Tag: ತಾಲಿಬಾನಿ

  • ಪಂಜ್‍ಶೀರ್ ವಶಕ್ಕೆ ಪಡೆದ ತಾಲಿಬಾನಿಗಳಿಂದ ಗಾಳಿಯಲ್ಲಿ ಗುಂಡು!

    ಪಂಜ್‍ಶೀರ್ ವಶಕ್ಕೆ ಪಡೆದ ತಾಲಿಬಾನಿಗಳಿಂದ ಗಾಳಿಯಲ್ಲಿ ಗುಂಡು!

    – ಯುದ್ಧ ಮುಂದುವರಿಯಲಿದೆ ಎಂದ ಸಾಲೇಹ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ತಾಲಿಬಾನಿಗಳಿಗೆ ಪಂಜ್‍ಶೀರ್ ಬಿಸಿತುಪ್ಪವಾಗಿದೆ. ಸರ್ಕಾರ ರಚನೆಗೂ ಮುನ್ನವೇ ಪಂಜ್‍ಶೀರ್ ಪ್ರಾಂತ್ಯ ನಮ್ಮ ವಶದಲ್ಲಿರಲಿದೆ ಎಂದು ತಾಲಿಬಾನಿಗಳು ಘೋಷಣೆ ಮಾಡಿದ್ದಾರೆ. ಆದ್ರೆ ಮಾಜಿ ಉಪಾಧ್ಯಕ್ಷ ಅಮರೂಲ್ಲಾ ಸಾಲೇಹ, ಯುದ್ಧ ಮುಂದುವರಿಯವ ಮಾತುಗಳನ್ನಾಡಿದ್ದಾರೆ.

    ಕಳೆದ ಕೆಲ ದಿನಗಳಿಂದ ಪಂಜ್‍ಶೀರ್ ಪ್ರಾಂತ್ಯದ ಅಹಮದ್ ಮಸೂದ್ ಮತ್ತು ಅಫ್ಘಾನಿಸ್ತಾನದ ಅಮರೂಲ್ಲಾ ಸಾಲೇಹ ತಾಲಿಬಾನಿಗಳ ವಿರುದ್ಧ ಯುದ್ಧ ಸಾರಿದ್ದಾರೆ. ಆರಂಭದಲ್ಲಿ ಮಸೂದ್ ಮತ್ತು ತಾಲಿಬಾನಿಗಳ ನಡುವೆ ಮಾತುಕತೆ ನಡೆದಿದ್ರೂ ಅದು ವಿಫಲವಾಗಿತ್ತು. ಆದ್ದರಿಂದ ಪಂಜ್‍ಶೀರ್ ವಶಕ್ಕಾಗಿ ತಾಲಿಬಾನಿ ತನ್ನ ಜನರನ್ನ ಕಳಿಸಿತ್ತು.

    ಕಾಬೂಲ್‍ನಲ್ಲಿ ಸಂಭ್ರಮದ ಫೈರಿಂಗ್:
    ಇನ್ನೂ ಕೆಲ ಮಾಧ್ಯಮಗಳ ವರದಿ ಪ್ರಕಾರ, ತಾಲಿಬಾನಿಗಳು ಪಂಜ್‍ಶೀರ್ ವಶಕ್ಕೆ ಮಾಡಿಕೊಂಡ ಹಿನ್ನೆಲೆ ಕಾಬೂಲ್ ನಲ್ಲಿ ಗುಂಡು ಸಿಡಿಸಿ ಸಂಭ್ರಮ ಆಚರಿಸಿದ್ದಾರೆ. ಪಂಜ್‍ಶೀರ್ ದಲ್ಲಿರುವ ಗುಂಪು ತಾಲಿಬಾನಿಗಳ ಮುಂದೆ ಶರಣಾಗಿದ್ದು, ಇಡೀ ಅಫ್ಘಾನಿಸ್ತಾನ ನಮ್ಮ ವಶದಲ್ಲಿದೆ ಎಂದು ತಾಲಿಬಾನಿಗಳು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಲೀಕ್ ಆಯ್ತು ಜೋ ಬೈಡನ್- ಅಶ್ರಫ್ ಘನಿ ಫೋನ್ ಸಂಭಾಷಣೆ

