Tag: ತಾಲಿಬಾನ್

  • ಅಪ್ಘಾನಿಸ್ತಾನದಲ್ಲಿ ಆನ್‌ಲೈನ್ ಶಾಪಿಂಗ್ ಸ್ಥಗಿತ

    ಅಪ್ಘಾನಿಸ್ತಾನದಲ್ಲಿ ಆನ್‌ಲೈನ್ ಶಾಪಿಂಗ್ ಸ್ಥಗಿತ

    ಕಾಬೂಲ್: ತಾಲಿಬಾನ್ ವಶಪಡಿಸಿಕೊಂಡ ಬಳಿಕ ಹಾಗೂ ಭೀಕರ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಅಫ್ಘಾನಿಸ್ತಾನದ ಬಹುತೇಕ ಎಲ್ಲಾ ಪ್ರಮುಖ ಆನ್‌ಲೈನ್ ಶಾಪಿಂಗ್ ಸೇವೆಗಳು ಸ್ಥಗಿತಗೊಂಡಿರುವುದಾಗಿ ವರದಿಯಾಗಿದೆ.

    ಇತ್ತೀಚೆಗೆ ಅಫ್ಘಾನಿಸ್ತಾನದ 2 ಅತಿ ದೊಡ್ಡ ಆನ್‌ಲೈನ್ ಶಾಪಿಂಗ್ ಸೇವೆಗಳಾದ Click.af ಮತ್ತು Baqal ದೇಶದ ಆರ್ಥಿಕ ಪ್ರಕ್ಷುಬ್ಧತೆಯ ಕಾರಣದಿಂದಾಗಿ ಮುಚ್ಚುವುದಾಗಿ ಘೋಷಿಸಿತ್ತು. ಇದೀಗ ಬಹುತೇಕ ಎಲ್ಲಾ ಆನ್‌ಲೈನ್ ಶಾಪಿಂಗ್ ಸೇವೆಗಳು ಸ್ಥಗಿತಗೊಂಡಿವೆ. ಇದನ್ನೂ ಓದಿ: ಸಿಧು ಹತ್ಯಾ ಪ್ರಕರಣ – ಉತ್ತರ ಭಾರತದಾದ್ಯಂತ 50 ಕಡೆಗಳಲ್ಲಿ ಎನ್‌ಐಎ ದಾಳಿ

    ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಅಫ್ಘಾನಿಸ್ತಾನ ಈಗ 1 ವರ್ಷದಿಂದ ಸಂಪೂರ್ಣ ಪ್ರಕ್ಷುಬ್ಧ ಸ್ಥಿತಿಯಲ್ಲಿದೆ. ತಾಲಿಬಾನ್ ಲಿಂಗ ಆಧಾರಿತ ಹಿಂಸಾಚಾರವನ್ನು ಪರಿಹರಿಸಲು ವ್ಯವಸ್ಥೆಯನ್ನು ಕಿತ್ತುಹಾಕಿದ್ದು ಮಾತ್ರವಲ್ಲದೇ ಮಹಿಳೆಯರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೊಸ ಅಡೆತಡೆಗಳನ್ನು ನಿರ್ಮಿಸಿತು. ಮಹಿಳಾ ಹಕ್ಕುಗಳ ಪ್ರತಿಭಟನಾಕಾರರ ಮೇಲೆ ದಾಳಿಯನ್ನೂ ಮಾಡಿತು. ಇದನ್ನೂ ಓದಿ: ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟರು – 3 ಕಿ.ಮೀ ಓಡಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಯ ಪ್ರಾಣ ಉಳಿಸಿದ ಡಾಕ್ಟರ್

    ಆನ್‌ಲೈನ್ ಶಾಪಿಂಗ್ ಅಪ್ಲಿಕೇಶನ್ ಆಗಿರುವ Click.af ಶನಿವಾರ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಸಂಸ್ಥೆ ತನ್ನ ಫೇಸ್‌ಬುಕ್ ಪುಟದಲ್ಲಿ ಹಣಕಾಸಿನ ಸಮಸ್ಯೆಗಳಿಂದ ಮುಚ್ಚಲಾಗಿದೆ ಎಂದು ಸಂದೇಶವನ್ನು ಪೋಸ್ಟ್ ಮಾಡಿದೆ.

    3 ವರ್ಷಗಳ ಹಳೆಯ Baqal ಕಂಪನಿ ಭಾನುವಾರ ಆರ್ಥಿಕ ತೊಂದರೆಗಳಿಂದಾಗಿ ಸೇವೆಗಳನ್ನು ಮುಚ್ಚುತ್ತಿರುವುದಾಗಿ ಘೋಷಿಸಿತು.

    Live Tv
    [brid partner=56869869 player=32851 video=960834 autoplay=true]

  • ತಾಲಿಬಾನ್ ತರಬೇತಿ ವೇಳೆ ಹೆಲಿಕಾಪ್ಟರ್ ಪತನ – ಮೂವರು ಸಾವು

    ತಾಲಿಬಾನ್ ತರಬೇತಿ ವೇಳೆ ಹೆಲಿಕಾಪ್ಟರ್ ಪತನ – ಮೂವರು ಸಾವು

    ಕಾಬೂಲ್: ಅಫ್ಘಾನಿಸ್ತಾನದ(Afghanistan) ರಾಜಧಾನಿ ಕಾಬೂಲ್‌ನಲ್ಲಿ ತಾಲಿಬಾನ್‌ನ(Taliban) ತರಬೇತಿಯ ವೇಳೆ ಅಮೆರಿಕದ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ಪತನಗೊಂಡಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯ ಶನಿವಾರ ತಿಳಿಸಿದೆ.

