Tag: ತಾಂಬೂಲ ಪ್ರಶ್ನೆ

  • ಸೌಹಾರ್ದತೆಯಲ್ಲಿರೋ ಸಮಾಜವನ್ನು ಎಸ್‌ಡಿಪಿಐ ಒಡೆಯುತ್ತಿದೆ: ಚಕ್ರವರ್ತಿ ಸೂಲಿಬೆಲೆ

    ಸೌಹಾರ್ದತೆಯಲ್ಲಿರೋ ಸಮಾಜವನ್ನು ಎಸ್‌ಡಿಪಿಐ ಒಡೆಯುತ್ತಿದೆ: ಚಕ್ರವರ್ತಿ ಸೂಲಿಬೆಲೆ

    ಬೆಂಗಳೂರು: ಎಸ್‌ಡಿಪಿಐನವರಿಗೆ ಬೆಂಕಿ ಹಚ್ಚುವುದು ಒಂದೇ ಕೆಲಸ. ಅವರು ಸೌಹಾರ್ದತೆಯಲ್ಲಿರುವ ಸಮಾಜವನ್ನು ಒಡೆಯುತ್ತಿದ್ದಾರೆ ಎಂದು ಬರಹಗಾರ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಎಸ್‌ಡಿಪಿಐ ಅಧ್ಯಕ್ಷ ಮಜೀದ್ ಪ್ರಚೋದನಕಾರಿ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಸೂಲಿಬೆಲೆ, ಎಸ್‌ಡಿಪಿಐನಿಂದ ಹೊಸದೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಅವರು ಸಮಾಜದಲ್ಲಿ ಬೆಂಕಿ ಹಚ್ಚಲು ಕಾಯುತ್ತಿದ್ದಾರೆ. ಹಿಂದೂಗಳು ಬಲಶಾಲಿಗಳು. ಅದಕ್ಕಾಗಿ ಅವರು ಹೆದರಿ ಈ ರೀತಿಯಾಗಿ ಹೇಳುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದರು.

    ಮಳಲಿ ಮಸೀದಿ ವಿಚಾರಕ್ಕೆ ಬಂದರೆ, ಈಗಾಗಲೇ ತಾಂಬೂಲ ಪ್ರಶ್ನೆ ಆಗಿದೆ. ಮುಂದೆ ಅದು ಅಷ್ಟ ಮಂಗಲ ಪ್ರಶ್ನೆಗೆ ಹೋಗಬಹುದು. ಬಳಿಕ ಅದು ಕೋರ್ಟ್ಗೂ ಹೋಗಬಹುದು. ಮಸೀದಿ ಬಗ್ಗೆ ಅನುಮಾನ ಇದ್ದರೆ, ಕೋರ್ಟ್ ತೀರ್ಮಾನ ಕೈಗೊಳ್ಳಲಿದೆ ಎಂದರು.

    ನಮ್ಮ ದೇವಸ್ಥಾನ ಮರಳಿ ಪಡೆಯೋಕೆ ಈ ರೀತಿ ಹೋರಾಟ ನಡೆಯುತ್ತದೆ. ಮುಸ್ಲಿಂ ಸಮಾಜ ದೌರ್ಜನ್ಯದಿಂದ ಕೂಡಿದ್ದಾಗ ನಮ್ಮ ಸಮಾಜ ವೀಕ್ ಆಗಿತ್ತು. ಈಗ ನಮ್ಮ ಸಮಾಜ ಬಲಿಷ್ಠವಾಗಿದೆ. ಮುಂದೆ ಇಂತಹ ವಿಚಾರ ಹಲವು ಬರಲಿದೆ. ಈಗ ನೀವು ಹೆದರಿ, ಒಂದು ಹಿಡಿ ಮಣ್ಣು ಕೊಡುವುದಿಲ್ಲ ಯಾರಪ್ಪನದ್ದು ಎಂದು ಮಾತನಾಡುತ್ತೀರಿ. ಈ ರೀತಿ ಉದ್ರೇಕದಿಂದ ಮಾತನಾಡುವುದು ಸರಿಯಲ್ಲ ಎಂದರು. ಇದನ್ನೂ ಓದಿ: ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕ್ಬೇಕು: ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆ

    ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಒದ್ದು ಒಳಗೆ ಹಾಕಬೇಕು ಎಂಬ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಸೂಲಿಬೆಲೆ, ನಾವು ಮೌಲ್ವಿಗಳನ್ನು ಒದ್ದು ಒಳಗೆ ಹಾಕಬೇಕು ಎಂದಿದ್ದರೆ ಏನಾಗುತ್ತಿತ್ತೋ ಅದೇ ಆಗುತ್ತದೆ ಎಂದು ಎಚ್ಚರಿಕೆ ನೀಡಿ, ತಮ್ಮನ್ನು ತಾವು ಮೊದಲು ತಿದ್ದಿಕೊಳ್ಳುವ ಅಗತ್ಯ ಇದೆ ಎಂದು ಹೇಳಿದರು. ಇದನ್ನೂ ಓದಿ: ತರಗತಿ, ಗ್ರಂಥಾಲಯಕ್ಕೂ ಹಿಜಬ್ ಧರಿಸಿ ಬರುವಂತಿಲ್ಲ- ವಿವಾದದ ಬಳಿಕ ಮಂಗಳೂರು ವಿವಿ ಖಡಕ್ ಆದೇಶ

    ಆರ್ಯರು ಹೊರಗಿನಿಂದ ಬಂದವರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸೂಲಿಬೆಲೆ, ಸಿದ್ದರಾಮಯ್ಯನವರ ಹೇಳಿಕೆ ವಿಚಾರ ನಾನು ಗಮನಿಸಿದ್ದೆನೆ. ಹಳೇ ಹೇಳಿಕೆ ಅಳಿಸಲು ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ. ಆರ್ಯರು ಹೊರಗಡೆಯಿಂದ ಬಂದವರು ಎಂದು ಅವರು ಹೇಳಿದ್ದಾರೆ ಎಂದರು.

    Siddaramaiah

    ಪಠ್ಯ ಪುಸ್ತಕ ಪರಿಷ್ಕರಣೆ ಆಗಬೇಕೋ ಬೇಡವೋ ಎಂಬ ವ್ಯಾಪಕ ಚರ್ಚೆ ನಡೆಯುತ್ತಿದೆ. ಪಠ್ಯ ಪುಸ್ತಕ ಏಕೆ ಪರಿಷ್ಕರಣೆ ಆಗಬೇಕು ಎಂಬುದಕ್ಕೆ ಸಿದ್ದರಾಮಯ್ಯನವರೇ ಉದಾಹರಣೆ. ಆರ್ಯ ಆಕ್ರಮಣಕಾರಿ ಕುರಿತಂತೆ ಒಂದು ಚಿಂತನೆಯನ್ನು ಪಠ್ಯ ಪುಸ್ತಕ ಮಾಡಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನವರನ್ನು ಕೂರಿಸಿ ಪಾಠ ಬೋಧಿಸಲಿ. ಕಾಂಗ್ರೆಸ್‌ನವರು ಏಕೆ ಯಾವಾಗಲೂ ಆ್ಯಂಟಿ ಇಂಡಿಯನ್ ಆಗಿರುತ್ತಾರೋ ಗೊತ್ತಿಲ್ಲ ಎಂದು ಟೀಕಿಸಿದರು.

  • ಮಂಗಳೂರಿನ ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ? – ಇಂದು ನಡೆಯಲಿದೆ ತಾಂಬೂಲ ಪ್ರಶ್ನೆ

    ಮಂಗಳೂರಿನ ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ? – ಇಂದು ನಡೆಯಲಿದೆ ತಾಂಬೂಲ ಪ್ರಶ್ನೆ

    ಮಂಗಳೂರು: ಕಾಶಿಯ ಜ್ಞಾನವಾಪಿ ಮಸೀದಿಯ ವಿವಾದದ ನಡುವೆ ಇದೀಗ ಮಂಗಳೂರಿನ‌ ಮಳಲಿ ಮದನಿ ದರ್ಗಾದ ವಿವಾದದ ಕಾವು ಹೆಚ್ಚಿದೆ. ಇಲ್ಲಿ ಹಿಂದೂ ದೇವಾಲಯ ಇತ್ತು ಅನ್ನೋ ಕುರುಹುಗಳು ಪತ್ತೆಯಾಗಿದೆ ಎಂದು ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಲೇರಿದ್ದು, ಸ್ಥಳ ಇತಿಹಾಸಕ್ಕೆ ತಾಂಬೂಲ ಪ್ರಶ್ನೆಗೂ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ತಾಂಬೂಲ ಪ್ರಶ್ನೆ ನಡೆಯಲಿದೆ.