    ಸುಳ್ಳು ಎಂದ ಸಾಲೇಹ:
    ತಾಲಿಬಾನಿಗಳ ಸಂಭ್ರಮಾಚರಣೆ ಬಗ್ಗೆ ವರದಿಗಳು ಬಿತ್ತರವಾಗುತ್ತಿದ್ದಂತೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಾಲೇಹ, ನಮ್ಮ ಹೋರಾಟ ನಿಂತಿಲ್ಲ, ಮುಂದುವರಿದಿದೆ. ನಾವು ಭೂಮಿ ತಾಯಿಯ ಜೊತೆಯಲ್ಲಿದ್ದು, ಅದರ ರಕ್ಷಣೆಯಲ್ಲಿ ತೊಡಗಿಕೊಂಡಿದ್ದೇವೆ. ಪಾಕಿಸ್ತಾನ, ರಷ್ಯಾ ಮತ್ತು ಚೀನಾ ಪಂಜ್‍ಶೀರ್ ರೆಜಿಸ್ಟೆನ್ಸ್ ವಿರುದ್ಧ ತಮ್ಮ ಪ್ರೊಪೆಗೆಂಡಾ ಪ್ರಯೋಗಿಸುತ್ತಿವೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ ತಾವು ದೇಶ ತೊರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅಂದು ಗಾಳಿಯಲ್ಲಿ ಗುಂಡು ಹಾರಿಸಿ ತಾಲಿಬಾನಿಗಳ ಸಂಭ್ರಮ – ಇಂದು ಅಮೆರಿಕದ ವಿರುದ್ಧ ಸಿಟ್ಟು

  • ದೋಹಾದಲ್ಲಿ ಭಾರತ-ತಾಲಿಬಾನಿಗಳ ಮೊದಲ ಔಪಚಾರಿಕ ಮಾತುಕತೆ

    ದೋಹಾದಲ್ಲಿ ಭಾರತ-ತಾಲಿಬಾನಿಗಳ ಮೊದಲ ಔಪಚಾರಿಕ ಮಾತುಕತೆ

    – ರಾಯಭಾರಿಯನ್ನ ಭೇಟಿಯಾದ ತಾಲಿಬಾನಿ ನಾಯಕ

    ದೋಹಾ: ಭಾರತ ಮತ್ತು ತಾಲಿಬಾನಿಗಳ ನಡುವಿನ ಮೊದಲ ಔಪಚಾರಿಕ ಮಾತುಕತೆ ಇಂದು ದೋಹಾದಲ್ಲಿ ನಡೆದಿದೆ. ಕತಾರ್ ನಲ್ಲಿ ಭಾರತದ ರಾಯಭಾರಿ ದೀಪಕ್ ಮಿತ್ತಲ್ ಅವರನ್ನು ತಾಲಿಬಾನಿ ನಾಯಕ ಶೇರ್ ಮೊಹಮ್ಮದ್ ಅಬ್ಬಾಸ್ ಭೇಟಿಯಾಗಿರುವ ಬಗ್ಗೆ ಸರ್ಕಾರ ಹೇಳಿದೆ.

