Tag: ತಲ್ಲೂರು ಕೆರೆ

  • ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ ಸಂಪೂರ್ಣ ಭರ್ತಿ – ರೈತರು ಫುಲ್‌ ಖುಷ್‌

    ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ ಸಂಪೂರ್ಣ ಭರ್ತಿ – ರೈತರು ಫುಲ್‌ ಖುಷ್‌

    ಕೊಪ್ಪಳ: ತಮ್ಮ ಅಭಿನಯದಿಂದ ಗಮನ ಸೆಳೆದಿರುವ ಚಿತ್ರನಟ ಯಶ್ (Yash) ರೈತರ ಅನುಕೂಲಕ್ಕಾಗಿ ಕೈಗೊಂಡಿರುವ ಕಾರ್ಯ ಈಗ ಆಕರ್ಷಣೆಯ ಕೇಂದ್ರವಾಗಿದೆ. ಯಶ್ ಅವರ ʻಯಶೋಮಾರ್ಗʼದ (Yasho Marga Foundation) ಸೇವಾ ಕಾರ್ಯ ಈಗ ಯಶಸ್ಸು ಕಂಡಿದೆ. ಯಶ್ ಕಾರ್ಯಕ್ಕೆ ರೈತರು ಖುಷಿಗೊಂಡಿದ್ದಾರೆ. ಕಳೆದ 14 ವರ್ಷದ ನಂತರ ಕೆರೆಯ ಕೊಡಿ ಬಿದ್ದಿದೆ.‌ ಕೆರೆಯಿಂದ ನೀರು ಹರಿಯುತ್ತಿರುವುದು ಸಂತಸ ತಂದಿದೆ.

    ಚಿತ್ರನಟ ಯಶ್ 2016 ರಲ್ಲಿ ಏನಾದರೂ ಸಮಾಜಿಕ ಕಾರ್ಯ ಮಾಡಬೇಕೆಂದು ರೈತರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಕೆರೆ ಅಭಿವೃದ್ಧಿ ಪಡಿಸಿದರು. ಅವರ ಯಶೋಮಾರ್ಗ ಫೌಂಡೇಶನ್‌ನಿಂದ ಕೆರೆ ಅಭಿವೃದ್ದಿಗೆ ಚಾಲನೆ ನೀಡಿದ್ದರು. ಇದನ್ನೂ ಓದಿ: ಯಶ್‌ ಅಭಿವೃದ್ಧಿ ಪಡಿಸಿದ್ದ ತಲ್ಲೂರು ಕೆರೆ ಕೋಡಿ ಬಿತ್ತು – ಗ್ರಾಮಸ್ಥರಿಗೆ ಸಂತಸ

    ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಗ್ರಾಮದಲ್ಲಿರುವ ಕೆರೆ. ಈ ಭಾಗ ಒಣ ಭೂಮಿ ಪ್ರದೇಶವಾಗಿತ್ತು. ಅಂತರ್ಜಲ ಮಟ್ಟ ತೀರಾ ಕುಸಿದಿತ್ತು. ಈ ಸಂದರ್ಭದಲ್ಲಿ ಯಶ್ ಈ ಕೆರೆಯನ್ನು ಅಭಿವೃದ್ದಿ ಪಡಿಸಲು ಮುಂದಾದರು. ಅಂತರ್ಜಲಮಟ್ಟ ಹೆಚ್ಚಿಸಲು ಸ್ಥಳೀಯರು, ಜಲಮೂಲ ಸಂರಕ್ಷಣಾ ಮುಖಂಡರೊಂದಿಗೆ 2017 ರಲ್ಲಿ ತಲ್ಲೂರು ಕೆರೆಯನ್ನು 4 ಕೋಟಿ ರೂಪಾಯಿಯಲ್ಲಿ ಅಭಿವೃದ್ದಿ ಪಡಿಸಿದ್ದಾರೆ.