    ತರಬೇತಿಗಾಗಿ ಬಂದಿದ್ದ ಅಮೆರಿಕದ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಐವರಿಗೆ ಗಾಯಗಳಾಗಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಎನಾಯ್ತುಲ್ಲಾ ಖೌರಜ್ಮಿ ಹೇಳಿದ್ದಾರೆ. ಇದನ್ನೂ ಓದಿ: ಸೆ.20ರಿಂದ ಭಾರತ-ಆಸಿಸ್ ಟಿ20 ಸರಣಿ – ಬುಮ್ರಾ ಮೇಲೆ ಬೆಂಕಿ ಕಣ್ಣು

    ಒಂದು ವರ್ಷದ ಹಿಂದೆ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ತಾಲಿಬಾನ್, ಅಮೆರಿಕದಿಂದ ನಿರ್ಮಿಸಲಾಗಿದ್ದ ಕೆಲವು ವಿಮಾನಗಳ ನಿಯಂತ್ರಣವನ್ನೂ ತೆಗೆದುಕೊಂಡಿತ್ತು. ಆದರೆ ಇದೀಗ ಅಫ್ಘಾನಿಸ್ತಾನದಲ್ಲಿ ಎಷ್ಟು ವಿಮಾನಗಳು ಕಾರ್ಯನಿರ್ವಹಿಸುತ್ತಿವೆ ಎಂಬುದು ಅಸ್ಪಷ್ಟವಾಗಿದೆ. ಇದನ್ನೂ ಓದಿ: ಬ್ರಿಟನ್ ರಾಣಿ ಎಲಿಜಬೆತ್ ನಿಧನ – ನಾಳೆ ಕರ್ನಾಟಕದಲ್ಲೂ ಶೋಕಾಚರಣೆ

    ಅಮೆರಿಕದ ಸೈನಿಕರು ವಾಪಸ್ ಆಗುವಾಗ ಅಫ್ಘಾನಿಸ್ತಾನದಲ್ಲಿದ್ದ ತಮ್ಮ ಮಿಲಿಟರಿ ಯಂತ್ರಾಂಶಗಳನ್ನು ಹಾನಿಗೊಳಿಸಿವೆ. ಯುಎಸ್ ಸೇನಾಪಡೆ ಹಿಂತಿರುಗಿದ ತಕ್ಷಣ ತಾಲಿಬಾನ್ ಆಫ್ಘಾನಿಸ್ತಾನವನ್ನು ವಶಕ್ಕೆ ಪಡೆಯಿತು. ಈ ಹಿನ್ನೆಲೆ ಅಫ್ಘಾನ್ ಪಡೆ ಕೆಲವು ಹೆಲಿಕಾಪ್ಟರ್‌ಗಳನ್ನು ಮಧ್ಯ ಏಷ್ಯಾ ರಾಷ್ಟ್ರಗಳಿಗೆ ಸ್ಥಳಾಂತರಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯಲ್ಲಿ ಭಾರೀ ಸ್ಫೋಟ- 20 ಸಾವು

    ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯಲ್ಲಿ ಭಾರೀ ಸ್ಫೋಟ- 20 ಸಾವು

    ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಬಳಿ ಸೋಮವಾರ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ರಷ್ಯಾದ ಇಬ್ಬರು ರಾಜತಾಂತ್ರಿಕರು ಸೇರಿದಂತೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ವರದಿಗಳ ಪ್ರಕಾರ, ಜನರು ವೀಸಾಕ್ಕಾಗಿ ರಾಯಭಾರ ಕಚೇರಿಯ ಹೊರಗಡೆ ಗೇಟ್ ಬಳಿ ನಿಂತಿದ್ದಾಗ ಸ್ಫೋಟ ಸಂಭವಿಸಿದೆ. ಈಗಾಗಲೇ 20 ಜನರು ಸಾವನ್ನಪ್ಪಿದ್ದು, ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತದ ರಿಷಿಗೆ ಸೋಲು – ಬ್ರಿಟನ್ ಪ್ರಧಾನಿ ಗದ್ದುಗೆ ಏರಿದ ಲಿಜ್ ಟ್ರಸ್

    ಆತ್ಮಹತ್ಯಾ ಬಾಂಬರ್‌ನಿಂದಾಗಿ ಸ್ಫೋಟ ಸಂಭವಿಸಿದೆ. ದಾಳಿಗೂ ಮೊದಲೇ ಆತ್ಮಹತ್ಯಾ ಬಾಂಬರ್‌ನನ್ನು ತಾಲಿಬಾನ್ ಗಾರ್ಡ್‌ಗಳು ಗುರುತಿಸಿದ್ದರು. ಅವರು ಗುಂಡು ಹಾರಿಸುತ್ತಿದ್ದಂತೆಯೇ ಆತ್ಮಹತ್ಯಾ ಬಾಂಬರ್ ತನ್ನ ಬಳಿಯಿದ್ದ ಸ್ಫೋಟಕ ಸಾಧನವನ್ನು ಸಕ್ರಿಯಗೊಳಿಸಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ತೇಲುವ ಫ್ರೀಜರ್ ಸಹಾಯದಿಂದ 11 ದಿನ ಸಮುದ್ರದಲ್ಲೇ ಜೀವ ಉಳಿಸಿಕೊಂಡ

    ಕೇವಲ 2 ದಿನಗಳ ಹಿಂದೆಯಷ್ಟೇ ವಾಯುವ್ಯ ಅಫ್ಘಾನಿಸ್ತಾನದ ಮಸೀದಿಯೊಂದರಲ್ಲಿ ಸ್ಫೋಟ ಸಂಭವಿಸಿ 20 ಜನರು ಸಾವನ್ನಪ್ಪಿದ್ದರು. ಹೆರಾತ್ ನಗರದ ಗುಜರ್ಗಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಬಾಂಬ್ ದಾಳಿ ನಡೆದಿದ್ದಾಗಿ ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • 1 ವರ್ಷದ ಬಳಿಕ ಆಫ್ಘನ್‌ನಲ್ಲಿ ಚಿತ್ರಮಂದಿರಗಳು ಓಪನ್ – ಸಿನಿಮಾದಲ್ಲಿ ಮಹಿಳಾ ಪಾತ್ರಗಳಿಗೆ ತಾಲಿಬಾನ್ ನಿರ್ಬಂಧ

    1 ವರ್ಷದ ಬಳಿಕ ಆಫ್ಘನ್‌ನಲ್ಲಿ ಚಿತ್ರಮಂದಿರಗಳು ಓಪನ್ – ಸಿನಿಮಾದಲ್ಲಿ ಮಹಿಳಾ ಪಾತ್ರಗಳಿಗೆ ತಾಲಿಬಾನ್ ನಿರ್ಬಂಧ

    ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನದ ಆಡಳಿತವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಒಂದು ವರ್ಷದ ನಂತರ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೆ ಗ್ರೀನ್‌ಸಿಗ್ನಲ್ ಕೊಟ್ಟಿದೆ. ಆದರೆ ಚಲನಚಿತ್ರಗಳಲ್ಲಿ ಮಹಿಳಾ ಕಲಾವಿದರ ಪಾತ್ರಗಳಿಗೆ ನಿರ್ಬಂಧ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಒಂದು ವರ್ಷದ ನಂತರ ಆಫ್ಘನ್‌ನಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ಸಿಕ್ಕಿರುವುದು ಸಿನಿಪ್ರಿಯರು, ಚಲನಚಿತ್ರ ನಿರ್ಮಾಪಕರು ಹಾಗೂ ನಿರ್ದೇಶಕರಲ್ಲಿ ಮಂದಹಾಸ ಮೂಡಿಸಿದೆ. ಇದೇ ವೇಳೆ ಮಹಿಳಾ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತೀವ್ರ ಕಳವಳವೂ ವ್ಯಕ್ತವಾಗಿದೆ. ಈಗಾಗಲೇ 37 ಚಲನಚಿತ್ರಗಳು ಹಾಗೂ ಸಾಕ್ಷ್ಯಾಚಿತ್ರಗಳು ಪ್ರದರ್ಶನಕ್ಕೆ ಸಜ್ಜಾಗಿವೆ. ಆದರೆ ಇತ್ತೀಚಿಗೆ ನಿರ್ಮಿಸಲಾದ ಚಿತ್ರಗಳಲ್ಲಿ ಮಹಿಳಾ ನಟಿ ಅತಿಫಾ ಮೊಹಮ್ಮದಿ ಮಾತ್ರವೇ ಏಕೈಕ ಮಹಿಳಾ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಿದವರಿಗೆ 5 ಸಾವಿರ ರೂ. ದಂಡ – ಶ್ರೀನಗರ ಕಾಲೇಜು ಆದೇಶ

    ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ: ಚಿತ್ರಮಂದಿರ ತೆರೆಯಲು ಅನುಮತಿ ಸಿಕ್ಕಿರುವುದು ಚಲನಚಿತ್ರ ನಿರ್ಮಾಪಕರಲ್ಲಿ ಉತ್ಸಾಹ ತರಿಸಿದ್ದು, ನಿರ್ಮಿಸುವ ಚಲನಚಿತ್ರಗಳಿಗೆ ಹಣ ನೀಡುವಂತೆ ಮನವಿ ಮಾಡಿದ್ದಾರೆ. ನಮ್ಮ ಕೆಲಸವನ್ನು ಸಂತೋಷದಿಂದ ಮಾಡುತ್ತಿದ್ದೇವೆ. ನಮ್ಮ ಪಾಕೆಟ್ ಮನಿಯಿಂದ ಸಿನಿಮಾಕ್ಕೆ ಖರ್ಚು ಮಾಡಿದ್ದೇವೆ. ಹಾಗಾಗಿ ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ ಮಾಡಿರುವುದಾಗಿ ಕಲಾವಿದ ಫಯಾಜ್ ಇಫ್ತಿಕರ್ ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಮುಖಂಡ ಝಹ್ರಾ ಮುರ್ತಝಾವಿ, ಸಿನಿಮಾ ಕ್ಷೇತ್ರದಲ್ಲಿ ಮಹಿಳೆಯರನ್ನು ನಿಷೇಧಿಸಬಾರದು. ಏಕೆಂದರೆ ಇದು ಮಹಿಳೆಯರ ಹಕ್ಕು. ಮಹಿಳೆಯರ ಉಪಸ್ಥಿತಿಯಿಲ್ಲದೇ ಚಲನಚಿತ್ರವು ಉತ್ತಮವಾಗಿ ಮೂಡಿಬರುತ್ತದೆ ಎಂದು ನನಗೆ ಅನ್ನಿಸುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮೆರಿಕಾದ ಸಿಯಾಟಲ್‍ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ

    ತಾಲಿಬಾನ್ ಕಳೆದ ತಿಂಗಳು ಮಹಿಳೆಯರು ಹಾಗೂ ಹುಡುಗಿಯರು ಅಗತ್ಯವಿಲ್ಲದೇ ಮನೆಯಿಂದ ಹೊರಗೆ ಬಾರದಂತೆ ಹಾಗೂ ಮುಖ ತೋರಿಸದಂತೆ ಆದೇಶಿಸಿತ್ತು. ಇದಕ್ಕೂ ಮುನ್ನ ಹೆಣ್ಣುಮಕ್ಕಳಿಗೆ ಮಾಧ್ಯಮಿಕ ಶಿಕ್ಷಣವನ್ನು ನಿಷೇಧಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಆಫ್ಘಾನ್‌ನಲ್ಲಿ ಆರಂಭಿಸಿರುವ ಅಭಿವೃದ್ಧಿ ಕಾರ್ಯಗಳನ್ನ ಭಾರತ ಪೂರ್ಣಗೊಳಿಸಬೇಕು – ಅಬ್ದುಲ್ ಕಹರ್ ಬಾಲ್ಕಿ

    ಆಫ್ಘಾನ್‌ನಲ್ಲಿ ಆರಂಭಿಸಿರುವ ಅಭಿವೃದ್ಧಿ ಕಾರ್ಯಗಳನ್ನ ಭಾರತ ಪೂರ್ಣಗೊಳಿಸಬೇಕು – ಅಬ್ದುಲ್ ಕಹರ್ ಬಾಲ್ಕಿ

    ನವದೆಹಲಿ: ಅಫ್ಘಾನಿಸ್ತಾನದಲ್ಲಿ ಭಾರತ ಆರಂಭಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ದುಲ್ ಕಹರ್ ಬಾಲ್ಕಿ ಒತ್ತಾಯಿಸಿದ್ದಾರೆ‌. ತಾಲಿಬಾನ್ ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನಲೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆಯನ್ನು ಅವರು ನೀಡಿದ್ದಾರೆ.

