Tag: ತಾಜ್ ಮಹಲ್

  • ಭಾರೀ ಮಳೆಯಿಂದ ಬಿರುಕುಬಿಟ್ಟ ತಾಜ್‌ಮಹಲ್ – ಬಿರುಕಿನಲ್ಲಿ ಸಸಿ ಬೆಳೆದಿರುವ ಫೋಟೋ ವೈರಲ್

    ಭಾರೀ ಮಳೆಯಿಂದ ಬಿರುಕುಬಿಟ್ಟ ತಾಜ್‌ಮಹಲ್ – ಬಿರುಕಿನಲ್ಲಿ ಸಸಿ ಬೆಳೆದಿರುವ ಫೋಟೋ ವೈರಲ್

    – ಗುಮ್ಮಟದ ಉತ್ತರ ಭಾಗದಲ್ಲಿ ಅಮೃತಶಿಲೆಯ ಮಧ್ಯೆ ಬಿರುಕು

    ನವದೆಹಲಿ: ವಿಶ್ವದ ಅದ್ಭುತಗಳಲ್ಲಿ ಒಂದಾದ ತಾಜ್‌ಮಹಲ್‌ನ (TajMahal) ಕೇಂದ್ರ ಗುಮ್ಮಟದ ಅಮೃತಶಿಲೆಯ ಮಧ್ಯೆ ಬಿರುಕು ಕಾಣಿಸಿಕೊಂಡಿದೆ. ಈ ಕುರಿತು ಪ್ರವಾಸಿಗರೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವನ್ನು ಹಂಚಿಕೊಂಡಿದ್ದು, ಕಳವಳ ವ್ಯಕ್ತಪಡಿಸಿದ್ದಾರೆ.

    ಕಳೆದ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ತೀವ್ರ ಮಳೆಯಾದ ಕಾರಣ ತಾಜ್‌ಮಹಲ್‌ನ ಕೇಂದ್ರ ಗುಮ್ಮಟದ ಅಮೃತಶಿಲೆಯಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಜೊತೆಗೆ ಆ ಬಿರುಕಿನಲ್ಲಿ ಸಸಿ ಬೆಳೆದಿರುವ ಫೋಟೋ ಕೂಡ ವೈರಲ್ ಆಗಿದೆ.ಇದನ್ನೂ ಓದಿ: ನಿಮ್ಮ ಮಗಳಿಗೆ ಮದುವೆ ಆಗಲ್ಲ- ಸಂಬಂಧಿಕರ ಕೊಂಕು ಮಾತಿನ ಬಗ್ಗೆ ಮಾತನಾಡಿದ ತೃಪ್ತಿ

    ಗುಮ್ಮಟದ ಉತ್ತರ ಭಾಗದಲ್ಲಿರುವ ಅಮೃತಶಿಲೆಯ ಮಧ್ಯೆ ಬಿರುಕು ಕಾಣಿಸಿಕೊಂಡಿದೆ. ಆ ಬಿರುಕಿನ ಮೂಲಕ ಮಳೆ ನೀರು ಸೋರಿಕೆಯಾಗಿ ಕೆಳಗಿರುವ ಸಮಾಧಿಯನ್ನು ತಲುಪುತ್ತಿವೆ.

    ಡ್ರೋನ್ ಬಳಸಿ ಗುಮ್ಮಟ ಪರೀಕ್ಷೆ ಮಾಡಿದಾಗ ಅಮೃತಶಿಲೆಯ ತಳದಲ್ಲಿ ತುಕ್ಕು ಹಿಡಿದಿರುವುದು ಕಂಡುಬಂದಿದೆ. ತುಕ್ಕು ಹಿಡಿದಿರುವುದರಿಂದ ಬಿರುಕು ಉಂಟಾಗಿದ್ದು, ನೀರು ಸೋರಿಕೆಗೆ ಕಾರಣವಾಗಿದೆ.

    ಭವಿಷ್ಯದ ದೃಷ್ಟಿಯಿಂದ ನೀರಿನ ಸೋರಿಕೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು. ಗುಮ್ಮಟದ ಮೇಲ್ಮೈ ಒಣಗಿದಂತೆ, ದುರಸ್ತಿ ಕಾರ್ಯವನ್ನು ಪ್ರಾರಂಭಿಸಲಾಗುವುದು. ಸ್ವಲ್ಪ ಕಾಲವಕಾಶ ತೆಗೆದುಕೊಳ್ಳುತ್ತದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ್ರು; ಒಡಿಶಾ ಠಾಣೆಯಲ್ಲಿ ಅನುಭವಿಸಿದ ಯಾತನೆಯ ಕತೆ ಹೇಳಿದ ಸೇನಾಧಿಕಾರಿಯ ಭಾವಿ ಪತ್ನಿ

    ಟೂರಿಸ್ಟ್ ಗೈಡ್ ಫೆಡರೇಶನ್ ಆಫ್ ಇಂಡಿಯಾದ (Tourist Guide Federation Of India) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಕೀಲ್ ಚೌಹಾಣ್ ಮಾತನಾಡಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಾಜ್‌ಮಹಲ್ ಸಂರಕ್ಷಣೆಗೆ ವಾರ್ಷಿಕವಾಗಿ 4 ಕೋಟಿ ರೂ. ವ್ಯಯಿಸುತ್ತದೆ. ಇಂತಹ ಚಿತ್ರಗಳು ಸ್ಮಾರಕದ ಖ್ಯಾತಿಗೆ ಮಸಿ ಬಳಿಯುತ್ತವೆ. ಮಳೆಗಾಲದ ನಂತರ ಸಂರಕ್ಷಣಾ ಕಾರ್ಯಕ್ಕೆ ಕರೆ ನೀಡಲಾಗುವುದು ಮತ್ತು ಈಗ ಕಾಣಿಸಿಕೊಂಡಿರುವ ಸಸ್ಯ ಕಳೆದ 15 ದಿನಗಳಲ್ಲಿ ಬೆಳೆದಿದ್ದು, ತಕ್ಷಣವೇ ತೆಗೆದುಹಾಕಲಾಗುವುದು ಎಂದು ತಿಳಿಸಿದ್ದಾರೆ.