    96 ಎಕರೆ ವಿಸ್ತಾರವಿರುವ ತಲ್ಲೂರು ಕೆರೆಯು (Tallur Lake) 1,038 ಎಕರೆ ಅಚ್ಚುಕಟ್ಟು ಪ್ರದೇಶವನ್ನು ಹೊಂದಿದೆ. ಇಲ್ಲಿರುವ ಕೆರೆಯು ಹೂಳು ತುಂಬಿತ್ತು. ಸುತ್ತಲಿನ 14 ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಕುಸಿದಿತ್ತು.‌ ಕೆರೆ ಅಭಿವೃದ್ದಿಪಡಿಸಿದ ನಂತರ ಈಗ ಅಂತರ್ಜಲಮಟ್ಟ ಹೆಚ್ಚಳವಾಗಿದೆ. ಈ ಮಧ್ಯೆ ಈಗ ಇದೇ ಕೆರೆಯು ಭರ್ತಿಯಾಗಿ ಕೊಡಿ ಬಿದ್ದಿದೆ. ಇದರಿಂದ ರೈತರು ಸಂತಸಗೊಂಡಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿ PFI ಟೆರರ್ ಟ್ರೈನಿಂಗ್- ಸ್ಫೋಟಕ ಸತ್ಯ ಬಯಲು

    ಈ ಕೆರೆಯು 2008 ರಲ್ಲಿ ಭರ್ತಿಯಾಗಿ ಕೊಡಿ ಬಿದ್ದಿತ್ತು. ಅದರ ನಂತರ ಯಶ್ ಕೆರೆ ಅಭಿವೃದ್ದಿ ಪಡಿಸಿದರು. ಇದೇ ವೇಳೆ ಕಳೆದು ಮೂರು ನಾಲ್ಕು ವರ್ಷದಿಂದ ಉತ್ತಮ ಮಳೆಯಾಗುತ್ತಿದೆ. ಈ ಮಳೆಗೆ ಕೆರೆ ಭರ್ತಿಯಾಗಿತ್ತು. ಆದರೆ ಕೊಡಿ ಬಿದ್ದಿರಲಿಲ್ಲ. ಈ ಮಧ್ಯೆ ಕಳೆದ ಎರಡು ದಿನಗಳಿಂದ ಭರ್ಜರಿ ಮಳೆಯಾದ ಕಾರಣ ಕೆರೆಯಲ್ಲಿ ಕೊಡಿ ಬಿದ್ದಿದೆ. ಇದರಿಂದ ತಲ್ಲೂರು ಸೇರಿ ಸುತ್ತಲಿನ ಗ್ರಾಮಸ್ಥರು ಸಂತಸಗೊಂಡಿದ್ದಾರೆ.

    ಇಂದು ಮುಂಜಾನೆ ನೂರಾರು ಜನ ಕೆರೆಗೆ ಭೇಟಿ ನೀಡಿ ದೃಶ್ಯ ನೋಡಿ ಆನಂದಿಸಿದ್ದಾರೆ. ಒಟ್ನಲ್ಲಿ ಯಶೋಮಾರ್ಗದ ಮೂಲಕ ನಟ ಯಶ್ ಅವರ ಸಂಕಲ್ಪ ಈಗ ಫಲ ಕಂಡಿದೆ. ಹತ್ತಾರು ಗ್ರಾಮಗಳ ರೈತರ ಬದುಕಿಗೆ ಆಸರೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸಲಾಂ ರಾಕಿ ಭಾಯ್ ಅಂತಾ ಹೇಳ್ತಿರೋದು ಕೆಜಿಎಫ್ ಸಿನಿಮಾಗೆ ಅಲ್ಲ

    ಸಲಾಂ ರಾಕಿ ಭಾಯ್ ಅಂತಾ ಹೇಳ್ತಿರೋದು ಕೆಜಿಎಫ್ ಸಿನಿಮಾಗೆ ಅಲ್ಲ

    ಕೊಪ್ಪಳ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ದೇಶದೆಲ್ಲೆಡೆ ಜನರ ಮೆಚ್ಚುಗೆ ಗಳಿಸಿದೆ. ಅಲ್ಲದೆ ಯಶ್ ಪಾತ್ರಕ್ಕೂ ಜನರು ಫುಲ್ ಫಿದಾ ಆಗಿದ್ದಾರೆ. ಯಶ್ ಬರೀ ಸಿನಿಮಾದಲ್ಲಿ ಮಾತ್ರ ಹೀರೋ ಅಲ್ಲ. ನಿಜಜೀವನದಲ್ಲೂ ಯಶ್ ಹೀರೋ ಆಗಿದ್ದಾರೆ. ಅದಕ್ಕೆ ಸಾಕ್ಷಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ.

    ಭೀಕರ ಬರಗಾಲದಿಂದಾಗಿ ತಲ್ಲೂರು ಕೆರೆ ಬತ್ತಿ ಹೋಗಿತ್ತು. 2016 ಫೆಬ್ರವರಿ 28 ರಂದು ಯಶ್ ದಂಪತಿ ಯಶೋಮಾರ್ಗ ಫೌಂಡೇಶನ್ ಮೂಲಕ ಸುಮಾರು 4 ಕೋಟಿ ವೆಚ್ಚದಲ್ಲಿ ತಲ್ಲೂರು ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದ್ರು. ಮಳೆಗಾಲ ಆರಂಭಕ್ಕೂ ಮುನ್ನ ಯಲಬುರ್ಗಾ ಸುತ್ತಮುತ್ತಲಿನ ಜನ ಸ್ವಯಂ ಪ್ರೇರಿತರಾಗಿ ಬಂದು ಕೆರೆಯ ಹೂಳನ್ನು ತೆಗೆದಿದ್ರು. 4 ಅಡಿಯಷ್ಟು ಹೂಳು ತೆಗೆದಾಗ ಕೆರೆಯಲ್ಲಿ ನೀರು ಜಿನುಗಿತ್ತು.

    ಇಂದು ತಲ್ಲೂರು ಕೆರೆ ಸ್ವಚ್ಛ ನೀರಿನಿಂದ ಸುತ್ತಮುತ್ತಲಿನ ನೂರಾರು ಕುಟುಂಬ, ಜಾನುವಾರುಗಳ ದಾಹ ಇಂಗಿಸುತ್ತಿದೆ. ಈ ಕೆರೆಯಿಂದ ಸುತ್ತಮುತ್ತಲಿನ 20 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಪ್ರಾಣಿ-ಪಕ್ಷಿಗಳಿಗೆ ತಲ್ಲೂರು ಕೆರೆಯ ನೀರೇ ಆಸರೆಯಾಗಿದೆ. ಇಷ್ಟು ದಿನ ನೀರಿಗಾಗಿ ಹಾಹಾಕಾರ ಪಡುತ್ತಿದ್ದ ತಲ್ಲೂರು ಜನ ರಾಖಿ ಭಾಯ್‍ಗೆ ಮತ್ತೊಮ್ಮೆ ಸಲಾಂ ಹೊಡೆಯುತ್ತಿದ್ದಾರೆ.

    ಜನಪ್ರತಿನಿಧಿಗಳು, ಅಧಿಕಾರಿಗಳು ಮಾಡದ ಕೆಲಸವನ್ನು ಓರ್ವ ಸಿನಿಮಾ ಕಲಾವಿದ ಯಶ್ ಮಾಡಿ ತೋರಿಸಿ ಇತರರಿಗೆ ಪ್ರೇರಕರಾಗಿದ್ದಾರೆ. ನಿಜವಾಗಿಯೂ ಸಲಾಂ ರಾಕಿ ಭಾಯ್.