    ಎರಡು ದೇಶಗಳ ನಡುವಿನ ರಾಜತಾಂತ್ರಿಕ ಮಿಷನ್ ಅನ್ನು ನವೀಕರಿಸಬೇಕು, ನಾವು ಮಾನವೀಯ ಅಂಶಗಳೊಂದಿಗೆ ಅಭಿವೃದ್ಧಿ ಮುಂದುವರಿಸುತ್ತೇವೆ, ಮೊದಲ ಹಂತವಾಗಿ ಭಾರತ ಆರಂಭಿಸಿದ ಕೆಲವು ಅಪೂರ್ಣ ಯೋಜನೆಗಳನ್ನು ಪೂರ್ಣಗೊಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: Bigg Boss: ಮೂಡ್ ಇಲ್ಲ ಅಂದ್ರೆ ಮೂರು ದಿನ ಸ್ನಾನ ಮಾಡಲ್ಲ: ಸೋನು ಶ್ರೀನಿವಾಸ್ ಗೌಡ

    ಕಾಬೂಲ್‌ನಲ್ಲಿರುವ ಶಾಹಟೂತ್ ಅಣೆಕಟ್ಟು ಯೋಜನೆಯನ್ನು ಉಲ್ಲೇಖಿಸಿದ ಅವರು, ಭಾರತವು ಹಲವಾರು ವಿಭಿನ್ನ ಯೋಜನೆಗಳನ್ನು ಅಘ್ಫಾನಿಸ್ತಾನದಲ್ಲಿ ಆರಂಭಿಸಿದೆ, ಅವು ಅಪೂರ್ಣವಾಗಿವೆ ಅವುಗಳನ್ನು ಪೂರ್ಣಗೊಳಿಸದಿದ್ದರೆ ವ್ಯರ್ಥವಾಗುತ್ತದೆ ಹೀಗಾಗಿ ಆ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಲು ನಾವು ಅವರನ್ನು ಒತ್ತಾಯಿಸಿದ್ದೇವೆ ಅಬ್ದುಲ್ ಕಹರ್ ಬಾಲ್ಕಿ ಹೇಳಿದರು.

    ಪ್ರಮುಖ ರಸ್ತೆಗಳು, ಅಣೆಕಟ್ಟುಗಳು, ವಿದ್ಯುತ್ ಪ್ರಸರಣ ಮಾರ್ಗಗಳು, ಸಬ್‌ಸ್ಟೇಷನ್‌ಗಳು, ಶಾಲೆಗಳು, ಆಸ್ಪತ್ರೆಗಳು ಸೇರಿದಂತೆ ಅಫ್ಘಾನಿಸ್ತಾನಕ್ಕೆ ಭಾರತದ ಅಭಿವೃದ್ಧಿ ನೆರವು 20 ವರ್ಷಗಳಲ್ಲಿ 3 ಶತಕೋಟಿಗೂ ಡಾಲರ್‌ಗೂ ಹೆಚ್ಚು ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ ಅಘ್ಫಾನ್ ಮನವಿಗೆ ಇನ್ನು ಭಾರತ ಸ್ಪಂದಿಸಿಲ್ಲ. ಇದನ್ನೂ ಓದಿ: ತನ್ನ ಪತಿಯನ್ನು ಖುಷಿಯಾಗಿರಿಸಲು ಮೂವರು ಸುಂದರಿಯರನ್ನ ಕೆಲಸಕ್ಕೆ ನೇಮಿಸಿದ ಪತ್ನಿ!

    ಭಾರತವು ಇತ್ತೀಚೆಗೆ ಕಾಬೂಲ್‌ನಲ್ಲಿ ತನ್ನ ರಾಯಭಾರ ಕಚೇರಿಯನ್ನು ಪುನಃ ತೆರೆದಿದೆ, ಆಗಸ್ಟ್ 15, 2021 ರಂದು ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು.ಸದ್ಯ ರಾಯಭಾರಿ ಕಚೇರಿಯ ಕಾರ್ಯ ಆರಂಭಿಸಿದ್ದು, ಭದ್ರತೆಗಾಗಿ ITBP ಯ ತುಕಡಿಯನ್ನು ಕಳುಹಿಸಲಾಗಿದೆ.

    Live Tv

    [brid partner=56869869 player=32851 video=960834 autoplay=true]

  • ಕಾಬೂಲ್‌ನಲ್ಲಿ ಬಾಂಬ್‌ ಸ್ಫೋಟ – 8 ಮಂದಿ ದುರ್ಮರಣ

    ಕಾಬೂಲ್‌ನಲ್ಲಿ ಬಾಂಬ್‌ ಸ್ಫೋಟ – 8 ಮಂದಿ ದುರ್ಮರಣ

    ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ಅಲ್ಪಸಂಖ್ಯಾತ ಶಿಯಾ ಸಮುದಾಯದವರು ಹೆಚ್ಚಿರುವ ಪ್ರದೇಶದ ಮಸೀದಿ ಬಳಿ ಅಡಗಿಸಿಟ್ಟಿದ್ದ ಬಾಂಬ್‌ ಸ್ಫೋಟಗೊಂಡಿದ್ದು, 8 ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್‌ ಅಧಿಕಾರಿ ತಿಳಿಸಿದ್ದಾರೆ.

    ಕಾಬೂಲ್ ಪೊಲೀಸ್ ಮುಖ್ಯಸ್ಥರಾಗಿ ತಾಲಿಬಾನ್ ನೇಮಿಸಿರುವ ವಕ್ತಾರ ಖಾಲಿದ್ ಜದ್ರಾನ್ ಪ್ರಕಾರ, ಪಶ್ಚಿಮ ಕಾಬೂಲ್‌ನಲ್ಲಿ ಸರ್-ಇ ಕರೇಜ್ ಪ್ರದೇಶದಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಇಬ್ಬರು ಮೃತಪಟ್ಟಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸೇರಿಸುವಷ್ಟರಲ್ಲಿ ಸಾವಿನ ಸಂಖ್ಯೆ ಏರಿತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾದೊಂದಿಗಿನ ಉದ್ವಿಗ್ನದ ಮಧ್ಯೆ ತೈವಾನ್ ರಕ್ಷಣಾ ಅಧಿಕಾರಿ ಶವವಾಗಿ ಪತ್ತೆ

    ಶತ್ರುಗಳು ಪವಿತ್ರ ದಿನದಂದೇ ದಾಳಿ ನಡೆಸಿ ಅಮಾಯಕರನ್ನು ಕೊಂದಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಜದ್ರಾನ್‌ ಮಾಹಿತಿ ನೀಡಿದ್ದಾರೆ.