  • ಭಾರೀ ಮಳೆ; ತಾಜ್‌ಮಹಲ್‌ನ ಮುಖ್ಯ ಗುಂಬಜ್‌ನಲ್ಲಿ ಸೋರಿಕೆ – ವೀಡಿಯೋ ವೈರಲ್‌

    ಭಾರೀ ಮಳೆ; ತಾಜ್‌ಮಹಲ್‌ನ ಮುಖ್ಯ ಗುಂಬಜ್‌ನಲ್ಲಿ ಸೋರಿಕೆ – ವೀಡಿಯೋ ವೈರಲ್‌

    ಲಕ್ನೋ: ಭಾರೀ ಮಳೆ ಹಿನ್ನೆಲೆಯಲ್ಲಿ ತಾಜ್‌ಮಹಲ್‌ನ (Taj Mahal) ಮುಖ್ಯ ಗುಂಬಜ್‌ನಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಉತ್ತರ ಪ್ರದೇಶದ ಆಗ್ರಾದ (Agra) ತಾಜ್‌ಮಹಲ್‌ನ ಮುಖ್ಯ ಗುಮ್ಮಟವು ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನೀರಿನ ಸೋರಿಕೆಗೆ ಸಾಕ್ಷಿಯಾಗಿದೆ. ಇದು ಆವರಣದಲ್ಲಿರುವ ಉದ್ಯಾನವನ್ನು ಮುಳುಗಿಸಿದೆ. ಇದನ್ನೂ ಓದಿ: ಪ್ರಧಾನಿ ಮನೆಗೆ ಹೊಸ ಅತಿಥಿ ಆಗಮನ – ಕರುವನ್ನು ಎತ್ತಿ ಮುದ್ದಾಡಿದ ಮೋದಿ

    ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಅಧಿಕಾರಿಯೊಬ್ಬರು, ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗಿದೆ. ಆದರೆ ಯಾವುದೇ ಹಾನಿ ಇಲ್ಲ ಎಂದು ತಿಳಿಸಿದ್ದಾರೆ.

    ನಾವು ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆಯನ್ನು ಗಮನಿಸಿದ್ದೇವೆ. ಪರಿಶೀಲನೆ ನಡೆಸಿದಾಗ ಸೋರಿಕೆಯಿಂದ ಉಂಟಾಗಿರುವುದು ಕಂಡುಬಂದಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ನಾವು ಡ್ರೋನ್ ಕ್ಯಾಮೆರಾವನ್ನು ಬಳಸಿಕೊಂಡು ಗುಮ್ಮಟದ ಸ್ಥಿತಿಯನ್ನು ಪರಿಶೀಲಿಸಿದ್ದೇವೆ ಎಂದು ಎಎಸ್‌ಐನ ರಾಜ್‌ಕುಮಾರ್‌ ಪಾಟೀಲ್‌ ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಗಣೇಶನನ್ನು ಕಾಂಗ್ರೆಸ್‌ ಸರ್ಕಾರ ಪೊಲೀಸ್‌ ವ್ಯಾನ್ ಕಂಬಿ ಹಿಂದೆ ಹಾಕಿದೆ:‌ ಮೋದಿ ವಾಗ್ದಾಳಿ

    ಆಗ್ರಾದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದಾದ್ಯಂತ ಜಲಾವೃತವಾಗಿದೆ. ರಾಷ್ಟ್ರೀಯ ಹೆದ್ದಾರಿಯೊಂದು ಜಲಾವೃತಗೊಂಡಿದೆ. ಬೆಳೆಗಳು ಮುಳುಗಿವೆ.

  • ‘ತಾಜ್ ಮಹಲ್’ ಚಿತ್ರಕ್ಕೆ 16ರ ಸಂಭ್ರಮ : ನಿರ್ದೇಶಕ ಆರ್.ಚಂದ್ರು ಸಿನಿಯಾನ

    ‘ತಾಜ್ ಮಹಲ್’ ಚಿತ್ರಕ್ಕೆ 16ರ ಸಂಭ್ರಮ : ನಿರ್ದೇಶಕ ಆರ್.ಚಂದ್ರು ಸಿನಿಯಾನ

    ಣ್ಣ ಹಳ್ಳಿಯಿಂದ ಬಂದು, ಇಂದು ‘ಕಬ್ಜ’ ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಭಾರತದಾದ್ಯಂತ  ಹೆಸರು‌ ಮಾಡಿರುವ ನಿರ್ದೇಶಕ ಆರ್.ಚಂದ್ರು (R. Chandru) ಅವರ ಸಿನಿಯಾನಕ್ಕೆ ಈಗ ಹದಿನಾರನೇ ವಸಂತ. ಅವರ ನಿರ್ದೇಶನದ ಚೊಚ್ಚಲ ಸಿನಿಮಾ ‘ತಾಜ್ ಮಹಲ್’ (Taj Mahal) ತೆರೆಕಂಡು ಹದಿನೈದು ವರ್ಷ ಪೂರ್ಣಗೊಳಿಸಿದೆ.

    ಆರ್.ಚಂದ್ರು ನಿರ್ದೇಶನದ ಮೊದಲ ಚಿತ್ರ ‘ತಾಜ್ ಮಹಲ್’ ತೆರೆಕಂಡು ಜುಲೈ 25ಕ್ಕೆ ಹದಿನೈದು ವರ್ಷಗಳಾಗಿವೆ. (2008 ಜುಲೈ 25 ಈ ಚಿತ್ರ ಬಿಡುಗಡೆಯಾಗಿತ್ತು) ಶಿವಶಂಕರ್ ‌ರೆಡ್ಡಿ ನಿರ್ಮಿಸಿದ್ದ ಹಾಗೂ ಅಜೇಯ್ ರಾವ್ (Ajay Rao) ಹಾಗೂ ಪೂಜಾ ಗಾಂಧಿ (Pooja Gandhi) ನಾಯಕ, ನಾಯಕಿಯಾಗಿ ನಟಿಸಿದ್ದ ಈ ಚಿತ್ರ ಕರ್ನಾಟಕದಾದ್ಯಂತ ಭರ್ಜರಿ ಯಶಸ್ಸು ಕಂಡಿತ್ತು. ಇದನ್ನೂ ಓದಿ:ತಮಿಳು ‘ಜೈಲರ್’ ವಿರುದ್ದ ಮಲಯಾಳಂ ‘ಜೈಲರ್’ ರಿಲೀಸ್: ರಜನಿ ಸಿನಿಮಾಗೆ ಟಕ್ಕರ್