    https://www.youtube.com/watch?v=pMl0RRC1QLQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಶೋಮಾರ್ಗ ಪರಿಶ್ರಮಕ್ಕೆ ಸಿಕ್ತು ಪ್ರತಿಫಲ: ಭರ್ತಿಯಾಯ್ತು ಬತ್ತಿ ಹೋಗಿದ್ದ ತಲ್ಲೂರು ಕೆರೆ

    ಯಶೋಮಾರ್ಗ ಪರಿಶ್ರಮಕ್ಕೆ ಸಿಕ್ತು ಪ್ರತಿಫಲ: ಭರ್ತಿಯಾಯ್ತು ಬತ್ತಿ ಹೋಗಿದ್ದ ತಲ್ಲೂರು ಕೆರೆ

    ಕೊಪ್ಪಳ: ನಟ ಯಶ್ ತಮ್ಮ ಯಶೋಮಾರ್ಗದಿಂದ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆಯಲ್ಲಿನ ಹೂಳು ತೆಗೆಯುವ ಕೆಲಸ ಮಾಡಿಸಿದ್ದರು. ಇತ್ತೀಚೆಗೆ ಸುರಿದ ಮಳೆಯಿಂದಾಗಿ ತಲ್ಲೂರು ಕೆರೆ ತುಂಬಿದೆ. ಸೋಮವಾರ ಯಶ್ ಹಾಗೂ ರಾಧಿಕಾ ಪಂಡಿತ್ ತಲ್ಲೂರು ಕೆರೆಗೆ ಬಾಗಿನ ಅರ್ಪಿಸಲಿದ್ದಾರೆ.

    ಸತತ ಮೂರ್ನಾಲ್ಕು ವರ್ಷಗಳ ಬರದಿಂದ ಸಂಪೂರ್ಣವಾಗಿ 96 ಎಕರೆ ವಿಸ್ತೀರ್ಣದ ತಲ್ಲೂರು ಕೆರೆ ಬತ್ತಿ ಹೋಗಿತ್ತು. ಅಲ್ಲದೇ ಸಂಪೂರ್ಣವಾಗಿ ಹೂಳು ಕೂಡಾ ತುಂಬಿಕೊಂಡಿತ್ತು. ಕೆರೆಯಲ್ಲಿ ತುಂಬಿರೋ ಹೂಳು ತಗೆಯಲು ಕಳೆದ ಫೆಬ್ರವರಿ ತಿಂಗಳಲ್ಲಿ ಹೂಳು ತಗೆಯಲು ಯಶ್ ದಂಪತಿ ಚಾಲನೆ ನೀಡಿದ್ದರು. ಅಂದು ನೀಡಿದ್ದ ಕೆರೆ ಕಾಯಕಕ್ಕೆ ಇಂದು ಸಾರ್ಥಕತೆ ಸಿಕ್ಕಿದೆ.

    ಕೆರೆ ತುಂಬಿರೋದ್ರಿಂದ ಸುಮಾರು 10ಕ್ಕೂ ಹೆಚ್ಚು ಗ್ರಾಮಗಳಲ್ಲಿನ ರೈತರಿಗೆ ಅನುಕೂಲವಾಗಲಿದೆ. ನಟ ಯಶ್‍ನ ಕಾರ್ಯವನ್ನ ಈ ಭಾಗದ ರೈತರು ಕೊಂಡಾಡುತ್ತಿದ್ದು, ಬರದ ನಾಡಿನ ಭಗೀರಥ ಬಂದಂಗ ಬಂದು ನಮ್ಮೂರು ಕೆರೆ ಅಭಿವೃದ್ಧಿ ಪಡಿಸಿದ್ರು. ಈ ಬಾರಿ ಮಳೆಯೂ ಚೆನ್ನಾಗಿ ಆಯ್ತು, ಕೆರೆನೂ ತುಂಬಿದೆ ಅಂತ ಗ್ರಾಮಸ್ಥರು ಸಂತಸ ಹಂಚಿಕೊಳ್ಳುತ್ತಿದ್ದಾರೆ.