    ದಾಳಿ ಹೊಣೆಗಾರಿಕೆಯನ್ನು ಈವರೆಗೂ ಯಾರೂ ಹೊತ್ತಿಲ್ಲ. ಆದರೆ ಈ ಹಿಂದಿನ ದೊಡ್ಡ ಪ್ರಮಾಣದ ದಾಳಿಗಳಲ್ಲಿ ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಶಿಯಾ ಸಮುದಾಯದವರನ್ನು ಗುರಿಯಾಗಿಸಿಕೊಂಡಿರುವ ಇಸ್ಲಾಮಿಕ್ ಸ್ಟೇಟ್ ಗುಂಪಿನ ವಿರುದ್ಧ ಆರೋಪ ಕೇಳಿಬರುತ್ತಿದೆ. ಇದನ್ನೂ ಓದಿ: ಕಷ್ಟದ ದಿನಗಳು ಹತ್ತಿರದಲ್ಲೇ ಇದೆ: ಪಾಕಿಸ್ತಾನ ಹಣಕಾಸು ಸಚಿವ ಎಚ್ಚರಿಕೆ

    ಅಮೆರಿಕ ತನ್ನ ಸೇನೆಯನ್ನು ವಾಪಸ್‌ ಕರೆಸಿಕೊಂಡ ಮೇಲೆ ಅಪ್ಘಾನಿಸ್ತಾನದಲ್ಲಿ ತಾಲಿಬಾನ್‌ ಮತ್ತೆ ಅಧಿಕಾರ ಸ್ಥಾಪಿಸಿತು. ಇದಾದ ಬಳಿಕ ದೇಶಾದ್ಯಂತ ಮಸೀದಿಗಳು, ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಇಸ್ಲಾಮಿಕ್‌ ಸ್ಟೇಟ್‌ (ಐಎಸ್) ದಾಳಿ ನಡೆಸುತ್ತಿದೆ.‌

    2014 ರಿಂದ ಅಫ್ಘಾನಿಸ್ತಾನದಲ್ಲಿ ಕಾರ್ಯಪ್ರವೃತ್ತವಾಗಿರುವ ಐಎಸ್, ದೇಶದ ತಾಲಿಬಾನ್ ಆಡಳಿತಗಾರರನ್ನು ಎದುರುಹಾಕಿಕೊಂಡಿದೆ. ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ತಾಲಿಬಾನ್ ದೇಶದ ಪೂರ್ವದಲ್ಲಿರುವ IS ಪ್ರಧಾನ ಕಚೇರಿ ಮೇಲೆ ದಾಳಿ ಕೂಡ ನಡೆಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಅಲ್‌ಖೈದಾ ಮುಖ್ಯಸ್ಥನ ಹತ್ಯೆ – ಅಮೆರಿಕದ ಡ್ರೋನ್‌ ದಾಳಿ ಖಂಡಿಸಿದ ತಾಲಿಬಾನ್‌

    ಅಲ್‌ಖೈದಾ ಮುಖ್ಯಸ್ಥನ ಹತ್ಯೆ – ಅಮೆರಿಕದ ಡ್ರೋನ್‌ ದಾಳಿ ಖಂಡಿಸಿದ ತಾಲಿಬಾನ್‌

    ಕಾಬೂಲ್: ಅಲ್‌ಖೈದಾ ಮುಖ್ಯಸ್ಥ ಆಯ್ಮನ್ ಅಲ್ ಝವಾಹಿರಿಯ ಹತ್ಯೆಯನ್ನು ತಾಲಿಬಾನ್‌ ದೃಢಪಡಿಸಿದ್ದು, ಕಾಬೂಲ್‌ನಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಗೆ ಖಂಡನೆ ವ್ಯಕ್ತಪಡಿಸಿದೆ.

    ತಾಲಿಬಾನ್ ವಕ್ತಾರ ಜಬಿವುಲ್ಲಾ ಮುಜಾಹಿದ್ ಪ್ರತಿಕ್ರಿಯಿಸಿದ್ದು, ರಾಜಧಾನಿಯ ನಿವಾಸದ ಮೇಲೆ ದಾಳಿ ನಡೆದಿದೆ. ಇದು ಅಂತಾರಾಷ್ಟ್ರೀಯ ನಿಯಮಗಳ ಉಲ್ಲಂಘನೆ ಎಂದು ಖಂಡಿಸಿದ್ದಾರೆ. ಟೋಲೋ ನ್ಯೂಸ್ ಪ್ರಕಾರ, ಭಾನುವಾರ ಮುಂಜಾನೆ ಕಾಬೂಲ್‌ನಲ್ಲಿ ದೊಡ್ಡ ಸ್ಫೋಟವೊಂದು ಪ್ರತಿಧ್ವನಿಸಿತು. ಇದನ್ನೂ ಓದಿ: ಅಲ್‌ಖೈದಾ ಮುಖ್ಯಸ್ಥ ಝವಾಹಿರಿ ಹತ್ಯೆ- ಮೋಸ್ಟ್ ವಾಂಟೆಡ್ ಉಗ್ರನ ಮೇಲೆ ಡ್ರೋಣ್ ಸ್ಟ್ರೈಕ್‌

    ಶೆರ್ಪೂರ್‌ನಲ್ಲಿ ಮನೆಯೊಂದಕ್ಕೆ ರಾಕೆಟ್ ಅಪ್ಪಳಿಸಿತು. ಮನೆ ಖಾಲಿಯಾಗಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫಿ ಟಾಕೋರ್ ಈ ಹಿಂದೆ ಹೇಳಿದ್ದರು.