    ಅನೇಕ ಚಿತ್ರಮಂದಿರಗಳಲ್ಲಿ 200ಕ್ಕೂ ಅಧಿಕ ದಿನಗಳ ಕಾಲ ಈ ಸಿನಿಮಾ ಪ್ರದರ್ಶನವಾಗಿತ್ತು. ತಮ್ಮ ಮೊದಲ ನಿರ್ದೇಶನದ ಚಿತ್ರದಲ್ಲೇ ಆರ್.ಚಂದ್ರು ಡಬಲ್ ಸೆಂಚುರಿ ಬಾರಿಸಿದ್ದರು. ನಂತರದ ದಿನಗಳಲ್ಲಿ ಆರ್. ಚಂದ್ರು,  ತಾಜ್ ಮಹಲ್  ಚಂದ್ರು ಅಂತಲೇ ಪ್ರಸಿದ್ದರಾದರು. ಈ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಅಭಿಮಾನ್ ರಾಯ್ ಅವರಿಗೆ ರಾಜ್ಯಪ್ರಶಸ್ತಿ ಸಹ ಬಂದಿತ್ತು. ಈ ಚಿತ್ರ 2010 ರಲ್ಲಿ ತಾಜ್ ಮಹಲ್ ಶೀರ್ಷಿಕೆಯಲ್ಲೇ ತೆಲುಗಿನಲ್ಲೂ ಬಿಡುಗಡೆಯಾಗಿತ್ತು.

    ಆನಂತರದ ದಿನಗಳಲ್ಲಿ ಆರ್.ಚಂದ್ರು ಕನ್ನಡದ ಹೆಸರಾಂತ ನಾಯಕ ನಟರ ಸಿನಿಮಾಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗಕ್ಕೆ ಸೂಪರ ಹಿಟ್ ಚಿತ್ರಗಳನ್ನು ನೀಡಿದರು. ನಿರ್ಮಾಪಕರಾಗಿಯೂ ಆರ್ ಚಂದ್ರು ಜನಪ್ರಿಯರಾದರು.

    ತಾಜ್ ಮಹಲ್ ನಿಂದ ಇತ್ತೀಚೆಗೆ ತೆರೆಕಂಡ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ತನಕ ಆರ್. ಚಂದ್ರು ಯಶಸ್ಸಿನ ಸಿನಿಮಾ ಯಾನ ಮುಂದುವರೆದುಕೊಂಡು ಬಂದಿದೆ.  ತಮ್ಮ ಸಿನಿ ಜರ್ನಿಗೆ 15 ವರ್ಷಗಳು ತುಂಬಿರುವ ಈ ಸುಸಂದರ್ಭದಲ್ಲಿ ಆರ್‌ ಚಂದ್ರು ತಮಗೆ ಸಹಕಾರ ನೀಡಿರುವ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೆರಿಗೆ, ನೀರಿನ ಬಿಲ್ ಪಾವತಿಸಿ – ತಾಜ್ ಮಹಲ್‍ಗೆ ನೋಟಿಸ್

    ತೆರಿಗೆ, ನೀರಿನ ಬಿಲ್ ಪಾವತಿಸಿ – ತಾಜ್ ಮಹಲ್‍ಗೆ ನೋಟಿಸ್

    ಲಕ್ನೋ: ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರನ್ನು ಭಾರತಕ್ಕೆ ಸೆಳೆಯುವ ಆಗ್ರಾದ ತಾಜ್ ಮಹಲ್ (Taj Mahal) ಕಟ್ಟಡಕ್ಕೆ ಆಸ್ತಿ ತೆರಿಗೆ (Property Tax) ಹಾಗೂ ನೀರಿನ ಬಿಲ್‍ಗಳನ್ನು (Water Bill) ಪಾವತಿಸುವಂತೆ ಮೊದಲ ಬಾರಿಗೆ ಯುಪಿ ಸರ್ಕಾರ (Uttar Pradesh Government) ನೋಟಿಸ್ ನೀಡಿದೆ.

    ಯೋಗಿ ಆದಿತ್ಯನಾಥ್ (Yogi Adityanath) ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿವಿಧ ಘಟಕಗಳು 320 ವರ್ಷಗಳ ಇತಿಹಾಸ ಇರುವ ಆಗ್ರಾದ ತಾಜ್ ಮಹಲ್ ಹಾಗೂ ಆಗ್ರಾ ಕೋಟೆ ಎರಡಕ್ಕೂ ಬಾಕಿ ಬಿಲ್‍ಗಳನ್ನು ಪಾವತಿಸುವಂತೆ ನೋಟಿಸ್ ನೀಡಿದೆ. ಬಿಲ್‍ಗಳ ಮೊತ್ತ 1 ಕೋಟಿಗೂ ಹೆಚ್ಚು ಬಾಕಿ ಇದೆ ಎಂದು ಎಎಸ್‍ಐಗೆ ತಿಳಿಸಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‍ಐ) ಅಧಿಕಾರಿಗಳು ಇದು, ತಪ್ಪು, ಶೀಘ್ರದಲ್ಲೇ ಸರಿಪಡಿಸಲಾಗುವುದು ಎಂದು ತಿಳಿಸಿದರು.

    ಈ ಬಗ್ಗೆ ಆಗ್ರಾದ ಎಎಸ್‍ಐನ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ರಾಜ್‍ಕುಮಾರ್ ಪಟೇಲ್ ಮಾತನಾಡಿ, ಇಲ್ಲಿಯವರೆಗೆ 3 ನೋಟಿಸ್‍ಗಳು ಬಂದಿದ್ದು, ತಾಜ್‍ಮಹಲ್‍ಗೆ ಎರಡು ಮತ್ತು ಆಗ್ರಾ ಕೋಟೆಗೆ ಒಂದು ಎಂದು ದೃಢಪಡಿಸಿದ್ದಾರೆ.

