Tag: ತಹವ್ವೂರ್‌ ರಾಣಾ

  • Mumbai Attack | ರಾಣಾ ವಿರುದ್ಧ ಸಾಕ್ಷಿಗಾಗಿ ನಿಗೂಢ ಮಹಿಳೆಯ ಹಿಂದೆ ಬಿದ್ದ ಎನ್‌ಐಎ

    Mumbai Attack | ರಾಣಾ ವಿರುದ್ಧ ಸಾಕ್ಷಿಗಾಗಿ ನಿಗೂಢ ಮಹಿಳೆಯ ಹಿಂದೆ ಬಿದ್ದ ಎನ್‌ಐಎ

    – ತಹವ್ವೂರ್‌ ರಾಣಾಗೆ ಎನ್‌ಐಎ ಕೇಳಿದ ಆ 18 ಪ್ರಶ್ನೆಗಳು ಯಾವುವು?
    – ಭಾರತ ಹಸ್ತಾಂತರ ತಡೆಯಲು 32 ಆರೋಗ್ಯ ಸಮಸ್ಯೆ ಕಾರಣ ನೀಡಿದ್ದ ರಾಣಾ ಪರ ವಕೀಲ

    ನವದೆಹಲಿ: 2008ರ ಮುಂಬೈ ದಾಳಿ (Mumbai Attack) ಪ್ರಕರಣದ ಉಗ್ರ ತಹವ್ವೂರ್ ಹುಸೇನ್ ರಾಣಾ (Tahawwur Hussain Rana) ವಿಚಾರಣೆ ಆರಂಭಿಸಿರುವ ರಾಷ್ಟ್ರೀಯ ತನಿಖಾ ದಳ (NIA) ಸಾಕ್ಷ್ಯ ಕಲೆಹಾಕಲು ನಿಗೂಢ ಮಹಿಳೆಯ ಹಿಂದೆ ಬಿದ್ದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ರಾಣಾ ಭಾರತದಲ್ಲಿದ್ದ ವೇಳೆ ಆತನ ಜೊತೆಗಿದ್ದ ಮಹಿಳೆಯನ್ನು ಪತ್ತೆಹಚ್ಚಲು ಎನ್‌ಐಎ ತನಿಖಾಧಿಕಾರಿಗಳ ತಂಡ ಮುಂದಾಗಿದೆ. ಆಕೆಯ ಗುರುತು ಇನ್ನೂ ಸ್ಪಷ್ಟವಾಗಿಲ್ಲ. ಆದ್ರೆ ಈ ಮಹಿಳೆ ರಾಣಾ ನಡೆಸಿದ ಪಿತೂರಿಯ ಭಾಗವಾಗಿರಬಹುದು ಅಥವಾ ರಾಣಾ ಸಂಪರ್ಕದ ಬಗ್ಗೆ ಪ್ರಮುಖ ಮಾಹಿತಿಯನ್ನೂ ಹೊಂದಿರಬಹುದು ಶಂಕಿಸಲಾಗಿದೆ. ಆ ಮಹಿಳೆ ರಾಣಾ ಭಾರತದಲ್ಲಿ ಇದ್ದಷ್ಟು ದಿನ ಅವನ ಪತ್ನಿ ಎಂದೇ ಹೇಳಿಕೊಂಡಿದ್ದಳು. ಈಕೆಯನ್ನ ಪತ್ತೆಹಚ್ಚಿದ್ರೆ, ಇನ್ನಷ್ಟು ರಹಸ್ಯಗಳನ್ನ ಬಯಲಿಗೆಳೆಯಬಹುದು ಎಂದು ಅಧಿಕಾರಿಗಳು ಮಹಿಳೆಯ ಹುಡುಕಾಟಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

    ರಾಣಾಗೆ 18ರ ಕಂಟಕ
    ಈಗಾಗಲೇ ಮೊದಲ ಸುತ್ತಿನ ವಿಚಾರಣೆ ನಡೆಸಿರುವ ಎನ್‌ಐಎ ರಾಣಾಗೆ 18 ಪ್ರಮುಖ ಪ್ರಶ್ನೆಗಳನ್ನ ಕೇಳಿದೆ. ವಿಚಾರಣೆ ವೇಳೆ ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐ ಹಾಗೂ ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ ಬಗ್ಗೆ ಹಲವು ರಹಸ್ಯಗಳನ್ನ ಬಾಯ್ಬಿಟ್ಟಿದ್ದಾನೆ. ಈ ಪ್ರಶ್ನೆಗಳು ಮಾಧ್ಯಮಗಳಿಗೆ‌ ಉನ್ನತ ಮೂಲಗಳಿಂದ ಲಭ್ಯವಾಗಿದೆ. ಎನ್‌ಐಎ ಕೇಳಿದ 18 ಪ್ರಶ್ನೆಗಳು ಯಾವುದು ಅಂತ ನೋಡೋದಾದ್ರೆ..

    1. 2008ರ ನವೆಂಬರ್‌ 26ರಂದು ನೀವು ಎಲ್ಲಿದ್ರಿ?
    2. ನೀವು ಭಾರತದಲ್ಲಿದ್ದ ಸಮಯದಲ್ಲಿ ಯಾರ‍್ಯಾರನ್ನ ಎಲ್ಲೆಲ್ಲಿ ಭೇಟಿ ಮಾಡಿದ್ದೀರಿ?
    3. ಡೇವಿಡ್ ಕೋಲ್ಮನ್ ಹೆಡ್ಲಿ ನಿಮಗೆ ಎಷ್ಟು ದಿನಗಳಿಂದ ಗೊತ್ತು? ನಕಲಿ ವೀಸಾ ನೀಡಿ ಭಾರತಕ್ಕೆ ಕಳುಹಿಸಿದ್ದು ಏಕೆ?
    4. ಹೆಡ್ಲಿಯನ್ನ ಭಾರತದಲ್ಲಿ ಭೇಟಿ ನೀಡಿದ ಸ್ಥಳಗಳ ಬಗ್ಗೆ ನಿಮಗೆ ಏನು ಹೇಳಿದರು?
    5. ಮುಂಬೈ ದಾಳಿಯಲ್ಲಿ ನಿಮ್ಮ ಮತ್ತು ಹೆಡ್ಲಿಯ ಪಾತ್ರವೇನು?
    6. ಡೇವಿಡ್ ಕೋಲ್ಮನ್ ಹೆಡ್ಲಿಗೆ ಭಾರತೀಯ ವೀಸಾ ಪಡೆಯಲು ನೀವು ಹೇಗೆ ಸಹಾಯ ಮಾಡಿದ್ದೀರಿ?
    7. ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ ನಿಮಗೆ ಹೇಗೆ ಗೊತ್ತು? ನೀವು ಯಾವಾಗ ಮತ್ತು ಎಲ್ಲಿ ಅವನನ್ನ ಮೊದಲ ಬಾರಿಗೆ ಭೇಟಿ ಮಾಡಿದ್ರಿ?
    8. ಹಫೀಜ್ ಸಯೀದ್ ಜೊತೆಗೆ ನಿಮ್ಮ ನಂಟೇನು?
    9. ಲಷ್ಕರ್-ಎ-ತೈಬಾಗೆ ನೀವು ಹೇಗೆ ಸಹಾಯ ಮಾಡಿದ್ದೀರಿ? ನಿನ್ನ ಸಹಾಯಕ್ಕೆ ಪ್ರತಿಯಾಗಿ ಲಷ್ಕರ್ ನಿನಗೆ ಏನು ಕೊಟ್ಟನು?
    10. ಲಷ್ಕರ್-ಎ-ತೊಯ್ಬಾದಲ್ಲಿ ಎಷ್ಟು ಜನರಿದ್ದಾರೆ? ಅದರ ರಚನೆ ಹೇಗಿದೆ? ನೇಮಕಾತಿ ಹೇಗೆ ನಡೆಯುತ್ತದೆ? ಯಾರು ಮಾಡುತ್ತಾರೆ?
    11. ಲಷ್ಕರ್ ನಡೆಸಲು ನಿಧಿ ಎಲ್ಲಿಂದ ಬರುತ್ತದೆ? ಹೆಚ್ಚು ನಿಧಿ ಸಂಗ್ರಹ ಮಾಡುವವರು ಯಾರು?
    12. ಶಸ್ತ್ರಾಸ್ತ್ರಗಳನ್ನು ಯಾರು ಪೂರೈಸುತ್ತಾರೆ? ನೀವು ಯಾವ ದೇಶಗಳಿಂದ ಶಸ್ತ್ರಾಸ್ತ್ರಗಳನ್ನು ಪಡೆಯುತ್ತೀರಿ?
    13. ಪಾಕಿಸ್ತಾನಿ ಸೇನೆ ಮತ್ತು ISI ನಿಮಗೆ ಹೇಗೆ ಸಹಾಯ ಮಾಡುತ್ತದೆ?
    14. ದಾಳಿ ಮಾಡಲು ನೀವು ಗುರಿಗಳನ್ನು ಹೇಗೆ ಆರಿಸುತ್ತೀರಿ? ಗುರಿಯ ಮೇಲೆ ದಾಳಿ ಮಾಡಲು ISI ನಿಮಗೆ ಸೂಚನೆಗಳನ್ನು ನೀಡುತ್ತದೆಯೇ?
    15. ISIಯ ಯೋಜನೆ ಏನು? ಭಾರತದ ನಿಮ್ಮ ಗುರಿ ಸಾಧಿಸಲು ಸಾಧ್ಯವಾಗಲಿಲ್ಲವೇ?
    16. ಐಎಸ್‌ಐ ಹೊರತಾಗಿ ಪಾಕಿಸ್ತಾನ ಸರ್ಕಾರಕ್ಕೂ ಭಯೋತ್ಪಾದಕ ದಾಳಿಯ ಮಾಹಿತಿ ಸಿಗುತ್ತದೆಯೇ?
    17. ದಾಳಿಯ ಸಮಯದಲ್ಲಿ ಭಯೋತ್ಪಾದಕರಿಗೆ ಯಾರು ಸೂಚನೆಗಳನ್ನು ನೀಡುತ್ತಾರೆ?
    18. ಆತ್ಮಹತ್ಯಾ ದಾಳಿಗಳಿಗೆ ಹುಡುಗರನ್ನು ಹೇಗೆ ಸಿದ್ಧಪಡಿಸ್ತಾರೆ, ಅವರಿಗೆ ಏನು ಉಪದೇಶ ಕೊಡ್ತಾರೆ?

    32 ಆರೋಗ್ಯ ಸಮಸ್ಯೆ ಕಾರಣ ನೀಡಿದ್ದ ರಾಣಾ:
    ಇನ್ನೂ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ರಾಣಾ ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡಿದ್ದ ಅನ್ನೋ ಹೊಸ ವಿಚಾರ ಸಹ ಬೆಳಕಿಗೆ ಬಂದಿದೆ. ಈ ಮಾಹಿತಿಯು ಅಮೆರಿಕ ತನಿಖಾ ಏಜೆನ್ಸಿಗಳಿಗೆ ನೀಡಿದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

    ರಾಣಾನನ್ನ ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ರಾಣಾ ಪರ ವಕೀಲ ಅಮೆರಿಕದ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ 32 ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿದ್ದರು. ಅಲ್ಲದೇ ತನ್ನ ಕಕ್ಷಿಗಾರನಿಗೆ ಭಾರತದ ಜೈಲುಗಳಲ್ಲಿ ಚಿತ್ರಹಿಂಸೆ ನೀಡಬಹುದು, ಇದರಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ರಾಣಾ ಜೀವನ ಬೇಗ ಅಂತ್ಯವಾಗಲಿದೆ. ಆದ್ದರಿಂದ ಭಾರತಕ್ಕೆ ಹಸ್ತಾಂತರಿಸದಂತೆ ಕೋರ್ಟ್‌ಗೆ ಮನವಿ ಮಾಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

  • ರಾಣಾ ಇರೋ ಸೆಲ್‌ಗೆ 12 ಅಧಿಕಾರಿಗಳಿಗೆ ಮಾತ್ರ ಪ್ರವೇಶ – ಕೋಟೆಯಾಗಿ ಬದಲಾದ NIA ಕಚೇರಿ

    ರಾಣಾ ಇರೋ ಸೆಲ್‌ಗೆ 12 ಅಧಿಕಾರಿಗಳಿಗೆ ಮಾತ್ರ ಪ್ರವೇಶ – ಕೋಟೆಯಾಗಿ ಬದಲಾದ NIA ಕಚೇರಿ

    ನವದೆಹಲಿ: ವಿಶೇಷ ನ್ಯಾಯಾಲಯ 18 ದಿನಗಳ ಕಾಲ ಕಸ್ಟಡಿಗೆ ನೀಡಿದ ಬಳಿಕ ಮುಂಬೈ ದಾಳಿ (Mumbai Attack) ಪ್ರಕರಣ ಆರೋಪಿ ಉಗ್ರ ತಹವ್ವೂರ್ ಹುಸೇನ್ ರಾಣಾನನ್ನು (Tahawwur Rana) ದೆಹಲಿಯಲ್ಲಿರುವ ರಾಷ್ಟ್ರೀಯ ತನಿಖಾ ದಳದ (NIA) ಪ್ರಧಾನ ಕಚೇರಿಯಲ್ಲಿ ಬಂಧಿಸಿ ಇಡಲಾಗಿದೆ.

    ಎನ್‌ಐಎ ಕಟ್ಟಡದ ನೆಲ ಮಹಡಿಯಲ್ಲಿರುವ 14*14 ಅಡಿ ಅಳತೆಯ ಕೋಣೆಗೆ ಸಿಸಿಟಿವಿ (CCTV) ಹಾಕಲಾಗಿದ್ದು ಪ್ರತಿಯೊಂದು ಚಲನವಲನಗಳನ್ನು ಗಮನಿಸಲಾಗುತ್ತದೆ. ಈ ಕೊಠಡಿಯಲ್ಲೇ ಎಲ್ಲಾ ತನಿಖಾ ಸಂಸ್ಥೆಗಳು ರಾಣಾನನ್ನು ವಿಚಾರಣೆಗೆ ಒಳಪಡಿಸಲಿವೆ.

    ರಾಣಾ ಆಗಮನದ ನಂತರ ಎನ್‌ಐಎ ಪ್ರಧಾನ ಕಚೇರಿ ಕೋಟೆಯಾಗಿ ಬದಲಾಗಿದೆ. ಹೆಚ್ಚುವರಿ ದೆಹಲಿ ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿಯನ್ನು ಹೊರಗಡೆ ಭದ್ರತೆಗೆ ನಿಯೋಜಿಸಲಾಗಿದೆ. ಇದನ್ನೂ ಓದಿ: ರಾಣಾ ಕರೆತಂದ ವಿಮಾನಕ್ಕೆ ನೀಡಲಾಗಿತ್ತು ಡಮ್ಮಿ ಕೋಡ್‌, ಮಧ್ಯೆ 11 ಗಂಟೆ ಪಿಟ್‌ ಸ್ಟಾಪ್‌!

     

    ಪ್ರತಿ ಇಂಚಿನಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ ಮತ್ತು 12 ಎನ್‌ಐಎ ಅಧಿಕಾರಿಗಳಿಗೆ ಮಾತ್ರ ಈ ಕೊಠಡಿ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

    ನೆಲದ ಮೇಲೆ ಹಾಸಿಗೆ ಹಾಸಲಾಗಿದೆ. ಸೆಲ್‌ ಒಳಗಡೆಯೇ ಸ್ನಾನ ಗೃಹ ಮತ್ತು ಶೌಚಾಲಯವಿದೆ. ಊಟ, ಕುಡಿಯುವ ನೀರು, ವೈದ್ಯಕೀಯ ಸರಬರಾಜು ಎಲ್ಲವನ್ನೂ ಒಳಗಡೆಗೆ ತಲುಪಿಸಲಾಗುತ್ತದೆ. ಇದನ್ನೂ ಓದಿ: ಅಮೆರಿಕದಲ್ಲಿ ಕಾಲಿಗೆ, ಸೊಂಟಕ್ಕೆ ಚೈನ್‌ – ಭಾರತದಲ್ಲಿ ರಾಣಾನಿಗೆ ಕಟ್ಟಿದ್ದ ಚೈನ್‌ ತೆಗೆದಿದ್ದು ಯಾಕೆ?

    ಮೂಲಗಳ ಪ್ರಕಾರ ಶುಕ್ರವಾರ ವಿಚಾರಣೆ ಆರಂಭವಾಗಿದ್ದು ಇಂದಿನಿಂದ ರಾಣಾನನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತದೆ. ಡ್ಯುಯಲ್ ಕ್ಯಾಮೆರಾ ಕಣ್ಗಾವಲಿನಲ್ಲಿ ಬಂಧಿಯಾಗಿರುವ ಕೊಠಡಿಯಲ್ಲೇ ವಿಚಾರಣೆ ನಡೆಯಲಿದೆ. ಎಂಟು ಕೇಂದ್ರ ತನಿಖಾ ಮತ್ತು ಗುಪ್ತಚರ ಸಂಸ್ಥೆಗಳು ರಾಣಾನನ್ನು ವಿಚಾರಣೆಗೆ ಒಳಪಡಿಸಲು ಅವಕಾಶ ಕೋರಿವೆ ಎಂದು ವರದಿಯಾಗಿದೆ.

    ಅಮೆರಿಕದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಕರೆ ತಂದ ನಂತರ ರಾಣಾನನ್ನು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಕೋರ್ಟ್‌ 18 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿದ ಬಳಿಕ ರಾಣಾನನ್ನು ಈ ವಿಶೇಷ ಸೆಲ್‌ನಲ್ಲಿ ಬಂಧಿಸಿ ಇಡಲಾಗಿದೆ.

  • ರಾಣಾಗೆ 14×14 ಅಡಿಯ ಸೆಲ್ – ದಿನದ 24 ಗಂಟೆಯೂ ನಿಗಾ; ಸೆಲ್‌ನಲ್ಲೇ ಊಟ

    ರಾಣಾಗೆ 14×14 ಅಡಿಯ ಸೆಲ್ – ದಿನದ 24 ಗಂಟೆಯೂ ನಿಗಾ; ಸೆಲ್‌ನಲ್ಲೇ ಊಟ

    – ನೆಲದಲ್ಲೇ 1 ಬೆಡ್, ಬಾತ್ ರೂಂ

    ನವದೆಹಲಿ: 2008ರ ಮುಂಬೈ ದಾಳಿಯ (Mumbai Attack) ಸಂಚುಕೋರ ತಹವ್ವೂರ್‌ ರಾಣಾನನ್ನ (Tahawwur Rana) 18 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಶುರು ಮಾಡಿದೆ. ಸದ್ಯ ಎನ್‌ಐಎ ಮುಖ್ಯಕಚೇರಿಯ ಪ್ರತ್ಯೇಕ ಸೆಲ್‌ನಲ್ಲಿ ರಾಣಾನನ್ನು ಸದಾನಂದ ದಾತೆ ನೇತೃತ್ವದ 12 ಅಧಿಕಾರಿಗಳ ಸ್ಪೆಷಲ್ ಟೀಂ ವಿಚಾರಣೆಗೆ ಒಳಪಡಿಸಿದೆ. ಅದರಂತೆ ರಾಣಾನನ್ನ ದೇಶದ ವಿವಿಧ ಭಾಗಗಳಿಗೆ ಕರೆದೊಯ್ಯುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

    ದಿನದ 24 ಗಂಟೆಯೂ ನಿಗಾ
    ಸದ್ಯ ರಾಣಾನನ್ನ ಸುರಕ್ಷಿತವಾಗಿಡಲು 14*14 ಅಡಿಯ ಸೆಲ್‌ ವ್ಯವಸ್ಥೆ ಮಾಡಲಾಗಿದೆ. ಈ ಸೆಲ್ ಸಿಜಿಒ ಕಾಂಪ್ಲೆಕ್ಸ್‌ನಲ್ಲಿರುವ (CGO Complex) ಎನ್‌ಐಎ (NIA) ಕಚೇರಿಯ ಗ್ರೌಂಡ್‌ಫ್ಲೋರ್‌ನಲ್ಲಿ ಇದೆ. ಜೊತೆಗೆ ರಾತ್ರಿ ವೇಳೆಯೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ದೆಹಲಿ ಪೊಲೀಸರು ಹಾಗೂ ಅರೆಸೇನಾ ಪಡೆ ಸಿಬ್ಬಂದಿಯನ್ನ ಹೊರಾಂಗಣದಲ್ಲಿ ನಿಯೋಜಿಸಲಾಗಿದೆ. ರಾಣಾ ಕೊಠಡಿ ಪ್ರವೇಶಿಸಲು ಮೂರ್ನಾಲ್ಕು ಹಂತಗಳಲ್ಲಿ ಡಿಜಿಟಲ್‌ ಸುರಕ್ಷತಾ ಪದರಗಳ ವ್ಯವಸ್ಥೆ ಮಾಡಲಾಗಿದೆ. ದಿನದ 24 ಗಂಟೆಯೂ ನಿಗಾ ವಹಿಸಲು ಇಂಚಿಂಚಿಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. 12 ಅಧಿಕಾರಿಗಳ ಸ್ಪೆಷಲ್‌ ಟೀಂಗೆ ಹೊರತುಪಡಿಸಿ ಉಳಿದವರು ಯಾರಿಗೂ ಇಲ್ಲಿ ಪ್ರವೇಸಿಸಲು ಅವಕಾಶ ಇಲ್ಲ ಎಂದು ಎನ್‌ಐಎ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

    ನೆಲದ ಮೇಲೆಯೇ ಬಾತ್‌ ರೂಂ
    ಇನ್ನೂ ರಾಣಾಗೆ ವ್ಯವಸ್ಥೆ ಮಾಡಲಾದ ಈ ಸೆಲ್‌ (Speical Cell) ಒಂದು ಭದ್ರಕೋಟೆಯಂತಿದೆ. ನೆಲದ ಮೇಲೆಯೇ ಮಲಗಲು ರಾಣಾಗೆ ಒಂದು ಹಾಸಿಗೆ ಹಾಗೂ ಸ್ನಾನ ಗೃಹದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಊಟ, ಕುಡಿಯುವ ನೀರು, ವೈದ್ಯಕೀಯ ತಪಾಸಣೆ ಎಲ್ಲದಕ್ಕೂ ಆ 14*14 ಅಡಿಯ ಸೆಲ್‌ನಲ್ಲೇ ವ್ಯವಸ್ಥೆ ಮಾಡಲಾಗಿದೆ.

    2008ರ ಮುಂಬೈ ದಾಳಿಯ ಉಗ್ರ ತಹವ್ವೂರ್‌ ರಾಣಾನನ್ನ ಗುರುವಾರ ವಿಶೇಷ ವಿಮಾನದ ಮೂಲಕ ಅಮೆರಿಕದಿಂದ ಭಾರತಕ್ಕೆ ಕರೆತರಲಾಯಿತು. ದೆಹಲಿಯ ಪಾಲಂ ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ರಾಣಾನನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಪಟಿಯಾಲ ಕೋರ್ಟ್‌ಗೆ ಹಾಜರುಪಡಿಸಿ ಆತನನ್ನ 18 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿತು.

    ಸತ್ತ 9 ಲಷ್ಕರ್ ಉಗ್ರರಿಗೆ ಪಾಕ್ ಅವಾರ್ಡ್ ಕೊಡಬೇಕಿತ್ತು:
    ಎನ್‌ಐಎ ಅಧಿಕಾರಿಗಳ ತಂಡ ರಾಣಾ ವಿಚಾರಣೆ ನಡೆಸುತ್ತಿರುವ ಹೊತ್ತಿನಲ್ಲೇ ರಾಣಾ ಹಿಂದೆ ನೀಡಿದ್ದ ಹೇಳಿಕೆಯೊಂದು ಬೆಳಕಿಗೆ ಬಂದಿದೆ. ʻʻಮುಂಬೈನಲ್ಲಿ ನರಮೇಧ ನಡೆಸಿ, ಭಾರತೀಯ ಪಡೆಗಳ ಗುಂಡಿಗೆ ಬಲಿಯಾದ 9 ಲಷ್ಕರ್ ಉಗ್ರರಿಗೆ ಪಾಕ್‌ ಸೈನಿಕರಿಗೆ ನೀಡುವ ʻನಿಶಾನ್ ಎ ಹೈದರ್ʼ ಪ್ರಶಸ್ತಿ ನೀಡಬೇಕುʼʼ ಎಂದು ದಾಳಿಯ ಮಾಸ್ಟರ್‌ಮೈಂಡ್ ಡೇವಿಡ್ ಕೋಲ್ಮನ್ ಹೆಡ್ಲಿ ಜೊತೆ ತಹಾವೂರ್ ರಾಣಾ ಹೇಳಿದ್ದ ಎಂಬ ವಿಚಾರ ಈಗ ಬಯಲಾಗಿದೆ.

    ಅಷ್ಟೇ ಅಲ್ಲ, ದಾಳಿಯಿಂದಾದ ಅನಾಹುತಗಳ ಬಗ್ಗೆ ಹೆಡ್ಲಿ ಪ್ರಸ್ತಾಪ ಮಾಡಿದಾಗ, ಭಾರತೀಯರಿಗೆ ಹಾಗೇ ಆಗಬೇಕಿತ್ತು ಎಂದು ರಾಣಾ ನಾಲಗೆ ಹರಿಬಿಟ್ಟಿದ್ದ. ಹಸ್ತಾಂತರದ ವೇಳೆ ಅಮೆರಿಕ ಕಾನೂನು ವಿಭಾಗ ನೀಡಿದ ಪ್ರಕಟಣೆಯಲ್ಲಿ ಈ ಎಲ್ಲಾ ವಿಚಾರ ಅಡಕವಾಗಿದೆ ಎಂದು ತಿಳಿದುಬಂದಿದೆ.

  • ಅಮೆರಿಕದಲ್ಲಿ ಕಾಲಿಗೆ, ಸೊಂಟಕ್ಕೆ ಚೈನ್‌ – ಭಾರತದಲ್ಲಿ ರಾಣಾನಿಗೆ ಕಟ್ಟಿದ್ದ ಚೈನ್‌ ತೆಗೆದಿದ್ದು ಯಾಕೆ?

    ಅಮೆರಿಕದಲ್ಲಿ ಕಾಲಿಗೆ, ಸೊಂಟಕ್ಕೆ ಚೈನ್‌ – ಭಾರತದಲ್ಲಿ ರಾಣಾನಿಗೆ ಕಟ್ಟಿದ್ದ ಚೈನ್‌ ತೆಗೆದಿದ್ದು ಯಾಕೆ?

    ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಗೆ (Mumbai Attack) ಸಂಬಂಧಿಸಿದಂತೆ ಉಗ್ರ ತಹವ್ವೂರ್ ಹುಸೇನ್ ರಾಣಾನನ್ನು (Tahawwur Hussain Rana) ರಾಷ್ಟ್ರೀಯ ತನಿಖಾ ದಳಕ್ಕೆ (NIA) ಔಪಚಾರಿಕವಾಗಿ ಹಸ್ತಾಂತರಿಸುವ ಮೊದಲ ಚಿತ್ರವನ್ನು ಅಮೆರಿಕ ಬಿಡುಗಡೆ ಮಾಡಿದೆ.

    ಛಾಯಾಚಿತ್ರದಲ್ಲಿ ರಾಣಾನನ್ನು ದೆಹಲಿ ವಿಮಾನ (Delhi Plane) ಏರುವ ಮೊದಲು ಅಮೆರಿಕದ ಮಾರ್ಷಲ್‌ಗಳು (US Marshals) ಭಾರತೀಯ ಅಧಿಕಾರಿಗಳಿಗೆ ಆತನನ್ನು ಹಸ್ತಾಂತರಿಸುತ್ತಿರುವುದನ್ನು ನೋಡಬಹುದು. ಇದನ್ನೂ ಓದಿ: 18 ದಿನಗಳ ಕಾಲ NIA ಕಸ್ಟಡಿಗೆ ರಾಣಾ – ಮಧ್ಯರಾತ್ರಿ ಕೋರ್ಟ್‌ನಲ್ಲಿ ವಾದ ಏನಿತ್ತು?

    ಫೋಟೋದಲ್ಲಿ ರಾಣಾನನ್ನು ಅಮೆರಿಕದ ಮಾರ್ಷಲ್‌ಗಳು ಕರೆದೊಯ್ಯುತ್ತಿರುವಾಗ ಆತನ ಸೊಂಟ ಮತ್ತು ಪಾದಗಳನ್ನು ಸರಪಳಿಯಿಂದ ಬಂಧಿಸಿರುವುದನ್ನು ಕಾಣಬಹುದು.

    ಭಾರತದಲ್ಲಿ ರಾಣಾ ವಿಮಾನದಿಂದ ಇಳಿಯುವಾಗ ಸೊಂಟ ಮತ್ತು ಕಾಲಿಗೆ ಅಳವಡಿಸಿದ್ದ ಸರಪಳಿಯನ್ನು ತೆಗೆಯಲಾಗಿತ್ತು. ಅಪಾಯಕಾರಿ ಎನಿಸಿದ ಕ್ರಿಮಿನಲ್‌ ಹೊರತುಪಡಿಸಿ ಬೇರೆ ಆರೋಪಿಗಳ ಕಾಲು ಮತ್ತು ಸೊಂಟವನ್ನು ಸರಪಳಿಯಿಂದ ಬಂಧನ ಮಾಡುವಂತಿಲ್ಲ ಸುಪ್ರೀಂ ಕೋರ್ಟ್‌ ಆದೇಶ ಇರುವ ಹಿನ್ನೆಲೆಯಲ್ಲಿ ಸರಪಳಿಯನ್ನು ತೆಗೆಯಲಾಗಿತ್ತು. ಎನ್‌ಐಎ ಬಿಡುಗಡೆ ಮಾಡಿದ ಚಿತ್ರದಲ್ಲಿ ರಾಣಾ ಮೈಮೇಲೆ ಯಾವುದೇ ಸರಪಳಿ ಇರಲಿಲ್ಲ. ಇದನ್ನೂ ಓದಿ: ರಾಣಾ ಕರೆತಂದ ವಿಮಾನಕ್ಕೆ ನೀಡಲಾಗಿತ್ತು ಡಮ್ಮಿ ಕೋಡ್‌, ಮಧ್ಯೆ 11 ಗಂಟೆ ಪಿಟ್‌ ಸ್ಟಾಪ್‌!

    ಎನ್‌ಐಎ ಅಧಿಕಾರಿಗಳು ಮತ್ತು ಎನ್‌ಎಸ್‌ಜಿ ಕಮಾಂಡೋಗಳಿದ್ದ ವಿಶೇಷ ವಿಮಾನ ಲಾಸ್‌ ಏಂಜಲೀಸ್‌ನಿಂದ ಹೊರಟ ಬಳಿಕ ರಾಣಾನ ಸುರಕ್ಷತೆ ಮತ್ತು ಸ್ವಯಂ ಹಾನಿ ಮಾಡಿಕೊಳ್ಳದೇ ಇರಲು ಒಬ್ಬ ಎನ್‌ಐಎ ಅಧಿಕಾರಿ ಪ್ರುಯಾಣದ ಉದ್ದಕ್ಕೂ ರಾಣಾನ ಕೈಯನ್ನು ಹಿಡಿಕೊಂಡಿದ್ದರು.

    ರಾಣಾ ಪಾಲಂ ವಾಯುನೆಲೆಗೆ ಕರೆತರುತ್ತಿದ್ದಂತೆ ಯಾವುದೇ ಸೋರಿಕೆ ಅಥವಾ ಅನಧಿಕೃತ ಸಂವಹನವನ್ನು ತಡೆಯಲು ದೆಹಲಿ ಪೊಲೀಸರು ಭದ್ರತಾ ವಿಭಾಗದ ಸಿಬ್ಬಂದಿಗೆ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಆಫ್‌ ಮಾಡುವಂತೆ ಸೂಚಿಸಿದ್ದರು. ಇದನ್ನೂ ಓದಿ: ಹೈಟೆಕ್‌ ವಿಮಾನ, 11 ಗಂಟೆ ಪ್ರಯಾಣ – ಉಗ್ರ ರಾಣಾನನ್ನ ಅಮೆರಿಕದಿಂದ ಭಾರತಕ್ಕೆ ಕರೆತಂದಿದ್ದು ಹೇಗೆ?

    ಮಾಧ್ಯಮದವರ ಗಮನ ಸೆಳೆಯುವುದನ್ನು ತಪ್ಪಿಸಲು ರಾಣಾನನ್ನು ವಿಮಾನ ನಿಲ್ದಾಣದಿಂದ ಪರ್ಯಾಯ ದ್ವಾರದ ಮೂಲಕ ಹೊರಗೆ ಕರೆದೊಯ್ಯಲಾಗಿತ್ತು. ಪಾರದರ್ಶಕವಲ್ಲದ ಜೈಲು ವ್ಯಾನ್‌ನಲ್ಲಿ ಕುಳ್ಳಿರಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

  • ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್‌

    ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್‌

    – ರಾಣಾ ಹಸ್ತಾಂತರ ಪ್ರಕ್ರಿಯೆ ಕಾಂಗ್ರೆಸ್‌ ಆಡಳಿತದಲ್ಲೇ ನಡೆದಿತ್ತು: ರಾವತ್‌
    – ಜನರ ಗಮನ ಬೇರೆಡೆ ಸೆಳೆಯುವ ಬಿಜೆಪಿ ಕುತಂತ್ರ: ಕನ್ಹಯ್ಯಾ

    ಪಾಟ್ನಾ: 2008ರ ಮುಂಬೈ ದಾಳಿಯ (Mumbai Attack) ಪ್ರಮುಖ ಸೂತ್ರಧಾರಿ ಲಷ್ಕರ್ ಉಗ್ರ ತಹವ್ವೂರ್‌ ರಾಣಾನನ್ನು (Tahawwur Rana) ಕೊನೆಗೂ ಭಾರತಕ್ಕೆ ಕರೆತರಲಾಗಿದೆ. ಈಗಾಗಲೇ ರಾಣಾನನ್ನ ಕೋರ್ಟ್‌ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ (NIA) ಕಸ್ಟಡಿಗೆ ನೀಡಿದ್ದು, ಎನ್‌ಐಎ ಮುಂದಿನ ವಿಚಾರಣೆ ಕೈಗೊಂಡಿದೆ. ದೇಶದ ಹಲವು ಭಾಗಗಳಿಗೆ ರಾಣಾನನ್ನ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ರಾಜಕೀಯ ಜಟಾಪಟಿಯೂ ನಡೆದಿದೆ.

    ರಾಣಾ ಹಸ್ತಾಂತರ ವಿಚಾರ ಕುರಿತು ಮಾತನಾಡಿರುವ ಶಿವಸೇನಾ (UTB) ಸಂಸದ ಸಂಜಯ್‌ ರಾವತ್‌ (Sanjay Rawat), ರಾಣಾನನ್ನ ತಕ್ಷಣವೇ ಗಲ್ಲಿಗೇರಿಸಬೇಕು. ಆದ್ರೆ ಬಿಹಾರ ಚುನಾವಣೆ (Bihar Election) ಸಂದರ್ಭದಲ್ಲಿ ಕೇಂದ್ರ ಸರ್ಕಾರ ಗಲ್ಲಿಗೇರಿಸಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೈಟೆಕ್‌ ವಿಮಾನ, ಬುಕಾರೆಸ್ಟ್‌ನಿಂದ 11 ಗಂಟೆ ಪ್ರಯಾಣ – ಉಗ್ರ ರಾಣಾನನ್ನ ಅಮೆರಿಕದಿಂದ ಭಾರತಕ್ಕೆ ಕರೆತಂದಿದ್ದು ಹೇಗೆ?

    ಕ್ರೆಡಿಟ್‌ ತೆಗೆದುಕೊಳ್ಳುವ ಅಗತ್ಯವಿಲ್ಲ
    ರಾಣಾನನ್ನು ಭಾರತಕ್ಕೆ ಕರೆತರಲು 16 ವರ್ಷ ಬೇಕಾಯಿತು. ಆದ್ರೆ ಅವನನ್ನು ಹಸ್ತಾಂತರಿಸುವ ಪ್ರಕ್ರಿಯೆ ಕಾಂಗ್ರೆಸ್‌ ಆಡಳಿತದಲ್ಲೇ ಪ್ರಾರಂಭವಾಯಿತು. ಆದ್ದರಿಂದ ಅವನನ್ನು ಮರಳಿ ಕರೆತಂದ ಕ್ರೆಡಿಟ್‌ ದೇಶಕ್ಕೆ ಸಲ್ಲುತ್ತದೆ. ಯಾರೂ ವೈಯಕ್ತಿಕವಾಗಿ ಕ್ರೆಡಿಟ್‌ ತೆಗೆದುಕೊಳ್ಳುವ ಅವಶ್ಯಕತೆಯಿಲ್ಲ. ಅಲ್ಲದೇ ತಹವ್ವೂರ್‌ ರಾಣಾ ಭಾರತಕ್ಕೆ ಹಸ್ತಾಂತರಿಸಲಾದ ಮೊದಲ ಆರೋಪಿಯಲ್ಲ. ಇದಕ್ಕೂ ಮುನ್ನ 1993ರ ಸರಣಿ ಸ್ಫೋಟದ ಆರೋಪಿ ಅಬು ಸಲೇಂನನ್ನು ಕೂಡ ಭಾರತಕ್ಕೆ ಹಸ್ತಾಂತರಿಸಲಾಗಿತ್ತು ಎಂದು ನುಡಿದಿದ್ದಾರೆ.  ಇದನ್ನೂ ಓದಿ:  18 ದಿನಗಳ ಕಾಲ NIA ಕಸ್ಟಡಿಗೆ ರಾಣಾ – ಮಧ್ಯರಾತ್ರಿ ಕೋರ್ಟ್‌ನಲ್ಲಿ ವಾದ ಏನಿತ್ತು?

    ಇದೇ ವೇಳೆ ಕಾಂಗ್ರೆಸ್‌ ನಾಯಕ ಕನ್ಹಯ್ಯಾ ಕುಮಾರ್ ಮಾತನಾಡಿ, ತಹವ್ವೂರ್‌ ರಾಣಾ ಹಸ್ತಾಂತರ ರಾಜತಾಂತ್ರಿಕ ಯಶಸ್ಸಲ್ಲ. ಸಾರ್ವಜನಿಕ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಬಿಜೆಪಿಯ ಕುತಂತ್ರವಾಗಿದೆ ಎಂದು ಲೇವಡಿ ಮಾಡಿದ್ದಾರೆ.  ಇದನ್ನೂ ಓದಿ: ಮುಂಬೈ ದಾಳಿ ಮಾಸ್ಟರ್‌ಮೈಂಡ್‌ ತಹವ್ವೂರ್‌ ರಾಣಾ ಅರೆಸ್ಟ್‌

  • 64 ವಯಸ್ಸಿನ ಉಗ್ರ ರಾಣಾ ಫೋಟೊ ರಿಲೀಸ್‌

    64 ವಯಸ್ಸಿನ ಉಗ್ರ ರಾಣಾ ಫೋಟೊ ರಿಲೀಸ್‌

    ನವದೆಹಲಿ: ಮುಂಬೈ ದಾಳಿಯ (Mumbai Attack) ಸಂಚುಕೋರ, 64 ವರ್ಷ ವಯಸ್ಸಿನ ತಹವ್ವೂರ್‌ ರಾಣಾನ (Tahawwur Rana) ಫೋಟೊ ರಿಲೀಸ್‌ ಆಗಿದೆ. ಎನ್‌ಐಎ ಅಧಿಕಾರಿಗಳ ಜೊತೆ ರಾಣಾ ಇರುವ ಫೋಟೊ ಬಹಿರಂಗಗೊಂಡಿದೆ.

    ತಹವ್ವೂರ್ ಹುಸೇನ್ ರಾಣಾನನ್ನು ಎನ್‌ಐಎ ಅಧಿಕಾರಿಗಳು ಔಪಚಾರಿಕ ಬಂಧನ ಮಾಡಿದ್ದಾರೆ. ಪಾಲಂ ಏರ್‌ಬೇಸ್‌ನಲ್ಲಿ ಇಂದು ಸಂಜೆ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ರಾಣಾನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಹೈಟೆಕ್‌ ವಿಮಾನ, ಬುಕಾರೆಸ್ಟ್‌ನಿಂದ 11 ಗಂಟೆ ಪ್ರಯಾಣ – ಉಗ್ರ ರಾಣಾನನ್ನ ಅಮೆರಿಕದಿಂದ ಭಾರತಕ್ಕೆ ಕರೆತಂದಿದ್ದು ಹೇಗೆ?

    26/11 ಭಯೋತ್ಪಾದಕ ದಾಳಿಯ ಸಂಚುಕೋರ, ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ತಹವ್ವೂರ್ ಹುಸೇನ್ ರಾಣಾನನ್ನು ಗುರುವಾರ ದೆಹಲಿಯ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು. ಬುಧವಾರ ವಿಶೇಷ ವಿಮಾನದಲ್ಲಿ ಅಮೆರಿಕದಿಂದ ಆತನನ್ನು ಗಡೀಪಾರು ಮಾಡಲಾಗಿತ್ತು.

    ಭಯೋತ್ಪಾದಕ ರಾಣಾನನ್ನು ದೆಹಲಿಯ ಹೆಚ್ಚಿನ ಭದ್ರತೆ ಕಲ್ಪಿಸಲಾಗಿರುವ ತಿಹಾರ್ ಜೈಲಿನಲ್ಲಿ ಇರಿಸಬಹುದು. ಅಂತಿಮವಾಗಿ ವಿಚಾರಣೆಯನ್ನು ಎದುರಿಸಲು ಮುಂಬೈಗೆ ಸ್ಥಳಾಂತರಿಸಬಹುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುಂಬೈ ದಾಳಿ ಮಾಸ್ಟರ್‌ಮೈಂಡ್‌ ತಹವ್ವೂರ್‌ ರಾಣಾ ಅರೆಸ್ಟ್‌

    ಉಗ್ರನ ಮೇಲೆ ಕ್ರಿಮಿನಲ್ ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ಸಾರುವುದು, ಕೊಲೆ ಮತ್ತು ನಕಲಿ ದಾಖಲೆ ಸೃಷ್ಟಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

  • ಉಗ್ರ ಕಸಬ್‌ಗೆ ಬಿರಿಯಾನಿ ತಿನ್ನಿಸಿದ್ದನ್ನ ಮರೆತಿಲ್ಲ – ಕಾಂಗ್ರೆಸ್‌ ವಿರುದ್ಧ ಪಿಯೂಷ್‌ ಗೋಯಲ್‌ ವಾಗ್ದಾಳಿ

    ಉಗ್ರ ಕಸಬ್‌ಗೆ ಬಿರಿಯಾನಿ ತಿನ್ನಿಸಿದ್ದನ್ನ ಮರೆತಿಲ್ಲ – ಕಾಂಗ್ರೆಸ್‌ ವಿರುದ್ಧ ಪಿಯೂಷ್‌ ಗೋಯಲ್‌ ವಾಗ್ದಾಳಿ

    – ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಮೋದಿ ಬಗ್ಗೆ ಹೆಮ್ಮೆ ಪಡ್ತಾರೆ ಎಂದ ಕೇಂದ್ರ ಸಚಿವ

    ನವದೆಹಲಿ: 2008ರ ಮುಂಬೈ ದಾಳಿಯ ಉಗ್ರ ತಹವ್ವೂರ್‌ ರಾಣಾನನ್ನ (Tahawwur Rana) ಕೊನೆಗೂ ಭಾರತಕ್ಕೆ ಕರೆತರಲಾಗುತ್ತಿದೆ. ಆದ್ರೆ ಈ ವಿಷಯದಲ್ಲೂ ಕಾಂಗ್ರೆಸ್‌-ಬಿಜೆಪಿ ನಡುವೆ ರಾಜಕೀಯ ಜಟಾಪಟಿ ನಡೆದಿದೆ. ಮುಂಬೈ ದಾಳಿಯ ಉಗ್ರರನ್ನು ಬಂಧಿಸುವ ವಿಚಾರದಲ್ಲಿ ಅಂದಿನ ಯುಪಿಎ ಸರ್ಕಾರದ ನಡೆಯನ್ನು ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ (Piyush Goyal) ತೀವ್ರವಾಗಿ ಟೀಕಿಸಿದ್ದಾರೆ.

    ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ತಾಜ್‌ ಹೋಟೆಲ್‌ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಅಮಾಯಕರು ಪ್ರಾಣ ಕಳೆದುಕೊಂಡರು. ಆದ್ರೆ ಭಾಗಿಯಾಗಿರುವವರನ್ನು ಶಿಕ್ಷಿಸಲು ಹಿಂದಿನ ಯುಪಿಎ ಸರ್ಕಾರ (UPA Government) ಏನೂ ಮಾಡಲಿಲ್ಲ. ಸೆರೆ ಸಿಕ್ಕಿದ್ದ ಏಕೈಕ ಉಗ್ರ ಅಜ್ಮಲ್‌ ಕಸಬ್‌ಗೆ (Ajmal Kasab) ಬಿರಿಯಾನಿ ತಿನ್ನಿಸುವ ಕೆಲಸ ಮಾಡಿತ್ತು, ಇದನ್ನ ದೇಶದ ಜನ ಮರೆತಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಣಾನಿಗೆ ಬಿರಿಯಾನಿ ಕೊಡಬೇಡಿ: ಮುಂಬೈ ದಾಳಿಯಲ್ಲಿ ಜನರ ರಕ್ಷಣೆಗೆ ನೆರವಾಗಿದ್ದ ಚಹಾ ಮಾರಾಟಗಾರ ಒತ್ತಾಯ

    Tahawwur Hussain Rana

    ಮುಂದುವರಿದು.. ನಮ್ಮ ದೇಶದ ಮೇಲೆ ದಾಳಿ ಮಾಡಿದವರಿಗೆ ನ್ಯಾಯ ದೊರಕಿಸಿಕೊಡುವ ಸಂಕಲ್ಪವನ್ನು ನರೇಂದ್ರ ಮೋದಿ ಅಂದೇ ಮಾಡಿದ್ದರು. ಅಂದು ಮೋದಿ ಮಾಡಿದ ಸಂಕಲ್ಪವನ್ನು ಈಡೇರಿಸಿದ್ದಾರೆ. ಇಂದು ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಮೋದಿ ಬಗ್ಗೆ ಹೆಮ್ಮೆ ಪಡುತ್ತಾರೆ ಎಂದು ಶ್ಲಾಘಿಸಿದ್ದಾರೆ.

    ಇದೇ ವೇಳೆ ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ವಿರುದ್ಧವೂ ಕಿಡಿ ಕಾರಿದ ಸಚಿವರು, ಸಂಜಯ್‌ ರಾವತ್‌ ಅವರು, ಮುಸ್ಲಿಂ ವ್ಯಕ್ತಿ ಎಂತಹ ದೊಡ್ಡ ಅಪರಾಧದಲ್ಲಿ ತೊಡಗಿಸಿಕೊಂಡಿದ್ದರೂ ಸಮರ್ಥಿಸಿಕೊಳ್ಳುತ್ತಾರೆ. ಏಕೆಂದರೆ, ಉದ್ಧವ್‌ ಠಾಕ್ರೆ ಅವರ ಶಿವಸೇನೆಯು ಕಾಂಗ್ರೆಸ್‌ಗಿಂತ ಹೆಚ್ಚಿನ ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿದೆ. ಪ್ರಧಾನಿ ಮೋದಿಯವರಂತೆ ಧನಾತ್ಮಕ ಚಿಂತನೆ ಹೊಂದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೊನೆಗೂ ಭಾರತಕ್ಕೆ ಬಂದ ಮುಂಬೈ ದಾಳಿ ಉಗ್ರ ರಾಣಾ

    ಮುಂಬೈ ದಾಳಿ ಬಳಿಕ ಸೆರೆ ಸಿಕ್ಕಿದ್ದ ಏಕೈಕ ಉಗ್ರ ಅಜ್ಮಲ್‌ ಅಮೀರ್‌ ಕಸಬ್‌ನನ್ನು 2012ರಲ್ಲಿ ಪುಣೆಯ ಯೆರವಾಡ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. ಇದನ್ನೂ ಓದಿ: ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು

  • ಮುಂಬೈ ದಾಳಿಕೋರ ರಾಣಾ ತನ್ನ ಪ್ರಜೆಯಲ್ಲ – ದಿಢೀರ್‌ ಪಾಕ್‌ ಸ್ಪಷ್ಟನೆ

    ಮುಂಬೈ ದಾಳಿಕೋರ ರಾಣಾ ತನ್ನ ಪ್ರಜೆಯಲ್ಲ – ದಿಢೀರ್‌ ಪಾಕ್‌ ಸ್ಪಷ್ಟನೆ

    ಇಸ್ಲಾಮಾಬಾದ್‌: ಮುಂಬೈ ದಾಳಿಯ (Mumbai Attack) ಉಗ್ರ ತಹವ್ವೂರ್ ರಾಣಾ (Tahawwur Rana) ತನ್ನ ಪ್ರಜೆಯಲ್ಲ, ಆತ ಕೆನಡಾದ (Canada) ಪ್ರಜೆ ಎಂದು ಪಾಕಿಸ್ತಾನ (Pakistan) ಹೇಳಿದೆ.

    ಅಮೆರಿಕದಿಂದ ರಾಣಾನನ್ನು ಭಾರತ ಕರೆ ತರುತ್ತಿದ್ದಂತೆ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಆತ ತನ್ನ ಹೆಸರನ್ನು ಹೇಳಬಹುದು ಎಂಬ ಭಯದಿಂದ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡದ ಪಾಕ್‌ ಈಗ ದಿಢೀರ್‌ ಸ್ಪಷ್ಟೀಕರಣ ನೀಡಿದೆ.

    ಈ ಸಂಬಂಧ ವಾರದ ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ಇಲಾಖೆ, ರಾಣಾ ಎರಡು ದಶಕಗಳಿಗೂ ಹೆಚ್ಚು ಕಾಲ ತನ್ನ ಪೌರತ್ವವನ್ನು ನವೀಕರಿಸದ ಕಾರಣ ಆತ ಪಾಕಿಸ್ತಾನಿ ಪ್ರಜೆಯಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು

    ಕಳೆದ ಎರಡು ದಶಕಗಳಿಂದ ತಹವ್ವೂರ್ ರಾಣಾ ತನ್ನ ಪಾಕಿಸ್ತಾನಿ ದಾಖಲೆಗಳನ್ನು ನವೀಕರಿಸಿಲ್ಲ. ಇದರಿಂದ ಆತ ಕೆನಡಾ ಪ್ರಜೆ ಎನ್ನುವುದು ಸ್ಪಷ್ಟವಾಗಿದೆ ಎಂದು ತಿಳಿಸಿದೆ.

    ಗುಪ್ತಚರ ವರದಿಗಳ ಪ್ರಕಾರ, ರಾಣಾ ಪಾಕಿಸ್ತಾನದ ಐಎಸ್‌ಐ ಜೊತೆ ಆಳವಾದ ಸಂಪರ್ಕ ಹೊಂದಿದ್ದ ಮತ್ತು ಪಾಕ್‌ ಸೇನೆಗೆ ಬೆಂಬಲ ನೀಡಿದ್ದ. ಮುಂಬೈ ದಾಳಿಯ ಸಂಚು ರೂಪಿಸುವಲ್ಲಿ ಪಾಕಿಸ್ತಾನದ ನೇರ ಪಾತ್ರದ ಬಗ್ಗೆ ರಾಣಾ ಬಹಿರಂಗ ಪಡಿಸುವ ಸಾಧ್ಯತೆಯಿದೆ.

    ಐಎಸ್‌ಐ ಭಾಗಿಯಿಂದ ಹಿಡಿದು ಲಷ್ಕರ್-ಎ-ತೊಯ್ಬಾದ ಜೊತೆಗಿನ ಸಮನ್ವಯದವರೆಗಿನ ಸಂಪೂರ್ಣ ಜಾಲವನ್ನು ರಾಣಾ ಬಹಿರಂಗಪಡಿಸುವ ಸಾಧ್ಯತೆಯಿದೆ.

    ಹೆಡ್ಲಿ ಮತ್ತು ಲಷ್ಕರ್ ಜೊತೆ ರಾಣಾ ಸಂಪರ್ಕ
    ದಾಳಿಯ ಮೊದಲು ಮುಂಬೈ ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯೊಂದಿಗಿನ ನಿಕಟ ಸಂಬಂಧದಿಂದಾಗಿ ರಾಣಾ ಹೆಸರು ಮುನ್ನೆಲೆಗೆ ಬಂದಿತ್ತು.

    ತಹಾವೂರ್ ರಾಣಾ ಯಾರು?
    ತಹಾವೂರ್ ರಾಣಾ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ. ತನ್ನ ಬಾಲ್ಯದ ಗೆಳೆಯ ಡೇವಿಡ್ ಕೋಲ್ಮನ್ ಹೆಡ್ಲಿ, ದಾವೂದ್ ಗಿಲಾನಿ ಮತ್ತು ಇತರರಿಗೆ ಸಹಕರಿಸಿದ್ದ. ಈ ಮೂಲಕ ಮುಂಬೈನಲ್ಲಿ ಲಷ್ಕರ್ ಭಯೋತ್ಪಾದಕ ದಾಳಿಯ ಯೋಜನೆ ಮತ್ತು ಕಾರ್ಯಗತಗೊಳಿಸಿದ್ದ.

    ರಾಣಾ ನವೆಂಬರ್ 11 ಮತ್ತು 21, 2008 ರ ನಡುವೆ ದುಬೈ ಮೂಲಕ ಮುಂಬೈಗೆ ಬಂದಿದ್ದ. ಪೊವೈನಲ್ಲಿರುವ ಹೋಟೆಲ್ ರಿನೈಸಾನ್ಸ್‌ನಲ್ಲಿ ತಂಗಿ ದಾಳಿಗೆ ಬೇಕಾದ ಸಿದ್ಧತೆ ಪರಿಶೀಲಿಸಿದ್ದ. ಈತ ದುಬೈಗೆ ಹೋದ 5 ದಿನಗಳ ಬಳಿಕ ದಾಳಿ ನಡೆದಿತ್ತು.

    ಭಾರತವು ಜೂನ್ 2020 ರಲ್ಲಿ ರಾಣಾನನ್ನು ಗಡೀಪಾರುಗಾಗಿ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಈ ವರ್ಷದ ಫೆಬ್ರವರಿಯಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು ಗಡೀಪಾರು ಮಾಡಲಾಗುವುದು ಎಂದು ದೃಢಪಡಿಸಿದ್ದರು.

    ಮುಂಬೈ ದಾಳಿ:
    2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

  • ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು

    ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು

    – ರಾಣಾನನ್ನ ತಿಹಾರ್‌ ಜೈಲಲ್ಲಿಡಲು ವ್ಯವಸ್ಥೆ – ದೆಹಲಿಯಲ್ಲೇ ನಡೆಯಲಿದೆ ವಿಚಾರಣೆ

    ಮುಂಬೈ: 2008ರ ಮುಂಬೈ ಭಯೋತ್ಪಾದಕ ದಾಳಿಯ (Mumbai Attack) ಸಂಚುಕೋರ ತಹವ್ವೂರ್ ರಾಣಾನನ್ನು (Tahawwur Rana) ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು ಇಂದು ಮಧ್ಯಾಹ್ನದ ಬಳಿಕ ಭಾರತಕ್ಕೆ ಬಂದಿಳಿಯಲಿದ್ದಾನೆ.

    ಎನ್‌ಐಎ ಮತ್ತು ರಾ ಅಧಿಕಾರಿ ತಂಡಗಳ ಬಿಗಿ ಭದ್ರತೆಯೊಂದಿಗೆ ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್‌ಪೋರ್ಟ್‌ನ ಟರ್ಮಿನಲ್‌ 1ನಲ್ಲಿ ಬಂದಿಳಿಯಲಿದ್ದಾನೆ. ಇಲ್ಲಿಂದ ಅವನನ್ನ ಎನ್‌ಐಎ ಕೇಂದ್ರ ಕಚೇರಿಗೆ ಕರೆದೊಯ್ಯಲು ವಿಶೇಷ ಬುಲೆಟ್‌ ಪ್ರೂಫ್‌ ವಾಹನ ಸಿದ್ಧವಾಗಿದೆ. ಅದಕ್ಕಾಗಿ ಎನ್‌ಐಎ ಕಚೇರಿ ಹೊರಗಿನ ಭದ್ರತೆ ಪರಿಶೀಲಿಸಲು ದಕ್ಷಿಣ ಡಿಸಿಪಿ ಸ್ಥಳಕ್ಕೆ ತೆರಳಿದ್ದಾರೆ.

    MUMBAI ATTACK

    ಎನ್‌ಐಎ ಮೂಲಗಳ ಪ್ರಕಾರ, ಈಗಾಗಲೇ ರಾಣಾನನ್ನ ಸೇಫಾಗಿ ಎನ್‌ಐಎ ಕಚೇರಿಗೆ ಕರೆತರಲು ಮಾರ್ಕ್ಸ್‌ಮನ್‌ (Marksman) ವಿಶೇಷ ಬುಲೆಟ್‌ ಪ್ರೂಫ್‌ ವಾಹನವನ್ನ ಪಾಲಂ ಏರ್‌ಪೋರ್ಟ್‌ನಲ್ಲಿ ಇರಿಸಲಾಗಿದೆ. ದೆಹಲಿ ಪೊಲೀಸರ ವಿಶೇಷ ವಿಭಾಗದ SWAT (ಸ್ವಾಟ್‌) ಕಾಂಡೋಗಳನ್ನೂ ಸಹ ಸ್ಥಳದಲ್ಲಿ ನಿಯೋಜಿಸಲಾಗಿದೆ. ಜೊತೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಭದ್ರತಾ ವಿಭಾಗ ಮತ್ತು ಸ್ಥಳೀಯ ಪೊಲೀಸರು ವಿಮಾನ ನಿಲ್ದಾಣದ ಹೊರಭಾಗದಲ್ಲಿ ಅಲರ್ಟ್ ಆಗಿದ್ದಾರೆ.

    ಮಾರ್ಕ್ಸ್‌ಮನ್‌ ಬುಲೆಟ್‌ಪ್ರೂಫ್‌ ಕಾರು ಎಷ್ಟು ಸೇಫ್‌?
    ಮಾರ್ಕ್ಸ್‌ಮನ್‌ (Marksman) ಅತ್ಯಂತ ಸುರಕ್ಷಿತವಾದ ಕಾರು, ಬುಲೆಟ್‌ ನಿಂದ ಮಾತ್ರವಲ್ಲದೇ ಗ್ರೆನೇಡ್‌ ದಾಳಿ ನಡೆದರೂ ಸಹ ಇದರ ಒಳಗಿರುವವರಿಗೆ ಯಾವುದೇ ಪರಿಣಾಮ ಬೀರುವುದಿಲ್ಲ. ದೊಡ್ಡ ದೊಡ್ಡ ಭಯೋತ್ಪಾದಕರು, ದರೋಡೆಕೋರರನ್ನು ಸಂಬಂಧ ಪಟ್ಟ ಸ್ಥಳಗಳಿಗೆ ಸುರಕ್ಷಿತವಾಗಿ ಕರೆದೊಯ್ಯಲು ಈ ವಾಹನವನ್ನ ಬಳಸಲಾಗುತ್ತದೆ.

    ರಾಣಾ ಭಾರತಕ್ಕೆ ತಲುಪಿದ ಕೂಡಲೇ ಎನ್‌ಐಎ ತಂಡ ಅಧಿಕೃತವಾಗಿ ಕಸ್ಟಡಿಗೆ ತೆಗೆದುಕೊಳ್ಳಲಿದೆ. ಮೊದಲು ಎನ್‌ಐಎ ಕಚೇರಿಗೆ ಕರೆತರಲಿದ್ದು, ಕೆಲ ಕಾಲ ವಿಚಾರಣೆ ಬಳಿಕ ಪಟಿಯಾಲ ಹೌಸ್‌ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆಯಿದೆ. ಕೋರ್ಟ್‌ಗೆ ಹಾಜರುಪಡಿಸುವುದಕ್ಕೂ ಮುನ್ನ ಎನ್‌ಐಎ ಅಧಿಕಾರಿಗಳ ಭದ್ರತೆಯಲ್ಲೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ನಂತರ ದೆಹಲಿ ತಿಹಾರ್ ಜೈಲಿನ ಹೈಸೆಕ್ಯುರಿಟಿ ವಾರ್ಡ್‌ನಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ತಹವ್ವೂರ್ ರಾಣಾ ಯಾರು?
    ತಹವ್ವೂರ್ ರಾಣಾ ಹುಟ್ಟಿದ್ದು ಪಾಕಿಸ್ತಾನದಲ್ಲಿ. ಆರ್ಮಿ ಮೆಡಿಕಲ್ ಕಾಲೇಜಿನಲ್ಲಿ (Medical College) ಅಧ್ಯಯನ ಮಾಡಿದ ರಾಣಾ, ಪಾಕಿಸ್ತಾನದ ಸೇನೆಯಲ್ಲಿ 10 ವರ್ಷಗಳ ಕಾಲ ವೈದ್ಯನಾಗಿ ಕೆಲಸ ಮಾಡಿದ್ದ. ಈ ಕೆಲಸ ಇಷ್ಟವಾಗದೇ ಸೇನೆ ತೊರೆದ ರಾಣಾ, ಭಾರತದ ವಿರುದ್ಧ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ. ಸದ್ಯ ರಾಣಾ ಕೆನಡಾ ಮೂಲದ ಉದ್ಯಮಿ.

    Ajit Doval

    ರಾಣಾ ನವೆಂಬರ್ 11 ಮತ್ತು 21, 2008 ರ ನಡುವೆ ದುಬೈ ಮೂಲಕ ಮುಂಬೈಗೆ ಬಂದಿದ್ದ. ಪೊವೈನಲ್ಲಿರುವ ಹೋಟೆಲ್ ರಿನೈಸಾನ್ಸ್‌ನಲ್ಲಿ ತಂಗಿ ದಾಳಿಗೆ ಬೇಕಾದ ಸಿದ್ಧತೆ ಪರಿಶೀಲಿಸಿದ್ದ. ಈತ ದುಬೈಗೆ ಹೋದ 5 ದಿನಗಳ ಬಳಿಕ ದಾಳಿ ನಡೆದಿತ್ತು. ಭಾರತವು ಜೂನ್ 2020 ರಲ್ಲಿ ರಾಣಾನನ್ನು ಗಡಿಪಾರಿಗಾಗಿ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಈ ವರ್ಷದ ಫೆಬ್ರವರಿಯಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು ಗಡಿಪಾರು ಮಾಡಲಾಗುವುದು ಎಂದು ದೃಢಪಡಿಸಿದ್ದರು.

    ನೆನಪಿದೆಯಾ ಕರಾಳ ಮುಂಬೈ ದಾಳಿ
    2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

  • ಮುಂಬೈ ದಾಳಿಕೋರ ಅಮೆರಿಕದಿಂದ ಗಡಿಪಾರು – ನಾಳೆ ಬೆಳಗ್ಗೆ ಭಾರತಕ್ಕೆ ರಾಣಾ

    ಮುಂಬೈ ದಾಳಿಕೋರ ಅಮೆರಿಕದಿಂದ ಗಡಿಪಾರು – ನಾಳೆ ಬೆಳಗ್ಗೆ ಭಾರತಕ್ಕೆ ರಾಣಾ

    ಮುಂಬೈ: 2008 ರ ಮುಂಬೈ ಭಯೋತ್ಪಾದಕ ದಾಳಿಯ (Mumbai Attack) ಸಂಚುಕೋರ ತಹವ್ವೂರ್ ರಾಣಾನನ್ನು (Tahawwur Rana) ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು ಗುರುವಾರ ಬೆಳಗ್ಗೆ ಭಾರತಕ್ಕೆ (India) ಬರಲಿದ್ದಾನೆ.

    ಗುಪ್ತಚರ ಮತ್ತು ತನಿಖಾ ಅಧಿಕಾರಿಗಳ ವಿಶೇಷ ತಂಡ ಈಗಾಗಲೇ ಅಮೆರಿಕದಿಂದ (USA) ವಿಮಾನದಲ್ಲಿ ಕರೆದುಕೊಂಡು ಬರುತ್ತಿದ್ದು ನಾಳೆ ಬೆಳಗ್ಗೆ ಭಾರತಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

    ಅಮೆರಿಕದ ನ್ಯಾಯಾಲಯದ ಶಿಫಾರಸುಗಳಿಗೆ ಅನುಗುಣವಾಗಿ, ದೆಹಲಿ ಮತ್ತು ಮುಂಬೈನ ಎರಡು ಜೈಲುಗಳಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಗಳನ್ನು ಜಾರಿ ಮಾಡಲಾಗಿದೆ. ಭಾರತಕ್ಕೆ ಬಂದ ನಂತರ ರಾಣಾನನ್ನು ರಾಷ್ಟ್ರೀಯ ತನಿಖಾ ದಳ  (ಎನ್‌ಐಎ) ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಿದೆ.

    ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಎನ್‌ಐಎ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಹಸ್ತಾಂತರ ಕಾರ್ಯಾಚರಣೆಯ ಮೇಲ್ವಿಚಾರಣೆ ನೋಡಿಕೊಂಡಿದ್ದಾರೆ.

    ತಹಾವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಮೆರಿಕ ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿತ್ತು. ಮುಂಬೈ ದಾಳಿ ಪ್ರಕರಣದಲ್ಲಿ ಬೇಕಾಗಿದ್ದ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಭಾರತ ಮನವಿ ಮಾಡಿತ್ತು. ಭಾರತಕ್ಕೆ ಗಡೀಪಾರು ಮಾಡದಿರಲು ರಾಣಾನಿಗೆ ಇದ್ದ ಕೊನೆಯ ಕಾನೂನು ಅವಕಾಶ ಕೈತಪ್ಪಿದ್ದು, ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತು.  ಇದನ್ನೂ ಓದಿ: ಕಾನೂನು ಸ್ವರೂಪ ಪಡೆದ ʻವಕ್ಫ್ ಬಿಲ್ʼ – ಕೇಂದ್ರ ಅಧಿಸೂಚನೆ

    ಇದಕ್ಕೂ ಮೊದಲು, ಸ್ಯಾನ್ ಫ್ರಾನ್ಸಿಸ್ಕೋದ ಯುಎಸ್ ಕೋರ್ಟ್ ಆಫ್ ಅಪೀಲ್ಸ್ ಫಾರ್ ದಿ ನಾರ್ತ್ ಸರ್ಕ್ಯೂಟ್ ಸೇರಿದಂತೆ ಹಲವಾರು ಫೆಡರಲ್ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟದಲ್ಲಿ ತಹಾವೂರ್ ರಾಣಾಗೆ ಸೋಲು ಉಂಟಾಗಿತ್ತು. ಕಳೆದ ವರ್ಷ ನವೆಂಬರ್ 13 ರಂದು ರಾಣಾ ಯುಎಸ್ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದನು.

    ತಹಾವೂರ್ ರಾಣಾ ಯಾರು?
    ತಹಾವೂರ್ ರಾಣಾ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ. ತನ್ನ ಬಾಲ್ಯದ ಗೆಳೆಯ ಡೇವಿಡ್ ಕೋಲ್ಮನ್ ಹೆಡ್ಲಿ, ದಾವೂದ್ ಗಿಲಾನಿ ಮತ್ತು ಇತರರಿಗೆ ಸಹಕರಿಸಿದ್ದ. ಈ ಮೂಲಕ ಮುಂಬೈನಲ್ಲಿ ಲಷ್ಕರ್ ಭಯೋತ್ಪಾದಕ ದಾಳಿಯ ಯೋಜನೆ ಮತ್ತು ಕಾರ್ಯಗತಗೊಳಿಸಿದ್ದ.

    ರಾಣಾ ನವೆಂಬರ್ 11 ಮತ್ತು 21, 2008 ರ ನಡುವೆ ದುಬೈ ಮೂಲಕ ಮುಂಬೈಗೆ ಬಂದಿದ್ದ. ಪೊವೈನಲ್ಲಿರುವ ಹೋಟೆಲ್ ರಿನೈಸಾನ್ಸ್‌ನಲ್ಲಿ ತಂಗಿ ದಾಳಿಗೆ ಬೇಕಾದ ಸಿದ್ಧತೆ ಪರಿಶೀಲಿಸಿದ್ದ. ಈತ ದುಬೈಗೆ ಹೋದ 5 ದಿನಗಳ ಬಳಿಕ ದಾಳಿ ನಡೆದಿತ್ತು. ಇದನ್ನೂ ಓದಿ: ಭಾರತದ ಉದ್ಯಮಿಗೆ ಅಮೆರಿಕದಲ್ಲಿ ಕಹಿ ಅನುಭವ – ಏರ್‌ಪೋರ್ಟ್‌ನಲ್ಲಿ 8 ಗಂಟೆ ಕೂರಿಸಿದ ಆರೋಪ

    ಭಾರತವು ಜೂನ್ 2020 ರಲ್ಲಿ ರಾಣಾನನ್ನು ಗಡೀಪಾರುಗಾಗಿ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಈ ವರ್ಷದ ಫೆಬ್ರವರಿಯಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು  ಗಡೀಪಾರು ಮಾಡಲಾಗುವುದು ಎಂದು ದೃಢಪಡಿಸಿದ್ದರು.

    ಮುಂಬೈ ದಾಳಿ:
    2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.