    Joe Biden

    ಸೋಮವಾರ ದೂರದರ್ಶನದ ಭಾಷಣದಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರು‌, ಯುಎಸ್‌ ನಡೆಸಿದ ಡ್ರೋನ್‌ ದಾಳಿಯಲ್ಲಿ ಅಲ್‌ಖೈದಾ ಮುಖ್ಯಸ್ಥ ಆಯ್ಮಾನ್ ಅಲ್ ಝವಾಹಿರಿ ಹತ್ಯೆಯಾಗಿದ್ದಾನೆ. ನ್ಯಾಯ ಸಿಕ್ಕಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಝವಾಹಿರಿಗೆ ಆಶ್ರಯ ನೀಡುವ ಮೂಲಕ ತಾಲಿಬಾನ್ ದೋಹಾ ಒಪ್ಪಂದ ಉಲ್ಲಂಘಿಸಿದೆ: ಆಂಟನಿ ಬ್ಲಿಂಕೆನ್

    ಝವಾಹಿರಿ ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ. 2001ರ ಸೆಪ್ಟೆಂಬರ್ 11ರಂದು ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ. ಅಫ್ಘಾನಿಸ್ತಾನದಿಂದ US ಮಿಲಿಟರಿ ವಾಪಸ್‌ ತೆಗೆದುಕೊಂಡ ನಂತರ ತಾಲಿಬಾನ್‌ ಆ ದೇಶವನ್ನು ವಶಕ್ಕೆ ಪಡೆಯಿತು. ಆಗಿನಿಂದಲೂ ಝವಾಹಿರಿ ಹತ್ಯೆ ಉದ್ದೇಶವನ್ನು ಅಮೆರಿಕ ಹೊಂದಿತ್ತು.

    Live Tv
    [brid partner=56869869 player=32851 video=960834 autoplay=true]

  • ಝವಾಹಿರಿಗೆ ಆಶ್ರಯ ನೀಡುವ ಮೂಲಕ ತಾಲಿಬಾನ್ ದೋಹಾ ಒಪ್ಪಂದ ಉಲ್ಲಂಘಿಸಿದೆ: ಆಂಟನಿ ಬ್ಲಿಂಕೆನ್

    ಝವಾಹಿರಿಗೆ ಆಶ್ರಯ ನೀಡುವ ಮೂಲಕ ತಾಲಿಬಾನ್ ದೋಹಾ ಒಪ್ಪಂದ ಉಲ್ಲಂಘಿಸಿದೆ: ಆಂಟನಿ ಬ್ಲಿಂಕೆನ್

    ವಾಷಿಂಗ್ಟನ್: ಅಲ್‍ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್ ಝವಾಹಿರಿಗೆ ಆಶ್ರಯ ನೀಡುವ ಮೂಲಕ ತಾಲಿಬಾನ್ ದೋಹಾ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಕಿಡಿಕಾರಿದ್ದಾರೆ.

    ಅಫ್ಗಾನಿಸ್ತಾನದಲ್ಲಿ ನಡೆದ ಅಮೆರಿಕದ ಡ್ರೋನ್ ದಾಳಿಯಲ್ಲಿ ಆಯ್ಮಾನ್ ಅಲ್ ಝವಾಹಿರಿಯನ್ನು ಹತ್ಯೆ ಮಾಡಲಾಗಿದೆ. ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಆಯ್ಮಾನ್ ಅಲ್ ಝವಾಹಿರಿ, ಒಸಾಮಾ ಬಿಲ್ ಲಾಡೆನ್ ನಂತರದಲ್ಲಿ ಅಲ್‍ಖೈದಾ ಮುಖ್ಯಸ್ಥನಾಗಿದ್ದ. 2001ರ ಸೆಪ್ಟೆಂಬರ್ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದಿದ್ದ ದಾಳಿಯ ಪ್ರಮುಖ ಶಂಕಿತ ಸಂಚುಕೋರನೂ ಆಗಿದ್ದನು. ಜೊತೆಗೆ ಜಾಗತಿಕ ಭಯೋತ್ಪಾದನಾ ಜಾಲದ ಪ್ರಮುಖ ಆದರ್ಶವಾದಿಯಾಗಿದ್ದ ಎಂದು ಹೇಳಲಾಗಿದೆ. ಇದನ್ನೂ ಓದಿ: ಅಲ್‌ಖೈದಾ ಮುಖ್ಯಸ್ಥ ಝವಾಹಿರಿ ಹತ್ಯೆ- ಮೋಸ್ಟ್ ವಾಂಟೆಡ್ ಉಗ್ರನ ಮೇಲೆ ಡ್ರೋಣ್ ಸ್ಟ್ರೈಕ್‌

    ಈ ಹಿನ್ನೆಲೆ ಆಂಟೋನಿ ಬ್ಲಿಂಕೆನ್ ಅಸಮಾಧಾನ ವ್ಯಕ್ತಪಡಿಸಿದ್ದು, ಝವಾಹಿರಿಗೆ ಆಶ್ರಯ ನೀಡುವ ಮೂಲಕ ತಾಲಿಬಾನ್ ದೋಹಾ ಒಪ್ಪಂದವನ್ನು ‘ತೀವ್ರವಾಗಿ’ ಉಲ್ಲಂಘಿಸಿದೆ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ.

    ತಾಲಿಬಾನ್ ಅವರು ತಮ್ಮ ಒಪ್ಪಂದಗಳಿಗೆ ಬದ್ಧವಾಗಿರಲು ಅಸಮರ್ಥವಾಗಿದೆ. ಈ ಹಿನ್ನೆಲೆ ನಾವು ಅಫ್ಘಾನ್ ಜನರನ್ನು ಮಾನವೀಯ ನೆರವಿನೊಂದಿಗೆ ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಅವರ ಮಾನವ ಹಕ್ಕುಗಳ ರಕ್ಷಣೆಗಾಗಿ, ವಿಶೇಷವಾಗಿ ಮಹಿಳೆಯರು ಮತ್ತು ಹುಡುಗಿಯರ ರಕ್ಷಣೆಗಾಗಿ ಪ್ರತಿಪಾದಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಲಸಿನ ಹಣ್ಣಿಗಾಗಿ ಗಜರಾಜನ ಸರ್ಕಸ್ – ಕೊನೆಗೆ ಏನಾಯ್ತು ನೋಡಿ 

    Live Tv
    [brid partner=56869869 player=32851 video=960834 autoplay=true]

  • ಅಲ್‌ಖೈದಾ ಮುಖ್ಯಸ್ಥ ಝವಾಹಿರಿ ಹತ್ಯೆ- ಮೋಸ್ಟ್ ವಾಂಟೆಡ್ ಉಗ್ರನ ಮೇಲೆ ಡ್ರೋಣ್ ಸ್ಟ್ರೈಕ್‌

    ಅಲ್‌ಖೈದಾ ಮುಖ್ಯಸ್ಥ ಝವಾಹಿರಿ ಹತ್ಯೆ- ಮೋಸ್ಟ್ ವಾಂಟೆಡ್ ಉಗ್ರನ ಮೇಲೆ ಡ್ರೋಣ್ ಸ್ಟ್ರೈಕ್‌

    ವಾಷಿಂಗ್ಟನ್: ಅಫ್ಘಾನಿಸ್ತಾನದಲ್ಲಿ ನಡೆದ ಅಮೆರಿಕದ ಡ್ರೋನ್ ದಾಳಿಯಲ್ಲಿ ಅಲ್‌ಕೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್ ಝವಾಹಿರಿಯನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

    ಕಾಬೂಲ್‌ನ ನಿವಾಸದ ಬಾಲ್ಕನಿಯಲ್ಲಿ ಝವಾಹಿರಿಯನ್ನು ಡ್ರೋನ್ ದಾಳಿಯ ಮೂಲಕ ಹತ್ಯೆ ಮಾಡಲಾಗಿದೆ. ಅಫ್ಘಾನಿಸ್ತಾನದಲ್ಲಿ ನಮ್ಮ ಪಡೆಗಳು ಈಗ ಇಲ್ಲ ಎಂದು ಅಮೆರಿಕ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಒಪ್ಪಿಗೆ ಸಿಗಬೇಕಾದರೆ ಮಾನವ ಹಕ್ಕು ಗೌರವಿಸಿ: ತಾಲಿಬಾನ್‍ಗೆ UN ಖಡಕ್ ಎಚ್ಚರಿಕೆ

    ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಆಯ್ಮಾನ್ ಅಲ್ ಝವಾಹಿರಿ, ಒಸಾಮಾ ಬಿಲ್ ಲಾಡೆನ್ ನಂತರದಲ್ಲಿ ಅಲ್‌ಖೈದಾ ಮುಖ್ಯಸ್ಥನಾಗಿದ್ದ. 2001ರ ಸೆಪ್ಟೆಂಬರ್ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದಿದ್ದ ದಾಳಿಯ ಪ್ರಮುಖ ಶಂಕಿತ ಸಂಚುಕೋರನೂ ಆಗಿದ್ದನು. ಜೊತೆಗೆ ಜಾಗತಿಕ ಭಯೋತ್ಪಾದನಾ ಜಾಲದ ಪ್ರಮುಖ ಆದರ್ಶವಾದಿಯಾಗಿದ್ದ ಎಂದು ಹೇಳಲಾಗಿದೆ. ಇದನ್ನೂ ಓದಿ: ಆಕಾಶದಲ್ಲಿ ಮಿಂಚಿ ಹಿಂದೂ ಮಹಾಸಾಗರಕ್ಕೆ ಅಪ್ಪಳಿಸಿದ ಚೀನಾ ರಾಕೆಟ್

    2011ರಲ್ಲಿ ಅಮೆರಿಕದ ಮೇಲಿನ ದಾಳಿಯ ನಂತರ ಝವಾಹಿರಿ ಅಲ್‌ಕೈದಾ ಗುಂಪಿನ ಅಧ್ಯಕ್ಷತೆ ವಹಿಸಿದ್ದ. ಈತನ ನಾಯಕತ್ವದಿಂದಾಗಿ ಜಿಹಾದಿಗಳ ಚಳವಳಿಯಲ್ಲಿ ಮುಂದಾಳತ್ವ ವಹಿಸಿ ಇರಾಕ್ ಮತ್ತು ಸಿರಿಯಾಗಳಲ್ಲಿ ಹೆಚ್ಚಿನ ಭೂ ಪ್ರದೇಶವನ್ನು ವಶಪಡಿಸಿಕೊಂಡಿದ್ದರಿಂದ, ಇವರ ನಾಯತ್ವ ಹಿಂಪಡೆಯಲಿಲ್ಲ.

    ಝವಾಹಿರಿಯು ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಇದ್ದನು. ಇದು 2020ರಲ್ಲಿ ದೋಹಾದಲ್ಲಿ ಅಮೆರಿಕದ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವ ಸಂದರ್ಭದಲ್ಲಿ ತಾಲಿಬಾನ್ ಜತೆ ಮಾಡಿಕೊಂಡಿದ್ದ ಒಪ್ಪಂದದ ಸ್ಪಷ್ಟ ಉಲ್ಲಂಘನೆ. ಆತನ ವಿರುದ್ಧದ ಕಾರ್ಯಾಚರಣೆಗೆ ಅಂತಿಮ ಅನುಮೋದನೆ ನೀಡಿದ್ದೆ. ಇದೀಗ ನ್ಯಾಯ ಒದಗಿಸಲಾಗಿದೆ. ಉಗ್ರ ಸಂಘಟನೆ ನಾಯಕ ಇನ್ನಿಲ್ಲ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಚಿನ್ನ ತಂದುಕೊಟ್ಟ ವೈಟ್‍ಲಿಫ್ಟರ್ ‘ಅಚಿಂತಾ ಶೆಯುಲಿ’ – ಮೋದಿಯಿಂದ ಅಭಿನಂದನೆ

    2021ರ ಆಗಸ್ಟ್ 31ರಂದು ಅಮೆರಿಕದ ಪಡೆಗಳು ಅಫ್ಘಾನಿಸ್ತಾನದಿಂದ ವಾಪಸ್ಸಾದ ಬಳಿಕ ಅಮೆರಿಕವು ಅಲ್ಲಿ ನಡೆಸಿದ ಮೊದಲ ದಾಳಿ ಇದಾಗಿದೆ. ಮೂಲತಃ ಈಜಿಪ್ಟ್ನವನಾಗಿದ್ದ ಝವಾಹಿರಿ ಕೈರೊದಲ್ಲಿ ಬಾಲ್ಯ ಕಳೆದಿದ್ದ. ವೃತ್ತಿಯಲ್ಲಿ ಶಸ್ತ್ರಚಿಕಿತ್ಸಕನಾಗಿದ್ದ ಆತ, ನಂತರ ಹಿಂಸಾತ್ಮಕ ಮೂಲಭೂತವಾದದಲ್ಲಿ ತೊಡಗಿಕೊಂಡಿದ್ದ. 2001ರ ಸೆಪ್ಟೆಂಬರ್ 11ರ ದಾಳಿ ಬಳಿಕ ತಲೆಮರೆಸಿಕೊಂಡಿದ್ದ. ಒಸಾಮಾ ಬಿನ್ ಲಾಡೆನ್‌ನಲ್ಲಿ ಅಮೆರಿಕದ ವಿಶೇಷ ಪಡೆಗಳು 2011ರಲ್ಲಿ ಹತ್ಯೆ ಮಾಡಿದ ಬಳಿಕ ಅಲ್‌ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಝವಾಹಿರಿ. ಆತನ ಸುಳಿವು ನೀಡಿದವರಿಗೆ 2.5 ಕೋಟಿ ಡಾಲರ್ ಇನಾಮು ಘೋಷಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಅಂತಾರಾಷ್ಟ್ರೀಯ ಒಪ್ಪಿಗೆ ಸಿಗಬೇಕಾದರೆ ಮಾನವ ಹಕ್ಕು ಗೌರವಿಸಿ: ತಾಲಿಬಾನ್‍ಗೆ UN ಖಡಕ್ ಎಚ್ಚರಿಕೆ

    ಅಂತಾರಾಷ್ಟ್ರೀಯ ಒಪ್ಪಿಗೆ ಸಿಗಬೇಕಾದರೆ ಮಾನವ ಹಕ್ಕು ಗೌರವಿಸಿ: ತಾಲಿಬಾನ್‍ಗೆ UN ಖಡಕ್ ಎಚ್ಚರಿಕೆ

    ಕಾಬೂಲ್: ಅಂತಾರಾಷ್ಟ್ರೀಯ ಒಪ್ಪಿಗೆ ಬಯಸುವ ತಾಲಿಬಾನ್ ಮೊದಲು ತಮ್ಮ ದೇಶದ ಜನರ ಮಾನವ ಹಕ್ಕುಗಳನ್ನು ಗೌರವಿಸಿಬೇಕು ಎಂದು ವಿಶ್ವಸಂಸ್ಥೆ ತಾಲಿಬಾನ್‍ಗೆ ಸಂದೇಶವನ್ನು ನೀಡಿದೆ.

    ತಾಲಿಬಾನ್ ಸರ್ಕಾರ ಅಂತರಾಷ್ಟ್ರೀಯ ಒಪ್ಪಿಗೆ ಪಡೆಯಬೇಕು ಎಂದು ವಿಶ್ವಸಂಸ್ಥೆಗೆ ಮನವಿ ಮಾಡಿತ್ತು. ಯುಎಸ್ ಮಿಷನ್ ಮುಖ್ಯಸ್ಥ ಇಯಾನ್ ಮೆಕ್ಕಾರಿ ಈ ಕುರಿತು ಟ್ವಿಟ್ಟರ್‍ನಲ್ಲಿ ಉತ್ತರ ಕೊಟ್ಟಿದ್ದು, ಕಳೆದ ವರ್ಷ ದೋಹಾದಲ್ಲಿ, ನಾವು ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸಲು ತಾಲಿಬಾನ್‍ನೊಂದಿಗೆ ಸಂವಾದವನ್ನು ನಡೆಸಿದ್ದೇವೆ. ನಾವು ಯುಎನ್ ನಾಗರಿಕರು ಮತ್ತು ಅಫ್ಘಾನ್ ಜನರೊಂದಿಗೆ ವ್ಯಾಪಕವಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಹಲವು ಸವತ್ತುಗಳನ್ನು ಒದಗಿಸಿದ್ದೇವೆ. ನಾವು ಸಹಾಯ ಮಾಡಲು ಸಾಧ್ಯವಾಗಿದೆ ಎಂದು ನನಗೆ ಸಂತೋಷವಾಗಿದೆ. ಆದರೆ ಅಫ್ಘಾನಿಸ್ತಾನದಲ್ಲಿ ನಾವು ಇನ್ನೂ ಹಲವು ಸವಾಲುಗಳನ್ನು ಎದುರಿಸುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಕಿಪಾಕ್ಸ್‌ಗೆ ಭಾರತದಲ್ಲಿ ಮೊದಲ ಬಲಿ

    ಅಂತಾರಾಷ್ಟ್ರೀಯ ಪಾಲುದಾರರು ಮತ್ತು ಸಮಾನಮನಸ್ಕ ಸಮುದಾಯದ ಅಸಾಧಾರಣ ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ನಾವು ಒಟ್ಟಾಗಿ ಒಂದು ಸ್ಪಷ್ಟ ಸಂದೇಶವನ್ನು ಕಳುಹಿಸಿದ್ದೇವೆ. ತಾಲಿಬಾನ್ ಅಂತರಾಷ್ಟ್ರೀಯ ಸಮುದಾಯದ ಅಂಗೀಕಾರವನ್ನು ಪಡೆಯಲು ಆಶಿಸಿದರೆ, ಅವರು ಎಲ್ಲ ಆಫ್ಘನ್ ಜನರ ಅಭಿಪ್ರಾಯಗಳನ್ನು ಕೇಳಬೇಕು ಮತ್ತು ಗೌರವಿಸಬೇಕು. ಅದರ ಜೊತೆಗೆ ಮಾನವ ಹಕ್ಕುಗಳನ್ನು ಗೌರವಿಸಬೇಕು ಎಂದು ಸಂದೇಶವನ್ನು ಕಳುಹಿಸಿದರು.

    ಬಾಲಕಿಯರಿಗೆ ಮಾಧ್ಯಮಿಕ ಶಾಲೆಗಳಿಗೆ ಪ್ರವೇಶ ನೀಡಲು ತಾಲಿಬಾನ್‍ನ ನಿರಂತರವಾಗಿ ನಿರಾಕರಣೆ ಮಾಡುತ್ತಿದೆ. ಅಲ್ಲದೇ ಮಾಧ್ಯಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿದೆ. ಮಹಿಳೆಯರ ಹಕ್ಕುಗಳ ಮೇಲೆ ಸ್ವೀಕಾರಾರ್ಹವಲ್ಲದ ನಿರ್ಬಂಧಗಳು ಸೇರಿದಂತೆ ಮಾನವ ಹಕ್ಕುಗಳ ಉಲ್ಲಂಘನೆಯ ವರದಿಗಳ ಬಗ್ಗೆ ಅವರು ನಿರಾಶೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಸಿಕ್ಕ-ಸಿಕ್ಕವರ ಮೇಲೆ ಚಾಕು ಇರಿದು ಪರಾರಿಯಾಗಿದ್ದವ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]