    ಅಬ್ಬಾಸ್ ತಾಲಿಬಾನಿಗಳ ರಾಜಕೀಯ ವಿಭಾಗದ ಮುಖ್ಯಸ್ಥನಾಗಿದ್ದು, ಭಾರತದ ಜೊತೆಗೆ ಹಳೆಯ ಸ್ನೇಹ ಹೊಂದಿರುವ ನಾಯಕ ಎನ್ನಲಾಗಿದೆ. ಇದೀಗ ದೀಪಕ್ ಮಿತ್ತಲ್ ಮತ್ತು ಅಬ್ಬಾಸ್ ಭೇಟಿ ಹಲವು ಚರ್ಚೆಗಳಿಗೆ ಮುನ್ನಡಿಯಾಗಿದೆ. 1980ರಲ್ಲಿ ಅಬ್ಬಾಸ್ ಭಾರತದಲ್ಲಿದ್ದು, ಡೆಹರಾಡೂನ್ ನಲ್ಲಿರುವ ಮಿಲಿಟರಿ ಅಕಾಡೆಮಿಲ್ಲಿ ತರಬೇತಿ ಪಡೆದುಕೊಂಡಿದ್ದನು. ನಂತರ ಅಫ್ಘಾನಿಸ್ತಾನ ಸೇನೆ ಸಹ ಸೇರ್ಪಡೆಯಾಗಿದ್ದನು. ಅಫ್ಘಾನಿಸ್ತಾನ ತೊರೆದ ಬಳಿಕ ತಾಲಿಬಾನಿ ಗ್ಯಾಂಗ್ ಸೇರಿಕೊಂಡಿರುವ ಬಗ್ಗೆ ವರದಿಯಾಗಿದೆ.

    ಭೇಟಿಯ ವೇಳೆ ದೀಪಕ್ ಮಿತ್ತಲ್, ಭಾರತ ಪ್ರದೇಶದಲ್ಲಿ ಅಫ್ಘಾನಿಸ್ತಾನ ಉಗ್ರ ಚುಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಭಾರತದ ಆತಂಕ ನಮಗೆ ಗೊತ್ತಾಗುತ್ತದೆ. ತಾಲಿಬಾನ್ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ಅಬ್ಬಾಸ್ ಭರವಸೆ ನೀಡಿರುವ ಬಗ್ಗೆ ಹೇಳಲಾಗುತ್ತಿದೆ. ಇದನ್ನೂ ಓದಿ: ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

    ಮಾತುಕತೆಯಲ್ಲಿ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಹಿಂದಿರುಗಿಸುವ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಇದೇ ವೇಳೆ ಅಫ್ಘಾನಿಸ್ತಾನದಲ್ಲಿರುವ ಅಲ್ಪಸಂಖ್ಯಾತರು ಭಾರತ ಆಗಮಿಸಲು ಇಚ್ಛಿಸಿದ್ರೆ ನಾವು ಬರಮಾಡಿಕೊಳ್ಳಲು ಸಿದ್ಧರಿದ್ದೇವೆ. ಭಾರತದ ಭೌಗೋಳಿಕ ಪ್ರದೇಶದಲ್ಲಿ ಯಾವುದೇ ಭಯೋತ್ಪಾದಕ ಚಟುವಟಿಕೆ ನಡೆಸಕೂಡದು ಎಂಬ ಎಚ್ಚರಿಕೆಯನ್ನು ಮಿತ್ತಲ್ ನೀಡಿದ್ದಾರೆ. ಇದನ್ನೂ ಓದಿ: ಕಾರಿನಿಂದ ರಾಕೆಟ್ ಉಡಾಯಿಸ್ತಿದ್ದ ಉಗ್ರರು- ಫೋಟೋಗಳು ಔಟ್

  • ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ – ಅಫ್ಘನ್ ದೇಶವನ್ನುದ್ದೇಶಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಭಾಷಣ

    ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ – ಅಫ್ಘನ್ ದೇಶವನ್ನುದ್ದೇಶಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಭಾಷಣ

    ಕಾಬೂಲ್: ಅಘ್ಘಾನಿಸ್ತಾನದಲ್ಲಿ ತಾಲಿಬಾನಿ ಆಡಳಿತ ನಿನ್ನೆಯಿಂದ ಆರಂಭವಾಗಿದೆ. ನಿನ್ನೆ ರಾಜಧಾನಿ ಕಾಬೂಲ್ ನಗರವನ್ನು ತಾಲಿಬಾನ್ ಉಗ್ರರು ನಿಯಂತ್ರಣಕ್ಕೆ ತೆಗೆದುಕೊಂಡರು. ಇದಕ್ಕೂ ಮೊದಲೇ ಅಫ್ಘನ್ ಅಧ್ಯಕ್ಷ ಅಶ್ರಫ್ ಘನಿ ತನ್ನ ಆಪ್ತರೊಂದಿಗೆ ಉಜ್ಭೇಕಿಸ್ಥಾನದ ತಾಷ್ಕೆಂಟ್‍ಗೆ ಓಡಿ ಹೋಗಿ ತಲೆ ಮರೆಸಿಕೊಂಡಿದ್ದಾರೆ. ಈ ಎಲ್ಲದರ ನಡುವೆ ಅಘ್ಘಾನಿಸ್ಥಾನವನ್ನುದ್ದೇಶಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಇಂದು ರಾತ್ರಿ ಭಾಷಣ ಮಾಡಲಿದ್ದಾರೆ ಎಂದು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

    ತಾಲಿಬಾನಿಗಳ ಅಟ್ಟಹಾಸ ಅಘ್ಘಾನಿಸ್ತಾನದಲ್ಲಿ ಆರಂಭವಾಗುತ್ತಿದ್ದಂತೆ ಅಲ್ಲಿನ ನಾಗರೀಕರು ಅಸಹಾಯಕ ಸ್ಥಿತಿಗೆ ತಲುಪಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಸಿಕ್ಕ, ಸಿಕ್ಕ ವಿಮಾನವೇರಿ ದೇಶ ತೊರೆಯುತ್ತಿದ್ದಾರೆ. ಅಸಹಾಯಕ ಸ್ಥಿತಿಯಲ್ಲಿ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ನೇತೃತ್ವದಲ್ಲಿ ತಾಲಿಬಾನ್‍ಗೆ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದೆ. ಈ ಬೆಳವಣಿಗೆ ನಡುವೆ ಜೊ ಬೈಡನ್ ಅಘ್ಫಾನ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವುದಾಗಿ ತಿಳಿಸಿರುವುದು ಬಾರಿ ಕೂತುಹಲ ಮೂಡಿಸಿದೆ. ಇದನ್ನೂ ಓದಿ: ನಾಲ್ಕು ಕಾರ್, ಒಂದು ಹೆಲಿಕಾಪ್ಟರ್ ನಲ್ಲಿ ನಗದು ಹೊತ್ತೊಯ್ದ ಅಶ್ರಫ್ ಘನಿ

    ತಾಲಿಬಾನಿಗಳ ವಶಕ್ಕೆ ಅಫ್ಘಾನಿಸ್ತಾನ ಒಳಪಡುತ್ತಿದ್ದಂತೆ. ಅಮೆರಿಕಾದಲ್ಲಿ ಅಫ್ಘಾನ್ ಪ್ರಜೆಗಳಿಂದ ಪ್ರತಿಭಟನೆ ನಡೆಯಿತು. ವೈಟ್ ಹೌಸ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಅಘ್ಘಾನ್ ಪ್ರಜೆಗಳು ಅಲ್ಲಿ ನಡೆಯುತ್ತಿರುವ ಘಟನೆಗೆ ಅಮೆರಿಕ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿ, ಜೊ ಬೈಡನ್ ವಿರುದ್ಧ ಘೋಷಣೆ ಕೂಗಿದರು. ಇದನ್ನೂ ಓದಿ: ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

    ಅಫ್ಘಾನ್ ನಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚೀನಾ ತನ್ನ ಕುತಂತ್ರ ಬುದ್ಧಿ ತೋರಿಸಲು ಮುಂದಾಗಿದೆ. ತಾಲಿಬಾನ್ ಸರ್ಕಾರದ ಜೊತೆಗೆ ಕೈಜೊಡಿಸಲು ಮುಂದಾಗಿರುವ ಚೀನಾ, ತಾಲಿಬಾನ್ ಜೊತೆ ಸ್ನೇಹ ಸಂಬಂಧ ಬೆಳೆಸಲು ಸಿದ್ಧ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.