    ತಾಜ್ ಮಹಲ್‍ಗೆ ಸಂಬಂಧಿಸಿದಂತೆ, ನಮಗೆ ಎರಡು ನೋಟಿಸ್‍ಗಳು ಬಂದಿವೆ. ಒಂದು ಆಸ್ತಿ ತೆರಿಗೆ ಮತ್ತು ಇನ್ನೊಂದು ನೀರು ಸರಬರಾಜು ಇಲಾಖೆಯಿಂದಾಗಿದೆ. ಒಟ್ಟು 1 ಕೋಟಿಗೂ ಅಧಿಕ ರೂ.ಗಳನ್ನು ಎಎಸ್‍ಐನಿಂದ ಬೇಡಿಕೆಯಿಡಲಾಗಿದೆ. ಆದರೆ ಅಂತಹ ತೆರಿಗೆಗಳು ಸ್ಮಾರಕಗಳಿಗೆ ಅನ್ವಯಿಸುವುದಿಲ್ಲವಾದ್ದರಿಂದ ಇದು ತಪ್ಪಾಗಿರಬಹುದು ಎಂದು ಹೇಳಿದರು. ಇದನ್ನೂ ಓದಿ: ಡಿಕೆಶಿ ಮನೆಯಲ್ಲಿಯೇ ED, CBI ಕಚೇರಿ ಓಪನ್‌ ಮಾಡಿ: ರಣದೀಪ್ ಸಿಂಗ್ ಸುರ್ಜೇವಾಲಾ

    ಮೊದಲನೆಯದಾಗಿ, ಸ್ಮಾರಕದ ಆವರಣಗಳಿಗೆ ಆಸ್ತಿ ತೆರಿಗೆ ಅಥವಾ ಮನೆ ತೆರಿಗೆ ಅನ್ವಯಿಸುವುದಿಲ್ಲ. ಉತ್ತರ ಪ್ರದೇಶದಲ್ಲೂ ಈ ಕಾನೂನು ಇದೆ. ಜೊತೆಗೆ ನಾವು ಯಾವುದೇ ವಾಣಿಜ್ಯ ಉದ್ದೇಶಗಳಿಗಾಗಿ ನೀರನ್ನು ಬಳಸುತ್ತಿಲ್ಲ. ಬದಲಿಗೆ ತಾಜ್ ಸಂಕೀರ್ಣದ ಒಳಗೆ, ಹುಲ್ಲುಹಾಸುಗಳಿಗಾಗಿ, ಸಾರ್ವಜನಿಕ ಸೇವೆಗಾಗಿ ಬಳಸುತ್ತಿದ್ದೇವೆ. ಇದರಿಂದಾಗಿ ಬಾಕಿಯ ಪ್ರಶ್ನೆಯೇ ಇಲ್ಲ ಎಂದು ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಗಡಿ ವಿವಾದ – ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್

    Live Tv
    [brid partner=56869869 player=32851 video=960834 autoplay=true]

  • ಆಗ್ರಾ ನೋಡಲು ಬಂದ ವಿದೇಶಿ ಪ್ರವಾಸಿಗನಿಗೆ ಆಟೋ ಚಾಲಕ, ಸಹಚರರಿಂದ ಪಂಗನಾಮ

    ಆಗ್ರಾ ನೋಡಲು ಬಂದ ವಿದೇಶಿ ಪ್ರವಾಸಿಗನಿಗೆ ಆಟೋ ಚಾಲಕ, ಸಹಚರರಿಂದ ಪಂಗನಾಮ

    ಲಕ್ನೋ: ಆಗ್ರಾದ ತಾಜ್ ಮಹಲ್ (Taj Mahal ) ನೋಡಲೆಂದು ರಿಕ್ಷಾ ಹತ್ತಿದ 25 ವರ್ಷದ ಬೆಲ್ಜಿಯಂ ಪ್ರವಾಸಿಗ (Belgian tourist) ಬಳಿ ಆಟೋ ಚಾಲಕ(Auto Driver) ಮತ್ತು ಆತನ ಇಬ್ಬರು ಸಹಚರರು ದರೋಡೆ ಮಾಡಿದ್ದಾರೆ.

    ಪ್ರವಾಸಿಗನ ಬಳಿಯಿಂದ 8000 ಯುರೋ ನಗದು, ಒಂದು ಲ್ಯಾಪ್‍ಟಾಪ್ (Laptop), ಒಂದು ಕ್ಯಾಮೆರಾ (Camera), ಒಂದು ಮೊಬೈಲ್ ಫೋನ್ (Mobile Phone) ಮತ್ತು ಒಂದು ಜೊತೆ ಶೂಗಳನ್ನು (Shoes) ಲಪಟಾಯಿಸಿದ್ದಾರೆ. ಇದೀಗ ಮೂವರು ಆರೋಪಿಗಳ ವಿರುದ್ಧ ಆಗ್ರಾದ ಪ್ರವಾಸೋದ್ಯಮ ಪೊಲೀಸ್ ಠಾಣೆಯಲ್ಲಿ (Tourism Police Station) ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹರಿಯುವ ನೀರಿನಲ್ಲಿ ಸಿಲುಕಿದ ತಾಯಿ, ಮಗ – ಗುಜುರಿ ವ್ಯಾಪಾರಿಯಿಂದ ರಕ್ಷಣೆ

    ಪ್ರವಾಸಿಗನನ್ನು ಸೇವಿ ಎಂದು ಗುರುತಿಸಲಾಗಿದ್ದು, ಆಗ್ರಾ ಕ್ಯಾಂಟ್ ರೈಲ್ವೇ ನಿಲ್ದಾಣದ (Agra Cantt Railway Station) ಬಳಿಯ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಆಟೋ ಚಾಲಕ ಮತ್ತು ಆತನ ಇಬ್ಬರು ಸಹಚರರು (Two Associates) ತನ್ನ ಬಳಿ ದರೋಡೆ ಮಾಡಿದ್ದಾರೆ ಎಂದು ದೂರಿನಲ್ಲಿ ಸೇವಿ ಉಲ್ಲೇಖಿಸಿರುವುದಾಗಿ ಪ್ರವಾಸೋದ್ಯಮ ಪೊಲೀಸ್ ಠಾಣೆಯ ಉಸ್ತುವಾರಿ ಜೈ ಸಿಂಗ್ ಪರಿಹಾರ್ (Jai Singh Parihar) ತಿಳಿಸಿದ್ದು, ಇದೀಗ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ಪ್ರವಾಸಿಗ ಗೋವಾ(Goa) ಮೂಲದವರಾಗಿದ್ದು, ಬೆಲ್ಜಿಯಂನಲ್ಲಿ (Belgium) ಕೆಲಸ ಮಾಡುತ್ತಿದ್ದಾರೆ. ನಾನು ಭಾರತದ ನಿವಾಸಿ ಮತ್ತು ಗೋವಾದಲ್ಲಿ ಹುಟ್ಟಿದ್ದೇನೆ. ಆಗ್ರಾ ಪೊಲೀಸರ ಬಗ್ಗೆ ನನಗೆ ಹೆಮ್ಮೆ ಇದೆ. ಏಕೆಂದರೆ ಅವರು ನನಗೆ ತುಂಬಾ ಸಹಾಯ ಮಾಡುತ್ತಿದ್ದಾರೆ. ಅವರು ಇಷ್ಟೊಂದು ಸಹಾಯ ಮಾಡುತ್ತಾರೆ ಎಂದು ನನಗೆ ತಿಳಿದಿರಲಿಲ್ಲ. ನಾನು ಬೆಳಗ್ಗೆಯಿಂದ ಹಸಿದಿದ್ದೇನೆ ಮತ್ತು ಅವರು ನನಗೆ ಊಟ ಮತ್ತು ಹೋಟೆಲ್ ವ್ಯವಸ್ಥೆ ಮಾಡಿಕೊಟ್ಟರು. ಅವರು ನನ್ನನ್ನು ಅತಿಥಿಯಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಸೇವಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾಳೆ ನೀವು ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ: ತಾಜ್ ಮಹಲ್ ಕುರಿತ ಅರ್ಜಿ ತಿರಸ್ಕರಿಸಿದ ಕೋರ್ಟ್

    ನಾಳೆ ನೀವು ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ: ತಾಜ್ ಮಹಲ್ ಕುರಿತ ಅರ್ಜಿ ತಿರಸ್ಕರಿಸಿದ ಕೋರ್ಟ್

    ಲಕ್ನೋ: ತಾಜ್ ಮಹಲ್‍ನಲ್ಲಿ ಮುಚ್ಚಿರುವ 22 ಕೊಠಡಿಗಳ ಬಾಗಿಲು ತೆರೆಯಲು ಅಲಹಾಬಾದ್ ಕೋರ್ಟ್‍ಗೆ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

    court order law

    ಹಿಂದೂ ದೇವತೆಗಳ ವಿಗ್ರಹಗಳ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತಾಜ್ ಮಹಲ್‍ನಲ್ಲಿ ಮುಚ್ಚಿರುವ 22 ಬಾಗಿಲುಗಳನ್ನು ತೆರೆದು ತನಿಖೆ ಮಾಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿ ಡಾ ರಜನೀಶ್ ಸಿಂಗ್ ಅಲಹಾಬಾದ್ ಹೈಕೋರ್ಟ್‍ಗೆ ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ತಾಜ್‌ ಮಹಲ್‌ ಹಿಂದೆ ʼತೇಜೋ ಮಹಾಲಯʼವಾಗಿತ್ತು, ಅಲ್ಲಿ ಹಿಂದೂ ವಿಗ್ರಹಗಳಿವೆ – ತನಿಖೆಗಾಗಿ ಕೋರ್ಟ್‌ಗೆ ಮನವಿ

    ಹಿಂದೂ ದೇವತೆಗಳ ವಿಗ್ರಹಗಳನ್ನು ಮುಚ್ಚಿದ ಬಾಗಿಲುಗಳ ಹಿಂದೆ ಇರಿಸಿ ಬೀಗ ಹಾಕಲಾಗಿದೆ. ತಾಜ್ ಮಹಲ್ ಶಿವ ದೇವಾಲಯವಾಗಿತ್ತು. ಇದೀಗ ಮುಚ್ಚಿರುವ 22 ಕೊಠಡಿಗಳನ್ನು ತೆರೆಯಲು ಅವಕಾಶ ಕೊಡಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಅಲಹಾಬಾದ್‍ನ ದ್ವಿಸದಸ್ಯ ಪೀಠ ಇದೀಗ ತಾಜ್ ಮಹಲ್ ಬಗ್ಗೆ ಪ್ರಶ್ನೆ ಎತ್ತಿದ್ದೀರಿ ಮುಂದೊಂದು ದಿನ ಹೈಕೋರ್ಟ್‍ನ ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ ಎಂದು ಛೀಮಾರಿ ಹಾಕಿ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದಿದೆ.

    ಯಾವುದೇ ಹಕ್ಕುಗಳ ಉಲ್ಲಂಘನೆಯಾಗದ ಹೊರತು ಕೊಠಡಿಗಳನ್ನು ತೆರೆಯಲು ಆದೇಶ ನೀಡಲು ಸಾಧ್ಯವಿಲ್ಲ. ನಾವು ಯಾವ ರೀತಿಯ ತೀರ್ಪು ನೀಡಬೇಕೆಂದು ನೀವು ಬಯಸುತ್ತೀರಿ? ತಾಜ್ ಮಹಲ್ ನಿರ್ಮಿಸಿದವರು ಯಾರು? ಐತಿಹಾಸಿಕ ಸಂಗತಿಗಳಿಗೆ ಹೋಗಬೇಡಿ. ಹಕ್ಕುಗಳನ್ನು ಉಲ್ಲಂಘಿಸಿದಾಗ ಮಾತ್ರ ಪ್ರಶ್ನಿಸಬಹುದು. ನಿಮ್ಮ ಯಾವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿದಾರರಿಗೆ ಕೋರ್ಟ್ ಪ್ರಶ್ನಿಸಿದೆ. ಇದನ್ನೂ ಓದಿ: ಮೇ 17ರ ಒಳಗಡೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಿ: ಕೋರ್ಟ್‌

    ಏನಿದು ವಿವಾದ:
    ತಾಜ್ ಮಹಲ್ ಸ್ಮಾರಕವು ಹಳೆಯ ಶಿವ ದೇವಾಲಯವಾಗಿದೆ ಎಂದು ಕೆಲ ಇತಿಹಾಸಕಾರರು ಮತ್ತು ಹಿಂದೂಪರ ಸಂಘಟನೆಯವರು ಹೇಳುತ್ತಿದ್ದಾರೆ ಎಂದು ಅಲಹಾಬಾದ್ ಕೋರ್ಟ್‍ಗೆ ಸಲ್ಲಿಸಲಾದ ಅರ್ಜಿಯಲ್ಲಿ ತಿಳಿಸಲಾಗಿತ್ತು. ಸಂತರು ಹಾಗೂ ಅನೇಕ ಇತಿಹಾಸಕಾರರು ತಾಜ್‍ಮಹಲ್ ಶಿವ ದೇವಾಲಯ ಎಂದು ಹೇಳುತ್ತಿದ್ದಾರೆ. ಆದರೆ ಕೆಲ ಇತಿಹಾಸಕಾರರು ಇದನ್ನು ಮೊಘಲ್ ಚಕ್ರವರ್ತಿ ಷಾಜಹಾನ್ ನಿರ್ಮಿಸಿದ ಎಂದು ನಂಬುತ್ತಾರೆ. ‘ತೇಜೋ ಮಹಾಲಯ’ ನಂತರದ ದಿನಗಳಲ್ಲಿ ತಾಜ್ ಮಹಲ್ ಆಗಿದೆ ಎಂದು ಹೇಳಲಾಗುತ್ತಿದೆ ಎಂದು ಮನವಿ ಸಲ್ಲಿಸಲಾಗಿತ್ತು.

    ನಾಲ್ಕು ಅಂತಸ್ತಿನ ಕಟ್ಟಡದ ಮೇಲಿನ ಮತ್ತು ಕೆಳಗಿನ ಭಾಗಗಳಲ್ಲಿ 22 ಕೊಠಡಿಗಳು ಶಾಶ್ವತವಾಗಿ ಬೀಗ ಹಾಕಲಾಗಿದೆ. ಆ ಕೊಠಡಿಗಳಲ್ಲಿ ಹಿಂದೂ ವಿಗ್ರಹಗಳಿವೆ. ಶಿವನ ವಿಗ್ರಹಗಳೂ ಇವೆ. ಆಗ್ರಾದ ಉತ್ತರದಲ್ಲಿ ಭದ್ರತಾ ಕಾರಣಗಳಿಂದ ಕೊಠಡಿಗಳ ಬಾಗಿಲುಗಳನ್ನು ಮುಚ್ಚಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

  • ತಾಜ್ ಮಹಲ್ ನಿಜಕ್ಕೂ ವಿಶ್ವದ ಅದ್ಭುತ: ಭಾರತದ ಭೇಟಿಯನ್ನು ನೆನಪಿಸಿಕೊಂಡ ಮಸ್ಕ್

    ತಾಜ್ ಮಹಲ್ ನಿಜಕ್ಕೂ ವಿಶ್ವದ ಅದ್ಭುತ: ಭಾರತದ ಭೇಟಿಯನ್ನು ನೆನಪಿಸಿಕೊಂಡ ಮಸ್ಕ್

    ವಾಷಿಂಗ್ಟನ್‌: ಟೆಸ್ಲಾ ಕಂಪನಿಯ ಸಿಇಒ ಎಲಾನ್ ಮಸ್ಕ್ 2007ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡಿದ್ದು, ತಾಜ್ ಮಹಲ್ ನಿಜಕ್ಕೂ ವಿಶ್ವದ ಅದ್ಭುತದಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ.

    ಹಿಸ್ಟರಿ ಡಿಫೈನ್ ಟ್ವೀಟ್ ಖಾತೆಯೂ ಹಾಕಿದ್ದ ಆಗ್ರಾದ ಕೆಂಪು ಕೋಟೆಯ ಫೋಟೋಕ್ಕೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಮಸ್ಕ್ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ.

    2007ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದೆ. ಆ ಸಂದರ್ಭದಲ್ಲಿ ಆಗ್ರಾದ ತಾಜ್ ಮಹಲ್‍ನ್ನು ನೋಡಿದ್ದೆ. ಇದು ನಿಜವಾಗಿಯೂ ವಿಶ್ವದ ಅದ್ಭುತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಈ ಟ್ವೀಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಮಸ್ಕ್ ಶೀಘ್ರದಲ್ಲೇ ಭಾರತಕ್ಕೆ ಆಗಮಿಸಲಿದ್ದಾರಾ ಎಂಬ ಊಹಾಪೋಹಾಗಳು ಹರಿದಾಡುತ್ತಿದೆ.

    ಅಷ್ಟೇ ಅಲ್ಲದೇ ಟೆಸ್ಲಾ ಮತ್ತು ಸ್ಪೇಸ್‍ಎಕ್ಸ್ ಸಿಇಒ ಮಸ್ಕ್ ಅವರ ತಾಯಿ ಮಾಯೆ ಮಸ್ಕ್ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಅವರ ತಾಯಿಯನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್‌ಗೆ ಎಲಾನ್‌ ಮಸ್ಕ್‌ ತಾತ್ಕಾಲಿಕ CEO?

    1954ರಲ್ಲಿ ನಿಮ್ಮ ಅಜ್ಜಿಯರು ದಕ್ಷಿಣ ಆಫ್ರಿಕಾದಿಂದ ಆಸ್ಟ್ರೇಲಿಯಾಕ್ಕೆ ಹೋಗುವ ದಾರಿಯಲ್ಲಿ ತಾಜ್ ಮಹಲ್ ಅನ್ನು ನೋಡಲು ಹೋಗಿದ್ದರು. ರೇಡಿಯೋ ಅಥವಾ ಜಿಪಿಎಸ್ ಇಲ್ಲದೆ ಈ ಪ್ರಯಾಣವನ್ನು ಮಾಡಲು ಏಕೈಕ ಮಾರ್ಗವೆಂದರೆ ಇಂಜಿನ್ ಪ್ರೊಪೆಲ್ಲರ್ ವಿಮಾನಗಳು ಮಾತ್ರ ಇದ್ದವು ಎಂದು ಮಸ್ಕ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದಾರೆ.

    ಸೋಮವಾರದಂದು ಮಸ್ಕ್ ನಿಗೂಢ ಸಂದರ್ಭಗಳಲ್ಲಿ ಅವರ ಸಾವಿನ ಸಾಧ್ಯತೆಯ ಬಗ್ಗೆ ಊಹೆಗೆ ಮಾಡಿ ಟ್ವೀಟ್ ಮಾಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿತ್ತು. ಇದನ್ನೂ ಓದಿ: ಸಚಿವ ಸುಧಾಕರ್ ಬಗ್ಗೆ ಟೀಕಿಸಿದ್ದ ಕಾಂಗ್ರೆಸ್ ಮುಖಂಡ ಅರೆಸ್ಟ್

  • ತಾಜ್‌ ಮಹಲ್‌ ಹಿಂದೆ ʼತೇಜೋ ಮಹಾಲಯʼವಾಗಿತ್ತು, ಅಲ್ಲಿ ಹಿಂದೂ ವಿಗ್ರಹಗಳಿವೆ – ತನಿಖೆಗಾಗಿ ಕೋರ್ಟ್‌ಗೆ ಮನವಿ

    ತಾಜ್‌ ಮಹಲ್‌ ಹಿಂದೆ ʼತೇಜೋ ಮಹಾಲಯʼವಾಗಿತ್ತು, ಅಲ್ಲಿ ಹಿಂದೂ ವಿಗ್ರಹಗಳಿವೆ – ತನಿಖೆಗಾಗಿ ಕೋರ್ಟ್‌ಗೆ ಮನವಿ

    ಲಕ್ನೋ: ಹಿಂದೂ ದೇವತೆಗಳ ವಿಗ್ರಹಗಳ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತಾಜ್ ಮಹಲ್‌ನಲ್ಲಿ ಮುಚ್ಚಿರುವ 22 ಬಾಗಿಲುಗಳನ್ನು ತೆರೆದು ತನಿಖೆ ಮಾಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದಲ್ಲಿ ಮನವಿ ಸಲ್ಲಿಸಲಾಗಿದೆ.

    ಹಿಂದೂ ದೇವತೆಗಳ ವಿಗ್ರಹಗಳನ್ನು ಮುಚ್ಚಿದ ಬಾಗಿಲುಗಳ ಹಿಂದೆ ಇರಿಸಿ ಬೀಗ ಹಾಕಲಾಗಿದೆ. ಈ ಸಂಬಂಧ ತನಿಖೆಯಾಗಿ ವರದಿ ಮಾಡುವುದು ಅಗತ್ಯ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಜೂ.30ರವರೆಗೆ ತಿರುಮಲದಲ್ಲಿ ಕೆಲವು ಸಾಪ್ತಾಹಿಕ ಸೇವೆಗಳು ತಾತ್ಕಾಲಿಕ ಸ್ಥಗಿತ

    Allahabad high court

    ಈ ಸ್ಮಾರಕವು ಹಳೆಯ ಶಿವ ದೇವಾಲಯವಾಗಿದೆ ಎಂದು ಕೆಲ ಇತಿಹಾಸಕಾರರು ಮತ್ತು ಹಿಂದೂಪರ ಸಂಘಟನೆಯವರು ಹೇಳುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

    ಸಂತರು ಹಾಗೂ ಅನೇಕ ಇತಿಹಾಸಕಾರರು ಇದು (ತಾಜ್‌ಮಹಲ್) ಶಿವ ದೇವಾಲಯ ಎಂದು ಹೇಳುತ್ತಿದ್ದಾರೆ.‌ ಆದರೆ ಕೆಲ ಇತಿಹಾಸಕಾರರು ಇದನ್ನು ಮೊಘಲ್‌ ಚಕ್ರವರ್ತಿ ಷಾಜಹಾನ್‌ ನಿರ್ಮಿಸಿದ ಎಂದು ನಂಬುತ್ತಾರೆ. ʼತೇಜೋ ಮಹಾಲಯʼ ನಂತರದ ದಿನಗಳಲ್ಲಿ ತಾಜ್‌ಮಹಲ್‌ ಆಗಿದೆ ಎಂದು ಹೇಳಲಾಗುತ್ತಿದೆ ಎಂದು ಮನವಿಯಲ್ಲಿ ಹೇಳಲಾಗಿದೆ. ಇದನ್ನೂ ಓದಿ: ಹಿಮಾಚಲ ಅಸೆಂಬ್ಲಿ ಗೇಟ್‌ನಲ್ಲಿ ಖಲಿಸ್ತಾನ್ ಧ್ವಜ – ಸಿಎಂ ಜೈರಾಮ್ ಠಾಕೂರ್ ಕಿಡಿ

    ನಾಲ್ಕು ಅಂತಸ್ತಿನ ಕಟ್ಟಡದ ಮೇಲಿನ ಮತ್ತು ಕೆಳಗಿನ ಭಾಗಗಳಲ್ಲಿ (22 ಕೊಠಡಿಗಳು) ಶಾಶ್ವತವಾಗಿ ಬೀಗ ಹಾಕಲಾಗಿದೆ. ಆ ಕೊಠಡಿಗಳಲ್ಲಿ ಹಿಂದೂ ವಿಗ್ರಹಗಳಿವೆ. ಶಿವನ ವಿಗ್ರಹಗಳೂ ಇವೆ ಎಂದು ಕೋಟ್ಯಂತರ ಹಿಂದೂ ಆರಾಧಕರು ಭಾವಿಸಿದ್ದಾರೆ ಎನ್ನಲಾಗಿದೆ. ಆಗ್ರಾದ ಉತ್ತರದಲ್ಲಿ ಭದ್ರತಾ ಕಾರಣಗಳಿಂದ ಕೊಠಡಿಗಳ ಬಾಗಿಲುಗಳನ್ನು ಮುಚ್ಚಲಾಗಿದೆ ಎಂದು ಹೇಳಲಾಗಿದೆ.

  • ತಾಜ್ ಮಹಲ್‍ನಲ್ಲಿ ಪಾಕ್ ಪರ ಘೋಷಣೆ- ಆರೋಪಿಗಳು ಪೊಲೀಸರ ವಶಕ್ಕೆ

    ತಾಜ್ ಮಹಲ್‍ನಲ್ಲಿ ಪಾಕ್ ಪರ ಘೋಷಣೆ- ಆರೋಪಿಗಳು ಪೊಲೀಸರ ವಶಕ್ಕೆ

    ಲಕ್ನೋ: ತಾಜ್ ಮಹಲ್‍ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ, ಪ್ರವಾಸಿಗರು ಇಬ್ಬರು ಆ ವ್ಯಕ್ತಿಗಳಿಗೆ ಥಳಿಸಿ ತಾಜ್ ಗಂಜ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರಲ್ಲಿ ಒಬ್ಬ ಫಿರೋಜಾಬಾದ್ ನಿವಾಸಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಖೆರ್ಸನ್ ನಗರ ರಷ್ಯಾ ವಶ, ಏಕಕಾಲದಲ್ಲಿ ಮೂರು ಕಡೆ ವೈಮಾನಿಕ ದಾಳಿ- 21 ಜನ ಸಾವು

    POLICE JEEP

    ಈ ಬಗ್ಗೆ ಮಾತನಾಡಿರುವ ತಾಜ್ ಗಂಜ್ ಪೊಲೀಸರು ಠಾಣೆಯ ಅಧಿಕಾರಿ ಭೂಪೇಂದ್ರ ಸಿಂಗ್ ಬಲಿಯಾನ್, ಪ್ರವಾಸಿಗರ ದೂರಿನಲ್ಲಿ ಆ ವ್ಯಕ್ತಿಗಳು ಯಾವ ಘೋಷಣೆ ಕೂಗಿದ್ದಾರೆ ಎನ್ನುವ ಉಲ್ಲೇಕ ಮಾಡಿಲ್ಲ. ಹೀಗಾಗಿ ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಉಂಟು ಮಾಡಿದ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

  • ತಾಜ್ ಮಹಲ್‌ಗೆ 3 ದಿನಗಳ ಉಚಿತ ಪ್ರವೇಶ

    ತಾಜ್ ಮಹಲ್‌ಗೆ 3 ದಿನಗಳ ಉಚಿತ ಪ್ರವೇಶ

    ಲಕ್ನೋ: ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿರುವ ಭಾರತದ ಪ್ರಸಿದ್ಧ ಪ್ರವಾಸಿ ತಾಣ ತಾಜ್ ಮಹಲ್ ಭೇಟಿಗೆ 3 ದಿನಗಳ ಉಚಿತ ಪ್ರವೇಶ ಘೋಷಿಸಲಾಗಿದೆ.

    ಭಾರತೀಯ ಪುರಾತತ್ವ ಇಲಾಖೆ(ಎಎಸ್‌ಐ) ಫೆಬ್ರವರಿ 27, 28 ಹಾಗೂ ಮಾರ್ಚ್ 1ರಂದು ಪ್ರವಾಸಿಗರಿಗೆ ಉಚಿತ ಪ್ರವೇಶ ನೀಡುವುದಾಗಿ ತಿಳಿಸಿದೆ. ಈ 3 ದಿನ ತಾಜ್ ಮಹಲ್‌ನಲ್ಲಿ ಷಹಜಹಾನ್‌ನ ಉರ್ಸ್ ಆಚರಿಸಲಾಗುವುದು. ಹೀಗಾಗಿ ಈ 3 ದಿನಗಳಲ್ಲಿ ಪ್ರವಾಸಿಗರು ವಿನಾಯಿತಿ ಪಡೆಯಲಿದ್ದಾರೆ ಎಂದು ತಿಳಿಸಿದೆ.

    ಪ್ರತಿ ವರ್ಷ ಉರುಸ್ ಆಚರಣೆ ಸಂದರ್ಭದಲ್ಲಿ ಈ ವಿನಾಯಿತಿಯನ್ನು ನೀಡಲಾಗುತ್ತದೆ. ಇದರೊಂದಿಗೆ ವಿಶ್ವ ಪ್ರವಾಸೋದ್ಯಮ ದಿನದಂದು ಕೂಡಾ ತಾಜ್ ಮಹಲ್‌ನಲ್ಲಿ ಪ್ರವೇಶ ಉಚಿತವಾಗಿದೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ – PSI ನೇಮಕಾತಿಗೆ ತಡೆ: ಆರಗ ಜ್ಞಾನೇಂದ್ರ

    ತಾಜ್ ಮಹಲ್‌ನಲ್ಲಿ ಮುಮ್ತಾಜ್ ಮಹಲ್‌ನ ಸಮಾಧಿ ಇದೆ. ಷಹಜಹಾನ್‌ನನ್ನು ಅವನ ಪತ್ನಿಯೊಂದಿಗೆ ಸಮಾಧಿ ಮಾಡಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಅನುಮತಿಗೆ ಅನುಗುಣವಾಗಿ ಪ್ರತಿ ವರ್ಷ ಚಕ್ರವರ್ತಿಯ ಷಹಜಹಾನ್ ಮೃತಪಟ್ಟ ದಿನದಂದು ಇಲ್ಲಿ ಉರುಸ್ ನಡೆಯುತ್ತದೆ

    ಫೆಬ್ರವರಿ 27ರಂದು ಷಹಜಹಾನ್‌ನ ಉರುಸ್ ಮೊದಲ ದಿನ. ಅಂದು ಮಧ್ಯಾಹ್ನ 2 ಗಂಟೆಯಿAದ ಸೂರ್ಯಾಸ್ತದ ವರೆಗೆ ಎಲ್ಲಾ ಪ್ರವಾಸಿಗರಿಗೂ ಉಚಿತ ಪ್ರವೇಶ ಇರಲಿದೆ. ಫೆಬ್ರವರಿ 28 ರಂದು ಹಿಂದಿನ ದಿನದ ವೇಳಾಪಟ್ಟಿ ಅನುಸರಿಸಲಾಗುತ್ತದೆ. ಮಾರ್ಚ್ 1 ಉರುಸ್ ಕೊನೆಯ ದಿನ ಸೂರ್ಯೋದಯದಿಂದ ಸೂರ್ಯಾಸ್ತದವರೆಗೂ ಉಚಿತ ಪ್ರವೇಶ ಇರಲಿದೆ ಎಂದು ಎಎಸ್‌ಐನ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಡಾ. ರಾಜ್‌ಕುಮಾರ್ ಪಟೇಲ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಲಾಯಂ ಸಿಂಗ್ ಯಾದವ್ ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ: ಬಿಜೆಪಿ

    ಷಹಜಹಾನ್‌ನ 3 ದಿನಗಳ ಉರುಸ್ ಸಂದರ್ಭದಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ ಇರಲಿದೆ. ಹೀಗಾಗಿ ತಾಜ್ ಮಹಲ್‌ನ ಭದ್ರತಾ ವ್ಯವಸ್ಥೆ ಬಲಪಡಿಸಲಾಗುತ್ತದೆ. ಉಚಿತ ಪ್ರವೇಶ ಪಡೆಯುವ ಪ್ರವಾಸಿಗರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ತಿಳಿಸಿದ್ದಾರೆ.