    ಯಶೋ ಮಾರ್ಗದಿಂದ ತಲ್ಲೂರು ಕೆರೆಯನ್ನು 4 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ 10 ಗಂಟೆಗೆ ತಲ್ಲೂರು ಕೆರೆಗೆ ಬಾಗಿನ ಅರ್ಪಿಸಿದ ಬಳಿಕ ನಟ ಯಶ್ ಹಾಗೂ ರಾಧಿಕಾ ಪಂಡಿತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶೋ ಮಾರ್ಗದ ಕಾರ್ಯದ ಬಗ್ಗೆ ರೈತರೊಂದಿಗೆ, ಗ್ರಾಮಸ್ಥರೊಂದಿಗೆ ಸಂತಸ ಹಂಚಿಕೊಳ್ಳಲಿದ್ದಾರೆ.

    https://www.youtube.com/watch?v=hKy92VBhRAY

    https://www.youtube.com/watch?v=JRN6dKohV5k

    https://www.youtube.com/watch?v=n1r_Ui38aCI

  • ಕೊಪ್ಪಳ: ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರಿಗೆ ನಟ ಯಶ್ ಸನ್ಮಾನ

    ಕೊಪ್ಪಳ: ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರಿಗೆ ನಟ ಯಶ್ ಸನ್ಮಾನ

    ಕೊಪ್ಪಳ: ಕಳೆದ ಎರಡು ತಿಂಗಳ ಹಿಂದೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಹೂಳೆತ್ತಲು ಚಾಲನೆ ನೀಡಿದ್ದ ನಟ ಯಶ್, ಸೋಮವಾರ ಕೆರೆಗೆ ದಿಢೀರ್ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ನಟ ಯಶ್ ಕಾರ್ಮಿಕರಿಗೆ ಸನ್ಮಾನ ಮಾಡಿದ್ರು.

    ಸೋಮವಾರ ಸಂಜೆ ದಿಢೀರ್ ಭೇಟಿ ನೀಡಿದ ಯಶ್, ವಿಶ್ವ ಕಾರ್ಮಿಕ ದಿನದ ಅಂಗವಾಗಿ 35 ಕಾರ್ಮಿಕರಿಗೆ ಫಲಪುಷ್ಪ ನೀಡಿ ಗೌರವಿಸಿದರು. ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡೋ ವೇಳೆ ನಟ ಯಶ್ ಹೇಳಿದ ಮಾತಿನಂತೆ ಯಾರಿಗೂ ಮಾಹಿತಿ ನೀಡದಂತೆ ಕೆರೆಗೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದ್ದಾರೆ. ಯಶೋಮಾರ್ಗ ಫೌಂಡೇಶನ್ ವತಿಯಿಂದ 4 ಕೋಟಿ ವೆಚ್ಚದಲ್ಲಿ ತಲ್ಲೂರ ಕೆರೆ ಹೂಳನ್ನು ಎತ್ತಲಾಗುತ್ತಿದೆ.

    ಈ ವೇಳೆ ಯಶ್ ಜೆಸಿಬಿಯನ್ನು ಚಲಾಯಿಸುವ ಮೂಲಕ ಕಾರ್ಮಿಕರಿಗೆ ಹುರಿದುಂಬಿಸಿದರು. ಕಾಮಗಾರಿಗೆ ಚಾಲನೆ ನೀಡುವ ವೇಳೆ ಪತ್ನಿ ರಾಧಿಕಾ ಪಂಡಿತ್ ಸಮೇತ ಆಗಮಿಸಿದ್ದ ನಟ ಯಶ್ ಈ ಬಾರಿ ಒಬ್ಬರೇ ಅಗಮಿಸಿದ್ದರು.