟು ಜನ ಕರ್ಕೊಂಡು ಬರ್ತಿಯಾ ಬಾ. ಧಮ್ ಇದ್ರೆ ಹೊಸದುರ್ಗ ಗಡಿಯೊಳಗೆ ಕಾಲಿಡು ನೋಡ್ತಿವಿ. ಪಂಡಿತಾರಾಧ್ಯ ಸ್ವಾಮಿಜಿ ಬಗ್ಗೆ ಹೇಗೆ ನೀವು ಹಗುರವಾಗಿ ಮಾತಾನಾಡಿದ್ರಿ? ಸ್ವಾಮಿಗಳ ಬಳಿ ಕ್ಷಮೆಯಾಚಿಸಬೇಕು. ಮೂಲಭೂತವಾದಿ ಪದದ ಅರ್ಥ ಗೊತ್ತಿಲ್ಲ ಅಂದ್ಮೇಲೆ ಹೇಗೆ ಸ್ವಾಮಿಜೀಗಳ ಬಗ್ಗೆ ಮಾತಾನಾಡಿದ್ರಿ. ಕೋಟ್ಯಾಂತರ ಜನ ಭಕ್ತರು ಸೇರಿ ಅವರನ್ನ ಸ್ವಾಮಿಜಿಗಳನ್ನಾಗಿ ಮಾಡಿದ್ದಾರೆ. ನೀವು ಮಠದ ಭಕ್ತರಲ್ಲವೇ, ಈ ಹಿಂದೆ ಎಷ್ಟು ಸಾರಿ ಮಠಕ್ಕೆ ಭೇಟಿ ನೀಡಿದ್ದಿರಾ ಎಂದು ರಘು ಆಚಾರ್‍ಗೆ ಭಕ್ತರು ಪ್ರಶ್ನಿಸಿದ್ದಾರೆ.

    ಅಷ್ಟೆ ಅಲ್ಲದೆ ನೀವು 11 ತಾಲೂಕುಗಳಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದೀರಿ. ಹೊಸದುರ್ಗ ಗಡಿ ಎಂಟ್ರಿ ಆಗ್ತೀರಾ ಇಲ್ಲಾ ನಾವೇ ನೀವಿದ್ದಲ್ಲಿ ಬರುತೀವಿ. ಮೈಸೂರು, ಬೆಂಗಳೂರು ಎಲ್ಲಿಗೆ ಬರಬೇಕು ನೀವೇ ಹೇಳಿ, ಅಲ್ಲಿಗೆ ಬರುತ್ತೇವೆ ಅಂತ ತರಳುಬಾಳು ಮಠದ ಭಕ್ತರು ಆವಾಜ್ ಹಾಕಿದ್ದಾರೆ. ರಘು ಆಚಾರ್ ಅವರು ತಮ್ಮ ತಪ್ಪಿಗೆ ಮಾಧ್ಯಮ ಮೂಲಕ ಕ್ಷಮೆ ಕೇಳಬೇಕು, ಇಲ್ಲ ಅಂದರೆ ಪರಿಣಾಮ ಸರಿ ಇರಲ್ಲ ಎಂದ ಭಕ್ತರು ಹೇಳಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿದ ರಘು ಆಚಾರ್, ನಾನು ಯಾವುದೇ ತಪ್ಪು ಮಾಡಿಲ್ಲ ನನ್ನ ಬಗ್ಗೆ ಮಾತಾಡುವಾಗ ಯೋಚಿಸಿ ಮಾತಾನಾಡಿ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಶ್ನೆ ಮಾಡಿದ ಮತದಾರರನ್ನೇ ಹೀಯಾಳಿಸಿದ ಶಾಸಕ?

    ಪ್ರಶ್ನೆ ಮಾಡಿದ ಮತದಾರರನ್ನೇ ಹೀಯಾಳಿಸಿದ ಶಾಸಕ?

    ಮಂಡ್ಯ: ತಮ್ಮ ಸಮಸ್ಯೆ ಬಗೆಹರಿಸಿ ಎಂದು ತರಾಟೆಗೆ ತೆಗೆದುಕೊಂಡ ಮತದಾರರನ್ನೇ ತಲೆಯೆಲ್ಲ ಮಾತನಾಡ್ತಾರೆ ಎಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಕ್ಷೇತ್ರದ ಶಾಸಕ ನಾರಾಯಣಗೌಡ ಹೀಯಾಳಿಸಿದ ಘಟನೆ ನಡೆದಿದೆ.

    ಕೆಆರ್ ಪೇಟೆ ತಾಲೂಕಿನ, ಕಿಕ್ಕೇರಿ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಶಾಸಕರ ಜನಸಂಪರ್ಕ ಸಭೆ ಆಯೋಜಿಸಲಾಗಿತ್ತು. ಈ ವೇಳೆ ದೊಡ್ಡತ್ತಾರಹಳ್ಳಿ ಗ್ರಾಮ ಸೇರಿದಂತೆ ಹಲವು ಗ್ರಾಮಗಳ ಮತದಾರರು ರಸ್ತೆ ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯದ ಬಗ್ಗೆ ಪ್ರಶ್ನೆ ಮಾಡುತ್ತಾ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದರು.

    ಜನರ ಪ್ರಶ್ನೆಯಿಂದ ಗೊಂದಲಕ್ಕೆ ಒಳಗಾದ ಶಾಸಕ ನಾರಾಯಣಗೌಡ ನಾನು ನಿಮ್ಮ ಸಮಸ್ಯೆ ಆಲಿಸಲು ಅಧಿಕಾರಿಗಳ ಜೊತೆ ಬಂದಿದ್ದೇನೆ. ಯಾರು ಐದು ಕೋಟಿ ಕೆಲಸ ಹಾಕಿಕೊಟ್ಟಿರೋದು. ತಲೆಯೆಲ್ಲ(ತಲೆಬುಡ ಇಲ್ಲದೆ) ಮತನಾಡ್ತಾರೆ ಎಂದು ಪ್ರಶ್ನೆ ಮಾಡಿದವರ ವಿರುದ್ಧವೇ ತಿರುಗಿ ಬಿದ್ದರು.

    ಈ ವೇಳೆ ಶಾಸಕರ ಬೆಂಬಲಿಗರು ಕೂಡ ಸುಮ್ಮನಿರುವಂತೆ ಸಾರ್ವಜನಿಕರನ್ನು ಮನವಿ ಮಾಡಿದ್ದರು. ಇದರಿಂದ ಮತ್ತಷ್ಟು ಕೆರಳಿದ ಸಾರ್ವಜನಿಕರು ನಾವು ಪ್ರಶ್ನೆ ಮಾಡೋದೆ ತಪ್ಪಾ? ಎಂದು ಆಕ್ರೋಶ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಕೆಲಕಾಲ ಸಭೆ ಗೊಂದಲದ ಗೂಡಾಗಿ ಮಾರ್ಪಾಡಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews