Tag: ತಾಂಡವ್ ರಾಮ್

  • ಕೊಲೆ ಯತ್ನದ ಕೇಸ್‌ನಲ್ಲಿ ನಟ ತಾಂಡವ್ ರಾಮ್ ಅರೆಸ್ಟ್

    ಕೊಲೆ ಯತ್ನದ ಕೇಸ್‌ನಲ್ಲಿ ನಟ ತಾಂಡವ್ ರಾಮ್ ಅರೆಸ್ಟ್

    ‘ಜೋಡಿಹಕ್ಕಿ’ ಸೀರಿಯಲ್ ಖ್ಯಾತಿಯ ನಟ ತಾಂಡವ್ ರಾಮ್ (Thandav Ram) ಕೊಲೆ ಯತ್ನದ ಕೇಸ್‌ನಲ್ಲಿ ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ‘ದೇವನಾಂಪ್ರಿಯ’ ಸಿನಿಮಾ ಅರ್ಧಕ್ಕೆ ನಿಂತಿದ್ದಕ್ಕೆ ನಿರ್ದೇಶಕ ಭರತ್ (Director Bharath) ಮೇಲೆ ತಾಂಡವ್ ಗುಂಡು ಹಾರಿಸಿದ್ದಕ್ಕೆ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಇದನ್ನೂ ಓದಿ:BBK 11: ಧರ್ಮ ಐ ಲೈಕ್ ಯೂ ಎಂದ ಶೋಭಾ ಶೆಟ್ಟಿ

    ‘ದೇವನಾಂಪ್ರಿಯ’ ಸಿನಿಮಾದಲ್ಲಿ ತಾಂಡವ್ ರಾಮ್ ನಾಯಕ ನಟನಾಗಿ ನಟಿಸುತ್ತಿದ್ದರು. ಕಾರಣಾಂತರಗಳಿಂದ ‘ದೇವನಾಂಪ್ರಿಯ’ ಸಿನಿಮಾದ ಶೂಟಿಂಗ್ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈ ಹಿನ್ನೆಲೆ ಚಂದ್ರಲೇಔಟ್‌ನ ಕಚೇರಿಯಲ್ಲಿ ಸಿನಿಮಾಗೆ ಸಂಬಂಧಿಸಿದಂತೆ ಮಾತುಕತೆ ನಡೆಯುತ್ತಿತ್ತು. ಆಗ ತಾಂಡವ್‌ಗೂ ಚಿತ್ರದ ನಿರ್ದೇಶಕ ಭರತ್‌ಗೂ ವಾಗ್ವಾದ ನಡೆದಿದೆ. ಈ ವೇಳೆ, ಸಿಟ್ಟಿನಿಂದ ಗನ್ ತೆಗೆದು ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದಾರೆ.

    ಅದೃಷ್ಟವಶಾತ್ ಗುಂಡು ಡೈರೆಕ್ಟರ್ ಭರತ್‌ಗೆ ತಗುಲದೆ ಗೋಡೆಗೆ ಬಿದ್ದಿದೆ. ಇದೀಗ ಭರತ್ ದೂರಿನ ಮೇರೆಗೆ ನಟ ತಾಂಡವ್ ಅವರನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಅಂದಹಾಗೆ, ಒಂದು ಕಥೆ ಹೇಳ್ಲಾ, ಜೋಡಿಹಕ್ಕಿ ಸೀರಿಯಲ್, ಭೂಮಿಗೆ ಬಂದ ಭಗವಂತ ಸೀರಿಯಲ್‌ನಲ್ಲಿ ತಾಂಡವ್ ರಾಮ್ ನಾಯಕನಾಗಿ ನಟಿಸಿ ಸೈ ಎನಿಸಿಕೊಂಡಿದ್ದರು.

  • ‘ಜೋಡಿಹಕ್ಕಿ’ ಹೀರೋ ತಾಂಡವ್ ಈಗ ‘ದೇವನಾಂಪ್ರಿಯ’- ಫಸ್ಟ್ ಲುಕ್ ರಿಲೀಸ್

    ‘ಜೋಡಿಹಕ್ಕಿ’ ಹೀರೋ ತಾಂಡವ್ ಈಗ ‘ದೇವನಾಂಪ್ರಿಯ’- ಫಸ್ಟ್ ಲುಕ್ ರಿಲೀಸ್

    ‘ಅಡಚಣೆಗಾಗಿ ಕ್ಷಮಿಸಿ’ ಮತ್ತು ‘ಮುಗಿಲ್ ಪೇಟೆ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಭರತ್ ಎಸ್. ನಾವುಂದ ಈಗ 3ನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ‘ಜೋಡಿಹಕ್ಕಿ’ (Jodihakki) ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ (Thandav Ram) ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ವಿಶೇಷವಾಗಿ ಇಂದು ಬಿಡುಗಡೆ ಮಾಡಲಾಗಿದೆ.

     

    View this post on Instagram

     

    A post shared by Thandav Ram (@thandav_ram)

    ‘ಮುಗಿಲ್ ಪೇಟೆ’ ಸಿನಿಮಾ ಮೂಲಕ ಪ್ರೇಕ್ಷಕರಲ್ಲಿ ಭರವಸೆ ಮೂಡಿಸಿರುವ ಭರತ್ ಹಾಗೂ ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿ ಗಳಿಸಿರುವ ತಾಂಡವ್ ರಾಮ್ ಸಿನಿಮಾಗೆ ‘ದೇವನಾಂಪ್ರಿಯ’ ಎಂಬ ಶೀರ್ಷಿಕೆ ಇಡಲಾಗಿದೆ. ‘ದೇವನಾಂಪ್ರಿಯ’ ಅಂದರೆ ದೇವತೆಗಳಿಗೆ ಪ್ರಿಯನಾದವನು ಎಂದು ಕರೆಯಲಾಗುತ್ತದೆ.

    ಫಸ್ಟ್ ಲುಕ್ ಪೋಸ್ಟರ್ ಸಖತ್ ಇಂಪ್ರೆಸಿವ್ ಆಗಿದ್ದು, ನಾನಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಗಮನಿಸಿದ್ದರೆ ಕಿಚ್ಚು ಹಾಯಿಸುತ್ತಿರುವ ನಾಯಕ, ವೀರಭದ್ರ ಸ್ವಾಮಿ, ನಾಯಕನ ಬೆನ್ನಿಂದ ಮಹಿಳೆಯ ಆಕೃತಿ, ಎರಡು ಗ್ರಾಮಗಳು ಹೀಗೆ ನಾನಾ ವಿಷಯಗಳು ಕಾಣಿಸುತ್ತವೆ.

    ಫ್ಯಾಮಿಲಿ ಹಾಗೂ ರೀವಿಂಜ್ ಕಥಾಹಂದರ ಹೊಂದಿರುವ ‘ದೇವನಾಂಪ್ರಿಯ’ (Devanampriya) ಸಿನಿಮಾವನ್ನು ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಬಹುತಾರಾಗಣದೊಂದಿಗೆ ನಿರ್ಮಾಣವಾಗಲಿದೆ. ಎ ಕ್ಯೂಬ್ ಫಿಲಂಸ್ ಸಂಸ್ಥೆಯ ಅಡಿಯಲ್ಲಿ ಈ ಚಿತ್ರ ಮೂಡಿ ಬರಲಿದೆ. ಮುಂದಿನ ವಾರದಿಂದ ‘ದೇವನಾಂಪ್ರಿಯ’ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ.

  • ಸಿನಿಮಾ ರಂಗಕ್ಕೆ ‘ಜೋಡಿಹಕ್ಕಿ’ ಸೀರಿಯಲ್ ತಾಂಡವ್ ರಾಮ್

    ಸಿನಿಮಾ ರಂಗಕ್ಕೆ ‘ಜೋಡಿಹಕ್ಕಿ’ ಸೀರಿಯಲ್ ತಾಂಡವ್ ರಾಮ್

    ಮುಗಿಲ್ ಪೇಟೆ ಸಿನಿಮಾದ ಮೂಲಕ ಪ್ರೇಕ್ಷಕರ ಮನೆಗೆದ್ದಿದ್ದ ನಿರ್ದೇಶಕ  ಭರತ್ ಎಸ್ ನಾವುಂದ (Bharat Navunda) ಮತ್ತೊಂದು ಹೊಸ ಆಯಾಮದೊಂದಿಗೆ  ಹೆಜ್ಜೆ ಇಡಲು ಸಜ್ಜಾಗಿದ್ದಾರೆ . ಮುಗಿಲ್ ಪೇಟೆ ಚಿತ್ರದ ಮೂಲಕ ಭರವಸೆ ನಿರ್ದೇಶಕರಾಗಿ ಹೊರಹೊಮ್ಮಿರುವ ಅವರೀಗ ಜೋಡಿಹಕ್ಕಿ ಸೀರಿಯಲ್ ಖ್ಯಾತಿಯ ತಾಂಡವ್ ರಾಮ್ (Tandav Ram) ಅವರನ್ನು ನಾಯಕನಟರಾಗಿ ಸ್ಯಾಂಡಲ್ ವುಡ್ ಗೆ ಪರಿಚಯಿಸುತ್ತಿದ್ದಾರೆ.

    ಅಡಚಣೆಗಾಗಿ ಕ್ಷಮಿಸಿ ಎಂಬ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಭರತ್ ಎಸ್ ನಾವುಂದ ಆ ಬಳಿಕ ಸುಂದರ ಪ್ರೇಮಕಥೆ ಜೊತೆಗೆ ಪಕ್ಕ ಫ್ಯಾಮಿಲಿ ಎಂಟರ್ ಟೈನರ್ ಮುಗಿಲ್ ಪೇಟೆ ಚಿತ್ರವನ್ನು ಪ್ರೇಕ್ಷಕ ಎದುರು ನಿಲ್ಲಿಸಿದರು. ಈ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು . ಭರತ್ ನಿರ್ದೇಶನದ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿತ್ತು . ಇದೀಗ ಅವರು ಮೂರನೇ ಸಿನಿಮಾಗೆ ಅಣಿಯಾಗಿದ್ದಾರೆ. ಇದನ್ನೂ ಓದಿ:ತಲಕಾವೇರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್, ಅವಿವಾ ದಂಪತಿ

    ಜೋಡಿಹಕ್ಕಿ ಸೀರಿಯಲ್ ಮೂಲಕ ಮನೆ ಮಾತಾಗಿರುವ ತಾಂಡವ್ ರಾಮ್ ಭರತ್ ಜೊತೆ ಕೈ ಜೋಡಿಸಿದ್ದಾರೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಬಹುತಾರಂಗಣ ದೊಂದಿಗೆ ನಿರ್ಮಾಣವಾಗುತ್ತಿರುವ ಈ ಸಿನಿಮಾ. ಎ ಕ್ಯೂಬ್ ಫಿಲ್ಮಂಸ್ ಸಂಸ್ಥೆಯ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಲಿದೆ.

     

    ಭರತ್ ಎಸ್ ನಾವುಂದ ಅವರ ಮೂರನೇ ಕನಸು ಇದಾಗಿದೆ. ಪಕ್ಕ ಫ್ಯಾಮಿಲಿ ಕಥಾಹಂದರದ ಸಿನಿಮಾ ಮಾಡಲು ಸಜ್ಜಾಗಿರುವ ಚಿತ್ರತಂಡ, ಶೀಘ್ರದಲ್ಲಿಯೇ ಮತ್ತೊಂದಷ್ಟು ಅಪ್ ಡೇಟ್ಸ್ ಜೊತೆಗೆ  ನಿಮ್ಮ ಮುಂದೆ ಹಾಜರಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]