    ಹಿಂದೂಪರ ಸಂಘಟನೆಗಳ ನೇತ್ರತ್ವದಲ್ಲಿ ವಿವಾದಿತ ‌ಮಳಲಿ ದರ್ಗಾದ ಅನತಿ ದೂರದಲ್ಲೇ ಇಂದು ಬೆಳಗ್ಗೆ 8 ಗಂಟೆಗೆ ತಾಂಬೂಲ ಪ್ರಶ್ನೆ ನಡೆಯಲಿದೆ. ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ನಡೆಸಲಾಗುವುದು. ಇದನ್ನೂ ಓದಿ: ಜ್ಞಾನವಾಪಿ ಕೇಸ್ – ಮೇ 28, 29ಕ್ಕೆ 5 ಸಾವಿರ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಸಭೆ

    ತಳಿರು‌ ತೋರಣಗಳಿಂದ ಭಜನಾ ಮಂದಿರವನ್ನು ಶೃಂಗಾರಗೊಳಿಸಲಾಗಿದ್ದು, ಭಜನಾ ಮಂದಿರದ ಮುಂಭಾಗ ಶಾಮಿಯಾನ ಹಾಕಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೇರಳ ಮೂಲದ ಪೊದುವಾಲ್‌ರಿಂದ ತಾಂಬೂಲ ಪ್ರಶ್ನೆ ನಡೆಯಲಿದ್ದು, ಮಸೀದಿ ಸುತ್ತಮುತ್ತ ದೈವಿ ಶಕ್ತಿ ಇದ್ಯಾ ಎಂಬ ಬಗ್ಗೆ ಪ್ರಶ್ನೆ ಕೇಳಲಾಗುವುದು. ವೀಳ್ಯದೆಲೆಗಳ ಲೆಕ್ಕಾಚಾರದ ಆಧಾರದಲ್ಲಿ ಗ್ರಹಗತಿಗಳ ಚಲನೆ ಮೇಲೆ ದೈವೀ ಶಕ್ತಿ ಪತ್ತೆ ಹಚ್ಚಲಾಗುವುದು ಹಿಂದೂಪರ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

    ತಾಂಬೂಲ ಪ್ರಶ್ನೆ ನಡೆಯಲಿರುವ ಭಜನಾ ಮಂದಿರದ ಸುತ್ತ ಭಾರಿ‌ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ವಿವಾದಿತ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಮೂಲಕ ಕ್ರಮವಹಿಸಲಾಗಿದೆ. ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. 2 ಎಸಿಪಿ, 7 ಇನ್ಸ್‌ಪೆಕ್ಟರ್, 12 ಪಿಎಸ್‌ಐ, 10 ಎಎಸ್‌ಐ, 120 ಸಿವಿಲ್ ಸ್ಟಾಪ್ ಹಾಗೂ 3 ಕೆಎಸ್‌ಆರ್‌ಪಿ ತುಕಡಿ, 3 ಸಿಎಆರ್‌ ತುಕಡಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ವಿವಾದಿತ ದರ್ಗಾದ ಸ್ಥಳದಲ್ಲೂ ಭಾರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ದರ್ಗಾ 500 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಗಿಡ ನೆಡುವುದರ ಜೊತೆಗೆ ಸಂರಕ್ಷಿಸಿ: ರಾಜ್ಯಪಾಲರ ಕರೆ

    ಏನಿದು ವಿವಾದ?
    ಮಂಗಳೂರಿನ ಹೊರವಲಯದ ಮಳಲಿಯ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದಲ್ಲಿ ಹಿಂದೂ ದೇವಸ್ಥಾನದ ಶೈಲಿ ಪತ್ತೆಯಾಗಿರೋ ಹಿನ್ನಲೆಯಲ್ಲಿ ಸಾಕಷ್ಟು ಚರ್ಚೆ ಆರಂಭಗೊಂಡಿದೆ. ಎಪ್ರಿಲ್ 21 ರಂದು ಈ ದರ್ಗಾವನ್ನು ನವೀಕರಣಗೊಳಿಸೋದಕ್ಕಾಗಿ ಎದುರಿನ‌ ಭಾಗವನ್ನು‌ ನೆಲ ಸಮಗೊಳಿಸಲಾಗಿತ್ತು. ಈ ವೇಳೆ ದರ್ಗಾದ ಒಳ ಭಾಗದಲ್ಲಿ ದೇವಸ್ಥಾನದಲ್ಲಿರುವಂತಹ ಗುಡಿಯ ಶೈಲಿ, ಕಂಬಗಳು, ತೋಮರ, ಬಾಗಿಲುಗಳು ಪತ್ತೆಯಾಗಿತ್ತು. ಹೀಗಾಗಿ ಇದು ಜೈನ ಅಥವಾ ಹಿಂದೂ ದೇವಸ್ಥಾನ ಆಗಿರೋ‌ ಸಾಧ್ಯತೆ ಇದೆ ಎಂದು ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಲು ಏರಿತ್ತು. ಇದರ ನಡುವೆ ವಿಹೆಚ್‌ಪಿ ಇಂದು ತಾಂಬೂಲ ಪ್ರಶ್ನೆ ಇಡುತ್ತಿದ್ದು, ಈ ಪ್ರಶ್ನೆಯಲ್ಲಿ ಸಿಕ್ಕ ಅಂಶದಂತೆ ಮುಂದುವರಿಯಲು ತೀರ್ಮಾನಿಸಿದೆ.